ಗತಂ ಗತಂ
ಪವನ್ ಪಾರುಪತ್ತೇದಾರ್
ನಮಮ್ಮನಿಗೆ ಇದ್ದಕ್ಕಿದ್ದ ಹಾಗೆ ಅಕ್ಕನ ನೆನಪಾಗಿ ನನ್ನ ಕೇಳಿದ್ರು ಕರೆದು ಕೊಂಡು ಹೋಗು ಅಂತ, ನನಗು ಮಾಡಕ್ ಏನು ಕೆಲಸ ಇಲ್ಲದ ಕಾರಣ electronic ಸಿಟಿ ಕಡೆ ಪ್ರಯಾಣ ಮಾಡಿದೆ. ನಾನು ಅವರ ಮನೆಗೆ ಹೋಗಿ ಸುಮಾರು ೪ ವರ್ಷ ಗಳಾಗಿತ್ತು. ಹೋಗಿ ಅವರ ಮನೆ ಸೇರಿದ ತಕ್ಷಣ ಉಭಯ ಕುಶಲೋಪರಿಗಳನ್ನು ಮುಗಿಸಿ ಚೌ ಚೌ ಬಿಸ್ಕತ್ತು ತಿನ್ನುತ್ತ ಮಾತನಾಡುತ್ತಿರುವಾಗ ನಮ್ಮ ಅಣ್ಣ ನಮ್ಮ ತಾಯಿಗೆ ಹೇ ನಿನ್ನ 2nd year BA ದು ಒಂದು ಪುಸ್ತಕ ಹಾಗೆ ಇಟ್ಟಿದಿನಿ ಕಣೆ ಅಂದ ( ಹೆಚ್ಹು ಸಲಿಗೆ ಚಿಕ್ಕಮ್ಮ ಆದರು ಹೋಗೆ ಬಾರೆ ಎಂದೆ ಮಾತನಾಡುತ್ತಾರೆ )
ನಮಮ್ಮ ಯಾವುದೊ ಅದು ಅಂದ್ರು ,ಅದಕ್ಕೆ ನಮ್ಮಣ್ಣ untouchable ಅಂತ ನೆನಪಿದ್ಯ ಅಂದ ಅಮ್ಮ ಹೌದು ಹೌದು ಇನ್ನು ಇತ್ತಿದ್ಯ good ಅಂದ್ರು. ಅದಕ್ಕವ, ನಾನು ಮಾತ್ರ ಯಾರಿಗೂ ಪುಸ್ತಕ ಕೊಡೋದಿಲ್ಲಪ ಅದನ್ನ ಯಾರಿಗದ್ರು ಕೊಟ್ರೆ ವಾಪಾಸ್ ಬರೋದೆ ಕಷ್ಟ ಅದಕ್ಕೆ ಜೋಪಾನವಾಗಿ ಜೋಡಿಸ್ತೀನಿ ಸಮಯ ಸಿಕ್ಕಾಗ ಓದ್ತಾ ಇರ್ತೀನಿ ಅಂದ. ಅಷ್ಟರಲ್ಲೇ ಅಲ್ಲೇ ಕೂತಿದ್ದ ನಮ್ಮ ದೊಡ್ಡಪ್ಪ ಕಣಗಾಲ್ ಶಂಕರ್ ನಾರಾಯಣ್ ( ಕನ್ನಡ ಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರವರ ಮೊದಲನೇ ತಮ್ಮ ) ಒಂದು ಮಾತು ಹೇಳಿದರು, ” ಪುಸ್ತಕಂ ವನಿತಂ ವಿತ್ತಂ ಪರ ಹಸ್ತೇ ಗತಂ ಗತಂ ” ಆಹಾ ಎಷ್ಟು ಅರ್ಥ ಗರ್ಭಿತವಾಗಿದೆ. ಈ ಮಾತು, ಪುಸ್ತಕ ಅಗಲಿ ಹೆಣ್ಣಾಗಲಿ ಹಣ ಅಗಲಿ ಇನ್ನೊಬ್ಬರ ಕೈಗೆ ಹೋದರೆ ಅದು ಹೋದಂತಯೇ ತಿಳಿಯಬೇಕು. ಅಕಸ್ಮಾತ್ ಮತ್ತೆ ಬಂದರು ಅದು ಸರಿಯಾಗಿ ಬರುವುದು ಬಹಳ ಕಷ್ಟ , ಸರಿಯಾದ ಮಾತು. ನನ್ನ ಜೆವನದಲ್ಲೇ ಅಂತ ಸಂಗತಿಗಳು ನಡೆದಿವೆ, ನಾನು ೫ನೆ ತರಗತಿ ಓದೋವಾಗ ನನಗೆ ಬಹುಮಾನವಾಗಿ ಬಂದಿದ್ದ ಒಂದು ಜನರಲ್ knowledge ಪುಸ್ತಕವನ್ನ ತೆಗೆದುಕೊಂಡಿದ್ದ ಮೇಸ್ಟ್ರು ನಾನು ಪ್ರೌಢ ಶಾಲೆ ಸೇರುವರೆಗೂ ಕೇಳಿದ್ರು ವಾಪಾಸ್ ಕೊಡಲಿಲ್ಲ. ಮತ್ತಷ್ಟು ಓದು
ಐ ಹೇಟ್ ಕ್ರಿಕೆಟ್..!!!???
ಅರೆಹೊಳೆ ಸದಾಶಿವರಾವ್
ಕ್ರಿಕೆಟಿಗರು ಮೈದಾನದಲ್ಲಿ ಆಡುತ್ತಿದ್ದರೆ ಮೈ ಎಲ್ಲಾ ಕಣ್ಣಾಗಿ, ದೇಶದ ಧ್ವಜವನ್ನು ಹಾರಿಸಿ ನೋಡುವ, ಮನೆಯೊಳಗೆ ಎಲ್ಲಾ ಕೆಲಸ ಬಿಟ್ಟು ಟಿ” ಮುಂದೆ ಕುಳಿತುಕೊಳ್ಳುವ ನಾವೆಲ್ಲರೂ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ, ಬಹುಷ ನಾವೂ ಈ ಕ್ರಿಕೆಟಿಗರೆಂಬ ‘ದೇಶ ದ್ರೋ”‘ಗಳಿಗಿಂತ ಕಡಿಮೆ ಇಲ್ಲದಂತಾಗುತ್ತದೆ. ವ್ಯತ್ಯಾಸ ಎಂದರೆ ಅವರಿಗೆ ಕೈತುಂಬಾ ಹಣ ಸಿಗುತ್ತದೆ, ನಮ್ಮದು ಜೀವನದ ಅಪೂರ್ವಗಳಿಗೆಗಳು ವ್ಯರ್ಥವಾಗಿ ಕಳೆದುಹೋಗುತ್ತವೆ.
ಹಲವು “ಷಯಗಳ ಬಗ್ಗೆ ನಾ”ಲ್ಲಿ ಯೋಚಿಸಲೇ ಬೇಕು. ಇತ್ತೀಚಿನ ಐಪಿಎಲ್ ಪಂದ್ಯಾವಳಿಯ ವೇಳೆ, ರಾಯಲ್ ಚ್ಯಾಲೆಂಜರ್ಸ್, ಬೆಂಗಳೂರು ತಂಡವನ್ನು ಹಲವರು ನಮ್ಮ ತಂಡ ಎಂದೇ ಸಂಬೋಧಿಸುತ್ತಿದ್ದರು. ನಮ್ಮ ಕರ್ನಾಟಕದ ಆಟಗಾರರನ್ನೆಲ್ಲಾ ಕೈ ಬಿಟ್ಟು, ಕೇವಲ ಬೇರೆ ರಾಜ್ಯ ಮತ್ತು “ದೇಶಿ ಆಟಗಾರರನ್ನು ಮಾತ್ರ ‘ಖರೀದಿಸಿ’, ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಸರಿಟ್ಟುಕೊಂಡು, ಬೆಂಗಳೂರಿನಲ್ಲಿ ಆದ ಪಂದ್ಯಗಳಲ್ಲೆಲ್ಲಾ ಕ್ರಿಕೆಟ್ ಪ್ರೇ”ಗಳ ಹಣ ದೋಚಿದ್ದು ಬಿಟ್ಟರೆ, ಬೇರಾವ ರೀತಿಯಲ್ಲೂ ಈ ಬೆಂಗಳೂರು ತಂಡ ನಮ್ಮzಲ್ಲವಾಗಿತ್ತು!. ಆದರೂ ಅದನ್ನು ನಮ್ಮದು ಎಂದು, ನಮ್ಮದೇ ರಾಜ್ಯದ ಕ್ರಿಕೆಟಿಗರು ಬೇರೆ ತಂಡದಲ್ಲಿ ಆಡುತ್ತಿದ್ದರೂ, ನಾವು ಮಾತ್ರ ಮರುಳರಂತೆ ‘ಅಭಿಮಾನ’ದ ಪರಾಕಾಷ್ಠೆ ಮೆರೆದದ್ದು. “ಜಯ ಮಲ್ಯರಿಗಂತೂ ಖುಯಾಗಿರಬಹುದು. ಮತ್ತಷ್ಟು ಓದು
ಕ್ರಿ”ಕೆಟ್ಟಾ”ಟ

ಅಫ್ರಿದಿಯ ಬೊಗಳುವಿಕೆ ಹಾಗೂ ನಮ್ಮ ತಿಕ್ಕಲುತನಗಳು..
