ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು
– ರಾಕೇಶ್ ಶೆಟ್ಟಿ
ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಭಾರತಕ್ಕೆ ಬಂದ ಸುಭಾಷ್ ರವರು ಮೊದಲಿಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ತಮ್ಮ ಸಾಮರ್ಥ್ಯದಿಂದಲೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಏರಿದ್ದರು. ಆಗಲಾದರೂ ಅವರು ಸುಮ್ಮನೇ ಇದ್ದಿದ್ದರೂ ಸ್ವತಂತ್ರ ಭಾರತದಲ್ಲಿ ಯಾವುದಾದರೊಂದು ಸಚಿವ ಸ್ಥಾನ ಪಡೆದು ಇರುತ್ತಿದ್ದರೋ ಏನೋ. ಆದರೆ ಹುಟ್ಟಾ ಸ್ವಾಭಿಮಾನಿ ಮತ್ತು ಹೋರಾಟಗಾರರಾಗಿದ್ದ ನೇತಾಜಿಯವರು ಕಾಂಗ್ರೆಸ್ಸನ್ನೇ ಬದಲಿಸ ಹೊರಟರು. ಈಗ ಕಾಂಗ್ರೆಸ್ ಎಂಬ ಪುರಾತನ ಪಕ್ಷ ಹೇಗೆ ನೆಹರೂ ಮನೆತನದ ಅಡಿಯಾಳಾಗಿದೆಯೋ, ಆಗ ಗಾಂಧೀಜಿಯವರ ಕೈಯಲ್ಲೇ ಇತ್ತು. ಅದನ್ನು ಧಿಕ್ಕರಿಸಿ ನಿಂತ ಸುಭಾಷರನ್ನು ಗಾಂಧೀ ಬೆಂಬಲಿಗರು ಬಿಟ್ಟಾರೇನು? ಬೆಂಬಲಿಗರು ಬಿಟ್ಟರೂ, ಗಾಂಧೀಜಿ ಪಕ್ಷದ ಮೇಲಿನ ತನ್ನ ಪಾರುಪತ್ತೇದಾರಿಕೆಯನ್ನು ಬಿಡಲು ಸಿದ್ಧರಿದ್ದರಿರಲಿಲ್ಲ. ಹಾಗೆಯೇ, ಭಾರತದ ಸ್ವಾತಂತ್ರ್ಯವೊಂದೇ ಅಂತಿಮ ಗಮ್ಯವಾಗಿದ್ದ ಸುಭಾಷರಿಗೆ ಗಾಂಧೀಜಿಯವರ ಚಿಲ್ಲರೆ ರಾಜಕೀಯದ ಜಂಜಾಟಗಳು ಬೇಕಿರಲಿಲ್ಲ. ಕಾಂಗ್ರೆಸ್ಸಿನಿಂದ ಹೊರ ಬಂದ ಅವರು ಫಾರ್ವರ್ಡ್ ಬ್ಲಾಕ್ ಸ್ಥಾಪಿಸಿದರು. ಬ್ರಿಟಿಷರಿಗೆ ಸುಭಾಷ್ Potential Threat ಎನ್ನುವುದು ಅರಿವಾಗಿತ್ತು. ಅವರನ್ನು ಗೃಹಬಂಧನದಲ್ಲಿರಿಸಿದ್ದರು, ಈ ಪುಣ್ಯಾತ್ಮ ಅಲ್ಲಿಂದ ತಪ್ಪಿಸಿಕೊಂಡರು. ನಂತರದ್ದು ಭಾರತ ಸ್ವಾತಂತ್ರ್ಯ ಇತಿಹಾಸದ ರೋಚಕ ಅಧ್ಯಾಯ, ಬರಿಗೈಯಲ್ಲಿ ದೇಶಬಿಟ್ಟ ಸುಭಾಷ್, ೪೫ ಸಾವಿರ ಜನರ ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ನಿದ್ದೆಗೆಡಿಸಿದ್ದರು. ಎರಡನೇ ವಿಶ್ವ ಯುದ್ಧದಲ್ಲಿ ಜಪಾನ್ ಜೊತೆ ಸೇರಿಕೊಂಡು ೪೪ರಲ್ಲೇ ಅಂಡಮಾನ್-ನಿಕೋಬಾರ್ ದ್ವೀಪಗಳನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು, ಅಂತಿಮವಾಗಿ ಜಪಾನ್ ಹಾಗೂ ಆಜಾದ್ ಹಿಂದ್ ಫೌಜಿಗೆ ಈಶಾನ್ಯ ಭಾರತದಲ್ಲಿ ಹಿನ್ನಡೆಯಾಯಿತಾದರೂ, ಸುಭಾಷರು