ಮಹಾತ್ಮ ಬಸವಣ್ಣನವರು
– ಡಾ.ಸಂಗಮೇಶ ಸವದತ್ತಿಮಠ
(ಕಳೆದ ವರ್ಷ (2019) ನಾನು ಕೆನಡಾ ದೇಶದ ಟೊರೊಂಟೊ ನಗರದಲ್ಲಿ ವೀರಶೈವ ಸಮಾಜ ಏರ್ಪಡಿಸಿದ್ದ ಬಸವಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಡಿದ ಭಾಷಣದ update ಮಾಡಿದ ಲೇಖನ ಪ್ರಸ್ತುತ ಬಸವಜಯಂತಿ ಸಂದರ್ಭದಲ್ಲಿ ಆಸಕ್ತ ಓದುಗರಿಗಾಗಿ ಇಲ್ಲಿದೆ)
ಆತ್ಮೀಯ ನಾರ್ತ್ ಅಮೇರಿಕಾ ಟೋರೊಂಟೊ ಚಾಪ್ಟರ್ನ ವೀರಶೈವ ಸಮಾಜ ಬಾಂಧವರೆ,
ತಮಗೆಲ್ಲ ಬಸವಜಯಂತಿಯ ಹಾರ್ದಿಕ ಶುಭಾಶಯಗಳು.
ಕನ್ನಡನಾಡಿನ ಸೌಭಾಗ್ಯ ಎಂಬಂತೆ ಬಸವಣ್ಣನವರು ನಮ್ಮ ನಾಡಿನಲ್ಲಿ ಜನ್ಮತಳೆದರು. ಬಸವಣ್ಣನವರ ವ್ಯಕ್ತಿತ್ವ ಅಗಾಧವಾದದು, ಅದ್ಭುತವಾದದ್ದು, ಪರಿಪೂರ್ಣವಾದದ್ದು, ಬಹುಮುಖಿಯಾದದ್ದು. ಅವರನ್ನು ಒಬ್ಬೊಬ್ಬರೂ ಒಂದೊಂದು ದೃಷ್ಟಿಯಿಂದ ನೋಡಿದಾಗ ಅವರವರ ಭಾವದಂತೆ ಅವರು ಗೋಚರಿಸುತ್ತಾರೆ. ಅದೇ ಅವರÀ ವ್ಯಕ್ತಿತ್ವದ ವೈಶಿಷ್ಟ್ಯ.
1.ಒಬ್ಬನೆಂದ – ಬಸವಣ್ಣ ಒಬ್ಬ ರಾಜಕಾರಣಿ. ಹೌದು ಬಿಜ್ಜಳನ ಆಸ್ಥಾನದಲ್ಲಿದ್ದುದರಿಂದ ಅವರು political thinker .
- ಒಬ್ಬನೆಂದ – ರಾಜಕಾರಣಿಗಿಂತ ಅವರು ಒಬ್ಬ ಶ್ರೇಷ್ಠ ಅಧಿಕಾರಿ, ಆಡಳಿತಗಾರ. ಹೌದು ಅವರು Prime minister
- ಒಬ್ಬನೆಂದ – ರಾಜಕಾರಣಿ, ಆಡಳಿತಗಾರ, ಅಧಿಕಾರಿ ಎನ್ನುವುದಕ್ಕಿಂತ ಅವರೊಬ್ಬ ದಾರ್ಶನಿಕರು. ಹೌದು ಅವರು philosopher. ತತ್ತ್ವಜ್ಞಾನಿ.
- ಒಬ್ಬನೆಂದ – ರಾಜಕಾರಣಿ, ಆಡಳಿತಗಾರ, ದಾರ್ಶನಿಕ ಎನ್ನುವುದಕ್ಕಿಂತ ಅವರೊಬ್ಬ ಅಧ್ಯಾತ್ಮಜೀವಿ. ಹೌದು ಧರ್ಮದ ಚೌಕಟ್ಟಿನೊಳಗೆ ಭಕ್ತಿಯ ಸೋಪಾನಗಳನ್ನು ಇಟ್ಟು ಅಧ್ಯಾತ್ಮದ ಬೆಳಸು ತೆಗೆದವರು ಬಸವಣ್ಣನವರು.
- ಒಬ್ಬನೆಂದ – ರಾಜಕಾರಣಿ, ಆಡಳಿತಗಾರ, ದಾರ್ಶನಿಕ, ಅಧ್ಯಾತ್ಮಜೀವಿ ಎನ್ನುವುದಕ್ಕಿಂತ ಅವರೊಬ್ಬ ಸಮಾಜ ಸುಧಾರಕ. ಹೌದು Social reformer. ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕೆ ಬೇಕಾದುದೆಲ್ಲವನ್ನೂ ಅವರು ಮಾಡಿತೋರಿಸಿದ ಧೀಮಂತ ಸಮಾಜೋದ್ಧಾರಕರು.
- ಒಬ್ಬನೆಂದ – ರಾಜಕಾರಣಿ, ಆಡಳಿತಗಾರ, ದಾರ್ಶನಿಕ, ಅಧ್ಯಾತ್ಮಜೀವಿ, ಸಮಾಜ ಸುಧಾರಕ ಎನ್ನುವುದಕ್ಕಿಂತ ಅವರೊಬ್ಬ ಕ್ರಾಂತಿಪುರುಷ. ಹೌದು ತನ್ನ ಕಾಲದಲ್ಲಿ ಇದ್ದ ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸಿ ಜನರ ಬದುಕಿನಲ್ಲಿ ಬದಲಾವಣೆಗಳನ್ನು ತಂದವರು.
ಹೀಗೆಯೇ ಜಂಗಮಪ್ರೇಮಿ, ಭಕ್ತಾನುಕಂಪಿ, ಬಾಗಿದ ತಲೆಯ ಮುಗಿದ ಕೈಯ ವಿನಯಶೀಲ, ಸಿಟ್ಟು, ಸೆಡವು, ದ್ವೇಷ, ಅಸೂಯೆ, ಈರ್ಷೆ ಇಲ್ಲದ ಎಲ್ಲರನ್ನೂ ಸಮಾನ ಗೌರವದಿದ ಕಾಣುವವ ಇತ್ಯಾದಿ ಇತ್ಯಾದಿ ಹೇಳುತ್ತಲೇ ಹೋಗಬಹುದು. ಒಂದೊಂದೇ ಮಗ್ಗಲುಗಳನ್ನು ಬಿಡಿಸುತ್ತ ಹೋದಂತೆ ಬಸವಣ್ಣನವರ ಒಟ್ಟು ವ್ಯಕ್ತಿತ್ವದ ಪದರು ಪದರುಗಳು ಬಿಚ್ಚಿಕೊಳ್ಳುತ್ತಲೇ ಹೋಗುತ್ತವೆ. ಎಂತಹ ಅದ್ಭುತ ! ಜಗದ ಅಚ್ಚರಿ ಅಲ್ಲವೆ?
ದಾಸ ಸಾಹಿತ್ಯ ಮಾರುವೇಷದ ಕಾರ್ಯಾಚರಣೆ – ಕನಕದಾಸ ಬಲೆಯೊಳಗೆ ಬಿದ್ದ ಮಿಕ !!!