– ಉಮೇಶ್ ದೇಸಾಯಿ
“ಸಮಾ” ಎನ್ನುವ ನ್ಯೂಸ್ ಚಾನೆಲ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಅಫ್ರಿದಿ ಅಂದ
—
“”In my opinion, if I have to tell the truth, they (Indians) will never have hearts like Muslims and Pakistanis. I don’t think they have the large and clean hearts that Allah has given us,”
ಅವನ ಮಾತುಗಳಲ್ಲಿ ಸತ್ಯಇದೆಯೋ ಇಲ್ಲವೋ ಇಲ್ಲಿರುವ ಮುಸ್ಲಿಮ್ ರು ಹೇಳಬೇಕು. ಇದು ಸೋತವನ ಹತಾಶ ನುಡಿಯೋ ಅಥವಾ ಮನದಲ್ಲಿ ಮಥಿಸಿ ಮಥಿಸಿ ಕಾರಿದ ವಿಷವೋ ಗೊತ್ತಿಲ್ಲ. ಒಂದೇ ಮಾತಿನಲ್ಲಿ ಭಾರತವನ್ನು ಇಬ್ಭಾಗ ಮಾಡಿದ್ದಾನೆ. ಅಲ್ಲಾಹು ಕೊಟ್ಟ ದೇಣಿಗೆ ಹೃದಯ ಅದು ಭಾರತೀಯರಲ್ಲಿಲ್ಲ ಇದು ಅವನ ಅಂಬೋಣ.
ಈ ಮಾತಿಗೆ ಆಗಲೇ ಅಲ್ಲಿಯ ಬೋರ್ಡು ಪ್ರತಿಕ್ರಿಯಿಸಿದೆ.ಅದು ಅವನ ವ್ಯಕ್ತಿಗತ ಪ್ರತಿಕ್ರಿಯೆ ಎಂದು ತಿಪ್ಪೆ ಸಾರಿಸಿದೆ.ಇಲ್ಲಿಯ ಮುಸ್ಲಿಂ ಬೋರ್ಡು ಅದನ್ನು ಖಂಡಿಸಿದೆ. ಅದು ತಿಕ್ಕಲುತನ ಎಂದಿದೆ.
ಯಾವುದು ನಿಜವಾದ ದೇಶಪ್ರೇಮ ?
