ಇಸ್ಲಾಮ್ ವಿಮರ್ಶೆ ಮಾಡಬಾರದಮ್ಮ,ಹಿಂದೂಗಳನ್ನು ಟೀಕಿಸುವುದು ಕರ್ಮ: ಮೈತ್ರಿ ಸರ್ಕಾರದ್ದು ಧೃತರಾಷ್ಟ್ರ ಪ್ರೇಮ!
– ಶ್ರೀನಿವಾಸ್ ರಾವ್
ಘಟನೆ-1
ಬ್ರಿಟೀಶ್ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರವೇನು? ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಮರುನಾಮಕರಣ ಮಾಡಬೇಕು – ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ ಗೆ ಇತಿಹಾಸ ಗೊತ್ತಿಲ್ಲ, ಸರ್ಕಾರಿ ಪ್ರಾಯೋಜಿತ ಸಾಹಿತಿ- ಹೆಚ್ ಡಿ ಕುಮಾರಸ್ವಾಮಿ
2015 ರ ಟಿಪ್ಪು ಜಯಂತಿ ಕಾರ್ಯಕ್ರಮ, ರಕ್ತಪಾತವಾದರೂ ಸರಿಯೇ ಟಿಪ್ಪು ಜಯಂತಿಯನ್ನು ನಡೆಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದ ಸಿದ್ದರಾಮಯ್ಯ ಸರ್ಕಾರ, ಟಿಪ್ಪು ಸುಲ್ತಾನನನ್ನು ಬಣ್ಣಿಸಲು “ಟಿಪ್ಪುವಿನ ಕನಸುಗಳು”ನ್ನು ಕಟ್ಟಿಕೊಟ್ಟಿದ್ದ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಿತ್ತು. ತಮ್ಮ ಧಣಿಯ ಎದುರು ಅವರ ಕುಲದೈವವನ್ನು ಹೊಗಳಲು ನಿಂತ ಸರ್ಕಾರಿ ಪ್ರಾಯೋಜಿತ ಸಾಹಿತಿ ಗಿರೀಶ್ ಕಾರ್ನಾಡ್ ಮಾತಿನ ಓಘದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರೇಕೆಬೇಕು? ಟಿಪ್ಪು ಹೆಸರಿಡಬೇಕು, ಟಿಪ್ಪು ಬ್ರಿಟೀಷರ ವಿರುದ್ಧ ಹೋರಾಡಿದ್ದ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಇರಲಿಲ್ಲ ಎಂದುಬಿಟ್ಟಿದ್ದರು.
ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಏನು? ಮಹಾಭಾರತದ ಯುದ್ಧದಲ್ಲಿ ಅರ್ಜುನ ಕೌರವರ ವಿರುದ್ಧ ಏಕೆ ಬ್ಯಾಲಿಸ್ಟಿಕ್ ಮಿಸೈಲ್ ಪ್ರಯೋಗ ಮಾಡಲಿಲ್ಲ? ದನ್ಯಾಂಗ್-ಕುನ್ಶಾನ್ ಗ್ರ್ಯಾಂಡ್ ಬ್ರಿಡ್ಜ್ ನಿರ್ಮಾಣಕ್ಕೆ ಶ್ರೀರಾಮನ ಕೊಡುಗೆ ಏನು
ಎಂಬಂಥಹ ಸೆನ್ಸಿಬಲ್ ಪ್ರಶ್ನೆಗಳು ಸೆಕ್ಯುಲರ್ ಸರ್ಕಾರಿ ಪ್ರಾಯೋಜಿತ ಬುದ್ಧಿಜೀವಿಗಳಿಗಷ್ಟೇ ಹೊಳೆಯುವುದಕ್ಕೆ ಸಾಧ್ಯ. ಇರಲಿ…