ಶಬರಿಮಲೆ: ಇದು ಹಿಂದೂಗಳ ಸೋಲೇ ?
– ವರುಣ್ ಕುಮಾರ್
ಪುತ್ತೂರು
ಕಳೆದ ಕೆಲ ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಎಂದರೆ ಅದು ಶಬರಿಮಲೆಗೆ ಮಹಿಳಾ ಪ್ರವೇಶದ ಕುರಿತಾಗಿ ಬಂದಂತಹ ತೀರ್ಪು. ಈ ಕುರಿತಾಗಿ ಚರ್ಚೆಗಳು, ವಾದ- ವಿವಾದಗಳು,ಸಂಭಾಷಣೆಗಳು ಈಗ ಅತಿ ಸಾಮಾನ್ಯ. ಆದರೆ ಶಬರಿಮಲೆಯು ಇಂತಹ ಚರ್ಚೆಗಳಿಗೆ ಗುರಿಯಾಗುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಇದರ ಕುರಿತಾದ ಒಂದು ಸಣ್ಣ ಅವಲೋಕನೆಯು ಈ ಕೆಳಗಿನಂತಿದೆ. ಮತ್ತಷ್ಟು ಓದು
ಪ್ರಗತಿಪರರ ಈ ವಿತಂಡ ಹೋರಾಟ ಹಿಂದೂಗಳ ಆಚರಣೆಗಳ ಮೇಲೆಯೇ ಏಕೆ..?
– ನಮೋ ಹಿಂದುಸ್ಥಾನಿ
ಓದಿದ್ದೇವೆ ಎನ್ನುವ ಹಮ್ಮುಬಿಮ್ಮಿನ ಮೂಲಕ, ಕೈಯ್ಯಲೊಂದಿಷ್ಟು ಅವಾರ್ಡಗಳು, ಕುತ್ತಿಗೆಮೇಲೆ ಒಂದಿಷ್ಟು ಬೋರ್ಡ್ ಗಳು, ಹೀಗೆ ಹಲಾವಾರು ರೀತಿಯಲ್ಲಿ ಕಾಣಿಸಿಕೊಳ್ಳುವ ಈ ಪ್ರಗತಿಪರರು ಲಗ್ಗೆ ಇಡುವುದೇ ಪುರಾತನ ಹಿಂದೂ ಆಚರಣೆಗಳು ಮೇಲೆ.
ಮೊದಲೆಲ್ಲ ಟೀಕಿಸುತ್ತಿದ್ದವರು, ಇಂದು ಬರಬರುತ್ತ ಇವರ ಅಟಾಟೋಪಗಳು ಹಿಂದೂ ಸಂಪ್ರದಾಯದ ಮೇಲೆ ಬಿದ್ದಿದೆ. ಕಾಲ ಬದಲಾಗುತ್ತಿದೆ ಎಲ್ಲರು ವಿದ್ಯಾವಂತರಾದೆವೆಂದು ಪಾಶ್ಚಾತ್ಯ ಶೈಲಿಯ ವಿದೇಶಿಗರ ಉಡುಗೆ ತೊಡುಗೆಗೆ ಮಾರುಹೋಗಿ ಹಿಂದುತ್ವವನ್ನೇ ಬಿಟ್ಟು ಬಿಡುವ ಕೊನೆ ಪರಿಸ್ಥಿತಿಯ ಕಡೆ ಪಯಣವೇ ಇವರ ಈ ಹಿಂದೂ ವಿರೋಧಿ ರೀತಿ-ನೀತಿ ರುಜುವಾತುಗಳು. ಮತ್ತಷ್ಟು ಓದು
ಸಮಾನತೆಯ ಪ್ರಶ್ನೆ, ಸಾಮರಸ್ಯದ ಸಂಕೇತ ಶಬರಿಮಲೆ
– ಸ್ನೇಹಾ ಸಾಗರ
ಕೆಲ ದಿನಗಳ ಪ್ರಶ್ನೆಯಲ್ಲ, ಹಲವು ವರ್ಷಗಳ ಪ್ರಶ್ನೆ. ‘ಶಬರಿಮಲೆಗೆ ಹೆಣ್ಣಿಗೇಕೆ ಪ್ರವೇಶವಿಲ್ಲ’ ಎನ್ನುವುದು. ಹೆಣ್ಣೆೆಂದೆರೆ ಅಪವಿತ್ರತೆ ಎನ್ನುವುದೋ, ಪಂದಳದ ರಾಜ ಹೆಣ್ಣಿನ ವಿರೋಧಿ ಎನ್ನುವುದೋ ಅಥವಾ 48 ದಿನಗಳ ಕಠಿಣ ವೃತ ಮತ್ತು ದೊಡ್ಡ ಪಾದ, ಸಣ್ಣ ಪಾದಗಳನ್ನು ಹತ್ತಿ ದೇವರ ದರ್ಶನ ಪಡೆಯುವುದು ಹೆಣ್ಣಿನ ಶಕ್ತಿಗೆ ಆಗದ್ದು ಎನ್ನುವುದೋ. ಒಟ್ಟಿನಲ್ಲಿ ಶಬರಿಮಲೆ ಅಂದಿಗೂ – ಇಂದಿಗೂ ಪ್ರಶ್ನೆೆಯೇ, ವಿವಾದವೇ. ಆದರೆ ಅದು ಯಾರಿಗೆ ಎನ್ನುವುದು ದೊಡ್ಡ ಪ್ರಶ್ನೆೆ. ಭಾರತವೆಂದರೆ ಪರಂಪರೆ, ಭಾರತವೆಂದರೆ ಸಂಸ್ಕೃತಿ – ಸಂಪ್ರದಾಯ ಎನ್ನುವರಿಗೆ ಹಾಗೂ ದೇವರೊಡನೆ ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆೆ ನಂಬಿಕೆಗಳನ್ನು ಉಳಿಸಿಕೊಂಡು ಬಂದವರಿಗೆ ಖಂಡಿತ ಶಬರಿಮಲೆಯ ಈ ಕಟ್ಟುಪಾಡು ಸಮಸ್ಯೆೆಯೇ ಅಲ್ಲ. ಮತ್ತಷ್ಟು ಓದು
ಓ ‘ಸಂಬಂಧ’ಗಳೇ ನೀವ್ಯಾಕೆ ಇಷ್ಟು ‘ಬಿಜಿ’!
– ಸುವರ್ಣ ಹೀರೆಮಠ
ಆ ಕಾಲವೇ ಹಾಗಿತ್ತು. ಮುಖಾಮುಖಿ ಮಾತು, ಸಂಬಂಧಗಳಿಗೆ ಬೆಲೆ ಇತ್ತು. ಜತೆಯಾಗಿ ಊಟ, ಆಟ, ಪಾಠ ನಮ್ಮದಾಗುತ್ತಿತ್ತು. ಆದರೆ ಈಗ ಕಾಲ ಆಗಿಲ್ಲ. ವೈಯಕ್ತಿಕ ಹಿತಾಸಕ್ತಿ ಸಾಧನೆ, ಕೆಲಸದ ಒತ್ತಡ ಎಲ್ಲವನ್ನು ನುಂಗುತ್ತಿದೆ. ಸಂಬಂಧವೆಂಬುದು ದೂರದ ಬೆಟ್ಟವಾಗುತ್ತಿದೆ. ಹತ್ತಿರ ಹೋಗಿ ನೋಡಿದಾಗ, ಅದು ಕೈಗೆ ಸಿಗದ ವಸ್ತು ಎಂಬುದು ತಿಳಿಯುತ್ತದೆ. ನಾವೆಲ್ಲ ಯಾಕೆ ಹೀಗೆ ಆಗುತ್ತಿದ್ದೇವೆ ? ದೊಡ್ಡ ಗ್ರಾತ್ರದ ಕಟ್ಟಡ ಕಟ್ಟಬೇಕು. ರೋಬೊ ಕಂಡುಹಿಡಿಯಬೇಕು ನಿಜ. ಆದರೆ ನಾವೇ ರೋಬೊ ಆಗಬಾರದು. ನಿಂತ ಕಟ್ಟಡವೂ ಆಗಬಾರದು. ಮತ್ತಷ್ಟು ಓದು
ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಏನು ಸಂಬಂಧ ಎಂದು ಕೇಳುತ್ತಿರಾ?? ಖಂಡಿತಾ ಸಂಬಂಧ ಇದೆ..!!
