ಕುಮಾರರಾಮ
– ವರುಣ್ ಕುಮಾರ್
(ವಾರಕ್ಕೊಂದು ವೀರರು)
ಭಾರತದ ಹಿಂದೂ ಸಾಮ್ರಾಟ ಎಂದ ಕೂಡಲೇ ನಮ್ಮ ಸ್ಮೃತಿಪಟಲದಲ್ಲಿ ಶಿವಾಜಿ ಮಹಾರಾಜರ ಹೆಸರು ಬರುತ್ತದೆ. ಶಿವಾಜಿ ಮಹಾರಾಜರ ಆಡಳಿತ ವೈಖರಿ, ಮೊಘಲರ ದಾಳಿಯನ್ನು ಹಿಮ್ಮೆಟ್ಟಿಸಿದ ರೀತಿ, ಅವರ ರಾಜಕೀಯ ತಂತ್ರಗಾರಿಕೆಗಳು, ಎಂಥವರಿಗೂ ರೋಮಾಂಚನವನ್ನು ಉಂಟು ಮಾಡುತ್ತದೆ. ತನ್ನ ಅಲ್ಪಾವಧಿಯಲ್ಲಿ ಮೊಘಲರ ಸಾಮ್ರಾಜ್ಯವನ್ನು ಕೇವಲ ಉತ್ತರ ಭಾರತಕ್ಕೆ ಸೀಮಿತಗೊಳಿಸುವಲ್ಲಿ ಶಿವಾಜಿಯ ಪಾತ್ರ ಅಪಾರವಾದುದು. ಆದರೆ ಶಿವಾಜಿಯ ಪೂರ್ವ ಕಾಲದಲ್ಲಿ ದಕ್ಷಿಣ ಪ್ರಾಂತ್ಯಕ್ಕೆ ಮೊಘಲರ ದಾಳಿಯನ್ನು ಹಿಮ್ಮಟ್ಟಿಸುವಲ್ಲಿ ಯುವ ಅರಸ ಕುಮಾರರಾಮನ ಪಾತ್ರ ಮಹತ್ವದ್ದು. ಹಿಂದೂ ಸಾಮ್ರಾಜ್ಯಕ್ಕೆ ಭದ್ರವಾದ ಬುನಾದಿಯನ್ನು ಕೊಟ್ಟು ಮುಂದಿನ ೨೦೦ ವರ್ಷಗಳ ಕಾಲ ಅವರ ವಂಶಜರು ದಕ್ಷಿಣ ಪ್ರಾಂತ್ಯದಲ್ಲಿ ಹಿಂದೂ ಸಾಮ್ರಾಜ್ಯವನ್ನು ಪುನರುತ್ಥಾನಗೊಳಿಸಿದರು. ಮತ್ತಷ್ಟು ಓದು