ಪ್ರಜಾಪ್ರಭುತ್ವ ಎಂಬುದು ರಾಮನಂತೆ ; ರಾಜಕಾರಣಕ್ಕೆ ಬೇಕಿದೆ ನೀತಿ ಸಂಹಿತೆ
– ಸಂತೋಷ್ ತಮ್ಮಯ್ಯ
ಭಾಷೆ ಇದ್ದಮೇಲೆ ವ್ಯಾಕರಣವಿರುವಂತೆ, ಕಾವ್ಯ ಇದ್ದಮೇಲೆ ಕವಿಯೊಬ್ಬನೂ ಇರುವಂತೆ ರಾಜಕೀಯ ಪಕ್ಷ ಇದ್ದಮೇಲೆ ಅದರ ಹಿಂದೊಂದು ಸಿದ್ಧಾಂತವಿರಲೇಬೇಕು. ಪಕ್ಷದ ಹುಟ್ಟು ಕೂಡಾ ಒಂದು ಸಿದ್ಧಾಂತ, ಚಳವಳಿಗಳ ಬುನಾದಿಗಳ ಮೇಲೆ ಆಗಿರುತ್ತದೆ. ಈ ಸಿದ್ಧಾಂತಗಳು ಒಂಥರಾ ಚಪ್ಪರವಿದ್ದಂತೆ. ಆ ಚಪ್ಪರದ ಕೆಳಗೆ ಪ್ರತಿಷ್ಠಾಪಿತವಾದವುಗಳೇ ಪಕ್ಷಗಳು. ವಿಶ್ವಾದ್ಯಂತದ ರಾಜಕೀಯ ಪಕ್ಷಗಳ ಜಾತಕಗಳೆಲ್ಲವೂ ಸಾಧಾರಣವಾಗಿ ಹೀಗೆಯೇ. ಒಂದು ಉದ್ದೇಶ, ಒಂದು ಧ್ಯೇಯ, ಸಮಾಜದ ಅಶೋತ್ತರ, ರಾಷ್ಟ್ರೀಯತೆ, ಪ್ರಾಂತೀಯತೆ, ಪರಂಪರೆ ಮೊದಲಾದವುಗಳು ಆ ಚಪ್ಪರದ ಕಂಬಗಳು. ಸಿದ್ಧಾಂತಗಳನ್ನು ನೋಡಿದರೂ ಆಯಾ ಪಕ್ಷಗಳ ನಡೆ, ವರ್ತನೆಗಳನ್ನು ಸುಲಭವಾಗಿ ಕಂಡುಹಿಡಿದುಬಿಡಬಹುದು. ರಾಜಕೀಯ ಪಕ್ಷಗಳು ಸಿದ್ಧಾಂತಗಳಿಲ್ಲದಿರುವ ಸಾಧ್ಯತೆಗಳೇ ಇಲ್ಲ. ಕನಿಷ್ಠ ಅವು ವ್ಯಕ್ತಿಕೇಂದ್ರಿತವಾದ ಚೆಹರೆಯನ್ನಾದರೂ ಹೊಂದಿರುತ್ತವೆ. ಅಂಥ ಪಕ್ಷ ಆ ವ್ಯಕ್ತಿಯ ವರ್ತನೆ, ಪ್ರಭಾವವನ್ನೇ ಸಿದ್ಧಾಂತವೆಂಬಂತೆ ಬಣ್ಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಯಾವುದೋ ದೇಶದಲ್ಲಿ ಯಾವುದೋ ಒಂದು ಹೊತ್ತಿನಲ್ಲಿ ನಡೆದ ಒಂದು ಹತ್ಯಾಕಾಂಡವನ್ನೇ ಸಿದ್ಧಾಂತ ಎಂದು ಬಿಂಬಿಸುವ ರಾಜಕೀಯ ಪಕ್ಷಗಳೂ ಇವೆ. ತತ್ಕ್ಷಣದ ಒಂದು ಸ್ಪಂದನೆಯನ್ನೇ ರಾಜಕೀಯ ಸಿದ್ಧಾಂತ ಎಂದುಕೊಳ್ಳುವವರೂ ಇದ್ದಾರೆ. ರಾಷ್ಟ್ರೀಯತೆಯ ಹಂಗಿಲ್ಲದಿರುವ ಸಿದ್ಧಾಂತಗಳನ್ನೂ ಕೂಡಾ ಜಗತ್ತು ನೋಡಿದೆ, ಅನುಭವಿಸಿದೆ. ಅಧುನಿಕ ಪ್ರಜಾಪ್ರಭುತ್ವಕ್ಕೂ ಪೂರ್ವದಲ್ಲೇ ಇದ್ದ ಕೆಲವು ಗುಂಪುಗಳು, ಆ ಗುಂಪುಗಳಿಗೂ ಇದ್ದ ಸಿದ್ಧಾಂತಗಳನ್ನೂ ಜಗತ್ತು ನೋಡಿದೆ. ದೀರ್ಘ ಕಾಲ ಬಾಳಿದ ಗಟ್ಟಿತನದ ಸಿದ್ಧಾಂತಗಳನ್ನು, ಪಕ್ಷಗಳನ್ನೂ ನೋಡಿದೆ. ಆತುರದಿಂದ ಸಷ್ಟಿಯಾದವು ಅಷ್ಟೇ ಬೇಗ ಕಾಲವಾದುದನ್ನೂ ನೋಡಿದೆ. ನೆಪಮಾತ್ರಕ್ಕೆ ದೊಡ್ಡದಾಗಿ ಕಾಣುವ ಆದರೆ ಒಳಗೊಳಗೇ ಸತ್ತಂತಿರುವ ಪಕ್ಷ ಮತ್ತು ಸಿದ್ಧಾಂತವನ್ನೂ ನೋಡಿದೆ. ಮತ್ತು ಹಲವು ಅನಿವಾರ್ಯತೆಗಳಿಂದ ಸಿದ್ಧಾಂತದಿಂದ ಹೊರಳಿಕೊಂಡವುಗಳನ್ನು ಕೂಡಾ ಜಗತ್ತು ಹಲವು ಸಂದರ್ಭಗಳಲ್ಲಿ ನೋಡಿದೆ. ಭಾರತವಂತೂ ಅದನ್ನು ತೀರಾ ಹತ್ತಿರದಿಂದ ನೋಡಿದೆ.
ಹಣ್ಣಾದ ಬದುಕು; ಸಾಂಸ್ಕೃತಿಕ ರಾಜಕಾರಣದ ಬೆಳಕು
– ಸಂತೋಷ್ ತಮ್ಮಯ್ಯ
ನಾಡಿನ ಖ್ಯಾತ ತತ್ವಶಾಸ್ತ್ರಜ್ಞರೊಬ್ಬರು ಕಲಾವಿಮರ್ಶಕ ಅನಂದ ಕೆಂಟಿಶ್ ಕುಮಾರಸ್ವಾಮಿಯವರನ್ನು ವಿವರಿಸುವುದು ಹೀಗೆ ; ಅಯೋಧ್ಯೆ ಕ್ಷೋಭೆಗೊಂಡಿತ್ತು. ಕೈಕೆಯಿಯ ಕೋಪ ಅರಮನೆಯ ಶಾಂತಿಯನ್ನು ತಿಂದು, ಪಟ್ಟಾಭಿಷೇಕದ ಹರ್ಷ ಕ್ಷಣಮಾತ್ರದಲ್ಲಿ ನೀರುಪಾಲಾಗಿ, ದಶರಥನಿಗೆ ಸಂದಿಗ್ದತೆ ಉಂಟಾಗಿ. ರಾಮನಿಗೆ ಕಾಡಿಗೆ ತೆರಳಲು ಸೂಚಿಸಿ ಆತ ಕುಸಿದು ಬಿದ್ದಿದ್ದ. ರಾಮ ಪಿತೃವಾಕ್ಯಪರಿಪಾಲನೆಗಾಗಿ ಕಾಡಿಗೆ ತೆರಳಿದ. ಇತ್ತ ಕುಸಿದಿದ್ದ ದಶರಥ ಅದೇ ಕೊರಗಿನಿಂದ ಕೊನೆಯುಸಿರೆಳದಿದ್ದ. ಅದೇ ಹೊತ್ತಿಗೆ ಕೈಕೆಯ ಮಗ ಭರತ ಸೋದರ ಶತ್ರುಘ್ನನೊಡನೆ ಕೇಕೆಯ ದೇಶಕ್ಕೆ ಹೋಗಿದ್ದನಲ್ಲ. ಅವರಿಗೆ ತುರ್ತು ಕರೆ ಹೋಯಿತು. ರಾಜಧಾನಿಗೆ ಕೂಡಲೇ ಮರಳಬೇಕೆಂಬ ಕರೆಗೆ ಸೋದರರಿಬ್ಬರೂ ಕುದುರೆಯೇರಿ ಅಯೋಧ್ಯೆಗೆ ದೌಢಾಯಿಸಿ ಬರುತ್ತಿದ್ದರು. ಇನ್ನೇನು ಕತ್ತಲಾಗುತ್ತಿದೆ ಎಂಬಷ್ಟರಲ್ಲಿ ಅವರು ಅಯೋಧ್ಯೆ ಹೊರವಲಯಕ್ಕೆ ಬಂದು ಮುಟ್ಟಿದ್ದರು. ಹೊರವಲಯದಲ್ಲೊಂದು ಭವನ. ಆ ಭವನಕ್ಕೊಬ್ಬ ಕಾವಲುಗಾರ. ಭವನದಲ್ಲಿ ಇದುವರೆಗೆ ಆಗಿಹೋದ ಇಕ್ಷ್ವಾಕು ವಂಶದ ಸಾಮ್ರಾಟರ ಪ್ರತಿಮೆಗಳ ಸಾಲುಗಳು. ಭರತನಿಗೆ ಏನನ್ನಿಸಿತೋ ಏನೊ ಶತ್ರುಘ್ನ ಬಂದದ್ದೇ ಇದೆ ಪೂರ್ವಿಕರಿಗೊಮ್ಮೆ ನಮಸ್ಕರಿಸಿ ಹೊರಡೋಣ ಎಂದ. ಕಾವಲುಗಾರ ದೊಂದಿ ತಂದ. ಸೋದರರು ಭವನ ಹೊಕ್ಕರು. ಉದ್ದಕ್ಕೆ ನಿಂತ ಇತಿಹಾಸಪುರುಷರು. ಅಣ್ಣತಮ್ಮರು ಕೊನೆಯಿಂದ ಅಜ್ಜಂದಿರನ್ನು ನೋಡುತ್ತಾ ಬಂದರು. ಪ್ರತಿಮೆಗಳನ್ನು ನೋಡುತ್ತಾ ಶತ್ರುಘ್ನ ಮೆಲುದನಿಯಲ್ಲಿ ಹೆಸರೆಣಿಸತೊಡಗಿದ, ಅಜ, ರಘು, ದಿಲೀಪ… ಅಷ್ಟರಲ್ಲಿ ಭರತ, ಅಲ್ಲಲ್ಲ ತಪ್ಪುಎಂದು ಮತ್ತೆ ಎಣಿಸಿ ನೋಡಿದ ಆತನೂ ತಪ್ಪಿದ. ದಶರಥನೂ ಕಾಲವಾಗಿ ಪ್ರತಿಮೆಯಾಗಿ ನಿಂತುಬಿಟ್ಟಿದ್ದಾನೆ ಎಂದು ಎಂದು ತಿಳಿಯದ ರಾಜಕುಮಾರರು ಮತ್ತೆ ಮತ್ತೆ ಲೆಕ್ಕ ತಪ್ಪಿದರು. ದೊಂದಿಯೂ ಇತ್ತು, ಬೆಳಕೂ ಇತ್ತು, ಆ ಭವನವನ್ನು ಅವರು ಎಷ್ಟೋ ಭಾರಿ ನೋಡಿದ್ದರು ಕೂಡಾ. ಆದರೂ ಲೆಕ್ಕ ತಪ್ಪಿದರು!
ಈ ಜಿಜ್ಞಾಸೆಯನ್ನು ಬಿಚ್ಚಿಟ್ಟವರು ಆನಂದ ಕೆಂಟಿಶ್ ಕುಮಾರಸ್ವಾಮಿಯವರು ಎಂದರು ಆ ಭಾಷಣಕಾರರು. ಅಂದರೆ ಸನಾತನ ಪರಂಪರೆಯಲ್ಲಿ ಮಾನವ ತದ್ರೂಪನ್ನು ಪ್ರತಿಮೆಯಾಗಿ ಕೆತ್ತುವ ಪರಂಪರೆ ಇರಲಿಲ್ಲ ಎಂಬುದನ್ನು ಆನಂದ ಕುಮಾರಸ್ವಾಮಿಯವರು ಶೋಧಿಸಿದ್ದರು.
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಒಂದು ಹೋಲಿಕೆ
ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು
ನಿಜವಾಗಿ ಭಾಷೆ ಅಂದರೆ ಇಷ್ಟೇಯಾ..?
– ಮಲ್ಲಿ ಶರ್ಮ
ಭಾಷೆ. ಭಾಷೆ ಅಂದ್ರೆ ಸಾಕಷ್ಟು ಜನ ಹೇಳೋದೊಂದೇ, “ನಮ್ಮ ಹಿರಿಯರಿಂದಲೇ ಬಂತು, ನಾವು ಅದನ್ನೇ ಬಳಸ್ತಾ ಇದ್ದೇವೆ” ಅಂತಷ್ಟೇ ಹೇಳ್ತಾರೆ.. ಆದರೆ ಅದರ ಮೂಲ, ಅದೆಷ್ಟು ಬದಲಾವಣೆ ಪಡೆದಿದೆ, ಈಗ ಯಾವ ಸ್ಥಿತಿಯಲ್ಲಿದೆ? ಅಂತೆಲ್ಲ ತಿಳಿದೂ ಇರಲ್ಲ, ಅದರ ಕುರಿತು ತಲೆ ಕೆಡಿಸಿಕೊಂಡಂತು ಖಂಡಿತಾ ಇರಲ್ಲ. ಅದರ ಅಗತ್ಯವೂ ಅವರ್ಯಾರಿಗೂ ಇಲ್ಲ. ಭಾಷೆ ಅನ್ನೋದು “ಸಂವಹನ ನಡೆಸಲು ಉಪಯೋಗಿಸುವ ಒಂದಷ್ಟು ಪದಗಳ ಪುಂಜ” ಅಷ್ಟೇ ಎಂದು ಎಲ್ಲರೂ ಡಿಸ್ಕ್ರೈಬ್ ಮಾಡಿ ಡೆಫಿನಿಷನ್ ಕೊಟ್ಟುಬಿಟ್ಟಾರು. ನಿಜವಾಗಿ ಭಾಷೆ ಅಂದರೆ ಅಷ್ಟೇಯಾ!!? ಮತ್ತಷ್ಟು ಓದು
ಶಿಕ್ಷಣದಿಂದ ಸ್ತ್ರೀ ಮತ್ತು ಉಕ್ಕಿನ ತರುಣ ಪಡೆ; ಎರಡು ತತ್ವಗಳ ಸಂಗಮ ಈ ಸಾಹಿತ್ಯ ಸಮ್ಮೇಳನ
– ಅಕ್ಷತಾ ಬಜ್ಪೆ
ವಿವೇಕಾನಂದರ ಪಶ್ಚಿಮದ ದಿಗ್ವಿಜಯದ ಕಥೆ ನಮಗೆಲ್ಲ ಗೊತ್ತೇ ಇದೆ. ಆದರೆ ಈ ಒಂದು ದಿಗ್ವಿಜಯ ಗುರು–ಶಿಷ್ಯೆಯರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶಕ್ಕೆ ಶುಭಶಕುನವಾಯಿತು. ಸ್ವಾಮಿ ವಿವೇಕಾನಂದರು ಹೋದಲ್ಲೆಲ್ಲಾ ಅವರನ್ನು ಅನುಸರಿಸುತ್ತಾ ಅವರ ಉಪನ್ಯಾಸಗಳನ್ನು ಕೇಳುತ್ತಿದ್ದ ಐಯರ್ಲೆಂಡಿನ ಮಾರ್ಗರೆಟ್ ಗೆ ಭಾರತದ ಬಗ್ಗೆ ಇದ್ದ ಕುತೂಹಲ ಹೆಚ್ಚಾಗುತ್ತಲೇ ಹೋಯಿತು. ಭಾರತಕ್ಕೆ ಬರಲು ಉತ್ಸುಕರಾಗತೊಡಗಿದರು. ಇದಕ್ಕಾಗಿ ಸ್ವಾಮೀಜಿಯವರಲ್ಲಿ ನಿವೇದನೆಯನ್ನು ಸಲ್ಲಿಸಿದರು. ಆದರೆ ಸ್ವಾಮೀಜಿ ಒಪ್ಪಲಿಲ್ಲ. ಸ್ವಾಮೀಜಿಯವರು ತಮ್ಮ ಮೊದಲ ಯುರೋಪ್ ಪ್ರವಾಸ ಮುಗಿಸಿ ಆಗಷ್ಟೇ ಭಾರತಕ್ಕೆ ಹಿಂದಿರುಗಿದ್ದರು. ಪರಿಸ್ಥಿತಿಗೆ ಸ್ಪಂದಿಸಿದ ಸ್ವಾಮೀಜಿ ಮಾರ್ಗರೆಟ್ ಗೆ ಪತ್ರ ಬರೆದು ಭಾರತಕ್ಕೆ ಬರುವಂತೆ ಸೂಚನೆಯಿತ್ತರು. ಮತ್ತಷ್ಟು ಓದು
‘ಗಾಂಧಿಬಜಾರ್’ನಲ್ಲಿ ನೆನಪುಗಳ ಸೋನೆ ಮಳೆ!
– ತುರುವೇಕೆರೆ ಪ್ರಸಾದ್
ಬೆಂಗಳೂರಿನ ಗಾಂಧಿಬಜಾರ್ನ ಮಧುರ ನೆನಪುಗಳನ್ನು ಯಾವತ್ತಿಗೂ ಮರೆಯಲಾಗುವುದಿಲ್ಲ. ಗಾಂಧಿಬಜಾರ್ನ ಬ್ಯೂಗಲ್ ರಾಕ್, ವಿದ್ಯಾರ್ಥಿ ಭವನ್ ಮಸಾಲೆ ದೋಸೆ, ಚುರ್ಮುರಿ, ಸುಬ್ಬಮ್ಮಜ್ಜಿ ಹಪ್ಪಳದ ಅಂಗಡಿ, ಪ್ರಜಾಮತ ಕಛೇರಿ ಇವೆಲ್ಲಾ ಗಾಂಧಿಬಜಾರ್ ಎಂದೊಡನೆ ದುತ್ತನೆ ಕಣ್ಮುಂದೆ ಬಂದು ನಿಲ್ಲುತ್ತವೆ. ಗಾಂಧಿಬಜಾರ್ ಇಡೀ ಬೆಂಗಳೂರಿಗೇ ಒಂದು ಘನತೆವೆತ್ತ ಶಾಂತಿಕುಟೀರ ಎಂಬಂತಂಹ ಭಾವನೆ ಮೂಡಿಸುವ ಅನುಭವಗಳು ಗಾಂಧಿಬಜಾರ್ನ ರಸ್ತೆಗಳಲ್ಲಿ ಸುತ್ತಾಡಿದಾಗ ನನಗಾಗಿದೆ. ಸೋನೆ ಮಳೆ ಬಂದು ನಿಂತ ಒಂದು ಮುಸ್ಸಂಜೆಯಲ್ಲಿ ಇಕ್ಕೆಲೆಗಳ ಹಸಿರು ಮರಗಳ ನಡುವೆ ಪ್ರಶಾಂತವಾಗಿ ನಡೆಯುತ್ತಾ ಗಾಂಧಿಬಜಾರ್ನ ಹೂವಿನಂಗಡಿಗಳ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ಅನಿರ್ವಚನೀಯ ಅನುಭವ. ಬಹುಶಃ ನನಗೆ ನೆನೆಪಿರುವ ಹಾಗೆ ಮೆಜೆಸ್ಟಿಕ್ನಿಂದ ಆ ಕಾಲದ ಮೊದಲ ಡಬ್ಬಲ್ ಡೆಕ್ಕರ್ ಬಸ್ ಓಡಾಟ ಆರಂಭಿಸಿದ್ದೇ ಗಾಂಧಿಬಜಾರ್ಗೆ! ಆಹ್ಲಾದಕರ ವಾತಾವರಣ ಬೆಂಗಳೂರಿನ ಕೆಲವೇ ಬಡಾವಣೆಗಳಿಗಿರುವ ಸೌಭಾಗ್ಯ.ಅವುಗಳಲ್ಲಿ ಗಾಂಧಿಬಜಾರ್ಗೆ ಅಗ್ರಸ್ಥಾನ ಎಂದರೆ ತಪ್ಪಿಲ್ಲ, ಇಲ್ಲೇ ಪೂರ್ವ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿದ್ದ ಅಜ್ಜನ ಮನೆಗೆ ವರ್ಷಕ್ಕೊಂದು ಭಾರಿ ಬಂದು ಜಾಂಡಾ ಹೊಡೆಯುತ್ತಿದ್ದ ನನಗೆ ಗಾಂಧಿಬಜಾರ್, ಡಿವಿಜಿ ರೋಡ್, ಬುಲ್ ಟೆಂಪಲ್ ರಸ್ತೆಯ ಸಂದಿಗೊಂದಿಗಳೂ ಪರಿಚಯವಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಕಳ್ಳೆಕಾಯಿ ಪರಿಷೆಗಂತೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಬನಶಂಕರಿಯಲ್ಲಿ ನಮ್ಮೂರಿನಿಂದ ಹೋಗಿ ನೆಲೆಸಿದ್ದ ನನ್ನ ಗೆಳೆಯರು ಇದ್ದರು, ನಾವೆಲ್ಲಾ ಬ್ಯೂಗಲ್ ರಾಕ್,ಕೃಷ್ಣರಾವ್ ಪಾಕ್ಗಳಲ್ಲಿ ಅದೆಷ್ಟು ಕಾಲ ಕಳೆದಿದ್ದೇವೆಂಬುದಕ್ಕೆ ಲೆಕ್ಕವೇ ಇಲ್ಲ. ಮತ್ತಷ್ಟು ಓದು
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )
– ಡಾ. ಮಾಧವ ಪೆರಾಜೆ
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
ಎರಡು ಭಿನ್ನ ಶಾಸನಗಳು:
ಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… ಮತ್ತಷ್ಟು ಓದು
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ
ಮಧ್ಯಕಾಲದಲ್ಲಿ ಗುಡಿಗಳು:
ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು