ವಿಷಯದ ವಿವರಗಳಿಗೆ ದಾಟಿರಿ

Posts from the ‘ಪುಸ್ತಕ ಪರಿಚಯ’ Category

4
ಆಕ್ಟೋ

ಬಿಚ್ಚಿಟ್ಟ ದಲಿತ ಚರಿತ್ರೆ

– ಶಿವರಾಮ್ ಕಾನ್ಸೇನ್

ಐತಿಹಾಸಿಕ ವ್ಯಕ್ತಿಗಳಾದ ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಪುಲೆ ಮುಂತಾದವರ ಸಾಲಿನಲ್ಲಿ ಸದಾ ನೆನಪಿಸಿಕೊಳ್ಳಬೇಕಾದ ಮತ್ತೊಬ್ಬ ಸುಧಾರಣಾವಾದಿಯ ಹೆಸರು “ಮಹಾಪ್ರಾಣ್ ಜೋಗೇಂದ್ರನಾಥ್ ಮಂಡಲ್”. ಸಾಮಾಜಿಕ-ಆರ್ಥಿಕ-ರಾಜಕೀಯ ಸ್ಥಿತ್ಯಂತರದಲ್ಲಿ ಮಹಾನ್ ವ್ಯಕ್ತಿಗಳ ಹೆಸರುಗಳು ಅನುಕೂಲಸಿಂಧು ಅನುಯಾಯಿ-ಅಭಿಮಾನಿಗಳಿಂದಾಗಿ ಹಾಗೂ ಮತರಾಜಕಾರಣದಿಂದಾಗಿ ಸದ್ಬಳಕೆಯಾದ್ದಕ್ಕಿಂತಲೂ ದುರ್ಬಳಕೆಯಾದದ್ದೇ ಹೆಚ್ಚು.!

ಬಹುಶಃ ಜೋಗೇಂದ್ರನಾಥ್ ಮಂಡಲ್ ಹೆಸರನ್ನು ಉಲ್ಲೇಖಿಸಿದರೆ ಅಥವಾ ಸ್ಮರಿಸಿದರೆ ಯಾವುದೇ ಸವಲತ್ತು-ಪದವಿ-ಪುರಸ್ಕಾರ-ಪ್ರಶಸ್ತಿಯೂ ಸಿಗದೆಂಬ ಖಾತರಿಯಿಂದಾಗಿ ಇವರನ್ನು ಇತಿಹಾಸಕಾರರು ಮರೆಮಾಚಿರಬಹುದು ! ಯಾರು ಮರೆತರೇನು? ನಿಲುಮೆಯ ರಾಕೇಶ್ ಶೆಟ್ಟಿಯವರು ಇತಿಹಾಸದ ಗರ್ಭದಿಂದ ಜೋಗೇಂದ್ರನಾಥ್ ಎಂಬ ಮಹಾಶಕ್ತಿಮಂಡಲವನ್ನು ಹೊರತೆಗೆದು ಪ್ರಾಣ ತುಂಬಿದ್ದಾರೆ.  “ಮುಚ್ಚಿಟ್ಟ ದಲಿತ ಚರಿತ್ರೆಯನ್ನು ಬಿಚ್ಚಿಟ್ಟ” ಗೆಳೆಯ ರಾಕೇಶ್ ಶೆಟ್ಟಿಯವರಿಗೆ ಹಾಗೂ ನಿಲುಮೆ ಬಳಗಕ್ಕೆ ಅಭಿನಂದನೆಗಳು. ಮತ್ತಷ್ಟು ಓದು »

30
ಜುಲೈ

‘ಗ್ರಸ್ತ’ ಕಾದಂಬರಿ – ನನ್ನ ಅನಿಸಿಕೆಗಳು.

