ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

5
ಆಗಸ್ಟ್

ರಾಮಜನ್ಮ ಭೂಮಿ ಚಳವಳಿ – ನನ್ನ ಬಾಲ್ಯದ ನೆನಪಿನಲ್ಲಿ

– ಅಜಿತ್ ಶೆಟ್ಟಿ ಹೆರಂಜೆ

ಚಿತ್ರ ಕೃಪೆ: ಕಲಾವಿದರದ್ದು. ಕೇರಳದ ಕಲಾವಿದರೊಬ್ಬರ ಕುಂಚದಲ್ಲಿ ಅರಳಿದ ಅಯೋಧ್ಯೆ ಭೂಮಿಪೂಜೆ

ಅಯೋದ್ಯೆಯ ರಾಮ ಜನ್ಮ ಭೂಮಿಯ ಹೋರಾಟ ನನ್ನ ವಯೋಮಾನದವರಿಗೆ ನಮ್ಮ ಕಣ್ಣ ಮುಂದೆಯೇ ನಿರ್ಮಾಣವಾದ ಇತಿಹಾಸ.ಮಹರ್ಷಿ ವಾಲ್ಮೀಕಿಯವರು ಬರೆದ ರಾಮಾಯಣ ಒಂದು ಕಡೆಯಾದರೆ ಇನ್ನೊಂದು ಕಡೆ ಆಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ಕಟ್ಟಲು ಭಾರತದ ಹಿಂದೂ ಸಮಾಜ ಮಾಡಿದ ಸುಮಾರು 500 ವರ್ಷಗಳ ಸುಧೀರ್ಘ ಹೋರಾಟ. ಈ ಹೋರಾಟದ ಇತಿಹಾಸ ಕೂಡ ವಾಲ್ಮೀಕಿಯವರು ರಾಮಾಯಣಕ್ಕಿಂತ ಭಿನ್ನವಾಗಿರಲಿಲ್ಲ. ತ್ರೇತಾ ಯುಗದಲ್ಲಿ ವನವಾಸ ಮುಗಿಸಿ, ರಾವಣ ಸಂಹಾರ ಮಾಡಿ ಅಯೋಧ್ಯೆಗೆ ಮರಳಿದ ಪ್ರಭು ಶ್ರೀರಾಮಚಂದ್ರನ ಪಟ್ಟಾಭಿಷೇಕವಾಗಿ ರಾಮ ರಾಜ್ಯದ ಸ್ಥಾಪನೆ ಆದದ್ದು ಒಂದು ಭಾಗವಾದರೆ,ಈ ಕಲಿಯುಗದಲ್ಲಿ ಅಯೋಧ್ಯೆಯಲ್ಲಿ ಇದ್ದ ಪ್ರಭು ಶ್ರೀರಾಮಚಂದ್ರನ ಮಂದಿರವನ್ನು ಬಾಬರನ ಸೈನ್ಯ ಕೆಡವಿ ಮಸೀದಿ ಮಾಡಿದ್ದಲ್ಲಿನಿಂದ, ಆ ಮಸೀದಿಯನ್ನ ಕೆಡವಿ ಅಲ್ಲಿ ಪುನಃ ಒಂದು ಭವ್ಯ ಮಂದಿರ ನಿರ್ಮಾಣ ಮಾಡಲು ಆಯಾ ಕಾಲದ ಆಡಳಿತ ವ್ಯವಸ್ಥೆ ವಿರುದ್ಧ ಸುಧೀರ್ಘ ಹೊರಾಟ ಮಾಡಿ ಇಂದು ನೆರವೇರುತ್ತಿರುವ ಶಿಲಾನ್ಯಾಸದವರೆಗಿನ ಅಧ್ಯಾಯ ಇನ್ನೊಂದು ಭಾಗ. ಅಲ್ಲಿ ರಾವಣನ ಸಂಹಾರ ಆಯಿತು, ಇಲ್ಲಿ ಕಾಂಗ್ರೆಸ್ ಪಕ್ಷ ಎಂಬ ಸೆಕ್ಯುಲರ್ ಮಾರೀಚನ ಅಧಃಪತನ ಆಯಿತು. ಈ ಘಟನೆಗಳ ಸರಪಳಿಯಲ್ಲಿ ನನ್ನ ಊರಾದ ಹೆರಂಜೆ ಮತ್ತು ಸುತ್ತಮುತ್ತಲಿನ ಇನ್ನೂ ಐವತ್ತನಾಲಕ್ಕು ಗ್ರಾಮಗಳ ಒಂದು ಅಳಿಲು ಸೇವೆಯ ಕೊಂಡಿ ಕೂಡ ಇತ್ತು.

