ಶಿಕ್ಷಣ ತಜ್ಞರಾಗಿ ಡಾ. ಶಿವರಾಮ ಕಾರಂತರು
ಶ್ರೀಮತಿ ತುಳಸಿ ಶಿರ್ಲಾಲು
ಉಪನ್ಯಾಸಕರು
ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್)
ತೆಂಕಿಲ , ಪುತ್ತೂರು. ದ.ಕ.
ಡಾ. ಶಿವರಾಮ ಕಾರಂತರು ತಮ್ಮ ಮಾತು – ಬರವಣಿಗೆಗಳೆರಡರಲ್ಲೂ ದಶಕಗಳುದ್ದಕ್ಕೂ ಶಿಕ್ಷಣ ಎಂದರೆ ಏನು? ಯಾವುದು ಶಿಕ್ಷಣ? ಶಿಕ್ಷಣ ಹೇಗಿರಬೇಕು? ತರಗತಿಯ ಒಳಗಿನ ಶಿಕ್ಷಣ ಮತ್ತು ನಿತ್ಯ ಜೀವನದಲ್ಲಿ ಉಪಯೋಗ ಮೊದಲಾದ ವಿಷಯಗಳನ್ನು ಮತ್ತೆ ಮತ್ತೆ ಪರಿಷ್ಕರಿಸುತ್ತಾ, ಸ್ಪಷ್ಟಗೊಳಿಸುತ್ತಾ, ಪುನರ್ ರೂಪಿಸುತ್ತಿದ್ದರು. “ಓದು ಯಾಕೆ ಬೇಕು, ಬರಹ ಯಾಕೆ ಬೇಕು ಎಂದು ತಿಳಿಯದ ಮಕ್ಕಳನ್ನು ಕುಳ್ಳಿರಿಸಿಕೊಂಡು ಓದಿನಲ್ಲಿ ಸ್ವಾರಸ್ಯವಿದೆ, ಬರಹದಿಂದ ನಮ್ಮ ಮನಸ್ಸನ್ನು ತೋಡಿಕೊಳ್ಳುವುದಕ್ಕೆ ಬರುತ್ತದೆ ಎಂಬ ಉದ್ದೇಶ ಸಾಧಿಸಬೇಕು. ಇಲ್ಲಿ ಕಲಿತ ಗಣಿತ, ನಾಳೆ ನಡೆಸುವ ವಿವಿಧ ವ್ಯವಹಾರಗಳಲ್ಲಿ ಅನಿವಾರ್ಯ ಎಂಬ ಭಾವನೆಗೆ ಪೀಠಿಕೆ ಹಾಕಬೇಕು. ಮಕ್ಕಳಿಗೆ ಕಲಿಸುವ ವಿಜ್ಞಾನ, ಸಮಾಜಶಾಸ್ತ್ರ, ಚರಿತ್ರೆ ಭೂಗೋಳದಂತಹ ವಿಷಯಗಳು ಕೂಡಾ ನಾಳಿನ ಬುದ್ದಿಯ ಬೆಳವಣಿಗೆಗೆ, ಜ್ಞಾನ ಸಂಪಾದನೆಗೆ ಅವಶ್ಯಕವಾದ ತೃಷೆಯ ರೂಪವನ್ನು ಹೊಂದಿದಾಗ ಮಾತ್ರವೇ ಪ್ರಾಥಮಿಕ ಹಂತದಲ್ಲಿ ನಾವು ಕೊಡುವ ಸರಳ ಪಾಠಗಳು ತಮ್ಮ ಗುರಿಯನ್ನು ಸಾಧಿಸಬಹುದು ಇಲ್ಲವಾದರೆ ಇಲ್ಲ” ಎನ್ನುತ್ತಾರೆ. ಈ ಮಾತುಗಳೇ ಕಾರಂತರು ಶಿಕ್ಷಣವನ್ನು ಗ್ರಹಸಿಕೊಂಡ ಅವರ ಉದ್ದೇಶವನ್ನು ತಿಳಿದುಕೊಂಡ ಸೃಜನಾತ್ಮಕ ನೆಲೆಗೆ ಸಾಕ್ಷಿಯಾಗಿವೆ. ಮತ್ತಷ್ಟು ಓದು
ಒಂದು ಹೊತ್ತು ಉಪವಾಸ ಮಾಡಿ, ಅದರ ಹಣದಲ್ಲಿ ಗೋವುಗಳನ್ನು ಉಳಿಸಿಕೊಳ್ಳುವ ವಿನೂತನ ಅಭಿಯಾನ #GiveUpAMeal ಹಿಂದಿನ ಕತೆ..
ಅಜಿತ್ ಶೆಟ್ಟಿ
ಹೆರಂಜೆ ದೊಡ್ಡಮನೆ.
ಗೋಹತ್ಯೆ ತಡೆಗಾಗಿನ ಕೂಗು ಭಾರತದಲ್ಲಿ ಬಹಳ ಹಿಂದಿನದು, ಇತ್ತೀಚಿನ ಡಿಜಿಟಲ್ ಇಂಡಿಯಾ ಯುಗದಲ್ಲಿ ಅದು ಸೋಷಿಯಲ್ ಮೀಡಿಯದಲ್ಲೂ ಸದ್ದು ಮಾಡುತ್ತಿದೆ.. ನಮ್ಮ ಯುವಕರು ಗೋಹತ್ಯೆ ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬಡಿದುಕೊಳ್ಳುವಾಗ ಸೋಕಾಲ್ಡ್ ಪ್ರಗತಿಪರರು ಸೋಷಿಯಲ್ ಮೀಡಿಯದಲ್ಲಿರುವ ಮಂದಿಗೆ ತಲೆ ಇಲ್ಲ, ಅವರಿಗೆ ಅಷ್ಟು ಪ್ರೀತಿ ಇದ್ದರೆ ಒಂದೆರಡು ಗೋವುಗಳನ್ನು ಸಾಕಲಿ, ಗೋಶಾಲೆ ನಡೆಸಲಿ ಹೀಗೆ ಹಲವಾರು ಪ್ರಶ್ನೆಗಳನ್ನೊಡ್ಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ನಮ್ಮ ಯುವಕರ ಕೂಗು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಇದೆಯಾ ಅಥವಾ ನಿಜವಾಗಲೂ ಗೋವುಗಳನ್ನು ಉಳಿಸಿಕೊಳ್ಳುವ ಕಾಳಜಿ ಇದೆಯಾ, ಪೂಜ್ಯ ಭಾವನೆ ಇಟ್ಟುಕೊಂಡಿದ್ದಾರ ಎಂದು ನೋಡಿದರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಡೆದ ಒಂದು ಅಭಿಯಾನ ಯುವ ಜನತೆ ಬಗ್ಗೆ ಹೆಮ್ಮೆ ಮೂಡಿಸುತ್ತದೆ ಎಂದು ಭಾವಿಸುತ್ತೇನೆ. ಈ ಅಭಿಯಾನದ ಒಳಗೆ ಹೋಗುವ ಮೊದಲು ಅಭಿಯಾನದ ಪೂರ್ವ ಪ್ರೇರಣೆಯ ಕಡೆ ಒಮ್ಮೆ ಗಮನ ಹರಿಸೋಣ. ನಮ್ಮ ದೇಶದಲ್ಲಿ ಗೋವು ಪ್ರತಿ ರೈತನ ಬೆನ್ನೆಲುಬು, ದೇಶಿ ಗೋವುಗಳು ಅವನತಿ ಹೊಂದಿದರೆ ರಾಸಾಯನಿಕ ಮುಕ್ತ ಕೃಷಿ ಎನ್ನುವುದು ಕನಸಾಗುವುದು ನಿಶ್ಚಿತ. ಇಂತಹ ಸತ್ಯಗಳು ನಮ್ಮ ಸಮಾಜಕ್ಕೆ, ಜನನಾಯಕರಿಗೆ ಗೊತ್ತಿಲ್ಲ ಅಂತೇನು ಇಲ್ಲ.. ಆದರೂ ಓಲೈಕೆ ರಾಜಕಾರಣಕ್ಕಾಗಿ ಗೋಹತ್ಯೆಯನ್ನು ನಿಲ್ಲಿಸಲಾಗುತ್ತಿಲ್ಲ, ನಾವು ಗಾಂಧೀಜಿ ಅನುಯಾಯಿಗಳು ಎಂದವರೇ ದಶಕಗಳ ಕಾಲ ದೇಶವನ್ನು ಆಳಿದರೂ ಗಾಂಧಿ ಕನಸನ್ನು ನನಸು ಮಾಡದೆ ಹೊಣೆಗೇಡಿಗಳಂತೆ ವರ್ತಿಸಿದ್ದಾರೆ. ಇವೆಲ್ಲವುಗಳ ನಡುವೆ ಬರಗಾಲದಿಂದ ಸಾಯುತ್ತಿರುವ ಜಾನುವಾರುಗಳನ್ನು ಉಳಿಸಿ ರೈತನ ಬಾಳನ್ನು ಬಲಗೊಳಿಸುವ ಪ್ರಾಮಾಣಿಕ ಕಾರ್ಯವನ್ನಾದರೂ ಮಾಡುತ್ತಾರೆ ಎಂದುಕೊಂಡರೆ ಅದನ್ನು ಮಾಡದೇ ಅದರಲ್ಲೂ ಭ್ರಷ್ಟಾಚಾರ ಮಾಡಿಕೊಂಡು ಮಜ ಮಾಡುತ್ತಿದ್ದಾರೆ.. ಇಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಮಠಗಳು, ಸಂಘ ಸಂಸ್ಥೆಗಳು ರೈತರ ಬೆನ್ನಿಗೆ ನಿಂತು ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇದರ ಒಂದು ಭಾಗವಾಗಿ ರಾಮಚಂದ್ರ ಪುರ ಮಠವು ಸಹ ೧೪ ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮತ್ತಷ್ಟು ಓದು
ಯಾರು ಹಿತವರು ಯಡ್ಯೂರಪ್ಪನವರಿಗೆ..?
– ರಾಕೇಶ್ ಶೆಟ್ಟಿ
“ಕೊಟ್ಟ ಕುದುರೆಯನೇರಲರಿಯದೆ…” ವಚನದ ಸಾಲುಗಳು ಕರ್ನಾಟಕ ಬಿಜೆಪಿಯ ನಾಯಕರಿಗೆ ಸರಿಯಾಗಿ ಅನ್ವಯಿಸುತ್ತದೆ. ಎಪಿಎಂಸಿ,ಪಾಲಿಕೆ ಚುನಾವಣೆಗಳೆನ್ನದೇ ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿ ಗೆದ್ದು ಬರುತ್ತಿರುವ ಕಮಲ ಪಕ್ಷದ ಸುವರ್ಣ ಸಮಯದಲ್ಲೂ, ರಾಜ್ಯ ಬಿಜೆಪಿ ನಾಯಕರು ಉಪಚುನಾವಣೆಯಲ್ಲಿ ಮಕಾಡೆ ಮಲಗಿ ಕಿರಗೂರಿನ ಗಯ್ಯಾಳಿಗಳಂತೆ ಕಾದಾಟಕ್ಕಿಳಿದಿದ್ದಾರೆ. ನಿನ್ನೆಯ ಸಂಘಟನೆ ಉಳಿಸಿ ಹೆಸರಿನ ಸಭೆ, ಅದಕ್ಕೆ ಪ್ರತಿಯಾಗಿ ನಡೆದ ಬೆಂಗಳೂರಿನ ಶಾಸಕ, ಸಂಸದರ ಪತ್ರಿಕಾಗೋಷ್ಟಿ, ನಾಯಕರೆನಿಸಿಕೊಂಡವರ ಏಕವಚನ ಪ್ರಯೋಗ, ಆರೋಪ-ಪ್ರತ್ಯಾರೋಪಗಳಿಂದಾಗಿ ನಿನ್ನೆ ಎಷ್ಟು ಮೆಗಾಧಾರವಾಹಿಗಳ ಟಿಆರ್ಪಿ ಕಡಿಮೆಯಾಯಿತೋ!