– ಡಾ. ರೋಹಿಣಾಕ್ಷ ಶಿರ್ಲಾಲು
ಕನ್ನಡ ಉಪನ್ಯಾಸಕರು,ವಿವೇಕಾನಂದ ಕಾಲೇಜು, ಪುತ್ತೂರು
ನಮ್ಮ ಶಾಲಾ ಕಾಲೇಜು ಪಠ್ಯ ಪುಸ್ತಕಗಳು ಹೇಗಿರಬೇಕು ಎನ್ನುವ ಚರ್ಚೆ ಬಹುಕಾಲದಿಂದಲೂ ನಡೆದುಬಂದಿದೆ. ಶಿಕ್ಷಣ ತಜ್ಞರು ಶೈಕ್ಷಣಿಕ ತತ್ವಶಾಸ್ತ್ರದ ಹಿನ್ನೆಲೆಯಲ್ಲಿ , ವಿದ್ಯಾರ್ಥಿಗಳ ಮನೋಭಾವ, ಬದಲಾದ ಕಾಲಮಾನ, ಔದ್ಯೋಗಿಕ ಅವಕಾಶ ಇವೇ ಮೊದಲಾದ ಸಂಗತಿಗಳನ್ನು ಕಣ್ಮುಂದೆ ಇರಿಸಿಕೊಂಡು ಪಠ್ಯಗಳನ್ನು ಸಿದ್ಧ ಮಾಡಬೇಕಾಗುತ್ತದೆ. ಪ್ರಾಥಮಿಕ ಶಾಲಾ ಪಠ್ಯದಿಂದ ತೊಡಗಿ ಸ್ನಾತಕೋತ್ತರರ ಪದವಿಯಂತಹ ಉನ್ನತ ಶಿಕ್ಷಣದ ವರೆಗಿನ ಪಠ್ಯಗಳಿಗೂ ಅದರದ್ದೇ ಆದ ಉದ್ದೇಶ ಮತ್ತು ಗುರಿ ಇರುತ್ತದೆ. ಪಠ್ಯವೊಂದು ಅಂತಿಮವಾಗಿ ಓದುವ ವಿದ್ಯಾರ್ಥಿಗಳ ಆಸಕ್ತಿಯನ್ನು ಹೆಚ್ಚಿಸುವಂತೆಯೂ,ಕುತೂಹಲವನ್ನು ಬೆಳೆಸುವಂತೆಯೂ ಇರಬೇಕು ಎನ್ನುವುದರಲ್ಲಿ ಸಂಶಯವಿಲ್ಲ. ಪಠ್ಯವೊಂದನ್ನು ಓದಿದ ವಿದ್ಯಾರ್ಥಿಯು ಮುಂದೆ ಆ ವಿಷಯದಲ್ಲಿ ಇನ್ನಷ್ಟು ಸಂಗತಿಗಳನ್ನು ಆಸಕ್ತಿಯಿಂದ ಓದುವಂತೆ ಪ್ರೆರೇಪಿಸಬೇಕೇ ವಿನಃ ಅದು ಓದಿನ ಕೊನೆಯಾಗುವಂತೆ ಮಾಡಬಾರದು ಎನ್ನುವುದೂ ಸತ್ಯ. ವಿದ್ಯಾರ್ಥಿಗಳ ಆಲೋಚನೆಯನ್ನು ವಿಸ್ತರಿಸುವಲ್ಲಿ, ಮನಸ್ಸನ್ನು ಇನ್ನಷ್ಟು ಮುಕ್ತವಾಗಿ ಇರಿಸುವಲ್ಲಿ ಪೂರಕವಾಗಿರಬೇಕೇ ಹೊರತು ಅವರ ಆಲೋಚನೆಗಳಿಗೆ ಪೂರ್ಣವಿರಾಮ ಹಾಕಿ ಯಾರೋ ಹೇರಿದ ಚಿಂತನೆಯ ದಾಸ್ಯಕ್ಕೆ ತಳ್ಳಬಾರದು.
ಉದಾಹರಣೆಗೆ,ಪದವಿ ಹಂತದಲ್ಲಿ ಕನ್ನಡ ಸಾಹಿತ್ಯ ವಿಷಯವನ್ನು ಮೇಜರ್ ವಿಷಯವಾಗಿ ಆಯ್ದುಕೊಂಡ ವಿದ್ಯಾರ್ಥಿಗಳಿಗೆ ತಮ್ಮ ಮೂರು ವರ್ಷಗಳ ಪದವಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುವಾಗ ಕನ್ನಡ ಸಾಹಿತ್ಯದ ವಿಸ್ತಾರ, ಆಳ ಅಗಲಗಳನ್ನು ಪರಿಚಯಿಸಿಕೊಳ್ಳುವಂತೆ ಪ್ರಾತಿನಿಧಿಕ ಪಠ್ಯಗಳನ್ನು ಅಭ್ಯಾಸಿಸಲಾಗುತ್ತದೆ. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈ ವಿಷಯವನ್ನು ಅಭ್ಯಾಸ ಮಾಡಿದರೂ ಓದಿದ ಪ್ರಾತಿನಿಧಿಕ ಪಠ್ಯಗಳು ಬೇರೆ ಬೇರೆ ಯಾದರೂ ಅವುಗಳ ನಡುವೆ ಒಂದು ಸಾಮಾನ್ಯ ಸ್ವರೂಪ ಸಮಾನವಾಗಿರುತ್ತದೆ. ಇದಕ್ಕಾಗಿ ಈಗಾಗಲೇ ಒಪ್ಪಿತವಾದ ಮಾದರಿಯೂ ಇದೆ.
ಸಾಹಿತ್ಯ ಪಠ್ಯದ ಭಾಗವೇ ಆಗಿ ಸಾಹಿತ್ಯ ಚರಿತ್ರೆಯನ್ನೂ ಓದುವಾಗ ಈಗಾಗಲೇ ಪ್ರಾಜ್ಞರಿಂದ ರಚನೆಯಾದ ಸಾಹಿತ್ಯ ಚರಿತ್ರೆಯ ಸಂಗ್ರಹರೂಪವನ್ನು ಪಠ್ಯವಾಗಿ ನೀಡಲಾಗುತ್ತದೆ. ಪಠ್ಯ ಪುಸ್ತಕಗಳ ಸಂಪಾದಕರು ಬೇರೆ ಬೇರೆ ಸೆಮಿಸ್ಟರ್ಗಳಿಗೆ ಹಂಚಿಹೋಗುವಂತೆ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ವಿವಿಧ ಪ್ರಕಾರ, ಸಾಹಿತ್ಯ ರೂಪಗಳ ಉಗಮ ವಿಕಾಸದ ಕುರಿತು ಚರಿತ್ರೆಯನ್ನು ಸಂಗ್ರಹಿಸಿ ನೀಡುತ್ತಾರೆ. ಆ ಮೂಲಕ ಭವಿಷ್ಯದಲ್ಲಿ ವಿದ್ಯಾಭ್ಯಾಸ ಮುಗಿಸಿ ಆಡಳಿತ ಸೇವೆಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳೂ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳ್ಳಲು ರಾಜ್ಯಾದ್ಯಂತ ಒಂದೇ ಮಾದರಿಯ ಚರಿತ್ರೆಯ ಪಠ್ಯಗಳು ಅನುಕೂಲಕರವಾಗಿ ಒದಗಿ ಬರುತ್ತಿತ್ತು. ಸಾಹಿತ್ಯ ಚರಿತ್ರೆ ಎನ್ನುವುದು ವಸ್ತುನಿಷ್ಟವಾಗಿ ಅಧಿಕೃತ ದಾಖಲೆಗಳ ನೆರವಿನಿಂದ ರೂಪುಗೊಳ್ಳುವ ಒಂದು ಶಾಸ್ತ್ರ. ಹಲವು ಮಾದರಿಯ ಸಾಹಿತ್ಯ ಚರಿತ್ರೆ ಕೃತಿಗಳು ನಮ್ಮೆದುರಿಗಿದ್ದರೂ ವಿದ್ಯಾರ್ಥಿಗಳು ತರಗತಿ ಪಠ್ಯವಾಗಿ ಓದಬೇಕಾದ ಚರಿತ್ರೆಯಂತೂ ಅತಿಯಾದ ವಿಶ್ಲೇಷಣೆಯ ಭಾರದಿಂದ ಕುಸಿದು, ಲೇಖಕರ ಸೈದ್ಧಾಂತಿಕ ದೃಷ್ಟಿ ಧೋರಣೆಯಿಂದ ದಾರಿ ತಪ್ಪಿಸುವಂತಿರಬಾರದು. ವಿವಿಧ ಕಾಲಘಟ್ಟದ ಸಾಹಿತ್ಯ ಪ್ರಕಾರಗಳನ್ನು ಅವುಗಳ ಸಾಮಾನ್ಯ ಸ್ವರೂಪ, ಗುಣ ಲಕ್ಷಣ,ಸಾಹಿತ್ಯಿಕ ವೈಶಿಷ್ಟ್ಯ ಮತ್ತು ಆ ಕಾಲಘಟ್ಟದ ಒಂದಷ್ಟು ಮುಖ್ಯರಾದ ಕೃತಿಕಾರರ ಪರಿಚಯವನ್ನು ಇಲ್ಲಿ ನೀಡಬೇಕಾಗುತ್ತದೆ. ಇದು ಹೊಸದಾಗಿ ಓದಿಗೆ ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿ ಯಾವುದೇ ಪೂರ್ವಾಗ್ರಹಗಳಿಲ್ಲದೆ, ತನ್ನದೇ ಅನುಭವ-ನಿಲುವುಗಳಿಂದ ಕೃತಿಗಳನ್ನು ಅಧ್ಯಯನ ಮಾಡಲು ಸಾದ್ಯವಾಗುತ್ತದೆ.ಈ ರೀತಿಯ ಅಭ್ಯಾಸ ನಡೆದಾಗ ಸಾಹಿತ್ಯದ ನಿಷ್ಪಕ್ಷಪಾತ ಗ್ರಹಿಕೆ ಮೌಲ್ಯಮಾಪನಕ್ಕೆ ಸಾದ್ಯವಾಗುತ್ತದೆ. ರಂ.ಶ್ರಿ.ಮುಗಳಿ, ಎಂ.ಎಂ.ಕಲ್ಬುರ್ಗಿ, ಕೀರ್ತಿನಾಥ ಕುರ್ತಕೋಟಿ,ಎಲ್.ಎಸ್.ಶೇಷಗಿರಿರಾವ್ ಮೊದಲಾದವರು ವೈಯಕ್ತಿಕವಾಗಿ, ಬೆಂಗಳೂರು, ಮೈಸೂರು ವಿ.ವಿ.ಗಳು ಸಾಹಿತ್ಯ ಚರಿತ್ರೆಯ ಹಲವು ಸಂಪುಟಗಳನ್ನು ಪ್ರಕಟಿಸಿದ್ದು ವಿದ್ಯಾರ್ಥಿಗಳ ಪಠ್ಯಕ್ಕೆ ಇವುಗಳನ್ನು ಆಕರವಾಗಿ ಬಳಸಿಕೊಳ್ಳಲಾಗುತ್ತಿತ್ತು.