ಇದು ನನ್ನ ಸೌಭಾಗ್ಯವೇ ಹೌದು, ನನ್ನ ಬಾಲ್ಯದ ತೀರಾ ಮೊದಲಿನ ನೆನಪುಗಳಲ್ಲಿ ನನ್ನ ಮನಸ್ಸಿನಲ್ಲಿ ಇನ್ನು ಅಚ್ಚೊತ್ತಿದಂತೆ ಉಳಿದಿರುವುದು “ರಾಮ ಶಿಲಾ ರಥ ಯಾತ್ರ.” ಇದು ನಡೆದದ್ದು 1990-91 ರ ಸಮುಯದಲ್ಲಿ. ಆಗ ನನಗೆ ಸುಮಾರು 8-9 ರ ವಯಸ್ಸು. ಅದು ‌ಸುಮಾರು ರಾತ್ರಿ‌ ಎಂಟು‌ ಗಂಟೆಯ ಸಮಯ.ದೂರದ ಬಯಲಿನ ಅಂಚಿನಲ್ಲಿ ‌ಒಂದು ಗುಂಪು‌ ಪೆಟ್ರೊ ಮ್ಯಾಕ್ಸ್ ಲೈಟ್, ತೆಂಗಿನ ಗರಿಯ ಬೆಂಕಿ‌ಸೂಡಿ ಹಿಡಿದು ಜೋರಾಗಿ ರಾಮ ಭಜನೆ ಮಾಡುತ್ತಾ ತಾಳ ತಟ್ಟುತ್ತ ನಮ್ಮ‌ ಮನೆಯತ್ತ ಬರವುದನ್ನ‌ ಕಂಡೊಡನೆ, ಓಡಿ ಹೋಗಿ ಅಜ್ಜಿಗೆ ಹೇಳಿದೆ. ಅಜ್ಜಿ ಕೂಡಲೇ ಹೊರ ಬಂದು ಅಂಗಳಕ್ಕೆಲ್ಲಾ ನೀರು ಹಾಕಿ ಶೇಡಿ‌ ಮಣ್ಣಿನಲ್ಲಿ‌‌ ರಂಗೋಲಿ ‌ಬಿಡಿಸಿ, ತುಳಸಿಗೆ ದೀಪ ಹಚ್ಚಿ, ಮನೆಯ ಒಳಗಿದ್ದ ಒಂದು ತಾಮ್ರದ ಬಿಂದಿಗೆ, ಒಂದು ಚೆಂಬು,ಒಂದು ಬಟ್ಟಲು ಗಟ್ಟಿ ಬೆಲ್ಲ ತಗೆದು ಬಾವಿಕಟ್ಟಯಲ್ಲಿ‌ ಇಟ್ಟು ಅವರು ಬರುವುದನ್ನೆ ಎದುರು‌ ನೋಡುತ್ತಿದ್ದರು.ನನಗೆ ಆಶ್ಚರ್ಯ ಇದೇನಿದು ಇವರು ಮಾರಿಗೆ, ಕಂಬಳಕ್ಕೆ ಊರೂರು ತಿರುಗಿ ಡೋಲು ಹೊಡೆಯುವವರಲ್ಲ, ಜೊತಗೆ ಭಜನೆ ಬೇರೆ ಕೇಳಿಸುತ್ತಿದೆ, ಅಜ್ಜಿ ನೋಡಿದರೆ ಇಷ್ಟೆಲ್ಲಾ ವ್ಯವಸ್ಥೆ ಮಾಡಿ ಕಾದು ಕುಳಿತಿದ್ದಾರೆ. ಅವರು ನಮ್ಮ ಅಂಗಳಕ್ಕೆ ಬರುವ ತನಕ. ನನಗೆ ಕಾಯದೆ ಬೇರೆ ಉಪಾಯ ಇರಲಿಲ್ಲ.

ಮತ್ತಷ್ಟು ಓದು »

3
ಆಗಸ್ಟ್

ಸ್ವ ರಕ್ಷಣೆಯಿಂದ ರಾಷ್ಟ್ರರಕ್ಷಣೆ: ರಕ್ಷಾಬಂಧನ ಸಂದೇಶ

– ರಾಜೇಶ್ ನರಿಂಗಾನ
ಶ್ರಾವಣ ಹುಣ್ಣಿಮೆ ಮತ್ತೆ ಬಂದಿದೆ. ಶ್ರಾವಣ ಹುಣ್ಣಿಮೆಯಂದು ಆಚರಿಸುವ ರಕ್ಷಾಬಂಧನ ಹಬ್ಬಕ್ಕೆ ಅದರದೇ ಆದ ಪೌರಾಣಿಕ, ಐತಿಹಾಸಿಕ ಹಿನ್ನೆಲೆಯಿದೆ. ಓರ್ವ ಜವಾಬ್ದಾರಿಯುತ ಸಹೋದರ ತನ್ನ ಸಹೋದರಿಯನ್ನು ರಕ್ಷಣೆ ಮಾಡಬೇಕು ಎನ್ನುವ ಆಶಯದಿಂದ ಹಿಡಿದು ಸ್ವಯಂಸೇವಕರು ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ರಾಷ್ಟ್ರ ರಕ್ಷಣೆಗೈಯುವ ಸಂಕಲ್ಪದ ಉದಾತ್ತ ಧ್ಯೇಯ ಆಶಯದವರೆಗೆ ರಕ್ಷಾಬಂಧನವನ್ನು ವಿವಿಧ ರೀತಿಯಲ್ಲಿ ವಿಶ್ವದಾದ್ಯಂತ ಆಚರಿಸುತ್ತೇವೆ. ಇಂತಿಪ್ಪ ರಕ್ಷಾಬಂಧನ ಮತ್ತೆ ಬಂದಿದೆ. ಕಟ್ಟಲು ಬಗೆಬಗೆಯ ರಕ್ಷೆಗಳು ಮಾರುಕಟ್ಟೆಗೆ ಮಿತವಾಗಿ ಬಂದಿದೆ.
ಸಹೋದರ ಸಹೋದರಿಯರ ನಡುವೆ ನಂಬಿಕೆ, ಭರವಸೆಯನ್ನು ಉದ್ದೀಪನಗೊಳಿಸುವ, ಸಹೋದರನಿಗೆ ಸಹೋದರಿಯ ಮೇಲೆ ಇರುವ ಕಾಳಜಿ, ಸಹೋದರಿಗೆ ಸಹೋದರನ ಮೇಲೆ ಇರುವ ಅಕ್ಕರೆ, ನವಿರಾದ ಬಾಂಧವ್ಯವನ್ನು ಉಜ್ವಲಗೊಳಿಸುವ ಹಬ್ಬವೇ ರಕ್ಷಾಬಂಧನ. ಸಹೋದರನ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ, ನಿನ್ನ ಸುಖ-ದುಃಖಗಳಲ್ಲಿ ಸಮಾನ ಭಾಗಿಯಾಗುತ್ತೇನೆ; ನನ್ನ ಯೋಗಕ್ಷೇಮ, ರಕ್ಷಣೆಯ ಭಾರ ನಿನ್ನ ಹೆಗಲಿಗೆ ಎಂದು ದೇವರ ಮುಂದೆ ಪ್ರಾರ್ಥಿಸಿ ರಕ್ಷೆಯನ್ನು ಕಟ್ಟುವುದು ತಲೆತಲಾಂತರದಿಂದ ಬಂದಿರುವ ಪದ್ಧತಿ, ಸಂಪ್ರದಾಯ.

