ವಿಷಯದ ವಿವರಗಳಿಗೆ ದಾಟಿರಿ

Archive for

10
ಫೆಬ್ರ

ನಂಬಿಕೆ

– ಪ್ರಶಾಂತ್ ಭಟ್

‘ಇದು ಹೀಗಾಗುತ್ತದೆ ಅಂತ ನನಗೆ ಗೊತ್ತಿತ್ತು’ ಪಕ್ಕದ ಸೀಟಿನವನ‌ ಮಾತು ಕೇಳಿ ಮೊಬೈಲಿಂದ ತಲೆ ಎತ್ತಿ ನೋಡಿದಾಗ ಬಸ್ಸು ನಿಂತದ್ದು ಅರಿವಿಗೆ ಬಂತು. ಇವ ಯಾರು ಮಾರಾಯ, ಬಸ್ಸು ಹೊರಟಾಗಿಂದ ತನ್ನೊಳಗೇ ಏನೋ ಗುನುಗುತ್ತಾ ಕೈ ಸನ್ನೆ ಮಾಡ್ತಾ ಕಿರಿಕಿರಿ ಉಂಟುಮಾಡಿದ್ದ. ನಮ್ಮದೇ ಸಾವಿರ ಇರಬೇಕಾದರೆ ಈ ತರಹದ ಆಸಾಮಿ ಸಿಕ್ಕರೆ ಪ್ರಯಾಣವೂ ಪ್ರಯಾಸವೇ! ಅವಳ ಮೆಸೇಜು ಬಂತಾ ಅಂತ ನೋಡುವಾ ಅಂದರೆ ಹಾಳಾದ ನೆಟ್ವರ್ಕ್ ಕೂಡಾ ಇಲ್ಲ. ಅದು ಸರಿ ಈ ಬಸ್ಸು ನಿಂತದ್ದಾದರೂ ಯಾಕೆ? ಓಹ್, ಎದುರೆಲ್ಲ ವಾಹನಗಳ ಸಾಲೇ ಸಾಲು! ಅಲ್ಲದೆ ಈ ಘಾಟಿಯಲ್ಲಿ ಇದೊಂದು ಗೋಳು. ಒಂದು ಗುಡ್ಡ ಕುಸಿದರೆ, ಜೋರು ಮಳೆಗೆ ಮರ ಉರುಳಿಬಿದ್ದರೆ, ನಿದ್ದೆಯ ಮತ್ತಲ್ಲಿ ಯಾವನಾದರು ಟ್ಯಾಂಕರ್ನವ ಮಗುಚಿಕೊಂಡರೆ ಮುಗಿಯಿತು. ಅದರ ನಡುವೆ ಜೀವ ಬಿಟ್ಟು ರಾಂಗ್ ವೇನಲ್ಲಿ ಮುನ್ನುಗ್ಗಿ ಬರುವ ಹುಚ್ಚು ಚಾಲಕರು. ತಾವೂ ಸಿಲುಕಿ ಉಳಿದವರನ್ನೂ ಸಿಕ್ಕಿಸಿ ರಂಪ ರಾದ್ಧಾಂತ. ಓಹ್, ನಂದೂ ಇದೇ ಕತೆಯಲ್ವಾ? ಮತ್ತಷ್ಟು ಓದು »