ವಿಷಯದ ವಿವರಗಳಿಗೆ ದಾಟಿರಿ

Posts from the ‘ಪರಿಸರ’ Category

17
ಆಕ್ಟೋ

ಎತ್ತಿನಹೊಳೆ ಯೋಜನೆ: ಬೇಕಿತ್ತಾ ಇದು?

– ಅರಕಲಗೂಡು ಜಯಕುಮಾರ್ Ethinahole
ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದರು, ಸಹಜವಾಗಿ ತಮ್ಮ ಬೆಂಬಲಿಗರ ಜಿಲ್ಲೆಗಳಿಗೆ ಮತ್ತು ಸ್ವಕ್ಷೇತ್ರಕ್ಕೆ ಹೆಚ್ಚಿನ ಅನುದಾನದ ಯೋಜನೆಗಳನ್ನು ಘೋಷಿಸಿ ಕೊಂಡರು ಬಜೆಟ್ “ರಾಜಕಾರಣ”ಕ್ಕೆ ತಾವೇನೂ ಹೊರತಲ್ಲ ಎಂಬುದನ್ನು ಸಾಬೀತು ಪಡಿಸಿದರು. ಇರಲಿ ಹಾಸನ ಜಿಲ್ಲೆಗೆ ಬಜೆಟ್ ನಲ್ಲಿ ಸಿಕ್ಕಿದ್ದು 3 ಯೋಜನೆಗಳು ಮಾತ್ರ, ಒಂದು ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹಾಸನ ಕೇಂದ್ರದಲ್ಲಿ ಟ್ರಕ್ ಟರ್ಮಿನಲ್, ಎರಡನೆಯದ್ದು ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅರಸೀಕೆರೆ-ತಿಪಟೂರು ಟೋಲ್ ರಸ್ತೆ, ಮೂರನೆಯದ್ದು ಎತ್ತಿನಹೊಳೆಯ ಯೋಜನೆಗೆ ಒಟ್ಟು ಯೋಜನಾ ವೆಚ್ಚದ ಶೇ.9ರ ಅನುದಾನ. ಈ ಹೊತ್ತಿನಲ್ಲಿ ಪ್ರಜ್ಞಾಪೂರ್ವಕವಾಗಿ fb update ಮೂಲಕ ಯೋಜನೆಯ ಕುರಿತು ಅಸಹನೆ ವ್ಯಕ್ತ ಪಡಿಸುವ ಮೂಲಕ ಗಮನ ಸೆಳೆದದ್ದು “ಜನ ನಾವೂ ಇದ್ದೇವೆ” ಸಂಘಟನೆಯ ಗೆಳೆಯ ಮಂಜುಬನವಾಸೆ. ಆದರೆ ಯೋಜನೆ ಕುರಿತು ಅಸಹನೆ ವ್ಯಕ್ತಪಡಿಸಬೇಕಿದ್ದ ಕೆಲವರು ಇದೇ ಸಂಧರ್ಭದಲ್ಲಿ ವ್ಯತಿರಿಕ್ತವಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು ಜಿಲ್ಲೆಯ ಮಟ್ಟಿಗೆ ಮುಜುಗುರದ ಸಂಗತಿ. ಇದೇನಿದು ಎತ್ತಿನ ಹೊಳೆ ಯೋಜನೆ? ಯಾಕೆ ಇದನ್ನು ಬೆಂಬಲಿಸಬೇಕು ? ಯಾವ ಕಾರಣಕ್ಕೆ ವಿರೋಧಿಸ ಬೇಕು? ಮತ್ತು ಅಲ್ಲಿನ ವಾಸ್ತವಗಳೇನು ಎಂಬುದನ್ನು ? ಕೆದಕುವ ಪ್ರಯತ್ನ ಮಾಡಿದಾಗ  ಮಾಹಿತಿಗೆ ನೆರವಾಗಿದ್ದು ಜಾಗೃತ ಪ್ರಜ್ಞೆಯ ಕವಯಿತ್ರಿ ರೂಪಹಾಸನ.