ಮತ್ತಷ್ಟು ಓದು »

3
ಜುಲೈ

ರಾಮಾಯಣ,ಮಹಾಭಾರತ,ಪುರಾಣಗಳ 64 ಸಂಪುಟಗಳು ಕನ್ನಡದಲ್ಲಿ ಅತ್ಯಂತ ಕಡಿಮೆ ಬೆಲೆಗೆ

– ವಿಶ್ವನಾಥ ಸುಂಕಸಾಲ

ಮೂಲ ಶ್ಲೋಕಗಳೊಂದಿಗೆ ಕನ್ನಡದಲ್ಲಿ ರಾಮಾಯಣ, ಮಹಾಭಾರತದ ಗ್ರಂಥಗಳು ಸಿಗುತ್ತವೆಯೇ ಎಂಬ ಪ್ರಶ್ನೆ ಹಲವರದು. ಕನ್ನಡದಲ್ಲಿ ಸಮಗ್ರವಾಗಿ ಇಂಥ ಗ್ರಂಥಗಳು ದೊರೆಯುವುದು ವಿರಳವೇ. ಒಂದೆರಡು ಪ್ರಕಾಶನಗಳು ಮಾತ್ರ ಇಂದಿಗೂ ರಾಮಾಯಣ, ಮಹಾಭಾರತ, ಪುರಾಣಗಳನ್ನು ಜನರಿಗೆ ದೊರಕುವಂತೆ ಮಾಡುತ್ತಿವೆ. ಅವುಗಳಲ್ಲಿ ಭಾರತ ದರ್ಶನ ಪ್ರಕಾಶನವೂ ಒಂದು.

ಅತ್ಯಂತ ಕಡಿಮೆ ಬೆಲೆಗೆ ಕನ್ನಡದ ಜನತೆಗೆ ಭಾರತೀಯ ಸಂಸ್ಕೃತಿಯ ಮೂಲವಾದ ಈ ಗ್ರಂಥಗಳನ್ನು ತಲುಪಿಸಲೆಂದೇ ಹುಟ್ಟಿದ ಸಂಸ್ಥೆ ‘ಭಾರತ ದರ್ಶನ ಪ್ರಕಾಶನ’.

ಮುದ್ರಣದ ವ್ಯಯಕ್ಕಿಂತ ಕಡಿಮೆ ಬೆಲೆಗೆ ಪುಸ್ತಕವನ್ನು ಒದಗಿಸುತ್ತಿರುವ ಭಾರತ ದರ್ಶನ ಪ್ರಕಾಶನಕ್ಕೆ ಓದುಗರು, ದಾನಿಗಳೇ ಬೆನ್ನೆಲುಬು. ರಾಮಾಯಣ, ಮಹಾಭಾರತಗಳ ಕಥೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಅನೇಕ ಪುಸ್ತಕಗಳು ಸಿಗಬಹುದು. ಆದರೆ ಮೂಲ ವಾಲ್ಮೀಕಿ ಹಾಗೂ ವ್ಯಾಸರಿಂದ ಲಿಖಿತವಾದ ಪ್ರತಿ ಶ್ಲೋಕವನ್ನೂ ಸಂಪುಟದ ಒಂದು ಕಡೆ ಕೊಟ್ಟು, ಮತ್ತೊಂದು ಭಾಗದಲ್ಲಿ ಸಂಪೂರ್ಣ ಅರ್ಥವನ್ನು ವಿಸ್ತೃತವಾಗಿಯೂ, ನಿರ್ದುಷ್ಟವಾಗಿಯೂ, ಸರಳ ಕನ್ನಡದಲ್ಲಿ ವಿವರಿಸಿರುವ ಗ್ರಂಥಮಾಲೆ ತೀರಾ ವಿರಳ.

ಭಾರತ ದರ್ಶನ ಪ್ರಕಾಶನದ ಒಂದೊಂದು ಸಂಪುಟವೂ 620-650 ಪೇಜುಗಳಿಂದ ಕೂಡಿವೆ. ಪ್ರತಿ ಸಂಪುಟದ ಮುದ್ರಣಕ್ಕೂ ಸರಾಸರಿ 120-150 ರೂಪಾಯಿಗಿಂತ ಹೆಚ್ಚು ವ್ಯಯವಾಗುತ್ತದಂತೆ. ಆದರೆ, ರಾಮಾಯಣ, ಮಹಾಭಾರತಗಳ ಪ್ರಚಾರಕ್ಕಾಗಿಯೇ ಹುಟ್ಟಿಕೊಂಡ ಈ ಸಂಸ್ಥೆಯು ದಾನಿಗಳ ಸಹಕಾರದಿಂದ ಮುದ್ರಣ ವ್ಯಯಕ್ಕಿಂತಲೂ ಕಡಿಮೆ ದರಕ್ಕೆ ಅಂದರೆ ಸರಾಸರಿ ಬರೀ ನೂರು ರೂಪಾಯಿಗೆ ಕೊಡುತ್ತಿದೆ.

