ಕಾರ್ಗಿಲ್ ವಿಜಯೋತ್ಸವ ಕಲಿಸಿದ ಪಾಠಗಳು
– ಅಜಿತ್ ಶೆಟ್ಟಿ ಹೆರಂಜೆ
ಇಂದು ಕಾರ್ಗಿಲ್ ವಿಜಯ ದಿವಸದ ವರ್ಷಾಚರಣೆಯನ್ನು ನಾವು ದೇಶದಾದ್ಯಂತ ಮಾಡುತ್ತಿದ್ದೇವೆ. 1999ಮೇ ತಿಂಗಳಲ್ಲಿ ಪ್ರಾರಂಭವಾದ ಈ ಯುದ್ಧ ಸುಮಾರು 3 ತಿಂಗಳುಗಳ ಕಾಲ ನಡದು 27 ನೆ ಜುಲೈ 1999 ಕ್ಕೆ ಮುಕ್ತಾಯಗೊಂಡಿತು. ಈ ಭೀಷಣ ಯುದ್ಧದಲ್ಲಿ ಭಾರತ ಒಟ್ಟು ತನ್ನ 724 ವೀರ ಸೈನಿಕರನ್ನು ಕಳೆದುಕೊಂಡಿತು. ಈ ಯುದ್ಧಕ್ಕೆ ಪ್ರತಿ ದಿನ ಸರ್ಕಾರಕ್ಕೆ 10 ರಿಂದ 15 ಕೋಟಿಯಷ್ಟು ವೆಚ್ಚವಾಗಿತ್ತು. ಹಾಗಿದ್ದಾಗ ಈ ಯುದ್ಧಕ್ಕೆ ಸರ್ಕಾರ ಖರ್ಚು ಮಾಡಿದ ಒಟ್ಟು ವೆಚ್ಚ ನೀವೇ ಅಂದಾಜಿಸಿ. ಈ ಯುದ್ಧ ನಮಗೆ ಕಲಿಸಿದ ಪಾಠ ಅನೇಕ. ಅದರಲ್ಲೂ 21ನೆ ಶತಮಾನದ ಹೊಸ್ತಿಲಿನಲ್ಲಿ ನಡೆದ ಈ ಯುದ್ಧ, ಯಾವುದೇ ಯುದ್ಧವನ್ನು ಗೆಲ್ಲಲು ಕೇವಲ ಸೈನ್ಯ ಶಕ್ತಿ ಅಷ್ಟೇ ಅಲ್ಲ ಅತ್ಯಾಧುನಿಕ ತಂತ್ರಜ್ಞಾನವೂ ಅತ್ಯಂತ ಆವಶ್ಯಕ ಎನ್ನುವ ಪಾಠವನ್ನು ನಮ್ಮ ದೇಶ ರಾಜಕೀಯ ನಾಯಕರಿಗೆ ಕನ್ನಡಿ ತೋರಿಸಿ ಕೆನ್ನೆಗೆ ಬಾರಿಸಿ ಹೇಳಿತು.ಕಾರ್ಗಿಲ್ ಯುದ್ಧ ನಮಗೆ ಕಲಿಸಿದ ಮತ್ತು ನಾವು ಅದರಿಂದ ಕಲಿತ ಪಾಠವೇನು.? ಬನ್ನಿ ತಿಳಿಯೋಣ.
ಸಾಮಾನ್ಯವಾಗಿ ಯುದ್ಧವನ್ನು ಗೆಲ್ಲಬೇಕಾದರೆ ವೈರಿ ಪಡೆಯನ್ನು ಕಟ್ಟಿ ಹಾಕಿ ಅವರ ಬಗ್ಗೆ ಇಂಚಿಂಚು ಮಾಹಿತಿ ಕಲೆ ಹಾಕಿದಮೇಲೆ, ವೈರಿಗಳ ವಿರುದ್ಧ ಯಾವ ರೂಪದ ಕಾರ್ಯಾಚರಣೆ ಮಾಡಬೇಕು, ಅದಕ್ಕೆ ಬೇಕಾಗಿರುವ ಸೈನ್ಯದ ಸಂಖ್ಯೆ ಅವರಿಗೆ ಬೇಕಾದ ಶಸ್ತ್ರಾಸ್ತ್ರಗಳು ಇತ್ಯಾದಿಗಳನ್ನು ನಿರ್ಧರಿಸಿದಮೇಲಷ್ಟೇ ಯುದ್ಧ ತಂತ್ರ ರೂಪಿಸುವುದು. ದುರಾದೃಷ್ಟವಶಾತ್ ಕಾರ್ಗಿಲ್ ಯುದ್ಧ ಆರಂಭವಾಗಿ ಅದನ್ನು ಬಹುತೇಕ ಮುಗಿಸುವ ತನಕ ನಮಗೆ ನಿಖರವಾಗಿ ಶತ್ರುಗಳು ಯಾರು ಅವರು ನಿಜವಾಗಿಯೂ ಪಾಕಿಸ್ತಾನ ಹೇಳಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ಉಗ್ರಾವಾದಿಗಳೋ ಅಥವಾ ಪಾಕಿಸ್ತಾನದ ಸೈನಿಕರೋ ಅನ್ನುವುದು ಮತ್ತು ಈ ವೈರಿ ಪಡೆಯ ಸಂಖ್ಯೆ ಎಷ್ಟು ಇವರು ಅಡಗಿರುವ ಆಯಕಟ್ಟಿನ ಸ್ಥಳಗಳು ಯಾವುದು, ಅವರಲ್ಲಿ ಎಷ್ಟು ಮದ್ದು ಗುಂಡುಗಳ ದಾಸ್ತಾನುಗಳಿವೆ. ಅವರಲ್ಲಿ ಇರೋ ಶಸ್ತ್ರಾಸ್ತ್ರಗಳ ಬಗ್ಗೆ ಯಾವುದೆ ಸ್ಪಷ್ಟ ಮಾಹಿತಿಗಳಿಲ್ಲದೆ ಕೇವಲ ಒಂದು ಅಂದಾಜಿನ ಮೆಲೆ ಯುದ್ದ ಮಾಡಿದ್ದೆವು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಕುರುಡ ಆನೆಯನ್ನು ವರ್ಣಿಸಿದಂತೆ, ನಮಗೆ ಅಂದು ಕಾರ್ಗಿಲ್ ಒಳಗೆ ನುಸುಳಿ ಬಂದ ಪಾಕಿಸ್ತಾನದ ನುಸುಳುಕೋರರ ಬಗ್ಗೆ ಇದ್ದ ಮಾಹಿತಿ.
