ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಮುಖ್ಯಮಂತ್ರಿಗಳೇ?
– ರಾಕೇಶ್ ಶೆಟ್ಟಿ
ಇಂಗ್ಲೀಷ್ ಸುದ್ದಿ ವಾಹಿನಿಗಳಲ್ಲಿ ತಮ್ಮ ಪ್ಯಾನೆಲ್ ಚರ್ಚೆಗಳ ಮೂಲಕ,ಹಾಗೂ ಪ್ಯಾನೆಲಿಸ್ಟ್-ರಾಜಕಾರಣಿಗಳಿಗೆ ನಿರ್ಭಿತಿಯಿಂದ ಪ್ರಶ್ನೆ ಕೇಳುವ ಮೂಲಕ ದೇಶದ ಗಮನ ಸೆಳೆದ ಪತ್ರಕರ್ತ ಅರ್ನಬ್ ಗೋಸಾಮಿಯವರಂತೆಯೇ ಕರ್ನಾಟಕ ರಾಜ್ಯದ ಪತ್ರಿಕಾ ರಂಗದಲ್ಲಿ ತಮ್ಮ ನೇರಾ ನೇರ ಪ್ರಶ್ನೆಗಳು ಹಾಗೂ ಸತ್ಯ-ನ್ಯಾಯದ ಪರ ದನಿಯಾದವರು ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನಮಕ್ಕನವರ್.ಇವರು ನಡೆಸಿಕೊಡುವ ಲೆಫ್ಟ್-ರೈಟ್-ಸೆಂಟರ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ದಾಖಲೆಗಳನ್ನು ಮುಂದಿಟ್ಟುಕೊಂಡು, ಸುತ್ತಿ ಬಳಸಿ ಹೊಗಳಿಕೆಯ ಮಾತನಾಡದೇ ಸತ್ಯವನ್ನು ಸ್ಪಷ್ಟವಾಗಿ ಹೇಳುವುದು ಅಜಿತ್ ಶೈಲಿ.ಐತಿಹಾಸಿಕ ಸತ್ಯವನ್ನು ನೇರವಾಗಿ ಹೇಳಿದ್ದರಿಂದಾಗಿ ಈಗ ಅಜಿತ್ ಹನಮಕ್ಕನವರ್ ಸಂಕಟದಲ್ಲಿದ್ದಾರೆ.
ಕಳೆದ ಗುರುವಾರ, ಪ್ರೊ.ಭಗವಾನರನ ಕುರಿತ ಚರ್ಚೆಯ ಸಮಯದಲ್ಲಿ,ಭಗವಾನರನ ಪರ ವಹಿಸಿದ್ದ ಮಹೇಶ್ ಚಂದ್ರಗುರು ಅವರ “ಯಾರೂ ಪ್ರಶ್ನಾತೀತರಲ್ಲ” ಎನ್ನುವ ಮಾತಿಗೆ ಪ್ರತಿಯಾಗಿ ಅಜಿತ್, ಹೌದು ಸರ್ ನಿಮ್ಮ ಮಾತು ಒಪ್ಪುತ್ತೇನೆ ಯಾರೂ ಕೂಡ ಪ್ರಶ್ನಾತೀತರಲ್ಲ. ಆದರೆ ಯಾರನ್ನು ಪ್ರಶ್ನಿಸಲು ನೀವುಗಳು (ಬುದ್ಧಿಜೀವಿಗಳು) ಆರಿಸಿಕೊಳ್ಳುತ್ತೀರಿ ಎಂದರೆ,ಯಾರನ್ನು ಪ್ರಶ್ನಿಸಿದರೆ ಅತ್ಯಂತ ಕಡಿಮೆ ಅಪಾಯ ಆಗಬಹುದೋ ಅಂತವರನ್ನು ಮಾತ್ರ ಆರಿಸಿಕೊಳ್ಳುತ್ತೀರಿ. ರಾಮನನ್ನು ಪ್ರಶ್ನಿಸಬಹುದು.೫೩ ವಯಸ್ಸಿನಲ್ಲಿ ೬ ವರ್ಷದ ಹೆಣ್ಣುಮಗುವನ್ನು ಮದುವೆಯಾದವರನ್ನು ಪ್ರಶ್ನಿಸುವ ಧೈರ್ಯ ನಿಮಗೆ ಬರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನ್ನಾಡಿದ್ದರು.ಅಷ್ಟೇ ನೋಡಿ ಶುರುವಾಯಿತು!
ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?
– ಗೋಪಾಲಕೃಷ್ಣ
ಚಿಕ್ಕಮಗಳೂರು
ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್ಮೇಲ್’ ಮಾಡಬಹುದಿತ್ತು! ಅಂದು ಎನ್ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು