ವಿಷಯದ ವಿವರಗಳಿಗೆ ದಾಟಿರಿ

Archive for

30
ಜನ

ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!

– ವರುಣ್ ಕುಮಾರ್
ಪುತ್ತೂರು

modi-naseer.jpg

  • ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆಶಾರುಖ್ ಖಾನ್
  • ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆಅಮೀರ್ ಖಾನ್
  • ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆನಾಸೀರುದ್ದಿನ್ ಷಾ

ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ‌ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ‌ ಮೆಲುಕು ಹಾಕೋಣ. ಮತ್ತಷ್ಟು ಓದು »

27
ಜನ

ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ಭಾರತರತ್ನ?

ರಾಕೇಶ್ ಶೆಟ್ಟಿ

“ಮೂರು ಬಿಟ್ಟೋರು ಊರಿಗೇ ದೊಡ್ಡೋರು” ಅನ್ನೋ. ಗಾದೆ ಮಾತು ಯಾರಿಗಾದರೂ ಸೂಕ್ತವಾಗಿ ಅನ್ವಯವಾಗುವುದಿದ್ದರೆ ಅದು ಕಾಂಗ್ರೆಸ್ ಪಕ್ಷ ಹಾಗೂ ಅದನ್ನು ಬೆಂಬಲಿಸುವ ಗಂಜಿಗಿರಾಕಿಗಳಿಗೆ. ಕಾರಣವೇನು ಗೊತ್ತೇ, ತನ್ನ ಪಕ್ಷದ ಇತಿಹಾಸದಲ್ಲಿ ಮಾಡಲಾಗಿರುವ ಅನ್ಯಾಯಗಳ ಪಟ್ಟಿ ಅಕ್ಷಯಪಾತ್ರೆಯಂತದ್ದು ಎನ್ನುವುದು ಗೊತ್ತಿದ್ದರೂ ಬೇರೆ ಪಕ್ಷಗಳನ್ನು ಟೀಕಿಸಲು ಹೊರಟಾಗ ಕಾಂಗೈ ನಾಯಕರು ನಾಚಿಕೆ ಬಿಟ್ಟು ನಿಲ್ಲುತ್ತಾರೆ. ಇದಕ್ಕೆ ಇತ್ತೀಚಿನ ಉದಾಹರಣೆ, ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವ ವಿವಾದ.

ಇವತ್ತಿಗೆ ಸಿದ್ದರಾಮಯ್ಯನವರಿಂದ ಹಿಡಿದು ಕಾಂಗಿ ಮರಿಪುಢಾರಿಗಳೆಲ್ಲ ಬಿಜೆಪಿಯನ್ನು ಈ ಬಗ್ಗೆ ಪ್ರಶ್ನಿಸುತ್ತಿವೆ.ಆದರೆ,ಹಾಗೆ ಪ್ರಶ್ನಿಸುವ ಭರದಲ್ಲಿ ದೇಶದ ಉನ್ನತ-ಅತ್ಯುನ್ನತ ಪ್ರಶಸ್ತಿಗಳ ಮಾನವನ್ನು ಮೂರು ಬಿಟ್ಟವರ ಪಕ್ಷ ಹೇಗೆ ಕಳೆದಿದೆ ಎನ್ನುವುದನ್ನು ಇವರು ಮರೆತಿರುವಂತಿದೆ.

ಮತ್ತಷ್ಟು ಓದು »

