ವಿಷಯದ ವಿವರಗಳಿಗೆ ದಾಟಿರಿ

Archive for

22
ಆಗಸ್ಟ್

ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕರ್’ರಿಗೊಂದು ನ್ಯಾಯವೇ?

  • ರಾಕೇಶ್ ಶೆಟ್ಟಿ

ಸಾವರ್ಕರ್ ಅವರ ಹೆಸರು ಕೇಳಿದರೆ ದ್ವೇಷಕಾರುವ ಸಿದ್ದರಾಮಯ್ಯನವರು, ಸುಳ್ಳುಗಳೇ ತುಂಬಿರುವ ಲೇಖನವೊಂದನ್ನು ಬರೆದು ಮುಖ್ಯಮಂತ್ರಿಗಳನ್ನು ಚರ್ಚೆಗೆ ಕರೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಹೀಗೆ ಆಧಾರ ರಹಿತ ಸುಳ್ಳುಗಳ ಸರಮಾಲೆಯನ್ನು ಹೇಗೆ ಬರೆಯಲು ಸಾಧ್ಯ? ಅವರ ಲೇಖನದ ಕೆಲವು ಪ್ರಶ್ನೆಗಳು, ಸುಳ್ಳುಗಳ ಬಗ್ಗೆ ಮಾತನಾಡುತ್ತಲೇ, ಸಾವರ್ಕರ್, ಗಾಂಧಿ, ನೆಹರೂ ಅವರ ಜೈಲುವಾಸಗಳ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಳ್ಳಬೇಕು.

10 ಡಿಸೆಂಬರ್ 1934 – ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಜವಹರಲಾಲ್ ನೆಹರೂ ಅವರ ಜೈಲುವಾಸದ ಬಗ್ಗೆಯೊಂದು ಚರ್ಚೆಯಾಗುತ್ತದೆ. ಸದಸ್ಯರಾದ ಹಾರಾಲ್ದ್ ಹೇಲ್ಸ್ ಅವರು, ನೆಹರೂ ಅವರ ಪತ್ನಿ ಕಮಲಾ ನೆಹರೂ ಅವರ ಅನಾರೋಗ್ಯದ ಸ್ಥಿತಿಯನ್ನು ಗಮನಿಸಿ, ಜವಹರಲಾಲ್ ನೆಹರೂ ಅವರನ್ನು ಶೀಘ್ರ ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಆಗ್ರಹಿಸುತ್ತಾರೆ.

ಅದಕ್ಕೆ ಉತ್ತರವಾಗಿ, ಅಂದಿನ ಬ್ರಿಟಿಷ್ ಭಾರತದ ಅಧೀನ ಕಾರ್ಯದರ್ಶಿಯಾಗಿದ್ದ ಬಟ್ಲರ್ ಉತ್ತರಿಸುತ್ತಾ : ಅವರ ಹೆಂಡತಿಯನ್ನು ನೋಡಿಕೊಳ್ಳಲಿ ಎನ್ನುವ ಕಾರಣಕ್ಕಾಗಿಯೇ, ಕಳೆದ ಬೇಸಿಗೆಯಲ್ಲಿಯೇ ಅವರನ್ನು ಕೆಲವು ದಿನಗಳ ಕಾಲ ಬಿಡುಗಡೆ ಮಾಡಿದ್ದೆವು. ಈಗ ಅವರನ್ನು ಆಸ್ಪತ್ರಗೆ ಹತ್ತಿರ ಇರುವ ಜೈಲಿಗೆ ವರ್ಗಾವಣೆ ಮಾಡಲಾಗಿದ್ದು, ವಾರದಲ್ಲಿ ಒಂದು ಅಥವಾ ಎರಡು ದಿನ ವೈದ್ಯರ ಸಲಹೆಯಂತೆ ಅವರು ಹೋಗಿ ನೋಡಿಕೊಂಡು ಬರಲು ಅನುಮತಿ ನೀಡಲಾಗಿದೆ.

ಸರ್ಕಾರದ ವಿರುದ್ಧದ ಪಿತೂರಿಯ ಆರೋಪದಲ್ಲಿ ನೆಹರೂ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾಗಿದ್ದರು. ಆ ಜೈಲು ಶಿಕ್ಷೆಯ ಅವಧಿಯ ಕುರಿತು ನಡೆದ ಚರ್ಚೆಯಿದು. ಕೇಸ್ ದಾಖಲಾಗಿ ಬಂಧನವಾದ ನಂತರ, ನೆಹರೂ ಅವರ ಭಾವನೆಗಳಿಗೆ ಘಾಸಿ(!)ಯಾಗುವುದಾದರೆ ಪ್ರಕರಣದ ವಿಚಾರಣೆಯನ್ನು ಖಾಸಗಿಯಾಗಿಯೇ ಮಾಡುವ ಆಫರ್ ಅನ್ನು ಬ್ರಿಟಿಷ್ ಅಧಿಕಾರಿ ನೀಡುತ್ತಾರೆ! ಕಡೆಗೆ, 6 ತಿಂಗಳ ಮೊದಲೇ ಬಿಡುಗಡೆ ಮಾಡುತ್ತದೆ ಬ್ರಿಟಿಷ್ ಸರ್ಕಾರ. ನೆಹರೂ ಅವರ ಮೇಲೆ ಇಂತಹ ಪ್ರೀತಿಯನ್ನು ಇದೇ ಮೊದಲ ಬಾರಿಯೇನೂ ಬ್ರಿಟಿಷ್ ಸರ್ಕಾರ ತೋರಿಸಿದ್ದಲ್ಲ.

