ವಿಷಯದ ವಿವರಗಳಿಗೆ ದಾಟಿರಿ

Archive for

31
ಆಕ್ಟೋ

ಪಟೇಲ್ ಎಂಬ ಉಕ್ಕಿನ ಪುರುಷ, ಸ್ವತಂತ್ರ ಭಾರತದ ಐಕ್ಯತೆಯ ಪ್ರತೀಕ.

– ಶ್ರೇಯಾಂಕ ಎಸ್ ರಾನಡೆ.

sardar_patel-statue_of_unity-kVtG--621x414@LiveMint“ಪ್ರಾಚೀನ ಭಾರತ ಅನೇಕ ವರ್ಷಗಳ ಕಾಲ ಬ್ರಿಟಿಷರ ಗುಲಾಮಗಿರಿಯಲ್ಲಿತ್ತು ಎಂಬುದು ಅತ್ಯಂತ ತಲೆತಗ್ಗಿಸುವ ವಿಚಾರ. ಆದರೆ ಈಗ ಸ್ವಾತಂತ್ರ್ಯ ಲಭಿಸಿದೆ. ಎಲ್ಲಾ ಭಾರತೀಯರ ಕರ್ತವ್ಯವೆಂದರೆ ಸ್ವತಂತ್ರ ಭಾರತ ಮತ್ತೊಮ್ಮೆ ಗುಲಾಮವಾಗದಂತೆ ನೋಡಿಕೊಳ್ಳಬೇಕು. ಏನಿದ್ದರೂ ಅದು ಮುಂದೆ ಸಾಗಬೇಕು, ಹಿನ್ನಡೆಯಬಾರದು ಆಗಲೇ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಒದಗುತ್ತದೆ.”- ಸರ್ದಾರ್ ವಲ್ಲಭಭಾಯಿ ಪಟೇಲ್. ಮತ್ತಷ್ಟು ಓದು »

25
ಆಕ್ಟೋ

ಪ್ರಗತಿಪರರ ಈ ವಿತಂಡ ಹೋರಾಟ ಹಿಂದೂಗಳ ಆಚರಣೆಗಳ ಮೇಲೆಯೇ ಏಕೆ..?

– ನಮೋ ಹಿಂದುಸ್ಥಾನಿ 

file6x2g9i3wm3mjrklz1w4ಓದಿದ್ದೇವೆ ಎನ್ನುವ ಹಮ್ಮುಬಿಮ್ಮಿನ ಮೂಲಕ, ಕೈಯ್ಯಲೊಂದಿಷ್ಟು ಅವಾರ್ಡಗಳು, ಕುತ್ತಿಗೆಮೇಲೆ ಒಂದಿಷ್ಟು ಬೋರ್ಡ್ ಗಳು, ಹೀಗೆ ಹಲಾವಾರು ರೀತಿಯಲ್ಲಿ ಕಾಣಿಸಿಕೊಳ್ಳುವ ಈ ಪ್ರಗತಿಪರರು ಲಗ್ಗೆ ಇಡುವುದೇ ಪುರಾತನ ಹಿಂದೂ ಆಚರಣೆಗಳು ಮೇಲೆ.

ಮೊದಲೆಲ್ಲ ಟೀಕಿಸುತ್ತಿದ್ದವರು, ಇಂದು ಬರಬರುತ್ತ ಇವರ ಅಟಾಟೋಪಗಳು ಹಿಂದೂ ಸಂಪ್ರದಾಯದ ಮೇಲೆ ಬಿದ್ದಿದೆ. ಕಾಲ ಬದಲಾಗುತ್ತಿದೆ ಎಲ್ಲರು ವಿದ್ಯಾವಂತರಾದೆವೆಂದು ಪಾಶ್ಚಾತ್ಯ ಶೈಲಿಯ ವಿದೇಶಿಗರ ಉಡುಗೆ ತೊಡುಗೆಗೆ ಮಾರುಹೋಗಿ ಹಿಂದುತ್ವವನ್ನೇ ಬಿಟ್ಟು ಬಿಡುವ ಕೊನೆ ಪರಿಸ್ಥಿತಿಯ ಕಡೆ ಪಯಣವೇ ಇವರ ಈ ಹಿಂದೂ ವಿರೋಧಿ ರೀತಿ-ನೀತಿ ರುಜುವಾತುಗಳು. ಮತ್ತಷ್ಟು ಓದು »

25
ಆಕ್ಟೋ

ಆಲಾಪ..

– ಸುಜಿತ್ ಕುಮಾರ್

young-couple-breaking-up-girl-450w-239389240‘ಎಕ್ಸ್ ಕ್ಯೂಸ್ ಮೀ .. ನೀವು ರಿಸರ್ವ್ಡ್ ಸೀಟಲ್ಲಿ ಕೂತಿದ್ದೀರಾ ಅನ್ಸುತ್ತೆ?’

‘ಇಸ್ ಇಟ್?.. ಸ್ವಲ್ಪ ತಾಳಿ, ಒಮ್ಮೆ ಚೆಕ್ ಮಾಡ್ಕೊಬಿಡ್ತೀನಿ’ ಎನುತ ಆಕೆ ಮೊಬೈಲ್ ಅನ್ನು ಹೊರಗೆಳೆದಳು.

‘ಓ ಗಾಡ್, ಮೊಬೈಲ್ ಸ್ವಿಚ್ ಆಫ್ ಬರ್ತಾ ಇದೆ. ಏನ್ ಹುಡುಗ್ರಪ್ಪ ಇವ್ರು.. ಎನಿವೇಸ್ ಐಮ್ ಸಾರೀ..ನೀವ್ ಬಂದ್ ಕೂತ್ಕೊಳ್ಳಿ’ ಎಂದು ಕೂಡಲೇ ಆಕೆ ಎದ್ದು ಕಾಫಿ ಡೇಯಿಂದ ಹೊರನಡೆದಳು.

ಈತನಿಗೆ ಅಷ್ಟರಲ್ಲಾಗಲೇ ತನ್ನ ಅನುಮಾನ ನಿಜವೆನಿಸಿದ್ದರಿಂದ ಒಂದರೆಕ್ಷಣ ಮಾತು ಬಾರದಂತಾಗುತ್ತದೆ. ತನ್ನ ಮೊಬೈಲ್ ಅನ್ನು ಹೊರಗೆಳೆದು ಸ್ವಿಚ್ ಆನ್ ಮಾಡಿದ ಕೂಡಲೇ ಆಕೆಯ ನಂಬರ್ ಎಂದು ಕಳಿಸಲ್ಪಟ್ಟಿದ್ದ ನಂಬರ್ನಿಂದ ಎರಡು ಮಿಸ್ಡ್ ಕಾಲ್ ಗಳು ಬಂದಿರುತ್ತವೆ. ಇದೇಗೆ ಸಾಧ್ಯ!? ಅದೆಷ್ಟೇ ಯೋಚಿಸಿದರೂ ಉತ್ತರ ಹೊಳೆಯಲಿಲ್ಲ. ಕೂಡಲೇ ಆಕೆಯ ಅಪ್ಪನಿಗೆ ಫೋನಾಯಿಸಿ ನಾಲ್ಕು ಬೈದುಬಿಡಬೇಕೆಂಬ ಮನಸ್ಸಾದರೂ ಏಕೋ ಸುಮ್ಮನಾಗುತ್ತಾನೆ. ‘ಐಮ್ ಸಾರೀ..ನೀವ್ ಬಂದ್ ಕೂತ್ಕೊಳ್ಳಿ’ ಎಂದ ಆಕೆಯ ಮಾತುಗಳಲ್ಲಿ ಅದೇನೋ ಒಂದು ಬಗೆಯ ಮುಗ್ದತೆ ಆತನನ್ನು ಕಾಡಿತು. ಅಂತಃಕರಣ ರೋಧಿಸಿತು. ತಾನು ಫೋಟೋದಲ್ಲಿ ನೋಡಿದ ಚೆಲುವೆ ನಿಜವಾಗಿಯೂ ಇವಳೇನಾ ಅಂತಂದುಕೊಳ್ಳುತ್ತಾ ಆಕೆಯ ಫೋಟೋಗಳನ್ನೇ ಒಂದೊಂದಾಗೆ ನೋಡತೊಡಗಿದ. ಮತ್ತಷ್ಟು ಓದು »

22
ಆಕ್ಟೋ

ಈ ತುಲನೆ ನ್ಯಾಯವೇ!?

– ಶ್ರೀಧರ್ ಭಟ್

Sabarimala-kDBB--621x414@LiveMintಶಬರಿಮಲೆಯ ದೇಗುಲವನ್ನು ವಯಸ್ಸಿನ ಮಿತಿಯಲ್ಲದೇ ಯಾವ ಮಹಿಳೆಯೂ ಸಹ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದ ಬೆನ್ನಲ್ಲೇ ವ್ಯಕ್ತವಾದ ಹಲವಾರು ಪ್ರತಿಕ್ರಿಯೆಗಳು ನನ್ನ ಗಮನ ಸೆಳೆದಿದ್ದವು. ಹಿಂದುತ್ವದ ಪರವಾಗಿ ಅನೇಕ ಕೆಲಸಗಳನ್ನು ಮಾಡಿರುವ, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಮತ್ತು ನಾನು ಗೌರವಿಸುವ ಕೆಲವು ವ್ಯಕ್ತಿಗಳ ಪ್ರತಿಕ್ರಿಯೆಗಳು ಮಾತ್ರ ಅವಾಸ್ತವಿಕ ಎಂದೆನಿಸಿದವು. ಮತ್ತಷ್ಟು ಓದು »

