ವಿಷಯದ ವಿವರಗಳಿಗೆ ದಾಟಿರಿ

Archive for

14
ಫೆಬ್ರ

ಹೌದು. ಸಿಎಂ ಸಿದ್ದರಾಮಯ್ಯನವರು ಎರಡನೇ ದೇವರಾಜ ಅರಸು…!

– ರಾಕೇಶ್ ಶೆಟ್ಟಿ

‘Law and order are the medicine of the politic body and when the politic body gets sick, medicine must be administered’ – ಕಾನೂನು ಸುವ್ಯವಸ್ಥೆಯು ರಾಜಕೀಯ ವ್ಯವಸ್ಥೆಗೆ ಔಷಧವಿದ್ದಂತೆ ಮತ್ತು ರಾಜಕೀಯ ವ್ಯವಸ್ಥೆಯೇ ಅನಾರೋಗ್ಯಕ್ಕೆ ಒಳಗಾದಾಗ, ಔಷಧವನ್ನು ನೀಡಲೇಬೇಕು” ಕಾನೂನು ಸುವ್ಯವಸ್ಥೆಯ ಕುರಿತು ಹೀಗೆ ಹೇಳುತ್ತಾರೆ ಡಾ. ಅಂಬೇಡ್ಕರ್. ಕರ್ನಾಟಕದ ಮಟ್ಟಿಗೆ ಸೂಕ್ತವಾದ ಮಾತಿದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಸರ್ಕಾರವೇ ರೋಗಗ್ರಸ್ಥವಾಗಿ ಕುಳಿತಿದೆ. ಅದು ಯಾವ ಪರಿ ಕುಲಗೆಟ್ಟಿದೆಯೆಂದರೆ, ರಾಜಧಾನಿ ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯ ಅನತಿದೂರದಲ್ಲೇ ರಾಬರಿಗಳು ನಡೆದಿರುವ ವರದಿಗಳಾಗುತ್ತಿವೆ. ಪೊಲೀಸ್ ಕಚೇರಿಯ ಬಳಿ ಬಿಡಿ, ಖುದ್ದು ಪೊಲೀಸರಿಗೆ ರಕ್ಷಣೆಯಿಲ್ಲದಂತಾಗಿದೆ. ರಸ್ತೆಯಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ರೌಡಿಗಳು ಮಚ್ಚು ಬೀಸುತ್ತಿದ್ದಾರೆ, ಗನ್ ಕಿತ್ತುಕೊಳ್ಳುತ್ತಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗೆ ಕಿರುಕುಳ ನೀಡಿದ್ದಾರೆ, ಪೊಲೀಸರ ಸ್ಥಿತಿಯೇ ಹೀಗಾದರೆ ಇನ್ನು ಜನಸಾಮಾನ್ಯರ ಗತಿಯೇನು? ಮತ್ತಷ್ಟು ಓದು »