– ಸುದರ್ಶನ ಗುರುರಾಜ ರಾವ್

ಕೊಂಡು ತಂದು ೨ ವರ್ಷಗಳಷ್ಟೇ ಆಗಿದ್ದರೂ ಗ್ರಸ್ತವನ್ನು ಓದಲು ಕಾಲ ಕೂಡಿ ಬಂದಿರಲೇ ಇಲ್ಲ. ಅಂತರ್ಜಾಲದಲ್ಲೂ ,ಫೇಸ್ಬುಕ್ ಪುಟಗಳಲ್ಲೂ ಸಾಕಷ್ಟು ಓದುಗರು ಈ ಕಾದಂಬರಿಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮೊದಲು ಕರಣಂ ಅವರ ಕರ್ಮ ಮತ್ತು ನನ್ನಿ ಎರಡನ್ನೂ ಓದಿ ಮೆಚ್ಚಿದ್ದೆ.ಈ ಭಾನುವಾರ ಯಾವ ಕೆಲಸ ಇಲ್ಲದ ಕಾರಣ ನಿಧಾನವಾಗಿ ಕುಳಿತು ಓದಿದ್ದಾಯ್ತು. ಚಿಕ್ಕದಾದ ಕಾದಂಬರಿ ಚೆನ್ನಾಗಿ ಓದಿಸಿಕೊಂಡು ಹೋಯಿತು.

ಬೆಂಗಳೂರಿನ ಬ್ರಾಹ್ಮಣ ಬಡಾವಣೆಯಲ್ಲಿ ಪ್ರಾರಂಭವಾಗುವ ಕಥೆ ಅಲ್ಲಲ್ಲಿ ಹರಿದು, ಪ್ರಾಗ್ ಎಂಬ ವಿದೇಶಕ್ಕೆ ಹೋಗಿ ಪುನಃ ಬೆಂಗಳೂರಿಗೆ ಬಂದು, ತಿರುವು ಪಡೆದು ಮಲೆನಾಡಿನ ಮಲೆಯೊಂದರ ಮೇಲೆ ಬಂದು ನಿಲ್ಲುತ್ತದೆ ಮುಕ್ತಾಯವೋ ಹೊಸ ಆರಂಭವೋ ಎಂಬುದನ್ನು ಓದುಗರು ಊಹಿಸಿಕೊಳ್ಳಬೇಕು.

ಕೆಳ ಮಧ್ಯಮ ವರ್ಗದ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಕಣ್ಣಿನ ತುಂಬಾ ಕನಸು ಹೊತ್ತ ಯುವತಿ, ಸರಿಯಾಗಿ ತಿಳಿಯದೆ, ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿ ಮನೆಬಿಟ್ಟು ಓಡಿಹೋಗಿ ಮದುವೆ ಮಾಡಿಕೊಳ್ಳುವ ಜಯಶ್ರೀ; ಕನಸುಗಳೊಂದೂ ಸಾಕಾರವಾಗದೆ ಬರೀ ಬೀಳುಗಳ ಹಾದಿಯಲ್ಲಿ ಕ್ರಮಿಸುತ್ತಲೇ ಇನ್ನೇನು ಸ್ವಲ್ಪ ಏಳು ಕಾಣುತ್ತಿದೆ ಎಂಬಲ್ಲಿ ಹೃದಯಾಘಾತದಿಂದ ನಿಧನಳಾಗುತ್ತಾಳೆ. ಕನಸುಗಳು ತುಂಬಿದ ಜೀವವೊಂದು, ಕನಸುಗಳೇ ಇಲ್ಲದ, ಕೆಲಸ ಮಾಡುವ ಕಸುವೂ ಇಲ್ಲದ ಒಬ್ಬನನ್ನು ಓಡಿಹೋಗಿ ಮದುವೆಯಾಗುವ ವಿಪರ್ಯಾಸಗಳು ದಿನವೂ ಕಂಡು ಕೇಳುವ ವಿಚಾರವೇ. ಬವಣೆಗಳನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸಿದ್ದಾರೆ. ಅವಳ ಮಗನೇ ಅಸಾಧಾರಣ ಬುದ್ಧಿಮತ್ತೆ ಮತ್ತು ಅತೀಂದ್ರಿಯ ಮನ:ಶಕ್ತಿ ಇರುವ ಅವಿನಾಶ್!