– ಅಜಿತ್ ಶೆಟ್ಟಿ ಹೆರಾಂಜೆ
ಹೌದು ಉಡುಪಿಯ ಮಟ್ಟಿಗೆ ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಖಂಡಿತಾ ಸಂಬಂಧ ಇದೆ. ದುರಂತ ಅಂದ್ರೆ ಈ ಸಂಬಂಧದ ಬಗ್ಗೆ ನಮಗೆ ಯಾರೂ ಎಂದೂ ಹೆಳಿದವರೇ ಇಲ್ಲ. ಶಾಲಾ ಕಾಲೇಜುಗಳಲ್ಲಿ ನಮ್ಮ ಯಾವುದೇ ಶಿಕ್ಷಕರು ಈ ಸಂಬಂಧದ ಬಗ್ಗೆ ಪಾಠ ಮಾಡಲಿಲ್ಲ. ನಮಗೆ ಗಾಂಧಿ ಗೊತ್ತಿತ್ತು, ನಮಗೆ ಬುದ್ದ ಗೊತ್ತಿತ್ತು, ನಮಗೆ ಅಕ್ಬರ್ ಗೊತ್ತಿತ್ತು, ನಮಗೆ ಮುಸೊಲಿನಿ, ಹಿಟ್ಲರ್ ಚಗುವೇರ ಗೊತ್ತಿತ್ತು. ಆದ್ರೆ ನಮ್ಮೂರಿನ ಮಹಾತ್ಮರ ಬಗ್ಗೆ ಗೊತ್ತೇ ಇಲ್ಲ. ಅವರು ನಮ್ಮ ಸಮಾಜವನ್ನು ಕಟ್ಟಲು ತಮ್ಮ ಇಡಿ ಜೀವಮಾನದ ಗಳಿಕೆಯನ್ನೆಲ್ಲವೂ ಸಮಾಜದ ಉದ್ದಾರಕ್ಕಾಗಿ ನೀರಿನಂತೆ ಹರಿಸಿ, ತಮ್ಮ ಇಡಿ ಜೀವನವನ್ನು ಸಮಾಜಕ್ಕಾಗಿ ತೇದಿ ಸವೆದು ಸದ್ದಿಲ್ಲದೆ ಮರೆಯಾದವರು. ಅವರಿಗೆ ಯಾವುದೇ ಪ್ರಚಾರದ ಹಂಗಿರಲಿಲ್ಲ, ಅವರಿಗೆ ತಮ್ಮ ಸಮಾಜದ ಬಗೆಗಿನ ತಾವು ನಿಭಾಯಿಸಬೇಕಿದ್ದ ಕರ್ತವ್ಯಗಳ ಅರಿವಿತ್ತು, ಸಮಸ್ಯೆಗಳು ಬಂದಾಗ ಅದನ್ನ ಸರ್ಕಾರ ಅಥವಾ ಇನ್ಯಾರೋ ಪರಿಹರಿಸಲಿ ಎಂದು ಯಾವತ್ತೂ ಕಾದವರಲ್ಲ. ಅವರು ಸ್ವತಃ ತಾವೇ ಅಂತಹಾ ಸಮಸ್ಯೆಗಳಿಗೆ ಎದೆಯೊಡ್ಡಿ ನಿಂತು ಪರಿಹರಿಸಿದವರು. ಆಗ ಅವರ ಕಣ್ಣಲ್ಲಿ ಜಾತಿ, ಮತ ,ಪಂತ, ಪಂಗಡ, ಇವ ನಮ್ಮವ ಇವ ಬೇರೆಯವನು ಎಂಬುವ ಯಾವುದೆ ಬೇಧ ಭಾವ ಇರಲಿಲ್ಲ. ಅವ್ರಲ್ಲಿ ಇದ್ದದ್ದು ಸಮಾಜದಲ್ಲಿ ತಾನು ಮಾಡಬೇಕಾಗಿದ್ದ ಕೆಲಸಗಳ ಬಗ್ಗೆ ಇದ್ದ ತುಡಿತ ಮಾತ್ರ. ಅಂತಹ ಅದೆಷ್ಟೋ ಗಣ್ಯರು ಕಾಲದ ಪುಟಗಳಲ್ಲಿ ಮರೆಯಾಗಿ ಹೋದರು. ಅವರನ್ನ ಅವರ ಸಾಧನೆಗಳನ್ನ ಮುಂದಿನ ತಲೆಮಾರಿಗೆ ಪರಿಚಯಿಸುವ ಹೊಣೆ ಹೊತ್ತ ಸರ್ಕಾರಗಳು ಇಂತವರ ಪರಿಚಯನ್ನು ಯಾವತ್ತೂ ಮುಂದಿನ ಪೀಳಿಗೆಗೆ ಮಾಡಲೇ ಇಲ್ಲ. ಅದಿರಲಿ ಸಮಾಜವೂ ಅಂತವರನ್ನ ಮರೆತಿತು. ಇಂತಹಾ ಅನೇಕ ಮರೆತುಹೋದ ಮಹಾನುಭಾವರಲ್ಲಿ ಉಡುಪಿಯ ಖಾನ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಮ್ ಸಾಹೇಬ್ ಬಹದ್ದೂರ್ ಕೂಡ ಒಬ್ಬರು. ಚಿಕ್ಕದಾಗಿ ಹೇಳೋದಾದರೆ ಹಾಜಿ ಅಬ್ದುಲ್ಲಾ ಸಾಹೇಬರು . ಹಾಜಿ ಅಬ್ದುಲ್ಲಾ ಸಾಹೆಬರು !! ? ಯಾರೀತ?? ಮತ್ತಷ್ಟು ಓದು