ಎತ್ತಿನ ಹೊಳೆ ಯೋಜನೆಯ ಕುರಿತು ನನ್ನ ಗ್ರಹಿಕೆಗೆ ದಕ್ಕಿದ ಸಂಗತಿಗಳನ್ನು ನಿಮ್ಮೆದುರು ಹರಹುತ್ತಿದ್ದೇನೆ. ಇದು ನಮ್ಮ ಜಿಲ್ಲೆಗೆ ಎಷ್ಟು ಪೂರಕ ಮತ್ತು ಮಾರಕ ಹಾಗೂ ಒಟ್ಟು ಯೋಜನೆಯ ಪರಿಣಾಮಗಳೇನು? ಎಂಬುದನ್ನಷ್ಟೇ ಇಲ್ಲಿ ಚರ್ಚೆಗೆ ತರುತ್ತಿದ್ದೇನೆ, ಮುಂದಿನ ನಿಲುವುಗಳು ನಿಮಗೆ ಸೇರಿದ್ದು.
        ಹಾಸನ ಜಿಲ್ಲೆಯ ಸಕಲೇಶಪುರದ ದೋಣಿಗಾಲ್ ಬಳಿಯ ಪಶ್ಚಿಮಘಟ್ಟದ ಸರಹದ್ದಿನಲ್ಲಿ ಹಾದು ಹೋಗಿರುವ ರೈಲ್ವೇ ಟ್ರಾಕ್ ಪಕ್ಕದಲ್ಲೇ  ಎತ್ತಿನಹೊಳೆ ಎಂಬ ನದಿಯ ನೀರು 80ಅಡಿ ಎತ್ತರದಿಂದ ಧುಮ್ಮಿಕ್ಕುವ ನಯನ ಮನೋಹರ ದೃಶ್ಯವನ್ನು ನೋಡಬಹುದು.ಹೀಗೆ ಪಶ್ಚಿಮಘಟ್ಟದಲ್ಲಿ ಹರಿಯುವ ನೀರು ಮಳೆಗಾಲದಲ್ಲಿ ಹರಿದು ಹೋಗಿ ಅರೇಬಿಯನ್ ಸಮುದ್ರವನ್ನು ಸೇರುತ್ತದೆ. ಸಮುದ್ರ ಸೇರಿ ಪೋಲಾಗುತ್ತಿದೆ ಎಂದು ಭಾವಿಸಲಾಗುತ್ತಿರುವ ಈ ನೀರನ್ನು ನದಿ ತಿರುವು ಯೋಜನೆಯ ಮೂಲಕ ಕುಡಿಯುವ ನೀರು ಯೋಜನೆಗೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆಯನ್ನು ರೂಪಿಸಿದೆ. ಸುಮಾರು 9000ಕೋಟಿ ರೂಪಾಯಿಗಳ ಈ ಯೋಜನೆಯ ಮೂಲಕ ಬರದ ಜಿಲ್ಲೆಗಳಾದ ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ನಿರ್ಧರಿಸಲಾಗಿದೆ. ಪಕ್ಷ ಭೇಧ ಮರೆತು ರಾಜಕೀಯ ಹಿತಾಸಕ್ತಿಗಳು ಈ ಯೋಜನೆಯ ಜಾರಿಗೆ ಪಣ ತೊಟ್ಟಿವೆ. ಇದು ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಪರಿಸರ ಕಾಯ್ದೆ 2006ರ ಅನ್ವಯ ಸಾರ್ವಜನಿಕ ಅಹವಾಲು ಹಾಗೂ ಪರಿಸರ ಪರಿಣಾಮದ ಅಧ್ಯಯನವನ್ನು ರಾಜ್ಯ ಸರ್ಕಾರ ಮಾಡಬೇಕಿಲ್ಲ! ಆದ್ದರಿಂದ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯ ಇದಕ್ಕೆ ಅನುಮತಿ ನೀಡಿದೆ.
9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »

4
ಜುಲೈ

ಹನಿ ಹನಿ ಪ್ರೇಂ ಕಹಾನಿ

– ಮಧು ಚಂದ್ರ,  ಭದ್ರಾವತಿ 

alexander-mಮನೆಗೆ ಅತಿಥಿಗಳು ಯಾರಾದರು  ಬಂದಲ್ಲಿ ಮೊದಲು ನೀವೇನು ಮಾಡುತ್ತಿರಿ,  ಗೊತ್ತೇ?

ಅತಿಥಿಗಳಿಗೆ  ಕುಡಿಯಲು ನೀರು  ಕೊಟ್ಟು  ಉಪಚರಿಸುತ್ತಿರಿ. ಇದು ಅನಾದಿ ಕಾಲದಿಂದಲೂ ನಡೆದು  ಬಂದ ಭಾರತೀಯ ಸಂಸ್ಕೃತಿ.  ಈ ಸಂಸ್ಕೃತಿಯನ್ನು  ತಪ್ಪದೆ  ಪಾಲಿಸುವವರನ್ನು ನಾವು ಭಾರತೀಯನೆನ್ನಬಹುದು.ನೀರನ್ನು ಕೊಟ್ಟು ಉಪಚರಿಸುವುದು ಭಾರತೀಯತೆ, ನೀರು ಇಲ್ಲದಿದ್ದರೆ ಮತ್ತೇನು ಮಾಡುವಿರಿ ಎಂದು ಎಂದಾದರೂ ಯೋಚಿಸಿದ್ದಿರ?  ಬಹುಶ ಇರಲಿಕ್ಕಿಲ್ಲ. ಕಾರಣ ಇಷ್ಟೇ ನಮ್ಮಲ್ಲಿ ನೀರಿನ ಮೂಲ ಮತ್ತು ಅಂತರ್ಜಲಕ್ಕೆ ಕೊರತೆ ಇಲ್ಲ ಎನ್ನುವ ಹುಚ್ಚು ಪ್ರಮೇಯ ಇರಬಹುದು. ಈ ಹುಚ್ಚು ಪ್ರಮೇಯವೇ ಇಂದಿನ “ಹನಿ ಹನಿ ಪ್ರೇಂ ಕಹಾನಿ”  ಲೇಖನ. ಹಿಂದೆ ನಾನೊಂದು ಓದಿದದ  ಕಥೆಯನ್ನು ನಿಮಗೆ  ಹೇಳಬಯಸುತ್ತೇನೆ. ಇದು  ನೈಜ ಘಟನೆಯೋ ಇಲ್ಲವೋ ನನಗೆ ಅರಿವಿಲ್ಲ ಅದರೂ ಲೇಖನಕ್ಕೆ ಸೂಕ್ತ ಎಂದೆನಿಸುತು. 

ವಿಶ್ವವನ್ನೇ  ಗೆದ್ದ ಅಲೆಗ್ಸಾಂಡರ್ ಯಾರಿಗೆ ಗೊತ್ತಿಲ್ಲ ಹೇಳಿ.

ಹಲವು ದೇಶಗಳನ್ನುಅಲೆಗ್ಸಾಂಡರ್ ಗೆದ್ದು ಮರುಭೂಮಿಯ ದಾರಿಯಲ್ಲಿ ಸಾಗುತ್ತಿರುವ ಸಮಯದಲ್ಲಿ ಅವನ ಉಗ್ರಾಣದಲ್ಲಿ ಇದ್ದ ಆಹಾರ ಸಾಮಗ್ರಿಗಳು ಖಾಲಿಯಾಗುತ್ತ ಬಂದವು. ಇನ್ನೇನು  ಮುಂದಿನ  ಊರಿನಲ್ಲಿ  ಸಂಗ್ರಹಿಸಬಹುದು  ಎಂದು ಮುಂದೆ ಮುಂದೆ ನಡೆದನು. ಆದರೆ  ಎತ್ತ  ನೋಡಿದರು,  ಬರಿ  ಮರುಭೂಮಿ  ಎಲ್ಲಿಯೋ  ಊರಿರುವ  ಲಕ್ಷಣಗಳು  ಕಾಣಲಿಲ್ಲ.  ಕಡೆಗೆ ಅವನ ಹತ್ತಿರವಿದ್ದ ಆಹಾರ ಸಾಮಗ್ರಿಗಳು ಖಾಲಿಯಾದವು. ವಿಶ್ವವನ್ನು ಗೆದ್ದ ವೀರನಿಗೆ ಹೊಟ್ಟೆ ಹಸಿವನ್ನು ಗೆಲ್ಲಲಾಗಲಿಲ್ಲ.

ತಾನು ನೀರು ಕುಡಿಯದೆ ಇದ್ದರೆ ಬದುಕುವುದಿಲ್ಲ ಅರಿತನು. ಅದೇ ಸಮಯದಲ್ಲಿ ದಾರಿಹೋಕನೋಬ್ಬನು  ಸಿಕ್ಕನು. ಅವನ ಹತ್ತಿರ ಇದ್ದ ನೀರನ್ನು ಕಂಡು ” ನನಗೆ ನಿನ್ನ ಹತ್ತಿರ ಇರುವ ನೀರು ಬೇಕು, ನನಗೆ ಕೊಡು.  ದಯವಿಟ್ಟು, ಏನು ಬೇಕು ಕೇಳು ನಾನು ಕೊಡುತ್ತೇನೆ ”  ಎಂದು  ಅಲೆಗ್ಸಾಂಡರ್ ಹೇಳಿದನು.

