ಹವ್ಯಾಸಿ ರಂಗಭೂಮಿ – ಇತ್ತೀಚಿನ ಬೆಳವಣಿಗೆಗಳು
-ಎಸ್.ಎನ್. ಸೇತುರಾಮ್
ಹವ್ಯಾಸಿ ರಂಗಭೂಮಿ…
ಈ ಪದವೇ ಚೆಂದ, ರಂಗಭೂಮಿಯನ್ನು ವೃತ್ತಿ ಅಂತ ಹೇಳಿಕೊಂಡ್ರೆ ಅಪ್ರಯೋಜಕ ಅನ್ನೊರು. ನಾಟಕ ಮಾಡಿಕೊಂಡು ಬದುಕ್ತಾನೆ ಅನ್ನೋರು. ಏನು ಮಾಡ್ತಿದ್ದಿ ಅನ್ನೋ ಪ್ರಶ್ನೇಗೆ ರಂಗಭೂಮೀಲಿ ಸಕ್ರೀಯವಾಗಿದ್ದೀನಿ ಅಂದ್ರೆ, ಅದು ಬಿಟ್ಟು ಹೊಟ್ಟೆಪಾಡಿಗೆ ಏನು ಮಾಡ್ಕೊಂಡಿದ್ದೀ ಅಂತ ಕೇಳೋರು. ನನ್ನ ಬದುಕಿನ ಕಾಲಘಟ್ಟದಲ್ಲಿ ಕಾರಣಗಳು ಏನೇ ಇರಲಿ, ರಂಗಭೂಮಿ ವೃತ್ತಿ ಅಂತಾದರೆ ಒಂದು ತರಹದ ಕೀಳರಿಮೆ. ಎಲ್ಲ ಕಾಲಘಟ್ಟಗಳಲ್ಲೂ ಎಲ್ಲ ಕಲಾಪ್ರಕಾರಗಳ ಹಾಗೇನೇ ರಂಗಭೂಮಿ ಕೂಡಾ. ಹೆಸರಾಗಿ ದೊಡ್ಡೋರಾದ ಮೇಲೆ ಹಾರ ತುರಾಯಿ, ಪೇಟ, ಬಿರುದುಬಾವಲಿ, ಬಿನ್ನವತ್ತಳೆ ಎಲ್ಲಾ. ಹೆಸರಾಗೋವರೆಗೂ ಇದೊಂದು ರಕ್ತಮಾಂಸವಷ್ಟೇ ಅಲ್ಲದ, ಮನಸ್ಸು ಹೃದಯ ಇರುವ ಜೀವ ಅನ್ನೋದೇ ಯಾರ ಗಮನಕ್ಕೂ ಬರುತ್ತಿರಲಿಲ್ಲ. ಗೆದ್ದಾಗ ಮಾನ, ಗೆಲ್ಲದಿದ್ದಾಗ ಬರಿ ಅವಮಾನವೇ. ನಾಟಕದವರು ಅಯೋಗ್ಯರು, ಅಪ್ರಯೋಜಕರು, ಅವರಿಗೆ ಹೆಣ್ಣು ಕೊಡೋ ಹಾಗಿಲ್ಲ. ಮನೆಗೆ ಕರೆಯೋ ಅವಶ್ಯಕತೆ ಇಲ್ಲ. ಗೌರವಕ್ಕೆ ಅವರೆಂದೂ ಪಾತ್ರರಲ್ಲ. ಇದು ಭಾವ. ಮತ್ತಷ್ಟು ಓದು
ಟೆಕ್ಕಿಗಳಿಂದ ಕನ್ನಡ ಹಾಸ್ಯ ನಾಟಕೋತ್ಸವ
ಪವನ್ ಪಾರುಪತ್ತೇದಾರ
ಪ್ರತಿದಿನ C++, Java,.net ಸರ್ವರ್ರುಗಳ ಮಧ್ಯೆ ಇರುವ ಸಾಫ್ಟ್ವೇರ್ ಇಂಜಿನಿಯರುಗಳ ತಂಡವೇ ರಂಗತಂತ್ರ. 2008ರಲ್ಲಿ ಸ್ಥಾಪಿತವಾದ ಈ ತಂಡ, ಹವ್ಯಾಸಿ ನಾಟಕಕಾರರನ್ನು ಹೊಂದಿದ್ದು, ಇಲ್ಲಿಯವರೆಗೂ 8 ಪ್ರದರ್ಶನಗಳನ್ನು ನೀಡಿದೆ. ಈ ಹವ್ಯಾಸಿ ಟೆಕ್ಕಿ ಕಲಾವಿದರು ತಮ್ಮ ಕಚೇರಿಯ ಬಿಡುವಿಲ್ಲದ ಸಮಯದ ಮಧ್ಯೆ, ತಮ್ಮ ವೀಕೆಂಡುಗಳನ್ನೆಲ್ಲ ಬದಿಗಿಟ್ಟು, ಬಹಳಷ್ಟು ಕಷ್ಟ ಪಟ್ಟು ಅಭ್ಯಾಸ ಮಾಡಿ, ಅಕ್ಟೋಬರ್ ತಿಂಗಳಲ್ಲಿ ನಿಮ್ಮ ಮುಂದೆ ಹಾಸ್ಯ ನಾಟಕೋತ್ಸವ ನಡೆಸಲು ಸಜ್ಜಾಗಿದ್ದಾರೆ.