21
ಜನ

ಮೋದಿ ಸಾಲದ ಶೂಲ – ಗಂಜಿಗಿರಾಕಿಗಳ ಕೋಲಾಹಲ

– ರಾಘವೇಂದ್ರ ಸುಬ್ರಹ್ಮಣ್ಯ

ನಿನ್ನೆ-ಮೊನ್ನೆಯಿಂದಾ ನಮ್ಮ ಮಾಧ್ಯಮಗಳದ್ದು ಒಂದೇ ಗಲಾಟೆ, “ಮೋದಿ ಅಧಿಕಾರವಧಿಯಲ್ಲಿ ಭಾರತದ ಸಾಲದ ಹೊರೆ ಬೃಹತ್ ಪ್ರಮಾಣದಲ್ಲಿ ಹೆಚ್ಚಾಗಿದೆ” ಅಂತಾ ಕೂಗಾಡ್ತಿವೆ. ಇಂಡಿಯಾಟುಡೇ “ಮೋದಿ ಸರ್ಕಾರದ ಅಡಿಯಲ್ಲಿ ಕೇಂದ್ರ ಸಾಲವನ್ನು 50% ಏರಿಕೆಯಾಗಿದೆ” ಅಂತಾ ಶುರುಮಾಡಿದ ಈ ಅರಚಾಟದ ಕಸದಂತಾ ಸುದ್ಧಿಯನ್ನು, ಎಕನಾಮಿಕ್ ಟೈಮ್ಸ್ ಕೂಡಾ ತಾನು ಎರವಲು ಪಡೆದ ಹಾಗೇ ಹಂಚಿತು. ಇವರೆಲ್ಲರೂ ಈ ಸುದ್ಧಿಯನ್ನ ಪಡೆದದ್ದೆಲ್ಲೆಂದಾ? ಕಳೆದ ಶುಕ್ರವಾರ ಕೇಂದ್ರ ಹಣಕಾಸು ಸಚಿವಾಲಯದ “ಸರ್ಕಾರೀ ಸಾಲದ ಸ್ಥಿತಿಪತ್ರದ 8 ನೇ ಆವೃತ್ತಿ” ಬಿಡುಗಡೆಯಾಯಿತು. ಅದರಿಂದ ತಮಗೆ ಬೇಕಾದಷ್ಟೇ ಸುದ್ಧಿಯನ್ನ ಈ ಸುದ್ಧಿಮನೆಗಳು ಹೆಕ್ಕಿತೆಗೆದು, ತಮಗೆ ಬೇಕಾದಂತೆ ತಿರುಚಿ, “ಮೋದಿ ಹೇಗೆ ಭಾರತಕ್ಕೆ ಮಾರಕ” ಎನ್ನುವಂತಾ ತಮ್ಮ ಹಳೇ ಕಥೆಗಳ ದೀಪಕ್ಕೆ ಹೊಂದುವಂತಾ ನಿರೂಪಣೆಯ ಬತ್ತಿಯನ್ನ ಹೊಸೆದರು.

ಈ ಸುದ್ಧಿಗಳು ಬಂದದ್ದೇ ತಡ, ಮೋದಿ ವಿರೋಧಿ ಬಳಗಗಳು ತಮ್ಮ ಮನೆ-ಮನಗಳಲ್ಲಿ ಸದಾಕಾಲ ಉರಿಯುತ್ತಿರುವ ಮೋದಿ ದ್ವೇಷದ ಬೆಂಕಿಗೆ ಇನ್ನೂ ಎರಡು ಲೀಟರ್ ಪೆಟ್ರೋಲ್ ಹೆಚ್ಚೇ ಸುರಿದು, ಈ ಸುದ್ಧಿಯನ್ನು ಎಲ್ಲೆಡೆ ಹರಡಲು ಪ್ರಾರಂಭಿಸಿದರು. “ಮೋದಿನಾಮಿಕ್ಸ್ ನೆಲಕಚ್ಚಿದೆ, ದೇಶದಲ್ಲಿ ಕೆಲಸಗಳೇ ಇಲ್ಲ, ಕೈಗಾರಿಕಾ ಉತ್ಪಾದನೆ ಮೇಲೇಳದಂತೆ ಕುಸಿದಿದೆ, ಇಂತಾ ಸಮಯದಲ್ಲಿ ಮೋದಿ ದೇಶಕ್ಕೆ ಇನ್ನೂ 28ಲಕ್ಷ ಕೋಟಿ ಸಾಲ ಹೆಚ್ಚಿಸಿ ನಮ್ಮನ್ನೆಲ್ಲಾ ಕೊಂದೇಬಿಟ್ಟಿದ್ದಾನೆ. ಚುನಾವಣಾ ಜುಮ್ಲಾಗಳ ಕಾಲ ಮುಗಿಯಿತು, 2019ರಲ್ಲಿ ಜನ ಬಿಜೆಪಿಯನ್ನು ಕಿತ್ತೆಯಸಲಿದ್ದಾರೆ” ಅಂತಾ ಒಂದೇ ಸಮವೆ ಕಿರುಚಾಡುತ್ತಿದ್ದಾರೆ.