21
ಆಕ್ಟೋ

ಸಮಾನತೆಯ ಪ್ರಶ್ನೆ, ಸಾಮರಸ್ಯದ ಸಂಕೇತ ಶಬರಿಮಲೆ

– ಸ್ನೇಹಾ ಸಾಗರ

downloadಕೆಲ ದಿನಗಳ ಪ್ರಶ್ನೆಯಲ್ಲ, ಹಲವು ವರ್ಷಗಳ ಪ್ರಶ್ನೆ. ‘ಶಬರಿಮಲೆಗೆ ಹೆಣ್ಣಿಗೇಕೆ ಪ್ರವೇಶವಿಲ್ಲ’ ಎನ್ನುವುದು. ಹೆಣ್ಣೆೆಂದೆರೆ ಅಪವಿತ್ರತೆ ಎನ್ನುವುದೋ, ಪಂದಳದ ರಾಜ ಹೆಣ್ಣಿನ ವಿರೋಧಿ ಎನ್ನುವುದೋ ಅಥವಾ 48 ದಿನಗಳ ಕಠಿಣ ವೃತ ಮತ್ತು ದೊಡ್ಡ ಪಾದ, ಸಣ್ಣ ಪಾದಗಳನ್ನು ಹತ್ತಿ ದೇವರ ದರ್ಶನ ಪಡೆಯುವುದು ಹೆಣ್ಣಿನ ಶಕ್ತಿಗೆ ಆಗದ್ದು ಎನ್ನುವುದೋ. ಒಟ್ಟಿನಲ್ಲಿ ಶಬರಿಮಲೆ ಅಂದಿಗೂ – ಇಂದಿಗೂ ಪ್ರಶ್ನೆೆಯೇ, ವಿವಾದವೇ. ಆದರೆ ಅದು ಯಾರಿಗೆ ಎನ್ನುವುದು ದೊಡ್ಡ ಪ್ರಶ್ನೆೆ. ಭಾರತವೆಂದರೆ ಪರಂಪರೆ, ಭಾರತವೆಂದರೆ ಸಂಸ್ಕೃತಿ – ಸಂಪ್ರದಾಯ ಎನ್ನುವರಿಗೆ ಹಾಗೂ ದೇವರೊಡನೆ ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆೆ ನಂಬಿಕೆಗಳನ್ನು ಉಳಿಸಿಕೊಂಡು ಬಂದವರಿಗೆ ಖಂಡಿತ ಶಬರಿಮಲೆಯ ಈ ಕಟ್ಟುಪಾಡು ಸಮಸ್ಯೆೆಯೇ ಅಲ್ಲ. ಮತ್ತಷ್ಟು ಓದು »

21
ಆಕ್ಟೋ

ಅರ್ಝಿ ಹುಕುಮತ್-ಇ-ಹಿಂದ್ ಆಜಾದ್: ಸ್ವತಂತ್ರ ಭಾರತದ ಪ್ರಾಂತೀಯ ಸರಕಾರಕ್ಕೆ 75..!

– ಶ್ರೇಯಾಂಕ ಎಸ್ ರಾನಡೆ.

netaji-subhash-chandra-bose-01-1501591576‘ಬೋಸ್ ಹಾಗೂ ಐಎನ್‍ಎ ಪ್ರತಿನಿಧಿಗಳನ್ನು “ದೇಶಭಕ್ತರಲ್ಲೇ ಶ್ರೇಷ್ಠರು” ಎಂದು ಬ್ರಿಟಿಷ್‍ರಾಜ್ ಪರಿಗಣಿಸಿತು’- ಎಡ್ವಡ್ಸ್ ಮೈಕಲ್, ದಿ ಲಾಸ್ಟ್ ಇಯರ್ಸ್ ಆಫ್ ಬ್ರಿಟಿಷ್ ಇಂಡಿಯಾ, ಕ್ಲೀವ್‍ಲ್ಯಾಂಡ್ ಪ್ರಕಾಶನ, 1964, ಪುಟ: 93.