ವಿಶ್ವ ಕಪ್ ಗೆದ್ದ ಭಾರತಕ್ಕೆ ಅಭಿನಂದನೆಗಳು. ಹಾಗೆಯೇ ಕೊನೆಯವರೆಗೂ ಅತ್ಯಂತ ಸ್ಪರ್ಧಾತ್ಮಕ ಕ್ರಿಕೆಟ್ ಆಡಿದ ಶ್ರೀಲಂಕೆಗೂ ಶುಭಾಶಯಗಳು. ಮೊನ್ನೆ ಮೊನ್ನೆಯ ಪಾಕಿಸ್ತಾನದ ಎದುರಿನ ಸೆಮಿ ಫೈನಲ್ ಬಗ್ಗೆ ಮಾಧ್ಯಮಗಳಲ್ಲಿ ಇದ್ದ ಕ್ರೇಜ್, ಇದೊಂದು ಯುದ್ಧ ಅನ್ನುವ ಮನಸ್ಥಿತಿ ಫೈನಲ್ ಪಂದ್ಯದಲ್ಲಿ ಅಷ್ಟಾಗಿ ಕಾಣಲಿಲ್ಲ. ಸೆಮಿ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದರೆ ಸಾಕು, ಫೈನಲ್ ಗೆಲ್ಲದಿದ್ದರೂ ಆದೀತು ಅನ್ನುವ ಅನಿಸಿಕೆಗಳನ್ನು ಅಲ್ಲಲ್ಲಿ ಕಂಡೆ. ಹಾಗೆಯೇ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತಕ್ಕೆ ಈ ಕಪ್ಪು ಬೇಕೇ ಬೇಕು ಅನ್ನುವ ತರಹದ ಚರ್ಚೆಗಳನ್ನು ಅಲ್ಲಲ್ಲಿ ಕಂಡೆ. ಕೊನೆಯಲ್ಲಿ, ಕಪ್ ಗೆದ್ದ ತಂಡಕ್ಕೆ ಹೆಚ್ಚಿನ ಸರ್ಕಾರಗಳು (ನಮ್ಮ ರಾಜ್ಯ ಸರ್ಕಾರವು ಸೇರಿದಂತೆ ) ಬಹುಮಾನದ ಸುರಿಮಳೆ ಗೈದು ತಮ್ಮ ಅಸಂಖ್ಯ ಪಾಪುಲಿಸ್ಟ್ ಕ್ರಮಗಳಿಗೆ ಇನ್ನೊಂದು ಸೇರ್ಪಡೆ ಮಾಡಿದ್ದನ್ನು ಕಂಡೆ. ಒಂದು ಆಟಕ್ಕೆ ಈ ಮಟ್ಟದ ಗಮನ, ಆದ್ಯತೆ ಕೊಡುವಷ್ಟರಲ್ಲಿ ಅದರ ಅರ್ಧದಷ್ಟು ಗಮನ ಈ ದೇಶದ, ಅದರ ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲೂ ಕೊಟ್ಟಿದ್ದಲ್ಲಿ ನಮ್ಮೆದುರು ಇರುವ ಸಮಸ್ಯೆಗಳಲ್ಲಿ ಕೆಲವಕ್ಕಾದರು ಪರಿಹಾರ ಸಿಕ್ಕಿರುತಿತ್ತೇನೋ ಅನ್ನಿಸಿತು.
ಸುದ್ದಿ ‘ಮೋಹ’ದ ಪತ್ರಿಕೆಗಳ ಬಗ್ಗೆ…..
ಅರೆಹೊಳೆ ಸದಾಶಿವರಾಯರು
ಕಟೀಲು ದೇವಳಕ್ಕೆ ಶಿಲ್ಪಾ ಶೆಟ್ಟಿ ಬಂದರು!. ಇದು ನಮ್ಮ ಪತ್ರಿಕೆಗಳ ಮಟ್ಟಿಗೆ ಬಹು ಮುಖ್ಯ ಸುದ್ದಿಯಾಯಿತು! ಆಶ್ಚರ್ಯವೆಂದರೆ, ನಮ್ಮ ಪತ್ರಿಕೆಗಳು ಇದನ್ನು ಮುಖ ಪುಟದಲ್ಲಿ ಪ್ರಕಟಿಸಿ ಕೃತಾರ್ಥವಾದುವು. ಆಕೆ ತನ್ನದೇ ಹುಟ್ಟೂರಿಗೆ ಬಂದದ್ದು, ತನ್ನ ಅಜ್ಜಿಮನೆಯಲ್ಲಿ ಓಡಾಡಿದ್ದು, ಕೋಳಿ ಸುಕ್ಕಾ ತಿಂದದ್ದು…..ಎಲ್ಲವು ಸುದ್ದಿಯಾಯಿತು. ಮತ್ತೂ ಒಂದು ವಿಶೇಷ ಸುದ್ದಿ ಎಂದರೆ ಕಟೀಲು ಕ್ಷೇತ್ರವೇ ಈಕೆಯ ಭೇಟಿಯಿಂದ ಪವಿತ್ರವಾಯಿತೇನೋ ಎಂಬಷ್ಟೂ ಸುದ್ದಿಯನ್ನು ಆಕೆ ವಿಮಾನದಲ್ಲಿ ಬಂದಿಳಿದಿದ್ದರಿಂದ, ಮರಳಿ ವಿಮಾನವೇರುವ ತನಕ ಬರೆಯಲಾಯಿತು. ಎಲ್ಲಾ ಪತ್ರಿಕೆಗಳ ಒಬ್ಬೊಬ್ಬ ಪತ್ರಕರ್ತನೂ ಅಷ್ಟು ಹೊತ್ತಿನ ಮಟ್ಟಿಗೆ ಆಕೆಯ ಸಂಸಾರದ ಹಿಂದಿದ್ದ.!
