ಬಿಚ್ಚಿಟ್ಟ ದಲಿತ ಚರಿತ್ರೆ
– ಶಿವರಾಮ್ ಕಾನ್ಸೇನ್
ಐತಿಹಾಸಿಕ ವ್ಯಕ್ತಿಗಳಾದ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಪುಲೆ ಮುಂತಾದವರ ಸಾಲಿನಲ್ಲಿ ಸದಾ ನೆನಪಿಸಿಕೊಳ್ಳಬೇಕಾದ ಮತ್ತೊಬ್ಬ ಸುಧಾರಣಾವಾದಿಯ ಹೆಸರು “ಮಹಾಪ್ರಾಣ್ ಜೋಗೇಂದ್ರನಾಥ್ ಮಂಡಲ್”. ಸಾಮಾಜಿಕ-ಆರ್ಥಿಕ-ರಾಜಕೀಯ ಸ್ಥಿತ್ಯಂತರದಲ್ಲಿ ಮಹಾನ್ ವ್ಯಕ್ತಿಗಳ ಹೆಸರುಗಳು ಅನುಕೂಲಸಿಂಧು ಅನುಯಾಯಿ-ಅಭಿಮಾನಿಗಳಿಂದಾಗಿ ಹಾಗೂ ಮತರಾಜಕಾರಣದಿಂದಾಗಿ ಸದ್ಬಳಕೆಯಾದ್ದಕ್ಕಿಂತಲೂ ದುರ್ಬಳಕೆಯಾದದ್ದೇ ಹೆಚ್ಚು.!
ಬಹುಶಃ ಜೋಗೇಂದ್ರನಾಥ್ ಮಂಡಲ್ ಹೆಸರನ್ನು ಉಲ್ಲೇಖಿಸಿದರೆ ಅಥವಾ ಸ್ಮರಿಸಿದರೆ ಯಾವುದೇ ಸವಲತ್ತು-ಪದವಿ-ಪುರಸ್ಕಾರ-ಪ್ರಶಸ್ತಿಯೂ ಸಿಗದೆಂಬ ಖಾತರಿಯಿಂದಾಗಿ ಇವರನ್ನು ಇತಿಹಾಸಕಾರರು ಮರೆಮಾಚಿರಬಹುದು ! ಯಾರು ಮರೆತರೇನು? ನಿಲುಮೆಯ ರಾಕೇಶ್ ಶೆಟ್ಟಿಯವರು ಇತಿಹಾಸದ ಗರ್ಭದಿಂದ ಜೋಗೇಂದ್ರನಾಥ್ ಎಂಬ ಮಹಾಶಕ್ತಿಮಂಡಲವನ್ನು ಹೊರತೆಗೆದು ಪ್ರಾಣ ತುಂಬಿದ್ದಾರೆ. “ಮುಚ್ಚಿಟ್ಟ ದಲಿತ ಚರಿತ್ರೆಯನ್ನು ಬಿಚ್ಚಿಟ್ಟ” ಗೆಳೆಯ ರಾಕೇಶ್ ಶೆಟ್ಟಿಯವರಿಗೆ ಹಾಗೂ ನಿಲುಮೆ ಬಳಗಕ್ಕೆ ಅಭಿನಂದನೆಗಳು. ಮತ್ತಷ್ಟು ಓದು