ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪಕನ್ನಡಅಧ್ಯಯನಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಶ್ರೀಪಾದರಾಜರು (1404-1502) ಹರಿದಾಸ ಸಾಹಿತ್ಯದ ಪ್ರಮುಖ ಕೀರ್ತನಕಾರರಲ್ಲಿ ಒಬ್ಬರು. ಚನ್ನಪಟ್ಟಣ ಬಳಿಯ ಅಬ್ಬೂರಿನವರಾದ ಇವರನ್ನುಪುರಾಣೋಕ್ತ ಹರಿಭಕ್ತಧ್ರುವನ ಅವತಾರ ಎಂದು ಹೇಳಲಾಗುತ್ತದೆ. ವಿಜಯನಗರ ಅರಸರ ರಾಜಗುರುಗಳಾಗಿದ್ದ ಇವರು ಪುರಂದರ, ಕನಕರ ಗುರುಗಳಾಗಿದ್ದ ವ್ಯಾಸತೀರ್ಥರ ಗುರುಗಳೂ ಹೌದು. ಭ್ರಮರಗೀತ, ವೇಣುಗೀತ, ಗೋಪಿಗೀತ, ಮಧ್ವನಾಮ ಇವರ ಪ್ರಮುಖರಚನೆಗಳು. ರಂಗವಿಠಲ ಎಂಬ ಅಂಕಿತದಲ್ಲಿ ಇವರು ಕೀರ್ತನೆಗಳನ್ನೂ ರಚಿಸಿದ್ದಾರೆ. ‘ನೀ ಇಟ್ಟ ಹಂಗೆ ಇರುವೆನೋ ಹರಿಯೇ’;‘ಕಣ್ಗಳಿದ್ಯಾತಕೋ ಕಾವೇರಿರಂಗನ ನೋಡದಾ’;‘ಭೂಷಣಕೆ ಭೂಷಣ…’ ಮೊದಲಾದವು ಅವರ ಅತ್ಯಂತ ಜನಪ್ರಿಯ ಕೀರ್ತನೆಗಳಾಗಿ ಜನಮನದಲ್ಲಿ ನೆಲೆನಿಂತಿವೆ. ‘ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ’ ಎಂಬುದು ಅವರ ಅನೇಕಾನೇಕ ಕೀರ್ತನೆಗಳಲ್ಲೊಂದು. ಮತ್ತಷ್ಟು ಓದು