ವಿಷಯದ ವಿವರಗಳಿಗೆ ದಾಟಿರಿ

Archive for

7
ಆಗಸ್ಟ್

ದೇಶಕಟ್ಟುವ ಫ್ಯಾಂಟಸಿ..

– ಸುಜಿತ್ ಕುಮಾರ್

Sheikh-Zayed-bin-Sultan-Al-Nahyan-696x464ಇತಿಹಾಸದ ಕಾಲಘಟ್ಟದಲ್ಲಿ ಐವತ್ತು ವರ್ಷಗಳ ಸಮಯ ತೀರಾ ಚಿಕ್ಕದು. ಅರ್ಧ ತಲೆಮಾರಿನ ಈ ಐದು ದಶಕಗಳಲ್ಲಿ ಹೆಚ್ಚೆಂದರೆ ಏನೆಲ್ಲಾ ಜರುಗಬಹುದು ? ಸಾಮಾಜಿಕ ಬೆಳವಣಿಗೆಯ ದೃಷ್ಟಿಯಲ್ಲಿ ನೋಡುವುದಾದರೆ ದಾರಿಕಾಣದ ಹಳ್ಳಿಗಳಿಗೆ ರಸ್ತೆಗಳ ಮೇಣವೊಂದಿಷ್ಟು ಅಂಟಿಕೊಳ್ಳಬಹುದು, ಸೂರು ಕಾಣದ ತಲೆಗಳ ಮೇಲೆ ಸ್ವಂತ ಮನೆಯೊಂದರ ನೆರಳು ಮೂಡಬಹುದು, ಬೆಳಕು ಕಾಣದ ಮನೆಗಳು ಎಲ್ ಇ ಡಿ ಬಲ್ಬುಗಳ ಕಾಂತಿಯಿಂದ ಮಿನುಗಬಹುದು ಅಥವಾ ಅಷ್ಟೂ ಸರ್ಕಾರೀ ಸ್ಕೂಲುಗಳ ಜಾಗದಲ್ಲಿ ತಕಿದಿಮಿತ ಕುಣಿಯುವ ಕಷ್ಟಪಟ್ಟು ಇಷ್ಟಪಡುವ ಪ್ರೈವೇಟ್ ಸ್ಕೂಲುಗಳು ತಲೆಯೆತ್ತಬಹುದು, ಎಲ್ಲವೂ ಗೂಗಲ್ ಇಂಟರ್ನೆಟ್ಮಯವಾಗುವ ಹಾದಿಯಲ್ಲಿ ಮಾನವ ಓದು ಬರಹಗಳನ್ನೇ ಮರೆತು ಕೇವಲ ಮಾಂಸದ ಮುದ್ದೆಯಂತಾಗಲೂಬಹುದು. ಒಟ್ಟಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಸರ್ವೋತೋಮುಖ ಅಭಿವೃದ್ಧಿ ಎಂದರೆ ಇವಿಷ್ಟೇ ಎಂದರೂ ಅದು ಉತ್ಪ್ರೇಕ್ಷೆಯಾಗದು! ಆದರೆ ಅಲ್ಲೊಂದು ದೇಶವಿತ್ತು. ದೇಶವೆನ್ನುವುದಕ್ಕಿಂತ ಮರಳುಗಾಡಿನ ರಾಶಿ ರಾಶಿ ಗುಡ್ಡೆಗಳ ಪ್ರದೇಶವೆನ್ನಬಹುದು. ಸುಟ್ಟು ಕರಕಲಾಗುವ ಉರಿಬಿಸಿಲಿಗೆ ಅಲ್ಲಿ ಮಾನವರಾಗಲಿ ಕನಿಷ್ಠ ಒಂದೆರೆಡು ಪ್ರಾಣಿಗಳೂ ಕಾಣಲು ಸಿಗುತ್ತಿರಲಿಲ್ಲ. ನಮ್ಮ ರಾಜ್ಯಕ್ಕಿಂತಲೂ ಸಣ್ಣದಾದ ಆ ಭೂಪ್ರದೇಶ ಅಕ್ಷರ ಸಹ ಮರಳುಗಾಡಿನ ಆಗರ. ಅಲ್ಲೊಂದು ಇಲ್ಲೊಂದು ಗುಂಪು ಜನಗಳು ನೇಸರರಾಜನೊಟ್ಟಿಗೆ ಸೆಣೆಸುತ್ತಾ ವಾಸಿಸುತ್ತಿದ್ದದ್ದು ಬಿಟ್ಟರೆ ಉಳಿದಷ್ಟೂ ಜಾಗ ಬಟಬಯಲಿನ ಜನವಿರಳ ಪ್ರದೇಶವಾಗಿತ್ತು. ದಿನಕ್ಕೊಂದು ಮುಡಿಯಷ್ಟು ಅನ್ನವನ್ನು ಬಿಟ್ಟರೆ ಖರ್ಜೂರದ ಹಣ್ಣುಗಳೇ ಇವರಿಗೆ ಮೂರೊತ್ತಿನ ಆಹಾರ! ವರ್ಷಕೊಮ್ಮೆ ಅಥವಾ ಕೆಲವೊಮ್ಮೆ ಒಮ್ಮೆಯೂ ಬಾರದ ಮಳೆರಾಯನನ್ನು ಇಲ್ಲಿ ಒಂದು ನರಪಿಳ್ಳೆಯೂ ನಂಬಿ ಬದುಕುತ್ತಿರಲಿಲ್ಲ. ಇನ್ನು ನೀರನಂತೂ ಕೇಳಬೇಕೆ, ಅದು ಜಗತ್ತಿನ ಅತಿ ಕೊನೆಯ ಹನಿಯೋ ಎಂಬಂತೆ ಕಾಪಾಡಿಕೊಂಡು ಬರುತ್ತಿದ್ದರು. ಅದೆಷ್ಟೇ ಬಾಯಾರಿದರೂ ದಿನಕೊಂದು ಸಣ್ಣ ಲೋಟದ ನೀರನಷ್ಟೇ ಕುಡಿಯಲು ಶಕ್ತರಾಗಿದ್ದರು! ಇಂತಹ ಬರಬಿದ್ದ ಮರಳು ರಾಶಿಯಲ್ಲಿ ಮೇಲೆ ಹೇಳಿದ ಐವತ್ತು ವರ್ಷಗಳಲ್ಲೇ ಏನೆಲ್ಲಾ ಜರುಗಿರಬಹದು ? ಹಳ್ಳಿಯೊಂದು, ಊರೊಂದು ಹುಟ್ಟಿರಬಹುದು. ಹುಟ್ಟಿದರೂ ಈ ಬೆಂಕಿಯ ನೆಲದಲ್ಲಿ ಜೀವ ಪಣಕ್ಕಿಟ್ಟು ಬದುಕುವುದಕ್ಕಿಂತ ಮೂರ್ಖತನ ಮತ್ತೊಂದಿರದು. ಅಥವಾ ಅಕ್ಕಪಕ್ಕದ ಯಾವುದಾದರೊಂದು ಸದೃಢ ದೇಶ ನ್ಯೂಕ್ಲಿಯರ್ ಪ್ಲಾಂಟ್ಗಳನ್ನೋ ಅಥವಾ ಪವನಶಕ್ತಿ ಕೇಂದ್ರಗಳನ್ನೂ ನಿರ್ಮಿಸಿದ್ದಿರಬಹುದು. ಅಥವಾ ಇದ್ದ ಮೂರು ಮತ್ತೊಂದು ಕುಟುಂಬಗಳೂ ಕಣ್ಮರೆಯಾಗಿ ಕೇವಲ ಬಿಸಿಲಿನ ಮೊರೆತವೇ ಸರ್ವವ್ಯಾಪ್ತಿಯಾಗಿದ್ದಿರಬಹುದು, ಅಲ್ಲವೇ?
ಬಿಲ್ಲಕುಲ್ ಇಲ್ಲ! ಮತ್ತಷ್ಟು ಓದು »