ಮತಾಂಧರ ಮುಂದೆ ಸಧ್ಭಾವನೆಯ ಕನಸೇ?
-ರಾಕೇಶ್ ಶೆಟ್ಟಿ
ದಿನಾ ಸಾಯೋರಿಗೆ ಅಳೋರು ಯಾರು ಅನ್ನೋ ಗಾದೆ ಜಮ್ಮುಕಾಶ್ಮೀರ ರಾಜ್ಯದ ದಿನನಿತ್ಯದ ಹಿಂಸಾಚಾರಕ್ಕೆ ಹೇಳಿ ಮಾಡಿಸಿದಂತಿದೆ. ಆದರೆ ಈ ಗಾದೆಗೆ ಅಪವಾದವೆಂಬಂತೆ ಉಗ್ರರು, ಉಗ್ರರ ಸಿಂಪಥೈಸರ್ ಗಳು ಸತ್ತಾಗ ಅಳಲಿಕ್ಕೆ ದೇಶದಾದ್ಯಂತ ಗಂಜಿಗಿರಾಕಿಗಳು, ಸೆಕ್ಯುಲರ್ ಮಾಧ್ಯಮಗಳು ತಯಾರಾಗುತ್ತವೆ. ಆದರೆ ಕಣಿವೆಯಲ್ಲಿ ಪಾಕಿಗಳು ಗಡಿಯಾಚೆಯಿಂದ ನಡೆಸುವ ಅಪ್ರಚೋದಿತ ಗುಂಡಿನ ದಾಳಿಗೆ, ಉಗ್ರರ ದಾಳಿಗೆ ಬಲಿಯಾಗುವ ಭಾರತೀಯ ಯೋಧರಿಗೆ ಮಾತ್ರ ಈ ಭಾಗ್ಯವಿಲ್ಲ. ಇವರ ಸಾವಿನ ಸುದ್ದಿಗಳು ದಿನಪತ್ರಿಕೆಗಳಲ್ಲಿ ಕಾರ್ನರ್ ಸುದ್ದಿಯಾಗಿರುತ್ತದೆ. ಓದುವ ಜನರಿಗೂ ಇದೆಲ್ಲಾ ಅಲ್ಲಿ ಮಾಮೂಲು ಎನಿಸಿಬಿಡುತ್ತದೆ. ಆದರೆ, ಭುಜದೆತ್ತರಕ್ಕೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ಹೆತ್ತವರಿಗಷ್ಟೇ ಆ ನೋವಿನ ತೀವ್ರತೆ ತಟ್ಟುವುದು. ಅದೇ ನೋವಿನಲ್ಲಿ ಮಾತನಾಡಿದವರು ಹುತಾತ್ಮ ಯೋಧ ಔರಂಗಜೇಬ್ ತಂದೆ. ದೇಶಕ್ಕಾಗಿ ಪ್ರಾಣ ಕೊಡುತ್ತೇನೆಂದಿದ್ದ ನನ್ನ ಮಗ ತನ್ನ ಮಾತನ್ನು ಉಳಿಸಿಕೊಂಡಿದ್ದಾನೆ, ಅವನ ಸಾವಿಗೆ ತಕ್ಕ ಉತ್ತರವನ್ನು 72 ಗಂಟೆಗಳೊಳಗೇ ನೀಡಿ ಎಂದು ಪ್ರಧಾನಿ ಮೋದಿಯವರನ್ನು ಅವರು ಆಗ್ರಹಿಸಿದ್ದಾರೆ. ಮೊನ್ನೆ ರಂಜಾನ್ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ತೆರಳುತ್ತಿದ್ದ ಯೋಧ ಔರಂಗಜೇಬ್ ರನ್ನು ಅಪಹರಿಸಿದ ಉಗ್ರಗ್ರಾಮಿಗಳು ತಲೆ, ಕತ್ತಿನ ಭಾಗಕ್ಕೆ ಗುಂಡಿಟ್ಟು ಕೊಂದಿದ್ದಾರೆ. ಅದೇ ದಿನ ರೈಸಿಂಗ್ ಕಾಶ್ಮೀರ್ ಎಂಬ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮತ್ತವರ ಖಾಸಗಿ ಅಂಗರಕ್ಷಕರನ್ನು ಉಗ್ರರು ಕೊಂದಿದ್ದಾರೆ. ಇವೆಲ್ಲಾ ಕೇಂದ್ರ ಸರ್ಕಾರದ ತಲೆಕೆಟ್ಟ ನಿರ್ಧಾರವಾಗಿದ್ದ ಪವಿತ್ರ ತಿಂಗಳಲ್ಲಿ ಭದ್ರತಾಪಡೆಗಳ ಮೇಲೆ ಏಕಪಕ್ಷೀಯ ಕದನವಿರಾಮ ಹೇರಿಕೆಯ ಫಲ. ಮತ್ತಷ್ಟು ಓದು
ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು
– ರಾಕೇಶ್ ಶೆಟ್ಟಿ
ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಭಾರತಕ್ಕೆ ಬಂದ ಸುಭಾಷ್ ರವರು ಮೊದಲಿಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ತಮ್ಮ ಸಾಮರ್ಥ್ಯದಿಂದಲೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಏರಿದ್ದರು. ಆಗಲಾದರೂ ಅವರು ಸುಮ್ಮನೇ ಇದ್ದಿದ್ದರೂ ಸ್ವತಂತ್ರ ಭಾರತದಲ್ಲಿ ಯಾವುದಾದರೊಂದು ಸಚಿವ ಸ್ಥಾನ ಪಡೆದು ಇರುತ್ತಿದ್ದರೋ ಏನೋ. ಆದರೆ ಹುಟ್ಟಾ ಸ್ವಾಭಿಮಾನಿ ಮತ್ತು ಹೋರಾಟಗಾರರಾಗಿದ್ದ ನೇತಾಜಿಯವರು ಕಾಂಗ್ರೆಸ್ಸನ್ನೇ ಬದಲಿಸ ಹೊರಟರು. ಈಗ ಕಾಂಗ್ರೆಸ್ ಎಂಬ ಪುರಾತನ ಪಕ್ಷ ಹೇಗೆ ನೆಹರೂ ಮನೆತನದ ಅಡಿಯಾಳಾಗಿದೆಯೋ, ಆಗ ಗಾಂಧೀಜಿಯವರ ಕೈಯಲ್ಲೇ ಇತ್ತು. ಅದನ್ನು ಧಿಕ್ಕರಿಸಿ ನಿಂತ ಸುಭಾಷರನ್ನು ಗಾಂಧೀ ಬೆಂಬಲಿಗರು ಬಿಟ್ಟಾರೇನು? ಬೆಂಬಲಿಗರು ಬಿಟ್ಟರೂ, ಗಾಂಧೀಜಿ ಪಕ್ಷದ ಮೇಲಿನ ತನ್ನ ಪಾರುಪತ್ತೇದಾರಿಕೆಯನ್ನು ಬಿಡಲು ಸಿದ್ಧರಿದ್ದರಿರಲಿಲ್ಲ. ಹಾಗೆಯೇ, ಭಾರತದ ಸ್ವಾತಂತ್ರ್ಯವೊಂದೇ ಅಂತಿಮ ಗಮ್ಯವಾಗಿದ್ದ ಸುಭಾಷರಿಗೆ ಗಾಂಧೀಜಿಯವರ ಚಿಲ್ಲರೆ ರಾಜಕೀಯದ ಜಂಜಾಟಗಳು ಬೇಕಿರಲಿಲ್ಲ. ಕಾಂಗ್ರೆಸ್ಸಿನಿಂದ ಹೊರ ಬಂದ ಅವರು ಫಾರ್ವರ್ಡ್ ಬ್ಲಾಕ್ ಸ್ಥಾಪಿಸಿದರು. ಬ್ರಿಟಿಷರಿಗೆ ಸುಭಾಷ್ Potential Threat ಎನ್ನುವುದು ಅರಿವಾಗಿತ್ತು. ಅವರನ್ನು ಗೃಹಬಂಧನದಲ್ಲಿರಿಸಿದ್ದರು, ಈ ಪುಣ್ಯಾತ್ಮ ಅಲ್ಲಿಂದ ತಪ್ಪಿಸಿಕೊಂಡರು. ನಂತರದ್ದು ಭಾರತ ಸ್ವಾತಂತ್ರ್ಯ ಇತಿಹಾಸದ ರೋಚಕ ಅಧ್ಯಾಯ, ಬರಿಗೈಯಲ್ಲಿ ದೇಶಬಿಟ್ಟ ಸುಭಾಷ್, ೪೫ ಸಾವಿರ ಜನರ ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ನಿದ್ದೆಗೆಡಿಸಿದ್ದರು. ಎರಡನೇ ವಿಶ್ವ ಯುದ್ಧದಲ್ಲಿ ಜಪಾನ್ ಜೊತೆ ಸೇರಿಕೊಂಡು ೪೪ರಲ್ಲೇ ಅಂಡಮಾನ್-ನಿಕೋಬಾರ್ ದ್ವೀಪಗಳನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು, ಅಂತಿಮವಾಗಿ ಜಪಾನ್ ಹಾಗೂ ಆಜಾದ್ ಹಿಂದ್ ಫೌಜಿಗೆ ಈಶಾನ್ಯ ಭಾರತದಲ್ಲಿ ಹಿನ್ನಡೆಯಾಯಿತಾದರೂ, ಸುಭಾಷರು ಹೊತ್ತಿಸಿದ್ದ ಕ್ರಾಂತಿಯ ಕಿಡಿ ಸರ್ವವ್ಯಾಪಿಯಾಗಿತ್ತು. ಆಜಾದ್ ಹಿಂದ್ ಫೌಜಿನ ರುದ್ರನರ್ತನ ಬ್ರಿಟಿಷ್ ಭಾರತೀಯ ಆರ್ಮಿಯನ್ನು ಆವರಿಸಿಕೊಂಡಿತ್ತು. ಅದೇ ಸಮಯಕ್ಕೆ ಸರಿಯಾಗಿ ಅತ್ತ ಜಪಾನ್ ಶರಣಾಗಾತಿಯಾಗುವುದರಲ್ಲಿತ್ತು, ಇತ್ತ ಬ್ರಿಟಿಷರಿಗೆ ಭಾರತದಲ್ಲಿ ಉಳಿಗಾಲವಿರಲಿಲ್ಲವಾಗಿತ್ತು, ಆಗಲೇ ಶುರುವಾಗಿದ್ದು ಸುಭಾಷರ ನಿಗೂಢ ವಿಮಾನಾಪಘಾತದ ಕತೆ. ಅಪಘಾತದಲ್ಲಿ ಸುಭಾಷರು ಅಸುನೀಗಿದರು ಎನ್ನುವುದನ್ನು ಯಾರೆಂದರೇ ಯಾರೂ ನಂಬುವ ಸ್ಥಿತಿಯಲ್ಲಿರಲಿಲ್ಲ. ಅಮೇರಿಕನ್/ಬ್ರಿಟಿಷ್ ಗುಪ್ತಚರರು ವರ್ಷಗಟ್ಟಲೆ ಸುಭಾಷರ ಇರುವಿಕೆಯ ಪತ್ತೆ ಹಚ್ಚಲೆಂದೇ ಹಿಂದೆ ಬಿದ್ದಿದ್ದರು. ಇತ್ತ ಭಾರತದಲ್ಲಿ ಬ್ರಿಟಿಷರ ಹೈಫೈ ಆತಿಥ್ಯದ ಜೈಲಿನಲ್ಲಿದ್ದುಕೊಂಡೇ ಆಜಾದ್ ಹಿಂದ್ ಫೌಜಿನವರು ಭಾರತಕ್ಕೆ ಬಂದರೆ ಕತ್ತಿ ಹಿಡಿದು ಹೋರಾಡುತ್ತೇನೆಂದಿದ್ದ ಕಠಾರಿ ವೀರ ನೆಹರೂ ಸಾಹೇಬರಿಗೆ, ಸುಭಾಷ್ ವಾಪಸ್ ಬಂದರೆ ತನ್ನ ಖುರ್ಚಿಯ ಗತಿಯೇನು ಎಂದು ಚಿಂತೆ ಹತ್ತಿತ್ತು. ಅದೇ ಕಾರಣಕ್ಕೆ, ಬ್ರಿಟನ್ ಪ್ರಧಾನಿ ಆಟ್ಲಿಯವರಿಗೆ ಬರೆದ ಪತ್ರದಲ್ಲಿ, ನಿಮ್ಮ ಯುದ್ಧ ಖೈದಿ ಸುಭಾಷ್ ಗೆ ರಷ್ಯಾ ಆಶ್ರಯ ಕೊಟ್ಟಿದೆ ಎಂದು ಚಿಲ್ಲರೆ ದೂರು ನೀಡಿದ್ದರು. ಅಂದು ತೈಪೆಯಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲವೆನ್ನುವುದು ಈಗ ಅಧಿಕೃತವಾಗಿದೆ. ವಿಮಾನವೇ ಹಾರದೇ, ಅಪಘಾತವಾಗಿದ್ದು ಎಲ್ಲಿಂದ? ಅಪಘಾತವೇ ನಡೆಯದಿದ್ದ ಮೇಲೆ ಸುಭಾಷರು ಹೋದರೆಲ್ಲಿ? ಹಾಗೆ ನಾಪತ್ತೆಯಾದವರನ್ನು ಹುಡುಕಿ ಕೊಲ್ಲಲಾಯಿತೇ? ಈ ನಿಗೂಢತೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸ್ವತಂತ್ರ ಭಾರತದ ಮೊದಲ ನಿಗೂಢ ರಾಜಕೀಯ ಕಣ್ಮರೆ/ಹತ್ಯೆಯ ಸಾಲಿಗೆ ಸೇರುವುದು ಸುಭಾಷರ ಹೆಸರು. ಸುಭಾಷರು ಮಾಡಿದ ತಪ್ಪೆಂದರೆ ಸ್ವತಂತ್ರ-ಸ್ವಾಭಿಮಾನಿ-ಸಶಕ್ತ ಭಾರತದ ಕನಸು ಕಂಡಿದ್ದು. ಸುಭಾಷರಿಂದ ಶುರುವಾದ ಈ ನಿಗೂಢ ರಾಜಕೀಯ ಹತ್ಯೆ/ಕಣ್ಮರೆಯ ಸರಣಿ ಸ್ವತಂತ್ರ ಭಾರತದಲ್ಲೂ ಮುಂದುವರೆಯುತ್ತಲೇ ಹೋಯಿತು. ಮತ್ತಷ್ಟು ಓದು
ಉಗ್ರಾಧಿಪತಿ ಹಫೀಜನಿಗೇಕೆ ಮೋದಿಯ ಮೇಲೆ ದ್ವೇಷ!