ತಂಡದ ಮೇಷ್ಟ್ರು ಮಹದೇವ್ ಪ್ರಸಾದ್ ಯುವಪಡೆಯೊಂದನ್ನು ಸಜ್ಜು ಮಾಡಿಕೊಂಡಿದ್ದು, ನಾಟಕ ಪ್ರಿಯರಿಗೆ ನಗೆಯ ಹಬ್ಬದೂಟ ಬಡಿಸಲು ತಯಾರಿ ನಡೆಸುತಿದ್ದಾರೆ. ಲಾಕ್ ಔಟ್ ಅಲ್ಲ ನಾಕೌಟ್, ಶ್ರೀ ಕೃಷ್ಣ ಸಂಧಾನ ಮತ್ತು ಬಂಡ್ವಾಳವಿಲ್ಲದ ಬಡಾಯಿಯಂತಹ ಪ್ರಸಿದ್ಧ ಹಾಸ್ಯ ನಾಟಕಗಳನ್ನು ನಿಮ್ಮ ಮುಂದಿಡಲು ಕಾತುರದಿಂದ ಕಾಯುತಿದ್ದಾರೆ. ನಾಟಕ ಪ್ರಿಯರೆಲ್ಲ ಬಂದು ಸಾಫ್ಟ್ ವೇರ್ ಟೆಕ್ಕಿಗಳ ಪ್ರಯತ್ನವನ್ನು ಪ್ರೋತ್ಸಾಹಿಸಿ ಹರಸಬೇಕಾಗಿ ವಿನಂತಿ.
ನಾಟಕ ಪ್ರದರ್ಶನ ನಡೆಯುವ ದಿನಾಂಕಗಳು ಕೆಳಗಿನಂತಿವೆ.
ಅಕ್ಟೋಬರ್ 12 – ಶ್ರೀ ಕೃಷ್ಣ ಸಂಧಾನ
ಅಕ್ಟೋಬರ್ 13 – ಬಂಡ್ವಾಳವಿಲ್ಲದ ಬಡಾಯಿ
ಶ್ರೀ ಕೃಷ್ಣ ಸಂಧಾನ : ರಚನೆ : ವಿ ಎನ್ ಅಶ್ವಥ್
ವಿದ್ಯೆ ಇಲ್ಲದ ಹಳ್ಳಿ ಜನ ನಾಟಕ ಮಾಡಲು ಹೊರಟಾಗ ಎದುರಾಗುವ ಛಾಲೆಂಜುಗಳೇನು, ಅ ಹಳ್ಳಿ ಜನಕ್ಕೆ ನಾಟಕ ಹೇಳಿಕೊಡಲು ಬರುವ ಮೇಷ್ಟ್ರಿಗೆ ಅದರ ಅರಿವಿರೋದಿಲ್ಲ. ಬಂದು ಇವ್ರಿಗೆ ನಾಟಕ ಹೇಳಿಕೊಡಕ್ಕೆ ಶುರು ಮಾಡಿ ಗೆಜ್ಜೆಗ್ ಪೂಜೆ ಮಾಡ್ಸೋ ಅಷ್ಟ್ರಲ್ಲಿ ಮೇಷ್ಟ್ರು ಗೋಳು ಕೇಳಕ್ಕಾಗಲ್ಲ. ಅಂತಹ ಮೇಷ್ಟ್ರು ಮತ್ತೆ ಶಿಶ್ಯಂದಿರ ನಡುವೆ ನಡೆವ ನಗೆ ನಾಟಕ ಕೃಷ್ಣ ಸಂಧಾನ. ಈ ನಾಟಕ ಈಗಾಗ್ಲೆ ಕನ್ನಡದ ನಾಟಕ ಪ್ರಿಯರಿಗೆಲ್ಲ ಚಿರಪರಿಚಿತ. ಆದಕ್ಕೆ ಕಾರಣ ನಾಟಕದ ಪ್ರತಿಯೊಂದು ಸಾಲಿನಲ್ಲು ಇರುವ ನಗೆಮಿಠಾಯಿ ಅಂದ್ರೆ ತಪ್ಪಾಲ್ಲ ಬಿಡಿ. ನಾಟಕದ ಪ್ರತಿಯೊಂದು ಲೈನ್ ಸಹ ಪಂಚ್ ಲೈನ್. ನೀವೆಷ್ಟು ಬಾರಿ ನೋಡಿದರೂ ಬೇಜಾರಾಗದ ನಾಟಕ ಇದು. ಇಂತಹ ನಗೆಯ ರಸಾಯನ ಸಹ ರಂಗತಂತ್ರದ ಹಾಸ್ಯೋತ್ಸವದ ಕೊಡುಗೆ.