ಮತ್ತಷ್ಟು ಓದು »

3
ಜುಲೈ

ರಾಮಾಯಣ,ಮಹಾಭಾರತ,ಪುರಾಣಗಳ 64 ಸಂಪುಟಗಳು ಕನ್ನಡದಲ್ಲಿ ಅತ್ಯಂತ ಕಡಿಮೆ ಬೆಲೆಗೆ

– ವಿಶ್ವನಾಥ ಸುಂಕಸಾಲ

ಮೂಲ ಶ್ಲೋಕಗಳೊಂದಿಗೆ ಕನ್ನಡದಲ್ಲಿ ರಾಮಾಯಣ, ಮಹಾಭಾರತದ ಗ್ರಂಥಗಳು ಸಿಗುತ್ತವೆಯೇ ಎಂಬ ಪ್ರಶ್ನೆ ಹಲವರದು. ಕನ್ನಡದಲ್ಲಿ ಸಮಗ್ರವಾಗಿ ಇಂಥ ಗ್ರಂಥಗಳು ದೊರೆಯುವುದು ವಿರಳವೇ. ಒಂದೆರಡು ಪ್ರಕಾಶನಗಳು ಮಾತ್ರ ಇಂದಿಗೂ ರಾಮಾಯಣ, ಮಹಾಭಾರತ, ಪುರಾಣಗಳನ್ನು ಜನರಿಗೆ ದೊರಕುವಂತೆ ಮಾಡುತ್ತಿವೆ. ಅವುಗಳಲ್ಲಿ ಭಾರತ ದರ್ಶನ ಪ್ರಕಾಶನವೂ ಒಂದು.

ಅತ್ಯಂತ ಕಡಿಮೆ ಬೆಲೆಗೆ ಕನ್ನಡದ ಜನತೆಗೆ ಭಾರತೀಯ ಸಂಸ್ಕೃತಿಯ ಮೂಲವಾದ ಈ ಗ್ರಂಥಗಳನ್ನು ತಲುಪಿಸಲೆಂದೇ ಹುಟ್ಟಿದ ಸಂಸ್ಥೆ ‘ಭಾರತ ದರ್ಶನ ಪ್ರಕಾಶನ’.

ಮುದ್ರಣದ ವ್ಯಯಕ್ಕಿಂತ ಕಡಿಮೆ ಬೆಲೆಗೆ ಪುಸ್ತಕವನ್ನು ಒದಗಿಸುತ್ತಿರುವ ಭಾರತ ದರ್ಶನ ಪ್ರಕಾಶನಕ್ಕೆ ಓದುಗರು, ದಾನಿಗಳೇ ಬೆನ್ನೆಲುಬು. ರಾಮಾಯಣ, ಮಹಾಭಾರತಗಳ ಕಥೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಅನೇಕ ಪುಸ್ತಕಗಳು ಸಿಗಬಹುದು. ಆದರೆ ಮೂಲ ವಾಲ್ಮೀಕಿ ಹಾಗೂ ವ್ಯಾಸರಿಂದ ಲಿಖಿತವಾದ ಪ್ರತಿ ಶ್ಲೋಕವನ್ನೂ ಸಂಪುಟದ ಒಂದು ಕಡೆ ಕೊಟ್ಟು, ಮತ್ತೊಂದು ಭಾಗದಲ್ಲಿ ಸಂಪೂರ್ಣ ಅರ್ಥವನ್ನು ವಿಸ್ತೃತವಾಗಿಯೂ, ನಿರ್ದುಷ್ಟವಾಗಿಯೂ, ಸರಳ ಕನ್ನಡದಲ್ಲಿ ವಿವರಿಸಿರುವ ಗ್ರಂಥಮಾಲೆ ತೀರಾ ವಿರಳ.

ಭಾರತ ದರ್ಶನ ಪ್ರಕಾಶನದ ಒಂದೊಂದು ಸಂಪುಟವೂ 620-650 ಪೇಜುಗಳಿಂದ ಕೂಡಿವೆ. ಪ್ರತಿ ಸಂಪುಟದ ಮುದ್ರಣಕ್ಕೂ ಸರಾಸರಿ 120-150 ರೂಪಾಯಿಗಿಂತ ಹೆಚ್ಚು ವ್ಯಯವಾಗುತ್ತದಂತೆ. ಆದರೆ, ರಾಮಾಯಣ, ಮಹಾಭಾರತಗಳ ಪ್ರಚಾರಕ್ಕಾಗಿಯೇ ಹುಟ್ಟಿಕೊಂಡ ಈ ಸಂಸ್ಥೆಯು ದಾನಿಗಳ ಸಹಕಾರದಿಂದ ಮುದ್ರಣ ವ್ಯಯಕ್ಕಿಂತಲೂ ಕಡಿಮೆ ದರಕ್ಕೆ ಅಂದರೆ ಸರಾಸರಿ ಬರೀ ನೂರು ರೂಪಾಯಿಗೆ ಕೊಡುತ್ತಿದೆ.