ದೇಶದ ಉಳಿದ ರಾಜ್ಯಗಳ ಬಿಜೆಪಿ, ನರೇಂದ್ರ ಮೋದಿಯವರ ಅಭಿವೃದ್ಧಿ ರಾಜಕಾರಣ ಮತ್ತು ಯುವ ಮನಸ್ಸುಗಳ ಆಲೋಚನಾ ಶಕ್ತಿಯಿಂದ ಮುಂದುವರೆಯುತ್ತಿದ್ದರೆ, ರಾಜ್ಯ ಬಿಜೆಪಿ ಮಾತ್ರ ಪುರಾತನ ಜಾತಿ ಮತ್ತು ಓಲೈಕೆ ರಾಜಕಾರಣವನ್ನೇ ನೆಚ್ಚಿಕೊಂಡಿದೆ.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಮುಖಂಡರೊಬ್ಬರು, ಕುರುಬರಿಗಾಗಿ ಈಶ್ವರಪ್ಪ ಏನು ಮಾಡಿದ್ದಾರೆ? ಯಡ್ಯೂರಪ್ಪನವರೇ ಕನಕ ಜಯಂತಿ ಆರಂಭಿಸಿದ್ದು ಎಂದು ಹೇಳುತ್ತಿರುವುದನ್ನು ಕೇಳಿದೆ. ಆಗಾಗ್ಗೆ ಬರುವ ಜಯಂತಿಗಳ ನೆಪದಲ್ಲಿ ರಜೆಗಳನ್ನು ಕೊಟ್ಟು ಸರ್ಕಾರಿ ಯಂತ್ರವನ್ನು ನಿಲ್ಲಿಸುವ ಪರಿಪಾಠಗಳು ಕೊನೆಯಾಗಬೇಕೆಂಬ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಂತವರು ‘ಜಯಂತಿ ರಜೆ’ಗಳನ್ನೇ ಕಿತ್ತೊಗೆಯುವಂತಹ ಕೆಲಸ ಮಾಡುತ್ತಿರುವಾಗ, ರಾಜ್ಯ ಬಿಜೆಪಿಯ ನಾಯಕರ ಮನಸ್ಥಿತಿ ಇನ್ನೂ ಜಯಂತಿ ರಾಜಕಾರಣದಲ್ಲೇ ಇರುವುದು ಇವರ ಯೋಚನಾ ಲಹರಿ ಯಾವ ಕಾಲದಲ್ಲಿದೆ ಎಂದು ಸೂಚಿಸುತ್ತದೆ. ಹಾಗೆ ನೋಡಿದರೇ ಕಾಂಗ್ರೆಸ್ಸಿನ ‘ಭಾಗ್ಯ’ ರಾಜಕಾರಣಕ್ಕೂ, ಬಿಜೆಪಿಯ ‘ಜಯಂತಿ’ ರಾಜಕಾರಣಕ್ಕೂ ಯಾವ ವ್ಯತ್ಯಾಸವಿದೆ ? ಇವೆಲ್ಲವನ್ನೂ ಪ್ರಶ್ನಿಸಬೇಕಾದ ಪತ್ರಿಕೆಗಳು ಮಾಡುತ್ತಿರುವುದಾದರೂ ಏನು?
ಮಾಧ್ಯಮಗಳ ಟಿ.ಆರ್.ಪಿ ದಾಹಕ್ಕೆ ಬಲಿಯಾದಳೇ ಸುಹಾನಾ ಸೈಯದ್ ?
– ಸುರೇಶ್ ಮುಗಬಾಳ್

‘ಆರ್ ಅಂಕುಸ(ರ?)ವಿಟ್ಟೊಡಂ’: ಒಂದು ಪರಿಶೀಲನೆ
– ಡಾ.ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕರು,
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಪಂಪ ವಿರಚಿತ ವಿಕ್ರಮಾರ್ಜುನ ವಿಜಯ (ಕ್ರಿ.ಶ.942) ಕೃತಿಯಲ್ಲಿನ ಬನವಾಸಿ ವರ್ಣನೆಯನ್ನು ಮಾಡುವ ಚತುರ್ಥಾಶ್ವಾಸದ 28 ರಿಂದ 32ನೆಯ ಪದ್ಯಗಳು ಸಾಕಷ್ಟು ಚರ್ಚಿತವಾದವು. ಇಂದಿಗೂ ಈ ಪದ್ಯಗಳನ್ನು ಕುರಿತು ಚರ್ಚೆ ನಡೆಯುತ್ತಲೇ ಇದೆ. ಇವುಗಳಲ್ಲಿ ಒಂದು ಪದ್ಯ:
ತೆಂಕಣಗಾಳಿ ಸೋಂಕಿದೊಡಮೊಳ್ನುಡಿಗೇಳ್ದೊಡಮಿಂಪನಾಳ್ದ ಗೇ
ಯಂ ಕಿವಿವೊಕ್ಕಡಂ ಬಿರಿದಮಲ್ಲಿಗೆಗಂಡೊಡಮಾದ ಕೆಂದಲಂ
ಪಂ ಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ
ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿದೇಶಮಂ1 (4-32) ಮತ್ತಷ್ಟು ಓದು
“ಪಟ್ಟಭದ್ರಹಿತಾಸಕ್ತಿಗಳ ಕೈಗಳಲ್ಲಿ ಸಿಕ್ಕಿ ಒದ್ದಾಡುತ್ತಿದೆ ಕನ್ನಡ ಚಿತ್ರರಂಗ”
– ಸುರೇಶ್ ಮುಗಬಾಳ್
ಗೆಳೆಯನೊಬ್ಬ ತಮಿಳು ನಟ ವಿಜಯ್ ನಟಿಸಿರುವ ‘ಕತ್ತಿ’ ಸಿನೆಮಾವನ್ನು ವೀಕ್ಷಿಸುವಂತೆ ಹೇಳಿದ, ಆ ಸಿನೆಮಾದಲ್ಲೇನಿದೆ ಅಂತಹ ವಿಶೇಷತೆ? ಎಂದು ಕೇಳಿದಾಗ, ‘ಸಾಮಾಜಿಕ ಕಳಕಳಿಯುಳ್ಳ ಅತ್ಯುತ್ತಮ ನಿನೆಮಾ, ಸಾಧ್ಯವಾದರೆ ವೀಕ್ಷಿಸು’ ಎಂದ, ಸರಿ ನಾನೂ Hotstar ನಲ್ಲಿ ಚಿತ್ರಕ್ಕಾಗಿ ತಡಕಾಡಿದೆ, ಸಿನೆಮಾವೇನೋ ವೀಕ್ಷಿಸಲು ಸಿಕ್ಕಿತು, ಆದರೆ ಚಿತ್ರವನ್ನು ಮಲೆಯಾಳಂ ಭಾಷೆಯಲ್ಲಿ ಡಬ್ಬ್ ಮಾಡಲಾಗಿತ್ತು. ಭಾಷೆ ಬಾರದವನಿಗೆ ತಮಿಳು ಭಾಷೆಯಾದರೇನು? ಮಲೆಯಾಳಂ ಭಾಷೆಯಾದರೇನು? ಅದು ಒತ್ತಟ್ಟಿಗಿರಲಿ, ಭಾಷೆಯ ಗಂಧವೇ ಗೊತ್ತಿರದ ಅರೇಬಿಕ್ ಭಾಷೆಯ ಅಲ್ ಲೈಲ್, ಕೋರಿಯನ್ ಭಾಷೆಯ Miracle in cell No. 7 ಸಿನೆಮಾಗಳನ್ನೂ ವೀಕ್ಷಿಸಿದ್ದೇನೆ, ಈ ಚಿತ್ರಗಳಲ್ಲಿ ನನಗೆ ಅರ್ಥವಾಗುತ್ತಿದ್ದದ್ದು ಕೇವಲ ಮುಖಭಾವ, ಆಂಗಿಕ ಚಲನೆ, ಚಿತ್ರದ ನಿರೂಪಣೆಗಳು ಮಾತ್ರ. ಇವುಗಳ ಸಹಾಯದಿಂದಲೇ ಚಿತ್ರಕಥೆಯನ್ನು ಅರ್ಥಮಾಡಿಕೊಳ್ಳು ಪ್ರಯತ್ನಿಸುತ್ತಿದ್ದೆ. ಒಂದು ವೇಳೆ English ಅಡಿಬರಹಗಳಿಲ್ಲದಿದ್ದರೆ ಸಿನೆಮಾ ಅರ್ಥವೇ ಆಗುತ್ತಿರಲಿಲ್ಲ. Miracle in cell No. 7 ಚಿತ್ರವನ್ನು ಇತ್ತೀಚೆಗೆ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ಕನ್ನಡಕ್ಕೆ ‘ಪುಷ್ಫಕ ವಿಮಾನ’ ಎಂಬ ಹೆಸರಿನಲ್ಲಿ ರಿಮೇಕ್ ಕೂಡ ಮಾಡಲಾಯಿತು. ನಾಯಕನ ನಟನೆ ಅದ್ಭುತವಾಗಿದ್ದರೂ ಚಿತ್ರವು ನಿರೀಕ್ಷೆಯನ್ನು ಹುಸಿಗೊಳಿಸಿತು. ಕೊರಿಯನ್ ಭಾಷೆಯಲ್ಲಿ ನಿರ್ಮಾಣವಾದ ಚಿತ್ರ ನನ್ನ ಅಂತರಂಗವನ್ನು ಕಲುಕಿದಷ್ಟೂ ಕನ್ನಡದಲ್ಲಿ ರಿಮೇಕ್ ಮಾಡಿದ ಚಿತ್ರ ಅಂತರಂಗಕ್ಕಿಳಿಯಲಿಲ್ಲ. ಪ್ರಾಯಶಃ ಕೊರಿಯನ್ ಭಾಷೆಯ ಚಿತ್ರವನ್ನೇ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ್ದರೆ ಚಿತ್ರ ಇನ್ನಷ್ಟು ಅರ್ಥಗಳನ್ನು ಮೂಡಿಸುತ್ತಿತ್ತೇನೋ. ಮತ್ತಷ್ಟು ಓದು
ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?
– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.
ಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು
ಪ್ರಾಣಿಗಳ ಕ್ರೀಡೆ ಮತ್ತು ಐಡೆಂಟಿಟಿ
– ವಿನಾಯಕ ಹಂಪಿಹೊಳಿ
ಪೆಟಾ ಹಾಗೂ ಇನ್ನಿತರ ಪ್ರಾಣಿದಯಾ ಸಂಘದವರು ಪ್ರಾಣಿಗಳನ್ನು ಆಹಾರವಾಗಿ ಹೊರತುಪಡಿಸಿ ಉಳಿದೆಲ್ಲ ಕಾರ್ಯಸಾಧನೆಗಾಗಿ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ವಿರೋಧಿಸುತ್ತಾರೆ. ಅವುಗಳನ್ನು ಮೋಜಿಗಾಗಿ ಪಂದ್ಯಗಳಲ್ಲಿ ಬಳಸುವುದನ್ನು, ಮೆರವಣಿಗೆಯಲ್ಲಿ ಉಪಯೋಗಿಸುವುದನ್ನು, ಅವುಗಳ ಚರ್ಮದಿಂದ ಉಪಯೋಗಿ ವಸ್ತುಗಳನ್ನು ನಿರ್ಮಿಸುವುದನ್ನು, ಸರ್ಕಸ್ಸಿನಲ್ಲಿ ಪ್ರಾಣಿಗಳನ್ನು ಹೊಡೆದು ಪಳಗಿಸುವುದನ್ನು ವಿರೋಧಿಸುತ್ತಾರೆ. ಮೋಜಿಗಾಗಿ ಪ್ರಾಣಿಗಳನ್ನು