ಮತ್ತಷ್ಟು ಓದು »

23
ಏಪ್ರಿಲ್

ಎಲ್ಲದಕ್ಕೂ ಹಿಂದೂಗಳನ್ನು ದೂಷಿಸುವ ಮುನ್ನ …

– ಬೇಲಾಡಿ ದೀಪಕ್ ಶೆಟ್ಟಿ 

So called ವಿಚಾರವಾದಿಗಳೇ, ಲಿಬರಲ್ಗಳೇ ದ್ವೇಷ ಮಾಡಬೇಡಿ, ಫೋಭೀಯಾ ಬೆಳೆಸಬೇಡಿ ಅನ್ನುವವರೇ,

ಅರ್ಥ ಮಾಡ್ಕೊಳ್ಳಿ.ನಮ್ಮ ಸಿಟ್ಟು ಇರೋದು ಯಾವುದೇ ಧರ್ಮದ ಮೇಲಲ್ಲ. ಹಾಗಂತ ದ್ವೇಷನೂ ಸಾಧಿಸುತ್ತಿಲ್ಲ, ಫೋಭೀಯಾನೂ ಹುಟ್ಟು ಹಾಕುತ್ತಿಲ್ಲ.

ಅಲ್ಪಸಂಖ್ಯಾತಧರ್ಮದ ಹೆಸರಿನಲ್ಲಿ ಜಾತ್ಯಾತೀತತೆಯ ಸೋಗಿನಲ್ಲಿ, ಬಹುಸಂಖ್ಯಾತರ ಭಾವನೆಗಳಿಗೆ ರಾಷ್ಟ್ರ ಮತ್ತು ಜೀವನ ಪದ್ದತಿಯ ವಿಚಾರಗಳಲ್ಲಿ ನಮ್ಮ ಭಾವನೆಗಳಿಗೆ ಘಾಸಿ ಆದ್ರೂ ಸುಮ್ಮನೆ ಎಷ್ಟು ದಿನ ಅಂತ ತಾಳ್ಮೆಯಿಂದ ಇರೋದು. ಒಂದಲ್ಲ ಒಂದು ದಿನ ಆಕ್ರೋಶದ ಕಟ್ಟೆ ಒಡೆಯಲೇಬೇಕಲ್ಲವೇ.

ಅದೂ ಹೋಗ್ಲಿ, ಆರೈಕೆ ಕೇಂದ್ರದಲ್ಲಿ ಮಲ ವಿಸರ್ಜನೆ, ನರ್ಸ್ಗಳ ಎದುರು ಬಟ್ಟೆ ಬಿಚ್ಚೋದು, ನೋಟಿಗೆ ಬಾಯಲ್ಲಿ ಉಗುಳು ಹಚ್ಚೋದು. ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ, ಮೊನ್ನೆ ಮೊನ್ನೆ ಪೋಲಿಸರ ಮೇಲೆ ಹಲ್ಲೆ , ಇಡೀ ದೇಶ ಪಕ್ಷಾತೀತವಾಗಿ ಸ್ವಲ್ಪ ವಿಚಾರದಲ್ಲಿ ವ್ಯತ್ಯಾಸ ವಿದ್ದರೂ ಸಾಮೂಹಿಕವಾಗಿ ಹೋರಾಡುವಾಗ,ಇವರ ಈ ಕಿರಿಕ್ಕು. ಎಲ್ಲರಂತೆ ಇರಲು ಏನು ಪ್ರಾಬ್ಲಂ. ಇದೇ ರೀತಿ ಅರಬ್ ದೇಶಗಳಲ್ಲಿ ಮಾಡಿದ್ರೆ ಏನು ಮಾಡ್ತಿದ್ದರು. ಇಲ್ಲಿ ಏನು ಮಾಡಿದ್ರು ನಡೀತಿದೆ ಅನ್ನೋ ಮನೋಭಾವನೆ. ಸರ್ವೇ ಜನೋ ಸುಖಿನೋ ಭವಂತು, ವಸುದೈವ ಕುಟುಂಬಕಂ ಅಂದವರಿಗೆ ಈ ಗತಿ.

ಮತ್ತಷ್ಟು ಓದು »

19
ಏಪ್ರಿಲ್

ಯುಎಇ ನಿಜಕ್ಕೂ ಅಷ್ಟೊಂದು ಅಸಹಿಷ್ಣು ದೇಶವೇ?

– ರಾಘವೇಂದ್ರ ಎಮ್‌ ಸುಬ್ರಹ್ಮಣ್ಯ

Arab_Gulf_States_englishಕಳೆದೆರಡು ವಾರದಿಂದ ಗಲ್ಫ್ ದೇಶಗಳಲ್ಲಿರುವ ಹಿಂದೂಗಳ ಕೆಲಸಕ್ಕೆ ಕುತ್ತು ತರುವ ವ್ಯವಸ್ಥಿತ ಸಂಚುಗಳು ನಡೆದಿವೆ. ದೆಹಲಿಯ ತಬ್ಲೀಗೀ ಜಮಾತ್’ನವರ ವರ್ತನೆಯನ್ನು ಖಂಡಿಸಿ ಏನನ್ನಾದರೂ ಬರೆದರೆ ಅದೇ ದೊಡ್ಡ ತಪ್ಪು ಎಂಬಂತೆ ಬಿಂಬಿಸಿ, ಪೋಲಿಸರಿಗೆ ದೂರು ನೀಡುವ ಕೆಲಸ ನಡೆದಿದೆ. ಹಾಗಾದರೆ ಯುಎಇಯಲ್ಲಿ ಅಷ್ಟೆಲ್ಲಾ ಸುಲಭಕ್ಕೆ ಯಾರನ್ನಾದರೂ ಅರೆಸ್ಟ್ ಮಾಡಿಸಬಹುದೇ? ಇಸ್ಲಾಂ ಬಗ್ಗೆ ಏನೂ ಕೆಟ್ಟದಾಗಿ ಬರೆಯದೇ, ಭಾರತದ ಕೆಲ ಮುಸ್ಲಿಮರ ತಪ್ಪುಗಳ ಬಗ್ಗೆ ಬರೆದರೆ ಅದು ಶಿಕ್ಷಾರ್ಹ ಅಪರಾಧವೇ?

ಹೆಚ್ಚಿನವರಿಗೆ ಅರಬ್ ರಾಷ್ಟ್ರಗಳೆಂದರೆ ಬಹಳಷ್ಟು ತಪ್ಪು ಅಭಿಪ್ರಾಯಗಳಿವೆ. ತಪ್ಪು ಮಾಡಿದರೆ ಸಾರ್ವಜನಿಕವಾಗಿ ಛಡಿಯೇಟು ಬೀಳುತ್ತದೆ, ಕೈ ಕಾಲು ತಲೆ ಕಡಿಯುತ್ತಾರೆ ಎಂಬೆಲ್ಲಾ ಅನಿಸಿಕೆಗಳಿವೆ. ಆದರೆ ಈ ಎಲ್ಲಾ ಹೆಚ್ಚಿನ ಅಭಿಪ್ರಾಯಗಳು ಬಂದಿರುವುದು ಸೌದಿ ಅರೇಬಿಯಾದಿಂದ. ಯಾಕೆಂದರೆ ಇವೆಲ್ಲಾ ಹೆಚ್ಚಾಗಿ ನಡೆಯುವುದು ಅಲ್ಲಿ ಮಾತ್ರ. ಆದರೆ ಎಲ್ಲಾ ಅರಬ್ ದೇಶಗಳೂ ಹೀಗಿಲ್ಲ. ಇಲ್ಲಿ ಇಸ್ಲಾಂ ನಿಂದನೆಯನ್ನು ಯಾರೂ ಸಹಿಸುವುದಿಲ್ಲವಾದರೂ, ಒಮಾನ್, ಬಹರೈನ್ ಮತ್ತು ಯುಎಇ ದೇಶಗಳು ಸಹಿಷ್ಣುತೆಯಲ್ಲಿ ಹೊಸ ಅಧ್ಯಾಯಗಳನ್ನೇ ಬರೆದಿವೆ. ಮತ್ತಷ್ಟು ಓದು »

1
ಮಾರ್ಚ್

ಭಾರತವನ್ನು ಅರಿಯಲು ಶ್ರೀ ಅರವಿಂದರೆನ್ನುವ ಕೀಲಿ ಕೈ

– ಡಾ. ರೋಹಿಣಾಕ್ಷ ಶಿರ್ಲಾಲು
ಕರ್ನಾಟಕ ಕೆಂದ್ರೀಯ ವಿಶ್ವವಿದ್ಯಾಲಯ, ಕಲಬುರ್ಗಿ

ಭಾರತೀಯರೆಲ್ಲಾ ಭಾರತವನ್ನು ಅರ್ಥಮಾಡಿಕೊಂಡಿದ್ದಾರೆಯೇ? ಹೀಗೊಂದು ಪ್ರಶ್ನೆ ಕೇಳಿದರೆ ಅಪ್ರಸ್ತುತವಾದೀತೆ? ಸೂಕ್ಷ್ಮವಾಗಿ  ಗಮನಿಸಿದರೆ ಈ ಪ್ರಶ್ನೆ ಸಕಾರಣವಾಗಿದೆ. ಹೌದಲ್ಲಾ ನಮಗೆ ಭಾರತವೆಷ್ಟು ಅರ್ಥವಾಗಿದೆ? ಅರ್ಥಮಾಡಿಕೊಳ್ಳಲು ಬಳಸಿದ ಆಕರಗಳೇನು? ಈ ಆಕರಗಳ ಅಧಿಕೃತತೆಯೇನು? ಅಥವಾ ನಮ್ಮ ಆಕರಗಳೇ ಪರಕೀಯವೇ? ಪರಕೀಯ ಎಂದಾದರೆ ನಿಜದ ಭಾರತವನ್ನು ತಿಳಿಯುವುದಾದರೂ ಹೇಗೆ? ಹೀಗೆ ಪ್ರಶ್ನೆಗಳ ಸರಮಾಲೆಯೇ ಹುಟ್ಟಿಕೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತದೊಳಗೇ ಇರುವ ಒಂದು ಸಣ್ಣ ಗುಂಪು ಇಲ್ಲಿನ ಭೌತಿಕ – ಲೌಖಿಕ ಅನುಕೂಲತೆಗಳೆಲ್ಲವನ್ನು ಪಡೆದುಕೊಂಡೂ ಬೇರೊಂದು ದೇಶಕ್ಕೆ ಜಯಕಾರವನ್ನು ಹಾಕುವ, ತನ್ನ ದೇಶವನ್ನೆ ಭಂಜಿಸುವ, ತುಂಡರಿಸುವ ಕಾರ್ಯೋದ್ದೇಶವನ್ನೇ ಬಹಿರಂಗವಾಗಿ ಸಾರುವ ಪ್ರವೃತ್ತಿಯನ್ನು ತೋರಿಸುತ್ತಿದೆ. ಹಾಗಾದರೆ ಈ ಬಗೆಯ ಪ್ರವೃತ್ತಿಗೆ ಮೂಲ ಕಾರಣವಾದರೂ ಏನು ಎಂದು ಯೋಚಿಸಿದರೆ ಈ ವಿಕೃತಿ ಮೆರೆವ ಮನಸುಗಳಿಗೆ ಭಾರತ ಅರ್ಥವಾಗಿಲ್ಲ ಎನ್ನುವುದು ಸ್ಪಷ್ಟ. ಅಥವಾ ಭಾರತವನ್ನು ಭಾರತೀಯ ಕಣ್ಣುಗಳಿಂದ ನೋಡುವ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎನ್ನಬೇಕು. ಹಾಗೆಂದು ಈ ದೇಶವನ್ನು ಅರ್ಥೈಸಿಕೊಳ್ಳಲು ಮಾಡಿದ ಪ್ರಯತ್ನಕ್ಕೂ ನೂರಾರು ವರ್ಷಗಳ ಇತಿಹಾಸವಿದೆ. ಅಂತಹ ಹಲವು ಪ್ರಯತ್ನಗಳ ಪರಿಣಾಮವಾಗಿಯೇ ಭಾರತ ಉಳಿದಿದೆ. ಇಂದಿನ ತಲೆಮಾರಿಗೆ ಭಾರತವನ್ನು ಅದರ ಮೂಲ ಸ್ವರೂಪದಲ್ಲೇ ಗ್ರಹಿಸಲು ಇರುವ ಜ್ಞಾನದ ಆಕರಗಳನ್ನು ಶೋಧಿಸಲು ಹೊರಟರೆ ಕಣ್ಮುಂದೆ ಕಾಣಿಸಿಕೊಳ್ಳುವ ಜ್ಞಾನನಿಧಿ ಸ್ವರೂಪದ ಶಿಖರಗಳಲ್ಲಿ ಶ್ರೀ ಅರಬಿಂದೋ ಅವರ ವಿಚಾರಧಾರೆಯೂ ಒಂದು.