ಹೊತ್ತಿಸಿದ್ದ ಕ್ರಾಂತಿಯ ಕಿಡಿ ಸರ್ವವ್ಯಾಪಿಯಾಗಿತ್ತು. ಆಜಾದ್ ಹಿಂದ್ ಫೌಜಿನ ರುದ್ರನರ್ತನ ಬ್ರಿಟಿಷ್ ಭಾರತೀಯ ಆರ್ಮಿಯನ್ನು ಆವರಿಸಿಕೊಂಡಿತ್ತು. ಅದೇ ಸಮಯಕ್ಕೆ ಸರಿಯಾಗಿ ಅತ್ತ ಜಪಾನ್ ಶರಣಾಗಾತಿಯಾಗುವುದರಲ್ಲಿತ್ತು, ಇತ್ತ ಬ್ರಿಟಿಷರಿಗೆ ಭಾರತದಲ್ಲಿ ಉಳಿಗಾಲವಿರಲಿಲ್ಲವಾಗಿತ್ತು, ಆಗಲೇ ಶುರುವಾಗಿದ್ದು ಸುಭಾಷರ ನಿಗೂಢ ವಿಮಾನಾಪಘಾತದ ಕತೆ. ಅಪಘಾತದಲ್ಲಿ ಸುಭಾಷರು ಅಸುನೀಗಿದರು ಎನ್ನುವುದನ್ನು ಯಾರೆಂದರೇ ಯಾರೂ ನಂಬುವ ಸ್ಥಿತಿಯಲ್ಲಿರಲಿಲ್ಲ. ಅಮೇರಿಕನ್/ಬ್ರಿಟಿಷ್ ಗುಪ್ತಚರರು ವರ್ಷಗಟ್ಟಲೆ ಸುಭಾಷರ ಇರುವಿಕೆಯ ಪತ್ತೆ ಹಚ್ಚಲೆಂದೇ ಹಿಂದೆ ಬಿದ್ದಿದ್ದರು. ಇತ್ತ ಭಾರತದಲ್ಲಿ ಬ್ರಿಟಿಷರ ಹೈಫೈ ಆತಿಥ್ಯದ ಜೈಲಿನಲ್ಲಿದ್ದುಕೊಂಡೇ ಆಜಾದ್ ಹಿಂದ್ ಫೌಜಿನವರು ಭಾರತಕ್ಕೆ ಬಂದರೆ ಕತ್ತಿ ಹಿಡಿದು ಹೋರಾಡುತ್ತೇನೆಂದಿದ್ದ ಕಠಾರಿ ವೀರ ನೆಹರೂ ಸಾಹೇಬರಿಗೆ, ಸುಭಾಷ್ ವಾಪಸ್ ಬಂದರೆ ತನ್ನ ಖುರ್ಚಿಯ ಗತಿಯೇನು ಎಂದು ಚಿಂತೆ ಹತ್ತಿತ್ತು. ಅದೇ ಕಾರಣಕ್ಕೆ, ಬ್ರಿಟನ್ ಪ್ರಧಾನಿ ಆಟ್ಲಿಯವರಿಗೆ ಬರೆದ ಪತ್ರದಲ್ಲಿ, ನಿಮ್ಮ ಯುದ್ಧ ಖೈದಿ ಸುಭಾಷ್ ಗೆ ರಷ್ಯಾ ಆಶ್ರಯ ಕೊಟ್ಟಿದೆ ಎಂದು ಚಿಲ್ಲರೆ ದೂರು ನೀಡಿದ್ದರು. ಅಂದು ತೈಪೆಯಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲವೆನ್ನುವುದು ಈಗ ಅಧಿಕೃತವಾಗಿದೆ. ವಿಮಾನವೇ ಹಾರದೇ, ಅಪಘಾತವಾಗಿದ್ದು ಎಲ್ಲಿಂದ? ಅಪಘಾತವೇ ನಡೆಯದಿದ್ದ ಮೇಲೆ ಸುಭಾಷರು ಹೋದರೆಲ್ಲಿ? ಹಾಗೆ ನಾಪತ್ತೆಯಾದವರನ್ನು ಹುಡುಕಿ ಕೊಲ್ಲಲಾಯಿತೇ? ಈ ನಿಗೂಢತೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸ್ವತಂತ್ರ ಭಾರತದ ಮೊದಲ ನಿಗೂಢ ರಾಜಕೀಯ ಕಣ್ಮರೆ/ಹತ್ಯೆಯ ಸಾಲಿಗೆ ಸೇರುವುದು ಸುಭಾಷರ ಹೆಸರು. ಸುಭಾಷರು ಮಾಡಿದ ತಪ್ಪೆಂದರೆ ಸ್ವತಂತ್ರ-ಸ್ವಾಭಿಮಾನಿ-ಸಶಕ್ತ ಭಾರತದ ಕನಸು ಕಂಡಿದ್ದು. ಸುಭಾಷರಿಂದ ಶುರುವಾದ ಈ ನಿಗೂಢ ರಾಜಕೀಯ ಹತ್ಯೆ/ಕಣ್ಮರೆಯ ಸರಣಿ ಸ್ವತಂತ್ರ ಭಾರತದಲ್ಲೂ ಮುಂದುವರೆಯುತ್ತಲೇ ಹೋಯಿತು. ಮತ್ತಷ್ಟು ಓದು 
ಉಗ್ರಾಧಿಪತಿ ಹಫೀಜನಿಗೇಕೆ ಮೋದಿಯ ಮೇಲೆ ದ್ವೇಷ!
– ಶಿವೂ ವೆಂಕಟೇಶ್ ಗೌಡ (ಎಸ್.ವಿ.ಜಿ)
ರಕ್ತ ಪಿಪಾಸು ಹಫೀಜ್ ಮುಹಮ್ಮದ್ ಸಯೀದ್ ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಇವನ ಹೆಸರನ್ನೊಮ್ಮೆ ಕೇಳಿದರೆ ದೇಶೀಯರ ಎದೆಯಲ್ಲಿ ನೋವಿನ ಜೊತೆ ಬೆಂಕಿಯ ಜ್ವಾಲೆ ಪುಟಿದೇಳುತ್ತದೆ, ೨೦೦೧ ರ ಭಾರತದ ಸಂಸತ್ ದಾಳಿಯ ರೂವಾರಿ, ೨೦೦೬ ರ ಮುಂಬೈ ರೈಲು ಸ್ಪೋಟದ ರೂವಾರಿ ಹಾಗೆಯೆ ೨೦೦೮ ರ ಮುಂಬೈ ಭಯೋತ್ಪಾದನಾ ದಾಳಿಗಳಲ್ಲಿ ಇವನ ಕರಿ ನೆರಳು ಬೀರಿದ್ದು ಎಲ್ಲರಿಗು ಗೊತ್ತಿರುವಂತದ್ದೇ. ಮತ್ತಷ್ಟು ಓದು 
ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ (ಭಾಗ – ೨)
– ಪ್ರೇಮಶೇಖರ
ಸುಂದರ ಕನಸೊಂದು ಹಳವಂಡವಾದ ದುರಂತಕ್ಕೆ ಮರುಗುತ್ತಾ…
ಥಾಮಸ್ ಹಾಬ್ಸ್, ಜಾನ್ ಲಾಕ್, ಜೀನ್ ಯಾಕ್ಸ್ ರೂಸೂ ಮುಂತಾದ ಸಾಮಾಜಿಕ ಒಪ್ಪಂದ ಸಿದ್ಧಾಂತದ ಪ್ರತಿಪಾದಕರ ಪ್ರಕಾರ ‘ಬಲವೇ ಹಕ್ಕು’ ಎಂಬ ಮಾನವತಾವಿರೋಧಿ ಅರಣ್ಯ ಕಾನೂನಿನಿಂದ ಅಶಕ್ತರನ್ನು ರಕ್ಷಿಸಿ, ಸಮಾಜದ ಎಲ್ಲರ ನಡುವೆ ಸಮಾನ ನ್ಯಾಯಹಂಚಿಕೆಗಾಗಿ ರಾಜ್ಯ ಸ್ಥಾಪನೆಗೊಂಡಿತಂತೆ. ಆದರೆ ಮಾನವಜನಾಂಗ ಮುಂದೆ ಹಿಡಿದ ದಾರಿಯಲ್ಲಿ ರಾಜ್ಯವೇ ಶೋಷಕನಾಗಿ ಬದಲಾದದ್ದನ್ನು ಇತಿಹಾಸ ಹೇಳುತ್ತದೆ. ಸಾಮಾಜಿಕ ಒಪ್ಪಂದಗಳ ಮೂಲಕ ಸಮಾನನ್ಯಾಯ ಹಂಚಿಕಾವ್ಯವಸ್ಥೆ ಸಾಧ್ಯವಾಗದೇ ಹೋದಾಗ, ಬಲವಂತದ ಮೂಲಕ, ರಕ್ತಪಾತದ ಮೂಲಕ ಅದು ಅಸ್ತಿತ್ವಕ್ಕೆ ಬರುತ್ತದೆಂದು ಭವಿಷ್ಯ ನುಡಿದ ಕಾರ್ಲ್ ಮಾರ್ಕ್ಸ್ ಒಬ್ಬ ವಾಸ್ತವವಾದಿ. ಅಂತಹ ವ್ಯವಸ್ಥೆಯನ್ನು ಚಿತ್ರಿಸಿದ ಕಮ್ಯೂನಿಸಂ ಒಂದು ಉದಾತ್ತ ಮಾನವಪರ ಚಿಂತನೆ. ಆದರೆ ವಾಸ್ತವವಾದಿ ರೂಪಿಸಿದ ಉದಾತ್ತ ಮಾನವಪರ ಸಿದ್ಧಾಂತ ತನ್ನ ಅವಾಸ್ತವವಾದಿ ಹಾಗೂ ಮಾನವವಿರೋಧಿ ಹಿಂಬಾಲಕರಿಂದಲೇ ಕಳಂಕ ಹಚ್ಚಿಸಿಕೊಂಡದ್ದೊಂದು ದುರಂತ. ಈ ಪ್ರಕ್ರಿಯೆ ಭಾರತದಲ್ಲಿ ಅನಾವರಣಗೊಂಡ ಬಗೆಯನ್ನು ಸಂಕ್ಷಿಪ್ತವಾಗಿ ಈಗಿಲ್ಲಿ ಹೇಳುತ್ತೇನೆ. ಮತ್ತಷ್ಟು ಓದು 
ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ ( ಭಾಗ-೧ )
– ಪ್ರೇಮಶೇಖರ
ನಮ್ಮ ವಿಚಾರವಂತರು, ಸಾಂಸ್ಕೃತಿಕ ನಾಯಕರು ಶಕ್ತಿಮೀರಿ ಪ್ರಶಂಸಿಸಿದ್ದು, ಪ್ರಚುರ ಪಡಿಸಲು ಹೆಣಗಿದ್ದು ಕಮ್ಯೂನಿಸಂ ಮತ್ತು ಸೆಕ್ಯೂಲರಿಸಂಗಳನ್ನು. ಆದರೆ ಅವರ ನಿರೀಕ್ಷೆಗೆ ವಿರುದ್ಧವಾಗಿ ಕಮ್ಯೂನಿಸಂ ನಮ್ಮ ಸಮಾಜೋ-ರಾಜಕೀಯವಲಯದಲ್ಲಿ ಮುಂಚೂಣಿಗೆ ಬರಲೇ ಇಲ್ಲ. ಜತೆಗೆ, ತಾವು ಬಯಸಿದಂಥ ಸೆಕ್ಯೂಲರಿಸಂ ಇಲ್ಲಿ ನೆಲೆಯೂರಿಲ್ಲವೆಂದು ಅಲವತ್ತುಕೊಳ್ಳುತ್ತಲೇ ಇದ್ದಾರೆ. ಕರ್ನಾಟಕದ ಸಂದರ್ಭದಲ್ಲಿ ಇಂಥಾ ಗೋಳಾಟವನ್ನು ರಂಜನೀಯವಾಗಿ ಪ್ರದರ್ಶಿಸಿದ್ದು ಪತ್ರಕರ್ತ ಲಂಕೇಶ್, ಅವರಿಗೆ ಆಗಾಗ ‘ಅವಶ್ಯಕತೆ’ ಗನುಗುಣವಾಗಿ ಸಾಥ್ ನೀಡಿದ್ದು ಜ್ಞಾನಪೀಠಿ ಯು. ಆರ್. ಅನಂತಮೂರ್ತಿ. ಇವರ ಇಷ್ಟೆಲ್ಲಾ ಪ್ರಯತ್ನಗಳು ‘ಯಶಸ್ವಿ’ಯಾಗದಿರಲು ಕಾರಣವೇನು? ಸಾಮಾನ್ಯ ಜನತೆ ಇವರ ವಿಚಾರಗಳಿಗೆ ಇವರು ಬಯಸಿದಷ್ಟು ಸಹಮತಿ ತೋರದಿರಲು ಇರುವ ಕಾರಣವಾದರೂ ಏನು? ಜನ ದಡ್ಡರೇ? ಅಥವಾ ಈ ಬುದ್ದಿಜೀವಿಗಳಿಗಿಂತಲೂ ಹೆಚ್ಚಿನ ಬುದ್ಧಿವಂತರೇ? ಅಥವಾ ಈ ಬುದ್ಧಿಜೀವಿಗಳ ಪ್ರಚಾರ/ಪ್ರಲಾಪದಲ್ಲೇ ದೋಷವಿದೆಯೇ? ಈ ಪ್ರಶ್ನೆಗಳನ್ನು ಎರಡು ಭಾಗಗಳ ಈ ಲೇಖನದಲ್ಲಿ ಚರ್ಚೆಗೆತ್ತಿಕೊಳ್ಳುತ್ತಿದ್ದೇನೆ. ಮತ್ತಷ್ಟು ಓದು 
ದೇಶಾಭಿಮಾನದ ಮುಂದೆ ದೇಹಾಭಿಮಾನವನ್ನು ಮರೆಯಾಗಿಸಿದ ನಾಯಕ..