ವಿವಾಹೇತರ ಸಂಬಂಧ ಹಾಗೂ ಶಬರಿಮಲೈ ಕುರಿತ ಸುಪ್ರೀಂ ತೀರ್ಪು
– ವಿನಾಯಕ ಹಂಪಿಹೊಳಿ
ಬ್ರಿಟೀಷರ ಕಾಲದಲ್ಲಿ ಕ್ರಿಶ್ಚಿಯಾನಿಟಿಯಿಂದ ಎತ್ತಿ ತಂದ ಹಲವಾರು ಕಾನೂನುಗಳಲ್ಲಿ ಅಡಲ್ಟ್ರೀ ಕೂಡಾ ಒಂದು. ಈ ಕಾನೂನು ವಿವಾಹೇತರ ಸಂಬಂಧವನ್ನು ಅಪರಾಧವನ್ನಾಗಿ ಕಾಣುವ ಕಾನೂನಾಗಿತ್ತು. ವಿವಾಹೇತರ ಸಂಬಂಧದಲ್ಲಿ ಮಹಿಳೆ ಹಾಗೂ ಪುರುಷ ಪರಸ್ಪರ ಒಪ್ಪಂದದಿಂದ ತೊಡಗಿದ್ದರೆ, ಈ ಕಾನೂನಿನ ಅಡಿಯಲ್ಲಿ ಅವರನ್ನು ಶಿಕ್ಷಿಸಲಾಗುತ್ತಿತ್ತು. ಪುರುಷನು ಒತ್ತಾಯಿಸಿದ್ದರೆ ಅದು ಅತ್ಯಾಚಾರವೆಂದು ಪರಿಗಣಿಸಲಾಗುತ್ತಿತ್ತು. ಈ ಕಾನೂನು ಮುಂಚೆ ಬ್ರಿಟೀಷರಲ್ಲಿ ಇತ್ತು. ಅದು ಭಾರತಕ್ಕೂ ಬಂದಿತು.
ಯುರೋಪಿನಲ್ಲಿ ಪ್ರೊಟೆಸ್ಟಂಟ್ ಕ್ರಿಶ್ಚಿಯಾನಿಟಿಯ ವಿಚಾರಗಳು ಪಸರಿಸಿದಂತೆ ಇದನ್ನು ಅಪರಾಧವನ್ನಾಗಿ ನೋಡಬಾರದು ಹಾಗೂ ಅವರವರ ಖಾಸಗೀ ಆಯ್ಕೆಯನ್ನಾಗಿ ಕಾಣಬೇಕು ಎಂಬ ನಿರ್ಧಾರಕ್ಕೆ ಅಲ್ಲಿನ ಸರ್ಕಾರಗಳು ಬಂದವು ಹಾಗೂ ಈ ಕಾನೂನನ್ನು ರದ್ದುಪಡಿಸಿಕೊಂಡವು. ಎಲ್ಲದರಲ್ಲೂ ಪಾಶ್ಚಿಮಾತ್ಯರನ್ನೇ ಅನುಸರಿಸುವ ನಮ್ಮ ಸಂವಿಧಾನ, ಸರ್ಕಾರ ಹಾಗೂ ನ್ಯಾಯಾಲಯಗಳಲ್ಲಿ ಪ್ರೊಟೆಸ್ಟಂಟ್ ವಿಚಾರಗಳು ಪಸರಿಸಿದಂತೆ ಈ ಕಾನೂನು ಇಲ್ಲಿಯೂ ರದ್ದಾಯಿತು. ಆದರೆ ಭಾರತೀಯ ಜನಸಾಮಾನ್ಯರಿಗೆ ಈ ರೀತಿಯ ಕಾನೂನು ಇದೆ ಎಂಬುದರ ಅರಿವೂ ಅಷ್ಟಕ್ಕಷ್ಟೇ ಇತ್ತು.
ಪ್ರಪಂಚದ ಎಲ್ಲ ಸಮಾಜಗಳಂತೇ ನಮ್ಮ ದೇಶದ ಸಮಾಜಗಳಲ್ಲಿಯೂ ವಿವಾಹೇತರ ಸಂಬಂಧಗಳು ಕದ್ದು ಮುಚ್ಚಿ ನಡೆಯುತ್ತ ಬಂದಿವೆ. ಆದರೆ ಹಾಗೆ ಮಾಡುವವರು ಈ ಕಾನೂನಿಗೆ ಹೆದರಿಕೊಂಡು ಕದ್ದು ಮುಚ್ಚಿ ಸಂಬಂಧ ಇಟ್ಟುಕೊಳ್ಳುತ್ತಿರಲಿಲ್ಲ. ಅದಕ್ಕೆ ಕಾರಣವೇ ಬೇರೆ. ಹಾಗೆಯೇ ದಾಂಪತ್ಯವ್ರತಕ್ಕೆ ನಿಷ್ಠರಾಗಿ ಆದರ್ಶ ಸತಿಪತಿಗಳಾಗಿ ಬದುಕಿದವರಿಗೂ ನಮ್ಮ ಸಮಾಜಗಳಲ್ಲಿ ಕೊರತೆಯಿಲ್ಲ. ಅವರೇನೂ ಈ ಕಾನೂನನ್ನು ಪಾಲಿಸಬೇಕು ಎಂಬ ಕಾರಣಕ್ಕೆ ದಾಂಪತ್ಯವ್ರತಕ್ಕೆ ನಿಷ್ಠರಾಗಿ ಬದುಕಿರಲಿಲ್ಲ. ಅವರು ಹಾಗೆ ಬದುಕಿದ್ದಕ್ಕೂ ಕಾರಣವು ಬೇರೆಯೇ.
ಹೀಗಾಗಿ ಜನರಿಗೆ ಅಷ್ಟಾಗಿ ಪರಿಚಯವೇ ಇರದ ಕಾನೂನೊಂದನ್ನು ತೆಗೆದು ಹಾಕಿದ ಮಾತ್ರಕ್ಕೆ ಸಮಾಜವು ಹಾಳಾಗಿ ಹೋಗುತ್ತದೆ ಎನ್ನುವದು ಸಂಪೂರ್ಣ ಸತ್ಯವಲ್ಲ. ಆದರೆ ಈಗಿನ ಸಮಾಜವು ಎತ್ತ ಸಾಗುತ್ತಿದೆ ಎಂಬ ಹಿರಿಯರ ಕಳಕಳಿಯನ್ನೂ ಕೂಡ ಸಂಪೂರ್ಣವಾಗಿ ತೆಗೆದು ಹಾಕಲು ಬರುವದಿಲ್ಲ. ಪಶ್ಚಿಮದಲ್ಲಿ ಈ ಸಂಬಂಧಗಳನ್ನು ಹೇಗೆ ನೋಡಲಾಯಿತು ಎಂಬುದಕ್ಕಿಂತ ನಮ್ಮ ಪೂರ್ವಜರು ಈ ಸಂಬಂಧಗಳನ್ನು ಹೇಗೆ ವಿಶ್ಲೇಷಿಸಿದರು ಎಂಬುದನ್ನು ಗಮನಿಸಿದರೆ ಇವೆಲ್ಲಕ್ಕೂ ಉತ್ತರ ದೊರಕಬಹುದು.
