ವಿಷಯದ ವಿವರಗಳಿಗೆ ದಾಟಿರಿ

Archive for

21
ಆಗಸ್ಟ್

ಅಜಾತ ಶತ್ರುವಿನ ನೆಪದಲ್ಲಿ ಆಂಧ್ರದ ಬೃಹಸ್ಪತಿಯ ನೆನೆಯುತ್ತ…

– ರಾಕೇಶ್ ಶೆಟ್ಟಿ

ಬದುಕಲಿಕ್ಕೆಂದೇ ದಿನ ಸಾಯುವವರು,ಬೇಗ ಸತ್ತರೆ ಸಾಕೆಂದು ಬದುಕುವವರ ನಡುವೆ, ಸತ್ತು ಬದುಕುವುದು ಹೇಗೆ ಎಂದು ತೋರಿಸಿಕೊಟ್ಟ ಪುಣ್ಯಾತ್ಮರಿಗೆ ಈ ದೇಶದಲ್ಲಿ ಕೊರತೆಯಿಲ್ಲ. ಅದು ಹದಿಹರೆಯದಲ್ಲೇ ನೇಣಿಗೆ ಕೊರಳೊಡ್ಡಿ ಬ್ರಿಟಿಷರ ನಿದ್ದೆಗೆಡಿಸಿದ ಭಗತನಿರಬಹುದು,ಮೈ ಆಜಾದ್ ಹೂಂ ,ಆಜಾದ್ ಹೀ ರಹೂಂಗ ಎಂದು ಬ್ರಿಟಿಷರ ಕೈಗೆ ಕಡೆಯವರೆಗೂ ಸಿಗದೇ ಹುತಾತ್ಮರಾದ ಚಂದ್ರ ಶೇಖರ್ ಆಜಾದ್ ಅವರಿರಬಹುದು,ದೇಶ ಬಿಟ್ಟು ಪರದೇಶದಲ್ಲೊಂದು ಸೈನ್ಯ ಕಟ್ಟಿ ಭಾರತವನ್ನು ದಾಸ್ಯ ಮುಕ್ತ ಮಾಡುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯಿರಬಹುದು (ಅವರು ವಿಮಾನಾಪಘಾತದಲ್ಲಿ ಸಾಯಲಿಲ್ಲವೆಂದೇ ಬಲವಾಗಿ ನಂಬುವವನು ನಾನು), ೬೫ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿ,ಗಾಂಧಿಯವ ಥಿಯರಿಗಳನ್ನೇ,ವಾಸ್ತವದಲ್ಲಿ ಪಾಲಿಸುವಂತೆ ಬದುಕಿದ ಸಂತ ಲಾಲ್ ಬಹಾದ್ದೂರ್ ಶಾಸ್ತ್ರಿಗಳಿರಬಹುದು,ನೆಹರೂ ಕಾಲದ ಅಡಾಲೆದ್ದು ಹೋದ ಭಾರತದ ಅರ್ಥ ವ್ಯವಸ್ಥೆಯನ್ನು ಬದಲಿಸಿ ಭಾರತದ ಆರ್ಥಿಕ ಪಥವನ್ನೇ ಬದಲಿಸಿ ನಿಲ್ಲಿಸಿದ ಪಿವಿ ನರಸಿಂಹರಾವ್ ಅವರಿರಬಹುದು,ಸ್ವಾತಂತ್ರ್ಯ ಬಂದಾಗಿನಿಂದ ಅದೇ ಕಿತ್ತು ಹೋದ,ಡಾಂಬರು ಕಾಣದ ರಸ್ತೆಗಳನ್ನು ಸುವರ್ಣ ಚತುಷ್ಪತ,ಪ್ರಧಾನ್ ಮಂತ್ರಿ ಗ್ರಾಮೀಣ್ ಸಡಕ್ ಯೋಜನೆಗಳ ಮೂಲಕ ರಾವ್ ಅವರು ಹಾಕಿಕೊಟ್ಟ ಆರ್ಥಿಕ ತಳಹದಿಯ ಮೇಲೆ ನವಭಾರತ ನಿರ್ಮಾಣಕ್ಕೆ ಶರವೇಗ ನೀಡಿದ ಕವಿಹೃದಯಿ ಅಟಲ್ ಬಿಹಾರಿ ವಾಜಪೇಯಿಯವರಿರಬಹುದು… ಹೀಗೆ ಸತ್ತು ಬದುಕುವುದು ಹೇಗೆಂದು ಹೇಳಿಕೊಟ್ಟವರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ರಾಜಕಾರಣಿಯೊಬ್ಬ ಸತ್ತರೆ ಜನ ಸಾಮಾನ್ಯನೊಬ್ಬನಿಗೆ ತನ್ನದೇ ಕುಟುಂಬದ ಸದಸ್ಯನೊಬ್ಬ ಹೊರಟು ಬಿಟ್ಟನಲ್ಲ ಎನ್ನುವಷ್ಟು ದುಃಖವಾಗುತ್ತದೆಯೆಂದರೇ ಅದು ನಿಜಕ್ಕೂ ಬದುಕಿನ ಸಾರ್ಥಕತೆಯೇ ಸರಿ. ಕವಿ ಹೃದಯದ,ವಾಗ್ದೇವಿಯ ವರಪುತ್ರನಂತೆ ಮಂತ್ರಮುಗ್ಧ ವಾಗ್ಮಿಯಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಅಂತಹದ್ದೊಂದು ಬದುಕನ್ನು ಬದುಕಿ ಉದಾಹರಣೆಯಾಗಿ ಇಲ್ಲಿಂದ ಮುಂದಕ್ಕೆ ಹೊರಟಿದ್ದಾರೆ. ಆಗಸ್ಟ್ ೧೭ರ ಎಲ್ಲಾ ಪತ್ರಿಕೆ,ಚಾನೆಲ್ಲುಗಳ ತುಂಬಾ ವಾಜಪೇಯಿಯವರ ಜೀವನ ಚರಿತ್ರೆ, ಭಾಷಣಗಳು,ವ್ಯಕ್ತಿಚಿತ್ರಣ ತುಂಬಿ ಹೋಗಿತ್ತು.