ದಾಸ ಸಾಹಿತ್ಯ ಮಾರುವೇಷದ ಕಾರ್ಯಾಚರಣೆ – ಕನಕದಾಸ ಬಲೆಯೊಳಗೆ ಬಿದ್ದ ಮಿಕ !!!
– ಡಾ. ರೋಹಿಣಾಕ್ಷ ಶಿರ್ಲಾಲು
ಕನ್ನಡ ಉಪನ್ಯಾಸಕರು,ವಿವೇಕಾನಂದ ಕಾಲೇಜು, ಪುತ್ತೂರು
ನಮ್ಮ ಶಾಲಾ ಕಾಲೇಜು ಪಠ್ಯ ಪುಸ್ತಕಗಳು ಹೇಗಿರಬೇಕು ಎನ್ನುವ ಚರ್ಚೆ ಬಹುಕಾಲದಿಂದಲೂ ನಡೆದುಬಂದಿದೆ. ಶಿಕ್ಷಣ ತಜ್ಞರು ಶೈಕ್ಷಣಿಕ ತತ್ವಶಾಸ್ತ್ರದ ಹಿನ್ನೆಲೆಯಲ್ಲಿ , ವಿದ್ಯಾರ್ಥಿಗಳ ಮನೋಭಾವ, ಬದಲಾದ ಕಾಲಮಾನ, ಔದ್ಯೋಗಿಕ ಅವಕಾಶ ಇವೇ ಮೊದಲಾದ ಸಂಗತಿಗಳನ್ನು ಕಣ್ಮುಂದೆ ಇರಿಸಿಕೊಂಡು ಪಠ್ಯಗಳನ್ನು ಸಿದ್ಧ ಮಾಡಬೇಕಾಗುತ್ತದೆ. ಪ್ರಾಥಮಿಕ ಶಾಲಾ ಪಠ್ಯದಿಂದ ತೊಡಗಿ ಸ್ನಾತಕೋತ್ತರರ ಪದವಿಯಂತಹ ಉನ್ನತ ಶಿಕ್ಷಣದ ವರೆಗಿನ ಪಠ್ಯಗಳಿಗೂ ಅದರದ್ದೇ ಆದ ಉದ್ದೇಶ ಮತ್ತು ಗುರಿ ಇರುತ್ತದೆ. ಪಠ್ಯವೊಂದು ಅಂತಿಮವಾಗಿ ಓದುವ ವಿದ್ಯಾರ್ಥಿಗಳ ಆಸಕ್ತಿಯನ್ನು ಹೆಚ್ಚಿಸುವಂತೆಯೂ,ಕುತೂಹಲವನ್ನು ಬೆಳೆಸುವಂತೆಯೂ ಇರಬೇಕು ಎನ್ನುವುದರಲ್ಲಿ ಸಂಶಯವಿಲ್ಲ. ಪಠ್ಯವೊಂದನ್ನು ಓದಿದ ವಿದ್ಯಾರ್ಥಿಯು ಮುಂದೆ ಆ ವಿಷಯದಲ್ಲಿ ಇನ್ನಷ್ಟು ಸಂಗತಿಗಳನ್ನು ಆಸಕ್ತಿಯಿಂದ ಓದುವಂತೆ ಪ್ರೆರೇಪಿಸಬೇಕೇ ವಿನಃ ಅದು ಓದಿನ ಕೊನೆಯಾಗುವಂತೆ ಮಾಡಬಾರದು ಎನ್ನುವುದೂ ಸತ್ಯ. ವಿದ್ಯಾರ್ಥಿಗಳ ಆಲೋಚನೆಯನ್ನು ವಿಸ್ತರಿಸುವಲ್ಲಿ, ಮನಸ್ಸನ್ನು ಇನ್ನಷ್ಟು ಮುಕ್ತವಾಗಿ ಇರಿಸುವಲ್ಲಿ ಪೂರಕವಾಗಿರಬೇಕೇ ಹೊರತು ಅವರ ಆಲೋಚನೆಗಳಿಗೆ ಪೂರ್ಣವಿರಾಮ ಹಾಕಿ ಯಾರೋ ಹೇರಿದ ಚಿಂತನೆಯ ದಾಸ್ಯಕ್ಕೆ ತಳ್ಳಬಾರದು.
ಉದಾಹರಣೆಗೆ,ಪದವಿ ಹಂತದಲ್ಲಿ ಕನ್ನಡ ಸಾಹಿತ್ಯ ವಿಷಯವನ್ನು ಮೇಜರ್ ವಿಷಯವಾಗಿ ಆಯ್ದುಕೊಂಡ ವಿದ್ಯಾರ್ಥಿಗಳಿಗೆ ತಮ್ಮ ಮೂರು ವರ್ಷಗಳ ಪದವಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುವಾಗ ಕನ್ನಡ ಸಾಹಿತ್ಯದ ವಿಸ್ತಾರ, ಆಳ ಅಗಲಗಳನ್ನು ಪರಿಚಯಿಸಿಕೊಳ್ಳುವಂತೆ ಪ್ರಾತಿನಿಧಿಕ ಪಠ್ಯಗಳನ್ನು ಅಭ್ಯಾಸಿಸಲಾಗುತ್ತದೆ. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈ ವಿಷಯವನ್ನು ಅಭ್ಯಾಸ ಮಾಡಿದರೂ ಓದಿದ ಪ್ರಾತಿನಿಧಿಕ ಪಠ್ಯಗಳು ಬೇರೆ ಬೇರೆ ಯಾದರೂ ಅವುಗಳ ನಡುವೆ ಒಂದು ಸಾಮಾನ್ಯ ಸ್ವರೂಪ ಸಮಾನವಾಗಿರುತ್ತದೆ. ಇದಕ್ಕಾಗಿ ಈಗಾಗಲೇ ಒಪ್ಪಿತವಾದ ಮಾದರಿಯೂ ಇದೆ.