– ಶಿವೂ ವೆಂಕಟೇಶ್ ಗೌಡ (ಎಸ್.ವಿ.ಜಿ)
ರಕ್ತ ಪಿಪಾಸು ಹಫೀಜ್ ಮುಹಮ್ಮದ್ ಸಯೀದ್ ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಇವನ ಹೆಸರನ್ನೊಮ್ಮೆ ಕೇಳಿದರೆ ದೇಶೀಯರ ಎದೆಯಲ್ಲಿ ನೋವಿನ ಜೊತೆ ಬೆಂಕಿಯ ಜ್ವಾಲೆ ಪುಟಿದೇಳುತ್ತದೆ, ೨೦೦೧ ರ ಭಾರತದ ಸಂಸತ್ ದಾಳಿಯ ರೂವಾರಿ, ೨೦೦೬ ರ ಮುಂಬೈ ರೈಲು ಸ್ಪೋಟದ ರೂವಾರಿ ಹಾಗೆಯೆ ೨೦೦೮ ರ ಮುಂಬೈ ಭಯೋತ್ಪಾದನಾ ದಾಳಿಗಳಲ್ಲಿ ಇವನ ಕರಿ ನೆರಳು ಬೀರಿದ್ದು ಎಲ್ಲರಿಗು ಗೊತ್ತಿರುವಂತದ್ದೇ. ಮತ್ತಷ್ಟು ಓದು
ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ (ಭಾಗ – ೨)
– ಪ್ರೇಮಶೇಖರ
ಸುಂದರ ಕನಸೊಂದು ಹಳವಂಡವಾದ ದುರಂತಕ್ಕೆ ಮರುಗುತ್ತಾ…
ಥಾಮಸ್ ಹಾಬ್ಸ್, ಜಾನ್ ಲಾಕ್, ಜೀನ್ ಯಾಕ್ಸ್ ರೂಸೂ ಮುಂತಾದ ಸಾಮಾಜಿಕ ಒಪ್ಪಂದ ಸಿದ್ಧಾಂತದ ಪ್ರತಿಪಾದಕರ ಪ್ರಕಾರ ‘ಬಲವೇ ಹಕ್ಕು’ ಎಂಬ ಮಾನವತಾವಿರೋಧಿ ಅರಣ್ಯ ಕಾನೂನಿನಿಂದ ಅಶಕ್ತರನ್ನು ರಕ್ಷಿಸಿ, ಸಮಾಜದ ಎಲ್ಲರ ನಡುವೆ ಸಮಾನ ನ್ಯಾಯಹಂಚಿಕೆಗಾಗಿ ರಾಜ್ಯ ಸ್ಥಾಪನೆಗೊಂಡಿತಂತೆ. ಆದರೆ ಮಾನವಜನಾಂಗ ಮುಂದೆ ಹಿಡಿದ ದಾರಿಯಲ್ಲಿ ರಾಜ್ಯವೇ ಶೋಷಕನಾಗಿ ಬದಲಾದದ್ದನ್ನು ಇತಿಹಾಸ ಹೇಳುತ್ತದೆ. ಸಾಮಾಜಿಕ ಒಪ್ಪಂದಗಳ ಮೂಲಕ ಸಮಾನನ್ಯಾಯ ಹಂಚಿಕಾವ್ಯವಸ್ಥೆ ಸಾಧ್ಯವಾಗದೇ ಹೋದಾಗ, ಬಲವಂತದ ಮೂಲಕ, ರಕ್ತಪಾತದ ಮೂಲಕ ಅದು ಅಸ್ತಿತ್ವಕ್ಕೆ ಬರುತ್ತದೆಂದು ಭವಿಷ್ಯ ನುಡಿದ ಕಾರ್ಲ್ ಮಾರ್ಕ್ಸ್ ಒಬ್ಬ ವಾಸ್ತವವಾದಿ. ಅಂತಹ ವ್ಯವಸ್ಥೆಯನ್ನು ಚಿತ್ರಿಸಿದ ಕಮ್ಯೂನಿಸಂ ಒಂದು ಉದಾತ್ತ ಮಾನವಪರ ಚಿಂತನೆ. ಆದರೆ ವಾಸ್ತವವಾದಿ ರೂಪಿಸಿದ ಉದಾತ್ತ ಮಾನವಪರ ಸಿದ್ಧಾಂತ ತನ್ನ ಅವಾಸ್ತವವಾದಿ ಹಾಗೂ ಮಾನವವಿರೋಧಿ ಹಿಂಬಾಲಕರಿಂದಲೇ ಕಳಂಕ ಹಚ್ಚಿಸಿಕೊಂಡದ್ದೊಂದು ದುರಂತ. ಈ ಪ್ರಕ್ರಿಯೆ ಭಾರತದಲ್ಲಿ ಅನಾವರಣಗೊಂಡ ಬಗೆಯನ್ನು ಸಂಕ್ಷಿಪ್ತವಾಗಿ ಈಗಿಲ್ಲಿ ಹೇಳುತ್ತೇನೆ. ಮತ್ತಷ್ಟು ಓದು
ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ ( ಭಾಗ-೧ )
– ಪ್ರೇಮಶೇಖರ
ನಮ್ಮ ವಿಚಾರವಂತರು, ಸಾಂಸ್ಕೃತಿಕ ನಾಯಕರು ಶಕ್ತಿಮೀರಿ ಪ್ರಶಂಸಿಸಿದ್ದು, ಪ್ರಚುರ ಪಡಿಸಲು ಹೆಣಗಿದ್ದು ಕಮ್ಯೂನಿಸಂ ಮತ್ತು ಸೆಕ್ಯೂಲರಿಸಂಗಳನ್ನು. ಆದರೆ ಅವರ ನಿರೀಕ್ಷೆಗೆ ವಿರುದ್ಧವಾಗಿ ಕಮ್ಯೂನಿಸಂ ನಮ್ಮ ಸಮಾಜೋ-ರಾಜಕೀಯವಲಯದಲ್ಲಿ ಮುಂಚೂಣಿಗೆ ಬರಲೇ ಇಲ್ಲ. ಜತೆಗೆ, ತಾವು ಬಯಸಿದಂಥ ಸೆಕ್ಯೂಲರಿಸಂ ಇಲ್ಲಿ ನೆಲೆಯೂರಿಲ್ಲವೆಂದು ಅಲವತ್ತುಕೊಳ್ಳುತ್ತಲೇ ಇದ್ದಾರೆ. ಕರ್ನಾಟಕದ ಸಂದರ್ಭದಲ್ಲಿ ಇಂಥಾ ಗೋಳಾಟವನ್ನು ರಂಜನೀಯವಾಗಿ ಪ್ರದರ್ಶಿಸಿದ್ದು ಪತ್ರಕರ್ತ ಲಂಕೇಶ್, ಅವರಿಗೆ ಆಗಾಗ ‘ಅವಶ್ಯಕತೆ’ ಗನುಗುಣವಾಗಿ ಸಾಥ್ ನೀಡಿದ್ದು ಜ್ಞಾನಪೀಠಿ ಯು. ಆರ್. ಅನಂತಮೂರ್ತಿ. ಇವರ ಇಷ್ಟೆಲ್ಲಾ ಪ್ರಯತ್ನಗಳು ‘ಯಶಸ್ವಿ’ಯಾಗದಿರಲು ಕಾರಣವೇನು? ಸಾಮಾನ್ಯ ಜನತೆ ಇವರ ವಿಚಾರಗಳಿಗೆ ಇವರು ಬಯಸಿದಷ್ಟು ಸಹಮತಿ ತೋರದಿರಲು ಇರುವ ಕಾರಣವಾದರೂ ಏನು? ಜನ ದಡ್ಡರೇ? ಅಥವಾ ಈ ಬುದ್ದಿಜೀವಿಗಳಿಗಿಂತಲೂ ಹೆಚ್ಚಿನ ಬುದ್ಧಿವಂತರೇ? ಅಥವಾ ಈ ಬುದ್ಧಿಜೀವಿಗಳ ಪ್ರಚಾರ/ಪ್ರಲಾಪದಲ್ಲೇ ದೋಷವಿದೆಯೇ? ಈ ಪ್ರಶ್ನೆಗಳನ್ನು ಎರಡು ಭಾಗಗಳ ಈ ಲೇಖನದಲ್ಲಿ ಚರ್ಚೆಗೆತ್ತಿಕೊಳ್ಳುತ್ತಿದ್ದೇನೆ. ಮತ್ತಷ್ಟು ಓದು