ಹೊಡೆದೋಡಿಸುವ ಆಟಗಳನ್ನು, ಕೊಲ್ಲುವ ಆಚರಣೆಗಳನ್ನು, ನಿಷೇಧಿಸಬೇಕೆಂದು ಈ ಪ್ರಾಣಿದಯಾ ಸಂಘಗಳು ಪ್ರಯತ್ನಿಸುತ್ತವೆ. ಪ್ರಾಣಿದಯಾ ಸಂಘಗಳ ಈ ಕಾಳಜಿಯು ಜನಸಾಮಾನ್ಯ ಭಾರತೀಯರಿಗೆ ಮೇಲ್ನೋಟಕ್ಕೆ ಅರ್ಥವಾಗಿರುವಂತೆಯೇ ಭಾಸವಾಗುತ್ತದೆ. ಮತ್ತಷ್ಟು ಓದು
ಉಳಿಯುವಂಥ ವಿಜ್ಞಾನ ಸಾಹಿತ್ಯ ಕೊಟ್ಟ ಅಡ್ಯನಡ್ಕರು
– ರೋಹಿತ್ ಚಕ್ರತೀರ್ಥ
ಶಾಲೆಯಲ್ಲಿದ್ದಾಗ ನಾವು ಕಿತ್ತಾಡಿಕೊಂಡು ಓದುತ್ತಿದ್ದ ಪತ್ರಿಕೆ ಎಂದರೆ ಬಾಲವಿಜ್ಞಾನ. ಅದರಲ್ಲಿ ಬರುತ್ತಿದ್ದ “ನೀನೇ ಮಾಡಿ ನೋಡು” ಎಂಬ ಸರಳ ಪ್ರಯೋಗಗಳನ್ನು ಮನೆಯಲ್ಲಿ ಮಾಡಿ ನೋಡುತ್ತಿದ್ದೆವು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅಲ್ಲಿ ತಜ್ಞರು ಕೊಟ್ಟ ಉತ್ತರಗಳನ್ನು ಓದಿ ಖುಷಿ ಪಡುತ್ತಿದ್ದೆವು. ವ್ಯಕ್ತಿಚಿತ್ರಗಳನ್ನು ಎರಡೆರಡು ಬಾರಿ ಓದಿ ಮನನ ಮಾಡಿಕೊಳ್ಳುತ್ತಿದ್ದೆವು. ವಿಜ್ಞಾನ ಪದಬಂಧವನ್ನು ಪೂರ್ತಿಗೊಳಿಸಲು ಹೆಣಗುತ್ತಿದ್ದೆವು. ಪಂಡಿತವರ್ಗಕ್ಕೆ ಸೇರಿದ ವಿಶೇಷ ತಳಿಗಳೆಂಬ ನಮ್ಮ ಜಂಬವನ್ನು ಬಾಲವಿಜ್ಞಾನ ಹೀಗೆ ತೃಪ್ತಿಗೊಳಿಸುತ್ತಿತ್ತು. ಆ ಪತ್ರಿಕೆಯಲ್ಲಿ ತಪ್ಪದೆ ಕಾಣಿಸಿಕೊಳ್ಳುತ್ತ, ನಮ್ಮ ಮನಸ್ಸಿನಲ್ಲಿ ಅಚ್ಚೊತ್ತಿಹೋಗಿದ್ದ ಒಂದು ಹೆಸರು ಅಡ್ಯನಡ್ಕ ಕೃಷ್ಣ ಭಟ್. ಮತ್ತಷ್ಟು ಓದು
ದೇವನೂರು ಮಹಾದೇವ ಅವರಿಗೊಂದು ಪ್ರೀತಿಪೂರ್ವಕ ಪತ್ರ
– ಪ್ರವೀಣ್ ಕುಮಾರ್, ಮಾವಿನಕಾಡು
ಕನ್ನಡ ನಾಡಿನ ಸಾಕ್ಷಿಪ್ರಜ್ಞೆ ಎಂದೇ ಕರೆಯಲ್ಪಡುವ ಪ್ರೀತಿಯ ದೇವನೂರು ಮಹಾದೇವ ಅವರಿಗೆ ನಮಸ್ಕಾರಗಳು.
ಕನ್ನಡದ ಪ್ರಖ್ಯಾತ ಸಾಹಿತಿಗಳಲ್ಲಿ ಒಬ್ಬರಾದ ತಾವು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲಿ ಒಬ್ಬರೂ ಹೌದು. ಆದರೆ ನಿಮ್ಮಲ್ಲಿ ಎಳ್ಳಷ್ಟೂ ಜಂಭವಿಲ್ಲ, ಅಹಂಕಾರವಿಲ್ಲ ಮತ್ತು ದೊಡ್ಡ ದೊಡ್ಡ ಸಾಹಿತಿಗಳು ತೋರುವ ಶೋಕಿಯಿಲ್ಲ. ಸರಳತೆಯೇ ನಿಮ್ಮ ಗುರುತು ಪತ್ರ ಎಂದರೂ ತಪ್ಪಾಗದು. ಮತ್ತಷ್ಟು ಓದು