ಸಂಘಟನೆಯನ್ನು ನಿಷೇಧಿಸಬಹುದು.ಆದರೆ ಮನಸ್ಥಿತಿಯನ್ನು ಏನು ಮಾಡುವುದು?
– ರಾಕೇಶ್ ಶೆಟ್ಟಿ
ಸಂಘಟನೆಯನ್ನು ನಿಷೇಧಿಸಬಹುದು.ಆದರೆ,ಮನಸ್ಥಿತಿಯನ್ನು ಏನು ಮಾಡುವುದು? ಇಂತಹದ್ದೊಂದು ಪ್ರಶ್ನೆಯನ್ನು ಫೇಸ್ಬುಕ್ಕಿನಲ್ಲಿ ಗೆಳೆಯ ಸಂದೀಪ್ ಕೇಳಿದ್ದರು.ಅವರ ಪ್ರಶ್ನೆಯಿದ್ದಿದ್ದು Ban PFI ಎಂಬ ಹೋರಾಟದ ಕುರಿತು. ವಾಜಪೇಯಿಯವರ ಕಾಲದಲ್ಲಿ ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ಆಮೇಲೇನಾಯ್ತು? ರಕ್ತಬೀಜಾಸುರರಂತೆ ನಾನಾ ಹೆಸರು,ಸಂಘಟನೆಗಳನ್ನು ಮಾಡಿಕೊಂಡು ಇಸ್ಲಾಮೀಕರಣದ ತಮ್ಮ ಅಜೇಂಡಾವನ್ನು ಇವರು ಒಂದಲ್ಲ ಒಂದು ರೀತಿಯಲ್ಲಿ ಮುಂದುವರೆಸಿಕೊಂಡು ಬಂದರು.ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಹಿಡಿದು ಇತ್ತೀಚಿನ ದಿನಗಳವರೆಗೂ ದೇಶದಲ್ಲಿ ನಡೆದ ಬಾಂಬ್ ಸ್ಪೋಟದ ಆರೋಪಿಗಳು ಒಂದೋ ನಿಷೇಧಿತ ಸಿಮಿಯ ಕಾರ್ಯಕರ್ತರಾಗಿದ್ದವರು ಅಥವಾ ಹೊಸತೊಂದು ಸಂಘಟನೆಯ ಬ್ಯಾನರಿನಡಿಯಲ್ಲಿ ಸಿಮಿಯ ಕಾರ್ಯವನ್ನೇ ಮುಂದುವರೆಸಿದ್ದವರು.ಅಂದರೆ ಒಂದು ವಿಷಯ ಸ್ಪಷ್ಟವಾಗಿದೆ. ಸಂಘಟನೆ ನಿಷೇಧವಾದರೂ, ಹೆಸರು ಬದಲಾದರೂ ಅವರ “ಉದ್ದೇಶ” ಬದಲಾಗಲಿಲ್. ಏಕೆ? ಈ ಪ್ರಶ್ನೆಗೆ ಉತ್ತರ ಡಾ.ಬಿ.ಆರ್ ಅಂಬೇಡ್ಕರ್ ಅವರ “Pakistan or Partition of India” ಪುಸ್ತಕದಲ್ಲಿ ಸಿಗುತ್ತದೆ. ಆ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಭಾರತದ ವಿಭಜನೆ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಲ್ಲ,ಅವೆರಡರ ಜೊತೆಗೆ ಮುಖ್ಯವಾಗಿ,ಇಸ್ಲಾಮ್ ಹಾಗೂ ಭಾರತೀಯ ಮುಸ್ಲಿಂರ ಮನಸ್ಥಿತಿಯ ಬಗ್ಗೆಯೂ ವಿವರವಾಗಿ ಬರೆದಿದ್ದಾರೆ.