ಮೇ ೩, ೧೯೯೯ ರಂದು ತಾಂಶಿ ನಾಮ್ ಗ್ಯಾಲ್ ಎನ್ನುವ ಸ್ಥಳೀಯ ಕುರುಬ, ಬಂಜೂ ಟಾಪ್ ನಲ್ಲಿ ಕೆಲವು ಉಗ್ರರ ಚಟುವಟಿಕೆ ಬಗ್ಗೆ ಮಾಹಿತಿ ಕೊಟ್ಟ ನಂತರ ಯುದ್ಧ ಶುರುವಾಯಿತು. ಕಾರ್ಗಿಲ್ ಯುದ್ಧ ತನ್ನ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಸಮಯ ಭಾರತೀಯ ಸೈನ್ಯ ಸುಮಾರು ೬೦%ದಷ್ಟು ಯುದ್ಧವನ್ನು ಪೂರೈಸಿದ ಸಮಯ. ಅಂತಹ ಸಂದರ್ಭದಲ್ಲಿ ಭಾರತೀಯ ಸೈನ್ಯದ ಓರ್ವ ಅಧಿಕಾರಿ ಕಾರ್ಗಿಲ್ ಪರ್ವತ ಶ್ರೇಣಿಯ ಉಗ್ರರ ಗುಂಡಿಗೆ ಹುತಾತ್ಮನಾಗುವ ಮುಂಚೆ ತಮ್ಮ ಮೇಲಧಿಕಾರಿಗೆ ಕಾಗದ ಬರೆದು ಹೇಳುತ್ತಾ, “ನಾವು ಯಾರೊಡನೆ ಯುದ್ಧ ಮಾಡುತ್ತಿದ್ದೇವೆ ಎನ್ನುವುದೇ ನಮಗೆ ಗೊತ್ತಿಲ್ಲ. ಇದು ನಮ್ಮನ್ನ ಪ್ರಪಾತದತ್ತ ಕೊಂಡೊಯ್ಯುಯುತ್ತಿದೆ”.. ಎಂದು ಹೇಳಿದ್ದರು.ಇದು ಕಾರ್ಗಿಲ್ ಯುದ್ಧದಲ್ಲಿ ಸೈನ್ಯಕ್ಕೆ ಸರ್ಕಾರಕ್ಕೆ ಇದ್ದ ಕ್ಲಾರಿಟಿ.ಇದೇ ಕಾರಣಕ್ಕೆ ನಾವು ಕ್ಯಾಪ್ಟನ್ ಸೌರಬ್ ಕಾಲಿಯ, ಕ್ಯಾಪ್ಟನ್ ವಿಕ್ರಮ್ ಭಾತ್ರ ಕ್ಯಾಪ್ಟನ್ ಅಹುಜಾ ಮುಂತಾದವರು ಸೇರಿದಂತೆ ಸುಮಾರು 724 ಮಂದಿ ಸೈನಿಕರನ್ನು ಕಳೆದುಕೊಳ್ಳಬೇಕಾಯಿತು. ಕ್ಯಾಪ್ಟನ್ ನಚಿಕೆತ್ ಪಾಕಿಸ್ತಾನದಲ್ಲಿ ಯುದ್ಧ ಕೈದಿಯಾಗಿ ಪಡಬಾರದ ಕಷ್ಟ ಸಹಿಸಬೇಕಾಗಿ ಬಂತು. ಇದು ಅಂದಿನ ಸರ್ಕಾರ ಮತ್ತು ಸೈನ್ಯದ ಕಾರ್ಯವಿಮುಖತೆ ಯಿಂದ ಆದ ಘಟನೆಯಲ್ಲ. ಬದಲಾಗಿ ಹಿಂದಿನ ಸರ್ಕಾರಗಳ ಅವರು ಆಡಳಿತದ ಸಮಯದಲ್ಲಿ ಅಂದಿನ ಯದ್ದಗಳು ಕಲಿಸಿದ ಪಾಠವನ್ನು ಕಲಿಯದೆ,ಕರ್ತವ್ಯ ವಿಮುಖರಾಗಿದ್ದು ಕಾರಣ.ಅಂದು ನಮ್ಮಲ್ಲಿ ತಂತ್ರಜ್ಞಾನದ ಮುಖಾಂತರ ವೈರಿಪಡೆಯ ಗತಿವಿಧಿ,ಸಂಖ್ಯೆ ಮತ್ತು ಅವರು ಹೊಂದಿರುವ ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ತಿಳಿಯುವ,ಗುಪ್ತಚಾರಿಕೆ ಮಾಡುವ ಯಾವುದೇ ವ್ಯವಸ್ಥೆ, ಸಾಧನ ಸಲಕರಣೆಗಳು ಇರಲಿಲ್ಲ.ಇಂತಹಾ ಉಪಯುಕ್ತ ಮಾಹಿತಿ ಕೊಡುವ ಬೇಹುಗಾರಿಕ ಉಪಗ್ರಹಗಳು ಇರಲಿಲ್ಲ..!! ಕಾರ್ಗಿಲ್ ಯುದ್ಧದಲ್ಲಿ ನಾವು ಬಹುತೇಕ ಸೈನಿಕರನ್ನು ಪಾಕಿಸ್ತಾನದ ಸೈನ್ಯದ ವಿರುದ್ದ ನೇರ ಯದ್ದದಲ್ಲಿ ಕಳೆದುಕೊಂಡದ್ದಲ್ಲ. ಬದಲಿಗೆ ವೈರಿಗಳ ಬಗ್ಗೆ ಮಾಹಿತಿ ಕಲೆಹಾಕುವ ಸಂದರ್ಭದಲ್ಲಿ ಕಳೆದುಕೊಂಡದ್ದು.ಈ ರೀತಿ ಇಪ್ಪತ್ತೊಂದನೇ ಶತಮಾನದಲ್ಲಿ ಮಾಹಿತಿ ತಂತ್ರಜ್ಞಾನ ಎಷ್ಟು ಅವಶ್ಯಕ ಎನ್ನುವುದು ಕಾರ್ಗಿಲ್ ಯದ್ದ ಕಲಿಸಿದ ಮೊತ್ತಮೊದಲ ಪಾಠ..!!
ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು
– ರಾಕೇಶ್ ಶೆಟ್ಟಿ
ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಭಾರತಕ್ಕೆ ಬಂದ ಸುಭಾಷ್ ರವರು ಮೊದಲಿಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ತಮ್ಮ ಸಾಮರ್ಥ್ಯದಿಂದಲೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಏರಿದ್ದರು. ಆಗಲಾದರೂ ಅವರು ಸುಮ್ಮನೇ ಇದ್ದಿದ್ದರೂ ಸ್ವತಂತ್ರ ಭಾರತದಲ್ಲಿ ಯಾವುದಾದರೊಂದು ಸಚಿವ ಸ್ಥಾನ ಪಡೆದು ಇರುತ್ತಿದ್ದರೋ ಏನೋ. ಆದರೆ ಹುಟ್ಟಾ ಸ್ವಾಭಿಮಾನಿ ಮತ್ತು ಹೋರಾಟಗಾರರಾಗಿದ್ದ ನೇತಾಜಿಯವರು ಕಾಂಗ್ರೆಸ್ಸನ್ನೇ ಬದಲಿಸ ಹೊರಟರು. ಈಗ ಕಾಂಗ್ರೆಸ್ ಎಂಬ ಪುರಾತನ ಪಕ್ಷ ಹೇಗೆ ನೆಹರೂ ಮನೆತನದ ಅಡಿಯಾಳಾಗಿದೆಯೋ, ಆಗ ಗಾಂಧೀಜಿಯವರ ಕೈಯಲ್ಲೇ ಇತ್ತು. ಅದನ್ನು ಧಿಕ್ಕರಿಸಿ ನಿಂತ ಸುಭಾಷರನ್ನು ಗಾಂಧೀ ಬೆಂಬಲಿಗರು ಬಿಟ್ಟಾರೇನು? ಬೆಂಬಲಿಗರು ಬಿಟ್ಟರೂ, ಗಾಂಧೀಜಿ ಪಕ್ಷದ ಮೇಲಿನ ತನ್ನ ಪಾರುಪತ್ತೇದಾರಿಕೆಯನ್ನು ಬಿಡಲು ಸಿದ್ಧರಿದ್ದರಿರಲಿಲ್ಲ. ಹಾಗೆಯೇ, ಭಾರತದ ಸ್ವಾತಂತ್ರ್ಯವೊಂದೇ ಅಂತಿಮ ಗಮ್ಯವಾಗಿದ್ದ ಸುಭಾಷರಿಗೆ ಗಾಂಧೀಜಿಯವರ ಚಿಲ್ಲರೆ ರಾಜಕೀಯದ ಜಂಜಾಟಗಳು ಬೇಕಿರಲಿಲ್ಲ. ಕಾಂಗ್ರೆಸ್ಸಿನಿಂದ ಹೊರ ಬಂದ ಅವರು ಫಾರ್ವರ್ಡ್ ಬ್ಲಾಕ್ ಸ್ಥಾಪಿಸಿದರು. ಬ್ರಿಟಿಷರಿಗೆ ಸುಭಾಷ್ Potential Threat ಎನ್ನುವುದು ಅರಿವಾಗಿತ್ತು. ಅವರನ್ನು ಗೃಹಬಂಧನದಲ್ಲಿರಿಸಿದ್ದರು, ಈ ಪುಣ್ಯಾತ್ಮ ಅಲ್ಲಿಂದ ತಪ್ಪಿಸಿಕೊಂಡರು. ನಂತರದ್ದು ಭಾರತ ಸ್ವಾತಂತ್ರ್ಯ ಇತಿಹಾಸದ ರೋಚಕ ಅಧ್ಯಾಯ, ಬರಿಗೈಯಲ್ಲಿ ದೇಶಬಿಟ್ಟ ಸುಭಾಷ್, ೪೫ ಸಾವಿರ ಜನರ ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ನಿದ್ದೆಗೆಡಿಸಿದ್ದರು. ಎರಡನೇ ವಿಶ್ವ ಯುದ್ಧದಲ್ಲಿ ಜಪಾನ್ ಜೊತೆ ಸೇರಿಕೊಂಡು ೪೪ರಲ್ಲೇ ಅಂಡಮಾನ್-ನಿಕೋಬಾರ್ ದ್ವೀಪಗಳನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು, ಅಂತಿಮವಾಗಿ ಜಪಾನ್ ಹಾಗೂ ಆಜಾದ್ ಹಿಂದ್ ಫೌಜಿಗೆ ಈಶಾನ್ಯ ಭಾರತದಲ್ಲಿ ಹಿನ್ನಡೆಯಾಯಿತಾದರೂ, ಸುಭಾಷರು