ವಿಷಯದ ವಿವರಗಳಿಗೆ ದಾಟಿರಿ

Archive for

3
ಆಗಸ್ಟ್

ಅಳಿದ ಮೇಲೆ

ದೇವು ಹನೆಹಳ್ಳಿ,
ಬಂಡೀಮಠ, ಹನೆಹಳ್ಳಿ ಗ್ರಾಮ ಮತ್ತು ಅಂಚೆ,
ವಯಾ ಬಾರಕೂರು, ಉಡುಪಿ ಜಿಲ್ಲೆ – 576 210.

ಕೋವಿಡ್-19 ಸಂಕಷ್ಟದ ಹೊತ್ತಲ್ಲಿ ಬಹುಚರ್ಚಿತ ವಿಷಯಗಳಲ್ಲಿ ಒಂದು ಶವಸಂಸ್ಕಾರ. ಶವಕ್ಕೆ ಇರುವುದು ಒಂದೇ ಮುಖವಾದರೆ ಪಾರ್ಥಿವ ಶರೀರದ ನಿವೃತ್ತಿಗೆ ಮತ್ತು ಸಮಸ್ಯೆಗೆ ಹಲವು ಮುಖಗಳು. ಒಮ್ಮೆಲೇ ಹೆಚ್ಚಾದ ಶವಗಳ ಸಂಖ್ಯೆ ಒಂದು ಸಮಸ್ಯೆಯಾದರೆ ಕೋವಿಡ್-19 ರೋಗಿಗಳ ಶವವು `ಭಯಾನಕ ರೋಗಗಳ ಕೂಪ’ ಎಂದು ತಿಳಿದದ್ದು ಇನ್ನೊಂದು ಸಮಸ್ಯೆ. ಈ ವಿದ್ಯಮಾನ ನಾವು ತಿಳಿದ ಮತ್ತು ಇದುವರೆಗೆ ಪಾಲಿಸಿಕೊಂಡ ಬಂದ ಶವಗಳ ಅಂತಿಮ ವಿಲೇವಾರಿ ಮತ್ತು ಸಂಸ್ಕಾರಗಳ ರೀತಿ-ನೀತಿ-ನಿಯಮಗಳನ್ನು ಮಣ್ಣುಪಾಲು ಮಾಡಿತು. ಈ ಹೊತ್ತಿನಲ್ಲಿ ಜಗತ್ತಿನಾದ್ಯಂತ ಕೋವಿಡ್-19 ಶವ ವಿಲೇವಾರಿಯ ನೂತನ ವಿಲೇವಾರಿ ರೀತಿ, ಕ್ರಮ, ಸಿದ್ಧತೆ, ಕಾಮಗಾರಿಗಳ ಕುರಿತಂತೆ ಬರಹ, ಚಿತ್ರ, ಚರ್ಚೆ, ವೀಡಿಯೋಗಳು ನಡೆದವು, ಹರಿದಾಡಿದವು. ಸ್ಪೈನ್ ದೇಶದಲ್ಲಿ ಹೊಸ ವಿನ್ಯಾಸ, ಕಚ್ಚಾವಸ್ತುಗಳ ಶವಪೆಟ್ಟಿಗೆ ತಯಾರಿಯ ಅರ್ಧ ಗಂಟೆಯ ಟಿ.ವಿ ರೂಪಕ, ಬ್ರೆಜಿಲ್‍ನಲ್ಲಿ ಹತ್ತಾರು ಎಕರೆ ಕಾಡನ್ನು ಸವರಿ ಮಾಡಿದ ನೂರಾರು-ಸಾವಿರಾರು ಶವಗುಂಡಿಗಳ ಡ್ರೋನ್ ನೋಟದ ವೀಡಿಯೋಗಳಿಂದ ತೊಡಗಿ ಇಲ್ಲಿಯೇ ಸಮೀಪದ ಬಳ್ಳಾರಿಯಲ್ಲಿ ಶವವನ್ನು ಎಳೆದು ದೂಡಿ ಗುಂಡಿಗೆ ನೂಕಿ `ಎದ್ದೆವೋ ಬಿದ್ದೆವೋ ಕೆಟ್ಟೆವೋ’ ಎಂದು ಭಯದಿಂದ ಓಡಿದ (ಹೆಗಲ ಮೇಲೆ ಚಟ್ಟವಿರದ) ನಾಲ್ವರು ಚಟ್ಟೋಪಾಧ್ಯಾಯರ ವೀಡಿಯೋದ ತನಕ ನೂರಾರು ಸಾವಿರಾರು ಬಂದವು.

