ವಿಷಯದ ವಿವರಗಳಿಗೆ ದಾಟಿರಿ

Archive for

3
ಫೆಬ್ರ

ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?

– ರಾಕೇಶ್ ಶೆಟ್ಟಿ

ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ರಧಾನಿ ಮೋದಿಯವರ ಬಳಿ,ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ,ಈ ವಿವಾದದ ಇತಿಹಾಸದ ಅರಿವಿದ್ದ ಅವರು,ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳ ಒಪ್ಪಿಸಿ ಎಂದಿದ್ದರು. ನಂತರ  ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ,ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು.

ನಂತರ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋವಾ-ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪಾತ್ರ ಬರೆದಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯು ಬಂದಿತ್ತು. ಅವರ ಮಧ್ಯಸ್ಥಿಕೆಯಲ್ಲಿಯೇ ಮಾತುಕತೆ ನಡೆಯಲಿದೆ ಎನ್ನುವ ಸುದ್ದಿಗಳು ಇದ್ದವು.ಈ ನಡುವೆ ಕರ್ನಾಟಕದ ಬಿಜೆಪಿಯ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹದಾಯಿ ವಿಷಯಕ್ಕೆ ಭೇಟಿ ಮಾಡಿದ್ದರು.ಆ ಭೇಟಿಯನ್ನೂ ವಿವಾದವಾಗಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಸಮಸ್ಯೆಯಿರುವುದು ಗೋವಾ ರಾಜ್ಯದ ಜೊತೆ. ರಾಜ್ಯ ಬಿಜೆಪಿಯವರು ಗೋವಾ ಸಿಎಂ ಜೊತೆ ಮಾತನಾಡಲಿ’ ಎಂದು ಖ್ಯಾತೆ ತೆಗೆದಿದ್ದರು. ಆ ನಂತ್ರ ಗೋವಾದಲ್ಲಿ ಚುನಾವಣೆಯ ಕಾವೇರಿತು,ಇತ್ತ ರಾಜ್ಯ ಬಿಜೆಪಿಗೆ ಅದರದ್ದೇ ಆದ ತಲೆ ನೋವು ತಾಪತ್ರಯಗಳಿದ್ದವು. ಇತ್ತೀಚಿಗೆ ಧೂಳು ಕೊಡವಿಕೊಂಡು ಯಡ್ಯೂರಪ್ಪನವರ ನೇತೃತ್ವದಲ್ಲಿ ಶುರುವಾಗಿದ್ದ ಪರಿವರ್ತನಾ ಯಾತ್ರೆಯ ಹುಬ್ಬಳ್ಳಿ ಸಮಾವೇಶದ ಸಮಯದಲ್ಲಿ,Over Enthusiastic ಆದ ಯಡ್ಯೂರಪ್ಪನವರು ಮಹದಾಯಿ ವಿವಾದಕ್ಕೆ ಪರಿಹಾರ ದೊರಕಲಿದೆ,ಗೋವಾದಿಂದ ಸಿಹಿ ಸುದ್ದಿ ತರುತ್ತೇನೆ ಎಂದು ಘೋಷಿಸಿಬಿಟ್ಟರು.ಅತ್ತ ಅಮಿತ್ ಷಾ ಅವರ ಮಧ್ಯಸ್ಥಿಕೆಯಲ್ಲಿ ಗೋವಾ ಸಿಎಂ ಪರಿಕ್ಕರ್,ರಾಜ್ಯದ ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆಯ ಫೋಟೋಗಳು ಬ್ರೇಕಿಂಗ್ ನ್ಯೂಸ್ ಚಾನೆಲ್ಲುಗಳಿಂದ ಹಿಡಿದು ದಿನಪತ್ರಿಕೆಗಳಲ್ಲೂ ಬಂದವು. ಏನೋ ಪವಾಡವಾಗಲಿದೆ ಎಂದು ಬರೆದವು.ಮುಗ್ಧ ರೈತರು,ಹೋರಾಟಗಾರರು ಕಾದು ಕುಳಿತರು, ಕಡೆಗೆ ಪರಿಕ್ಕರ್ ಅವರಿಂದ ಯಡ್ಯೂರಪ್ಪನವರಿಗೆ ಪತ್ರವೊಂದು ಬಂತು. ಕುಡಿಯುವ ನೀರಿನ ವಿಚಾರದಲ್ಲಿ ಮಾತ್ರ ತಾವು ಮಾತುಕತೆಗೆ ಸಿದ್ಧರಾಗಿರುವುದಾಗಿ ಬರೆದಿದ್ದರು. ಸಮ್ಮಿಶ್ರ ಸರ್ಕಾರದ ಏಕೈಕ ಬಿಜೆಪಿಯ ನಾಯಕರಾಗಿ ನಿಜಕ್ಕೂ ಪರಿಕ್ಕರ್ ಹಾಗೂ ಗೋವಾ ಬಿಜೆಪಿ ರಿಸ್ಕ್ ತೆಗೆದುಕೊಂಡೇ ಈ ಪತ್ರ ಬರೆದಿತ್ತು. ಗೋವಾ ಸಿಎಂ ಕರ್ನಾಟಕ ಸಿಎಂಗೆ ಪತ್ರ ಬರೆಯಬೇಕಿತ್ತು ಎಂದು ಖ್ಯಾತೆ ತೆಗೆದ ಕಾಂಗ್ರೆಸ್ಸು ಇತ್ತ ಹೋರಾಟಗಾರರನ್ನು ತಂದು ಬಿಜೆಪಿಯ ಕಚೇರಿ ಎದುರು ಕೂರಿಸಿ,ಅತ್ತ ಗೋವಾ ಕಾಂಗ್ರೆಸ್ಸಿಗೆ ತಿವಿಯಿತು.

ಮತ್ತಷ್ಟು ಓದು »