ಹೊತ್ತಿಸಿದ್ದ ಕ್ರಾಂತಿಯ ಕಿಡಿ ಸರ್ವವ್ಯಾಪಿಯಾಗಿತ್ತು. ಆಜಾದ್ ಹಿಂದ್ ಫೌಜಿನ ರುದ್ರನರ್ತನ ಬ್ರಿಟಿಷ್ ಭಾರತೀಯ ಆರ್ಮಿಯನ್ನು ಆವರಿಸಿಕೊಂಡಿತ್ತು. ಅದೇ ಸಮಯಕ್ಕೆ ಸರಿಯಾಗಿ ಅತ್ತ ಜಪಾನ್ ಶರಣಾಗಾತಿಯಾಗುವುದರಲ್ಲಿತ್ತು, ಇತ್ತ ಬ್ರಿಟಿಷರಿಗೆ ಭಾರತದಲ್ಲಿ ಉಳಿಗಾಲವಿರಲಿಲ್ಲವಾಗಿತ್ತು, ಆಗಲೇ ಶುರುವಾಗಿದ್ದು ಸುಭಾಷರ ನಿಗೂಢ ವಿಮಾನಾಪಘಾತದ ಕತೆ. ಅಪಘಾತದಲ್ಲಿ ಸುಭಾಷರು ಅಸುನೀಗಿದರು ಎನ್ನುವುದನ್ನು ಯಾರೆಂದರೇ ಯಾರೂ ನಂಬುವ ಸ್ಥಿತಿಯಲ್ಲಿರಲಿಲ್ಲ. ಅಮೇರಿಕನ್/ಬ್ರಿಟಿಷ್ ಗುಪ್ತಚರರು ವರ್ಷಗಟ್ಟಲೆ ಸುಭಾಷರ ಇರುವಿಕೆಯ ಪತ್ತೆ ಹಚ್ಚಲೆಂದೇ ಹಿಂದೆ ಬಿದ್ದಿದ್ದರು. ಇತ್ತ ಭಾರತದಲ್ಲಿ ಬ್ರಿಟಿಷರ ಹೈಫೈ ಆತಿಥ್ಯದ ಜೈಲಿನಲ್ಲಿದ್ದುಕೊಂಡೇ ಆಜಾದ್ ಹಿಂದ್ ಫೌಜಿನವರು ಭಾರತಕ್ಕೆ ಬಂದರೆ ಕತ್ತಿ ಹಿಡಿದು ಹೋರಾಡುತ್ತೇನೆಂದಿದ್ದ ಕಠಾರಿ ವೀರ ನೆಹರೂ ಸಾಹೇಬರಿಗೆ, ಸುಭಾಷ್ ವಾಪಸ್ ಬಂದರೆ ತನ್ನ ಖುರ್ಚಿಯ ಗತಿಯೇನು ಎಂದು ಚಿಂತೆ ಹತ್ತಿತ್ತು. ಅದೇ ಕಾರಣಕ್ಕೆ, ಬ್ರಿಟನ್ ಪ್ರಧಾನಿ ಆಟ್ಲಿಯವರಿಗೆ ಬರೆದ ಪತ್ರದಲ್ಲಿ, ನಿಮ್ಮ ಯುದ್ಧ ಖೈದಿ ಸುಭಾಷ್ ಗೆ ರಷ್ಯಾ ಆಶ್ರಯ ಕೊಟ್ಟಿದೆ ಎಂದು ಚಿಲ್ಲರೆ ದೂರು ನೀಡಿದ್ದರು. ಅಂದು ತೈಪೆಯಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲವೆನ್ನುವುದು ಈಗ ಅಧಿಕೃತವಾಗಿದೆ. ವಿಮಾನವೇ ಹಾರದೇ, ಅಪಘಾತವಾಗಿದ್ದು ಎಲ್ಲಿಂದ? ಅಪಘಾತವೇ ನಡೆಯದಿದ್ದ ಮೇಲೆ ಸುಭಾಷರು ಹೋದರೆಲ್ಲಿ? ಹಾಗೆ ನಾಪತ್ತೆಯಾದವರನ್ನು ಹುಡುಕಿ ಕೊಲ್ಲಲಾಯಿತೇ? ಈ ನಿಗೂಢತೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸ್ವತಂತ್ರ ಭಾರತದ ಮೊದಲ ನಿಗೂಢ ರಾಜಕೀಯ ಕಣ್ಮರೆ/ಹತ್ಯೆಯ ಸಾಲಿಗೆ ಸೇರುವುದು ಸುಭಾಷರ ಹೆಸರು. ಸುಭಾಷರು ಮಾಡಿದ ತಪ್ಪೆಂದರೆ ಸ್ವತಂತ್ರ-ಸ್ವಾಭಿಮಾನಿ-ಸಶಕ್ತ ಭಾರತದ ಕನಸು ಕಂಡಿದ್ದು. ಸುಭಾಷರಿಂದ ಶುರುವಾದ ಈ ನಿಗೂಢ ರಾಜಕೀಯ ಹತ್ಯೆ/ಕಣ್ಮರೆಯ ಸರಣಿ ಸ್ವತಂತ್ರ ಭಾರತದಲ್ಲೂ ಮುಂದುವರೆಯುತ್ತಲೇ ಹೋಯಿತು. ಮತ್ತಷ್ಟು ಓದು
ದೇಶಾಭಿಮಾನದ ಮುಂದೆ ದೇಹಾಭಿಮಾನವನ್ನು ಮರೆಯಾಗಿಸಿದ ನಾಯಕ..
