ಭಗವದ್ಗೀತೆ ಬರ್ನ್, ವಿಚಾರಕ್ರಾಂತಿಯ ಯೂ ಟರ್ನ್?
– ತುರುವೇಕೆರೆ ಪ್ರಸಾದ್
ತುರುವೇಕೆರೆ-572227
ಇಂದು ನಾವು ಕುವೆಂಪುರವರ 114ನೇ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ. ಕುವೆಂಪುರವರು ಶ್ರೇಷ್ಠ ಕವಿ, ನಾಟಕಕಾರ, ಕಾದಂಬರಿಕಾರ ಎಲ್ಲವೂ ಆಗಿದ್ದರು. ಭಾವ, ಶ್ರದ್ಧೆ,ಆಧ್ಯಾತ್ಮ ಹಾಗೂ ನವರಸಗಳ ವಿಕಾರ, ವಿಕೃತಿ, ಅಬ್ಬರ, ಆಕ್ರೋಶವಿಲ್ಲದ ಸಮನ್ವಯದ ಅಭಿವ್ಯಕ್ತಿಯ ಸಂತರೆಂದೇ ಅವರನ್ನು ರಸಋಷಿ ಎಂದು ಕರೆಯುವುದು. ಇವೆಲ್ಲಕ್ಕಿಂತ ಹೆಚ್ಚಾಗಿ ಕುವೆಂಪು ತೀವ್ರ ವಿಚಾರವಾದಿಯಾಗಿದ್ದರು. ವಿಚಾರವಾದಿಯಾಗಿದ್ದುಕೊಂಡೇ ಅವರು ಆಧ್ಯಾತ್ಮ ಜೀವಿಯೂ, ಆಧ್ಮಾತ್ಮವಾದಿಯೂ ಆಗಿದ್ದರೆಂಬುದು ಅತ್ಯಂತ ಶ್ರೇಷ್ಠ ಹಾಗೂ ಹೆಗ್ಗಳಿಕೆಯ ಸಂಗತಿ. ವಿಚಾರವಾದಿಯಾಗಿ ಅವರು ಜಾತಿಧರ್ಮ, ವರ್ಣಾಶ್ರಮ ಪದ್ಧತಿಯನ್ನು ಉಗ್ರವಾಗಿ ಖಂಡಿಸುತ್ತಿದ್ದರು. ಅರ್ಥಹೀನ ಆಚರಣೆ, ಮೌಢ್ಯ, ಕಂದಾಚಾರಗಳನ್ನು ಧಿಕ್ಕರಿಸುತ್ತಿದ್ದರು. ಮತ್ತಷ್ಟು ಓದು