ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ,ಕನ್ನಡ’ Category

3
ಜುಲೈ

ರಾಮಾಯಣ,ಮಹಾಭಾರತ,ಪುರಾಣಗಳ 64 ಸಂಪುಟಗಳು ಕನ್ನಡದಲ್ಲಿ ಅತ್ಯಂತ ಕಡಿಮೆ ಬೆಲೆಗೆ

– ವಿಶ್ವನಾಥ ಸುಂಕಸಾಲ

ಮೂಲ ಶ್ಲೋಕಗಳೊಂದಿಗೆ ಕನ್ನಡದಲ್ಲಿ ರಾಮಾಯಣ, ಮಹಾಭಾರತದ ಗ್ರಂಥಗಳು ಸಿಗುತ್ತವೆಯೇ ಎಂಬ ಪ್ರಶ್ನೆ ಹಲವರದು. ಕನ್ನಡದಲ್ಲಿ ಸಮಗ್ರವಾಗಿ ಇಂಥ ಗ್ರಂಥಗಳು ದೊರೆಯುವುದು ವಿರಳವೇ. ಒಂದೆರಡು ಪ್ರಕಾಶನಗಳು ಮಾತ್ರ ಇಂದಿಗೂ ರಾಮಾಯಣ, ಮಹಾಭಾರತ, ಪುರಾಣಗಳನ್ನು ಜನರಿಗೆ ದೊರಕುವಂತೆ ಮಾಡುತ್ತಿವೆ. ಅವುಗಳಲ್ಲಿ ಭಾರತ ದರ್ಶನ ಪ್ರಕಾಶನವೂ ಒಂದು.

ಅತ್ಯಂತ ಕಡಿಮೆ ಬೆಲೆಗೆ ಕನ್ನಡದ ಜನತೆಗೆ ಭಾರತೀಯ ಸಂಸ್ಕೃತಿಯ ಮೂಲವಾದ ಈ ಗ್ರಂಥಗಳನ್ನು ತಲುಪಿಸಲೆಂದೇ ಹುಟ್ಟಿದ ಸಂಸ್ಥೆ ‘ಭಾರತ ದರ್ಶನ ಪ್ರಕಾಶನ’.

ಮುದ್ರಣದ ವ್ಯಯಕ್ಕಿಂತ ಕಡಿಮೆ ಬೆಲೆಗೆ ಪುಸ್ತಕವನ್ನು ಒದಗಿಸುತ್ತಿರುವ ಭಾರತ ದರ್ಶನ ಪ್ರಕಾಶನಕ್ಕೆ ಓದುಗರು, ದಾನಿಗಳೇ ಬೆನ್ನೆಲುಬು. ರಾಮಾಯಣ, ಮಹಾಭಾರತಗಳ ಕಥೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಅನೇಕ ಪುಸ್ತಕಗಳು ಸಿಗಬಹುದು. ಆದರೆ ಮೂಲ ವಾಲ್ಮೀಕಿ ಹಾಗೂ ವ್ಯಾಸರಿಂದ ಲಿಖಿತವಾದ ಪ್ರತಿ ಶ್ಲೋಕವನ್ನೂ ಸಂಪುಟದ ಒಂದು ಕಡೆ ಕೊಟ್ಟು, ಮತ್ತೊಂದು ಭಾಗದಲ್ಲಿ ಸಂಪೂರ್ಣ ಅರ್ಥವನ್ನು ವಿಸ್ತೃತವಾಗಿಯೂ, ನಿರ್ದುಷ್ಟವಾಗಿಯೂ, ಸರಳ ಕನ್ನಡದಲ್ಲಿ ವಿವರಿಸಿರುವ ಗ್ರಂಥಮಾಲೆ ತೀರಾ ವಿರಳ.

ಭಾರತ ದರ್ಶನ ಪ್ರಕಾಶನದ ಒಂದೊಂದು ಸಂಪುಟವೂ 620-650 ಪೇಜುಗಳಿಂದ ಕೂಡಿವೆ. ಪ್ರತಿ ಸಂಪುಟದ ಮುದ್ರಣಕ್ಕೂ ಸರಾಸರಿ 120-150 ರೂಪಾಯಿಗಿಂತ ಹೆಚ್ಚು ವ್ಯಯವಾಗುತ್ತದಂತೆ. ಆದರೆ, ರಾಮಾಯಣ, ಮಹಾಭಾರತಗಳ ಪ್ರಚಾರಕ್ಕಾಗಿಯೇ ಹುಟ್ಟಿಕೊಂಡ ಈ ಸಂಸ್ಥೆಯು ದಾನಿಗಳ ಸಹಕಾರದಿಂದ ಮುದ್ರಣ ವ್ಯಯಕ್ಕಿಂತಲೂ ಕಡಿಮೆ ದರಕ್ಕೆ ಅಂದರೆ ಸರಾಸರಿ ಬರೀ ನೂರು ರೂಪಾಯಿಗೆ ಕೊಡುತ್ತಿದೆ.