ಮತ್ತಷ್ಟು ಓದು »

4
ಫೆಬ್ರ

ತೊತ್ತೋಚಾನ್ (ಪುಸ್ತಕ ಪರಿಚಯ)

– ವಲವಿ ವಿಜಯಪುರ

scan0015“ಕನಸುಗಳನ್ನು ಕಾಣಬೇಕು. ಉನ್ನತೋನ್ನತವಾದ ಹಗಲು ಕನಸು ಕಾಣಿರಿ.”
ಇದು ಭಾರತದ ಮಾಜಿ ರಾಷ್ಟ್ರಪತಿ, ಕ್ಷಿಪಣಿ ಜನಕ ದಿ| ಶ್ರೀ ಅಬ್ದುಲ್ ಕಲಾಂ ಅವರ ಅಮೃತ ನುಡಿ.

ಹೌದು, ಕನಸು ಕಾಣಬೇಕು. ಉನ್ನತೋನ್ನತವಾದ ಕನಸನ್ನೇ ಕಾಣಬೇಕು. ಮತ್ತು ಅದನ್ನು ನನಸಾಗಿಸುವತ್ತ ಸತತ ಪ್ರಯತ್ನಿಸಬೇಕು. ಅಂಥ ಉನ್ನತ ಕನಸನ್ನು ಕಂಡು ಅದನ್ನು ನನಸಾಗಿಸಲು ಹಗಲಿರುಳು ಶ್ರಮಿಸಿದ, ಖ್ಯಾತ ಶಿಕ್ಷಣ ಪ್ರೇಮಿ, ಮಕ್ಕಳ ಪ್ರೇಮಿ, ಪ್ರಯೋಗಶೀಲ ವ್ಯಕ್ತಿತ್ವದ ಶ್ರೀ ಸೋಸಾಕು ಕೊಬಾಯಾಶಿ ಅವರ ಪ್ರಾಯೋಗಿಕ ಶಾಲೆ ತೊಮೆಯೆ ಗಾಕುಯೆನ್ ಹೇಗಿತ್ತು ಎಂದು ತಿಳಿಸುವ ಪ್ರಯತ್ನವನ್ನು ಆ ಶಾಲೆಯ ಹಾಗೂ ಕೊಬಾಯಾಶಿ ಅವರ ಪ್ರಯೋಗದ ನೇರ ಭಾಗೀದಾರಳಾದ ತೊಮೆಯೆ ಶಾಲೆಯ ಮಾಜಿ ವಿದ್ಯಾರ್ಥಿನಿ ಶ್ರೀಮತಿ ತೆತ್ಸುಕೋ ಕುರೊಯಾನಾಗಿ ಬರೆದ ಪುಸ್ತಕವೇ ಈ ‘ತೊತ್ತೋ ಚಾನ್’ ಮತ್ತಷ್ಟು ಓದು »

16
ಆಕ್ಟೋ

ಕುಂ.ವೀ ಮತ್ತೆ ಕುಳಿತು ಮೊದಲಿಂದ ಹೇಳಿದ ಕತೆ – “ಶಾಮಣ್ಣ”