ಅಕ್ಟೋಬರ್ 21, 1943, ಭಾರತ ಬ್ರಿಟಿಷರಿಂದ ದಾಸ್ಯದ ಮುಕ್ತಿಗಾಗಿ ಸ್ವಾತಂತ್ರ್ಯದ ಪ್ರಾಪ್ತಿಗಾಗಿ ಕೊನೆಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ತುದಿಗಾಲಲ್ಲಿ ನಿಂತಿದ್ದ ಸಂದರ್ಭ. ಒಂದೆಡೆ ಗಾಂಧೀಜಿಯೇ ಸ್ವಾತಂತ್ರ್ಯ ದೊರಕಲು ಹಳೆಯ ಮಾರ್ಗಗಳಿಗೆ ಶುಭವಿದಾಯ ಹೇಳಿ, 1942ರಲ್ಲಿ “ಮಾಡು ಇಲ್ಲವೆ ಮಡಿ: ಭಾರತ ಬಿಟ್ಟು ತೊಲಗಿ” ಆಂದೋಲನಕ್ಕೆ ಕರೆ ನೀಡಿದ್ದರೆ, ಮತ್ತೊಂದೆಡೆ ಅದಕ್ಕೆ ಪರೋಕ್ಷ ಉತ್ತೇಜನ ಮತ್ತು ಅಂತಹ ಹೋರಾಟಕ್ಕೆ ಅನಿವಾರ್ಯತೆಯನ್ನು ಸೃಷ್ಟಿಸುವ ಪ್ರಕ್ರಿಯೆ ವಿದೇಶಿ ನೆಲದಲ್ಲಿ ನೆಲೆಸಿದ್ದ ಭಾರತೀಯ ಹೋರಾಟಗಾರರಿಂದ ನಡೆಯುತ್ತಿತ್ತು. ಮತ್ತಷ್ಟು ಓದು »

18
ಆಕ್ಟೋ

ರೈತರ ಬಾಳನು ಹಸನಾಗಿಸಿದ ಹೈನುಗಾರಿಕೆ

– ಸಂಜಯ.ಆರ್

• ಹೈನುಗಾರಿಕೆಯಿಂದಾಗಿ ಸ್ತ್ರೀ ಸಬಲೀಕರಣ
• ಸಾವಯವ ಹೈನುಗಾರಿಕೆಯಲ್ಲಿ ಕ್ಷೀರ ಕ್ರಾಂತಿ

1ಅಭಿವೃದ್ಧಿ ಹೊಂದುತ್ತಿರುವ ದೇಶದ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಭಾರತ, ಕೈಗಾರಿಕಾ ಕ್ರಾಂತಿ ಐ.ಟಿ ಹಾಗೂ ಪ್ರಾರಂಭಿಕ ಉದ್ದಿಮೆ (ಸ್ಟಾರ್ಟ್ ಅಪ್) ಗಳ ಮೂಲಕೇಂದ್ರ ಬಿಂದುವಾದರೂ ಕೃಷಿ ಮತ್ತು ಹೈನುಗಾರಿಕೆ ಇಂದಿಗೂ ರಾಷ್ಟ್ರದ ಆರ್ಥಿಕ ವ್ಯವಸ್ಥೆಗೆ ಬೆನ್ನೆಲುಬಾಗಿ ನಿಂತಿದೆ. ರಾಷ್ಟ್ರದ ಶೇ ೪೦% ಅಧಿಕ ಜನಸಂಖ್ಯೆ ಇಂದಿಗೂ ಕೃಷಿ ಮತ್ತು ಕೃಷಿಯೇತರ ಉದ್ಯಮಗಳಾದ ಹೈನುಗಾರಿಕೆ ಮೇಲೆ ಅವಲಂಭಿತವಾಗಿದೆ. ಇಷ್ಟಾದರೂ ಕೃಷಿ ಅಧ್ಯಯನದ ಮೇಲೆ ಹೂಡಿಕೆ ಮಾಡುತ್ತಿರುವುದು ಶೇ ೦.೩೦% ರಷ್ಟು. ಇಂದು ಚೈನಾ (೦.೬೨%) ಅಮೇರಿಕಾ (೧.೨೦%) ಬ್ರೆಜಿಲ್ (೧.೮೨) ಹಾಗೂ ದಕ್ಷಿಣ ಆಫ್ರಿಕಾ (೩.೦೬) ಕ್ಕಿಂತ ಕಡಿಮೆಯಾಗಿದ್ದು, ರೈತರ ಪಾಲಿಗೆ ಬಹುದೊಡ್ಡ ಸಮಸ್ಯೆಯಾಗಿಯೇ ಉಳಿದಿದೆ. ಮತ್ತಷ್ಟು ಓದು »

16
ಆಕ್ಟೋ

ಕುಂ.ವೀ ಮತ್ತೆ ಕುಳಿತು ಮೊದಲಿಂದ ಹೇಳಿದ ಕತೆ – “ಶಾಮಣ್ಣ”