ಈ ಕ್ಷಣದಲ್ಲಿ ನನಗೊಂದು ವಿಷಯ ನೆನಪಿಗೆ ಬರುತ್ತದೆ. ಇತ್ತೀಚೆಗೆ ನಾವು ಒಂದು ಸಮ್ಮೇಳನವನ್ನು ಆಯೋಜಿಸಿದ್ದೆವು. ಅದರ ಉದ್ಘಾಟನಾ ಸಮಾರಂಭದ ವರದಿ ಸವಿಸ್ತಾರವಾಗಿ ಪ್ರಕಟವಾಯಿತು. ಉದ್ಘಾಟನೆ ಮುಗಿಯುತ್ತಲೇ, ಒಂದು ಮಗು ವಾಮಾಚಾರಕ್ಕೆ ಬಲಿಯಾದ ಘಟನೆ ಬಹಿರಂಗ ಗೊಂಡಿತು. ಅದೇ ಸಂಜೆ ನಮ್ಮ ಸಮ್ಮೇಳನದ ಸಮಾರೋಪವೂ ನಡೆಯುತ್ತಿತ್ತು. ಆದರೆ ಸಂಜೆ ಒಬ್ಬನೇ ಒಬ್ಬ ಪತ್ರಕರ್ತನೂ ಅಲ್ಲಿರಲಿಲ್ಲ. ಅಲ್ಲಿನ ಯಾವ ವರದಿಯೂ ದಾಖಲಾಗಲಿಲ್ಲ. ಸಮ್ಮೇಳನದಲ್ಲಿಯೇ ತಲ್ಲೀನರಾಗಿದ್ದ ನಮಗೆ ಇದೇಕೆ ಎಂದು ಆಶ್ಚರ್ಯವಾಯಿತು. ನಂತರ, ನಮಗೆ ಆ ವಾಮಾಚಾರದ ಘಟನೆಯಿಂದ ಸಂಭ್ರಮದ ಘಟನೆಯನ್ನೂ ಮರೆಯುವಷ್ಟು ಘಾಸಿಯಾಯಿತು-ಖೇದವಾಯಿತು. ಮತ್ತಷ್ಟು ಓದು
ನಮ್ಮ ನೆಲದಲ್ಲಿ ನಿಮ್ಮನ್ನು ಗೆಲಲು ನಾ ಬಿಡೆ!
– ಆಸು ಹೆಗ್ಡೆ
ನಿನ್ನೆಯ ಸುದ್ದಿ ರಾತ್ರಿ ಮೊಹಾಲಿಯಲ್ಲಿ
ಸುರಿಯುತ್ತಾ ಇತ್ತಂತೆ ತುಂತುರು ಮಳೆ
ಇಂದು ಅಲ್ಲಿ ಕಂಡು ಬರಲಿ ಬರಿ ನಮ್ಮ
ದಾಂಡಿಗರ ಓಟಗಳ ಭರ್ಜರಿ ಸುರಿಮಳೆ
ಭಾರತ-ಪಾಕ್ ಮಧ್ಯೆ ನಡೆಯುವುದು ಕೇವಲ ಪಂದ್ಯವಲ್ಲ!