ಒಂದು ಶತಮಾನದ ಹಿಂದೆ ಅಂದರೆ 1920ರಲ್ಲಿ ಪ್ರಕಟವಾದ ಶ್ರೀ ಅರಬಿಂದೋ ಅವರ ಒಂದು ಕಿರು ಗ್ರಂಥ ‘The Renaissance in India’ ಇಂದಿಗೂ ದೃಷ್ಟಿ ಕಳೆದುಕೊಂಡ ಭಾರತೀಯರಿಗೆ ಭಾರತವನ್ನು ಕಾಣಿಸುವ ಜ್ಞಾನದ ಕನ್ನಡಕದಂತಿದೆ. ಈ ಕೃತಿ ಮೂಲತಃ ನಾಲ್ಕು ಪ್ರಬಂಧಗಳ ಸಂಕಲನ. 1920ರಲ್ಲಿ ಪರಿಷ್ಕೃತಗೊಂಡು ಗ್ರಂಥ ರೂಪದಲ್ಲಿ ಪ್ರಕಟವಾಗುವ ಪೂರ್ವದಲ್ಲಿ 1918ರಲ್ಲಿ ‘ಆರ್ಯ’ ಮಾಸಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಮಿ. ಜೇಮ್ಸ್ ಕಝಿನ್ಸ್ ಎಂಬ ವಿದ್ವಾಂಸರು ಬರೆದ ಭಾರತದ ನವೋತ್ಥಾನ ಎನ್ನುವ ವಿಚಾರಪೂರ್ಣ ಗ್ರಂಥದ ಹಿನ್ನೆಲೆಯಲ್ಲಿ ಈ ಪ್ರಬಂಧ ಸರಣಿ ಹುಟ್ಟಿಕೊಂಡು, ಈ ಸರಣಿ ಬೆಳೆದು ಶ್ರೀ ಅರವಿಂದ ವಿಚಾರಧಾರೆಯು ತುಂಬಿ ಹರಿಯಿತು.

ಮತ್ತಷ್ಟು ಓದು »

25
ಫೆಬ್ರ

ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪಕನ್ನಡಅಧ್ಯಯನಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Sri Sripadaruಶ್ರೀಪಾದರಾಜರು (1404-1502) ಹರಿದಾಸ ಸಾಹಿತ್ಯದ ಪ್ರಮುಖ ಕೀರ್ತನಕಾರರಲ್ಲಿ ಒಬ್ಬರು. ಚನ್ನಪಟ್ಟಣ ಬಳಿಯ ಅಬ್ಬೂರಿನವರಾದ ಇವರನ್ನುಪುರಾಣೋಕ್ತ ಹರಿಭಕ್ತಧ್ರುವನ ಅವತಾರ ಎಂದು ಹೇಳಲಾಗುತ್ತದೆ. ವಿಜಯನಗರ ಅರಸರ ರಾಜಗುರುಗಳಾಗಿದ್ದ ಇವರು ಪುರಂದರ, ಕನಕರ ಗುರುಗಳಾಗಿದ್ದ ವ್ಯಾಸತೀರ್ಥರ ಗುರುಗಳೂ ಹೌದು. ಭ್ರಮರಗೀತ, ವೇಣುಗೀತ, ಗೋಪಿಗೀತ, ಮಧ್ವನಾಮ ಇವರ ಪ್ರಮುಖರಚನೆಗಳು. ರಂಗವಿಠಲ ಎಂಬ ಅಂಕಿತದಲ್ಲಿ ಇವರು ಕೀರ್ತನೆಗಳನ್ನೂ ರಚಿಸಿದ್ದಾರೆ. ‘ನೀ ಇಟ್ಟ ಹಂಗೆ ಇರುವೆನೋ ಹರಿಯೇ’;‘ಕಣ್‍ಗಳಿದ್ಯಾತಕೋ ಕಾವೇರಿರಂಗನ ನೋಡದಾ’;‘ಭೂಷಣಕೆ ಭೂಷಣ…’ ಮೊದಲಾದವು ಅವರ ಅತ್ಯಂತ ಜನಪ್ರಿಯ ಕೀರ್ತನೆಗಳಾಗಿ ಜನಮನದಲ್ಲಿ ನೆಲೆನಿಂತಿವೆ. ‘ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ’ ಎಂಬುದು ಅವರ ಅನೇಕಾನೇಕ ಕೀರ್ತನೆಗಳಲ್ಲೊಂದು. ಮತ್ತಷ್ಟು ಓದು »