– ಶ್ರೀರಂಗ ಯಲಹಂಕ

ನಾನು ‘ಶಾಮಣ್ಣ’ ಕಾದಂಬರಿ ಓದುವುದಕ್ಕೂ ಮುಂಚೆ   ಕುಂ ವೀ ಅವರ ‘ಡೋಮ ಮತ್ತಿತರ ಕಥೆಗಳು’, ‘ಯಾಪಿಲ್ಲು’ ಕಾದಂಬರಿ, ‘ರಾಯಲಸೀಮಾ’ (ಆತ್ಮಕಥಾನಕ ಮಾದರಿಯ ಬರಹಗಳು), ಅವರ ಆತ್ಮ ಕಥೆ ‘ಗಾಂಧೀ ಕ್ಲಾಸು’, ‘ಅರಮನೆ’ ಕಾದಂಬರಿ ಇವುಗಳನ್ನು ಓದಿದ್ದೆ. ಯಾಪಿಲ್ಲು ಕಾದಂಬರಿಯು ಪುಸ್ತಕರೂಪ ಪಡೆದ ಬಗ್ಗೆ ಬರೆಯುತ್ತಾ ಕುಂ ವೀ ಅವರು ‘ಇದು ಶಾಮಣ್ಣ ಕಾದಂಬರಿಗಿಂತ ಮೊದಲೇ ಬರೆದು ಗೊಂಗಡಿಯಲ್ಲಿ ಅಡಗಿಸಿಟ್ಟಿದ್ದೆ… ‘ ಎಂದು ಬರೆದಿದ್ದಾರೆ.ಅದನ್ನು ಓದಿದ ಮೇಲೆ ‘ಶಾಮಣ್ಣ’ ಕಾದಂಬರಿಯನ್ನು ಓದಬೇಕೆಂಬ ಆಸೆಯನ್ನು ತಡೆಯಲಾರದೆ ಹೋದೆ. ಕೊಂಡುಕೊಂಡು ಓದಿದೆ. ಆಸೆ ನಿರಾಸೆಯಾಯಿತು. ಅದರ ವಿವರಗಳಿಗೆ ಹೋಗುವ ಮುನ್ನ ಒಂದೆರೆಡು ವಿಷಯಗಳನ್ನು ಮೊದಲೇ ಸ್ಪಷ್ಟಪಡಿಸುವುದು ಮುಖ್ಯ. ಈ ನನ್ನ ಬರಹ ‘ಶಾಮಣ್ಣ’ ಕಾದಂಬರಿಯ ಪೂರ್ಣ ಪ್ರಮಾಣದ ವಿಮರ್ಶೆಯಲ್ಲ.ನಾನು ಇದುವರೆಗೆ ಓದಿರುವ ಅವರ  ಕೃತಿಗಳು ಕೆಲವೊಂದು ಮಿತಿಗಳ ನಡುವೆಯೂ ನನಗೆ ಓದಿನ ಸಂತೋಷವನ್ನು ಕೊಟ್ಟಿದೆ. ‘ಅರಮನೆ’ ಕಾದಂಬರಿಯಂತೂ  ಒಂದು ಮಾಸ್ಟರ್ ಪೀಸ್.( ಅದಕ್ಕೆ ೨೦೦೭ನೇ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಬಂದಿದೆ.). ಪ್ರಶಸ್ತಿ ಬಂದ ಕೃತಿಗಳೆಲ್ಲಾ ಉತ್ತಮವಾಗಿರಲೇಬೇಕು ಎಂಬ ನಿಯಮವೇನಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ‘ಅರಮನೆ’ ಕಾದಂಬರಿ ನಿಜವಾಗಲೂ ಆ ಪ್ರಶಸ್ತಿಗೆ ಅರ್ಹವಾದ ಕೃತಿ. ‘ಅರಮನೆ’  ಓದಿದ ಮೇಲೆ ಕುಂ ವೀ ಅವರ ಎಲ್ಲಾ ಕಾದಂಬರಿಗಳನ್ನು ಓದಬೇಕೆಂಬ ಆಸೆ ಇತ್ತು. ಇತ್ತೀಚೆಗೆ ಅವರ ‘ಕತ್ತೆಗೊಂದು ಕಾಲ’ ಎಂಬ ಕಾದಂಬರಿ ಬಿಡುಗಡೆ ಆಯಿತು. ಸದಾ ಪ್ರಯೋಗಶೀಲರಾದ ಕುಂ ವೀ ಅವರ ಆ ಕೃತಿಯ ಬಗ್ಗೆ ನನಗೆ ತುಂಬಾ ಕುತೂಹಲವಿದೆ. ಆದರೆ ‘ಶಾಮಣ್ಣ’ ಕಾದಂಬರಿ ಓದಿದ ಮೇಲೆ ನನ್ನ ಆ ಕುತೂಹಲಕ್ಕೆ ಸ್ವಲ್ಪ ಬ್ರೇಕ್ ಹಾಕಿರುವೆ.