ಈ ವಿಚಾರವನ್ನು ಎರಡು ರೀತಿಯಲ್ಲಿ ನಿಭಾಯಿಸಬಹುದು. ಒಂದನೇ ದಾರಿ: “ಜನಕ್ಕೆ ಇದೆಲ್ಲಾ ಅರ್ಥವಾಗೇ ಆಗುತ್ತೆ. ಈ ಕಿರುಚಾಟಗಳೆಲ್ಲಾ ಅರ್ಥಹೀನ ಅಂತಾ ಇವತ್ತಲ್ಲಾ ನಾಳೆ ತಿಳಿದುಕೊಂಡು ಇವನ್ನೆಲ್ಲಾ ನಿವಾಳಿಸಿ ಬದಿಗಿಡ್ತಾರೆ” ಅಂತಾ ಸುಮ್ಮನಾಗುವುದು. ಆದರೆ ಇದನ್ನು ಹಿಂಗೇ ಬಿಟ್ಟರೆ, ಏನೂ ಗೊತ್ತಿಲ್ಲದವರೂ ಇದನ್ನೇ ನಿಜವೆಂದು ನಂಬಿ ಕೂತರೇನು ಕಥೆ? ಇಂಗ್ಲೀಷ್ ಪತ್ರಿಕೆಗಳೇನೋ ಗಾಂಧಿ ಪರಿವಾರದ ಸಂಬಳದಲ್ಲಿವೆ. ತೀರಾ ಉದಯವಾಣಿಯವರೂ ಇದನ್ನೇ ಸತ್ಯವೆಂದು ಬಿಂಬಿಸಿ ಸುದ್ಧಿಪ್ರಕಟಿಸುತ್ತಿದ್ದಾರಲ್ಲಾ! ಅದೂ ದೇಶ ಚುನಾವಣೆಯ ಹೊಸ್ತಿಲಲ್ಲಿರುವಾಗ!! ಆ ಅರ್ಥವಾಗುವ “ಇವತ್ತಲ್ಲಾ ನಾಳೆ” ಅನ್ನೋ ಕಾಲ, ಚುನಾವಣೆ ಮುಗಿದಮೇಲೆ ಬಂದರೇನು ಸುಖ!? ನಾವೇ ದೇಶವನ್ನು ಅವಸಾನದೆಡೆಗೆ ತಳ್ಳಿದಂತಾಯ್ತಲ್ಲಾ! ಹೀಗಿದ್ದಾಗ ಎರಡನೇ ದಾರಿಯೇ ಬೇಕು. ಎರಡನೆಯ ದಾರಿ: “ಇದನ್ನು ಸಾಮಾನ್ಯರಿಗೂ ಅರ್ಥವಾಗುವ ಪದಗಳಲ್ಲಿ ಬಿಡಿಸಿ ಬರೆದು, ಸರಿದಾರಿಗೆಳೆಯುವುದು”. ಈ ಲೇಖನ ಆ ಎರಡನೆಯ ದಾರಿ.

  • ಹಾಗಾದರೆ ಹಣಕಾಸು ಸಚಿವಾಲಯದ ಸಾಲಪತ್ರದಲ್ಲಿ ಹೇಳಿರುವ ವಿಚಾರಗಳು ಸುಳ್ಳೇ?
  • ಈ ಪತ್ರಿಕೆಗಳು ಹೇಳುತ್ತಿರುವ ವಿಚಾರಗಳು ಸುಳ್ಳೇ?
  • ಮೋದಿಯನ್ನು ಸಮರ್ಥಿಸುವ ಭರದಲ್ಲಿ, ನಾನು ಈ ದೇಶದ ಮೇಲೆ ಸಾಲವೇ ಇಲ್ಲ ಅಂತಾ ಹೇಳುತ್ತಿದ್ದೇನೆಯೇ?

ಮತ್ತಷ್ಟು ಓದು »