12
ಫೆಬ್ರ

ಸದ್ದಿಲ್ಲದೇ ಸ್ತ್ರೀ ಶಿಕ್ಷಣಕ್ಕೆ ನಾಂದಿ ಹಾಡಿದ ಹರಿಕಾರ – ಶ್ರೀ ಶಿವಕುಮಾರ ಸ್ವಾಮೀಜಿ.

– ಡಾ.ಸುದರ್ಶನ ಗುರುರಾಜರಾವ್

9e1bce87-ff5c-42f8-9dee-335621550861ಸರಿ ಸುಮಾರು ನೂರಾಹನ್ನೊಂದು ವರ್ಷಗಳ ಕಾಲ ದೇಶಸೇವೆಯೇ ಈಶಸೇವೆ ಎಂದೆನ್ನುತ್ತಾ, ಜನತೆಯಲ್ಲಿಯೇ ಜನಾರ್ದನನನ್ನು ಕಂಡು ನಮ್ಮನ್ನಗಲಿದ ಯುಗಪುರುಷ, ನಡೆದಾಡುವ ದೇವರೆಂದೇ ಜನಮಾನಸಗಳಲ್ಲಿ ನೆಲೆಯಾಗಿದ್ದ ಶ್ರೀ ಶಿವಕುಮಾರಸ್ವಾಮಿಗಳು ನಮ್ಮನ್ನು ತೊರೆದು ನೈತಿಕವಾಗಿ ದಿನೇ ದಿನೇ ಅಧೋಗತಿಗಿಳಿಯುತ್ತಿರುವ ನಮ್ಮ ಸಮಾಜವನ್ನು ಆ ಮೂಲಕವಾಗಿ ಸಾತ್ವಿಕ ಸಮುದಾಯವನ್ನು ಅನಾಥರನ್ನಾಗಿ ಮಾಡಿ ಹೋದದ್ದು ದುಃಖಕರವಾದ ಸಂಗತಿಯೇ ಸರಿ. ಕಾಲನ ಕರೆಗೆ ಓಗೊಡದವರಾರು?

ಸ್ವಾಮೀಜಿಗಳ ಬಗ್ಗೆ ಅವರು ಹಗಲಿರುಳು ದುಡಿದು ಕಾಯಾ ವಾಚಾ ಮನಸಾ ದೀನರ ಕರೆಗೆ ಓಗೊಟ್ಟದ್ದು, ಏನೂ ಇದ್ದಿಲ್ಲದ ಒಂದು ಬಿಡಿ ಮಠವನ್ನು ಬೃಹತ್ ಸಂಸ್ಥೆಯನ್ನಾಗಿ ಬೆಳೆಸಿದ್ದು, ಆ ಮೂಲಕವಾಗಿ ಲಕ್ಷಾಂತರ ಜೀವಗಳ ಅಭಿವೃದ್ಧಿಗೆ ಕಾರಣರಾದದ್ದು , ಜಾತ್ಯಾತೀತರೆಂದು ಕೊಚ್ಚಿಕೊಳ್ಳುವ ಸರಕಾರಗಳ ಅನೀತಿಯ ಕಾಕದೃಷ್ಟಿಗೆ ಬಿದ್ದು ಕಷ್ಟ ಅನುಭವಿಸಿದರೂ ಒಂದೇ ಒಂದು ಮಾತನಾಡದೆ ಮಠದ ಮಕ್ಕಳಿಗೆ ಅನ್ನಪೋಷಣೆ ವಿದ್ಯಾದಾನಗಳನ್ನು ಅವಿರತವಾಗಿ ಮುಂದುವರಿಸಿದ್ದು ಎಲ್ಲವನ್ನು ಕೇಳಿ, ಓದಿ ತಿಳಿದಿದ್ದೇವೆ. ಇವೆಲ್ಲದರ ನಡುವೆ ತುಮಕೂರಿನ ಆಸುಪಾಸಿನಲ್ಲಿ ನಾನಾ ಕಾರಣಗಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಸಮಾನತೆಯ ಹರಿಕಾರ ಶ್ರೀ ಸ್ವಾಮೀಜಿಗಳು ಎಂಬುದು ಬಹುತೇಕರಿಗೆ ತಿಳಿದಿಲ್ಲದ ವಿಚಾರ.