– ಸುಜಿತ್ ಕುಮಾರ್
ಗುಡಾಣ ದೇಹದ ಮೇಲಿನ ಕರಿ ಕೋಟು, ತಲೆಯ ಮೇಲೊಂದು ಹಾಂಬರ್ಗ್ ಹ್ಯಾಟು, ಹುಟ್ಟುವಾಗಲೇ ಅಂಟಿಕೊಂಡು ಬಂದಿತ್ತೇನೋ ಎಂಬಂತೆ ಬಾಯನ್ನು ಬಿಟ್ಟಿರದ ಹೊಗೆಯಾರದ ಸಿಗಾರಿನೊಂದು ತುಂಡು, ಕೈಯಲ್ಲೊಂದು ಭಯ ಹುಟ್ಟಿಸುವ ವಾಕಿಂಗ್ ಸ್ಟಿಕ್ಕು. ಇವಿಷ್ಟೇ ಸಾಕು ಇಪ್ಪತ್ತನೇ ಶತಮಾನದ ಕಾಂಟ್ರವೇರ್ಷಿಯಲ್ ವ್ಯಕ್ತಿತ್ವವೊಂದನ್ನು ಬಣ್ಣಿಸಲು. ಭಾರತೀಯರ ಮಟ್ಟಿಗೆ ಗಾಂಧಿಯನ್ನು ಜರಿಯುತ್ತಿದ್ದ, ಭಾರತವನ್ನು ನಿಂತ ನೆರಳಿಗೆ ಆಗದ ಅಲ್ಲದೆ ನಲ್ವತ್ತು ಲಕ್ಷ ಭಾರತೀಯರ ಮರಣ ಮೃದಂಗಕ್ಕೆ ಪ್ರತ್ಯಕ್ಷವಲ್ಲವಾದರೂ ಪರೋಕ್ಷವಾಗಿ ಕಾರಣನಾದ ಈತ ದೇಶಪ್ರೇಮಿಗಳಿಗೆ ಅಕ್ಷರ ಸಹ ವಿಲನ್ನಂತಾದರೂ ಬ್ರಿಟನ್ನಿಗರ ಪಾಲಿಗೆ ಮಾತ್ರ ಸಾಕ್ಷಾತ್ ದೇವಧೂತ! ಪ್ರಪಂಚವನ್ನೇ ನುಂಗಿ ನೀರು ಕುಡಿಯುವಂತೆ ಧಾವಿಸುತಿದ್ದ ಹಿಟ್ಲರ್ ಎಂಬ ರಾಕ್ಷಸನಿಂದ ಬ್ರಿಟನ್ನನ್ನು ರಕ್ಷಿಸಿದನಲ್ಲದೆ ಎರಡನೇ ಮಹಾಯುದ್ದಕ್ಕೂ ಅಂತ್ಯವನ್ನು ಹಾಡಿಸಿದವನೀತ. ಎರಡು ಬಾರಿ ಬ್ರಿಟನಿನ್ನ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ ಈತ ಒಬ್ಬ ಬರಹಗಾರ, ಅಧಿಕೃತ ಪತ್ರಕರ್ತ, ಸೇನಾನಾಯಕ ಹಾಗು ಒಬ್ಬ ಖ್ಯಾತ ಚಿತ್ರಗಾರನೂ ಹೌದು. ಕೆಲವು ನೆಗೆಟಿವ್ ಅಂಶಗಳನ್ನು ಬದಿಗಿರಿಸಿ ಈತನನ್ನು ನೋಡಬಯಸಿದವರಿಗೆ ವಿಶ್ವವನ್ನೇ ಆಳಿದ ದೇಶವೊಂದು ಹಿಟ್ಲರ್ನ ನಾಝಿ ಜರ್ಮನಿಯ ಗುಲಾಮನಾಗಬೇಕಿದ್ದ ಸಂದಿಗ್ಧ ಘಳಿಗೆಯಲ್ಲಿಯೂ ತಲೆ ತಗ್ಗಿಸದೆ ಹೋರಾಡಿದ ಧೈರ್ಯಶಾಲಿ ನಾಯಕನೊಬ್ಬ ಅನಾವರಣಗೊಳ್ಳುತ್ತಾನೆ. ಅವನ ಹೆಸರು ವಿನ್ಸ್ಟನ್ ಲಿಯೊನಾರ್ಡ್ ಸ್ಪೆನ್ಸರ್ ಚರ್ಚಿಲ್. ಮತ್ತಷ್ಟು ಓದು 
ಎಲೆಕ್ಷನ್ ಪುರಾಣ
– ಎಸ್ ಜಿ ಅಕ್ಷಯ್ ಕುಮಾರ್
“ಅಜ್ಜಿ, ಅಂಗಡಿಗೆ ಯಾರೋ ಪೋಲಿಸರು ಬಂದ” ಹೇಳಿ ಕೂಗಿ ವಿನಾಯಕ ಹಗುರ ಅಂಗಡಿ ಮತ್ತು ಮನೆಯ ಮಧ್ಯವಿದ್ದ ಅರ್ಧ ಗೋಡೆಯ ಹತ್ರ ಬಂದು ಬದಿಗೆ ನಿಂತುಕೊಂಡ. ಆನೊಳ್ಳಿಯಂತಹ ಹಳ್ಳಿಗೆ ಪೋಲಿಸರು ಇಪ್ಪತ್ತು ಕಿಮೀ ದೂರದ ಹೊನ್ನಾವರದಿಂದ ಬರುವಂತಹದ್ದು ಎಂತಾ ಆಗಿದೆ ಹೇಳಿ ತಿಳಕಳುವ ಕುತೂಹಲ ಇದ್ದರೂ ಓದುತ್ತಿದ್ದ ಪುಸ್ತಕ ತುಂಬಾ ಇಂಟರೆಸ್ಟಿಂಗ್ ಆಗಿದ್ರಿಂದ ನಾನು ಅಂಗಳದಲ್ಲಿ ಕುಳಿತಲ್ಲೇ ಮಾತುಕತೆ ಕೇಳಿದರಾಯ್ತು ಅಂತ ಅಲ್ಲೇ ಕೂತಿದ್ದೆ. ಹಿಂದೆ ಅಡುಗೆ ಮನೆಯ ಹತ್ರ ಇದ್ದ ಅಜ್ಜಿ ಅಲ್ಲಿಂದಲೇ, ಮತ್ತಷ್ಟು ಓದು 
ಮಾನಹೀನ ಮಾತುಗಳಿಂದ ಬದುಕಬೇಕಿದೆಯೇ ನಮ್ಮ ಡೆಮಾಕ್ರಸಿ…?