ಇಂತಹ ಸಂಘಟನೆಗಳ ಬಹುಮುಖ್ಯ ಉದ್ದೇಶ,ಒಂದು ದೇಶವನ್ನು ದಾರ್-ಉಲ್-ಅರ್ಬ್ ನಿಂದ ದಾರ್-ಉಲ್-ಇಸ್ಲಾಮ್ ಮಾಡುವುದೇ ಆಗಿರುತ್ತದೆ. ಏನಿದು ದಾರ್-ಉಲ್-ಅರ್ಬ್/ದಾರ್-ಉಲ್-ಇಸ್ಲಾಮ್? ಅಂಬೇಡ್ಕರ್ ಅವರ ಮಾತನ್ನೇ ಕೋಟ್ ಮಾಡುತ್ತೇನೆ. “… According to Muslim Canon Law the world is divided into two camps, Dar-ul-lslam (abode of Islam), and Dar-ul-Harb (abode of war). A country is Dar-ul-lslam when it is ruled by Muslims. A country is Dar-ul-Harb when Muslims only reside in it but are not rulers of it. That being the Canon Law of the Muslims, India cannot be the common motherland of the Hindus and the Musalmans. It can be the land of the Musalmans—but it cannot be the land of the ‘Hindus and the Musalmans living as equals…” ಅಂದರೆ, ಯಾವ ದೇಶವು ಸಂಪೂರ್ಣವಾಗಿ ಇಸ್ಲಾಮ್ ಅನ್ನು ಒಪ್ಪಿಕೊಂಡು ಮುಸ್ಲಿಮರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಇಸ್ಲಾಮ್ ಎಂದು ಕರೆಸಿಕೊಳ್ಳುತ್ತದೆ. ಯಾವ ದೇಶವು ಮುಸ್ಲಿಮೇತರರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಅರ್ಬ್ ಆಗಿರುತ್ತದೆ.
ಬುದ್ಧಿಜೀವಿಗಳು ಹಾಗೂ ಪೌರಾಣಿಕ ವ್ಯಕ್ತಿಗಳು
– ವಿನಾಯಕ ವಿಶ್ವನಾಥ ಹಂಪಿಹೊಳಿ
ಈ ಲೇಖನವು ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾಗತವಾಗಿ ಹರಿದು ಬಂದಿರುವ ಪೌರಾಣಿಕ ಕಥೆಗಳಲ್ಲಿ ಕಂಡು ಬರುವ ವ್ಯಕ್ತಿಗಳ ಕುರಿತು ನಮ್ಮ ದೇಶದ ಬುದ್ಧಿಜೀವಿಗಳು ಯಾವ ಅಭಿಪ್ರಾಯವನ್ನು ಹೊಂದಿದ್ದಾರೆ ಎನ್ನುವದನ್ನು ಸಮಂಜಸವಾಗಿ ವಿವರಿಸುವ ಒಂದು ಚಿಕ್ಕ ಪ್ರಯತ್ನವಾಗಿದೆ. ಬೇರೆ ಬೇರೆ ಪೌರಾಣಿಕ ವ್ಯಕ್ತಿಗಳ ಕುರಿತು ಬುದ್ಧಿಜೀವಿಗಳು ಏಕೆ ಬೇರೆ ಬೇರೆ ನಿಲುವುಗಳನ್ನು ತಾಳುತ್ತಾರೆ ಹಾಗೂ ಒಂದೇ ಪೌರಾಣಿಕ ವ್ಯಕ್ತಿಯ ಕುರಿತು ಮೇಲ್ನೋಟಕ್ಕೆ ಪರಸ್ಪರ ವಿರೋಧಾಭಾಸದಂತೆ ಕಾಣುವ ಹೇಳಿಕೆಗಳನ್ನು ಏಕೆ ಕೊಡುತ್ತಾರೆ ಎನ್ನುವದನ್ನು ಇಲ್ಲಿ ವಿವರಿಸಲು ಯತ್ನಿಸಲಾಗಿದೆ. ಮತ್ತಷ್ಟು ಓದು
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು
ಉತ್ತರ ಸಿಗದ ನನ್ನ ಪ್ರಶ್ನೆಗಳು
– ವಿದ್ಯಾ ಕುಲಕರ್ಣಿ
ಜಿಜ್ಞಾಸು, ಪ್ರಬುದ್ಧರ ಚಿಂತನೆ, ಕುಲುಮೆ, ನಿಲುಮೆ ಈ ಗುಂಪುಗಳಲ್ಲಿ ನಾನು ಕೆಲವು ಪ್ರಶ್ನೆಗಳನ್ನು ಕೇಳುತ್ತಲೇ ಬಂದಿದ್ದೇನೆ. ಅವುಗಳಿಗೆ ಯಾರೂ ಸಮರ್ಪಕ ಉತ್ತರ ಕೊಡದೇ ಪುನಃ ಬೇರೆ ಬೇರೆ ಪ್ರಶ್ನೆ ಕೇಳುತ್ತಲೇ ಹೋಗುತ್ತಾರೆ.
ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದರೆ “ಉತ್ತರಿಸಿದ್ದೇನೆ. ನಿಮಗೆ ತಿಳಿಯದಿದ್ದರೆ ಏನು ಮಾಡಲಿ??” “ನಿಮಗೆ ಗ್ರಹಿಸುವ ಶಕ್ತಿ ಇಲ್ಲ ಏನು ಮಾಡಲಿ?” ಇತ್ಯಾದಿ ಹಾರಿಕೆಯ ಉತ್ತರ ಕೊಡುತ್ತಾರೆ. ಹಾಗಿದ್ದರೆ ನನ್ನ ಪ್ರಶ್ನೆಗಳಾದರೂ ಏನು??
ಪುನಃ ಅದೇ ಪ್ರಶ್ನೆಗಳನ್ನು ಕ್ರೋಢೀಕರಿಸಿ ನಂಬರ್ ಕೊಟ್ಟು ಕೇಳುತ್ತಿದ್ದೇನೆ. ಈಗಲಾದರೂ ಉತ್ತರಿಸುವ (ನಂಬರ್ ಪ್ರಕಾರ ಉತ್ತರಿಸುವ) ಸೌಜನ್ಯ ಯಾರಾದರೂ ತೋರಿಸುತ್ತೀರಾ?? ಮತ್ತಷ್ಟು ಓದು
ಸದ್ಗುರು ಬ್ರಹ್ಮಾನಂದರ ೯೯ನೇ ವರ್ಷದ ಆರಾಧನಾ ಪುಣ್ಯಸ್ಮರಣೆ
– ಚೈತನ್ಯ ಮಜಲುಕೋಡಿ
ಸದ್ಗುರು ಬ್ರಹ್ಮಾನಂದರ ೯೯ನೇ ವರ್ಷದ ಆರಾಧನಾ ಪುಣ್ಯಸ್ಮರಣೆಯ ಪ್ರಯುಕ್ತ. ಸದ್ಗುರುವಿನ ಉಪದೇಶ ಆಶೀರ್ವಾದಗಳು ಸದಾ ನಮ್ಮಲ್ಲಿ ಜಾಗೃತವಾಗಿರಲೆಂದು ಆಶಿಸುತ್ತಾ.
ಕೆಲಕಾಲದ ಹಿಂದೆ ಶ್ರೀ ಲೋಕಾಭಿರಾಮ ಮಾಸಪತ್ರಿಕೆಗೆ ಬರೆದ ಸಣ್ಣ ಲೇಖನ.
ಶ್ರೀ ಬ್ರಹ್ಮಾನಂದ ಮಹಾರಾಜರು ಹೇಳಿದ ಮೋಕ್ಷ ಪ್ರಾಪ್ತಿಯ ಗುಟ್ಟು ಲೇಖನದ ನಂತರ ಕೊಟ್ಟಿದೆ.
ಮೋಕ್ಷಪ್ರಾಪ್ತಿಯ ಗುಟ್ಟು ಒಂದು ಜಿಜ್ಞಾಸೆ: ಮತ್ತಷ್ಟು ಓದು