ಸಿದ್ಧಗಂಗಾ ಮಠದ ಶಾಲೆಯ ಮೊತ್ತ ಮೊದಲ ವಿದ್ಯಾರ್ಥಿನಿಯಾದ ನನ್ನ ತಾಯಿಯ ಅನುಭವದ ಪರಿಚಯ ಈ ಲೇಖನದ ಉದ್ದೇಶ. ಇದನ್ನು ಹೇಳುವಾಗ, ಬರೆಯುವಾಗ ಭಕ್ತಿ, ಕೃತಜ್ಞತೆಗಳು ಎದೆತುಂಬಿ ನಿಂತಿವೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲವಷ್ಟೇ. ಮತ್ತಷ್ಟು ಓದು »

1
ಫೆಬ್ರ

ನಮೋ ಶಿವಕುಮಾರ ಸ್ವಾಮಿ: ಶರಣಂ ಗಚ್ಛಾಮಿ!

~ ತುರುವೇಕೆರೆ ಪ್ರಸಾದ್
ಗಾಂಧಿನಗರ
ತುರುವೇಕೆರೆ-572227

9e1bce87-ff5c-42f8-9dee-335621550861ಸಿದ್ಧಗಂಗೆಯ ಐಸಿರಿ, ತಾನಾಗಬಲ್ಲನಿಲ್ಲಿ ನರನು ನಾರಾಯಣನು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ಶ್ರೇಷ್ಠ ನರಹರಿ, ಸಿದ್ಧಗಂಗೆಯ ಸಾಧನೆಯ ಉತ್ತುಂಗದ ಗಿರಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಭೌತಿಕವಾಗಿ ನಮ್ಮನ್ನೆಲ್ಲಾ ಅಗಲಿ ಹೋಗಿದ್ದಾರೆ. ಸುಮಾರು 9 ದಶಕಗಳ ಕಾಲ ಅವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅನುಪಮವಾದದು, ಅನನ್ಯವಾದದು, ಮಾನವೀಯತೆಯ ಇತಿಹಾಸದಲ್ಲಿ ಎಂದೆಂದಿಗೂ ಅಜರಾಮರವಾಗಿ ‘ನಭೂತೋ ನಭವಿಷ್ಯತ್’ ಎನ್ನುವಂತೆ ದಾಖಲಾಗುವಂತಾದ್ದು. ಶಾಂತಿ ನೆಮ್ಮದಿ ಬಯಸಿದವನಿಗೆ ದಿವ್ಯ ದರ್ಶನ, ನರಳುತ್ತಾ ಬಂದವನಿಗೆ ಮಾನವೀಯ ಸೇವೆಯ ದಿಗ್ದರ್ಶನ, ಹಸಿದವನಿಗೆ ಅನ್ನ, ಅನಾಥನಿಗೆ ಪ್ರೀತಿಯ ಸಿಂಚನ, ಅರಿವಿನ ಜೋಳಿಗೆ ಹಿಡಿದು ಬಂದವನಿಗೆ ಜ್ಞಾನ- ಸಿದ್ಧಗಂಗಾ ಸ್ವಾಮೀಜಿಯ ಬಹುಮುಖಿ ದಾಸೋಹದ ವೈಖರಿಯೇ ಅನನ್ಯ! ಮತ್ತಷ್ಟು ಓದು »

27
ಜನ

ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ಭಾರತರತ್ನ?

ರಾಕೇಶ್ ಶೆಟ್ಟಿ

“ಮೂರು ಬಿಟ್ಟೋರು ಊರಿಗೇ ದೊಡ್ಡೋರು” ಅನ್ನೋ. ಗಾದೆ ಮಾತು ಯಾರಿಗಾದರೂ ಸೂಕ್ತವಾಗಿ ಅನ್ವಯವಾಗುವುದಿದ್ದರೆ ಅದು ಕಾಂಗ್ರೆಸ್ ಪಕ್ಷ ಹಾಗೂ ಅದನ್ನು ಬೆಂಬಲಿಸುವ ಗಂಜಿಗಿರಾಕಿಗಳಿಗೆ. ಕಾರಣವೇನು ಗೊತ್ತೇ, ತನ್ನ ಪಕ್ಷದ ಇತಿಹಾಸದಲ್ಲಿ ಮಾಡಲಾಗಿರುವ ಅನ್ಯಾಯಗಳ ಪಟ್ಟಿ ಅಕ್ಷಯಪಾತ್ರೆಯಂತದ್ದು ಎನ್ನುವುದು ಗೊತ್ತಿದ್ದರೂ ಬೇರೆ ಪಕ್ಷಗಳನ್ನು ಟೀಕಿಸಲು ಹೊರಟಾಗ ಕಾಂಗೈ ನಾಯಕರು ನಾಚಿಕೆ ಬಿಟ್ಟು ನಿಲ್ಲುತ್ತಾರೆ. ಇದಕ್ಕೆ ಇತ್ತೀಚಿನ ಉದಾಹರಣೆ, ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವ ವಿವಾದ.

ಇವತ್ತಿಗೆ ಸಿದ್ದರಾಮಯ್ಯನವರಿಂದ ಹಿಡಿದು ಕಾಂಗಿ ಮರಿಪುಢಾರಿಗಳೆಲ್ಲ ಬಿಜೆಪಿಯನ್ನು ಈ ಬಗ್ಗೆ ಪ್ರಶ್ನಿಸುತ್ತಿವೆ.ಆದರೆ,ಹಾಗೆ ಪ್ರಶ್ನಿಸುವ ಭರದಲ್ಲಿ ದೇಶದ ಉನ್ನತ-ಅತ್ಯುನ್ನತ ಪ್ರಶಸ್ತಿಗಳ ಮಾನವನ್ನು ಮೂರು ಬಿಟ್ಟವರ ಪಕ್ಷ ಹೇಗೆ ಕಳೆದಿದೆ ಎನ್ನುವುದನ್ನು ಇವರು ಮರೆತಿರುವಂತಿದೆ.

ಮತ್ತಷ್ಟು ಓದು »