ಮತ್ತಷ್ಟು ಓದು »

26
ನವೆಂ

ಅಪರೂಪದ ಪರಿಸರವಾದಿ ಕಲಾವಿದೆ ಕೆನಡಾ ದೇಶದ ಪ್ರಾಂಕೆ ಜೇಮ್ಸ್

– ಗೋವಿಂದಭಟ್,ನೆಲ್ಯಾರು
ಇತ್ತೀಚಿನ  ದಿನಗಳಲ್ಲಿ ನನ್ನ ಮೇಲೆ ಬಹಳ  ಪ್ರಬಾವ  ಬಿದ್ದಿರುವ   ವ್ಯಕ್ತಿಯೊಬ್ಬರು    ಎಂದರೆ   ಕಲಾವಿದೆ ಹಾಗೂ  ಪರಿಸರ ಹೋರಾಟಗಾರ್ತಿ  ಕೆನಡಾ ದೇಶದ ಫ್ರಾಂಕೆ  ಜೇಮ್ಸ್.    ಅವರ ಚಿತ್ರ  ಪ್ರಬಂದಗಳು  ಪರಿಸರಾಂದೋಲನಗಳು  ಅಧ್ಬುತ ಎನ್ನಬೇಕು.     ಸುಮಾರು  ಎರಡು ವರ್ಷಗಳಿಂದ  ಇವರ  ಚಟುವಟಿಕೆ  ಮೇಲೆ  ಗಮನವಿಟ್ಟಿರುವ  ನಾನು ಈಗ  ಅನಿಸಿಕೆ  ಹಂಚಿಕೊಳ್ಳುತ್ತಿದ್ದೇನೆ.

ಕಾರು ಹೊಂದಿದ  ಕುಟುಂಬದಿಂದ  ಬದಲಾವಣೆಯಾಗುವಾಗ   ಏನೆಲ್ಲ  ಎದುರಿಸಬೇಕು  ಅನ್ನುವುದನ್ನು ಅವರ ಮಾತುಗಳಲ್ಲಿಯೇ  ಕೇಳಬೇಕು, ಅಲ್ಲ ಚಿತ್ರಕಥೆ  ಓದಬೇಕು. ದೊಡ್ಡ  ಹಡಗಿನಂತಹ  ಕಾರು  ಅವರಲ್ಲಿತ್ತು. ಡೆವಿಡ್  ಸುಜುಕಿ  ಎಂಬ  ಪರಿಸರವಾದಿಯ  ಬಾಷಣ  ಕೇಳಿ ಮಾರಿಯೇ ಬಿಟ್ಟರು. ಹತ್ತಿರದಲ್ಲಿ  ದಿನಸಿ ಅಂಗಡಿ ಇತ್ತು. ನಡೆಯುವ  ಆಸಕ್ತಿ ಇತ್ತು.  ಒಬ್ಬೊಬ್ಬ  ಸಂಬಂದಿಕರ  ಪ್ರತಿಕ್ರಿಯೆಯೂ  ಬಿನ್ನವಾಗಿತ್ತು.  ಕಾರು ಇಲ್ಲವಾದ  ನಂತರ  ಮನೆ ಎದುರು ಕಾರು – ದಾರಿ  ಬೇಕಾ ?  ಬೇಡ.    ಆದರೆ  ಪಟ್ಟಣದ  ಕಾನೂನು ಪ್ರಕಾರ ಒಂದು ನಿವೇಶನದಲ್ಲಿ    ಒಂದು ಮರ ನೆಡಲು  ಮಾತ್ರ ಅವಕಾಶ.     ಹಲವು ಸಮಸ್ಯೆಗಳ  ಎದುರಿಸಿ   ಕೊನೆಗೂ   ಅಲ್ಲಿ ಹೂಗಿಡಗಳನ್ನು    ನೆಟ್ಟರು. ಕಾಂಕ್ರೀಟು  ಅಗೆದು ಹಾಕಿ  ನೀರು ಇಂಗುವಂತೆ  ಮಾಡಿದರು.   ಅವರ, ಅಂದರೆ   ಆ ದೇಶದವರ   ಕಾರು ಸಹಿತ ಜೀವನ  ನಮಗೆ  ಆಕರ್ಷಕವಾಗಿ ಕಂಡರೆ   ಕಾರು ರಹಿತ  ಜೀವನವೂ  ಮಾರ್ಗದರ್ಶಕ ಏಕಾಗಬಾರದು ?
ಯಾವ  ವಿಚಾರವನ್ನೇ  ಆಗಲಿ  ತಮ್ಮ  ಕಲೆಯ  ಮೂಲಕ   ಪ್ರಚಾರಾಂದೋಲನ  ನಡೆಸುವ ಫ್ರಾಂಕೆ  ಕೆನಡಾ ದೇಶಕ್ಕೆ  ಅಪಾರ  ತಲೆನೋವು ತರಿಸುವ  ವ್ಯಕ್ತಿಯಾಗಿ  ಹೊರಹೊಮ್ಮಿದ್ದಾರೆ. ಹೌದಾ  ಪ್ರದಾನ ಮಂತ್ರಿಗಳೇ, ಮಲೀನತೆ  ತೇರಿಗೆ ನಿಜಕ್ಕೂ  ದೇಶಕ್ಕೆ  ಹಾನಿಮಾಡುವುದೇ   ಎಂದು ಮುಗ್ದವಾಗಿ  ಪ್ರಶ್ನಿಸುತ್ತಾರೆ.  ನೀವು ಮಾತಾಡುತ್ತಿರುವ  ವಿಚಾರ  ಪರಿಣಾಮ ನಿಮಗೆ ಚೆನ್ನಾಗಿ  ಗೊತ್ತಾ? ಮುಂದೆ  ಹಿಮ ಕರಡಿ ಕಾಣೋದು  ಎರಡು ಡಾಲರ್ ನಾಣ್ಯದಲ್ಲಿ  ಮಾತ್ರವಾದರೆ   ನಮ್ಮ  ನಿಮ್ಮ  ಮಕ್ಕಳು  ಮೊಮ್ಮಕ್ಕಳು  ಏನು ಹೇಳಬಹುದು.  ಎಂದೂ  ಕೇಳುತ್ತಾರೆ. ಈ  ಹಾರ್ಪರ್ ಮಹರಾಯ ಬೆಂಗಳೂರಿಗೆ ಬಂದಾಗ  ಇದನ್ನು  ಹಂಚಿಕೊಳ್ಳುವ  ಆಲೋಚನೆ ಬಂದರೂ  ತಕ್ಷಣ ಇವೆಲ್ಲ ಬರೆಯಲು  ಸಾದ್ಯವಾಗಲಿಲ್ಲ.
25
ಆಕ್ಟೋ