ಈ ಹೊತ್ತಲ್ಲಿ ಶವಸಂಸ್ಕಾರ ಹೇಗೆ ನಡೆದರೆ ಉತ್ತಮ ಎಂಬ ಚರ್ಚೆಗಳೂ ವ್ಯಾಪಕವಾಗಿ ನಡೆದವು. ಶವದ ಘನತೆಯಿಂದ ತೊಡಗಿ ಶವಹೊರುವವರ ಆರೋಗ್ಯದ ತನಕ ಎಲ್ಲ ವಿಷಯಗಳು ಕೂಲಂಕಷವಾಗಿ ಚರ್ಚಿತವಾದವು. (ದೇಹವನ್ನು ಕಡೆದು ವಿದೇಹ ಹುಟ್ಟಿಕೊಳ್ಳಲಿಲ್ಲ!) ಅಂತಹ ಹೊತ್ತಲ್ಲಿ ನನ್ನೋರ್ವ ಕಿರಿಯ ಮಿತ್ರ ಕಳುಹಿಸಿದ ಬರಹ ಹೀಗಿತ್ತು: ಮತ್ತಷ್ಟು ಓದು »

3
ಆಗಸ್ಟ್

ಆನ್‌ಲೈನ್ ಗೇಮುಗಳೆಂಬ ಜೂಜಾಟಕ್ಕೆ ನಿಷೇಧ ಯಾವಾಗ ?

– ಅಜಿತ್ ಶೆಟ್ಟಿ ಹೆರಂಜೆ
ಗೊಡಾ ಹೈ ಮೈದಾನ್ ಹೈ ಅನ್ನುವುದು ಹಿಂದಿಯ ಒಂದು ಅತ್ಯಂತ ಪ್ರಚಲಿತ ನಾಣ್ಣುಡಿ. ಭಾರತದ ಡಿಜಿಟಲ್ ಜಗತ್ತಿಗೆ ಇದು ಇವತ್ತು ಅಕ್ಷರಶಃ ಹೇಳಿ ಮಾಡಿಸಿದ ಹಾಗಿದೆ. ಭಾರತ ೨೦೧೪ರ ನಂತರ ಕ್ಷಿಪ್ರಗತಿಯ ಡಿಜಿಟಲ್ ಕ್ರಾಂತಿಯೊಂದನ್ನು ಕಂಡಿತು. ಕೇಂದ್ರ ಸರ್ಕಾರ ಎಲ್ಲಾ  ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಗೆ ಇಂಬು ಕೊಟ್ಟಿತು. ಅದೇ ಕಾರಣಕ್ಕೆ ಇವತ್ತು ವಿತ್ತೀಯ ಕ್ಷೇತ್ರದಲ್ಲಿ ಜನಸಾಮಾನ್ಯರ ಕೈಯಲ್ಲಿ ಸುಮಾರು ೫ ವರ್ಷಗಳ ಹಿಂದೆ ಯಾರೂ ಕೂಡ ಊಹಿಸಲೂ ಸಾಧ್ಯವಾಗದ ಅತ್ಯಂತ ಪ್ರಭಾವಿ ತಂತ್ರಜ್ಞಾನವೊಂದು ಸಿಕ್ಕಿದೆ. ಜನಸಾಮನ್ಯರು UPI ಮೂಲಕ ಮೆಸೇಜ್ ಕಳಿಸಿದಷ್ಟೆ ಸುಲಭವಾಗಿ ಮೊಬೈಲುಗಳಿಂದ ಹಣ ಕಳುಹಿಸಬಹುದು. ಇದು ಡಿಜಿಟಲ್ ಕ್ರಾಂತಿಯ ಒಂದು ಮುಖವಾದರೆ ಇದರ ಇನ್ನೊಂದು ಮುಖ ಕರಾಳವಾಗಿದೆ. ಅದಕ್ಕೆ ಕಡಿವಾಣ ಹಾಕುವವರು ಯಾರು? ಗೋಡಾ, ಮೈದಾನ್, ಮತ್ತದರ ನಾಗಾಲೋಟ!