‘ಶಾಮಣ್ಣ’ ೧/೮ ಡೆಮಿ ಆಕಾರಾದ ೬೮೭ ಪುಟಗಳ, ಗಟ್ಟಿ ಮುಟ್ಟಾದ ರಕ್ಷಾಪುಟದ ಬೃಹತ್ ಕಾದಂಬರಿ. ಮೊದಲ ಮುದ್ರಣ ೧೯೯೮. ಪರಿಷ್ಕೃತ ಮುದ್ರಣ ಮೇ ೨೦೧೧. ಬೆಲೆ ರೂ ೩೯೫-. ಪ್ರಕಾಶಕರು ‘ಸಪ್ನ ಬುಕ್ ಹೌಸ್, ಬೆಂಗಳೂರು –೯. ಇದಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ಬಂದಿದೆ. ನಾನು ಓದಿದ್ದು ಪರಿಷ್ಕೃತ ಮುದ್ರಣದ ‘ಶಾಮಣ್ಣ’ನನ್ನು!!  ಪರಿಷ್ಕೃತ  ಮುದ್ರಣದ ಮುನ್ನುಡಿ ರೂಪದ ಮಾತಿನಲ್ಲಿ ಕುಂ ವೀ ಅವರು ಹೇಳಿರುವ ಮಾತುಗಳು ‘ಯಥಾವತ್ತಾಗಿ’ ಹೀಗಿವೆ.
‘… ನನ್ನ ಉಳಿದ ಕಾದಂಬರಿಗಳಂತೆ ಇದು ಸಹ ದ್ವಿತೀಯ ಮುದ್ರಣ ಸೌಲಭ್ಯದ ಹಂತ ತಲುಪಿತು. ಇನ್ನೇನು ಯಥಾವತ್ತಾಗಿ ಪ್ರಕಟವಾಗಬೇಕೆನ್ನುವಷ್ಟರೊಳಗೆ ಓದಲು ಆರಂಭಿಸಿದೆ. ಆರ್ಥಿಕ ಆಸರೆ ಸಲುವಾಗಿ ಕೇವಲ ಇಪ್ಪತ್ತು ದಿವಸಗಳ ಬರೆದ ಕಾಲಾವಕಾಶ ನೆನಪಿಸಿಕೊಂಡೆ. ನಿರಾಸೆ, ಭ್ರಮ ನಿರಸನವಾಯಿತು. ಮೂರು ತಿಂಗಳುಗಳ ಪರ್ಯಂತ ಇದರ ಕಾಮಗಾರಿ ಕೈಗೊಂಡೆ. ಕಾದಂಬರಿಯ ಭಾಷೆ ಸೇರಿದಂತೆ ಪಾತ್ರಗಳ ವ್ಯಕ್ತಿತ್ವವನ್ನು ಪರಿಷ್ಕರಿಸಿದೆ. ಕೆಲವು ಪಾತ್ರಗಳ ಕ್ರಿಯಾಕಲಾಪವನ್ನು ಹ್ರಸ್ವಗೊಳಿಸಿದೆ… ಅನ್ಯ ವಾಚಕ ಮತ್ತು ಲೇಖಕನಾಗಿ ಓದಿಕೊಂಡೆ, ಖುಷಿಯಾಯಿತು. ಓದುಗರೂ  ಖುಷಿ ಪಡಬಹುದೆಂಬ ನಂಬಿಕೆ ಮೂಡಿತು. ದಶಕದ ಹಿಂದೆ ಕಟುವಾಗಿ ವಿಮರ್ಶಿಸಿದ್ದ ಡಾ. ಸಿ ಎನ್. ರಾಮಚಂದ್ರನ್ ಅವರಿಗೂ ಕಾದಂಬರಿಯ ಬದಲಾದ ವಾಸ್ತು, ಭಾಷೆ, ಸಂವಿಧಾನ, ಹಿಡಿಸಬಹುದೆಂಬ ಭರವಸೆಯಿಂದ ಪ್ರಕಟಿಸುತ್ತಿರುವೆ… ‘ .

ಮತ್ತಷ್ಟು ಓದು »

13
ಆಕ್ಟೋ

ಓ ‘ಸಂಬಂಧ’ಗಳೇ ನೀವ್ಯಾಕೆ ಇಷ್ಟು ‘ಬಿಜಿ’!

– ಸುವರ್ಣ ಹೀರೆಮಠ

jhabua-madhya-pradesh-india-march-450w-1088749556ಆ ಕಾಲವೇ ಹಾಗಿತ್ತು. ಮುಖಾಮುಖಿ ಮಾತು, ಸಂಬಂಧಗಳಿಗೆ ಬೆಲೆ ಇತ್ತು. ಜತೆಯಾಗಿ ಊಟ, ಆಟ, ಪಾಠ ನಮ್ಮದಾಗುತ್ತಿತ್ತು. ಆದರೆ ಈಗ ಕಾಲ ಆಗಿಲ್ಲ. ವೈಯಕ್ತಿಕ ಹಿತಾಸಕ್ತಿ ಸಾಧನೆ, ಕೆಲಸದ ಒತ್ತಡ ಎಲ್ಲವನ್ನು  ನುಂಗುತ್ತಿದೆ. ಸಂಬಂಧವೆಂಬುದು ದೂರದ ಬೆಟ್ಟವಾಗುತ್ತಿದೆ. ಹತ್ತಿರ ಹೋಗಿ ನೋಡಿದಾಗ, ಅದು ಕೈಗೆ ಸಿಗದ  ವಸ್ತು ಎಂಬುದು ತಿಳಿಯುತ್ತದೆ. ನಾವೆಲ್ಲ ಯಾಕೆ ಹೀಗೆ ಆಗುತ್ತಿದ್ದೇವೆ ? ದೊಡ್ಡ ಗ್ರಾತ್ರದ ಕಟ್ಟಡ ಕಟ್ಟಬೇಕು. ರೋಬೊ ಕಂಡುಹಿಡಿಯಬೇಕು ನಿಜ. ಆದರೆ ನಾವೇ ರೋಬೊ ಆಗಬಾರದು. ನಿಂತ ಕಟ್ಟಡವೂ ಆಗಬಾರದು. ಮತ್ತಷ್ಟು ಓದು »