– ಸುಜಿತ್ ಕುಮಾರ್
ಗುಡಾಣ ದೇಹದ ಮೇಲಿನ ಕರಿ ಕೋಟು, ತಲೆಯ ಮೇಲೊಂದು ಹಾಂಬರ್ಗ್ ಹ್ಯಾಟು, ಹುಟ್ಟುವಾಗಲೇ ಅಂಟಿಕೊಂಡು ಬಂದಿತ್ತೇನೋ ಎಂಬಂತೆ ಬಾಯನ್ನು ಬಿಟ್ಟಿರದ ಹೊಗೆಯಾರದ ಸಿಗಾರಿನೊಂದು ತುಂಡು, ಕೈಯಲ್ಲೊಂದು ಭಯ ಹುಟ್ಟಿಸುವ ವಾಕಿಂಗ್ ಸ್ಟಿಕ್ಕು. ಇವಿಷ್ಟೇ ಸಾಕು ಇಪ್ಪತ್ತನೇ ಶತಮಾನದ ಕಾಂಟ್ರವೇರ್ಷಿಯಲ್ ವ್ಯಕ್ತಿತ್ವವೊಂದನ್ನು ಬಣ್ಣಿಸಲು. ಭಾರತೀಯರ ಮಟ್ಟಿಗೆ ಗಾಂಧಿಯನ್ನು ಜರಿಯುತ್ತಿದ್ದ, ಭಾರತವನ್ನು ನಿಂತ ನೆರಳಿಗೆ ಆಗದ ಅಲ್ಲದೆ ನಲ್ವತ್ತು ಲಕ್ಷ ಭಾರತೀಯರ ಮರಣ ಮೃದಂಗಕ್ಕೆ ಪ್ರತ್ಯಕ್ಷವಲ್ಲವಾದರೂ ಪರೋಕ್ಷವಾಗಿ ಕಾರಣನಾದ ಈತ ದೇಶಪ್ರೇಮಿಗಳಿಗೆ ಅಕ್ಷರ ಸಹ ವಿಲನ್ನಂತಾದರೂ ಬ್ರಿಟನ್ನಿಗರ ಪಾಲಿಗೆ ಮಾತ್ರ ಸಾಕ್ಷಾತ್ ದೇವಧೂತ! ಪ್ರಪಂಚವನ್ನೇ ನುಂಗಿ ನೀರು ಕುಡಿಯುವಂತೆ ಧಾವಿಸುತಿದ್ದ ಹಿಟ್ಲರ್ ಎಂಬ ರಾಕ್ಷಸನಿಂದ ಬ್ರಿಟನ್ನನ್ನು ರಕ್ಷಿಸಿದನಲ್ಲದೆ ಎರಡನೇ ಮಹಾಯುದ್ದಕ್ಕೂ ಅಂತ್ಯವನ್ನು ಹಾಡಿಸಿದವನೀತ. ಎರಡು ಬಾರಿ ಬ್ರಿಟನಿನ್ನ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ ಈತ ಒಬ್ಬ ಬರಹಗಾರ, ಅಧಿಕೃತ ಪತ್ರಕರ್ತ, ಸೇನಾನಾಯಕ ಹಾಗು ಒಬ್ಬ ಖ್ಯಾತ ಚಿತ್ರಗಾರನೂ ಹೌದು. ಕೆಲವು ನೆಗೆಟಿವ್ ಅಂಶಗಳನ್ನು ಬದಿಗಿರಿಸಿ ಈತನನ್ನು ನೋಡಬಯಸಿದವರಿಗೆ ವಿಶ್ವವನ್ನೇ ಆಳಿದ ದೇಶವೊಂದು ಹಿಟ್ಲರ್ನ ನಾಝಿ ಜರ್ಮನಿಯ ಗುಲಾಮನಾಗಬೇಕಿದ್ದ ಸಂದಿಗ್ಧ ಘಳಿಗೆಯಲ್ಲಿಯೂ ತಲೆ ತಗ್ಗಿಸದೆ ಹೋರಾಡಿದ ಧೈರ್ಯಶಾಲಿ ನಾಯಕನೊಬ್ಬ ಅನಾವರಣಗೊಳ್ಳುತ್ತಾನೆ. ಅವನ ಹೆಸರು ವಿನ್ಸ್ಟನ್ ಲಿಯೊನಾರ್ಡ್ ಸ್ಪೆನ್ಸರ್ ಚರ್ಚಿಲ್. ಮತ್ತಷ್ಟು ಓದು
ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು
– ರಾಕೇಶ್ ಶೆಟ್ಟಿ
‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.
ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ, ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.