ಮತ್ತಷ್ಟು ಓದು »

3
ಆಗಸ್ಟ್

ಸ್ವ ರಕ್ಷಣೆಯಿಂದ ರಾಷ್ಟ್ರರಕ್ಷಣೆ: ರಕ್ಷಾಬಂಧನ ಸಂದೇಶ

– ರಾಜೇಶ್ ನರಿಂಗಾನ
ಶ್ರಾವಣ ಹುಣ್ಣಿಮೆ ಮತ್ತೆ ಬಂದಿದೆ. ಶ್ರಾವಣ ಹುಣ್ಣಿಮೆಯಂದು ಆಚರಿಸುವ ರಕ್ಷಾಬಂಧನ ಹಬ್ಬಕ್ಕೆ ಅದರದೇ ಆದ ಪೌರಾಣಿಕ, ಐತಿಹಾಸಿಕ ಹಿನ್ನೆಲೆಯಿದೆ. ಓರ್ವ ಜವಾಬ್ದಾರಿಯುತ ಸಹೋದರ ತನ್ನ ಸಹೋದರಿಯನ್ನು ರಕ್ಷಣೆ ಮಾಡಬೇಕು ಎನ್ನುವ ಆಶಯದಿಂದ ಹಿಡಿದು ಸ್ವಯಂಸೇವಕರು ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ರಾಷ್ಟ್ರ ರಕ್ಷಣೆಗೈಯುವ ಸಂಕಲ್ಪದ ಉದಾತ್ತ ಧ್ಯೇಯ ಆಶಯದವರೆಗೆ ರಕ್ಷಾಬಂಧನವನ್ನು ವಿವಿಧ ರೀತಿಯಲ್ಲಿ ವಿಶ್ವದಾದ್ಯಂತ ಆಚರಿಸುತ್ತೇವೆ. ಇಂತಿಪ್ಪ ರಕ್ಷಾಬಂಧನ ಮತ್ತೆ ಬಂದಿದೆ. ಕಟ್ಟಲು ಬಗೆಬಗೆಯ ರಕ್ಷೆಗಳು ಮಾರುಕಟ್ಟೆಗೆ ಮಿತವಾಗಿ ಬಂದಿದೆ.
ಸಹೋದರ ಸಹೋದರಿಯರ ನಡುವೆ ನಂಬಿಕೆ, ಭರವಸೆಯನ್ನು ಉದ್ದೀಪನಗೊಳಿಸುವ, ಸಹೋದರನಿಗೆ ಸಹೋದರಿಯ ಮೇಲೆ ಇರುವ ಕಾಳಜಿ, ಸಹೋದರಿಗೆ ಸಹೋದರನ ಮೇಲೆ ಇರುವ ಅಕ್ಕರೆ, ನವಿರಾದ ಬಾಂಧವ್ಯವನ್ನು ಉಜ್ವಲಗೊಳಿಸುವ ಹಬ್ಬವೇ ರಕ್ಷಾಬಂಧನ. ಸಹೋದರನ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ, ನಿನ್ನ ಸುಖ-ದುಃಖಗಳಲ್ಲಿ ಸಮಾನ ಭಾಗಿಯಾಗುತ್ತೇನೆ; ನನ್ನ ಯೋಗಕ್ಷೇಮ, ರಕ್ಷಣೆಯ ಭಾರ ನಿನ್ನ ಹೆಗಲಿಗೆ ಎಂದು ದೇವರ ಮುಂದೆ ಪ್ರಾರ್ಥಿಸಿ ರಕ್ಷೆಯನ್ನು ಕಟ್ಟುವುದು ತಲೆತಲಾಂತರದಿಂದ ಬಂದಿರುವ ಪದ್ಧತಿ, ಸಂಪ್ರದಾಯ.

ಮತ್ತಷ್ಟು ಓದು »