ಮತ್ತಷ್ಟು ಓದು »

1
ಏಪ್ರಿಲ್

ಕುಮಾರರಾಮ

– ವರುಣ್ ಕುಮಾರ್
(ವಾರಕ್ಕೊಂದು ವೀರರು)

Kumararamaಭಾರತದ ಹಿಂದೂ ಸಾಮ್ರಾಟ ಎಂದ ಕೂಡಲೇ ನಮ್ಮ ಸ್ಮೃತಿಪಟಲದಲ್ಲಿ ಶಿವಾಜಿ ಮಹಾರಾಜರ ಹೆಸರು ಬರುತ್ತದೆ. ಶಿವಾಜಿ ಮಹಾರಾಜರ ಆಡಳಿತ ವೈಖರಿ, ಮೊಘಲರ ದಾಳಿಯನ್ನು ಹಿಮ್ಮೆಟ್ಟಿಸಿದ ರೀತಿ, ಅವರ ರಾಜಕೀಯ ತಂತ್ರಗಾರಿಕೆಗಳು, ಎಂಥವರಿಗೂ ರೋಮಾಂಚನವನ್ನು ಉಂಟು ಮಾಡುತ್ತದೆ. ತನ್ನ ಅಲ್ಪಾವಧಿಯಲ್ಲಿ ಮೊಘಲರ ಸಾಮ್ರಾಜ್ಯವನ್ನು ಕೇವಲ ಉತ್ತರ ಭಾರತಕ್ಕೆ ಸೀಮಿತಗೊಳಿಸುವಲ್ಲಿ ಶಿವಾಜಿಯ ಪಾತ್ರ ಅಪಾರವಾದುದು. ಆದರೆ ಶಿವಾಜಿಯ ಪೂರ್ವ ಕಾಲದಲ್ಲಿ ದಕ್ಷಿಣ ಪ್ರಾಂತ್ಯಕ್ಕೆ ಮೊಘಲರ ದಾಳಿಯನ್ನು ಹಿಮ್ಮಟ್ಟಿಸುವಲ್ಲಿ ಯುವ ಅರಸ ಕುಮಾರರಾಮನ ಪಾತ್ರ ಮಹತ್ವದ್ದು. ಹಿಂದೂ ಸಾಮ್ರಾಜ್ಯಕ್ಕೆ ಭದ್ರವಾದ ಬುನಾದಿಯನ್ನು ಕೊಟ್ಟು ಮುಂದಿನ ೨೦೦ ವರ್ಷಗಳ ಕಾಲ ಅವರ ವಂಶಜರು ದಕ್ಷಿಣ ಪ್ರಾಂತ್ಯದಲ್ಲಿ ಹಿಂದೂ ಸಾಮ್ರಾಜ್ಯವನ್ನು ಪುನರುತ್ಥಾನಗೊಳಿಸಿದರು‌. ಮತ್ತಷ್ಟು ಓದು »

31
ಮಾರ್ಚ್

ಮತದಾರರ ಮೋದಿ Vs ಬೆಂಗಳೂರು ಮಾಫಿಯಾ

– ರಾಕೇಶ್ ಶೆಟ್ಟಿ 

‘ನಾವು ಗೆದ್ದಿರುವ ಕ್ಷೇತ್ರಗಳನ್ನು ಕಳೆದುಕೊಳ್ಳಬಾರದು ಅಣ್ಣ. ಈ ಹಿಂದೆ ಯುಟಿ ಖಾದರ್ ಅಪ್ಪನ ಕಾಲದಲ್ಲೇ ಉಳ್ಳಾಲದಲ್ಲಿ ಬಿಜೆಪಿಯಿಂದ ಜಯರಾಮ ಶೆಟ್ಟರು ಗೆದ್ದಿದ್ದರು. ನಂತರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕೋಪಿಸಿಕೊಂಡು ದಳಕ್ಕೆ ಹೋಗಿ ಸ್ಪರ್ಧಿಸಿ ವೋಟ್ ಡಿವೈಡ್ ಮಾಡಿದರು.ಹಾಗೆ ಕಾಂಗ್ರೆಸ್ಸಿನ ಯು.ಟಿ ಫರೀದ್ ಗೆದ್ದರು. ಉಳ್ಳಾಲ ನಮ್ಮ ಕೈ ಬಿಟ್ಟು ಹೋಯಿತು. ಅಲ್ಲಿಂದ ಇಲ್ಲಿನವರೆಗೆ ನಮಗೆ ಆ ಕ್ಷೇತ್ರವನ್ನು ಮತ್ತೆ ಗೆಲ್ಲಲಿಕ್ಕಾಗಿಲ್ಲ ನೋಡಿ’ ನನ್ನ ತಮ್ಮನಂತಹ ಮಿತ್ರ ರಾಜೇಶ್ ನರಿಂಗಾನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೇಳಿದ ಮಾತು ನನಗೀಗ ನೆನಪಾಯ್ತು. ನೆನಪು ಮಾಡಿಸಲು ಕಾರಣವಾಗಿದ್ದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಒಳಬೇಗುದಿ.

ಬೆಂಗಳೂರು ದಕ್ಷಿಣದ ಬಗ್ಗೆ ಮಾತನಾಡುವ ಮೊದಲು, ರಾಜರಾಜೇಶ್ವರಿ ನಗರ,ಜಯನಗರದ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಬೇಕು.

ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪಕ್ಷದ ಅತಿ ಪ್ರಮುಖ ನಾಯಕರು ಹಠಾತ್ ನಿಧನರಾಗುವ ಮೂಲಕ ಪಕ್ಷಕ್ಕೆ ನಷ್ಟವಾಗಿದೆ. ಆದರೆ ಈ ರೀತಿಯ ಹಠಾತ್ ಆಘಾತಗಳು ಈ ಪಕ್ಷದ ಆರಂಭದಿಂದಲೇ ಶುರುವಾಗಿದೆ. ಪಕ್ಷದ ಆಧಾರ ಸ್ತಂಭದಂತಿದ್ದ ಶ್ಯಾಂ ಪ್ರಸಾದ್ ಮುಖರ್ಜಿ,ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಕೊಲೆಗಳು ಮೊದಲನೇ ಆಘಾತಗಳು. ಅದರಿಂದ ಚೇತರಿಸಿಕೊಂಡೇ ಪಕ್ಷ ಇಲ್ಲಿವರೆಗೂ ಬಂದು ನಿಂತಿದೆ. ಪ್ರಮೋದ್ ಮಹಾಜನ್,ಗೋಪಿನಾಥ್ ಮುಂಡೆ,ಪರಿಕ್ಕರ್, ಅನಂತಕುಮಾರ್,ವಿಜಯಕುಮಾರ್ ಇವೆಲ್ಲ ಇತ್ತೀಚಿನ ಆಘಾತಗಳು.

ಮತ್ತಷ್ಟು ಓದು »

24
ಸೆಪ್ಟೆಂ

ಪುಸ್ತಕ ಪರಿಚಯ – “ಪ್ರಜ್ಞೆ ಮತ್ತು ಪರಿಸರ”

– ಚಂದ್ರಹಾಸ 

PrajneMattuParisara“ಪ್ರಜ್ಞೆ ಮತ್ತು ಪರಿಸರ” – ಯು. ಆರ್. ಅನಂತಮೂರ್ತಿಯವರ ವಿಮರ್ಶಾ ಲೇಖನಗಳ ಸಂಕಲನ. ಪ್ರಸ್ತುತ ಪುಸ್ತಕ ಯಾವುದೋ ಕೆಲವು ಕೃತಿಗಳ ವಿಮರ್ಶೆಗಳಲ್ಲ, ಬದಲಾಗಿ ಕೃತಿಗಳನ್ನು ಸೃಷ್ಟಿಸಿದ ಕೃತಿಕಾರರ ದೃಷ್ಟಿಕೋನಗಳದ್ದು. ಸುತ್ತಲಿನ ಸಮಾಜ, ವಾಸ್ತವ ಅನುಭವಗಳು ಮತ್ತು ಲೋಕವ್ಯಾಪರ, ಹೇಗೆ ಸಾಹಿತಿಗಳ ಮನೋಭೂಮಿಕೆಯಲ್ಲಿ ವಿಶ್ಲೇಷಣೆಗೊಂಡು, ಶೋಧನೆಗೆ ಪ್ರೇರೇಪಿಸಿ ಕೃತಿಗಳಲ್ಲಿ ಮೂರ್ತಗೊಂಡಿರಬಹುದೆಂಬುದನ್ನು ತಮ್ಮ ಲೇಖನಗಳಾ ಮೂಲಕ ವಿವೇಶಿಸಿದ್ದಾರೆ. ಮುನ್ನುಡಿಯಲ್ಲಿ ಅವರೇ ಈ ಲೇಖನಗಳಾ ಹಿಂದಿನ ಪ್ರೇರಣೆಯನ್ನು ಹೀಗೆ ಹೇಳಿಕೊಂಡಿದ್ದಾರೆ – “ಸಾಹಿತ್ಯದಿಂದ ರಾಜಕೀಯದವರೆಗೆ ಸ್ನೇಹಿತರೊಡನೆ ನಡೆಸಿದ ಚರ್ಚೆಗಳಿಂದ,ಮಾರ್ಕ್ಸ್ ವಾದದ,ಲೋಹಿಯಾವಾದಗಳ ಬಗ್ಗೆ ಇದ್ದ ಅನುಮಾನ ಅಭಿಮಾನಗಳಿಂದ ಪ್ರಭಾವಗೊಂಡ ಅಲೋಚನ ಲಹರಿಗಳೇ, ಈ ಸಂಕಲನದಲ್ಲಿ ಲೇಖನಗಳಾಗಿ ಮೂಡಿವೆ.” ಮತ್ತಷ್ಟು ಓದು »

14
ಆಗಸ್ಟ್

ಪುಣ್ಯಕೋಟಿಯ ವ್ಯಥೆ ಮತ್ತು ಕಾನೂನು ಅವ್ಯವಸ್ಥೆ

– ರಾಕೇಶ್ ಶೆಟ್ಟಿ

ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊಳಿರುವ
ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು
ಎಳೆಯ ಮಾವಿನ ಮರದ ಕೆಳಗೆ ಕೊಳಲನೂದುತ ಗೊಲ್ಲ ಗೌಡನು
ಬಳಸಿನಿಂದ ತುರುಗಳನ್ನು ಬಳಿಗೆ ಕರೆದನು ಹರುಷದಿ
ಗಂಗೆ ಬಾರೆ ಗೌರಿ ಬಾರೆ ತುಂಗ ಭದ್ರೆ ತಾಯಿ ಬಾರೆ …

 