11
ಆಕ್ಟೋ

ISROಗೆ ಸಾಧ್ಯವಾಗಿದ್ದು HALಗೇಕೆ ಸಾಧ್ಯವಾಗಲಿಲ್ಲ?

– ಅಜಿತ್ ಶೆಟ್ಟಿ ಹೆರಾಂಜೆ

ಸುಮಾರು 78 ವರ್ಷ ಇತಿಹಾಸ ಇರುವ ವಿಮಾನ ತಯಾರಿಕ ಕಂಪೆನಿಯೊಂದು ಇಂದಿಗೂ ತೆವಳುತ್ತ ಕುಂಟುತ್ತಾ ಸಾಗುತ್ತಿದೆ ಅಂದರೆ ಅದಕ್ಕೆಯಾರುಹೊಣೆ? ಅದನ್ನ ನಿರ್ವಹಣೆ ಮಾಡುತ್ತಿರುವ ಸರಕಾರವಾ? ಅಥವಾ ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಾ? ಅಥವಾ ಕಾರ್ಮಿಕರಿಂದ ಕೆಲಸ ತೆಗೆಸುತ್ತಿರುವ ಅಧಿಕಾರಿ ವರ್ಗವಾ? ಅಥವಾ ಇವರೆಲ್ಲರೂ ಕಾರಣರ? ಹೌದು ನಾನು ಎತ್ತಿರುವ ಪ್ರಶ್ನೆ ಹೆಚ್ಎಎಲ್ ಬಗ್ಗೆ.ಈ ಪ್ರಶ್ನೆ ಈಗ ಯಾಕೆ ಗಂಭೀರ ಸ್ವರೂಪ ಪಡೆದಿದೆ ಎಂದರೆ ಇಂದು ಬಹಳಷ್ಟು ಮಂದಿಗೆ ಎಚ್ಎಎಲ್ ಅಂದರೆ ಅಮೇರಿಕದ ಬೋಯಿಂಗ್  ಕಂಪೆನಿಯ ತರವೋ ಅಥವಾ ರಶ್ಯಾದ ಸುಕೋಯಿ ಕಂಪೆನಿಯ ತರಹವೋ ಎಂದು ಅನಿಸೋಕೆ ಶುರು ಆಗಿದೆ. ಆದರೆ ವಾಸ್ತವಾಂಶ ಹಾಗಿಲ್ಲ. ಎಚ್ಎಎಲ್ ಸ್ಥಾಪನೆಯಾಗಿ 79 ವರ್ಷ ಕಳೆದರೂ ಇವತ್ತಿಗೂ ಈ ಕಂಪೆನಿ 79 ವರ್ಷಗಳ ಹಿಂದೆ ತಾನೇನನ್ನು ಮಾಡುತ್ತಿದಯೋ ಬಹುತೇಕ ಅದೇ ಕೆಲಸವನ್ನು ಇಂದಿಗೂ ಮಾಡುತ್ತಿರುವುದು ಈ ದೇಶದ ಬಹುದೊಡ್ಡ ದುರಂತ. ಎಚ್ಎಎಲ್ ಇಂದಿಗೂ ಬಹುತೇಕ ಕೆಲಸ ವಿದೇಶಿ ನಿರ್ಮಿತ ಯುದ್ದ ವಿಮಾನಗಳ ಬಿಡಿಬಾಗಾಗಳನ್ನ ಇಲ್ಲಿಗೆ ತಂದು ಅದೇ ಕಂಪೆನಿಗಳ‌ ಸಹಯೋಗದೊಂದಿಗೆ ಜೋಡಿಸುವ ಕಾರ್ಯವಷ್ಟೆ. ಒಂದು ಸಣ್ಣವ್ಯತ್ಯಾಸ ಅಂದರೆ 79 ವರ್ಷದ ಹಿಂದೆ Harlow PC-5 ವಿಮಾನವನ್ನು ಜೋಡಿಸಿತ್ತು ಇವತ್ತು ಸುಕೋಯಿ ಯಯದ್ದ ವಿಮಾನದ ಬಿಡಿ ಭಾಗವನ್ನ ಜೋಡಿಸಸುತ್ತಿದೆ ಅಷ್ಟೆ. ಎಚ್ಎಎಲ್ ತಾನಾಗಿಯೇ ಅಭಿವೃದ್ಧಿಪಡಿಸಿದ ವಿಮಾನ ಹಾಗು ಹೆಲಿಕಾಪ್ಟರ್ ಸಂಖ್ಯೆ ಬಹಳಾ ಕಡಿಮೆ.

ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಇದರ ಮೂಲ ಹೆಸರು ಹಿಂದುಸ್ಥಾನ್ ಏರ್ಕ್ರಾಫ್ಟ್ ಲಿಮಿಟೆಡ್ ಎಂದು.ಇದನ್ನ 1940 ರಲ್ಲಿ ಅಂದಿನ ಮೈಸೂರು ಸರಕಾರದ ಸಹಯೋಗದೊಂದಿಗೆ  25 ಲಕ್ಷ ರೂಪಾಯಿ ಬಂಡವಾಳ ಹಾಕಿ ಸ್ಥಾಪಿಸಿದವರು ವಾಲ್ ಚಂದ ಹೀರಾಚಂದ್ ಎನ್ನುವವರು.1941ರಲ್ಲಿ ಅಂದಿನ ಬ್ರಿಟಿಷ್ ಸರಕಾರ ಈ ಕಂಪನಿಯ ಮೂರನೇ ಒಂದರಷ್ಟು ಪಾಲನ್ನು ಖರೀದಿಸಿತು. ಕಾರಣ ಅಂದಿನ ಕಾಲಕ್ಕೆ  ಬ್ರಿಟಿಷರ ಸೈನ್ಯಕ್ಕೆ ಆಧುನಿಕ ಮಿಲಿಟರಿ ಉಪಕರಣವನ್ನು ಸರಬರಾಜು  ಮಾಡಲು  ಏಷ್ಯಾ ಖಂಡದಲ್ಲಿ ಒಂದು ವ್ಯವಸ್ಥೆ ಬೇಕಿತ್ತು.ಅದರಂತೆಯೇ 1942 ರಲ್ಲಿ ಅಮೆರಿಕಾದ  Central Aircraft Manufacturing Company (CAMCO)  ಎನ್ನುವ ಕಂಪೆನಿಯ ಸಹಯೋಗದೊಂದಿಗೆ Harlow PC-5  ಎನ್ನುವ ವಿಮಾನವನ್ನು ನಿರ್ಮಿಸಿತು.ನಂತರ ಇದು ಭಾರತೀಯ ವಾಯು ಪಡೆಯ ಒಂದು ಮುಖ್ಯ ಯುದ್ಧ ವಿಮಾನವಾಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿತು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಈ ಸಂಸ್ಥೆ ಯನ್ನು ಭಾರತ ಸರ್ಕಾರ ಸಂಪೂರ್ಣ ತನ್ನ ಅಧೀನಕ್ಕೆ ತೆಗೆದುಕೊಂಡಿತು, ಅಕ್ಟೋಬರ್ 1, 1964 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಇದನ್ನ  ಹಿಂದುಸ್ಥಾನ್ ಏರೋನೋಟಿಕ್ಸ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಿ ಇದಕ್ಕೊಂದು ಮರು ಹುಟ್ಟು ಕೊಟ್ಟರು.ಹೆಚ್ಎಎಲ್ ಅನ್ನು ಆಧುನಿಕ ಭಾರತದ ಸೇನೆಯ ಬೇಡಿಕೆಯನ್ನು ಪೂರೈಸುವ ಒಂದು ಉತ್ತಮ ಸಂಸ್ಥೆಯನ್ನಾಗಿ  ಮಾಡ ಬೇಕೆಂಬ ಶಾಸ್ತ್ರಿಯವರ ಕನಸನ್ನ ನಂತರದ ದಿನಗಳಲ್ಲಿ ಬಂದ  ಸರ್ಕಾರಗಳು ಸಾಕಾರಗೊಳಿಸುವಲ್ಲಿ ಸೋತಿವೆ. ಹೆಚ್ ಎ ಎಲ್ ಸಂಸ್ಥೆಗೆ ಸುಮಾರು 79 ವರ್ಷದ ಇತಿಹಾಸ ಇದೆ.ಆದರೆ ಇಂದಿಗೂ ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಅಭಿವೃದ್ಧಿಪಡಿಸುವ ವಿಷಯದಲ್ಲಿ ಯಾವುದೇ ಕಂಪೆನಿಗಳ ಹತ್ತಿರಕ್ಕೂ ನಿಲ್ಲುವುದಿಲ್ಲ.

ಮತ್ತಷ್ಟು ಓದು »