– ಸುಜಿತ್ ಕುಮಾರ್
ಸಣ್ಣವರಿದ್ದಾಗ ಶಿಕ್ಷಕರು ನಮಗೆ ಕಲಿಸಿದ್ದ ಅಮೋಘ ಶಿಕ್ಷಣಗಳಲ್ಲಿ ಸರಿಯೆನಿಸದ್ದಿದ್ದನ್ನು ಪ್ರಶ್ನಿಸುವುದೂ ಒಂದು. ಅದು ‘ಏನಲೇ..!?’ ಎಂದು ಕೊಳಪ್ಪಟ್ಟಿಯನ್ನು ಹಿಡಿದು ಜಾಡಿಸಿ ಕೇಳುವುದಕ್ಕಿಂತ ಮಿಗಿಲಾಗಿ, ಹರಿತವಾದ ಮಾತಿನಿಂದ ಸತ್ಯವೆಂಬ ಹಿಡಿತದೊಂದಿಗೆ ಮುಂದಿರುವವನ ಕಪಟ ವಂಚಕ ಮನಸ್ಥಿತಿಯನ್ನು ಬೆದರುಗೊಳಿಸುವ ಬಗೆಯಾಗಿದ್ದಿತು. ಅರ್ಥಾತ್ ಅವು ವೈಚಾರಿಕ ಬಗೆಯ ನೇರ ಪ್ರಶ್ನೆಗಳಾಗಿದ್ದವು. ಆದರೆ ಅಂದಿನ ಆ ಪಾಠವನ್ನು ಮರೆತ ಬಹುಮಂದಿ ಜನರು ಇಂದು ಕೇಳುವ ಪ್ರಶ್ನೆಗಳು ಏಕವಚನ ಪದಗುಚ್ಛಗಳ ಚಪ್ಪಲಿ ಏಟಿನಂತೆ ಮುಂದಿರುವ ವ್ಯಕ್ತಿಯ ಮಾನಹರಣ ಮಾಡುವ ಅಸ್ತ್ರಗಳಾಗಿವೆ. ಪುಕ್ಕಟೆಯಾಗಿ ಸಿಗುವ ಹೊಲಸು ಪದಗಳ ವಿಶೇಷಣಗಳನ್ನು ಬಳಸಿ ಮುಂದಿರುವವರ ಸ್ಥಾನ ಜೊತೆಗೆ ಮಾನವನ್ನೂ ತಿವಿದು ಹಾಕುವ ಇಂದಿನ ದಿನಗಳಲ್ಲಿ ವಿಷಯಕ್ಕೆ ತಕ್ಕನಾದಂತಹ ನೇರವಾದ ಪ್ರಶ್ನೆಗಳನ್ನೂ ಕೇಳುವವರ ಸಂಖ್ಯೆ ಕ್ಷೀಣಿಸುತ್ತಿದೆ! ಒಂದೋ ಆತ/ಅವಳು ಸಮಾಜದ ಅತಿ ಪ್ರಭಾವಿ ಗುಂಪಿನ ಇಂಪಾರ್ಟೆಂಟ್ ವ್ಯಕ್ತಿಗಳೆನಿಸಿಕೊಂಡಿರಬೇಕು ಅಥವಾ ಯಾರಿಗೂ ಕ್ಯಾರೇ ಎನ್ನದ ಖಡಕ್ ಅಧಿಕಾರಿಗಳಾಗಿರಬೇಕು. ಅಂತವರಿಗಷ್ಟೇ ಇಂದು ಪ್ರಶ್ನೆಗಳನ್ನು ಕೇಳುವ ‘ಅಧಿಕಾರ’ ಹಾಗು ‘ಧೈರ್ಯ’ ಸೀಮಿತವಾಗುತ್ತಿದೆ ಎಂದರೆ ಸುಳ್ಳಾಗದು. ಸಾಮಾನ್ಯನೊಬ್ಬನಿಗೆ ಇಂದು ಪ್ರಶ್ನಿಸುವ ಧೈರ್ಯವನ್ನು ತುಂಬುವ ಸಮಾಜವೇ ಇಲ್ಲವಾದರೆ ವಿಧ್ಯಾವಂತರಾಗಿಯೂ ಕುರಿಗಳು ಸಾರ್ ಕುರಿಗಳು ಎಂಬಂತೆ ಪ್ರಶ್ನಿಸುವ ನರಗಳನ್ನೇ ಕಳೆದುಕೊಂಡು ಒಬ್ಬರ ಬಾಲವನ್ನು ಇನ್ನೊಬ್ಬರು ಮೂಸುತ್ತಾ ಸಾಗುವ ಪಯಣ ಇದಾದಿತು. ಪೀಠಿಕೆ ಇಷ್ಟಿರಲಿ. ಈಗ ವಿಷಯಕ್ಕೆ ಬರೋಣ. ಅದಕ್ಕೂ ಮೊದಲು ಒಂದೆರೆಡು ನೇರ ನುಡಿ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ಪಕ್ಷ, ಜಾತಿ, ಪಂಥ ಎಂಬ ಯಾವುದೇ ಬಗೆಯ ತುರಿಕೆಗಳಾಗಲಿ, ಖಾಯಿಲೆಯಗಳಾಗಲೀ ಅಂಟಿಕೊಂಡಿಲ್ಲ. ಭಾರತೀಯರಾಗಿ ಅದಕ್ಕಿಂತಲೂ ಹೆಚ್ಚಾಗಿ ಸ್ವಸ್ಥ ಮಾನವರಾಗಿ ಕೇಳಲೇ ಬೇಕಾದ ಪ್ರಶ್ನೆಗಳಿವು. ಮುಂದಿರುವ ಇನ್ನೊಬ್ಬರಿಗಲ್ಲದಿದ್ದರೂ ತಮಗೆ ತಾವೇ ಚುಚ್ಚಿಕೊಳ್ಳಬೇಕಾದದ ಸೂಜಿಗಳಿವು! ಮತ್ತಷ್ಟು ಓದು 
ರಾಝೀ..
– ಅನಘಾ ನಾಗಭೂಷಣ
ಭಾರತೀಯ ಗುಪ್ತಚರ ದಳದ ಆಫೀಸರುಗಳು, ಗೂಢಚಾರಿಗಳ(spy) ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆಯಾದರೂ ಇತ್ತೀಚೆಗೆ ಬಿಡುಗಡೆಯಾಗಿ ದೇಶಾದ್ಯಂತ ಜನಮೆಚ್ಚುಗೆ ಗಳಿಸಿದ್ದು ಸಲ್ಮಾನ್ ಖಾನನ ಟೈಗರ್ ಸಿನಿಮಾಗಳು, ಅಕ್ಷಯ್ ಕುಮಾರನ ಬೇಬಿ ಮತ್ತು ಆಲಿಯಾ ಭಟ್ ಳ ರಾಝೀ…
ಇವತ್ತು ರಾಝೀ ಸಿನಿಮಾ ನೋಡಿದೆ.. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹರಿಂದರ್ ಎಸ್. ಸಿಕ್ಕಾ ಅವರು 2008ರಲ್ಲಿ ಬರೆದಿದ್ದ ‘Calling Sehmat’ ಎಂಬ ಕಾದಂಬರಿಯನ್ನಾಧರಿಸಿರುವ ಈ ಚಿತ್ರ ವಾಸ್ತವಕ್ಕೆ ಹತ್ತಿರವಾಗಿ, ಮನಮುಟ್ಟುವಂತಿದೆ.. ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ ಸಿನಿಮಾಗಳ ಬಗ್ಗೆ ನನಗೆ ಅಂಥಾ ಒಳ್ಳೆ ಅಭಿಪ್ರಾಯವೇನೂ ಇಲ್ಲವಾದರೂ ಬೇಬಿ ಇಷ್ಟವಾಗಿತ್ತು.. ಆದರೆ ವಸ್ತುನಿಷ್ಠತೆಯ ದೃಷ್ಟಿಯಿಂದ ನೋಡುವಾಗ ರಾಝೀ ಗೆ ಮೊದಲ ಸ್ಥಾನ.. ಈ ಚಿತ್ರದ ಮುಖ್ಯಪಾತ್ರ ಸಹಮತ್ ಸಯ್ಯದ್ ಳಾಗಿ ನಟಿಸಿರುವ ಆಲಿಯಾ ಭಟ್ ನಿಜಕ್ಕೂ ಅಭಿನಂದನಾರ್ಹಳು! ಹೈವೇ, ಉಡ್ತಾ ಪಂಜಾಬ್ ನಂತರ ಪ್ರಬುದ್ಧವೂ, ಸವಾಲೂ ಎನಿಸುವಂಥ ಪಾತ್ರವನ್ನ ಇದರಲ್ಲಿ ಅತ್ಯಂತ ಸಮರ್ಥವಾಗಿ ನಿರ್ವಹಿಸಿದ್ದಾಳಾಕೆ.. ಟೈಗರ್, ಬೇಬಿಗಳಲ್ಲಿರುವಂತೆ ಅತಿಮಾನುಷವೆನಿಸುವ ಯಾವುದೇ ಸ್ಟಂಟ್ಸ್, ಫೈಟಿಂಗ್, ಅನಾವಶ್ಯಕ ಹಾಡುಗಳು, ಹೀರೋಯಿಸಂ ಇವೇನೂ ಇಲ್ಲದೇ ರಾಝೀ ಸಹಜವಾಗಿ ಮೂಡಿಬಂದಿದೆ.. ಮತ್ತಷ್ಟು ಓದು 
ಆ ಕ್ಷಣ..