 

ಪುಣ್ಯಕೋಟಿಯ ಕಥೆ ಅಚ್ಚಳಿಯದೇ ಮನದಲ್ಲಿ ಉಳಿಯುವಂತೆ ಮಾಡಿದ ಗೋವಿನ ಹಾಡನ್ನು ಕೇಳಿ ಬೆಳೆದವರು ನಾವು. ಆಗಿನ ಕಾಲದ ಗೊಲ್ಲಗೌಡನೇನೋ ತನ್ನ ಮುದ್ದಿನ ಗೋವುಗಳನ್ನು ಹರುಷದಿಂದ ಕರೆಯುವ ಪರಿಸ್ಥಿತಿ ಇತ್ತು. ಆದರೆ ಈಗಿನ ಕರಾವಳಿಯ ಗೋಪಾಲಕರ ಸ್ಥಿತಿ ಯಾವ ಶತ್ರುವಿಗೂ ಬೇಡವೆನಿಸುವಂತಿದೆ. ಕಣ್ಣೆದುರಿಗೆ ಆಡಿ ಬೆಳೆಯುತ್ತಿದ್ದ ಕರುಗಳು, ಲೀಟರ್ಗಟ್ಟಲೆ ಹಾಲು ಕೊಡುತ್ತ  ಜೀವನಾಧಾರವಾಗಿರುವ ಗೋವುಗಳು ರಾತ್ರಿ ಬೆಳಗಾಗುವುದರೊಳಗೆ ಕೊಟ್ಟಿಗೆಯಿಂದ ಕಾಣೆಯಾಗಿರುತ್ತವೆ.ಹಾಗೆಂದು ಈ ಗೋವುಗಳು,ಎಳೆಗರುಗಳೇನೂ ಮಾಯವಾಗುವುದಿಲ್ಲ ಅಥವಾ ಭೂಮಿ ಬಾಯಿಬಿಟ್ಟು ಅವನ್ನು ನುಂಗಿಹಾಕುವುದಿಲ್ಲ. ನಟ್ಟ ನಡುರಾತ್ರಿ ತಲವಾರುಗಳನ್ನಿಡಿದು ನುಗ್ಗುವ ದನಗಳ್ಳರು ಮನೆಯವರನ್ನು ಬೆದರಿಸಿ ಅವರ ಕಣ್ಣೆದುರಿನಲ್ಲಿಯೇ ಸಾಕಿದ ಗೋವುಗಳನ್ನು ಕದ್ದೊಯ್ಯುತ್ತಾರೆ. ಕೇವಲ ಕದ್ದೊಯ್ಯುವುದು ಮಾತ್ರವಲ್ಲ,ಮತ್ತೆ ಬಂದು ಉಳಿದವನ್ನು ಕದ್ದೊಯ್ಯುತ್ತೇವೆ,ನಮ್ಮ ದಾರಿಗೆ ಅಡ್ಡ ಬಂದರೆ ನಿಮ್ಮನ್ನು ಉಳಿಸುವುದಿಲ್ಲವೆಂದು ಧಮಕಿ ಹಾಕಿ ಹೋಗುತ್ತಾರೆ.ಮಂಗಳೂರಿನ ಮೂಡುಶೆಡ್ಡೆಯೊಂದರಲ್ಲೇ ಕಳೆದ ಒಂದೆರಡು ತಿಂಗಳಲ್ಲಿ ೨೦ಕ್ಕೂ ಹೆಚ್ಚು ಹಸುಗಳನ್ನು ದನಗಳ್ಳರು ಕದ್ದೊಯ್ದಿದ್ದಾರೆ.ಮೂಡುಶೆಡ್ಡೆಯ ಜೊತೆಗೆ ಕಾವೂರು,ವಾಮಂಜೂರು,ಕುಳಾಯಿ,ಅತ್ತಾವರ,ಜಪ್ಪಿನಮೊಗರು ಹೀಗೆ ಕರಾವಳಿಯ ಹಲವು ಭಾಗಗಳ ಗೋಪಾಲಕರ,ಬಡರೈತರ ಜೀವನವನ್ನೇ ಹಾಳುಗೆಡವಿದ್ದಾರೆ ಈ ದನಗಳ್ಳರು.

ಇತ್ತಿಚೀಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಒಂದು ಕರಾವಳಿಯ ಗೋಪಾಲಕರ ಸಂಕಟವನ್ನು ಬಿಚ್ಚಿಡುತ್ತದೆ. ದೈಜಿ ವರ್ಲ್ಡ್ ನವರು ಮಾಡಿದ್ದ ಈ ವಿಡಿಯೋದ ಕೇಂದ್ರ ಬಿಂದು ಕೊಣಾಜೆಯ ನಡುಪದವಿನ ಕಲ್ಯಾಣಿ ಅಮ್ಮ. ಒಂದು ಕಾಲದಲ್ಲಿ ಕಲ್ಯಾಣಿ ಅಮ್ಮನ ಕೊಟ್ಟಿಗೆಯಲ್ಲಿ ೫೦ ಗೋವುಗಳಿದ್ದವು.೪೦ ಲೀಟರಿನಷ್ಟು ಹಾಲನ್ನು ಡೈರಿಗೆ ಹಾಕುತ್ತಿದ್ದ ಕಲ್ಯಾಣಿ ಅಮ್ಮನವರು ಒಳ್ಳೆ ಆದಾಯವನ್ನು ಪಡೆಯುತ್ತಿದ್ದರು.ನೆಮ್ಮದಿಯಾಗಿದ್ದ ಕಲ್ಯಾಣಿಯವರ ಕೊಟ್ಟಿಗೆಯ ಮೇಲೆ ದನಗಳ್ಳರ ವಕ್ರದೃಷ್ಟಿ ಬಿದ್ದಿತ್ತು. ೨೦೧೦ರಿಂದ ಈಚೆಗೆ ಶುರುವಾದ ಕಳ್ಳತನದಿಂದಾಗಿ ಇವತ್ತಿಗೆ ಕಲ್ಯಾಣಿ ಅಮ್ಮನವರ ಕೊಟ್ಟಿಗೆ ಬರಿದಾಗಿದೆ.ಮಕ್ಕಳಂತೆ ಸಾಕಿ ಸಲಹುತ್ತಿದ್ದ ಗೋವುಗಳು ಕಾಣೆಯಾದಾಗಲೆಲ್ಲ ಊಟ-ನಿದ್ದೆ ಬಿಟ್ಟು ಕಲ್ಯಾಣಿ ಅಮ್ಮ ಕಣ್ಣೀರು ಹಾಕಿದ್ದಾರೆ.ಮೊದಲ ಬಾರಿ ಕಳ್ಳತನವಾದಾಗ ಪೋಲೀಸರ ಬಳಿ ಹೋಗಿದ್ದೆ,ಅವರು ನನಗೆ ಗದರಿಸಿ ಕಳುಹಿಸಿದರು ನಂತರ ಮತ್ತೆಂದೂ ನಾನು ಪೊಲೀಸ್ ಠಾಣೆಯ ಮೆಟ್ಟಿಲೇರಲಿಲ್ಲ ಎನ್ನುತ್ತಾರೆ ಕಲ್ಯಾಣಿ ಅಮ್ಮ.ಗೋವಿನೊಂದಿಗೆ ಅವಿನಾಭಾವ ಸಂಬಂಧವಿರುವ ಅವರಿಗೆ ಖಾಲಿ ಕೊಟ್ಟಿಗೆಯನ್ನು ನೋಡಲಾಗದೇ,ಈಗ ಮತ್ತೊಂದು ಗೋವನ್ನು ತಂದಿದ್ದಾರೆ.ಅದನ್ನೂ ದನಗಳ್ಳರು ಕದ್ದೊಯ್ಯಬಾರದೆಂದು ಪ್ರತಿರಾತ್ರಿ ಅದರ ಕಾವಲು ಕಾಯುತ್ತ ಕೊಟ್ಟಿಗೆಯ ಹೊರಗೆಯೇ ಮಲಗುತ್ತಿದ್ದಾರೆ ಎಂದರೆ ಕರಾವಳಿಯ ಕಾನೂನು ಅವ್ಯವಸ್ಥೆ ಯಾವ ಮಟ್ಟದಲ್ಲಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು.

ಮತ್ತಷ್ಟು ಓದು »

3
ಫೆಬ್ರ

ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?

– ರಾಕೇಶ್ ಶೆಟ್ಟಿ

ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ರಧಾನಿ ಮೋದಿಯವರ ಬಳಿ,ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ,ಈ ವಿವಾದದ ಇತಿಹಾಸದ ಅರಿವಿದ್ದ ಅವರು,ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳ ಒಪ್ಪಿಸಿ ಎಂದಿದ್ದರು. ನಂತರ  ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ,ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು.