ಈಗಾಗಲೇ ವಾಜಪೇಯಿಯವರ ಬಗ್ಗೆ ಹಲವಾರು ಲೇಖನಗಳು ಬಂದಿವೆ,ಇನ್ನು ಅವರ ಬಗ್ಗೆ ಬರೆಯಲಿಕ್ಕೆ ಉಳಿದಿರುವುದಾದರೂ ಏನು ಅನ್ನಿಸುತ್ತದೆ.ಆದರೆ ಮಹಾನ್ ವ್ಯಕ್ತಿಗಳು ಬದುಕಿದ್ದಾಗ ಮಾತ್ರವಲ್ಲ,ಮರಣದಲ್ಲೂ ಸಂದೇಶಗಳನ್ನು ಬಿಟ್ಟು ಹೋಗುತ್ತಾರೆ ಅಥವಾ ಅವರ ಶಿಷ್ಯರು ಆ ಕೆಲಸವನ್ನು ಮಾಡುತ್ತಾರೆ. ವಾಜಪೇಯಿಯವರ ಅಂತಿಮ ಯಾತ್ರೆ ಅಂತಹದ್ದೊಂದು ಗಟ್ಟಿಯಾದ ಸಂದೇಶವನ್ನು ದೆಹಲಿ ರಾಜಕಾರಣದಲ್ಲಿ ಘಂಟಾಘೋಷವಾಗಿ ಮೊಳಗಿಸಿದೆ. ಅಂತಿಮ ಯಾತ್ರೆಯ ಐದು ಕಿಲೋಮಿಟರ್ರುಗಳನ್ನು ಪ್ರಧಾನಿ ನರೇಂದ್ರ ಮೋದಿ,ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ನಡೆದುಕೊಂಡೇ ಸಾಗಿದರು. ರಸ್ತೆಯ ತುಂಬೆಲ್ಲಾ ಜನಸಾಗರ ಸೇರಿತ್ತು. ರಾಜೀವ್ ಗಾಂಧೀಯವರ ಅವರ ಹತ್ಯೆಯಾಗಿ ಅಂತಿಮ ಯಾತ್ರೆ ನಡೆದಾಗ ಸೇರಿದ್ದು ಬಿಟ್ಟರೆ ದೆಹಲಿ ಮತ್ತೆ ಇಷ್ಟು ಜನರನ್ನು ನೋಡಿದ್ದು ಈಗಲೇ ಎನ್ನುವ ಮಾತುಗಳು ಕೇಳಿಬಂದವು.ನಿಜವಾಗಿಯೂ ದೆಹಲಿಗೆ ೧೪ ವರ್ಷಗಳ ಹಿಂದೆಯೇ ಅಂತಹದ್ದೊಂದು ದಿನ ಬಂದಿತ್ತು.ಅದು ಪಿ.ವಿ ನರಸಿಂಹರಾವ್ ಅವರು ಮರಣ ಹೊಂದಿದ್ದ ದಿನ. ನೆಹರೂ ಕಾಲದ ಹಳಿತಪ್ಪಿ ಅಡಾಲೆದ್ದು ಹೋಗಿದ್ದ ಅರ್ಥಿಕ ನೀತಿಯನ್ನೇ ೯೦ರ ದಶಕದವರೆಗೂ ನಡೆಸಿಕೊಂಡು ಭಾರತವನ್ನು ಜಗತ್ತಿನ ಬಲಾಢ್ಯ ರಾಷ್ಟ್ರಗಳ ಮುಂದೆ ಮಂಡಿಯೂರಿ ದೈನೇಸಿ ಸ್ಥಿಯಲ್ಲಿ ಕುಳಿತಿರುವಂತೆ ಮಾಡಲಾಗಿತ್ತಲ್ಲ,ಆ ಸ್ಥಿತಿಯನ್ನು ಬದಲಿಸಿ ಭಾರತದ ನವ ಆರ್ಥಿಕತೆಯಾ ರೂವಾರಿ,ಆಂಧ್ರದ ಜನರ ಪ್ರೀತಿಯ ಬೃಹಸ್ಪತಿ,ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ೨೦೦೪ರಲ್ಲಿ ತಮ್ಮ ದೇಹವನ್ನು ತ್ಯಜಿಸಿದರು. ಆದರೆ,ದೇಶದ ಜನರಿಗೆ ಅಂತಹದ್ದೇನೂ ನಡೆಯಲೇ ಇಲ್ಲ,ಅಸಲಿಗೆ ಆ ವ್ಯಕ್ತಿಯ ಸಾವು ಒಂದು ಸುದ್ದಿಯೇ ಅಲ್ಲವೆನ್ನುವಂತೆ ಮಾಡಿಸುವಲ್ಲಿ ನೆಹರೂ ಪರಿವಾರ ಮತ್ತು ಅವರ ಸಾಕು ನಾಯಿಗಳಂತೆ ವರ್ತಿಸುವವರು ಮಾಡಿದ್ದರು.

ಮತ್ತಷ್ಟು ಓದು »