ಕರ್ನಾಟಕ ಸ್ವಾಭಿಮಾನವನ್ನು ಬಹಮನಿಗಳಿಗೆ ಒತ್ತೆಯಿಡಲು ಹೊರಟಿದ್ದ ಕಾಂಗ್ರೆಸ್
– ರಾಕೇಶ್ ಶೆಟ್ಟಿ
“ಅದೋ ಅದೋ ವಿಜಯನಗರದ ಸ್ಥಾಪನೆ,ವಿಜಯನಗರದ ಏಳಿಗೆ,ವಿಜಯನಗರದ ವೈಭವ. ಹಾ! ವಿಜಯನಗರದ ನಾಶ…” ಎಂದು ಕನ್ನಡ ರಾಷ್ಟ್ರವೀರ ಎಚ್ಚಮನಾಯಕನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ಡಾ.ರಾಜ್ ಕುಮಾರ್ ಅವರು ಹೇಳುವಾಗ, ಕರ್ನಾಟಕ ಸ್ವಾಭಿಮಾನಕ್ಕಾಗಿ ಮಿಡಿಯುವ ಪ್ರತಿ ಕನ್ನಡಿಗನ ಮನದಲ್ಲೂ ತೀವ್ರ ವೇದನೆ,ಆಕ್ರೋಶದ ಅನುಭವವಾಗುತ್ತದೆ. ಆಗಲೇಬೇಕು ಕೂಡ.ಆದರೆ ಈ ಮಾತು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕನ್ನಡಿಗರಿಗೆ ಅನ್ವಯವಾಗುವುದಿಲ್ಲ. ಕರ್ನಾಟಕ ಸ್ವಾಭಿಮಾನವನ್ನು ವೋಟ್ ಬ್ಯಾಕಿಂಗೆ ಅಡವಿಟ್ಟ ಕಾಂಗ್ರೆಸ್ ಪಕ್ಷಕ್ಕೆ ವಿಜಯನಗರ ಸಾಮ್ರಾಜ್ಯ ನೆನಪಾಗಲಿಲ್ಲ,ಅವರಿಗೆ ನೆನಪಾಗಿದ್ದು ಕರ್ನಾಟಕದ ಹೆಮ್ಮೆಯ ಸಾಮ್ರಾಜ್ಯವನ್ನು ನಾಮಾವಶೇಷ ಮಾಡಿದ ಬಹಮನಿ ಸುಲ್ತಾನರದ್ದು.ಉತ್ತರದಲ್ಲಿ ಮಹಮ್ಮದ್ ಬಿನ್ ತುಘಲಕನ ಕಾಲದಲ್ಲಿ ಹುಟ್ಟಿಕೊಂಡ ಬಹಮನಿ ಸುಲ್ತಾನರನ್ನು ದಕ್ಷಿಣದ ತುಘಲಕ್ ಸರ್ಕಾರ ನೆನಪಿಸಿಕೊಂಡಿದ್ದು ಕಾಕತಾಳೀಯವೋ,ಪುನರ್ಜನ್ಮದ ನೆನಪೋ ಗೊತ್ತಿಲ್ಲ.ಆದರೆ ಇಂತಹ ದರಿದ್ರ ಸರ್ಕಾರವನ್ನು ಸಹಿಸಿಕೊಳ್ಳಬೇಕಾದ ಕರ್ಮ ನಮ್ಮದು.
ಹೊರದೇಶದ ಆಕ್ರಮಣಕಾರರ ಅದರಲ್ಲೂ ಮುಖ್ಯವಾಗಿ ಇಸ್ಲಾಮ್ ದಾಳಿಕೋರರ ಬರ್ಬರತೆ,ಕ್ರೌರ್ಯವೆಂತದ್ದು ಎನ್ನುವುದನ್ನು ಉತ್ತರ ಭಾರತ ಶತಮಾನಗಳ ಕಾಲ ಅನುಭವಿಸಿದೆ. ಈ ವಿಷಯದಲ್ಲಿ ದಕ್ಷಿಣ ಭಾರತದ ಅದೃಷ್ಟ ಚೆನ್ನಾಗಿಯೇ ಇತ್ತು.ಬಹುಶಃ ದಕ್ಷಿಣದ ರಾಜರು ಇಸ್ಲಾಮಿ ದಾಳಿಕೋರರ ಭಯ ನಮಗಿಲ್ಲ ಎಂಬ ಭ್ರಮೆಯಲ್ಲಿಯೇ ಬದುಕುತ್ತಿದ್ದರೋ ಏನೋ,ಆದರೆ ಅದು ಅಲ್ಲಾವುದ್ದೀನ್ ಖಿಲ್ಜಿಯ ಕಾಲದವರೆಗೂ ಮಾತ್ರವೇ.ಖಿಲ್ಜಿಯ ದಂಡನಾಯಕ ಮತಾಂತರಿ ಮಲ್ಲಿಕಾಫರ್, ಹೊಯ್ಸಳರ ರಾಜಧಾನಿ ದ್ವಾರಸಮುದ್ರದ ಮೇಲೆ ದಾಳಿಗೆ ಮುಹೂರ್ತವಿಟ್ಟ.