ನಂತರ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋವಾ-ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪಾತ್ರ ಬರೆದಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯು ಬಂದಿತ್ತು. ಅವರ ಮಧ್ಯಸ್ಥಿಕೆಯಲ್ಲಿಯೇ ಮಾತುಕತೆ ನಡೆಯಲಿದೆ ಎನ್ನುವ ಸುದ್ದಿಗಳು ಇದ್ದವು.ಈ ನಡುವೆ ಕರ್ನಾಟಕದ ಬಿಜೆಪಿಯ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹದಾಯಿ ವಿಷಯಕ್ಕೆ ಭೇಟಿ ಮಾಡಿದ್ದರು.ಆ ಭೇಟಿಯನ್ನೂ ವಿವಾದವಾಗಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಸಮಸ್ಯೆಯಿರುವುದು ಗೋವಾ ರಾಜ್ಯದ ಜೊತೆ. ರಾಜ್ಯ ಬಿಜೆಪಿಯವರು ಗೋವಾ ಸಿಎಂ ಜೊತೆ ಮಾತನಾಡಲಿ’ ಎಂದು ಖ್ಯಾತೆ ತೆಗೆದಿದ್ದರು. ಆ ನಂತ್ರ ಗೋವಾದಲ್ಲಿ ಚುನಾವಣೆಯ ಕಾವೇರಿತು,ಇತ್ತ ರಾಜ್ಯ ಬಿಜೆಪಿಗೆ ಅದರದ್ದೇ ಆದ ತಲೆ ನೋವು ತಾಪತ್ರಯಗಳಿದ್ದವು. ಇತ್ತೀಚಿಗೆ ಧೂಳು ಕೊಡವಿಕೊಂಡು ಯಡ್ಯೂರಪ್ಪನವರ ನೇತೃತ್ವದಲ್ಲಿ ಶುರುವಾಗಿದ್ದ ಪರಿವರ್ತನಾ ಯಾತ್ರೆಯ ಹುಬ್ಬಳ್ಳಿ ಸಮಾವೇಶದ ಸಮಯದಲ್ಲಿ,Over Enthusiastic ಆದ ಯಡ್ಯೂರಪ್ಪನವರು ಮಹದಾಯಿ ವಿವಾದಕ್ಕೆ ಪರಿಹಾರ ದೊರಕಲಿದೆ,ಗೋವಾದಿಂದ ಸಿಹಿ ಸುದ್ದಿ ತರುತ್ತೇನೆ ಎಂದು ಘೋಷಿಸಿಬಿಟ್ಟರು.ಅತ್ತ ಅಮಿತ್ ಷಾ ಅವರ ಮಧ್ಯಸ್ಥಿಕೆಯಲ್ಲಿ ಗೋವಾ ಸಿಎಂ ಪರಿಕ್ಕರ್,ರಾಜ್ಯದ ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆಯ ಫೋಟೋಗಳು ಬ್ರೇಕಿಂಗ್ ನ್ಯೂಸ್ ಚಾನೆಲ್ಲುಗಳಿಂದ ಹಿಡಿದು ದಿನಪತ್ರಿಕೆಗಳಲ್ಲೂ ಬಂದವು. ಏನೋ ಪವಾಡವಾಗಲಿದೆ ಎಂದು ಬರೆದವು.ಮುಗ್ಧ ರೈತರು,ಹೋರಾಟಗಾರರು ಕಾದು ಕುಳಿತರು, ಕಡೆಗೆ ಪರಿಕ್ಕರ್ ಅವರಿಂದ ಯಡ್ಯೂರಪ್ಪನವರಿಗೆ ಪತ್ರವೊಂದು ಬಂತು. ಕುಡಿಯುವ ನೀರಿನ ವಿಚಾರದಲ್ಲಿ ಮಾತ್ರ ತಾವು ಮಾತುಕತೆಗೆ ಸಿದ್ಧರಾಗಿರುವುದಾಗಿ ಬರೆದಿದ್ದರು. ಸಮ್ಮಿಶ್ರ ಸರ್ಕಾರದ ಏಕೈಕ ಬಿಜೆಪಿಯ ನಾಯಕರಾಗಿ ನಿಜಕ್ಕೂ ಪರಿಕ್ಕರ್ ಹಾಗೂ ಗೋವಾ ಬಿಜೆಪಿ ರಿಸ್ಕ್ ತೆಗೆದುಕೊಂಡೇ ಈ ಪತ್ರ ಬರೆದಿತ್ತು. ಗೋವಾ ಸಿಎಂ ಕರ್ನಾಟಕ ಸಿಎಂಗೆ ಪತ್ರ ಬರೆಯಬೇಕಿತ್ತು ಎಂದು ಖ್ಯಾತೆ ತೆಗೆದ ಕಾಂಗ್ರೆಸ್ಸು ಇತ್ತ ಹೋರಾಟಗಾರರನ್ನು ತಂದು ಬಿಜೆಪಿಯ ಕಚೇರಿ ಎದುರು ಕೂರಿಸಿ,ಅತ್ತ ಗೋವಾ ಕಾಂಗ್ರೆಸ್ಸಿಗೆ ತಿವಿಯಿತು.

ಮತ್ತಷ್ಟು ಓದು »

14
ನವೆಂ

ಇಸ್ರೇಲಿನಲ್ಲಿ ಮೈಸೂರಿನ ಅಶ್ವಾರೂಢರ ಅಟ್ಟಹಾಸ

– ವಿಂಗ್ ಕಮಾಂಡರ್ ಸುದರ್ಶನ
sudarshanbadangod@gmail.com

1914 ರಲ್ಲಿ ಮೈಸೂರಿನ ಮಹರಾಜರಾದ ನಾಲ್ಮಡಿ ಕೃಷ್ಣರಾಜ ಒಡೆಯರ ಸೈನ್ಯದಲ್ಲಿ ಒಂದು ವಿಶೇಷ ಅಶ್ವಾರೂಢರ ದಳವಿತ್ತು. 29 ಸೈನ್ಯಾಧಿಕಾರಿಗಳ, 444 ಅಶ್ವಯೋಧರೊಂದಿಗೆ 526 ಶ್ರೇಷ್ಠ ಅರಬ್ಬೀ ಕುದುರೆಗಳ ಈ ಪಡೆಗೆ ವಿಶೇಷ ಗೌರವವಿತ್ತು. ಆಗಾಗಲೇ ಫಿರಂಗಿಗಳ, ಮಷೀನುಗನ್ನುಗಳ ಆಗಮನವಾಗಿ, ಕುದುರೆಗಳ ನಾಗಾಲೋಟದ, ಖರಪುಟದ ಶಬ್ದದ ಕಾಲ ಮುಗಿದೇ ಬಿಡ್ತೇನೋ ಎನ್ನುವ ಸಮಯವದು. ಹೈದ್ರಾಬಾದಿನ ನಿಜಾಮರ ಮತ್ತು ರಾಜಾಸ್ಥಾನದ ರಾಜರ ಸೈನ್ಯಗಳನ್ನು ಹೊರತು ಪಡಿಸಿದರೆ ಬೇರೆಲ್ಲೆಡೂ ಆಶ್ವಾರೂಢದ ದಳವೇ ಇರಲಿಲ್ಲ. ಮತ್ತಷ್ಟು ಓದು »

