ವಿಷಯದ ವಿವರಗಳಿಗೆ ದಾಟಿರಿ

parupattedara ರವರಿಂದ ಪ್ರಕಟಿತ

3
ಆಗಸ್ಟ್

ಅಲಾಲ್ ಟಪಾಲ್…!

ಪವನ್ ಪಾರುಪತ್ತೇದಾರ

ನಮ್ಮಪ್ಪ ನನ್ನ ಹಾಗೆ ಕರೆಯೋದ್ರಲ್ಲು ಒಂದು ಅರ್ಥ ಇತ್ತು ಕಾರಣ ಇತ್ತು. ಏಳುತ್ತಾ ಇದ್ದದ್ದು ೯ ಘಂಟೆ ಎದ್ದು ಹಲ್ಲು ತಿಕ್ಕೋ ಅಷ್ಟರಲ್ಲಿ ಅಮ್ಮ ಕಾಫೀ ಕೊಡುತಿದ್ದರು, ನಂತರ ಸ್ನಾನ ಮುಗಿಸಿ ತಿಂಡಿ. ಅಷ್ಟರಲ್ಲಿ ೧೧ ಘಂಟೆ ಆಗಿರೋದು. ಇನ್ನು ಆಗ ಕಂಪ್ಯೂಟರ್ ಮುಂದೆ facebook, orkut, ಅ ಸಂಘ, ಈ ಕೂಟ, ಇನ್ಯಾವುದೋ ಬಳಗ ಅಂತ ಚಾಟಿಂಗ್ ಮಾಡುತ್ತಾ ಕೂತರೆ ಮಧ್ಯಾಹ್ನ ೨ ಘಂಟೆ ಆಗುವುದೇ ಗೊತ್ತಾಗುವುದಿಲ್ಲ. ಅಷ್ಟರಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಅಪ್ಪ ಮನೆಗೆ ಬರುತ್ತಾರೆ. ಊಟ ಮಾಡಲು ಎಲ್ಲರು ಕೂತು ಊಟ ಮುಗಿಸಿ ನಂತರ ಮತ್ತೆ online ಹೋದರೆ ಮತ್ತೆ ಸಮಯದ ಅರಿವೇ ಇರುವುದಿಲ್ಲ.

ಸಂಜೆ ೬ ಘಂಟೆ ಹೊತ್ತಿಗೆ ಹಸು ಮನೆಯಲ್ಲಿನ ಸಗಣಿ ಕಸ clean ಮಾಡಿ, ಮತ್ತೆ ಒಂದು ರೌಂಡ್ ಕಾಫೀ ಕುಡಿದು ಹೊರಟರೆ ಮತ್ತೆ ಮನೆ ಸೇರುತಿದ್ದಿದ್ದು 10 ಘಂಟೆಗೆ. ಸ್ನೇಹಿತರ ಜೊತೆ ಅಡ್ಡ, ಕಾಡು ಹರಟೆ, ಮನೆಗೆ ಬಂದೊಡನೆ ಊಟ ಮಾಡಿ ಮತ್ತೆ online 12 ರ ತನಕ ಚಾಟಿಂಗ್ ನಂತರ ನಿದ್ದೆ. ಈ ರೀತಿಯ ದಿನಚರಿ ಇರುವ ಯಾವ ಮಗನನ್ನಾದರೂ ಅಲಾಲ್ ಟಪಾಲ್ ಅನ್ನದೆ ಮುದ್ದು ಮಾಡೋದಕ್ಕ ಸಾಧ್ಯ??

ಹೌದು ನಾನು ಅಲಾಲ್ ಟಪಾಲೇ, ಅಲೆದು ಅಲೆದು ನಂತರ ಅದರ ಗುರಿಯನ್ನು ಸೇರುವ ಟಪಾಲಿನ ಮೇಲೆ ಒಂದು ವಿಳಾಸ ಇರುತ್ತದೆ. ಹಾಗೆ ನನ್ನ ಈ ಬದುಕಿನ ವಿಳಾಸ ನಾನೆ ಬರೆದುಕೊಂಡಿರುವಂತೆ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಬೇಕೆಂದು. ಆದರೆ ವಿಧಿ ಅದನ್ನು ಸರ್ಟಿಫಿಕೇಟ್ ಗಷ್ಟೇ ಸೀಮಿತಗೊಳಿಸಿದೆ. campus ಇಂಟರ್ವ್ಯೂ ಗೆ ಬಂದ ಕಂಪನಿಗಳೆಲ್ಲ software ಗಳೆ, ನಾನು ಅದ್ರಲ್ಲಿ ಸೆಲೆಕ್ಟ್ ಆಗೋವಷ್ಟು ಬುದ್ಧಿವಂತ ಆಗಿರಲಿಲ್ಲ ಅನ್ಸುತ್ತೆ. ಯಾವ ಕಂಪನಿಯವರು ನನ್ನ ಸೆಲೆಕ್ಟ್ ಮಾಡಿಲ್ಲ.

ಮತ್ತಷ್ಟು ಓದು »

14
ಜೂನ್

ಸ್ವಲ್ಪವಾದರೂ ಸಭ್ಯತೆ ಇರಲಿ………!!!

 ಪವನ್ ಪಾರುಪತ್ತೇದಾರ್
ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಓಡಾಡಬೇಕಾದ ಅನಿವಾರ್ಯತೆ ಬಂದಿತ್ತು. ಪ್ರಾಜೆಕ್ಟ್  ವರ್ಕ್ ಭೂತ ತಲೆಯ ಮೇಲೆ ಕೂತಿತ್ತು ಇಷ್ಟವಿಲ್ಲದಿದ್ದರೂ ಮಾಡಲೇಬೇಕಾದ ಕೆಲಸ ಅದು, ಇಂಜಿನಿಯರಿಂಗ್ ಮುಗಿದು ಹೋಯ್ತು ಅಂತ ಅಂದುಕೊಳ್ಳುತ್ತಿರುವಾಗಲೇ ಇದೊಂದು ಕೆಲಸ ಬಾಕಿ ಇದೆ ಎಂದು ಆಗಾಗ ಮೊಟಕುವ ಕುಟುಕುವ ವಸ್ತು ಈ ಪ್ರಾಜೆಕ್ಟ್ ವರ್ಕ್.
         ಅದೇ ಗುಂಗಿನಲ್ಲಿ ಮಡಿವಾಳ ಸಿಲ್ಕ್ ಬೋರ್ಡ್ ಅಲ್ಲಿ 201 no ಬಸ್ ಹತ್ತಿದೆ. ಅದೇನೋ ನನ್ನ ಅದೃಷ್ಟ ಬಸ್ ಖಾಲಿ ಖಾಲಿ ಆಗಿತ್ತು. ಬಂದು ಹಿಂದಿನ ಸೀಟ್ ಅಲ್ಲಿ ಕಿಟಕಿ ಪಕ್ಕ ಕೂತೆ. ೪೦ ರುಪಾಯಿ ಕೊಟ್ಟು ಪಾಸು ತೆಗೆದುಕೊಂಡರೆ ಇಡಿ ಬೆಂಗಳೂರೇ ತಿರುಗಬಹುದಾದ ಒಂದು ಸೌಕರ್ಯ ನಿಮಗೆಲ್ಲ ಗೊತ್ತಿರುವಂತೆ ಇಲ್ಲಿದೆ. ನಾನು ಅ ಪಾಸ್ ಖರೀದಿಸಿಯೇ ಓಡಾಡುತಿದ್ದೆ. ಬಸ್ ನಲ್ಲಿ ಕಡೆಯ ಸೀಟ್ ಅಲ್ಲಿ ಯುವ ಜೋಡಿಯೊಂದು ಕೂತಿತ್ತು.ನನ್ನ ಪಕ್ಕ ಒಬ್ಬ ತಾತ ಬಂದು ಕೂತರು, ಸುತ್ತಲು ಒಂದಷ್ಟು ಹಿರಿಯರು ಇದ್ದರು. ನನಗೋ, ಎಲ್ಲರಿಗು ಇದ್ದಂತೆ ಆ ಯುವ ಜೋಡಿಯನ್ನು ನೋಡುವ ಕುತೂಹಲ, ಅ ಕುತೂಹಲದಿಂದಲೇ ಆಗಾಗ ಮೆಲ್ಲಗೆ ಅವರಿಗೆ ತಿಳಿಯದಂತೆ ಅವರನ್ನು ಗಮನಿಸುತ್ತ ಇದ್ದೆ. ನಾ ಮಾತ್ರ ಅಲ್ಲ ಅಲ್ಲಿದ್ದ ಎಲ್ಲರು ತಮ್ಮ ಗಮನವನ್ನು ಅ ಕಡೆ ಇಟ್ಟುಕೊಂಡೆ ಇದ್ದರು. ಕ೦ಡಕ್ಟರ್ ಟಿಕೆಟ್ ಕೊಡುವ ನೆಪದಲ್ಲಿ ಆಗಾಗ ಹಿಂದೆ ಬಂದು ಮುಖ ಸಿಂಡರಿಸುತ್ತ  ಹೋಗುತಿದ್ದ. ನನಗಂತೂ ಇನ್ನು ಕುತೂಹಲ ಹೆಚ್ಚಾಯಿತು. ಇನ್ನು ಸ್ವಲ್ಪ ಗಮನಿಸಿದೆ ಅ ಹುಡುಗ ಹುಡುಗಿಯ ಹೆಗಲ ಮೇಲೆ ಕೈ ಹಾಕಿಕೊಂಡಿದ್ದ, ಆಗಾಗ ಕಿವಿಯಲ್ಲಿ ಏನೇನೋ ಹೇಳುತಿದ್ದ, ಒಂದೆರಡು ಬರಿ ಮುತ್ತನ್ನು ಕೊಟ್ಟ. ಹೀಗೆ ಒಂದೆರಡು ಸ್ಟಾಪ್ ಆದಮೇಲೆ ಕ೦ಡಕ್ಟರ್ ಬಂದವನೇ, ಎದ್ದೆಲ್ರಿ ಮೇಲೆ ನೀವು ಅಂದ, ಅದಕ್ಕವರು ಯಾಕೆ ಅಂತ ಬಲು ದರ್ಪದಿಂದ ಕೇಳಿದರು ಅದಕ್ಕೆ ನಮ್ಮ ಕ೦ಡಕ್ಟರ್, ನಾನು ನೋಡ್ತಾನೆ ಇದೀನಿ ಆಗ್ಲಿಂದ ಏನು ನೀವು ಮಾಡ್ತಿರೋ ಕೆಲಸ?? ಇದೆಲ್ಲ ಮಾಡೋಹಾಗಿದ್ರೆ ಲಾಲ್ ಭಾಗೋ ಕಬ್ಬನ್ ಪರ್ಕೋ ಹೋಗಿ, BTS ಬಸ್ ಏನು ಬೆಡ್ ರೂಂ ಅಂದುಕೊಂಡಿದ್ದಿರ ಅಂತ ಸರಿಯಾಗಿ ಚಾರ್ಜ್ ತೊಗೊಂಡ. ಅಷ್ಟರಲ್ಲೇ ಅಲ್ಲಿದ್ದ ಜನರು ಕೂಡ ಏನಮ್ಮ , ನಿನಗಾದ್ರು ಮಾನ ಮರ್ಯಾದೆ ಇಲ್ವಾ ಎಲ್ಲಿರೋದು ನಿಮ್ಮ ಮನೆ, ಏನು ನಿಮ್ಮ ತಂದೆ ಹೆಸರು ಅಂತ ಎಲ್ಲ ಪ್ರಶ್ನೆ ಮಾಡಲು ಶುರು ಮಾಡಿದ್ದರು. ಅಷ್ಟರಲ್ಲೇ ಮುಂದಿನ ಸ್ಟಾಪ್ ಬಂದಿತ್ತು ಇಬ್ಬರು ಇಳಿದು ಏನು ಮಾತನಾಡದೆ ಕಾಲುಕಿತ್ತರು. ಮತ್ತಷ್ಟು ಓದು »
9
ಜೂನ್