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. ಮತ್ತಷ್ಟು ಓದು »
20
ಸೆಪ್ಟೆಂ

!!! ನಿಲುಮೆ ಸ್ನೇಹ ಮಿಲನ !!!

21
ಆಗಸ್ಟ್

ಟಾಯ್ಲೆಟ್ ವಾಸು ಅಂದ್ರೆ ಯಾರು ಗೊತ್ತಾ?

-ಚಕ್ರವರ್ತಿ ಸೂಲಿಬೆಲೆ

”ಪ್ರಚಾರದ ಹೆಸರಲ್ಲಿ ಹೊಸಹೊಸ ಮಾರ್ಗಗಳನ್ನು ಹುಡಕಲಾಯ್ತು. ನಾಟಕಗಳು, ಕಥೆಗಳು, ಎಲ್ಲವೂ ಶೌಚಾಲಯದ ಕುರಿತಂತೆಯೇ. ಕುಂತರೂ ನಿಂತರೂ ಶೌಚಾಲಯಗಳೇ. ಕೊನೆಗೆ ಕನಸಿನಲ್ಲೂ ವಾಸು ದೇಶ್‌ಪಾಂಡೆ ಶೌಚಾಲಯವನ್ನೆ ಕಂಡಿದ್ದರೆ ಅಚ್ಚರಿಯಿಲ್ಲ! ಈ ಕಾರಣದಿಂದಲೇ ಸ್ಥಳೀಯ ಆರು ಜಿಲ್ಲೆಗಳಲ್ಲಿ ವಾಸು ದೇಶ್‌ಪಾಂಡೆ `ಟಾಯ್ಲೆಟ್ ವಾಸು’ವಾಗಿಯೇ ಜನಪ್ರಿಯರಾದರು”

ವಾಸು ದೇಶ್‌ಪಾಂಡೆ ಅಲಿಯಾಸ್ ಟಾಯ್ಲೆಟ್ ವಾಸು! ಗುಲ್ಬರ್ಗಾದ ಸೇಡಮ್ಮಿನ ಹುಡುಗ. ಬಡತನದಲ್ಲಿ ಬೆಳೆದ, ಕಷ್ಟಪಟ್ಟು ಓದಿದ. ಕೊನೆಗೆ ಇಂಜಿನಿಯರ್ರೂ ಆದ. ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡು ಚೆನ್ನಾಗಿ ದುಡಿದ. ಇಷ್ಟೇ ಆಗಿದ್ದರೆ ಇದೊಂದು ಕನ್ನಡ ಫಿಲಮ್ಮಿನ ಕಥೆಯಂತಾಗಿ ಮುಗಿದುಹೋಗುತ್ತಿತ್ತು. ಹಾಗಾಗಲಿಲ್ಲ. ಊರಿನ ಕೆಲಸ ವಾಸುವನ್ನು ಬಿಡಲಿಲ್ಲ. ಬೆಂಗಳೂರು ಎಲ್ಲರನ್ನು ಕಾಡಿದಂತೆ ಮೋಹವಾಗಿ ಕಾಡಲಿಲ್ಲ.

ಉತ್ತರ ಕರ್ನಾಟಕಕ್ಕೆ ನೆರೆ ಹಾವಳಿ ಅಪ್ಪಳಿಸಿದಾಗ ಇನ್ಫೋಸಿಸ್ ಗುಲ್ಬರ್ಗಾದ ನೆರೆ ಪೀಡಿತ ಪ್ರದೇಶಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡಿತು. ಮನೆ ಕಟ್ಟಿಕೊಡುವ ಸಾಮಾಜಿಕ ಜವಾಬ್ದಾರಿ ನಿರ್ವಹಿಸಲು ಮುಂದೆ ಬಂತು. ಸ್ಥಳೀಯವಾಗಿ ಸಾಥ್ ಕೊಡಲು ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯಂತಹ ಪ್ರಾಮಾಣಿಕ ಸಂಸ್ಥೆಯೇನೋ ಸಿಕ್ಕಿತು. ಆದರೆ ಈ ಕೆಲಸವನ್ನು ತನ್ನದೆಂದುಕೊಂಡು ಸಮರ್ಥವಾಗಿ ಮಾಡುವವರು ಯಾರಾದರೊಬ್ಬರು ಬೇಕಲ್ಲ? ಆಗ ಇನ್ಫೋಸಿಸ್‌ಗೆ ಕಂಡ ಬೆರಗುಗಣ್ಣಿನ ಇಂಜಿನಿಯರ್ ವಾಸು ದೇಶ್‌ಪಾಂಡೆ. ಅಮೆರಿಕಾದಲ್ಲೆಲ್ಲ ಇದ್ದು ಬಂದ ಹುಡುಗ; ಮತ್ತೆ ಮರಳಿ ಹೊರಡಲು ಸಜ್ಜಾಗಿದ್ದ. ಆದರೆ ಈಗ ಹೊಸತೊಂದು ಆಸಕ್ತಿಕರ ಯೋಜನೆ ಕೈಬೀಸಿ ಕರೆಯಿತು. ಹುಟ್ಟೂರಿನ, ಜಿಲ್ಲೆಯ, ಕೊನೆಗೆ ಹಿಂದುಳಿದ ಎಂಬ ಹಣೆಪಟ್ಟಿ ಹೊತ್ತ ತನ್ನ ಭಾಗದ ಸೇವೆ ಮಾಡುವ ಅವಕಾಶ ಬಯಸಿಬಂದಾಗ ಆಗುವುದಿಲ್ಲ ಎನ್ನುವುದು ಹೇಗೆ?

ಮತ್ತಷ್ಟು ಓದು »

29
ಮಾರ್ಚ್

ಕುಲಾಂತರಿ ಚರ್ಚೆ: ಇನ್ನೊಂದು ಮುಖ

– ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

ಮತ್ತಷ್ಟು ಓದು »

18
ಫೆಬ್ರ

ಆವೇಶಕ್ಕೆ ಬಲಿಯಾದ ಕಂದ

-ಸತೀಶ್ ರಾಮನಗರ

ಆಕೆ ತನ್ನ ಮಗನನ್ನೇ ಕೊಂದಿದ್ದಾಳೆ ಎಂಬುದನ್ನು ಕೇಳಿ ಒಂದು ಕ್ಷಣ ಆಶ್ಚರ್ಯಚಕಿತನಾದೆ. ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ನೀಡಿರುವುದು ಆಕೆಯ ಪತಿಯೇ. ಈಗ ಆರೋಪಿತಳನ್ನು ಬೇರೆಯವರ ಮೂಲಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವುದು ಕೂಡ ಆಕೆಯ ಪತಿಯೇ.