ಆ ಸಂಧರ್ಭದಲ್ಲಿ ಹೊಯ್ಸಳ ಮಹಾರಾಜ ಮುಮ್ಮಡಿ ಬಲ್ಲಾಳ ವೀರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿದ್ದ. ಮಲ್ಲಿಕಾಫರನ ಸ್ಥಾನದಲ್ಲಿ ವೀರ ಸೇನಾನಿಯಿದ್ದಿದ್ದರೇ, ಬಲ್ಲಾಳನು ಇದ್ದಾಗಲೇ ರಾಜಧಾನಿಗೆ ಮುತ್ತಿಗೆ ಹಾಕುವ ಧೈರ್ಯ ತೋರುತ್ತಿದ್ದನೋ ಏನೋ,ಆದರೆ ಎಷ್ಟಾದರೂ ಮತಾಂಧ ದಾಳಿಕೋರನಲ್ಲವೇ ಪೃಥ್ವಿರಾಜ ಚೌಹಾಣನ ಕಾಲದಿಂದಲೂ ಇವರು ಗೆದ್ದುಕೊಂಡು ಬಂದಿದ್ದು ಕಪಟದಿಂದಲೇ.ಮಲ್ಲಿಕಾಫರನ ಜಿಹಾದಿ ಸೈನ್ಯ ಸತತ ೧೩ ದಿನಗಳ ಕಾಲ ಹೊಯ್ಸಳರ ಭವ್ಯ ರಾಜಧಾನಿಯನ್ನು ನಾಶಮಾಡಿ ದ್ವಾರಸಮುದ್ರವನ್ನು, “ಹಾಳಾದ ಬೀಡು” ಎನ್ನುವಂತೆ ಮಾಡಿತು,ಜನರ ಬಾಯಿಯಲ್ಲಿ “ಹಳೇಬೀಡು” ಆಗಿ ಹೋಯಿತು. ಈ ವಿನಾಶವೂ ಮುಂಬರಲಿರುವ ಭವ್ಯ ಸಾಮ್ರಾಜ್ಯದ ಮುನ್ನುಡಿಯೇ ಆಗಿ ಹೋಯಿತು.ಹಾಗೊಂದು ಮುನ್ನುಡಿ ಬರೆಯಲು ಹೊರಟ ಹೊಯ್ಸಳ ದೊರೆ ಮುಮ್ಮಡಿ ಬಲ್ಲಾಳ ವೀರನಿಗೆ ಆಗ ಇನ್ನೂ ೮೨ರ ವಯಸ್ಸು ಅಷ್ಟೇ!
ಮರಾಠ ನಾಯಕನಿಗೊಂದು ನಮನ
– ಪಲ್ಲವಿ ಭಟ್, ಬೆಂಗಳೂರು
ಕಳೆದ ವರುಷ ಚಲನಚಿತ್ರವೊಂದು ಭಾರತದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿ ಬಿಟ್ಟಿತು. “ಬಾಹುಬಲಿ” ಎನ್ನುವ ಆ ಚಿತ್ರವನ್ನು ನೋಡದವರ ಸಂಖ್ಯೆಯೇ ವಿರಳವೆನ್ನಬಹುದು. ರಾಜಮೌಳಿಯವರ ಕಲ್ಪನಾ ಶಕ್ತಿ, ಕಲಾವಿದರ ನಟನಾ ಚಾತುರ್ಯ, ಹಾಗೂ ಗ್ರಾಫಿಕ್ಸ್ ನ ವಿಸ್ಮಯಗಳಿಂದಾಗಿ ಈ ಚಿತ್ರವು ಭಾರತದ ಅತ್ಯುತ್ತಮ ಚಿತ್ರಗಳಲ್ಲಿ ಒಂದಾಗಿ ಮೂಡಿದೆ.
ನಾನು ಆ ಚಿತ್ರವನ್ನು ನೋಡಿದ್ದೆ. ನೋಡಿ ಒಂದಷ್ಟು ವಾರಗಳು ಕಳೆದ ಮೇಲೂ ಅದೇನೋ ನನ್ನನ್ನು ಕಾಡುವಂತಿತ್ತು. ಮರೆತು ಹೋಗಿರುವ ಏನನ್ನೋ ನೆನಪಿಸುವಂತಿತ್ತು. ರಾಜನ ಗಾಂಭೀರ್ಯ, ನ್ಯಾಯ ,ನಿಷ್ಠೆಗಳ ಬಗ್ಗೆ ಅದೆಲ್ಲೋ ಓದಿದ ನೆನಪು. ಮತ್ತೆ ಮತ್ತೆ ಕೆದಕಿ ನೋಡಿದರೆ ನೆನಪಿಗೆ ಬಂದದ್ದು ಒಂದು ಪುಟ್ಟ ಪುಸ್ತಕ. ಭಾರತ-ಭಾರತಿಯವರ ಪ್ರಕಾಶನದಲ್ಲಿ ಹೊರ ಬಂದಿದ್ದ “ಶಿವಾಜಿ” ಎನ್ನುವ ಆ ಪುಸ್ತಕ ಅಪ್ಪನ ಶೆಲ್ಫ್ ನಲ್ಲಿ ಇನ್ನೂ ಇರಬಹುದು. ಓದುವ ಹವ್ಯಾಸವನ್ನು ಬೆಳೆಸಿಕೊ ಎಂದು ಯಾರು ಯಾವಾಗಲೇ ಗೊಣಗಲಿ, ನಾನು ಪಟ್ಟಂಥ ಇದೇ ಪುಸ್ತಕವನ್ನು ಕೈಗೆತ್ತಿಕೊಳ್ಳುತಿದ್ದೆ. ಸಣ್ಣ ಪುಸ್ತಕವಾಗಿದ್ದರಿಂದಲೋ, ಅಥವಾ ಶಿವಾಜಿ ಅನ್ನುವ ಮಹಾರಾಜರು ತುಂಬಾ ಇಷ್ಟವಾಗಿದ್ದರಿಂದಲೋ,ನನಗೆ ತಿಳಿದಿಲ್ಲ.
ಬಿಡುಗಡೆಯಾಗಿದ್ದು ಬಹಮನಿ ಟೀಸರ್, ಪಿಕ್ಚರ್ ಅಭೀ ಬಾಕೀ ಹೈ!

ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!
– ಭರತ್ ಶಾಸ್ತ್ರೀ
ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. ಈ ಹಿನ್ನೆಲೆಯಲ್ಲಿ ಜನವರಿ 24, 2010 ರ “ದಿ ಪಯೊನೀರ್” ಪತ್ರಿಕೆಯಲ್ಲಿ ಖ್ಯಾತ ಅಂಕಣಕಾರ ಕಾಂಚನ್ ಗುಪ್ತಾ ಅವರ To forget would be to forgive ಎಂಬ ಮನಕಲಕುವ ಲೇಖನದ ಸಾರಾಂಶವನ್ನು ಓದುಗರಿಗೆ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ. 60 ವರ್ಷ ತುಂಬಿದ ನಮ್ಮ ಗಣರಾಜ್ಯದಲ್ಲಿ ಇಂತಹ ದೌರ್ಜನ್ಯ ನಮ್ಮ ಮಾಧ್ಯಮಗಳ ಕಣ್ಣಿಗೆ ಏಕೆ ಕಾಣುವುದಿಲ್ಲ ಎಂಬ ನನ್ನ ಹತಾಶೆಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಇಚ್ಚಿಸುತ್ತೇನೆ. ಮತ್ತಷ್ಟು ಓದು
ಸೈಮನ್ ಅಯೋಗಕ್ಕೆ ತೊಡೆ ತಟ್ಟಿದ ಪಂಜಾಬಿನ ಕೇಸರಿ.
– ಶಿವಾನಂದ ಶಿವಲಿಂಗ ಸೈದಾಪೂರ
ಪಂಜಾಬ್ದ ಕೇಸರಿ ಎಂದೇ ಪ್ರಸಿದ್ದರಾದ ಲಾಲಾ ಲಜಪತ್ ರಾಯರು 1865 ರ ಜನೇವರಿ 28 ರಂದು ಪಂಜಾಬ್ ನ ಮುನ್ಷಿ ರಾದಾಕೃಷ್ಣ ಆಜಾದ್ ಮತ್ತು ಗುಲಾಬ್ ದೇವಿಯರ ಮಗನಾಗಿ ಜನಿಸಿದರು. ಸ್ವತಂತ್ರ ಹೋರಾಟದ ದಿಕ್ಕನ್ನೇ ಬದಲಿಸಿದ ಒಂದೇ ಹೆಸರಿನಿಂದ ಮೂವರು ಜನ ಗುರುತಿಸಿಕೊಂಡ “ಲಾಲಬಾಲಪಾಲ್” ರಲ್ಲಿ ಇವರು ಒಬ್ಬರು.
1905 ರ ವರೆಗೂ ಕಾಂಗ್ರೇಸ್ನ ನೀತಿಯಿಂದಾಗಿ ಮಂದಗತಿಯಲ್ಲಿಯೇ ಸಾಗುತ್ತಿದ್ದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚನ್ನು ಉದ್ದೀಪನಗೊಳಿಸಿದವರಲ್ಲಿ ಇವರು ಒಬ್ಬರು. ಪ್ರಖರ ವಾಗ್ಮಿಯಾದ ಇವರು ತಮ್ಮ ಭಾಷಣಗಳಲ್ಲಿ “ಜಗತ್ತಿನ ಇತಿಹಾಸ ರೂಪಗೊಂಡಿದ್ದೇ ರಕ್ತದಿಂದ. ನಮ್ಮ ಮಾತೃಭೂಮಿ ನಮ್ಮ ರಕ್ತವನ್ನು ಅಪೇಕ್ಷಿಸುತ್ತಾಳೆ. ರಾಷ್ಟ್ರಕ್ಕಾಗಿ ಅದನ್ನು ನೀಡಿಯೇ ಅಮರರಾಗೋಣ”. ಎಂದು ಸದಾಕಾಲ ಭಾರತೀಯ ಕ್ಷಾತ್ರ ಪರಂಪರೆಯನ್ನು ಎಚ್ಚರಗೊಳಿಸುತಿದ್ದರು. ಮಂದಗತಿಯಲ್ಲಿ ಸಾಗುತಿದ್ದ ಹೋರಾಟಕ್ಕೆ “ನಾವು ಒಂದು ಸಾಮ್ರಾಜ್ಯದ ಪ್ರಜೆಗಳು, ಭಿಕ್ಷುಕರಲ್ಲ. ಹೋರಾಟದ ಈ ಪ್ರಜ್ಞೆ ನಮ್ಮಲ್ಲಿರಬೆಕಾದದ್ದು ಅಗತ್ಯ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಪ್ರಜೆಗಳು ನಾವಾಗಿರಬೇಕು. ಒಂದು ದೃಢ ನಿಲುವನ್ನು ತಳೆದು ಅದಕ್ಕೆ ಅಂಟಿಕೋಳ್ಳಬೇಕು” ಎಂದು ಹೇಳುತಿದ್ದರು. “ಈ ಭೂಮಿಯ ಮೇಲೆ ಸೊಂಕಿರುವುದು ನಮ್ಮ ಪೂರ್ವಜರ ರಕ್ತ. ನಾವು ಅದರ ಮೇಲೆ ಬದುಕುತಿದ್ದೇವೆ. ಈ ಭೂಮಿ ನಮ್ಮದು ಇಲ್ಲವೇ ದೇವರದ್ದು” ಎಂದು ನಿರಂತರವಾಗಿ ಒತ್ತಿ ಒತ್ತಿ ಹೇಳಿದರು. ಮತ್ತಷ್ಟು ಓದು