ಗತಂ ಗತಂ

ಪವನ್ ಪಾರುಪತ್ತೇದಾರ್

ನಮಮ್ಮನಿಗೆ ಇದ್ದಕ್ಕಿದ್ದ ಹಾಗೆ ಅಕ್ಕನ ನೆನಪಾಗಿ ನನ್ನ ಕೇಳಿದ್ರು ಕರೆದು ಕೊಂಡು ಹೋಗು ಅಂತ, ನನಗು ಮಾಡಕ್ ಏನು ಕೆಲಸ ಇಲ್ಲದ ಕಾರಣ electronic ಸಿಟಿ ಕಡೆ ಪ್ರಯಾಣ ಮಾಡಿದೆ. ನಾನು ಅವರ ಮನೆಗೆ ಹೋಗಿ ಸುಮಾರು ೪ ವರ್ಷ ಗಳಾಗಿತ್ತು. ಹೋಗಿ ಅವರ ಮನೆ ಸೇರಿದ ತಕ್ಷಣ ಉಭಯ ಕುಶಲೋಪರಿಗಳನ್ನು ಮುಗಿಸಿ ಚೌ ಚೌ ಬಿಸ್ಕತ್ತು ತಿನ್ನುತ್ತ ಮಾತನಾಡುತ್ತಿರುವಾಗ ನಮ್ಮ ಅಣ್ಣ ನಮ್ಮ ತಾಯಿಗೆ ಹೇ ನಿನ್ನ 2nd year BA ದು ಒಂದು ಪುಸ್ತಕ ಹಾಗೆ ಇಟ್ಟಿದಿನಿ ಕಣೆ ಅಂದ ( ಹೆಚ್ಹು ಸಲಿಗೆ ಚಿಕ್ಕಮ್ಮ ಆದರು ಹೋಗೆ ಬಾರೆ ಎಂದೆ ಮಾತನಾಡುತ್ತಾರೆ )

ನಮಮ್ಮ ಯಾವುದೊ ಅದು ಅಂದ್ರು ,ಅದಕ್ಕೆ ನಮ್ಮಣ್ಣ untouchable ಅಂತ ನೆನಪಿದ್ಯ ಅಂದ ಅಮ್ಮ ಹೌದು ಹೌದು ಇನ್ನು ಇತ್ತಿದ್ಯ good ಅಂದ್ರು. ಅದಕ್ಕವ, ನಾನು ಮಾತ್ರ ಯಾರಿಗೂ ಪುಸ್ತಕ ಕೊಡೋದಿಲ್ಲಪ ಅದನ್ನ ಯಾರಿಗದ್ರು ಕೊಟ್ರೆ ವಾಪಾಸ್ ಬರೋದೆ ಕಷ್ಟ ಅದಕ್ಕೆ ಜೋಪಾನವಾಗಿ ಜೋಡಿಸ್ತೀನಿ ಸಮಯ ಸಿಕ್ಕಾಗ ಓದ್ತಾ ಇರ್ತೀನಿ ಅಂದ. ಅಷ್ಟರಲ್ಲೇ ಅಲ್ಲೇ ಕೂತಿದ್ದ ನಮ್ಮ ದೊಡ್ಡಪ್ಪ ಕಣಗಾಲ್ ಶಂಕರ್ ನಾರಾಯಣ್ ( ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರವರ ಮೊದಲನೇ ತಮ್ಮ ) ಒಂದು ಮಾತು ಹೇಳಿದರು, ” ಪುಸ್ತಕಂ ವನಿತಂ ವಿತ್ತಂ ಪರ ಹಸ್ತೇ ಗತಂ ಗತಂ ” ಆಹಾ ಎಷ್ಟು ಅರ್ಥ ಗರ್ಭಿತವಾಗಿದೆ. ಈ ಮಾತು, ಪುಸ್ತಕ ಅಗಲಿ ಹೆಣ್ಣಾಗಲಿ ಹಣ ಅಗಲಿ ಇನ್ನೊಬ್ಬರ ಕೈಗೆ ಹೋದರೆ ಅದು ಹೋದಂತಯೇ ತಿಳಿಯಬೇಕು. ಅಕಸ್ಮಾತ್ ಮತ್ತೆ ಬಂದರು ಅದು ಸರಿಯಾಗಿ ಬರುವುದು ಬಹಳ ಕಷ್ಟ , ಸರಿಯಾದ ಮಾತು. ನನ್ನ ಜೆವನದಲ್ಲೇ ಅಂತ ಸಂಗತಿಗಳು ನಡೆದಿವೆ, ನಾನು ೫ನೆ ತರಗತಿ ಓದೋವಾಗ ನನಗೆ ಬಹುಮಾನವಾಗಿ ಬಂದಿದ್ದ ಒಂದು ಜನರಲ್ knowledge ಪುಸ್ತಕವನ್ನ ತೆಗೆದುಕೊಂಡಿದ್ದ ಮೇಸ್ಟ್ರು ನಾನು ಪ್ರೌಢ ಶಾಲೆ ಸೇರುವರೆಗೂ ಕೇಳಿದ್ರು ವಾಪಾಸ್ ಕೊಡಲಿಲ್ಲ. ಮತ್ತಷ್ಟು ಓದು »