18
ಜನ

ಹಸಿರ ಪಯಣ …

– ಸುಜಿತ್ ಕುಮಾರ್

maurice-de-vlaminck-la-moisson-1945ಶಾಂತ ಸಂಜೆಯ ತಿಳಿತಂಪಿನ ಹಿತಕ್ಕೆ ಭಂಗ ತರುವಂತೆ ಬಿಸಿಯಾದ ಗಾಳಿ ಒಮ್ಮೆಲೇ ಬೀಸತೊಡಗಿತ್ತು. ಗಾಳಿಯ ಬೀಸುವಿಕೆಯ ದಿಕ್ಕನ್ನು ಪರಿಗಣಿಸದೆಯೆ ಹಕ್ಕಿಗಳ ಗುಂಪು ತಮ್ಮ ತಮ್ಮ ಗೂಡುಗಳೆಡೆಗೆ ಮುಖಮಾಡಿ ಹಾರತೊಡಗಿದ್ದವು. ಕಪ್ಪು ಬಣ್ಣದ ಟ್ರ್ಯಾಕ್ ಪ್ಯಾಂಟ್, ಅದೇ ಬಣ್ಣದ ಟಿ ಶರ್ಟ್ ಹಾಗು ಅತಿ ದುಬಾರಿಯಾದೊಂದು ಸ್ಪೋರ್ಟ್ಸ್ ಶೋವನ್ನು ಧರಿಸಿ ಮೋಹನ ಜಾಗಿಂಗ್ ಗೆ ಇಳಿದಿದ್ದ. ವಾಹನಗಳಿಗೆ ಪಾರ್ಕ್ ಮಾಡಲೂ ಸರಿಯಾದ ಸ್ಥಳ ಸಿಗದಿರುವ ಸಿಟಿಯಲ್ಲಿ ಆಟೋಟ, ವ್ಯಾಯಾಮಗಳಿಗೆ ಜಾಗವನ್ನು ಕೊಡುವವರ್ಯಾರು? ವಾಹನಗಳೊಟ್ಟಿಗೆಯೇ ರಸ್ತೆಯ ಪಾದಚಾರಿ ಮಾರ್ಗದ ಮೇಲೆಯೇ ಈತನ ಪ್ರತಿದಿನದ ಓಟ. ಹೃದಯ ಸಿಡಿದು ಹೊರಬರುವವರೆಗೂ ಓಡುವುದ ನಿಲ್ಲಿಸಲಾರೆ ಎಂಬುವಂತಿರುತ್ತದೆ ಈತನ ಓಟದ ಧಾಟಿ. ಸುಮಾರು ಮೂರ್ನಾಲ್ಕು ಕಿಲೋಮೀಟರ್ನಷ್ಟು ಓಡಿದ ನಂತರ ಕಾಫಿ ಶಾಪೊಂದರ ಮುಂದೆ ಕೂತು ಕೊಂಚ ದಣಿವಾರಿಸಿಕೊಳ್ಳುತ್ತಾನೆ. ಅಲ್ಲೂ ತನ್ನ ಮೊಬೈಲನ್ನು ಹೊರಗೆಳೆದು ಆಫೀಸಿನ ಇಮೇಲ್ ಗಳನ್ನು ನೋಡತೊಡಗುತ್ತಾನೆ. ಆಗಷ್ಟೇ ಡವಡವ ಬಡಿದು ಶಾಂತವಾಗಿದ್ದ ಹೃದಯ, ಕ್ಲೈಂಟ್ ಒಬ್ಬನ ಇಮೇಲ್ ಅನ್ನು ಕಂಡು ಪುನಃ ಬಡಿಯಹತ್ತಿತು. ಇನ್ನೊಂದು ಸುತ್ತು ಓಡಲು ಬಾಕಿ ಇದ್ದರೂ ತನ್ನ ರೂಮಿನೆಡೆ ದಾಪುಗಾಲು ಹಾಕುತ್ತಾನೆ ಮೋಹನ. ರೂಮಿಗೆ ಬಂದವನೆ ಬೆವರಿನ ದಸೆಯಿಂದ ಅಂಟು-ಅಂಟಾಗಿದ್ದ ಬಟ್ಟೆಯನ್ನೂ ಲೆಕ್ಕಿಸದೆ ತನ್ನ ಆಫೀಸಿನ ಲ್ಯಾಪ್ಟಾಪ್ ಅನ್ನು ಹೊರಗೆಳೆದು ಕೆಲಸದಲ್ಲಿ ನಿರತನಾಗುತ್ತಾನೆ. ನೆಟ್ಟ ದೃಷ್ಟಿಯನ್ನು ಒಂತಿಷ್ಟೂ ಕದಲಿಸದೆ, ಕೀಲಿಮಣೆಗಳ ಮೇಲೆ ಸುಮಾರು ಎರಡು ಗಂಟೆಗಳ ಕಾಲ ಟಕಟಕ ಕುಟ್ಟಿದ ನಂತರ ಗಡಿಯಾರವನ್ನು ನೋಡುತ್ತಾನೆ, ಸಮಯ ಅದಾಗಲೇ ರಾತ್ರಿ ಹನ್ನೊಂದು! ಕೂಡಲೇ ಎದ್ದು ಪಕ್ಕದ ಹೋಟೆಲಿನಿಂದ ಊಟವೊಂದಕ್ಕೆ ಆರ್ಡರ್ ಕೊಟ್ಟು, ಸ್ನಾನಾದಿಗಳನ್ನು ಮುಗಿಸಿ ಹೊರಬಂದು ಊಟವನ್ನು ಮುಗಿಸುವಷ್ಟರಲ್ಲಿ ಮಧ್ಯರಾತ್ರಿ 12! ಒಂತಿಷ್ಟು ಸುದ್ದಿ ಸಮಾಚಾರಗಳನ್ನು ನೋಡಲು ಟಿವಿಯನ್ನು ಆನ್ ಮಾಡಿದ ಕೂಡಲೇ ಕಣ್ಣುಗಳ ರೆಪ್ಪೆಗಳು ಒಂದನ್ನೊಂದು ತಬ್ಬಿಕೊಳ್ಳತೊಡಗುತ್ತವೆ. ಅದೆಷ್ಟೋ ಬಾರಿ ಹೀಗೆಯೇ ಸೋಫಾದ ಮೇಲೆಯೇ ಬೆಳಗಿನವರೆಗೂ ಕೂತೇ ನಿದ್ರಿಸಿರುವುದುಂಟು! ಬೆಳಗೆದ್ದು ಮತ್ತದೇ ಓಟದ ಜೀವನ. ವಾರ, ವಾರಾಂತ್ಯ ಎಂಬ ಯಾವುದೇ ವ್ಯತ್ಯಾಸಗಳಿಲ್ಲದೆ 24*7 ಕಾಲದ ಕೆಲಸ. ಮೊದ ಮೊದಲು ಕಿರಿಕಿರಿಗುಡುತ್ತಿದ್ದ ಮೋಹನ ಕಾಲ ಕಳೆದಂತೆ ಇದೆ ಜೀವನಕ್ಕೆ ಒಗ್ಗಿಕೊಂಡಿದ್ದಾನೆ. ಅದೆಷ್ಟರ ಮಟ್ಟಿಗೆಂದರೆ ಆಗೊಮ್ಮೆ ಈಗೊಮ್ಮೆ ಸಿಗುವ ರಜೆಯ ಸಮಯವನ್ನೂ ಮನೆಯಲ್ಲಿ ಕಳೆಯಲಾಗದೆ ಆಫೀಸಿಗೆ ಬಂದು ಒಬ್ಬನೇ ಕೆಲಸ ಮಾಡುವುದುಂಟು! ಮತ್ತಷ್ಟು ಓದು »

16
ಜನ

ಭಗವದ್ಗೀತೆ ಬರ್ನ್, ವಿಚಾರಕ್ರಾಂತಿಯ ಯೂ ಟರ್ನ್?

– ತುರುವೇಕೆರೆ ಪ್ರಸಾದ್
ತುರುವೇಕೆರೆ-572227

kuvempuಇಂದು ನಾವು ಕುವೆಂಪುರವರ 114ನೇ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ. ಕುವೆಂಪುರವರು ಶ್ರೇಷ್ಠ ಕವಿ, ನಾಟಕಕಾರ, ಕಾದಂಬರಿಕಾರ ಎಲ್ಲವೂ ಆಗಿದ್ದರು. ಭಾವ, ಶ್ರದ್ಧೆ,ಆಧ್ಯಾತ್ಮ ಹಾಗೂ ನವರಸಗಳ ವಿಕಾರ, ವಿಕೃತಿ, ಅಬ್ಬರ, ಆಕ್ರೋಶವಿಲ್ಲದ ಸಮನ್ವಯದ ಅಭಿವ್ಯಕ್ತಿಯ ಸಂತರೆಂದೇ ಅವರನ್ನು ರಸಋಷಿ ಎಂದು ಕರೆಯುವುದು. ಇವೆಲ್ಲಕ್ಕಿಂತ ಹೆಚ್ಚಾಗಿ ಕುವೆಂಪು ತೀವ್ರ ವಿಚಾರವಾದಿಯಾಗಿದ್ದರು. ವಿಚಾರವಾದಿಯಾಗಿದ್ದುಕೊಂಡೇ ಅವರು ಆಧ್ಯಾತ್ಮ ಜೀವಿಯೂ, ಆಧ್ಮಾತ್ಮವಾದಿಯೂ ಆಗಿದ್ದರೆಂಬುದು ಅತ್ಯಂತ ಶ್ರೇಷ್ಠ ಹಾಗೂ ಹೆಗ್ಗಳಿಕೆಯ ಸಂಗತಿ. ವಿಚಾರವಾದಿಯಾಗಿ ಅವರು ಜಾತಿಧರ್ಮ, ವರ್ಣಾಶ್ರಮ ಪದ್ಧತಿಯನ್ನು ಉಗ್ರವಾಗಿ ಖಂಡಿಸುತ್ತಿದ್ದರು. ಅರ್ಥಹೀನ ಆಚರಣೆ, ಮೌಢ್ಯ, ಕಂದಾಚಾರಗಳನ್ನು ಧಿಕ್ಕರಿಸುತ್ತಿದ್ದರು. ಮತ್ತಷ್ಟು ಓದು »