ಸಾಹಿತ್ಯ ಪಠ್ಯದ ಭಾಗವೇ ಆಗಿ ಸಾಹಿತ್ಯ ಚರಿತ್ರೆಯನ್ನೂ ಓದುವಾಗ ಈಗಾಗಲೇ ಪ್ರಾಜ್ಞರಿಂದ ರಚನೆಯಾದ ಸಾಹಿತ್ಯ ಚರಿತ್ರೆಯ ಸಂಗ್ರಹರೂಪವನ್ನು ಪಠ್ಯವಾಗಿ ನೀಡಲಾಗುತ್ತದೆ. ಪಠ್ಯ ಪುಸ್ತಕಗಳ ಸಂಪಾದಕರು ಬೇರೆ ಬೇರೆ ಸೆಮಿಸ್ಟರ್ಗಳಿಗೆ ಹಂಚಿಹೋಗುವಂತೆ ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ವಿವಿಧ ಪ್ರಕಾರ, ಸಾಹಿತ್ಯ ರೂಪಗಳ ಉಗಮ ವಿಕಾಸದ ಕುರಿತು ಚರಿತ್ರೆಯನ್ನು ಸಂಗ್ರಹಿಸಿ ನೀಡುತ್ತಾರೆ. ಆ ಮೂಲಕ ಭವಿಷ್ಯದಲ್ಲಿ ವಿದ್ಯಾಭ್ಯಾಸ ಮುಗಿಸಿ ಆಡಳಿತ ಸೇವೆಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳೂ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳ್ಳಲು ರಾಜ್ಯಾದ್ಯಂತ ಒಂದೇ ಮಾದರಿಯ ಚರಿತ್ರೆಯ ಪಠ್ಯಗಳು ಅನುಕೂಲಕರವಾಗಿ ಒದಗಿ ಬರುತ್ತಿತ್ತು. ಸಾಹಿತ್ಯ ಚರಿತ್ರೆ ಎನ್ನುವುದು ವಸ್ತುನಿಷ್ಟವಾಗಿ ಅಧಿಕೃತ ದಾಖಲೆಗಳ ನೆರವಿನಿಂದ ರೂಪುಗೊಳ್ಳುವ ಒಂದು ಶಾಸ್ತ್ರ. ಹಲವು ಮಾದರಿಯ ಸಾಹಿತ್ಯ ಚರಿತ್ರೆ ಕೃತಿಗಳು ನಮ್ಮೆದುರಿಗಿದ್ದರೂ ವಿದ್ಯಾರ್ಥಿಗಳು ತರಗತಿ ಪಠ್ಯವಾಗಿ ಓದಬೇಕಾದ ಚರಿತ್ರೆಯಂತೂ ಅತಿಯಾದ ವಿಶ್ಲೇಷಣೆಯ ಭಾರದಿಂದ ಕುಸಿದು, ಲೇಖಕರ ಸೈದ್ಧಾಂತಿಕ ದೃಷ್ಟಿ ಧೋರಣೆಯಿಂದ ದಾರಿ ತಪ್ಪಿಸುವಂತಿರಬಾರದು. ವಿವಿಧ ಕಾಲಘಟ್ಟದ ಸಾಹಿತ್ಯ ಪ್ರಕಾರಗಳನ್ನು ಅವುಗಳ ಸಾಮಾನ್ಯ ಸ್ವರೂಪ, ಗುಣ ಲಕ್ಷಣ,ಸಾಹಿತ್ಯಿಕ ವೈಶಿಷ್ಟ್ಯ ಮತ್ತು ಆ ಕಾಲಘಟ್ಟದ ಒಂದಷ್ಟು ಮುಖ್ಯರಾದ ಕೃತಿಕಾರರ ಪರಿಚಯವನ್ನು ಇಲ್ಲಿ ನೀಡಬೇಕಾಗುತ್ತದೆ. ಇದು ಹೊಸದಾಗಿ ಓದಿಗೆ ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿ ಯಾವುದೇ ಪೂರ್ವಾಗ್ರಹಗಳಿಲ್ಲದೆ, ತನ್ನದೇ ಅನುಭವ-ನಿಲುವುಗಳಿಂದ ಕೃತಿಗಳನ್ನು ಅಧ್ಯಯನ ಮಾಡಲು ಸಾದ್ಯವಾಗುತ್ತದೆ.ಈ ರೀತಿಯ ಅಭ್ಯಾಸ ನಡೆದಾಗ ಸಾಹಿತ್ಯದ ನಿಷ್ಪಕ್ಷಪಾತ ಗ್ರಹಿಕೆ ಮೌಲ್ಯಮಾಪನಕ್ಕೆ ಸಾದ್ಯವಾಗುತ್ತದೆ. ರಂ.ಶ್ರಿ.ಮುಗಳಿ, ಎಂ.ಎಂ.ಕಲ್ಬುರ್ಗಿ, ಕೀರ್ತಿನಾಥ ಕುರ್ತಕೋಟಿ,ಎಲ್.ಎಸ್.ಶೇಷಗಿರಿರಾವ್ ಮೊದಲಾದವರು ವೈಯಕ್ತಿಕವಾಗಿ, ಬೆಂಗಳೂರು, ಮೈಸೂರು ವಿ.ವಿ.ಗಳು ಸಾಹಿತ್ಯ ಚರಿತ್ರೆಯ ಹಲವು ಸಂಪುಟಗಳನ್ನು ಪ್ರಕಟಿಸಿದ್ದು ವಿದ್ಯಾರ್ಥಿಗಳ ಪಠ್ಯಕ್ಕೆ ಇವುಗಳನ್ನು ಆಕರವಾಗಿ ಬಳಸಿಕೊಳ್ಳಲಾಗುತ್ತಿತ್ತು.
ಹಿಂದೂಧರ್ಮದಿಂದ ಹೊರಹೋಗುವುದು ಎಂದರೇನು?