9
ಆಕ್ಟೋ

ಶಿಕ್ಷಣ ತಜ್ಞರಾಗಿ ಡಾ. ಶಿವರಾಮ ಕಾರಂತರು

ಶ್ರೀಮತಿ ತುಳಸಿ ಶಿರ್ಲಾಲು
ಉಪನ್ಯಾಸಕರು
ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್)
ತೆಂಕಿಲ , ಪುತ್ತೂರು. ದ.ಕ.

ಡಾ. ಶಿವರಾಮ ಕಾರಂತರು ತಮ್ಮ ಮಾತು – ಬರವಣಿಗೆಗಳೆರಡರಲ್ಲೂ ದಶಕಗಳುದ್ದಕ್ಕೂ ಶಿಕ್ಷಣ ಎಂದರೆ ಏನು? ಯಾವುದು ಶಿಕ್ಷಣ? ಶಿಕ್ಷಣ ಹೇಗಿರಬೇಕು? ತರಗತಿಯ ಒಳಗಿನ ಶಿಕ್ಷಣ ಮತ್ತು ನಿತ್ಯ ಜೀವನದಲ್ಲಿ ಉಪಯೋಗ ಮೊದಲಾದ ವಿಷಯಗಳನ್ನು ಮತ್ತೆ ಮತ್ತೆ ಪರಿಷ್ಕರಿಸುತ್ತಾ, ಸ್ಪಷ್ಟಗೊಳಿಸುತ್ತಾ, ಪುನರ್ ರೂಪಿಸುತ್ತಿದ್ದರು. “ಓದು ಯಾಕೆ ಬೇಕು, ಬರಹ ಯಾಕೆ ಬೇಕು ಎಂದು ತಿಳಿಯದ ಮಕ್ಕಳನ್ನು ಕುಳ್ಳಿರಿಸಿಕೊಂಡು ಓದಿನಲ್ಲಿ ಸ್ವಾರಸ್ಯವಿದೆ, ಬರಹದಿಂದ ನಮ್ಮ ಮನಸ್ಸನ್ನು ತೋಡಿಕೊಳ್ಳುವುದಕ್ಕೆ ಬರುತ್ತದೆ ಎಂಬ ಉದ್ದೇಶ ಸಾಧಿಸಬೇಕು. ಇಲ್ಲಿ ಕಲಿತ ಗಣಿತ, ನಾಳೆ ನಡೆಸುವ ವಿವಿಧ ವ್ಯವಹಾರಗಳಲ್ಲಿ ಅನಿವಾರ್ಯ ಎಂಬ ಭಾವನೆಗೆ ಪೀಠಿಕೆ ಹಾಕಬೇಕು. ಮಕ್ಕಳಿಗೆ ಕಲಿಸುವ ವಿಜ್ಞಾನ, ಸಮಾಜಶಾಸ್ತ್ರ, ಚರಿತ್ರೆ ಭೂಗೋಳದಂತಹ ವಿಷಯಗಳು ಕೂಡಾ ನಾಳಿನ ಬುದ್ದಿಯ ಬೆಳವಣಿಗೆಗೆ, ಜ್ಞಾನ ಸಂಪಾದನೆಗೆ ಅವಶ್ಯಕವಾದ ತೃಷೆಯ ರೂಪವನ್ನು ಹೊಂದಿದಾಗ ಮಾತ್ರವೇ ಪ್ರಾಥಮಿಕ ಹಂತದಲ್ಲಿ ನಾವು ಕೊಡುವ ಸರಳ ಪಾಠಗಳು ತಮ್ಮ ಗುರಿಯನ್ನು ಸಾಧಿಸಬಹುದು ಇಲ್ಲವಾದರೆ ಇಲ್ಲ” ಎನ್ನುತ್ತಾರೆ. ಈ ಮಾತುಗಳೇ ಕಾರಂತರು ಶಿಕ್ಷಣವನ್ನು ಗ್ರಹಸಿಕೊಂಡ ಅವರ ಉದ್ದೇಶವನ್ನು ತಿಳಿದುಕೊಂಡ ಸೃಜನಾತ್ಮಕ ನೆಲೆಗೆ ಸಾಕ್ಷಿಯಾಗಿವೆ. ಮತ್ತಷ್ಟು ಓದು »