14
ಜನ

ಶಬರಿಮಲೆ: ಇದು ಹಿಂದೂಗಳ‌ ಸೋಲೇ ?

– ವರುಣ್ ಕುಮಾರ್
ಪುತ್ತೂರು

sabarimala-temple-manoramaಕಳೆದ‌ ಕೆಲ‌ ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಎಂದರೆ‌ ಅದು ಶಬರಿಮಲೆಗೆ ಮಹಿಳಾ ಪ್ರವೇಶದ ಕುರಿತಾಗಿ ಬಂದಂತಹ ತೀರ್ಪು. ಈ ಕುರಿತಾಗಿ ಚರ್ಚೆಗಳು, ವಾದ- ವಿವಾದಗಳು,ಸಂಭಾಷಣೆಗಳು ಈಗ ಅತಿ ಸಾಮಾನ್ಯ. ಆದರೆ ಶಬರಿಮಲೆಯು ಇಂತಹ ಚರ್ಚೆಗಳಿಗೆ ಗುರಿಯಾಗುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಇದರ ಕುರಿತಾದ ಒಂದು ಸಣ್ಣ ಅವಲೋಕನೆಯು ಈ ಕೆಳಗಿನಂತಿದೆ. ಮತ್ತಷ್ಟು ಓದು »

13
ಜನ

ಒಂಟಿತನ – ಮುಕ್ತಿ

– ಗೀತಾ ಜಿ. ಹೆಗಡೆ.

boy-sitting-aloneಬದುಕನ್ನು ಒಂಟಿಯಾಗಿ ಎದುರಿಸುತ್ತಿದ್ದೇವಾ? ನಿಜಕ್ಕೂ ನಮಗೆ ಏನು ಬೇಕು ಜೀವಿಸಲು ? ಯಾರ ಅಗತ್ಯ ನಮಗೆ ಹೆಚ್ಚು ? ಒಂಟಿತನ ಕಾಡುವುದು ಯಾವಾಗ ? ಅಥವಾ ಒಂಟಿತನ ಕಾಡಿದಾಗಲೆಲ್ಲ ನಮ್ಮ ಜೊತೆಗಿರುವವರು ಯಾರು ಗಂಡನಾ, ಮಕ್ಕಳಾ, ಸ್ನೇಹಿತರಾ ಬಂಧುಗಳಾ ಅಥವಾ ನೆರೆಹೊರೆಯವರಾ ? ಇದರಿಂದ ಹೇಗೆ ಮುಕ್ತಿ ಹೊಂದಬೇಕು ? ಇವೆಲ್ಲ ಆಗಾಗ ಕಾಡುವ ಪ್ರಶ್ನೆ.

ಇವೆಲ್ಲವೂ ಸತ್ಯವಾಗಿ ಅರಿವಾಗಬೇಕೆಂದರೆ ಕೆಲವು ಸಂದರ್ಭದಲ್ಲಿ ಮಾತ್ರ ಸಾಧ್ಯ. ಅದು ಕಷ್ಟ ಕಾಲದಲ್ಲೂ ಅಲ್ಲ ಅಥವಾ ಕಾಯಿಲೆ ಬಿದ್ದು ನರಳುವಾಗಲೂ ಅಲ್ಲ. ಮತ್ತಷ್ಟು ಓದು »

8
ಜನ

ಹೊಲವನು ಉಳುತಾ ಅಳುವಾ ಯೋಗಿಯ ನೋಡಿಲ್ಲಿ!