– ರಾಕೇಶ್ ಶೆಟ್ಟಿ
ಅರ್ಧ ಸೌಟು ಲಾರ್ಡ್ ಕರ್ಜನ್,ಒಂದು ಹಿಡಿಯಷ್ಟು ನೆಹರೂ-ಜಿನ್ನಾ ಮಿಶ್ರಣಕ್ಕೆ ಅರ್ಧ ಗ್ಲಾಸು ತುಘಲಕ್-ಟಿಪ್ಪು ಎಂಬ ದ್ರಾವಣ ಬೆರೆಸಿದರೇ ಸಿದ್ದರಾಮಯ್ಯ ತಯಾರಾಗಿಬಿಡುತ್ತಾರೆ. ಲಾರ್ಡ್ ಕರ್ಜನ್ ಸಾಧನೆ ಬಂಗಾಳ ವಿಭಜನೆಯದ್ದು. ಭಾರತ ವಿಭಜನೆಯ ಸಾಧನೆ ಜಿನ್ನದ್ದಾದರೂ,ಕಾಂಗ್ರೆಸ್-ನೆಹರೂ ಯೋಗದಾನವನ್ನು ಮರೆಯುವಂತಿಲ್ಲವಲ್ಲ.ಅದೇ ಸಾಲಿಗೆ ಸೇರುವುದು ಹಿಂದೂ ವಿಭಜನೆ ಮಾಡಿದ ಸನ್ಮಾನ್ಯ ಸಿದ್ದರಾಮಯ್ಯ. ಕರ್ಜನ್ ಬಂಗಾಳ ವಿಭಜನೆಗೆ ಕೈ ಹಾಕಿದ್ದು ಮತೀಯ ಆಧಾರದ ಮೇಲೆ,ಕರ್ಜನ್ ಹಾದಿಯನ್ನೇ ದಾರಿದೀಪವಾಗಿಸಿಕೊಂಡವ ಜಿನ್ನಾ,ದೇಶವನ್ನೇ ಮತೀಯವಾಗಿ ವಿಭಜಿಸಿದರು.ಇಬ್ಬರೂ ನೆಮ್ಮದಿಯಿಂದಿದ್ದ ಸಮಾಜವನ್ನು ವಿಭಜಿಸಿದ್ದು ಅಧಿಕಾರಕ್ಕಾಗಿ. ಈಗ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಮತ್ತವರ ಸಚಿವರು ವೀರಶೈವ-ಲಿಂಗಾಯಿತ ವಿಭಜನೆ ಮಾಡಿದ್ದು ಚುನಾವಣೆ ಗೆಲ್ಲಬೇಕೆಂಬ ಏಕೈಕ ಕಾರಣಕ್ಕಾಗಿ.ರಾಜಕೀಯ ಕಾರಣದಾಚೆಗೆ ಈ ವಿಭಜನೆಯಲ್ಲಿರುವುದು ವ್ಯಾವಹಾರಿಕ ಕಾರಣಗಳು, ಅಲ್ಪಸಂಖ್ಯಾತ ಬ್ಯಾಡ್ಜಿನಡಿ ಸಿಗುವ ಸೌಲಭ್ಯಗಳ ಆಧಾರವಷ್ಟೇ.ರಾಜಕೀಯ,ವ್ಯಾವಹಾರಿಕ ಕಾರಣಗಳಿಗಿಂತ , ಈ ವಿಷಯದ ವೈಚಾರಿಕ ಆಯಾಮದ ಬಗ್ಗೆ ಗಮನಹರಿಸುವುದು ಈ ಲೇಖನದ ಉದ್ದೇಶ.
ಲಿಂಗಾಯಿತರು “ಹಿಂದೂ ಧರ್ಮ” ಭಾಗವಲ್ಲ,ಅವರದ್ದು ಪ್ರತ್ಯೇಕ “ಧರ್ಮ” ಎಂದು ನಡೆಯುತ್ತಿರುವ ಈ ಚರ್ಚೆಯಲ್ಲಿ ಮುಖ್ಯವಾಗುವುದು ಹಿಂದೂ+ಧರ್ಮ ಪದಗಳು. ಒಂದು ಉದಾಹರಣೆಯ ಮೂಲಕ ಈ ಚರ್ಚೆಯೊಳಗೆ ಹೋಗೋಣ :ಶಾಲಾ ಪಠ್ಯವೊಂದರಲ್ಲಿ “ಭಾರತ ವೈವಿಧ್ಯಮಯ ದೇಶ.ಇಲ್ಲಿ ಹಿಂದೂ,ಜೈನ,ಬೌದ್ಧ,ಸಿಖ್,ಇಸ್ಲಾಂ,ಕ್ರಿಶ್ಚಿಯಾನಿಟಿ, ಪಾರ್ಸಿ (ಮುಂದೆ ಲಿಂಗಾಯತ ?) ಹೀಗೆ ಬಹಳಷ್ಟು ಧರ್ಮಗಳಿವೆ” ಎಂಬ ಪಾಠವನ್ನು ಕೇಳಿದ ವಿದ್ಯಾರ್ಥಿಯೊಬ್ಬ ಶಾಲೆ ಮುಗಿಸಿಕೊಂಡು ಹೊರಗೆ ಬಂದಾಗ,ಅವನಿಗೆ ಎದುರಾದ ಭಿಕ್ಷುಕನೊಬ್ಬ “ಧರ್ಮ ಮಾಡಪ್ಪ” ಅಂತಾನೇ.ಆಗ ಆ ಪಾಪದ ಹುಡುಗನಿಗೆ “ತರಗತಿಯಲ್ಲಿ ಮೇಷ್ಟ್ರು ಹೇಳಿದ ಅಷ್ಟೊಂದು ವೈವಿಧ್ಯಮಯ “ಧರ್ಮ”ಗಳಲ್ಲಿ ಯಾವ ಧರ್ಮವನ್ನು ಈ ಭಿಕ್ಷುಕನಿಗೆ ಮಾಡಬೇಕು? ಅಷ್ಟಕ್ಕೂ ಧರ್ಮ ಮಾಡುವುದೆಂದರೇನು?” ಎಂಬಿತ್ಯಾದಿ ಪ್ರಶ್ನೆಗಳು ಕಾಡಿದರೆ,ನಮ್ಮ ಬುದ್ಧಿಜೀವಿಗಳ ಬಳಿ ಆ ಹುಡುಗನ ಪ್ರಶ್ನೆಗೆ ಉತ್ತರವಿದೆಯೇ?
ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1
– ದೇವು ಹನೆಹಳ್ಳಿ,
ಬಾರಕೂರು, ಉಡುಪಿ
ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ
ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೋ?
– ಅಲ್ಲಮಪ್ರಭು
ಲಿಂಗಾಯತ, ವೀರಶೈವ ‘ಸ್ವತಂತ್ರಧರ್ಮ’ ಘೋಷಣೆ, ಮಾನ್ಯತೆ ಇತ್ಯಾದಿಗಳ ಕುರಿತು ವ್ಯಾಪಕ ಚರ್ಚೆ, ಗುದ್ದಾಟಗಳನ್ನು ಪ್ರಸ್ತಾಪಿಸುವ ಮೊದಲು ‘ನಾನು ಯಾರು’ ಎಂಬುದನ್ನು ಸ್ಪಷ್ಟಗೊಳಿಸುವುದು ಅಗತ್ಯ ಮತ್ತು ಒಳಿತು. ಕಳೆದೆರಡು ಸಾವಿರ ವರ್ಷಗಳಿಂದ ‘ನಾನ್ಯಾರು’ ಎಂಬುದು ನನ್ನ ಸಮಸ್ಯೆಯಾಗಿರಲಿಲ್ಲ. ಯಾಕೆಂದರೆ ನಾನು ಅಜ್ಞಾನಿ, ಮೂಢ. ಅದು ಯಾರಿಗೆ ಸಮಸ್ಯೆಯಾಯಿತೋ ಅವರೇ ನೀಡಿದ ವ್ಯಾಖ್ಯೆಗಳನ್ನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅದು ಅನಿವಾರ್ಯ. ಹೌದು, ನಾನು ಪೇಗನ್,ಕಾಫಿರ, ಹೀದನ್. ಅನಂತರ ಹಿಂದೂ ಎಂದರು. “ಹಿಂದೂ” ಎನ್ನಿಸಿಕೊಳ್ಳುವುದು ಕೂಡಾ ನನ್ನ ಅಗತ್ಯವಾಗಿರಲಿಲ್ಲ, ಕೋರಿಕೆಯಾಗಿರಲಿಲ್ಲ. (ಕುರಿಯನ್ನು ‘ಕುರಿ’ ಎನ್ನುವುದು ಕುರಿಯ ಅಗತ್ಯವೇನೂ ಅಲ್ಲವಲ್ಲ?!) ಆದರೂ ಒಪ್ಪಿಕೊಳ್ಳುತ್ತೇನೆ. ಈಗ ಎಸ್.ಎಂ. ಜಾಮದಾರ್, ಗೊ.ರು.ಚ., ರಂಜಾನ್ ದರ್ಗಾ, ಮಾತೆ ಮಹಾದೇವಿ, ಮೀನಾಕ್ಷಿ ಬಾಳಿ ಮೊದಲಾದ ಶರಣಶರಣೆಯರು, ಅಸಂಖ್ಯ ಮಠಾಧೀಶರು, ಸಿದ್ಧರಾಮಯ್ಯನವರ ಸರಕಾರದ ಮಂತ್ರಿಗಳು, ಚಿಂತಕರು, ಪ್ರಗತಿಪರರು, ಪತ್ರಕರ್ತರು, ವಿಚಾರವಾದಿಗಳು, ಬುದ್ಧಿಜೀವಿಗಳು, liberals ಮುಂತಾದವರು ಒಂದು ಕೈಯಲ್ಲಿ ನನ್ನ ಕತ್ತು ಹಿಡಿದು, ಇನ್ನೊಂದು ಕೈಯಲ್ಲಿ ಕತ್ತಿ ಹಿಡಿದು ‘ಭವಿ’ ಎಂದು ಕರೆಯುತ್ತಿದ್ದಾರೆ. ನಾನು ಅಜ್ಞಾನಿಯಲ್ಲವೇ? ಮಹಾಪ್ರಸಾದವೆಂಬೆನು! (ಭವಿ ಎಂದರೆ ಇಷ್ಟಲಿಂಗವನ್ನು ಪೂಜಿಸದವನು; ಲೌಕಿಕವನ್ನು, ಅಂದರೆ ಭವವನ್ನು ನೆಚ್ಚಿ ಮೋಕ್ಷ ಪಡೆಯಲಾರದವನು; ಪಾಪಿ ಇತ್ಯಾದಿ.)
ಸತ್ಯವೆಂದರೆ ಪೇಗನ್, ಹೀದನ್, ಕಾಫಿರ್, ಹಿಂದೂ, ಭವಿ ಎಂಬೆಲ್ಲಾ ಬಿರುದುಗಳಿಗೂ, ಪಾಪಿ, ಅಜ್ಞಾನಿ, ಅವಿಶ್ವಾಸಿ, ಕಳ್ಳ, ಮೂರ್ತಿಪೂಜೆ ಮಾಡುವ ಮೂರ್ಖ, ಕಂದಾಚಾರಿ, ಮೂಢ, ಅನಾಚಾರಿ, ಮಿಥ್ಯಾರಾಧಕ ಎಂಬೆಲ್ಲಾ ಪದನಾಮಗಳಿಗೂ ಅಂತಹ ವ್ಯತ್ಯಾಸವೇನೂ ಇಲ್ಲ! ಜತೆಗೆ ವೈಯಕ್ತಿಕವಾಗಿ ನಾನು ನಾಸ್ತಿಕ ಮತ್ತು ನಿರೀಶ್ವರಿ. (ನಿರೀಶ್ವರವಾದಿಯಲ್ಲ.) ಅದು ಕೂಡಾ ಕಳೆದ 2-3 ಸಾವಿರ ವರ್ಷಗಳಿಂದ ನಾನು, ನನ್ನಂತಹ ಅಸಂಖ್ಯ ಪೇಗನ್ನರಿಗೆ ಸಮಸ್ಯೆಯಾಗಿರಲಿಲ್ಲ; ಯಾವ ಪೇಗನ್ನರೂ ನನ್ನನ್ನು ಸಾರ್ವಜನಿಕವಾಗಿ ಸುಡಲಿಲ್ಲ.
ನಾವು ನಮ್ಮ ಅಜ್ಞಾನದಲ್ಲಿ ಸುಖವಾಗಿದ್ದರೂ, ನಮಗೆ ಅವು ಸಮಸ್ಯೆಯಾಗಿ ಕಂಡಿಲ್ಲದಿದ್ದರೂ ‘ಇತರರಿಗೆ’ ಯಾಕೆ ಸಮಸ್ಯೆಯಾದವು? ಇವೆಲ್ಲ ಹಲವು ದಿಕ್ಕಿನಿಂದ ಒಂದಾಗಿ, ಒಂದೊಂದಾಗಿ ಆರಂಭಗೊಂಡವು ಎನ್ನಬಹುದು.
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಒಂದು ಹೋಲಿಕೆ
ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು
ನಿಜವಾಗಿ ಭಾಷೆ ಅಂದರೆ ಇಷ್ಟೇಯಾ..?
– ಮಲ್ಲಿ ಶರ್ಮ
ಭಾಷೆ. ಭಾಷೆ ಅಂದ್ರೆ ಸಾಕಷ್ಟು ಜನ ಹೇಳೋದೊಂದೇ, “ನಮ್ಮ ಹಿರಿಯರಿಂದಲೇ ಬಂತು, ನಾವು ಅದನ್ನೇ ಬಳಸ್ತಾ ಇದ್ದೇವೆ” ಅಂತಷ್ಟೇ ಹೇಳ್ತಾರೆ.. ಆದರೆ ಅದರ ಮೂಲ, ಅದೆಷ್ಟು ಬದಲಾವಣೆ ಪಡೆದಿದೆ, ಈಗ ಯಾವ ಸ್ಥಿತಿಯಲ್ಲಿದೆ? ಅಂತೆಲ್ಲ ತಿಳಿದೂ ಇರಲ್ಲ, ಅದರ ಕುರಿತು ತಲೆ ಕೆಡಿಸಿಕೊಂಡಂತು ಖಂಡಿತಾ ಇರಲ್ಲ. ಅದರ ಅಗತ್ಯವೂ ಅವರ್ಯಾರಿಗೂ ಇಲ್ಲ. ಭಾಷೆ ಅನ್ನೋದು “ಸಂವಹನ ನಡೆಸಲು ಉಪಯೋಗಿಸುವ ಒಂದಷ್ಟು ಪದಗಳ ಪುಂಜ” ಅಷ್ಟೇ ಎಂದು ಎಲ್ಲರೂ ಡಿಸ್ಕ್ರೈಬ್ ಮಾಡಿ ಡೆಫಿನಿಷನ್ ಕೊಟ್ಟುಬಿಟ್ಟಾರು. ನಿಜವಾಗಿ ಭಾಷೆ ಅಂದರೆ ಅಷ್ಟೇಯಾ!!? ಮತ್ತಷ್ಟು ಓದು
ಇಲ್ಲಿ ಅಸಹಿಷ್ಣುತೆಯಿದೆ!
Dedicated to our purva paksha and uttara- paksha debating tradition. With gratitude to the purva-pakshins (opponents) I have learned from. May we engage in this intellectual yajna, with mutual respect.
-ನವೀನ ಗಂಗೋತ್ರಿ
ರಾಜೀವ್ ಮಲ್ಹೋತ್ರಾ ತಮ್ಮ ಇತ್ತೀಚಿನ ಹೊಸ ಪುಸ್ತಕ, ‘ದಿ ಬ್ಯಾಟಲ್ ಫಾರ್ ಸಂಸ್ಕೃತ್’ ನ ಅರ್ಪಣೆಯಲ್ಲಿ ಈ ರೀತಿ ಬರೆಯುತ್ತಾರೆ. ಈ ನೆಲದಲ್ಲಿ ಒಂದು ಕಾಲಕ್ಕೆ ಉತ್ತುಂಗ ತಲುಪಿದ್ದ ಮತ್ತು ಮಹತ್ತರ ಗೌರವಕ್ಕೆ ಪಾತ್ರವಾಗಿದ್ದ ’ವಾಕ್ಯಾರ್ಥ’ ಪರಂಪರೆ ಅಥವಾ ವಾದ ಪ್ರತಿವಾದದ ಸಂಸ್ಕೃತಿಯ ಕುರಿತು ಆ ಪುಸ್ತಕ ಧ್ವನಿಯೆತ್ತುತ್ತದೆ. ಹಾಗೆ ದನಿಯಾಗಲೇ ಬೇಕಾದ ಕಾಲಖಂಡದಲ್ಲಿ ನಾವಿದ್ದೇವೆಂಬುದು ವಿಷಯ.
ನಮ್ಮ ವೇದಗಳು, ಸ್ಮೃತಿಗಳು, ನಮ್ಮ ಕಥೆ, ಪುರಾಣ, ಕಾವ್ಯ, ಶಾಸ್ತ್ರ, ಕಲಾಪ್ರಕಾರ ಮತ್ತು ಸಮಾಜದ ವ್ಯವಸ್ಥೆಯನ್ನೆಲ್ಲ ನಾವು ಸರಿಯಾಗಿ ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ ಅನ್ನುವ ಭರದಲ್ಲಿ ನಾವಿದ್ದರೆ ನಮ್ಮದೆಲ್ಲವನ್ನೂ ತಮ್ಮ ಸಮಾಜ ಮತ್ತು ತಮ್ ತಮ್ಮ ನಾಗರಿಗಕತೆಯ ಅರಿವಿನ ಪರಿಧಿಯಲ್ಲಿ ಅರ್ಥವಿಸಿಕೊಂಡು ವ್ಯಾಖ್ಯಾನ ಬರೆಯುವ ಹುಕಿಯೊಂದು ಪಶ್ಚಿಮ ರಾಷ್ಟ್ರಗಳ ವಿದ್ವಾಂಸರಲ್ಲಿ ಬಹುಕಾಲದಿಂದ ಚಾಲ್ತಿಯಲ್ಲಿದೆ. ಭಾರತದ ಬಗ್ಗೆ ತಿಳಿದುಕೊಳ್ಳುವ ಅಗತ್ಯ ನಮಗೆ ಕಾಣಿಸಿದಾಗೆಲ್ಲ ಈ ಪಶ್ಚಿಮದ ವಿದ್ವಾಂಸರು ಬರೆದದ್ದನ್ನು ಓದದೇ ಇರಲು ಸಾಧ್ಯವೇ ಇಲ್ಲ ಅನ್ನುವಷ್ಟು ಸಂಗತಿಗಳನ್ನೀಗಾಗಲೇ ಅವರು ಬರೆದಾಗಿದೆ. ಜಗತ್ತು ಮುನ್ನೂರರವತ್ತು ಡಿಗ್ರಿ ತೆರೆದುಕೊಳ್ಳುತ್ತಿರುವ ಹೊತ್ತಿನಲ್ಲಿ ನಮ್ಮ ಕುರಿತಾಗಿ ಜಗತ್ತಿನೆಲ್ಲ ಮೂಲೆಗಳಿಂದ ಬರುವ ಚಿಂತನೆಗಳಿಗೆ ನಾವು ಕಿವಿಯಾಗಲೇ ಬೇಕಾಗುತ್ತದೆನ್ನಿ. ಆದರೆ ಅದೇ ಹೊತ್ತಿನಲ್ಲಿ ನಮ್ಮ ಕುರಿತಾದ ವಿಮರ್ಶೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದೂ ಮತ್ತು ಅವರ ಕುರಿತಾದ ಆಮೂಲಾಗ್ರ ಅಧ್ಯಯನಮಾಡುವುದೂ ನಮಗೆ ಮುಖ್ಯವಾಗಬೇಕಿತ್ತು. ದುರದೃಷ್ಟವಶಾತ್ ನಾವು ಆ ಹಾದಿಯಲ್ಲಿ ತುಂಬಾ ತುಂಬಾ ಹಿಂದಿದ್ದೇವೆ. ಭಾರತೀಯವಲ್ಲದ ಆಬ್ರಹಾಮಿಕ್ ರಿಲಿಜನ್ನುಗಳ ಒಳಸುಳಿ ಮತ್ತು ಹುಳುಕುಗಳ ಬಗ್ಗೆ ತಾತ್ತ್ವಿಕವಾದ ಮರುಪ್ರಶ್ನೆಯನ್ನು ಹುಟ್ಟುಹಾಕುವುದಂತಿರಲಿ, ನಮ್ಮ ಕುರಿತಾಗಿಯೂ ಸರಿಯಾದ ಅವಗಾಹನೆಯೇ ಇಲ್ಲದಂಥಾ ಸ್ಥಿತಿಯಲ್ಲಿ ನಾವಿದ್ದೇವೆ.
’ದಿ ಬ್ಯಾಟಲ್ ಫಾರ್ ಸಂಸ್ಕೃತ್’- ಪುಸ್ತಕವು ಬರಿಯ ಸಂಸ್ಕೃತ ಭಾಷೆಯೊಂದರ ಬಗ್ಗೆ ಮಾತ್ರವೇ ಕಾಳಜಿಯ ದನಿಯೆತ್ತದೆ, ಸಮಗ್ರವಾಗಿ ನಮ್ಮ ಚಿಂತನ ಪರಂಪರೆಯ ಸಧ್ಯದ ಅವಸ್ಥೆಯನ್ನೂ ಚರ್ಚಿಸುತ್ತದೆ. ಅದನ್ನು ಕಳಕೊಂಡ ನಾವು ಇವತ್ತಿಗೆದುರಿಸುತ್ತಿರುವ ಬೌದ್ಧಿಕ ಅಪಾಯಗಳನ್ನು ವಿಶ್ಲೇಷಿಸುತ್ತದೆ. ನಮ್ಮ ಸುತ್ತಲೂ ಸುದ್ದಿ ಮಾಡುವ ಕನ್ನಡದ ಬೌದ್ಧಿಕ ಲೋಕವನ್ನು ಪ್ರಸ್ತುತ ಪುಸ್ತಕದ ಹಿನ್ನೆಲೆಯಲ್ಲಿ ನೋಡೋಣ.
ಭಾರತೀಯ ಆಹಾರ ಶೈಲಿಗಳ ಕುರಿತು ಒಂದು ವೈಜ್ಞಾನಿಕ ಚಿತ್ರಣ
– ವಿನಾಯಕ ಹಂಪಿಹೊಳಿ
ಆಹಾರದ ಶೈಲಿಗಳಲ್ಲಿ ಎಷ್ಟು ಪ್ರಕಾರಗಳು ಎಂಬ ಪ್ರಶ್ನೆಗೆ ಎಲ್ಲರೂ ಉತ್ತರಿಸುವದು ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ಎರಡು ಪ್ರಕಾರಗಳ ಬಗ್ಗೆ. ಪಾಶ್ಚಿಮಾತ್ಯ ಲೋಕದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರಗಳ ಕುರಿತು ಅನೇಕ ಚರ್ಚೆಗಳು ವಾದ ವಿವಾದಗಳಾಗಿವೆ. ನಮ್ಮ ದೇಶದಲ್ಲಿಯೂ ಸಂತರು ಸಸ್ಯಾಹಾರಕ್ಕೆ ಹೆಚ್ಚು ಒತ್ತು ಕೊಟ್ಟಂತೆ ಕಾಣುವ ಕೃತಿಗಳು ಕಾಣುತ್ತವೆ. ಆದರೂ ಸಸ್ಯಾಹಾರ v/s ಮಾಂಸಾಹಾರದಲ್ಲಿ ಯಾವದು ಸರಿ ಎಂಬಂಥ ಚರ್ಚೆಗಳು ಹಿಂದೆಂದೂ ಆದಂತೆ ಕಾಣುವದಿಲ್ಲವಾದರೂ ಈಗ ಅಂಥ ಚರ್ಚೆಗಳು ಚೆನ್ನಾಗಿಯೇ ನಡೆಯುತ್ತಿವೆ. ಇಂದು ನಮ್ಮ ದೇಶದಲ್ಲಿರುವ ಹೋಟೆಲ್ಲುಗಳ ರಚನೆಗಳು ಬಹುತೇಕ ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ಎರಡು ಪ್ರಕಾರಗಳ ಮೇಲೆಯೇ ಆಗಿರುತ್ತವೆ.
