ಅಲಾಲ್ ಟಪಾಲ್…!
– ಪವನ್ ಪಾರುಪತ್ತೇದಾರ
ನಮ್ಮಪ್ಪ ನನ್ನ ಹಾಗೆ ಕರೆಯೋದ್ರಲ್ಲು ಒಂದು ಅರ್ಥ ಇತ್ತು ಕಾರಣ ಇತ್ತು. ಏಳುತ್ತಾ ಇದ್ದದ್ದು ೯ ಘಂಟೆ ಎದ್ದು ಹಲ್ಲು ತಿಕ್ಕೋ ಅಷ್ಟರಲ್ಲಿ ಅಮ್ಮ ಕಾಫೀ ಕೊಡುತಿದ್ದರು, ನಂತರ ಸ್ನಾನ ಮುಗಿಸಿ
ತಿಂಡಿ. ಅಷ್ಟರಲ್ಲಿ ೧೧ ಘಂಟೆ ಆಗಿರೋದು. ಇನ್ನು ಆಗ ಕಂಪ್ಯೂಟರ್ ಮುಂದೆ facebook, orkut, ಅ ಸಂಘ, ಈ ಕೂಟ, ಇನ್ಯಾವುದೋ ಬಳಗ ಅಂತ ಚಾಟಿಂಗ್ ಮಾಡುತ್ತಾ ಕೂತರೆ ಮಧ್ಯಾಹ್ನ ೨ ಘಂಟೆ ಆಗುವುದೇ ಗೊತ್ತಾಗುವುದಿಲ್ಲ. ಅಷ್ಟರಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಅಪ್ಪ ಮನೆಗೆ ಬರುತ್ತಾರೆ. ಊಟ ಮಾಡಲು ಎಲ್ಲರು ಕೂತು ಊಟ ಮುಗಿಸಿ ನಂತರ ಮತ್ತೆ online ಹೋದರೆ ಮತ್ತೆ ಸಮಯದ ಅರಿವೇ ಇರುವುದಿಲ್ಲ.
ಸಂಜೆ ೬ ಘಂಟೆ ಹೊತ್ತಿಗೆ ಹಸು ಮನೆಯಲ್ಲಿನ ಸಗಣಿ ಕಸ clean ಮಾಡಿ, ಮತ್ತೆ ಒಂದು ರೌಂಡ್ ಕಾಫೀ ಕುಡಿದು ಹೊರಟರೆ ಮತ್ತೆ ಮನೆ ಸೇರುತಿದ್ದಿದ್ದು 10 ಘಂಟೆಗೆ. ಸ್ನೇಹಿತರ ಜೊತೆ ಅಡ್ಡ, ಕಾಡು ಹರಟೆ, ಮನೆಗೆ ಬಂದೊಡನೆ ಊಟ ಮಾಡಿ ಮತ್ತೆ online 12 ರ ತನಕ ಚಾಟಿಂಗ್ ನಂತರ ನಿದ್ದೆ. ಈ ರೀತಿಯ ದಿನಚರಿ ಇರುವ ಯಾವ ಮಗನನ್ನಾದರೂ ಅಲಾಲ್ ಟಪಾಲ್ ಅನ್ನದೆ ಮುದ್ದು ಮಾಡೋದಕ್ಕ ಸಾಧ್ಯ??
ಹೌದು ನಾನು ಅಲಾಲ್ ಟಪಾಲೇ, ಅಲೆದು ಅಲೆದು ನಂತರ ಅದರ ಗುರಿಯನ್ನು ಸೇರುವ ಟಪಾಲಿನ ಮೇಲೆ ಒಂದು ವಿಳಾಸ ಇರುತ್ತದೆ. ಹಾಗೆ ನನ್ನ ಈ ಬದುಕಿನ ವಿಳಾಸ ನಾನೆ ಬರೆದುಕೊಂಡಿರುವಂತೆ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಆಗಬೇಕೆಂದು. ಆದರೆ ವಿಧಿ ಅದನ್ನು ಸರ್ಟಿಫಿಕೇಟ್ ಗಷ್ಟೇ ಸೀಮಿತಗೊಳಿಸಿದೆ. campus ಇಂಟರ್ವ್ಯೂ ಗೆ ಬಂದ ಕಂಪನಿಗಳೆಲ್ಲ software ಗಳೆ, ನಾನು ಅದ್ರಲ್ಲಿ ಸೆಲೆಕ್ಟ್ ಆಗೋವಷ್ಟು ಬುದ್ಧಿವಂತ ಆಗಿರಲಿಲ್ಲ ಅನ್ಸುತ್ತೆ. ಯಾವ ಕಂಪನಿಯವರು ನನ್ನ ಸೆಲೆಕ್ಟ್ ಮಾಡಿಲ್ಲ.
ಸ್ವಲ್ಪವಾದರೂ ಸಭ್ಯತೆ ಇರಲಿ………!!!