– ಗೀತಾ ಜಿ.ಹೆಗಡೆ
ಜೀವನ ಅನ್ನೋದು ಎಷ್ಟು ವಿಚಿತ್ರ. ಕೆಲವೊಮ್ಮೆ ಎಷ್ಟೊಂದು ಅಸಹಾಯಕರಾಗಿಬಿಡುತ್ತೇವೆ. ಕಣ್ಣ ಮುಂದಿರುವ ಹತ್ತಾರು ಕೆಲಸಗಳು, ಹೇಗೆ ನಿಭಾಯಿಸಲಿ ಅನ್ನುವ ಚಿಂತೆ ಮನವನಾವರಿಸಿ ದಿಕ್ಕು ತೋಚದಂತಾಗಿ ತುಂಬಾ ತುಂಬಾ ಸಂಕಟವಾಗುತ್ತದೆ. ಕಣ್ಣು ಕಟ್ಟಿ ಕಾಡಿನಲ್ಲಿ ಬಿಟ್ಟ ಅನುಭವ. ಏನು ಮಾಡ್ಲಿ? ಯಾರ ಹತ್ತಿರ ಹೇಳಿಕೊಳ್ಳಲಿ? ಯಾರಿದ್ದಾರೆ ನನಗೆ ಸಹಾಯ ಮಾಡುವವರು? ಮನಸ್ಸು ಬರೀ ಹುಡುಕಾಟದಲ್ಲಿ ಯಾರಿಲ್ಲಪ್ಪ ನನಗೆ. ತೀರಾ ತೀರಾ ಸೋತ ಅನುಭವ. ಹತಾಶೆ, ನೋವು, ಸಂಕಟ. ಯಾರೊಂದಿಗೆ ಮಾತು ಬೇಡಾ, ಎಲ್ಲಿ ಹೋಗೋದು ಬೇಡಾ, ಯಾವುದರಲ್ಲೂ ಆಸಕ್ತಿನೇ ಇಲ್ಲ. ಹೇಳಿಕೊಳ್ಳಲು ನೂರಾರು ಜನ ಇರ್ತಾರೆ. ಒಬ್ಬೊಬ್ಬರನ್ನೇ ನೆನಪಿಸಿಕೊಳ್ಳುವ ಮನಸ್ಸು ತನ್ನಷ್ಟಕ್ಕೇ ತಟಸ್ತವಾಗುತ್ತ ಬೇಡಾ ಬೇಡಾ ಇವರತ್ತಿರ ಏನೂ ಹೇಳೋದು ಬೇಡಾ. ನನ್ನಿಂದ ಅವರಿಗೆಲ್ಲ ಯಾಕೆ ತೊಂದರೆ. ಒಂದೊಮ್ಮೆ ಏನಾರೂ ಹೇಳಿದರೆ ತೋರುಗಾಣಿಕೆಯ ಕಾಟಾಚಾರಕ್ಕೆ ಬರ್ತಾರೊ ಏನೊ? ಇಷ್ಟಕ್ಕಾಗಿ ಯಾಕೆ ಹೇಳಿಕೊಳ್ಳಬೇಕು. ನಾಳೆ ಇದೂ ಒಂದು ಹಂಗಾಗುತ್ತೋ ಏನೋ? ಆದದ್ದು ಆಗಲಿ. ಹುಟ್ಟಿಸಿದ ದೇವರು ಹುಲ್ಲು ಮೇಯಿಸುವುದಿಲ್ಲ. ನಂಬಿದ ಆ ದೇವರೆ ದಾರಿ ತೋರಿಸುತ್ತಾನೆ. ಮತ್ತಷ್ಟು ಓದು 
ದಲಿತರನ್ನು ಇತರರಿಂದ ದೂರವಿಡಲು ನಡೆಸುತ್ತಿರುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?
– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಆರ್. ಸಿ. ಯು ಬೆಳಗಾವಿ.
ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಶಿಸುವಾಗ ನಡೆದಂತದ್ದವುಗಳು.
ಘಟನೆ ೧ : ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ. ಮತ್ತಷ್ಟು ಓದು 