28
ಡಿಸೆ

ಉಳಿಯುವಂಥ ವಿಜ್ಞಾನ ಸಾಹಿತ್ಯ ಕೊಟ್ಟ ಅಡ್ಯನಡ್ಕರು

– ರೋಹಿತ್ ಚಕ್ರತೀರ್ಥ

adyanadka-krishna-bhat1ಶಾಲೆಯಲ್ಲಿದ್ದಾಗ ನಾವು ಕಿತ್ತಾಡಿಕೊಂಡು ಓದುತ್ತಿದ್ದ ಪತ್ರಿಕೆ ಎಂದರೆ ಬಾಲವಿಜ್ಞಾನ. ಅದರಲ್ಲಿ ಬರುತ್ತಿದ್ದ “ನೀನೇ ಮಾಡಿ ನೋಡು” ಎಂಬ ಸರಳ ಪ್ರಯೋಗಗಳನ್ನು ಮನೆಯಲ್ಲಿ ಮಾಡಿ ನೋಡುತ್ತಿದ್ದೆವು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅಲ್ಲಿ ತಜ್ಞರು ಕೊಟ್ಟ ಉತ್ತರಗಳನ್ನು ಓದಿ ಖುಷಿ ಪಡುತ್ತಿದ್ದೆವು. ವ್ಯಕ್ತಿಚಿತ್ರಗಳನ್ನು ಎರಡೆರಡು ಬಾರಿ ಓದಿ ಮನನ ಮಾಡಿಕೊಳ್ಳುತ್ತಿದ್ದೆವು. ವಿಜ್ಞಾನ ಪದಬಂಧವನ್ನು ಪೂರ್ತಿಗೊಳಿಸಲು ಹೆಣಗುತ್ತಿದ್ದೆವು. ಪಂಡಿತವರ್ಗಕ್ಕೆ ಸೇರಿದ ವಿಶೇಷ ತಳಿಗಳೆಂಬ ನಮ್ಮ ಜಂಬವನ್ನು ಬಾಲವಿಜ್ಞಾನ ಹೀಗೆ ತೃಪ್ತಿಗೊಳಿಸುತ್ತಿತ್ತು. ಆ ಪತ್ರಿಕೆಯಲ್ಲಿ ತಪ್ಪದೆ ಕಾಣಿಸಿಕೊಳ್ಳುತ್ತ, ನಮ್ಮ ಮನಸ್ಸಿನಲ್ಲಿ ಅಚ್ಚೊತ್ತಿಹೋಗಿದ್ದ ಒಂದು ಹೆಸರು ಅಡ್ಯನಡ್ಕ ಕೃಷ್ಣ ಭಟ್. ಮತ್ತಷ್ಟು ಓದು »

3
ಡಿಸೆ

ಸಾಹಿತಿ, ಬುದ್ಧಿಜೀವಿಗಳ ಆತ್ಮ ಸಾಕ್ಷಿ ಯಾರ ಪಾದಾರುವಿಂದವನ್ನು ಸೇರಿದೆ?

ಕಿರಣ್ ಕಿಜೋ
ಸಂಶೋಧನಾ ವಿದ್ಯಾರ್ಥಿ
ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ
ಆಂಧ್ರ ಪ್ರದೇಶ

15203330_1161962633852199_2178590942366491034_nಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅರೆನಗ್ನ ಚಿತ್ರ ನೋಡಿ, ಸಾಕಷ್ಟು ಛೀಮಾರಿಗೆ ಒಳಗಾಗಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್, “ಮೂರೂ ಬಿಟ್ಟವರು ಊರಿಗೆ ದೊಡ್ಡವರು” ಎನ್ನುವ ಹಾಗೇ ಓಡಾಡಿಕೊಂಡಿರುವುದನ್ನು ನೋಡಿದರೆ ನಿಜಕ್ಕೂ ಖೇದವೆನಿಸುತ್ತದೆ. ಈ ನಡುವೆ ಸರ್ಕಾರವು ಸಚಿವ ಮಹಾಶಯರ ಬೆನ್ನಿಗೆ ನಿಂತು, ಸಿ.ಐ.ಡಿ.ಯಿಂದ ತನಿಖೆಯ ನಾಟಕವಾಡಿಸಿ ಕ್ಲೀನ್‍ಚೀಟ್ ನೀಡುವ ಉಮ್ಮೇದಿಯಲ್ಲಿದೆ. ನಿಷ್ಠ ಪೋಲಿಸ್ ಅಧಿಕಾರಿ ಗಣಪತಿ ಸಾವಿನ ವಿಚಾರದಲ್ಲೇ ಜಾರ್ಜ್‍ಗೆ ಕ್ಲೀನ್‍ಚೀಟ್ ನೀಡಿದವರಿಗೆ, ಈ ಪ್ರಕರಣ ಹೂವೆತ್ತಿದಷ್ಟೇ ಸಲೀಸು ಬಿಡಿ! ಇರಲಿ, ಇದೆಲ್ಲಾ ರಾಜಕಾರಣದ ಕೇಡಿನ ಭಾಗ. ನನ್ನ ಪ್ರಶ್ನೆ ಆ ಕುರಿತದ್ದಲ್ಲ, ಆ ಉದ್ದೇಶವೂ ನನ್ನಲ್ಲಿಲ್ಲ. ಆದರೆ ಸಭ್ಯ, ಪ್ರಜ್ಞಾವಂತ ಸಮಾಜವನ್ನು ಕಾಡುತ್ತಿರುವುದು ಹಾಗೂ ಸಂಕಟಕ್ಕೆ ದೂಡಿರುವುದು, ಈ ಮನುಷ್ಯ ನಾಡಿದ್ದು ರಾಯಚೂರಿನಲ್ಲಿ ನಡೆಯುತ್ತಿರುವ 82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷನೆಂಬುದು! ಮತ್ತಷ್ಟು ಓದು »