ಗತಂ ಗತಂ
ಪವನ್ ಪಾರುಪತ್ತೇದಾರ್
ನಮಮ್ಮನಿಗೆ ಇದ್ದಕ್ಕಿದ್ದ ಹಾಗೆ ಅಕ್ಕನ ನೆನಪಾಗಿ ನನ್ನ ಕೇಳಿದ್ರು ಕರೆದು ಕೊಂಡು ಹೋಗು ಅಂತ, ನನಗು ಮಾಡಕ್ ಏನು ಕೆಲಸ ಇಲ್ಲದ ಕಾರಣ electronic ಸಿಟಿ ಕಡೆ ಪ್ರಯಾಣ ಮಾಡಿದೆ. ನಾನು ಅವರ ಮನೆಗೆ ಹೋಗಿ ಸುಮಾರು ೪ ವರ್ಷ ಗಳಾಗಿತ್ತು. ಹೋಗಿ ಅವರ ಮನೆ ಸೇರಿದ ತಕ್ಷಣ ಉಭಯ ಕುಶಲೋಪರಿಗಳನ್ನು ಮುಗಿಸಿ ಚೌ ಚೌ ಬಿಸ್ಕತ್ತು ತಿನ್ನುತ್ತ ಮಾತನಾಡುತ್ತಿರುವಾಗ ನಮ್ಮ ಅಣ್ಣ ನಮ್ಮ ತಾಯಿಗೆ ಹೇ ನಿನ್ನ 2nd year BA ದು ಒಂದು ಪುಸ್ತಕ ಹಾಗೆ ಇಟ್ಟಿದಿನಿ ಕಣೆ ಅಂದ ( ಹೆಚ್ಹು ಸಲಿಗೆ ಚಿಕ್ಕಮ್ಮ ಆದರು ಹೋಗೆ ಬಾರೆ ಎಂದೆ ಮಾತನಾಡುತ್ತಾರೆ )
ನಮಮ್ಮ ಯಾವುದೊ ಅದು ಅಂದ್ರು ,ಅದಕ್ಕೆ ನಮ್ಮಣ್ಣ untouchable ಅಂತ ನೆನಪಿದ್ಯ ಅಂದ ಅಮ್ಮ ಹೌದು ಹೌದು ಇನ್ನು ಇತ್ತಿದ್ಯ good ಅಂದ್ರು. ಅದಕ್ಕವ, ನಾನು ಮಾತ್ರ ಯಾರಿಗೂ ಪುಸ್ತಕ ಕೊಡೋದಿಲ್ಲಪ ಅದನ್ನ ಯಾರಿಗದ್ರು ಕೊಟ್ರೆ ವಾಪಾಸ್ ಬರೋದೆ ಕಷ್ಟ ಅದಕ್ಕೆ ಜೋಪಾನವಾಗಿ ಜೋಡಿಸ್ತೀನಿ ಸಮಯ ಸಿಕ್ಕಾಗ ಓದ್ತಾ ಇರ್ತೀನಿ ಅಂದ. ಅಷ್ಟರಲ್ಲೇ ಅಲ್ಲೇ ಕೂತಿದ್ದ ನಮ್ಮ ದೊಡ್ಡಪ್ಪ ಕಣಗಾಲ್ ಶಂಕರ್ ನಾರಾಯಣ್ ( ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರವರ ಮೊದಲನೇ ತಮ್ಮ ) ಒಂದು ಮಾತು ಹೇಳಿದರು, ” ಪುಸ್ತಕಂ ವನಿತಂ ವಿತ್ತಂ ಪರ ಹಸ್ತೇ ಗತಂ ಗತಂ ” ಆಹಾ ಎಷ್ಟು ಅರ್ಥ ಗರ್ಭಿತವಾಗಿದೆ. ಈ ಮಾತು, ಪುಸ್ತಕ ಅಗಲಿ ಹೆಣ್ಣಾಗಲಿ ಹಣ ಅಗಲಿ ಇನ್ನೊಬ್ಬರ ಕೈಗೆ ಹೋದರೆ ಅದು ಹೋದಂತಯೇ ತಿಳಿಯಬೇಕು. ಅಕಸ್ಮಾತ್ ಮತ್ತೆ ಬಂದರು ಅದು ಸರಿಯಾಗಿ ಬರುವುದು ಬಹಳ ಕಷ್ಟ , ಸರಿಯಾದ ಮಾತು. ನನ್ನ ಜೆವನದಲ್ಲೇ ಅಂತ ಸಂಗತಿಗಳು ನಡೆದಿವೆ, ನಾನು ೫ನೆ ತರಗತಿ ಓದೋವಾಗ ನನಗೆ ಬಹುಮಾನವಾಗಿ ಬಂದಿದ್ದ ಒಂದು ಜನರಲ್ knowledge ಪುಸ್ತಕವನ್ನ ತೆಗೆದುಕೊಂಡಿದ್ದ ಮೇಸ್ಟ್ರು ನಾನು ಪ್ರೌಢ ಶಾಲೆ ಸೇರುವರೆಗೂ ಕೇಳಿದ್ರು ವಾಪಾಸ್ ಕೊಡಲಿಲ್ಲ. ಮತ್ತಷ್ಟು ಓದು 