ಅಕ್ಟೋಬರ್ 24 ,1930 ರಂದು ಕೂಡ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾದಗಲೂ, ಅವರನ್ನು ಕೇವಲ 97 ದಿನಗಳಲ್ಲೇ ಬಿಡುಗಡೆ ಮಾಡಿತ್ತು ಬ್ರಿಟಿಷ್ ಸರ್ಕಾರ. ಬ್ರಿಟಿಷರಿಗೆ ನೆಹರೂ ಅವರ ಮೇಲೆ ಅದಿನ್ನೆಂತಹ ಪ್ರೀತಿ! ಅಥವಾ ನೆಹರೂ ಅವರು ಜೈಲಿನ ಒಳಗಿದ್ದರೂ, ಹೊರಗಿದ್ದರೂ ಬ್ರಿಟಿಷ್ ಸಾಮ್ರಾಜ್ಯಕ್ಕೆ ಅಪಾಯಕಾರಿಯಲ್ಲ ಅಂತಲೇ? ನೆಹರೂ ಅವರ ರಾಜಕೀಯ ಜೀವನದಲ್ಲಿ, ಒಂದೇ ಕೇಸಿನಲ್ಲಿ ಗರಿಷ್ಟ ಜೈಲು ವಾಸ ಅಂತ ಅವರಿಗೆ ಆಗಿದ್ದು ಕ್ವಿಟ್ ಇಂಡಿಯಾ ಎಂಬ Failed ಚಳವಳಿಯಲ್ಲಿ. 2 ವರ್ಷ 8 ತಿಂಗಳ ಸೆರೆವಾಸವದು. ಹಾಗೆಂದು ನೆಹರೂ ಅವರ ಸೆರೆವಾಸಗಳೇನು ಸೆಲ್ಯುಲಾರ್ ಜೈಲಿನಂತೆ ಒಂಟಿಯಾಗಿ, ಕತ್ತಲೆ ಹಾಗೂ ಕೆಟ್ಟ ಸೆಲ್ಲಿನೊಳಗಿನ ವಾಸವೇನು ಆಗಿರಲಿಲ್ಲ. ಮೇಲಿನ ಉದಾಹರಣೆಯಂತೆ ಬ್ರಿಟಿಷರ ಉದಾರತೆ ಹೇಗಾದರೂ ನೆಹರೂ ಅವರಿಗೆ ಸಿಗುತ್ತಿತ್ತು. ಉದಾಹರಣೆಗೆ, ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಂತರ ನೆಹರೂ ಅವರನ್ನು ನೈನಿಯಲ್ಲಿ ಜೈಲಿಗೆ ಹಾಕಿದರು. ಜೈಲಿನಲ್ಲಾದರೂ ಬಡಪಾಯಿ ನೆಹರೂ ಅವರಿಗೆ ಹೆಚ್ಚೇನು ಸೌಲಭ್ಯ ಸಿಗಲಿಲ್ಲ. ಅಬ್ಬಬ್ಬಾ ಎಂದರೆ ಒಬ್ಬ ಖೈದಿಯನ್ನು ಅವರ ಅಡುಗೆಯವನನ್ನಾಗಿ ನೇಮಿಸಲಾಯಿತು, ಗಾಳಿ ಬೀಸಲು ಮತ್ತೊಬ್ಬ ಖೈದಿ ನಿಯುಕ್ತಿಯಾದ. ಜೈಲಿನ ಊಟ ತಿಂದು ನಾಲಗೆ ಜಡ್ಡುಗಟ್ಟದಿರಲೆಂದು ಮನೆಯ ಊಟ, ಹಣ್ಣು ಹಂಪಲು ತರಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.ನೆಹರೂ ಅವರ ದರ್ಶನಕ್ಕೆಂದು ಬರುತ್ತಿದ್ದ ಖೈದಿಗಳು ಬೇಕಾದ ಸಣ್ಣಪುಟ್ಟ ಸೇವೆಗಳನ್ನು ಮಾಡಿಕೊಡುತ್ತಿದ್ದರು. ತೀರಾ ನೆಹರೂ ಅವರ ಭಾಷೆಯಲ್ಲಿಯೇ ಹೇಳುವುದಾದರೆ, ಶೇ.95 ರಾಜಕೀಯ ಖೈದಿಗಳಿಗೆ ಇಂತಹ ಸೌಲಭ್ಯಗಳು ಸಿಗುತ್ತಿರಲಿಲ್ಲ. ನೆಹರೂ-ಗಾಂಧಿಯಂತವರು 5% ನೊಳಗಿದ್ದವರು. ಬ್ರಿಟಿಷರ ಪಾಲಿಗೆ ನಿರುಪದ್ರವಿಗಳಾಗಿರಬಹುದೇ?

ಮತ್ತಷ್ಟು ಓದು »