ನಮ್ಮ ದೇಶದ ಬುದ್ಧಿಜೀವಿಗಳು ಚರಿತ್ರೆಯಲ್ಲಿ ಆಗಿ ಹೋದ ಶ್ರೇಷ್ಠ ಸಂತರ ಜಾತಿ-ವಿರೋಧೀ ವಾಕ್ಯಗಳನ್ನು ಸಾಮಾಜಿಕ ಕ್ರಾಂತಿಗೆ ಸಮೀಕರಿಸಿ ಸಮಾನತೆ ಸ್ವಾತಂತ್ರ್ಯದ ಹಕ್ಕುಗಳ ಕಲ್ಪನೆ ಅವರಲ್ಲಿತ್ತು ಎಂದು ಹೇಳುತ್ತಾರಾದರೂ, ಅದೇ ಸಂತರು ವಿಧಿಸುವ ಆಹಾರ ಪದ್ಧತಿಯ ಕುರಿತು ದಿವ್ಯ ಮೌನವನ್ನು ತಾಳುತ್ತಾರೆ. ಕಾರಣ ಅದೇ ತರ್ಕದ ಅಡಿಯಲ್ಲಿ ಆ ವಿಧಿಯು ಹೇರಿಕೆಯಾಗಿ ಬಿಡುತ್ತದೆ ಇಲ್ಲವೇ ಸ್ವಾತಂತ್ರ್ಯದ ಹರಣವಾಗಿ ಪರಿಗಣಿಸಬೇಕಾಗುತ್ತದೆ. ಆದರೆ ಅದು ಬುದ್ಧಿಜೀವಿಗಳಿಗೆ ಇಷ್ಟವಿಲ್ಲ. ಪಾಶ್ಚಾತ್ಯರ ವಸಾಹತು ಶಿಕ್ಷಣ ಪಡೆದು ಹಿಂದೂ ಎಂಬ ರಿಲಿಜನ್ನನ್ನು ಒಪ್ಪಿಕೊಂಡ ಸಸ್ಯಾಹಾರಿಗೂ ಹಿಂದೂ ರಿಲಿಜನ್ನಿನ ಪವಿತ್ರ ಗ್ರಂಥಗಳಾದ ವೇದಗಳಲ್ಲಿ ಮಾಂಸಾಹಾರದ ಉಲ್ಲೇಖಗಳು ವಿಚಿತ್ರವಾಗಿ ಕಾಣುತ್ತವೆ.
ಹಾಗಿದ್ದರೆ ಭಾರತೀಯ ಆಹಾರ ಶೈಲಿ ಏನು? ಅದನ್ನು ಸಸ್ಯಾಹಾರ ಮತ್ತು ಮಾಂಸಾಹಾರ ಎಂದು ಎರಡು ರೀತಿಯಲ್ಲಿ ವಿಂಗಡಿಸಿ ಹೊರಟರೆ ನಮ್ಮ ಸಂಪ್ರದಾಯಗಳ ಆಹಾರದ ಶೈಲಿಗಳನ್ನು ವಿವರಿಸಬಲ್ಲದೇ? ಸಮರ್ಪಕವಾಗಿ ವಿವರಿಸುವ ಚಿತ್ರಣವನ್ನೇ ತಾನೇ ವೈಜ್ಞಾನಿಕವೆಂದು ಕರೆಯಲು ಸಾಧ್ಯ. ಆದ್ದರಿಂದ ಮೊದಲು ಈಗಿರುವ ಸಸ್ಯಾಹಾರ ಮತ್ತು ಮಾಂಸಾಹಾರವೆಂಬ ವಿಭಾಗಗಳ ಚಿತ್ರಣವನ್ನು ಮೊದಲು ಅವಲೋಕಿಸೋಣ. ಅದು ನಮ್ಮ ಸಂಪ್ರದಾಯಗಳ ಆಹಾರ ಪದ್ಧತಿಯನ್ನು ವಿವರಿಸಲು ಸಾಧ್ಯವೇ ಎಂಬುದನ್ನು ಅರಿಯೋಣ. ಇಲ್ಲವಾದಲ್ಲಿ ನಮ್ಮ ಸಂಪ್ರದಾಯಗಳಲ್ಲಿರುವ ವಿವಿಧ ಆಹಾರದ ಶೈಲಿಗಳನ್ನು ವಿವರಿಸುವ ಚಿತ್ರಣವನ್ನು ರಚಿಸಲು ಸಾಧ್ಯವೇ ಎನ್ನುವದನ್ನು ಚರ್ಚಿಸೋಣ.