– ರಾಕೇಶ್ ಶೆಟ್ಟಿ
ಅದನ್ನ ಕೇವಲ ಕ್ರಿಕೆಟ್ ಪಂದ್ಯ ಅಂತ ಹೇಳಲು ಸಾಧ್ಯವಾ? ನಾಳೆ ಬುಧವಾರ ಮಧ್ಯಾನ್ಹ ೨.೩೦ರ ನಂತರ ಬಹುತೇಕ ರಸ್ತೆಗಳು ಬಿಕೋ ಎನ್ನಲು ಶುರುವಾಗುತ್ತವೆ! ಎಂ.ಎನ್.ಸಿಗಳು ಸಹ ಉದ್ಯೊಗಿಗಳಿಗೆ ನಾಳೆ ವಿನಾಯಿತಿ ಕೊಡಲಿವೆ.(ಕೊಡದಿದ್ರೆ ಮಾಡೋ ಕೆಲ್ಸದಲ್ಲಿ ಯಡವಟ್ಟು ಮಾಡಿಬಿಡ್ತಾರೇನೋ ಅನ್ನೋ ಭಯಕ್ಕಾಗಿ 😉 ).ಜನ ಟೀವಿ ಮುಂದೆ ಕೂತ್ರೆ ಮುಗಿತು ಭಾರತ-ಪಾಕ್ ಕ್ರಿಕೆಟ್ ಸಮರದ ಫ಼ಲಿತಾಂಶ ಬರುವವರೆಗೂ ಅಲ್ಲಾಡಲಿಕ್ಕಿಲ್ಲ.
ಭಾರತ-ಪಾಕ್ ನಡುವೆ ನಡೆಯುವ ವಿಶ್ವಕಪ್ ಪಂದ್ಯ ಅಂದರೆ ಅದು ಸಮರವೇ ಸರಿ! ವಿಶ್ವಕಪ್ನಲ್ಲಿ ಭಾರತ-ಪಾಕ್ ಇದುವರೆಗು ೯೨,೯೬,೯೯ ಮತ್ತು ೨೦೦೩ ರಲ್ಲಿ ೪ ಬಾರಿ ಮುಖಾಮುಖಿಯಾಗಿವೆ.ಮತ್ತು ೪ ಬಾರಿಯು ಭಾರತ ಪಾಕಿಗಳಿಗೆ ಬಡಿದಿದೆ.ಅದರಲ್ಲೂ ವಿಶೇಷವಾಗಿ ಸಚಿನ್ನದ್ದು ಪಾಕ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಆರ್ಭಟ ತುಸು ಹೆಚ್ಚು! ಅದರಲ್ಲೂ ೨೦೦೩ರಲ್ಲಿ ಸೌತ್ ಆಫ಼್ರೀಕಾದ ಲ್ಲಿ ನಡೆದ ಪಂದ್ಯದಲ್ಲಂತೂ, ’ಸಚಿನ್ನನ್ನ ಮೊದಲನೆ ಚೆಂಡಿನಲ್ಲೆ ಔಟ್ ಮಾಡಿ ಕಳಿಸುತ್ತೇನೆ’ ಅಂತ ಪಂದ್ಯದ ಮೊದಲೆ ಕಿರುಚಿದ್ದ ಶೋಯೆಬ್ ಅಖ್ತರ್ನನ್ನ ಅಟ್ಟಾಡಿಸಿ ಬಡಿದಿದ್ದ! ಬಹುಷಃ ಆ ಅನುಭವದಿಂದಾಗಿಯೋ ಏನೋ,ಈ ಭಾರಿ ಅಖ್ತರ್ ಬಾಯಿ ಬಿಟ್ಟಿಲ್ಲ. ಆದರೆ ಅಫ಼್ರಿದಿ ಮಾತ್ರ ಸಚಿನ್ ನೂರನೇ ಶತಕ ಬಾರಿಸಲು ಇನ್ನಷ್ಟು ಸಮಯ ಕಾಯಬೇಕು ಅಂದಿದ್ದಾನೆ.ಯಥಾ ಪ್ರಕಾರ ಬ್ಯಾಟಿನಲ್ಲೆ ಉತ್ತರ ಕೊಡೊ ಅಭ್ಯಾಸವಿರೋ ನಮ್ಮ ಲಿಟಲ್ ಮಾಸ್ಟರ್ ಪ್ರತಿಕ್ರಿಯಿಸಿಲ್ಲ!