ಮಾದಣ್ಣ ಹಾಗು ಗೌರಮ್ಮನವರದು ಇಬ್ಬರು ಮಕ್ಕಳೊಂದಿಗಿನ ಮಧ್ಯಮ ವರ್ಗದ ಸಂತೃಪ್ತಿ ಸಂಸಾರ. ಮಗ ರಮೇಶನಿಗೆ 5 ವರ್ಷ. ಮಗಳು ಲಕ್ಷ್ಮಿಗೆ 7 ವರ್ಷ. ಇಬ್ಬರ ಮುಖ್ಯ ಕಸುಬು ವ್ಯವಸಾಯ.

ನಾಳೆಯ ಲಕ್ಷ್ಮಿ ಪೂಜೆಗೆ ಮನೆಯಲ್ಲವನ್ನು ಶುಚಿಗೊಳಿಸಿ, ಗೌರಮ್ಮ ಗಂಡನ ದಾರಿ ಕಾಯುತಿದ್ದಳು. ಮಾದಣ್ಣ ಮನೆಗೆ ಬಂದ ತಕ್ಷಣವೇ, ನಾಳೆ ಹಬ್ಬಕ್ಕೆ ನನಗೆ ಸೀರೆ, ಮಕ್ಕಳಿಗೆ ಹೊಸ ಬಟ್ಟೆ ಜೊತೆಗೆ ಗಿರವಿ ಅಂಗಡಿಯಲ್ಲಿಟ್ಟಿರುವ, ನನ್ನ ಓಲೆ ಜುಮುಕಿ, ಮಾಂಗಲ್ಯ ಸರವನ್ನು ನಾಳೆ ಬೆಳಿಗ್ಗೆ ಬಿಡಿಸಿಕೊಂಡು ತರಲೇ ಬೇಕು ಎಂದು ತಾಕೀತು ಮಾಡಿದಳು. ಮಾದಣ್ಣ ಸರಿ ಎಂದು ತಲೆಯಲ್ಲಾಡಿಸಿ ಊಟ ಮಾಡಿ ಮಲಗಿದ.

ಮಾದಣ್ಣ, ಬೆಳಿಗ್ಗೆ ತನ್ನ ಬಳಿಯಲ್ಲಿದ್ದ ಚೂರು ಪಾರು ಹಣವನ್ನೆಲ್ಲ ಒಟ್ಟುಗೂಡಿಸಿ, ಆ ಹಣದಲ್ಲಿ ಮಕ್ಕಳಿಗೆ ಬಟ್ಟೆ ಹಾಗು ಹೆಂಡತಿಗೆ ಸೀರೆಯನ್ನು ತರಲಷ್ಟೇ ಸಾಧ್ಯವಾಯಿತು. ತನ್ನ ಗಂಡ ವಡವೆಗಳನ್ನು ಬಿಡಿಸಿಕೊಂಡು ತರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಗೌರಮ್ಮ ನಿಗೆ ಬಟ್ಟೆಗಳನ್ನಷ್ಟೇ ನೋಡಿ ನಿರಾಶೆಯಾಯಿತು. ವಡವೆಗಳಿಲ್ಲದೆ ಲಕ್ಷ್ಮಿ ಪೂಜೆ ಹೇಗೆ ಮಾಡುವುದೆಂಬ ಚಿಂತಯಿಂದ ಮೌನವಾದಳು. ಅಕ್ಕ ಪಕ್ಕದ ಮನೆಯ ಹೆಂಗಸರನ್ನು ಸಂಜೆ ಮನೆಗೆ ಲಕ್ಷ್ಮಿ ಪೂಜೆಗೆ ಬರಲೇಬೇಕೆಂದು ಅದಾಗಲೇ ಹೇಳಿ ಬಂದಿದ್ದಳು. ಸಂಜೆ ಅವರುಗಳು ಮನೆಗೆ ಬಂದರೆ, ಯಾವ ಮುಖವನ್ನು ಹೊತ್ತುಕೊಂಡು ಪೂಜೆ ಮಾಡುತ್ತಿಲ್ಲ ಎಂದು ಹೇಳುವುದು ಎಂಬ ಪ್ರಶ್ನೆ ಅವಳನ್ನು ಕಾಡತೊಡಗಿತು. ಮತ್ತಷ್ಟು ಓದು »