– ತುರುವೇಕೆರೆ ಪ್ರಸಾದ್
ಪಂಚವಟಿ
ನಂ.6, 13ನೇ ವಾರ್ಡ್
ಗಾಂಧಿನಗರ
ತುರುವೇಕೆರೆ-572227

5bg1ಇಂದು ಮಾಜಿ ಪ್ರಧಾನಿ ಚೌದುರಿ ಚರಣ್‍ಸಿಂಗ್ ಹೆಸರಲ್ಲಿ ನಾವು ಮತ್ತೊಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಡಿ.23 ರಾಷ್ಟ್ರೀಯ ರೈತ ದಿನ ಎಂದು ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ನೆಹರು, ಇಂದಿರಾ, ರಾಜೀವ್ ಜಯಂತಿಯಂತೆ ರೈತ ದಿನಾಚರಣೆ ಬಗ್ಗೆ ಯಾವ ಪಠ್ಯಪುಸ್ತಕದಲ್ಲೂ ಉಲ್ಲೇಖವೂ ಇರಲಿಕ್ಕಿಲ್ಲ. ತಮ್ಮ ಹೆಸರಿನಲ್ಲಿ ಈ ರೀತಿ ಸರ್ಕಾರಗಳು, ಜನಪ್ರತಿನಿಧಿಗಳು ದೊಡ್ಡ ಮನುಷ್ಯರು ರೈತದಿನಾಚರಣೆ ಎಂಬ ನಾಮಕಾವಸ್ಥೆ ಆಚರಣೆ ನಡೆಸುತ್ತಾರೆಂಬುದು ಬಹುಶಃ ಲಕ್ಷಾಂತರ ರೈತರಿಗೇ ಗೊತ್ತಿರಲಿಕ್ಕಿಲ್ಲ. ಟಿಪ್ಪು ಜಯಂತಿಗೆ ಮಾಡಿಕೊಂಡಂತೆ ಸರ್ಕಾರವೇನೂ ವಾರಗಟ್ಟಲೆ ಮುಂಚೆ ರೈತ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡ ವರದಿ, ಸುದ್ದಿ ಯಾವ ಪತ್ರಿಕೆಯಲ್ಲೂ ಬರುವುದಿಲ್ಲ. ಇಂತಹ ಒಂದು ದಿನವನ್ನು ಅರ್ಥಪೂರ್ಣವಾಗಿ ಮಾಡಬೇಕು, ಸಂಭ್ರಮದಿಂದ ಆಚರಿಸಬೇಕು, ಅದೊಂದು ರೈತರ ಹಬ್ಬವಾಗಬೇಕು ಎಂದು ಯಾವ ಬುದ್ದಿಜೀವಿಗಳ ದಂಡೂ ಸರ್ಕಾರವನ್ನು ಒತ್ತಾಯಿಸುವುದಿಲ್ಲ. ಅದರ ರೂಪರೇಷೆಗೆ ಸಂವಾದ, ಗೋಷ್ಠಿ, ಚಿಂತನೆಗಳು ನಡೆಯುವುದೂ ಇಲ್ಲ. ಇದೆಲ್ಲಾ ನಮ್ಮ ಅನ್ನದಾತನನ್ನು ನಾವು ಯಾವ ದುಸ್ಥಿತಿಯಲ್ಲಿ ಇಟ್ಟಿದ್ದೇವೆ ಮತ್ತು ಅವನಿಗೆ ನಾವು ಯಾವ ಗೌರವ ಸಲ್ಲಿಸುತ್ತಿದ್ದೇವೆ ಎಂಬುದರ ದ್ಯೋತಕ. ಮತ್ತಷ್ಟು ಓದು »

3
ಜನ

ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಮುಖ್ಯಮಂತ್ರಿಗಳೇ?