ಉತ್ಸಾಹದ ಚಿಲುಮೆಗಳ ನಡುವೆ ಕ್ಯಾಂಪಸ್ ಕಪ್ಗಾಗಿ ಕಾದಾಟ
ವಿಶ್ವದೆಲ್ಲೆಡೆ ವಿಶ್ವಕಪ್ ಜ್ವರದಲ್ಲಿದ್ದರೆ, ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲೂ ಕ್ರೀಡಾ ಜ್ವರ ಏರತೊಡಗಿದೆ. ಕಳೆದ ಆರು ದಿನಗಳಿಂದ ಮಂಗಳೂರು ವಿವಿಯ ಮಂಗಳಗಂಗೋತ್ರಿ ಕ್ಯಾಂಪಸ್ನಲ್ಲಿ ಅಂತರ್ವಿಭಾಗ ಮಟ್ಟದ ಈ ಕ್ರೀಡಾ ಕೂಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರದ ಉತ್ಸಾಹ. ಇಲ್ಲಿ ಒಂದಲ್ಲ ಎರಡಲ್ಲ ಹತ್ತು ಹನ್ನೆರಡಕ್ಕಿಂತ ಹೆಚ್ಚು ಆಟಗಳನ್ನು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿದೆ. ಕೆಲವು ಸಲ ಆಟಗಾರರ ಸಂಖ್ಯೆ ಕಡಿಮೆ ಇದ್ದಲ್ಲಿ ಹುಡುಗರು, ಹುಡುಗಿಯರು ಒಟ್ಟಿಗೆ ಒಂದು ತಂಡವಾಗಿ ಆಡುವುದುಂಟು. ವಿಶೇಷವೆಂದರೆ ನಮ್ಮ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರೇ ಜಾಸ್ತಿ. ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ಕ್ರೀಡಾಕೂಟ ಈಗಾಗಲೇ ಒಂದು ಸುತ್ತಿನ ಪಂದ್ಯಾಟಗಳು ಮುಗಿದಿವೆ. ಸೋತ ತಂಡಗಳು ತಮ್ಮ ದಿನನಿತ್ಯದ ಓದಿನ ಬಗ್ಗೆ ಗಮನವನ್ನರಿಸಿದರೆ, ಗೆದ್ದ ತಂಡಗಳು ಎರಡನೇ ಸುತ್ತಿನ ಸ್ಪರ್ಧೆಗೆ ಸಿದ್ಧತೆಯನ್ನು ನಡೆಸಿದೆ.
ಈ ಕ್ರೀಡಾಕೂಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲದೆ ಸಂಶೋಧನಾ ವಿದ್ಯಾರ್ಥಿಗಳೂ ಒಂದಾಗಿ ತಮ್ಮದೇ ಆದ ತಂಡವನ್ನು ಕಟ್ಟಿಕೊಂಡು ಈ ಕ್ರೀಡಾಕೂಟದಲ್ಲಿ ಭಾಗಿಯಾಗಿರೋದು ಒಂದು ವಿಶೇಷ. ಇಲ್ಲಿಯ ಕೆಲವು ವಿಭಾಗದ ವಿದ್ಯಾರ್ಥಿಗಳಿಗೆ ಈ ಗೇಮ್ಸ್ನ ಬಗ್ಗೆ ಇರೋ ಪ್ರೀತಿ ನೋಡಿದ್ರೇ ತುಂಬಾ ಸಂತೋಷವಾಗುತ್ತೆ. ಯಾಕಂದ್ರೇ ಇವರು ತಮ್ಮ ತಮ್ಮ ಕೈಯಿಂದಲೇ ಹಣವನ್ನು ಹಾಕೊಂಡು ಬಣ್ಣ ಬಣ್ಣದ ಕಲರ್ಸ್ನ್ನು ತರಿಸಿಕೊಂಡು, ಆಯಾ ದಿನದ ಗೇಮ್ಸಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಸಮಯಕ್ಕೆ ಮುಂಚೆಯೇ ಮೈದಾನದಲ್ಲಿ ಹಾಜರ್. ಈ ವಾತಾವರಣವನ್ನು, ಆಟವನ್ನು ನೋಡೋದಕ್ಕೆ ನೀವು ಈ ತಿಂಗಳಿನಲ್ಲಿ ಒಮ್ಮೆ ಮಂಗಳಗಂಗೋತ್ರಿಯ ಆಟದ ಮೈದಾನಕ್ಕೆ ಬನ್ನಿ. ಮತ್ತಷ್ಟು ಓದು