13
ಫೆಬ್ರ

ಸಂಸ್ಕೃತಿ ಸಂಕಥನ – 22 – ಭಾರತೀಯ ಸಂಸ್ಕೃತಿಗೆ ಗ್ರಹಣ ಹಿಡಿಸಿದ ವಸಾಹತು ಪ್ರಜ್ಞೆ

-ರಮಾನಂದ ಐನಕೈ

ಸುಮಾರು 35 ವರ್ಷಗಳ ಹಿಂದಿನ ನೆನಪು. ನಾವು ಹೈಸ್ಕೂಲಿಗೆ ಹೋಗುತ್ತಿರುವ ದಿನಗಳು. ಒಂದು ರೀತಿಯ ವಿಚಿತ್ರ ಸಭ್ಯತೆಯನ್ನು ಬೆನ್ನಟ್ಟಿ ಹೊರಟಿರುವ ಕಾಲ. ಮೇಸ್ಟ್ರಗಳು ಕ್ಲಾಸಿಗೆ ಬಂದರೆ ಜೀವನದ ‘ಗುರಿ’ಯ ಕುರಿತಾಗೆ ಮೊದಲ ಪ್ರಶ್ನೆ ಕೇಳುತ್ತಿದ್ದರು. ಯಾರು ಅತ್ಯುತ್ತಮ ಗುರಿಯನ್ನು ಹೇಳಿದರೋ ಅವರಿಗೆ ‘ವ್ಹೆರಿ ಗುಡ್’ ಅನ್ನುತ್ತಿದ್ದರು. ಮುಂದೆ ಜೀವನದಲ್ಲಿ ಮನುಷ್ಯ ಮಾಡಬಹು ದಾಂತಹುದು ಇಂತಿಂಥದಿದ್ದೆ ಎಂದು ನಮಗೆ ಗೊತ್ತಾಗಿದ್ದೇ ಈ ಪ್ರಶೆಗಳಿಗೆ ಉತ್ತರ ಹುಡುಕುವ ಮೂಲಕ. ನಾವು ಮಾಡುವ ಕಾರ್ಯಗಳಿಗೆ ಉದ್ದೇಶ ಇದ್ದರೆ ಮಾತ್ರ ಅದು ಗುರಿ ತಲುಪುತ್ತದೆ. ಕ್ರಿಯೆಗೂ ಉದ್ದೇಶಕ್ಕೂ ಸಂಬಂಧ ಇರಬೇಕು. ಆದ್ದರಿಂದ ಗುರಿ ಅಂದರೆ  ಉದ್ದೇಶ. ಗುರಿಯ ದಾರಿ ಯಲ್ಲಿ ಹೋದರೆ ಗುರಿ ಸಿಗುತ್ತದೆ. ಈ ರೀತಿಯ ಚಿಂತನೆ ಇದ್ದ ಕಾಲ ಅದು.

ಇಂಥ ಚಿಂತನೆಗಳು ಎಲ್ಲಿಂದ ಬಂದವು? ಕೇಳಿದರೆ, ದಾರ್ಶನಿಕರಿಂದ, ಪುರಾಣಗಳಿಂದ, ಪ್ರಾಚೀನ ಜನರ ಜೀವನಾನುಭವದಿಂದ ಇತ್ಯಾದಿ ಯಾಗಿ ಮನಸ್ಸಿಗೆ ಕಂಡಂತೆ ಹೇಳುತ್ತೇವೆ. ಯಾರಿಂದಲೂ ಅಲ್ಲ. ನಾವು ಕಲ್ಪಿಸುತ್ತಿರುವ ಸೀಮಿತ ಅರ್ಥದ ಗುರಿ ನಮ್ಮಲ್ಲಿ ಹುಟ್ಟಿದ್ದೇ ಪಾಶ್ಚಾತ್ಯ ಪ್ರಭಾವದಿಂದ. ವಸಾಹತುಶಾಹಿ ಪ್ರಜ್ಞೆ ಯಿಂದ. ಏಕೆಂದರೆ ಅವರ ಅಷ್ಟೂ ಚಿಂತನೆಗಳು ಅರಳುವುದು ಕಾರಣ ಮತ್ತು ಉದ್ದೇಶಗಳ ಮೇಲೆ. ಏಕೆಂದರೆ ಪಾಶ್ಚಾತ್ಯ ಪುರಾಣ ಕಟ್ಟಲ್ಪಟ್ಟಿದ್ದೇ ಈ ಪರಿಕಲ್ಪನೆಯ ಮೇಲೆ. ಅನೇಕ ಸಂದರ್ಭಗಳಲ್ಲಿ ಅದು ನಮ್ಮಲ್ಲಿ ಅರ್ಥ ಕೊಡಲಾರದು.

ಮತ್ತಷ್ಟು ಓದು »