 – ರಾಕೇಶ್ ಶೆಟ್ಟಿ

ಇಂಗ್ಲೀಷ್ ಸುದ್ದಿ ವಾಹಿನಿಗಳಲ್ಲಿ ತಮ್ಮ ಪ್ಯಾನೆಲ್ ಚರ್ಚೆಗಳ ಮೂಲಕ,ಹಾಗೂ ಪ್ಯಾನೆಲಿಸ್ಟ್-ರಾಜಕಾರಣಿಗಳಿಗೆ ನಿರ್ಭಿತಿಯಿಂದ ಪ್ರಶ್ನೆ ಕೇಳುವ ಮೂಲಕ ದೇಶದ ಗಮನ ಸೆಳೆದ ಪತ್ರಕರ್ತ ಅರ್ನಬ್ ಗೋಸಾಮಿಯವರಂತೆಯೇ ಕರ್ನಾಟಕ ರಾಜ್ಯದ ಪತ್ರಿಕಾ ರಂಗದಲ್ಲಿ ತಮ್ಮ ನೇರಾ ನೇರ ಪ್ರಶ್ನೆಗಳು ಹಾಗೂ ಸತ್ಯ-ನ್ಯಾಯದ ಪರ ದನಿಯಾದವರು ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನಮಕ್ಕನವರ್.ಇವರು ನಡೆಸಿಕೊಡುವ ಲೆಫ್ಟ್-ರೈಟ್-ಸೆಂಟರ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ದಾಖಲೆಗಳನ್ನು ಮುಂದಿಟ್ಟುಕೊಂಡು, ಸುತ್ತಿ ಬಳಸಿ ಹೊಗಳಿಕೆಯ ಮಾತನಾಡದೇ ಸತ್ಯವನ್ನು ಸ್ಪಷ್ಟವಾಗಿ ಹೇಳುವುದು ಅಜಿತ್ ಶೈಲಿ.ಐತಿಹಾಸಿಕ ಸತ್ಯವನ್ನು ನೇರವಾಗಿ ಹೇಳಿದ್ದರಿಂದಾಗಿ ಈಗ ಅಜಿತ್ ಹನಮಕ್ಕನವರ್ ಸಂಕಟದಲ್ಲಿದ್ದಾರೆ.

ಕಳೆದ ಗುರುವಾರ, ಪ್ರೊ.ಭಗವಾನರನ ಕುರಿತ ಚರ್ಚೆಯ ಸಮಯದಲ್ಲಿ,ಭಗವಾನರನ ಪರ ವಹಿಸಿದ್ದ ಮಹೇಶ್ ಚಂದ್ರಗುರು ಅವರ “ಯಾರೂ ಪ್ರಶ್ನಾತೀತರಲ್ಲ” ಎನ್ನುವ ಮಾತಿಗೆ ಪ್ರತಿಯಾಗಿ ಅಜಿತ್, ಹೌದು ಸರ್ ನಿಮ್ಮ ಮಾತು ಒಪ್ಪುತ್ತೇನೆ ಯಾರೂ ಕೂಡ ಪ್ರಶ್ನಾತೀತರಲ್ಲ. ಆದರೆ ಯಾರನ್ನು ಪ್ರಶ್ನಿಸಲು  ನೀವುಗಳು (ಬುದ್ಧಿಜೀವಿಗಳು) ಆರಿಸಿಕೊಳ್ಳುತ್ತೀರಿ ಎಂದರೆ,ಯಾರನ್ನು ಪ್ರಶ್ನಿಸಿದರೆ ಅತ್ಯಂತ ಕಡಿಮೆ ಅಪಾಯ ಆಗಬಹುದೋ ಅಂತವರನ್ನು ಮಾತ್ರ ಆರಿಸಿಕೊಳ್ಳುತ್ತೀರಿ. ರಾಮನನ್ನು ಪ್ರಶ್ನಿಸಬಹುದು.೫೩ ವಯಸ್ಸಿನಲ್ಲಿ ೬ ವರ್ಷದ ಹೆಣ್ಣುಮಗುವನ್ನು ಮದುವೆಯಾದವರನ್ನು ಪ್ರಶ್ನಿಸುವ ಧೈರ್ಯ ನಿಮಗೆ ಬರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನ್ನಾಡಿದ್ದರು.ಅಷ್ಟೇ ನೋಡಿ ಶುರುವಾಯಿತು!

ಮತ್ತಷ್ಟು ಓದು »

3
ಜನ

ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?

– ಗೋಪಾಲಕೃಷ್ಣ
ಚಿಕ್ಕಮಗಳೂರು

4CE0D6B8-390C-4E23-889C-7727E2BCC073ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್‍ಮೇಲ್’ ಮಾಡಬಹುದಿತ್ತು! ಅಂದು ಎನ್‍ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು »