ಓ ‘ಸಂಬಂಧ’ಗಳೇ ನೀವ್ಯಾಕೆ ಇಷ್ಟು ‘ಬಿಜಿ’!
– ಸುವರ್ಣ ಹೀರೆಮಠ
ಆ ಕಾಲವೇ ಹಾಗಿತ್ತು. ಮುಖಾಮುಖಿ ಮಾತು, ಸಂಬಂಧಗಳಿಗೆ ಬೆಲೆ ಇತ್ತು. ಜತೆಯಾಗಿ ಊಟ, ಆಟ, ಪಾಠ ನಮ್ಮದಾಗುತ್ತಿತ್ತು. ಆದರೆ ಈಗ ಕಾಲ ಆಗಿಲ್ಲ. ವೈಯಕ್ತಿಕ ಹಿತಾಸಕ್ತಿ ಸಾಧನೆ, ಕೆಲಸದ ಒತ್ತಡ ಎಲ್ಲವನ್ನು ನುಂಗುತ್ತಿದೆ. ಸಂಬಂಧವೆಂಬುದು ದೂರದ ಬೆಟ್ಟವಾಗುತ್ತಿದೆ. ಹತ್ತಿರ ಹೋಗಿ ನೋಡಿದಾಗ, ಅದು ಕೈಗೆ ಸಿಗದ ವಸ್ತು ಎಂಬುದು ತಿಳಿಯುತ್ತದೆ. ನಾವೆಲ್ಲ ಯಾಕೆ ಹೀಗೆ ಆಗುತ್ತಿದ್ದೇವೆ ? ದೊಡ್ಡ ಗ್ರಾತ್ರದ ಕಟ್ಟಡ ಕಟ್ಟಬೇಕು. ರೋಬೊ ಕಂಡುಹಿಡಿಯಬೇಕು ನಿಜ. ಆದರೆ ನಾವೇ ರೋಬೊ ಆಗಬಾರದು. ನಿಂತ ಕಟ್ಟಡವೂ ಆಗಬಾರದು. Read more
ನಮ್ಮೂರ ಹಬ್ಬ : ನಮ್ಮೂರ ಜಾತ್ರೆ
– ಆದರ್ಶ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಲೇಖನ
ಜಾತ್ರೆಯೆಂದರೆ ಸಾಕು.. ಥಟ್ಟನೆ ಮನಸ್ಸು ಬಾಲ್ಯಕ್ಕೋಡುತ್ತದೆ!
ಅಪ್ಪನ ಬೆನ್ನುಹತ್ತಿ ಹೆಗಲ ಮೇಲೆ ಕೂತು ಪುಟ್ಟ ಕಣ್ಣುಗಳನ್ನ ಇಷ್ಟಗಲ ಅರಳಿಸಿ ನೋಡಿದ್ದ ಇಡೀ ಜಾತ್ರೆಯ ಪನೋರಮಿಕ್ ನೋಟ ಮತ್ತೆ ಅಷ್ಟೇ ರಂಗು ರಂಗಾಗಿ ತೆರೆದುಕೊಳ್ಳುತ್ತದೆ..
ಶಿವಮೊಗ್ಗದಿಂದ ಸಾಗರ, ಹೊಸನಗರ, ಶಿಕಾರಿಪುರಗಳಿಗೆ ಹೋಗುವ ಮಾರ್ಗದಲ್ಲಿ ಮಲೆನಾಡಿನ ಪ್ರವೇಶ ದ್ವಾರದಂತಿರುವ ನಮ್ಮೂರು “ಆನಂದಪುರ”ದ ಕಡ್ಲೆಹಕ್ಲು ಮಾರಿಕಾಂಬಾ ಜಾತ್ರೆಯೆಂದರೆ ನಮ್ಮ ಮಟ್ಟಿಗೆ ಅದು ಬಹುದೊಡ್ಡ ಹಬ್ಬ! ಶಿರಸಿ ಮಾರಿಕಾಂಬಾ, ಸಾಗರದ ಮಾರಿಕಾಂಬಾ, ಆನಂದಪುರದ ಕಡ್ಲೆಹಕ್ಲು ಮಾರಿಕಾಂಬಾ ಈ ಮೂವರೂ ಅಕ್ಕ ತಂಗಿಯರೆಂಬ ಪ್ರತೀತಿಯಿದೆ. ಹಾಗಾಗಿ 3 ವರ್ಷಕ್ಕೊಮ್ಮೆ ಮೊದಲಿಗೆ ಶಿರಸಿಯ ಹಿರಿಯಕ್ಕನ ಜಾತ್ರೆ, ನಂತರ ಸಾಗರದ ಜಾತ್ರೆ, ಕೊನೆಯಲ್ಲಿ ನಮ್ಮೂರ ಜಾತ್ರೆ ನಡೆಯುತ್ತದೆ. ನಮ್ಮ ಸಂಸ್ಕೃತಿಯಲ್ಲಿ ದೈವವನ್ನೂ ಮರ್ತ್ಯ ಸಂಬಂಧಗಳಲ್ಲಿ(ಅಕ್ಕ-ತಂಗಿ) ಬೆಸೆದು ವಾತ್ಸಲ್ಯದಿಂದ ಕಾಣುವುದು ಸೋಜಿಗವಲ್ಲದೇ ಮತ್ತೇನು?! Read more
ಹಿಂದೂ ಮುಸ್ಲಿಂ ಸಮ್ಮಿಲನಕ್ಕೆ ಸೆಕ್ಯಲರಿಸಮ್ಮೇ ಬೇಕೆ? ಅಲಾದಿ ಹಬ್ಬ ಸಾಕೆ?
-ವೀಣಾ. ಈ
(ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.)
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಎರಡನೆಯ ಸ್ಥಾನ ಪಡೆದ ಲೇಖನ..
ಪ್ರಸ್ತುತ ಐಡಿಯಾಲಜಿಗಳ ಯುಗದಲ್ಲಿ ಹಿಂದೂ ಮುಸಲ್ಮಾನ ಎನ್ನುವುದು ಎರಡು ವೈರಿ ಗುಂಪುಗಳೆಂದು ಪರಿಗಣಿಸಲ್ಪಡುತ್ತಿವೆ. ಕೆಲವು ಚಿಂತಕರು ಮತ್ತು ಹಾಗೆನ್ನಿಸಿಕೊಳ್ಳಲು ಹಾತೊರೆಯುವವರು ಎಲ್ಲಾ ಘಟನೆಗಳಲ್ಲೂ ಈ ವೈರತ್ವವನ್ನೇ ಕಾಣುತ್ತಿರುತ್ತಾರೆ. ಹೀಗಿರುವಾಗ ಹಬ್ಬಗಳು, ಆಚರಣೆಗಳು ಅವರಿಗೆ ಒದಗಿದ ಸದಾವಕಾಶಗಳಂತೆ ಭಾವಿಸುತ್ತಾರೆ. ಗಣೇಶ ಹಬ್ಬ ಎಂದರೆ ಗಣೇಶನ ಆಗಮನದಿಂದ ವಿಸರ್ಜನೆಯವರೆಗೆ ಆರಕ್ಷಕರ ಕಾವಲಿನೊಂದಿಗೇ ನಡೆಯುವ ಸ್ಥಿತಿ ಬಂದೊದಗಿದೆ. ಉದ್ದೇಶಪೂರ್ವಕವಾಗಿಯೇ ಮುಸ್ಲಿಂ ಕೇರಿಗಳಲ್ಲಿ ಗಣೇಶನ ಮೆರವಣಿಗೆ ಮಾಡುವುದು, ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು ಮಾಡಿದರೆ, ಮುಸ್ಲೀಮರು ಇದಕ್ಕೆ ಹೊರತಾಗಿಲ್ಲದಂತೆ ಇದ್ಮೀಲಾದ್ನಂತಹ ಹಬ್ಬದ ಮೆರವಣಿಗೆಯಲ್ಲಿ ಇವೇ ಪ್ರವೃತ್ತಿಗಳು ಪುನಾರವರ್ತನೆಯಾಗುತ್ತವೆ. ಇದರಿಂದ ಹಬ್ಬಗಳೆಂದರೆ ಭಯದ ವಾತಾವರಣ ಸೃಷ್ಟಿಯಾಗುವ ಕಾಲ ಅಲ್ಲಲ್ಲಿ ಕಂಡುಬರುತ್ತಿದೆ. ಇದು ಹೀಗೆ ಮುಂದುವರೆದರೆ ಹಬ್ಬಗಳೆಂದರೆ ಗಲಾಟೆಯುಂಟು ಮಾಡುವ ಸಂಗತಿಗಳೆಂದು ಕಾನೂನು ಮೂಲಕವೇ ಅವುಗಳನ್ನು ನಿಷೇಧ ಮಾಡುವ ಸಂದರ್ಭ ಬಂದರೂ ಬರಬಹುದು. ಆದರೆ ಹಬ್ಬಗಳು ಈ ಕೆಲಸವನ್ನು ಮಾಡುತ್ತವೆಯೇ? ಅವುಗಳ ಸ್ವರೂಪವೇನು? Read more
ನಮ್ಮೂರ ಹಬ್ಬ : ಶ್ರೀ ಸಿದ್ದಿ ವಿನಾಯಕನ ಜಾತ್ರೆ
– ಮನುಶ್ರೀ ಕೆ.ಎಸ್
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದ ಲೇಖನ
‘ಊರು’ ಅಂದರೆ ನಮಗೆಲ್ಲರಿಗೂ ಮನೆಯ ನಂತರ ಮನಸಿಗೆ ಹತ್ತಿರವಾಗುವ ಮತ್ತೊಂದು ಅಚ್ಚು ಮೆಚ್ಚಿನ ಜಾಗ. ಇಲ್ಲಿಯೂ ಕೂಡ ನಮ್ಮ ಮನೆಯ ಹಾಗೆಯೇ ಒಂದು ದೊಡ್ಡ ಸಂಸಾರವಿದೆ. ಅದರಲ್ಲಿ ಸುಖ ದುಃಖಗಳ ಕಥೆಯಿದೆ, ನೆಮ್ಮದಿಯ ಆಚರಣೆಯಿದೆ, ನಂಬುವ ಸಂಪ್ರದಾಯವಿದೆ, ದುಡಿಯುವ ಕಸುಬಿದೆ, ಕಣ್ಣೀರಿಡಿಸುವ ಪ್ರೀತಿಯಿದೆ, ಕಂಡರಾಗದ ದ್ವೇಷವಿದೆ, ದೆವ್ವದ ಭಯವಿದೆ, ದೈವದ ಭಕ್ತಿಯಿದೆ ಎಲ್ಲಾ ಕೂಡಿ ಕೊಂಡಿರುವ ಒಂದು ಹಳೇ ಆಲದ ಮರದ ಹಾಗೆ. Read more
ನಮ್ಮೂರ ಹಬ್ಬ : ತಿಂಗಳು ಮಾಮನ ಹಬ್ಬ
– ಶಾಂತಮ್ಮ ಕೋಡಯ್ಯ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಲೇಖನ
ಪೀಠಿಕೆ: ಹಬ್ಬಗಳು ಗ್ರಾಮದ ಅವಿಭಾಜ್ಯ ಅಂಗಗಳು ಹಳ್ಳಿಗರಿಗೆ ಹಬ್ಬಗಳೇ ಜೀವಾಳ. ಹಬ್ಬಗಳೇ ಮಾದ್ಯಮಗಳು, ಮನೋರಂಜನೆಗಳು.. ನಮ್ಮ ಪೂರ್ವಜರಿಂದ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ಪರಿಚಯಿಸುವ ನಮ್ಮ ಜೀವನದಲ್ಲಿ ಸುಂದರ ಅನುಭವಗಳು ಮತ್ತು ಬಾಲ್ಯ, ಯೌವನ, ಮುಪ್ಪು, ಪ್ರೇಮ ಮುಂತಾದವುಗಳ ಸಂಗಮ. ಹಬ್ಬಗಳು ಹಳ್ಳಿಗರ ಪ್ರತಿಷ್ಠೆ ಕೂಡ ಹೌದು. ಎಲ್ಲ ಜಾತಿಯವರು ಬೆರೆತು, ಭೇದ ಮರೆತು ಒಂದಾಗುವ ಪರಿ ಅದ್ಭುತ. ನಮ್ಮ ಹಿರಿಯರ ಹಾಡು, ಹಸೆ, ಬೈಗುಳ, ಬೆಡಗು, ಬಿನ್ನಾಣ, ಕಾರ್ಯ ವೈಖರಿ ಎಲ್ಲ ಸಂಸ್ಕೃತಿಯನ್ನ ಹೊಂದಿ ಬೆಳೆಯಲು ಸಹಾಕಾರಿ ಈ ತಿಂಗಳಮಾಮನ ಹಬ್ಬ. Read more
ನಮ್ಮೂರ ಹಬ್ಬ : ಚೌತ
– ಸುಜೀತ್ ಕುಮಾರ್
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದ ಲೇಖನ
ಕಾಲ ವಸಂತವನ್ನು ಕಳೆದು ಉರಿ ಬೇಸಿಗೆಗೆ ಒಗ್ಗತೊಡಗಿತ್ತು. ರೆನೊಲ್ಡ್ಸ್ ಹಾಗು ‘ಟಿಕ್- ಟಿಕ್’ ಪೆನ್ನುಗಳೊಟ್ಟಿಗೆ ಗಾಜಿನ ದೇಹದಂತಹ ಪ್ಲಾಸ್ಟಿಕ್ನ ಪೆನ್ನುಗಳೂ ಮಕ್ಕಳ ಕೈಸೇರತೊಡಗಿದ್ದವು. ಟಿ.ವಿ.ಎಸ್ ಹಾಗು ಬಜಾಜ್ ಬೈಕುಗಳೊಟ್ಟಿಗೆ ಓತಿಕ್ಯಾತದ ಮುಖಕ್ಕೆ ಹೋಲುವ ಹೆಡ್ಲೈಟ್ ನ ನವ ಮಾದರಿಯ ಬೈಕುಗಳು ರಸ್ತೆಯ ಮೇಲೆ ಕಾಣತೊಡಗಿದ್ದವು, ಫೋನೆಂದರೆ ರಸ್ತೆ ಬದಿಯ ಬೋರವೆಲ್ ನ ಕುತ್ತಿಗೆಯನ್ನು ಸಾಧ್ಯವಾದಷ್ಟು ಮೇಲಕ್ಕೆಳೆದು ನಿಲ್ಲಿಸಿರಿವ ಕಂಬಗಳು ಹಾಗು ಅವುಗಳ ಬುಡದಲ್ಲಿ ಶಾವಿಗೆ ಪಾಯಸದ ಶಾವಿಗೆಗಳಂತೆ ನುಲಿದುಕೊಂಡಿರುವ ರಾಶಿ ರಾಶಿ ವೈರುಗಳು ಎಂದರಿತ್ತದ್ದ ಎಷ್ಟೋ ಜನರಿಗೆ ಇವುಗಳ್ಯಾವುದರ ಕಿರಿ- ಕಿರಿ ಇಲ್ಲದೆ ಜೇಬಿನ ಒಳಗೆ ಎಲ್ಲೆಂದರಲ್ಲಿಗೆ ಕೊಡೊಯ್ಯಬಲ್ಲ ಫೋನುಗಳು ಬರುತ್ತಿದೆ ಎಂದು ಕೇಳಿ ಆಶ್ಚರ್ಯ ಚಕಿತವಾಗುತ್ತಿದ್ದ ಕಾಲವದು.. ಅಲ್ಲದೆ ಪ್ರಪಂಚದ ಯಾವುದೇ ಸಮಸ್ಯೆಗಳಿಗೂ ಒಂದಿಲ್ಲೊಂದು ಉತ್ತರವನ್ನು ಕೊಡಬಲ್ಲ ‘ಗೂಗಲ್’ ಎಂಬೊಂದು ಯಂತ್ರವಿದೆ ಎಂದರೆ ಕೇಳಿದವರು ಗಹಗಹನೇ ನಕ್ಕಿ ಸುಮ್ಮನಾಗಿಬಿಡುತ್ತಿದ್ದರು. ಒಟ್ಟಿನಲ್ಲಿ ಕಾಲ ವಸಂತವನ್ನು ಕಳೆದು ಉರಿ ಬೇಸಿಗೆಗೆ ಒಗ್ಗತೊಡಗಿತ್ತು. Read more
ನಮ್ಮೂರ ಹಬ್ಬ : ಪರಿಸರಸ್ನೇಹಿ ದೊಡ್ಡಹಬ್ಬ
– ಮಾಲತಿ ಹೆಗಡೆ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದ ಲೇಖನ
ಬಾಲ್ಯದಲ್ಲಿ ಕಂಡ ಮಲೆನಾಡಿನ ಪರಿಸರದ ಸ್ನೇಹಿಯಾದ ದೀಪಾವಳಿ ಮನದಲ್ಲಿ ನಂದಾದೀಪದಂತೆ ಬೆಳಗುತ್ತಲೇ ಇರುತ್ತದೆ. ಅಲ್ಲಿ ದೀಪಾವಳಿಗೆ ದೊಡ್ಡಹಬ್ಬ ಎಂದು ಕರೆಯುವ ವಾಡಿಕೆ. ಮಳೆಗಾಲದ ಆರಂಭದಲ್ಲಿ ಗೊಂಡೆರು ಹೂವಿನ (ಚೆಂಡು ಹೂವಿನ) ಬೀಜ ಹಾಕಿದರೆ ದೀಪಾವಳಿಯಲ್ಲಿ ಹೂವು ಸಿಗುತ್ತದೆ ಎಂಬ ಕರಾರುವಾಕ್ಕಾದ ಲೆಕ್ಕಾಚಾರದಲ್ಲಿ ಹಬ್ಬದ ತಯಾರಿ ಶುರುವಾಗುತ್ತಿತ್ತು. ಹಬ್ಬಕ್ಕೆ ವಾರದ ಮೊದಲು ಮನೆಯ ಹೊರ ಗೋಡೆಗೆ ಹಳದಿ ಮಣ್ಣು, ಅಡುಗೆ ಮನೆಗೆ ಕೆಮ್ಮಣ್ಣು, ಕಟ್ಟಿಗೆ ಒಲೆ ಇರುವೆಡೆಗೆ ಕಪ್ಪು ಮಸಿಯನ್ನೆ ಸಾರಣೆ ಮಾಡುತ್ತಿದ್ದೆವು. ಅಣಲೆಕಾಯಿ ಮಸಿ, ಕೆಮ್ಮಣ್ಣು, ಹಳದಿ ಮಣ್ಣು ಎಲ್ಲಾ ನೀರಿನಲ್ಲಿ ಕದಡಿ ಹತ್ತಿಯ ಬಟ್ಟೆ ಮುಳುಗಿಸಿ ಮಣ್ಣಿನ ಗೋಡೆಗೆ ಬರೆಸುತ್ತಾ ಹೋಗುವ ಸಂಭ್ರಮದಲ್ಲಿ ಹಿರಿಯರೊಂದಿಗೆ ನಾವೂ ಭಾಗಿಗಳು. Read more
ನಮ್ಮೂರ ಹಬ್ಬ : ಮುಗಬಾಳ ಕರಗ ಸಂಪ್ರದಾಯ
– ಸುರೇಶ್ ಮುಗಬಾಳ್
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಆರನೇ ಸ್ಥಾನ ಪಡೆದ ಲೇಖನ ..
ಕರದಲ್ಲಿ ಮುಟ್ಟದೆ, ರುಂಡದಲ್ಲಿ ಧರಿಸಿ ಚಲಿಸುವುದೇ “ಕರಗ”, ಸ್ತ್ರೀ ವೇಷಧಾರಿ ಪುರುಷ (ಕರಗ ಪೂಜಾರಿ) ತನ್ನ ತಲೆಯ ಮೇಲೆ ಕರಗವನ್ನು ಹೊತ್ತು ಕುಣಿಯುವುದನ್ನು ಕಣ್ತುಂಬಿಕೊಳ್ಳುವುದೇ ಸೊಗಸು, ಮೂರು ಕಳಶಗಳನ್ನು ಒಂದರ ಮೇಲೊಂದರಂತೆ ಜೋಡಿಸಿ, ಕಳಶಗಳನ್ನು ಸುಗಂಧ ಬೀರುವ ಮಲ್ಲಿಗೆ ಹೂಗಳಿಂದ ಸಿಂಗರಿಸಿ, ಅಲಂಕೃತಗೊಂಡ ಕರಗವನ್ನು ತಲೆಯಮೇಲೆ ಹೊರುವ ಕರಗ ಪೂಜಾರಿಯು, ಎಲ್ಲೂ ಸಮತೋಲನವನ್ನು ತಪ್ಪದೆ, ಬಲಗೈನಲ್ಲಿ ಕತ್ತಿ (ಬಾಕು), ಎಡಗೈನಲ್ಲಿ ಮಂತ್ರದಂಡವನ್ನು ಹಿಡಿದು, ಘಂಟೆ ಪೂಜಾರಿಯ ಘಂಟೆ ಸದ್ದಿಗೆ, ವೀರಕುಮಾರರ “ಗೋವಿಂದ-ಗೋವಿಂದ” ಕೂಗಿಗೆ ತಾಳಬದ್ಧವಾಗಿ ಕುಣಿಯುವ ಆಚರಣೆ ಕರಗ ಶಕ್ತ್ಯೋತ್ಸವ ಎನಿಸಿಕೊಂಡಿದೆ, ಕರಗ ಪೂಜಾರಿಯು ಕಳಶವನ್ನು ತಲೆಯಮೇಲೆ ಹೊತ್ತು ಕುಣಿಯುವಾಗ ಎಂತಹ ನಾಸ್ತಿಕನ ಎದೆಯಲ್ಲೂ ಆಸ್ತಿಕತೆಯ ಪ್ರಜ್ಞೆಯನ್ನು ಬಡಿದೆಬ್ಬಿಸಿಬಿಡುತ್ತದೆ. “ಕರಗ” ಎಂದೊಡನೆ ಬೆಂಗಳೂರು ಕರಗ ನೆನಪಾಗುವುದು ಸಾಮಾನ್ಯ.. ಮೈಸೂರಿನ ದಸರ ಬಿಟ್ಟರೆ ಸಾಂಸ್ಕೃತಿಕ ಐತಿಹ್ಯವನ್ನು ಹೊಂದಿದ ಮತ್ತೊಂದು ಆಚರಣೆಯೇ ಬೆಂಗಳೂರಿನ ದ್ರೌಪತಾಂಭ ದೇವಿ ಕರಗ. ಬೆಂಗಳೂರು ಕರಗವನ್ನು ಸುಮಾರು 800 ವರುಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂಬ ಮಾಹಿತಿ ಧರ್ಮರಾಯಸ್ವಾಮಿ ದೇವಸ್ಥಾನದ ಮೂಲ ದಾಖಲೆಗಳಲ್ಲಿ ಉಲ್ಲೇಖಿತವಾಗಿದೆ. ಬೆಂಗಳೂರು ಕರಗದ ರೀತಿಯಲ್ಲೇ ಬೆಂಗಳೂರು ನಗರದ ಸುತ್ತ-ಮುತ್ತ ಕರಗವನ್ನು ಆಚರಿಸಿಕೊಂಡು ಬರುವ ಪದ್ಧತಿಯಿದೆ. ಮುಖ್ಯವಾಗಿ ಹೊಸಕೋಟೆ, ಮಾಲೂರು, ವರ್ತೂರು, ಕೆಂಗೇರಿ ಹಾಗೂ ಆನೇಕಲ್ ಭಾಗಗಳಲ್ಲಿ ಕರಗ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗಿದೆ. ಈ ಎಲ್ಲಾ ಕರಗ ಆಚರಣೆಗಳು ಭೌಗೋಳಿಕವಾಗಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುವುದರಿಂದ ಹೆಚ್ಚು ಪ್ರಸಿದ್ಧಿ ಪಡೆದಿವೆ. Read more
ನಮ್ಮೂರ ಹಬ್ಬ : ಗಣೇಶ ಹಬ್ಬ
ಗೀತಾ ಜಿ.ಹೆಗಡೆ, ಕಲ್ಮನೆ.
ಓಂ ನಮೋ ನಮಃಸ್ತುಭ್ಯಂ
ಗಣರಾಜ ಮಹೇಶ್ವರಃ
ಸರ್ವ ವಿಘ್ನ ಹರೋದೇವಾ
ಪ್ರಥಮಂ ತವ ವಂದನಾ||
ಈ ಶ್ಲೋಕ ನನ್ನ ಆಯಿ(ಅಮ್ಮ) ದಿನವೂ ದೇವರಿಗೆ ನಮಸ್ಕಾರ ಮಾಡುವಾಗ ಮೂರೊತ್ತೂ ಹೇಳುತ್ತಿದ್ದರು. ದಿನವೂ ಕೇಳುವ ಕಿವಿಗಳು ನನ್ನ ಬಾಯಲ್ಲಿ ಉದುರಲು ಪ್ರಾರಂಭವಾಗಿರೋದು ತೊದಲು ನುಡಿಗಳ ವಯಸ್ಸಿನಲ್ಲಿ. ಅದೂ ಆಯಿಯೊಂದಿಗೆ ಕ್ರಮೇಣ ದಿನವೂ ಲೊಚ ಲೊಚ ಭಾಷೆಯಲ್ಲಿ ಹೇಳುವಾಗ ಆಯಿಯ ಮುಖದಲ್ಲಿ ಗಿಕಿ ಗಿಕಿ ನಗು, ತನ್ನ ಮಗಳು ಮಹಾ ಬುದ್ಧಿವಂತೆ ಎಂದು ಎಲ್ಲರೆದುರು ಕೊಚ್ಚಿಕೊಂಡಿದ್ದೇ ಕೊಚ್ಚಿಕೊಂಡಿದ್ದು. Read more
ನಮ್ಮೂರ ಹಬ್ಬ:- ಕಂಬಳ
ಶ್ರೀಮತಿ. ಶೈನಾ ಶ್ರೀನಿವಾಸ ಶೆಟ್ಟಿ.
ಕುಂದಾಪುರ
ದೂರ ತೀರದ ಕಡಲ ಕಿನಾರೆಯಲ್ಲಿ ಭೋರ್ಗರೆವ ಅಲೆಗಳ ಅಬ್ಬರದಲ್ಲಿ, ತಣ್ಣನೆ ಬೀಸುವ ತಂಗಾಳಿಯಲಿ, ಸುಡುಬಿಸಿಲ ನಡುನಡುವೆ ತಂಪೆರೆವ ಸೋನೆ ಮಳೆ, ಉದ್ದನೆಯ ರಸ್ತೆಯ ಇಕ್ಕೆಲೆಗಳಲಿ ಕಂಗೊಳಿಸುವ ಹಸಿರ ಸಿರಿ, ಹಸಿರು ಸೀರೆ ಉಟ್ಟ ನಾರಿಯಂತೆ ತಳುಕು ಬಳುಕಿನ ವ್ಯಯ್ಯಾರದಲಿ ತನು ಮನಕ್ಕೆ ತಂಪೆರೆವ ನನ್ನೂರು… ಆಹಾ ಹೌದು! ಅದುವೇ ನನ್ನೂರು ಕರಾವಳಿ ಕುಂದಾಪುರ.
ಕಂಬಳವೆಂಬ ನನ್ನೂರ ಹಬ್ಬ :
ನನ್ನೂರು ಹಬ್ಬಗಳ ನಾಡು, ಸಂಪ್ರದಾಯದ ಬೀಡು. ತನ್ನದೇ ಸೊಗಡು ತನ್ನದೇ ಆಚರಣೆಯ ಚೌಕ್ಕಟ್ಟಿನಲ್ಲಿ ನೂರಾರು ಹಬ್ಬ, ಸಾವಿರಾರು ವೈವಿಧ್ಯತೆ, ಲಕ್ಷಾಂತರ ಮನದಲ್ಲಿ ನೆಲೆ ನಿಲ್ಲುವ, ಕೋಟ್ಯಾಂತರ ವರ್ಷದ ಇತಿಹಾಸದ ಈ ಕರಾವಳಿಯನ್ನು “ಪರಶುರಾಮ ಸೃಷ್ಠಿ”ಯೆಂದು ಉಲ್ಲೇಖಿಸಲಾಗಿದೆ. Read more