ಬುದ್ಧಿಜೀವಿಗಳ ಐಡಿಯಾಲಜಿ ಹಾಗೂ ಭಾರತೀಯ ಸಾಧಕರ ಸಹಜತರ್ಕ
– ವಿನಾಯಕ ಹಂಪಿಹೊಳಿ
“ಕಡಲೆಯು ಬಡವರ ಗೋಡಂಬಿ” ಎಂಬ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಇದರ ಅರ್ಥವೇನು ಎಂಬುದು ಏನೂ ಕಲಿಯದ ಮನುಷ್ಯನಿಗೂ ಬೇಗನೇ ಅರ್ಥವಾಗುತ್ತದೆ. ಈ ಮಾತನ್ನು ನಮ್ಮ ಅಜ್ಜನಿಗೋ, ಅಜ್ಜಿಗೋ ಹೇಳಿ, ಇದರ ಅರ್ಥವೇನು ಎಂದು ಕೇಳಿದರೆ ಅವರು ಏನು ಹೇಳಬಹುದು? “ಗೋಡಂಬಿಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆಯೋ, ಆ ಪ್ರಯೋಜನವನ್ನು ಕಡಲೆಯಿಂದಲೂ ಪಡೆಯಬಹುದು; ಅದೂ ಕೂಡ ಕಡಿಮೆ ಖರ್ಚಿನಲ್ಲಿ.” ಎಂಬ ವಿವರಣೆ ಅವರಿಂದ ಬರಬಹುದು.
ಈಗ ನಾವು ನಮ್ಮ ಹಿರಿಯರ ಬಳಿ, “ಈ ಮಾತಿನಲ್ಲಿ ಬಹಳ ಗಹನ ಅರ್ಥವಿದೆ, ಇದು ಗೋಡಂಬಿಯ ಶ್ರೇಷ್ಠತೆಯನ್ನು ಧಿಕ್ಕರಿಸಿ, ಆಹಾರಗಳೆಲ್ಲವೂ ಸಮಾನ ಎಂಬುದನ್ನು ಸಾರುವ ಅರ್ಥವು ಇದರಲ್ಲಿ ಅಡಗಿದೆ” ಎಂದರೆ ಅವರಿಗೇನು ಅರ್ಥವಾಗಲು ಸಾಧ್ಯ? “ಏನೋಪ್ಪಾ! ಅಷ್ಟೆಲ್ಲ ಗೊತ್ತಿಲ್ಲ” ಎಂದು ನುಣುಚಿಕೊಳ್ಳುತ್ತಾರೆ. ಆಗ ನಮಗೆ “ನಮ್ಮ ಪೂರ್ವಜರಲ್ಲಿ ತಾರ್ಕಿಕ ಸಾಮರ್ಥ್ಯವೇ ಇರಲಿಲ್ಲ. ತರ್ಕಮಾಡಿ ವಿಚಾರಿಸುವ ಬುದ್ಧಿಯೇ ಇಲ್ಲದೇ ಮೌಢ್ಯದಲ್ಲಿ ಇದ್ದರು. ತರ್ಕಬದ್ಧವಾಗಿ ಯೋಚಿಸುವದನ್ನು ನಾವು ರೂಢಿಸಿಕೊಂಡು ಮೌಢ್ಯದಿಂದ ಹೊರಬರಬೇಕು.” ಎಂದೆಲ್ಲ ಭಾವಿಸುತ್ತೇವೆ. ಮತ್ತಷ್ಟು ಓದು
ಹಿಂದೂಧರ್ಮದಿಂದ ಹೊರಹೋಗುವುದು ಎಂದರೇನು?
– ರಾಕೇಶ್ ಶೆಟ್ಟಿ
ಅರ್ಧ ಸೌಟು ಲಾರ್ಡ್ ಕರ್ಜನ್,ಒಂದು ಹಿಡಿಯಷ್ಟು ನೆಹರೂ-ಜಿನ್ನಾ ಮಿಶ್ರಣಕ್ಕೆ ಅರ್ಧ ಗ್ಲಾಸು ತುಘಲಕ್-ಟಿಪ್ಪು ಎಂಬ ದ್ರಾವಣ ಬೆರೆಸಿದರೇ ಸಿದ್ದರಾಮಯ್ಯ ತಯಾರಾಗಿಬಿಡುತ್ತಾರೆ. ಲಾರ್ಡ್ ಕರ್ಜನ್ ಸಾಧನೆ ಬಂಗಾಳ ವಿಭಜನೆಯದ್ದು. ಭಾರತ ವಿಭಜನೆಯ ಸಾಧನೆ ಜಿನ್ನದ್ದಾದರೂ,ಕಾಂಗ್ರೆಸ್-ನೆಹರೂ ಯೋಗದಾನವನ್ನು ಮರೆಯುವಂತಿಲ್ಲವಲ್ಲ.ಅದೇ ಸಾಲಿಗೆ ಸೇರುವುದು ಹಿಂದೂ ವಿಭಜನೆ ಮಾಡಿದ ಸನ್ಮಾನ್ಯ ಸಿದ್ದರಾಮಯ್ಯ. ಕರ್ಜನ್ ಬಂಗಾಳ ವಿಭಜನೆಗೆ ಕೈ ಹಾಕಿದ್ದು ಮತೀಯ ಆಧಾರದ ಮೇಲೆ,ಕರ್ಜನ್ ಹಾದಿಯನ್ನೇ ದಾರಿದೀಪವಾಗಿಸಿಕೊಂಡವ ಜಿನ್ನಾ,ದೇಶವನ್ನೇ ಮತೀಯವಾಗಿ ವಿಭಜಿಸಿದರು.ಇಬ್ಬರೂ ನೆಮ್ಮದಿಯಿಂದಿದ್ದ ಸಮಾಜವನ್ನು ವಿಭಜಿಸಿದ್ದು ಅಧಿಕಾರಕ್ಕಾಗಿ. ಈಗ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಮತ್ತವರ ಸಚಿವರು ವೀರಶೈವ-ಲಿಂಗಾಯಿತ ವಿಭಜನೆ ಮಾಡಿದ್ದು ಚುನಾವಣೆ ಗೆಲ್ಲಬೇಕೆಂಬ ಏಕೈಕ ಕಾರಣಕ್ಕಾಗಿ.ರಾಜಕೀಯ ಕಾರಣದಾಚೆಗೆ ಈ ವಿಭಜನೆಯಲ್ಲಿರುವುದು ವ್ಯಾವಹಾರಿಕ ಕಾರಣಗಳು, ಅಲ್ಪಸಂಖ್ಯಾತ ಬ್ಯಾಡ್ಜಿನಡಿ ಸಿಗುವ ಸೌಲಭ್ಯಗಳ ಆಧಾರವಷ್ಟೇ.ರಾಜಕೀಯ,ವ್ಯಾವಹಾರಿಕ ಕಾರಣಗಳಿಗಿಂತ , ಈ ವಿಷಯದ ವೈಚಾರಿಕ ಆಯಾಮದ ಬಗ್ಗೆ ಗಮನಹರಿಸುವುದು ಈ ಲೇಖನದ ಉದ್ದೇಶ.
ಲಿಂಗಾಯಿತರು “ಹಿಂದೂ ಧರ್ಮ” ಭಾಗವಲ್ಲ,ಅವರದ್ದು ಪ್ರತ್ಯೇಕ “ಧರ್ಮ” ಎಂದು ನಡೆಯುತ್ತಿರುವ ಈ ಚರ್ಚೆಯಲ್ಲಿ ಮುಖ್ಯವಾಗುವುದು ಹಿಂದೂ+ಧರ್ಮ ಪದಗಳು. ಒಂದು ಉದಾಹರಣೆಯ ಮೂಲಕ ಈ ಚರ್ಚೆಯೊಳಗೆ ಹೋಗೋಣ :ಶಾಲಾ ಪಠ್ಯವೊಂದರಲ್ಲಿ “ಭಾರತ ವೈವಿಧ್ಯಮಯ ದೇಶ.ಇಲ್ಲಿ ಹಿಂದೂ,ಜೈನ,ಬೌದ್ಧ,ಸಿಖ್,ಇಸ್ಲಾಂ,ಕ್ರಿಶ್ಚಿಯಾನಿಟಿ, ಪಾರ್ಸಿ (ಮುಂದೆ ಲಿಂಗಾಯತ ?) ಹೀಗೆ ಬಹಳಷ್ಟು ಧರ್ಮಗಳಿವೆ” ಎಂಬ ಪಾಠವನ್ನು ಕೇಳಿದ ವಿದ್ಯಾರ್ಥಿಯೊಬ್ಬ ಶಾಲೆ ಮುಗಿಸಿಕೊಂಡು ಹೊರಗೆ ಬಂದಾಗ,ಅವನಿಗೆ ಎದುರಾದ ಭಿಕ್ಷುಕನೊಬ್ಬ “ಧರ್ಮ ಮಾಡಪ್ಪ” ಅಂತಾನೇ.ಆಗ ಆ ಪಾಪದ ಹುಡುಗನಿಗೆ “ತರಗತಿಯಲ್ಲಿ ಮೇಷ್ಟ್ರು ಹೇಳಿದ ಅಷ್ಟೊಂದು ವೈವಿಧ್ಯಮಯ “ಧರ್ಮ”ಗಳಲ್ಲಿ ಯಾವ ಧರ್ಮವನ್ನು ಈ ಭಿಕ್ಷುಕನಿಗೆ ಮಾಡಬೇಕು? ಅಷ್ಟಕ್ಕೂ ಧರ್ಮ ಮಾಡುವುದೆಂದರೇನು?” ಎಂಬಿತ್ಯಾದಿ ಪ್ರಶ್ನೆಗಳು ಕಾಡಿದರೆ,ನಮ್ಮ ಬುದ್ಧಿಜೀವಿಗಳ ಬಳಿ ಆ ಹುಡುಗನ ಪ್ರಶ್ನೆಗೆ ಉತ್ತರವಿದೆಯೇ?
ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಯಾರು ಗೊತ್ತೇ CM ಸಿದ್ದರಾಮಯ್ಯನವರೇ?
– ರಾಕೇಶ್ ಶೆಟ್ಟಿ
ಒಂದು ಸುಳ್ಳನ್ನು ಸತ್ಯವಾಗಿಸಲು ಏನು ಮಾಡಬೇಕು? ಮತ್ತೊಂದು,ಮಗದೊಂದು ಸುಳ್ಳಿನ ಸೌಧವನ್ನು ಕಟ್ಟುತ್ತಾ ಹೋಗಬೇಕು. ರಾಜ್ಯದ ತುಘಲಕ್ ದರ್ಬಾರಿನಲ್ಲಿ ನಡೆಯುತ್ತಿರೋದು ಅದೇ. ಶಾಂತವಾಗಿದ್ದ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಮೊದಲು ಕೈಹಾಕಿದ್ದು ಟಿಪ್ಪು ಯುನಿವರ್ಸಿಟಿ ನಿರ್ಮಾಣದ ಯೋಜನೆಯ ಮೂಲಕ. ತೀವ್ರ ಪ್ರತಿರೋಧ ಬಂದ ನಂತರ ಅದು ಮೂಲೆ ಸೇರಿತ್ತು. ಸುಲ್ತಾನ್ ಸಿದ್ಧರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ, ಮತ್ತೆ ಟಿಪ್ಪುವಿನ ಘೋರಿ ತೆಗೆಯಲು ನಿರ್ಧರಿಸಿದರು.ಬದುಕಿದ್ದಾಗಲೇ ಲಕ್ಷಾಂತರ ಜನರ ಮಾರಣಹೋಮ,ಮತಾಂತರ ಮಾಡಿದವನ ಆತ್ಮ ಶತಮಾನಗಳ ನಂತರ ಹೊರ ಬಂದರೆ ಸುಮ್ಮನಿದ್ದೀತೆ? ಮಡಿಕೇರಿಯಲ್ಲಿ ಟಿಪ್ಪು ಆಧುನಿಕ ಸೈನಿಕರಿಗೆ ಕುಟ್ಟಪ್ಪ ಬಲಿಯಾದರು. ಕಳೆದ ಮೂರು ವರ್ಷಗಳಿಂದ ನವೆಂಬರ್ ತಿಂಗಳು ಹತ್ತಿರ ಬಂದರೆ, ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗುತ್ತಿದೆ. ಟಿಪ್ಪು ಸುಲ್ತಾನನಿಂದ ಹಿಡಿದು ಸಿದ್ಧರಾಮಯ್ಯನವರವರೆಗೂ ಈ ಭೀತಿಯ ವಾತಾವರಣ ಸೃಷ್ಟಿ ನಿಂತಿಲ್ಲ.ಸಜ್ಜನರ ಜಯಂತಿ ಮಾಡುತ್ತೇವೆಂದರೆ ಈ ನೆಲದ ಜನ ಆತನ ಜಾತಿ,ಧರ್ಮದ ಲೆಕ್ಕವಿಡದೆ ಸಂಭ್ರಮಿಸುತ್ತಾರೆ. ಸಂತ ಶಿಶುನಾಳ ಶರೀಫಜ್ಜ ನಮ್ಮ ಪಾಲಿಗೆ “ಸಂತ’ನಾಗಿಯೇ ಮುಖ್ಯವಾಗುತ್ತಾನೆಯೇ ಹೊರತು, ಷರೀಫ್ ಅನ್ನುವ ಕಾರಣಕ್ಕಲ್ಲ. ಇಂತಹ ಸೌಹಾರ್ದಕ್ಕೆ ಕೊಳ್ಳಿಯಿಟ್ಟವರು ಸಿದ್ಧರಾಮಯ್ಯನವರು. ಟಿಪ್ಪುವೆಂಬ ಮತಾಂಧನನ್ನು, ಸತ್ಯಸಂಧ,ಜನಾನುರಾಗಿ ಅಂತೆಲ್ಲ ಬಿಂಬಿಸಲು ಹೊರಟು ನಿಂತರು. ಉಂಡ ಮನೆಗೆ ದ್ರೋಹ ಬಗೆಯುವ ಬುದ್ಧಿಜೀವಿಗಳ ಸುಳ್ಳು ಇತಿಹಾಸದ ನಡುವೆ ಅವಿತುಕೊಂಡು, ಟಿಪ್ಪು ಸುಲ್ತಾನ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಎಂದು ಖುದ್ಧು ಕರ್ನಾಟಕ ಸರ್ಕಾರವೇ ನಾಚಿಕೆ ಬಿಟ್ಟು ಸುಳ್ಳು ಜಾಹಿರಾತು ನೀಡಿತು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅದನ್ನೇ ಟ್ವೀಟು ಮಾಡಿದರು.
ಹೌದೇ? ನಿಜವಾಗಿಯೂ ಟಿಪ್ಪು ಸುಲ್ತಾನ ಮೊದಲ ಸ್ವಾತಂತ್ರ್ಯ ಹೋರಾಟಗಾರನೇ? ಆತನೊಬ್ಬ ರಾಜನಲ್ಲವೇ? ರಾಜನೊಬ್ಬ ಪರಕೀಯರೊಂದಿಗೆ ಹೋರಾಡಿದ್ದನ್ನೇ ಸ್ವಾತಂತ್ರ್ಯ ಸಂಗ್ರಾಮವೆನ್ನುವುದಾದರೇ, ಈ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಂತ ಇದ್ದರೆ ಅದು ಉಳ್ಳಾಲದ ರಾಣಿ ಅಬ್ಬಕ್ಕ ಮಾತ್ರವೇ.ರಾಣಿ ಅಬ್ಬಕ್ಕ ಪೋರ್ಚುಗೀಸರೊಂದಿಗೆ ಯುದ್ಧಕ್ಕಿಳಿದಾಗ, ಟಿಪ್ಪು ಸುಲ್ತಾನ ಬಿಡಿ ಅವರಪ್ಪ ಹೈದರನೇ ಹುಟ್ಟಿರಲಿಲ್ಲ.ಟಿಪ್ಪುವನ್ನು ಹಾಡಿ ಹೊಗಳಿದರೆ ಮುಸ್ಲಿಮರ ವೋಟು ಬುಟ್ಟಿಯಲ್ಲಿ ಬಂದು ಬೀಳುತ್ತದೆ. ರಾಣಿ ಅಬ್ಬಕ್ಕ ಮತ್ತವರ ವೀರ ಮೊಗವೀರ ಪಡೆಯ ಕತೆ ಹೇಳಿದರೆ ಸಿದ್ಧರಾಮಯ್ಯನವರಿಗೇನು ಲಾಭ ಹೇಳಿ? ಹಾಗಾಗಿಯೇ ಖುದ್ದು ಮುಖ್ಯಮಂತ್ರಿ ಮತ್ತವರ ರಾಜ್ಯ ಸರ್ಕಾರ ಇತಿಹಾಸಕ್ಕೆ ಅಪಚಾರವೆಸಗಿರುವುದು.ಟಿಪ್ಪು ಸುಲ್ತಾನ, ಸುಲ್ತಾನ್ ಸಿದ್ಧರಾಮಯ್ಯನವರ ಬಗ್ಗೆ ಬರೆದು ಸಮಯ ವ್ಯರ್ಥ ಮಾಡುವ ಬದಲು, ಉಳ್ಳಾಲದ ವೀರರಾಣಿ ಅಬ್ಬಕ್ಕನ ಬಗ್ಗೆ ಹೇಳುತ್ತೇನೆ. ಆ ನಂತರ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಪಟ್ಟ ಯಾರಿಗೆ ದಕ್ಕಬೇಕೆನ್ನುವುದನ್ನು ಓದುಗರೇ ನಿರ್ಧರಿಸಲಿ…
ಸ್ವಾತಂತ್ರ್ಯದ ದೀಪ ಹಚ್ಚಿದ ಮೊದಲ ಭಾರತದ ನಾರಿಯ ನೆನೆಯುತ್ತ… ಮತ್ತಷ್ಟು ಓದು
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ಈ ಚರ್ಚೆಯಲ್ಲಿ ನಾನು ದೆಹಲಿ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ರಾಜ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಶ್ರೀಮತಿ ಮೀನಾಕ್ಷಿ ಜೈನ್ರೊಂದಿಗೆ ಅವರ ಕೃತಿಗಳ ಬಗ್ಗೆ ವಿಚಾರಮಾಡಲಿದ್ದೇನೆ. ನಾನು ಶ್ರೀಮತಿ. ಮೀನಾಕ್ಷಿ ಜೈನ್ರನ್ನು ಸುಮಾರು ಎರಡು ದಶಕಗಳಿಂದ ಬಲ್ಲೆ. ಹಾಗೂ ಅವರನ್ನು ಇಂದಿನ ಭಾರತದಲ್ಲಿ ಒಬ್ಬ ಇತಿಹಾಸ ಮತ್ತು ರಾಜಕೀಯ ವಿಷಯಗಳ ಉತ್ತಮ ವಿದ್ವಾಂಸರೆಂದು ಗೌರವಿಸುತ್ತೇನೆ. ಅವರು ದೆಹಲಿಯಲ್ಲಿ ಶಲ್ಡನ್ ಪೊಲ್ಲಾಕ್ನ್ನು ಕುರಿತು ನಡೆದ ೨ನೇ ಸ್ವದೇಶೀ ಇಂಡಾಲಜಿ ಸಮ್ಮೇಳನದಲ್ಲಿ ಭಾಗವಹಿಸಿ, ಒಂದು ಅದ್ಭುತ ಲೇಖನವನ್ನು ಪ್ರಸ್ತುತಪಡಿಸಿದ್ದರು. ಅವರು ಮತ್ತು ನನ್ನಲ್ಲಿ ಇರುವ ಒಂದು ಸಾಮಾನ್ಯ ಅಂಶವೆಂದರೆ ಇಬ್ಬರೂ ನಮ್ಮೊಡನೆ ವಾದ ಮಾಡುವ, ನಮ್ಮನ್ನು ಉಪೇಕ್ಷೆ ಮಾಡುವ ಅಥವಾ ನಮ್ಮ ಹೆಸರೆತ್ತಿ ದೂಷಿಸುವ ಭಾರತೀಯ ಎಡಪಂಥದವರನ್ನು ಟೀಕಿಸಿದ್ದೇವೆ. ಕಳೆದ ಅನೇಕ ವರ್ಷಗಳ ಕಾಲ ಅವರ ಸಂಪರ್ಕವಿರಲಿಲ್ಲ, ಹಾಗಾಗಿ ಈ ಅವಕಾಶವು ನಮಗೆ ಬಹಳ ದಿನಗಳ ವಿಚಾರ ವಿನಿಮಯಕ್ಕೆ ಒದಗಿಬಂದಿದೆ ಎಂದು ತಿಳಿದಿದ್ದೇನೆ. ನಾವು ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ, ಅಯೋಧ್ಯೆ-ಬಾಬರಿ ಮಸೀದಿಯ ವಿವಾದ, ’ಸತಿ’ ಪದ್ಧತಿಯ ಬಗ್ಗೆ ಇರುವ ತಪ್ಪು ತಿಳುವಳಿಕೆಗಳು, ಮೂರ್ತಿಭಂಜನೆ ಮತ್ತು ಸ್ವದೇಶೀ ಇಂಡಾಲಜಿಯ ಸಂಶೋಧನಾ ವಲಯ ಇತ್ಯಾದಿ ಹಲವಾರು ವಿಚಾರಗಳನ್ನು ಚರ್ಚಿಸಿದೆವು.
ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ:
ಭಾರತೀಯ ಶಿಕ್ಷಣವಲಯದಲ್ಲಿ ಬುದ್ಧಿವಂತರಿಗೆ ನೀಡುವ ಪ್ರೋತ್ಸಾಹಧನದ ವಿಚಾರವಾಗಿ ಚರ್ಚಿಸುವಾಗ ಎಡಪಂಥದ ಪ್ರಬಲ ವಿದ್ವಾಂಸರಾದ ಇರ್ಫಾನ್ ಹಬೀಬ್ ಮತ್ತು ರೋಮಿಲಾ ಥಾಪರ್ರ ಅಡಿಯಲ್ಲಿ ಶಿಕ್ಷಣವಲಯದಲ್ಲಿ ಉಸಿರುಕಟ್ಟಿಸುವ ವಾತಾವರಣವು ಇತ್ತು ಎಂದು ಅವರು ಅಭಿಪ್ರಾಯಪಟ್ಟರು. ಅವರು ಶಿಕ್ಷಣವಲಯದಲ್ಲಿ ಸಹಾಯಧನವನ್ನು ನೀಡುವ ಎಲ್ಲ ಸಂಸ್ಥೆಗಳ ಮೇಲೆಯೂ ಮತ್ತು ಸಂಶೋಧನೆ ಮಾಡಲು ಬರುವ ಎಲ್ಲ ವಿದ್ಯಾರ್ಥಿಗಳೂ ಇವರ ಅಡಿಯಲ್ಲಿ, ಇವರ ದೃಷ್ಟಿಕೋನದ ಪ್ರಕಾರವೇ ಕೆಲಸ ಮಾಡುವಂತೆ ತಮ್ಮ ಸಂಪೂರ್ಣ ನಿಯಂತ್ರಣವನ್ನು ಚಲಾಯಿಸಿಕೊಂಡಿದ್ದರು. ಹೀಗಾಗಿ ಇವರ ವಿಚಾರಗಳನ್ನು ಬೆಂಬಲಿಸದವರಿಗೆ ಅಥವಾ ಬೇರೆ ಆಲೋಚನೆಯ ಧಾಟಿ ಹೊಂದಿದವರಿಗೆ ಯಾವ ಇತಿಹಾಸಕಾರನಾಗಿ ಅಥವಾ ವಿದ್ವತ್ತಿನಲ್ಲಿಯೂ ತಮ್ಮ ಗುರುತನ್ನು ಉಳಿಸಲು ದುಸ್ತರವಾಗುತ್ತಿತ್ತು. ಯಾರಾದರೂ ವಿಭಿನ್ನವಾದ ಅಥವಾ ವೈರುಧ್ಯದ ದೃಷ್ಟಿಕೋನವನ್ನು ಹೊಂದಿದ್ದರೆ ಅವರು ತಮ್ಮದೇ ಆದ ಮಾರ್ಗವನ್ನು ರೂಪಿಸಿಕೊಳ್ಳ ಬೇಕಾಗಿತ್ತು. ಆ ಮಾರ್ಗವು ಏಕಾಂಗಿಯಾಗಿದ್ದು ಅವರು ತಮ್ಮಷ್ಟಕ್ಕೆ ತಾವೇ ನಡೆಯಬೇಕಾಗಿತ್ತು.
ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1
– ದೇವು ಹನೆಹಳ್ಳಿ,
ಬಾರಕೂರು, ಉಡುಪಿ
ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ
ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೋ?
– ಅಲ್ಲಮಪ್ರಭು
ಲಿಂಗಾಯತ, ವೀರಶೈವ ‘ಸ್ವತಂತ್ರಧರ್ಮ’ ಘೋಷಣೆ, ಮಾನ್ಯತೆ ಇತ್ಯಾದಿಗಳ ಕುರಿತು ವ್ಯಾಪಕ ಚರ್ಚೆ, ಗುದ್ದಾಟಗಳನ್ನು ಪ್ರಸ್ತಾಪಿಸುವ ಮೊದಲು ‘ನಾನು ಯಾರು’ ಎಂಬುದನ್ನು ಸ್ಪಷ್ಟಗೊಳಿಸುವುದು ಅಗತ್ಯ ಮತ್ತು ಒಳಿತು. ಕಳೆದೆರಡು ಸಾವಿರ ವರ್ಷಗಳಿಂದ ‘ನಾನ್ಯಾರು’ ಎಂಬುದು ನನ್ನ ಸಮಸ್ಯೆಯಾಗಿರಲಿಲ್ಲ. ಯಾಕೆಂದರೆ ನಾನು ಅಜ್ಞಾನಿ, ಮೂಢ. ಅದು ಯಾರಿಗೆ ಸಮಸ್ಯೆಯಾಯಿತೋ ಅವರೇ ನೀಡಿದ ವ್ಯಾಖ್ಯೆಗಳನ್ನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅದು ಅನಿವಾರ್ಯ. ಹೌದು, ನಾನು ಪೇಗನ್,ಕಾಫಿರ, ಹೀದನ್. ಅನಂತರ ಹಿಂದೂ ಎಂದರು. “ಹಿಂದೂ” ಎನ್ನಿಸಿಕೊಳ್ಳುವುದು ಕೂಡಾ ನನ್ನ ಅಗತ್ಯವಾಗಿರಲಿಲ್ಲ, ಕೋರಿಕೆಯಾಗಿರಲಿಲ್ಲ. (ಕುರಿಯನ್ನು ‘ಕುರಿ’ ಎನ್ನುವುದು ಕುರಿಯ ಅಗತ್ಯವೇನೂ ಅಲ್ಲವಲ್ಲ?!) ಆದರೂ ಒಪ್ಪಿಕೊಳ್ಳುತ್ತೇನೆ. ಈಗ ಎಸ್.ಎಂ. ಜಾಮದಾರ್, ಗೊ.ರು.ಚ., ರಂಜಾನ್ ದರ್ಗಾ, ಮಾತೆ ಮಹಾದೇವಿ, ಮೀನಾಕ್ಷಿ ಬಾಳಿ ಮೊದಲಾದ ಶರಣಶರಣೆಯರು, ಅಸಂಖ್ಯ ಮಠಾಧೀಶರು, ಸಿದ್ಧರಾಮಯ್ಯನವರ ಸರಕಾರದ ಮಂತ್ರಿಗಳು, ಚಿಂತಕರು, ಪ್ರಗತಿಪರರು, ಪತ್ರಕರ್ತರು, ವಿಚಾರವಾದಿಗಳು, ಬುದ್ಧಿಜೀವಿಗಳು, liberals ಮುಂತಾದವರು ಒಂದು ಕೈಯಲ್ಲಿ ನನ್ನ ಕತ್ತು ಹಿಡಿದು, ಇನ್ನೊಂದು ಕೈಯಲ್ಲಿ ಕತ್ತಿ ಹಿಡಿದು ‘ಭವಿ’ ಎಂದು ಕರೆಯುತ್ತಿದ್ದಾರೆ. ನಾನು ಅಜ್ಞಾನಿಯಲ್ಲವೇ? ಮಹಾಪ್ರಸಾದವೆಂಬೆನು! (ಭವಿ ಎಂದರೆ ಇಷ್ಟಲಿಂಗವನ್ನು ಪೂಜಿಸದವನು; ಲೌಕಿಕವನ್ನು, ಅಂದರೆ ಭವವನ್ನು ನೆಚ್ಚಿ ಮೋಕ್ಷ ಪಡೆಯಲಾರದವನು; ಪಾಪಿ ಇತ್ಯಾದಿ.)
ಸತ್ಯವೆಂದರೆ ಪೇಗನ್, ಹೀದನ್, ಕಾಫಿರ್, ಹಿಂದೂ, ಭವಿ ಎಂಬೆಲ್ಲಾ ಬಿರುದುಗಳಿಗೂ, ಪಾಪಿ, ಅಜ್ಞಾನಿ, ಅವಿಶ್ವಾಸಿ, ಕಳ್ಳ, ಮೂರ್ತಿಪೂಜೆ ಮಾಡುವ ಮೂರ್ಖ, ಕಂದಾಚಾರಿ, ಮೂಢ, ಅನಾಚಾರಿ, ಮಿಥ್ಯಾರಾಧಕ ಎಂಬೆಲ್ಲಾ ಪದನಾಮಗಳಿಗೂ ಅಂತಹ ವ್ಯತ್ಯಾಸವೇನೂ ಇಲ್ಲ! ಜತೆಗೆ ವೈಯಕ್ತಿಕವಾಗಿ ನಾನು ನಾಸ್ತಿಕ ಮತ್ತು ನಿರೀಶ್ವರಿ. (ನಿರೀಶ್ವರವಾದಿಯಲ್ಲ.) ಅದು ಕೂಡಾ ಕಳೆದ 2-3 ಸಾವಿರ ವರ್ಷಗಳಿಂದ ನಾನು, ನನ್ನಂತಹ ಅಸಂಖ್ಯ ಪೇಗನ್ನರಿಗೆ ಸಮಸ್ಯೆಯಾಗಿರಲಿಲ್ಲ; ಯಾವ ಪೇಗನ್ನರೂ ನನ್ನನ್ನು ಸಾರ್ವಜನಿಕವಾಗಿ ಸುಡಲಿಲ್ಲ.
ನಾವು ನಮ್ಮ ಅಜ್ಞಾನದಲ್ಲಿ ಸುಖವಾಗಿದ್ದರೂ, ನಮಗೆ ಅವು ಸಮಸ್ಯೆಯಾಗಿ ಕಂಡಿಲ್ಲದಿದ್ದರೂ ‘ಇತರರಿಗೆ’ ಯಾಕೆ ಸಮಸ್ಯೆಯಾದವು? ಇವೆಲ್ಲ ಹಲವು ದಿಕ್ಕಿನಿಂದ ಒಂದಾಗಿ, ಒಂದೊಂದಾಗಿ ಆರಂಭಗೊಂಡವು ಎನ್ನಬಹುದು.
ಸಾವಿನಲ್ಲೂ ಸಂದೇಶ ಬಿಟ್ಟುಹೋದ ರಾಷ್ಟ್ರವಾದದ ದಧೀಚಿ
– ಸಂತೋಷ್ ತಮ್ಮಯ್ಯ
ಆ ಘಟನೆಯನ್ನು ನೆನಪಿಸಿಕೊಳ್ಳುತ್ತಾ ಕೆಲವರು “ಕೊನೆ ಕ್ಷಣಕ್ಕೆ ಅದೊಂದು ಬದಲಾವಣೆ ಆಗದೇ ಹೋಗಿದಿದ್ದರೆ ಜನಸಂಘದ ಕಥೆಯೇ ಬೇರೆ ಇರುತ್ತಿತ್ತು” ಎಂದು ಹೇಳುತ್ತಾರೆ. ಬೇರೆ ಎಂದರೆ ಹೇಗೆ ಎಂದರೆ ಅದಕ್ಕೆ ಉತ್ತರವಿಲ್ಲ. ಹಾಗೆನ್ನುವ ಎಲ್ಲರಲ್ಲೂ ಒಂದು ನಂಬಿಕೆ ಸ್ಪಷ್ಟವಾಗಿದೆ. ಜನಸಂಘ ವ್ಯಕ್ತಿ ಕೇಂದ್ರಿತ ಪಕ್ಷವಲ್ಲ ಎಂದು ಎಲ್ಲರಿಗೂ ತಿಳಿದಿದೆ. ಆದರೂ ಕೂಡಾ ಎಲ್ಲರೂ ಕಥೆ ಬೇರೆಯಾಗಿರುತ್ತಿತ್ತು ಎಂದೇ ಹೇಳುವರು. ಒಂದೇ ಒಂದು ಕ್ಷಣಕ್ಕೆ ಒಂದು ಪಕ್ಷದ ಆಗುಹೋಗುಗಳು ನಿರ್ಧರಿತವಾಗುವುದಿಲ್ಲ ಎಂದು ಅವರೆಲ್ಲರೂ ನಂಬಿದ್ದರೂ ‘ಕಥೆ ಬೇರೆಯಾಗಿರುತ್ತಿತು’ ಎಂಬ ಮಾತನ್ನು ನಿಟ್ಟುಸಿರಿನಿಂದ ಆವರೆಲ್ಲರೂ ಹೇಳದೇ ಇರುವುದಿಲ್ಲ. ದೀನದಯಾಳರ ನಂತರವೂ ಪಕ್ಷ ಅದೇ ತತ್ತ್ವ ಸಿದ್ಧಾಂತಗಳಿಂದ ಮುನ್ನಡೆಯುವುದು ಎಂದು ಅಂದುಕೊಂಡಿದ್ದರೂ ಅವರ ನಂತರ ಜನಸಂಘದಲ್ಲಿ ಏನೋ ಖಾಲಿತನ. ಸಿದ್ಧಾಂತವನ್ನು ಮುನ್ನಡೆಸಲು ದೀನದಯಾಳರಂಥ ವಾಹಕರು ಬೇಕು ಎನ್ನುವ ಚಡಪಡಿಕೆ. ಬೇಸರ, ಗೊಂದಲ, ಅಸಹನೆ. ಹಾಗಾದರೆ ದೀನದಯಾಳರು ಪಕ್ಷಕ್ಕಿಂತ, ಸಿದ್ಧಾಂತಕ್ಕಿಂತ ಮೇಲಾಗಿ ಬೆಳೆದುಬಿಟ್ಟಿದ್ದರೇ ಎಂದರೆ ಅದೂ ಇಲ್ಲ. ರಾಜಕೀಯ ಅವರಿಗೆಂದೂ ಗುರಿಯಾಗಿರಲೇ ಇಲ್ಲ. ಬದಲಿಗೆ ಮಾರ್ಗವಾಗಿತ್ತು. ಕೇವಲ ಒಂದು ಸಾಧನ ಮಾತ್ರವಾಗಿತ್ತು. ಅದುವರೆಗೆ ಭಾರತದಲ್ಲಿ ಏನಿತ್ತೋ ಅದನ್ನೇ ಅವರು ರಾಜಕೀಯ ಪರಿಭಾಷೆಯಲ್ಲಿ ಹೇಳಿದ್ದರು. ಅನುಷ್ಠಾನಕ್ಕೆ ಪ್ರಯತ್ನಿಸಿದ್ದರು. ಹಾಗಾದರೆ ಜನರಿಗೆ ಚಡಪಡಿಕೆ, ಖಾಲಿತನ, ಗೊಂದಲ, ಗೊಣಗುವಿಕೆಗಳು ಊಂಟಾಗಲು ಕಾರಣವೇನು? ಗಟ್ಟಿ ಸಿದ್ಧಾಂತದ ಪಕ್ಷದಲ್ಲೂ ಹೀಗಾಗುತ್ತವೆಯೇ?
ಸಾವು ಸಹಜವಾಗಿರದಿದ್ದರೆ ಎಲ್ಲೆಲ್ಲೂ ಹೀಗಾಗುತ್ತದೆ. ಅವರದ್ದು ಎಂಥವರೂ ಅಲ್ಲಾಡಿಹೋಗುವಂಥಾ ಸಾವು. ಸಾಧಾರಣವಾಗಿ ಸಂಘದವರು ಎಂಥಾ ಸಾವಿಗೂ ಕಣ್ಣೀರು ಹಾಕಲಾರರು. ಆದರೆ ಅಂಥ ಸಂಘದವರೂ ಕಣ್ಣೀರು ಹಾಕಿ ಬಿಕ್ಕಳಿಸಿದ ಸಾವು ದೀನದಯಾಳದ್ದು. ಗುರೂಜಿಯಂಥಾ ಆಧ್ಯಾತ್ಮ ಸಾಧಕರೇ ವಿಚಲಿತರಾಗಿಹೋದ ಸಾವು ದೀನದಯಾಳರದ್ದು. ದೇಶಕ್ಕೆ ದೇಶವೇ ಮಾತಾಡಿಕೊಂಡ ಸಾವು ದೀನದಯಾಳರದ್ದು. ಇಂದಿಗೂ ಉತ್ತರ ಸಿಗದ ಸಾವು ದೀನದಯಾಳರದ್ದು. ಸಾಧಕನ ಬದುಕನ್ನು ಆತನ ಸಾವಿನಲ್ಲಿ ನೋಡಬೇಕೆಂಬ ಮಾತಿದೆ. ಅದನ್ನು ೧೯೬೮ರ ಫೆಬ್ರವರಿ ೧೨ರಂದು ದೇಶ ನೋಡಿತು.
ಇಂದು ದೀನದಯಾಳರ ಜನ್ಮಶತಮಾನೋತ್ಸವ. ಅವರ ಹುಟ್ಟಿದ ದಿನದಂದೇ ಸಾವಿನ ಮಾತನ್ನಾಡಬೇಕು. ಏಕೆಂದರೆ ದೀನದಯಾಳರ ಅಂತಿಮ ಸಂಸ್ಕಾರ ನಡೆದ ನಂತರ ಅಟಲಬಿಹಾರಿ ವಾಜಪೇಯಿಯವರು ಅಂದೇ ಕರೆಕೊಟ್ಟಿದ್ದರು, “ಬನ್ನಿ, ಪಂಡಿತ್ಜಿ ಅವರ ರಕ್ತದ ಒಂದೊಂದು ಹನಿಯನ್ನೂ ಹಣೆಯ ಗಂಧವನ್ನಾಗಿಸಿಕೊಂಡು ನಮ್ಮ ಗುರಿಯತ್ತ ಸಾಗೋಣ. ಅವರ ಚಿತೆಯಿಂದ ಹೊರಬರುತ್ತಿರುವ ಒಂದೊಂದು ಕಿಡಿಯನ್ನು, ಹೃದಯದಲ್ಲಿರಿಸಿಕೊಂಡು ಪರಿಶ್ರಮದ ಪರಾಕಾಷ್ಠೆಯನ್ನು ಹಾಗೂ ಪ್ರಯತ್ನಗಳ ಎಲ್ಲೆಯನ್ನು ತಲುಪೋಣ. ಈ ದಧೀಚಿಯ ಅಸ್ಥಿಗಳ ವಜ್ರಾಯುಧವನ್ನು ತಾಯಾರಿಸಿ ಅಸುರರ ಮೇಲೆ ಆಕ್ರಮಣ ಮಾಡೋಣ ಹಾಗೂ ಪವಿತ್ರ ಭೂಮಿಯನ್ನು ನಿಷ್ಕಂಟಕವನ್ನಾಗಿಸೋಣ”. ಹಾಗಾಗಿ ದೀನದಯಾಳರ ಸಾವು ಸಿದ್ಧಾಂತಿಗಳು ಮರೆಯಬಾರದ ಸಾವು. ಆ ಚಿತೆಯ ಬೆಂಕಿ ಸದಾ ಎದೆಯಲ್ಲಿ ಸುಡುತ್ತಿರಬೇಕಾದ ಉರಿ.