ಇವರೆಲ್ಲ ಭಾರತೀಯ ಮುಸ್ಲಿಮರ ಹಿತಚಿಂತಕರೆ?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಇತ್ತೀಚೆಗೆ ಯಾಕೂಬ್ ಮೆಮನ್ ಗಲ್ಲಿಗೇರಿದ ನಂತರ ದೇಶಾದ್ಯಂತ ಬಂದ ಪ್ರತಿಕ್ರಿಯೆಗಳಲ್ಲಿ ಒಂದು ಅಸಹಜತೆಯಿತ್ತು. ಮೊದಲನೆಯದಾಗಿ, ಕೆಲವರು ಮರಣ ದಂಡನೆ ಇರಬೇಕೇ ಬೇಡವೆ? ಎಂಬ ನೆಲೆಯಲ್ಲಿ ಚರ್ಚಿಸಿದರು. ಇದಕ್ಕೂ ಹಿಂದೆ ಎಷ್ಟೋ ಮರಣದಂಡನೆಗಳಾಗಿವೆ, ಇಷ್ಟು ಗಂಭಿರವಾಗಿ ನಾಗರಿಕರು ಚರ್ಚೆಯನ್ನೆತ್ತಿದ್ದು ನನ್ನ ಗಮನಕ್ಕೆ ಬಂದಿಲ್ಲ. ಸ್ವತಂತ್ರ ಭಾರತದಲ್ಲಿ ನಾಥೂರಾಮ ಗೋಡ್ಸೆಯ ಪ್ರಕರಣದಿಂದಲೇ ಇಂಥ ಉದಾಹರಣೆಗಳು ಪ್ರಾರಂಭವಾದವು. ಅವನ ಮರಣದಂಡನೆಯನ್ನು ತಡೆಯಬಹುದಿತ್ತೆಂದು ಈ ಮಾನವ ಹಕ್ಕುಗಳ ವಕ್ತಾರರಿಗೆ ಎಂದಾದರೂ ಅನ್ನಿಸಬಹುದೆ? ಹಾಗಾಗಿ ಈ ಕುರಿತು ಚರ್ಚೆ ನಡೆಸಬಯಸುವವರು ಇಂಥ ಕ್ಷುದ್ರತನದಿಂದ ಮೇಲೆ ಏರಬೇಕಾಗುತ್ತದೆ. ಎರಡನೆಯದಾಗಿ, ಯಾಕೂಬ್ ಅಪರಾಧಿಯಾಗಿದ್ದನೆ? ಎಂಬ ನೆಲೆಯಲ್ಲಿ ಕೂಡ ಹಲವರು ಚರ್ಚೆ ನಡೆಸಿದರು. ಈ ಚರ್ಚೆ ಕೂಡ ಈ ಸಂದರ್ಭದಲ್ಲೇ ಎದ್ದಿದ್ದು ಕುತೂಹಲಕಾರಿಯಾಗಿದೆ. ಏಕೆಂದರೆ ಅದು ನಮ್ಮ ನ್ಯಾಯದಾನದ ಕಾರ್ಯಕ್ಷಮತೆಯ ಕುರಿತ ಪ್ರಶ್ನೆ. ಆದರೆ ಯಾಕೂಬನಿಗೆ ಸಂಬಂಧಿಸಿದಂತೆ ನಡೆದಷ್ಟು ಅಳೆದು ತೂಗುವ ಕೆಲಸ ಹಿಂದೆಂದೂ ಇಂಥ ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ನಡೆದಿರಲಿಲ್ಲ.
ಈ ಚರ್ಚೆಯನ್ನು ಗಮನಿಸಿದರೆ ಕೇವಲ ನ್ಯಾಯ ಅನ್ಯಾಯಗಳಷ್ಟೇ ಇಲ್ಲಿನ ಸಮಸ್ಯೆಯಲ್ಲ ಎಂಬುದಂತೂ ಸ್ಪಷ್ಟ. ಇದಕ್ಕೆ ಮುಸ್ಲಿಂ ಜನಾಂಗವನ್ನು ತಳಕುಹಾಕುತ್ತಿರುವುದು ಆತಂಕಕಾರಿ. ಕೆಲವರು, ರಾಜೀವಗಾಂಧಿ, ಇಂದಿರಾ ಗಾಂಧಿ ಹಂತಕರು ಹಿಂದೂಗಳು ಎಂಬ ಕಾರಣಕ್ಕಾಗಿ ರಕ್ಷಿಸಿ, ಯಾಕೂಬ್ ಮುಸ್ಲಿಮನೆಂಬ ಕಾರಣಕ್ಕೆ ಗಲ್ಲಿಗೆ ಏರಿಸುತ್ತಿದ್ದಾರೆ ಎಂದರು. ಅವರಿಗೆ ಗಾಂಧಿ ಹಂತಕರಿಗೆ ಏನಾಯಿತೆಂಬುದು ಮರೆತೇ ಹೋದಂತಿದೆ. ಇನ್ನೂ ಕೆಲವರು ಅಹಮದಾಬಾದ ಗಲಭೆಯ ರೂವಾರಿಗಳಿಗೆ ಪ್ರಧಾನ ಮಂತ್ರಿ ಪಟ್ಟದ ಸನ್ಮಾನ, ಬಾಂಬೆ ಗಲಭೆಯ ರೂವಾರಿಗೆ ಮರಣದಂಡನೆ ಎಂಬುದಾಗಿ ವಿಷಾದ ವ್ಯಕ್ತಪಡಿಸಿದರು. ಇವರಿಗೆಲ್ಲ ಅಹಮದಾಬಾದ ಗಲಭೆಯ ಹಿಂದೆ ಗೋಧ್ರಾದಲ್ಲಿನ ನೂರಾರು ಜನ ಹಿಂದೂ ಕರಸೇವಕರ ಜೀವಂತ ದಹನದ ಘಟನೆ ಇತ್ತೆನ್ನುವುದು ಮರೆತೇ ಹೋಗಿದೆ. ಅದಕ್ಕಿಂತ, ತದನಂತರ ಮುಸ್ಲಿಂ ಭಯೋತ್ಪಾದಕರಿಂದ ಇಂಥದ್ದೇ ಇತರ ಅನೇಕ ಹಿಂಸಾಕಾಂಡಗಳ ಸಂದರ್ಭದಲ್ಲಿ ಹಿಂದೂಗಳು ಹೀಗೇನೂ ಪ್ರತಿಕ್ರಿಯಿಸದೇ ಸಂಯಮಿಸಿಕೊಂಡಿದ್ದು ಮರೆತೇ ಹೋಗಿದೆ. ಆಶ್ಚರ್ಯವೆಂದರೆ ಮೋದಿಯನ್ನು ವಿರೋಧಿಸುವ ಭರದಲ್ಲಿ ಅನೇಕ ಸೆಕ್ಯುಲರ್ ಚಿಂತಕರೂ ಇಂಥ ಅಪಾಯದ ಹಾದಿಯನ್ನು ತುಳಿಯುತ್ತಿದ್ದಾರೆ.