ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ಈ ಚರ್ಚೆಯಲ್ಲಿ ನಾನು ದೆಹಲಿ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ರಾಜ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಶ್ರೀಮತಿ ಮೀನಾಕ್ಷಿ ಜೈನ್ರೊಂದಿಗೆ ಅವರ ಕೃತಿಗಳ ಬಗ್ಗೆ ವಿಚಾರಮಾಡಲಿದ್ದೇನೆ. ನಾನು ಶ್ರೀಮತಿ. ಮೀನಾಕ್ಷಿ ಜೈನ್ರನ್ನು ಸುಮಾರು ಎರಡು ದಶಕಗಳಿಂದ ಬಲ್ಲೆ. ಹಾಗೂ ಅವರನ್ನು ಇಂದಿನ ಭಾರತದಲ್ಲಿ ಒಬ್ಬ ಇತಿಹಾಸ ಮತ್ತು ರಾಜಕೀಯ ವಿಷಯಗಳ ಉತ್ತಮ ವಿದ್ವಾಂಸರೆಂದು ಗೌರವಿಸುತ್ತೇನೆ. ಅವರು ದೆಹಲಿಯಲ್ಲಿ ಶಲ್ಡನ್ ಪೊಲ್ಲಾಕ್ನ್ನು ಕುರಿತು ನಡೆದ ೨ನೇ ಸ್ವದೇಶೀ ಇಂಡಾಲಜಿ ಸಮ್ಮೇಳನದಲ್ಲಿ ಭಾಗವಹಿಸಿ, ಒಂದು ಅದ್ಭುತ ಲೇಖನವನ್ನು ಪ್ರಸ್ತುತಪಡಿಸಿದ್ದರು. ಅವರು ಮತ್ತು ನನ್ನಲ್ಲಿ ಇರುವ ಒಂದು ಸಾಮಾನ್ಯ ಅಂಶವೆಂದರೆ ಇಬ್ಬರೂ ನಮ್ಮೊಡನೆ ವಾದ ಮಾಡುವ, ನಮ್ಮನ್ನು ಉಪೇಕ್ಷೆ ಮಾಡುವ ಅಥವಾ ನಮ್ಮ ಹೆಸರೆತ್ತಿ ದೂಷಿಸುವ ಭಾರತೀಯ ಎಡಪಂಥದವರನ್ನು ಟೀಕಿಸಿದ್ದೇವೆ. ಕಳೆದ ಅನೇಕ ವರ್ಷಗಳ ಕಾಲ ಅವರ ಸಂಪರ್ಕವಿರಲಿಲ್ಲ, ಹಾಗಾಗಿ ಈ ಅವಕಾಶವು ನಮಗೆ ಬಹಳ ದಿನಗಳ ವಿಚಾರ ವಿನಿಮಯಕ್ಕೆ ಒದಗಿಬಂದಿದೆ ಎಂದು ತಿಳಿದಿದ್ದೇನೆ. ನಾವು ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ, ಅಯೋಧ್ಯೆ-ಬಾಬರಿ ಮಸೀದಿಯ ವಿವಾದ, ’ಸತಿ’ ಪದ್ಧತಿಯ ಬಗ್ಗೆ ಇರುವ ತಪ್ಪು ತಿಳುವಳಿಕೆಗಳು, ಮೂರ್ತಿಭಂಜನೆ ಮತ್ತು ಸ್ವದೇಶೀ ಇಂಡಾಲಜಿಯ ಸಂಶೋಧನಾ ವಲಯ ಇತ್ಯಾದಿ ಹಲವಾರು ವಿಚಾರಗಳನ್ನು ಚರ್ಚಿಸಿದೆವು.
ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ:
ಭಾರತೀಯ ಶಿಕ್ಷಣವಲಯದಲ್ಲಿ ಬುದ್ಧಿವಂತರಿಗೆ ನೀಡುವ ಪ್ರೋತ್ಸಾಹಧನದ ವಿಚಾರವಾಗಿ ಚರ್ಚಿಸುವಾಗ ಎಡಪಂಥದ ಪ್ರಬಲ ವಿದ್ವಾಂಸರಾದ ಇರ್ಫಾನ್ ಹಬೀಬ್ ಮತ್ತು ರೋಮಿಲಾ ಥಾಪರ್ರ ಅಡಿಯಲ್ಲಿ ಶಿಕ್ಷಣವಲಯದಲ್ಲಿ ಉಸಿರುಕಟ್ಟಿಸುವ ವಾತಾವರಣವು ಇತ್ತು ಎಂದು ಅವರು ಅಭಿಪ್ರಾಯಪಟ್ಟರು. ಅವರು ಶಿಕ್ಷಣವಲಯದಲ್ಲಿ ಸಹಾಯಧನವನ್ನು ನೀಡುವ ಎಲ್ಲ ಸಂಸ್ಥೆಗಳ ಮೇಲೆಯೂ ಮತ್ತು ಸಂಶೋಧನೆ ಮಾಡಲು ಬರುವ ಎಲ್ಲ ವಿದ್ಯಾರ್ಥಿಗಳೂ ಇವರ ಅಡಿಯಲ್ಲಿ, ಇವರ ದೃಷ್ಟಿಕೋನದ ಪ್ರಕಾರವೇ ಕೆಲಸ ಮಾಡುವಂತೆ ತಮ್ಮ ಸಂಪೂರ್ಣ ನಿಯಂತ್ರಣವನ್ನು ಚಲಾಯಿಸಿಕೊಂಡಿದ್ದರು. ಹೀಗಾಗಿ ಇವರ ವಿಚಾರಗಳನ್ನು ಬೆಂಬಲಿಸದವರಿಗೆ ಅಥವಾ ಬೇರೆ ಆಲೋಚನೆಯ ಧಾಟಿ ಹೊಂದಿದವರಿಗೆ ಯಾವ ಇತಿಹಾಸಕಾರನಾಗಿ ಅಥವಾ ವಿದ್ವತ್ತಿನಲ್ಲಿಯೂ ತಮ್ಮ ಗುರುತನ್ನು ಉಳಿಸಲು ದುಸ್ತರವಾಗುತ್ತಿತ್ತು. ಯಾರಾದರೂ ವಿಭಿನ್ನವಾದ ಅಥವಾ ವೈರುಧ್ಯದ ದೃಷ್ಟಿಕೋನವನ್ನು ಹೊಂದಿದ್ದರೆ ಅವರು ತಮ್ಮದೇ ಆದ ಮಾರ್ಗವನ್ನು ರೂಪಿಸಿಕೊಳ್ಳ ಬೇಕಾಗಿತ್ತು. ಆ ಮಾರ್ಗವು ಏಕಾಂಗಿಯಾಗಿದ್ದು ಅವರು ತಮ್ಮಷ್ಟಕ್ಕೆ ತಾವೇ ನಡೆಯಬೇಕಾಗಿತ್ತು.