– ಶ್ರೀರಂಗ ಯಲಹಂಕ

ನಾನು ‘ಶಾಮಣ್ಣ’ ಕಾದಂಬರಿ ಓದುವುದಕ್ಕೂ ಮುಂಚೆ   ಕುಂ ವೀ ಅವರ ‘ಡೋಮ ಮತ್ತಿತರ ಕಥೆಗಳು’, ‘ಯಾಪಿಲ್ಲು’ ಕಾದಂಬರಿ, ‘ರಾಯಲಸೀಮಾ’ (ಆತ್ಮಕಥಾನಕ ಮಾದರಿಯ ಬರಹಗಳು), ಅವರ ಆತ್ಮ ಕಥೆ ‘ಗಾಂಧೀ ಕ್ಲಾಸು’, ‘ಅರಮನೆ’ ಕಾದಂಬರಿ ಇವುಗಳನ್ನು ಓದಿದ್ದೆ. ಯಾಪಿಲ್ಲು ಕಾದಂಬರಿಯು ಪುಸ್ತಕರೂಪ ಪಡೆದ ಬಗ್ಗೆ ಬರೆಯುತ್ತಾ ಕುಂ ವೀ ಅವರು ‘ಇದು ಶಾಮಣ್ಣ ಕಾದಂಬರಿಗಿಂತ ಮೊದಲೇ ಬರೆದು ಗೊಂಗಡಿಯಲ್ಲಿ ಅಡಗಿಸಿಟ್ಟಿದ್ದೆ… ‘ ಎಂದು ಬರೆದಿದ್ದಾರೆ.ಅದನ್ನು ಓದಿದ ಮೇಲೆ ‘ಶಾಮಣ್ಣ’ ಕಾದಂಬರಿಯನ್ನು ಓದಬೇಕೆಂಬ ಆಸೆಯನ್ನು ತಡೆಯಲಾರದೆ ಹೋದೆ. ಕೊಂಡುಕೊಂಡು ಓದಿದೆ. ಆಸೆ ನಿರಾಸೆಯಾಯಿತು. ಅದರ ವಿವರಗಳಿಗೆ ಹೋಗುವ ಮುನ್ನ ಒಂದೆರೆಡು ವಿಷಯಗಳನ್ನು ಮೊದಲೇ ಸ್ಪಷ್ಟಪಡಿಸುವುದು ಮುಖ್ಯ. ಈ ನನ್ನ ಬರಹ ‘ಶಾಮಣ್ಣ’ ಕಾದಂಬರಿಯ ಪೂರ್ಣ ಪ್ರಮಾಣದ ವಿಮರ್ಶೆಯಲ್ಲ.ನಾನು ಇದುವರೆಗೆ ಓದಿರುವ ಅವರ  ಕೃತಿಗಳು ಕೆಲವೊಂದು ಮಿತಿಗಳ ನಡುವೆಯೂ ನನಗೆ ಓದಿನ ಸಂತೋಷವನ್ನು ಕೊಟ್ಟಿದೆ. ‘ಅರಮನೆ’ ಕಾದಂಬರಿಯಂತೂ  ಒಂದು ಮಾಸ್ಟರ್ ಪೀಸ್.( ಅದಕ್ಕೆ ೨೦೦೭ನೇ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಬಂದಿದೆ.). ಪ್ರಶಸ್ತಿ ಬಂದ ಕೃತಿಗಳೆಲ್ಲಾ ಉತ್ತಮವಾಗಿರಲೇಬೇಕು ಎಂಬ ನಿಯಮವೇನಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ‘ಅರಮನೆ’ ಕಾದಂಬರಿ ನಿಜವಾಗಲೂ ಆ ಪ್ರಶಸ್ತಿಗೆ ಅರ್ಹವಾದ ಕೃತಿ. ‘ಅರಮನೆ’  ಓದಿದ ಮೇಲೆ ಕುಂ ವೀ ಅವರ ಎಲ್ಲಾ ಕಾದಂಬರಿಗಳನ್ನು ಓದಬೇಕೆಂಬ ಆಸೆ ಇತ್ತು. ಇತ್ತೀಚೆಗೆ ಅವರ ‘ಕತ್ತೆಗೊಂದು ಕಾಲ’ ಎಂಬ ಕಾದಂಬರಿ ಬಿಡುಗಡೆ ಆಯಿತು. ಸದಾ ಪ್ರಯೋಗಶೀಲರಾದ ಕುಂ ವೀ ಅವರ ಆ ಕೃತಿಯ ಬಗ್ಗೆ ನನಗೆ ತುಂಬಾ ಕುತೂಹಲವಿದೆ. ಆದರೆ ‘ಶಾಮಣ್ಣ’ ಕಾದಂಬರಿ ಓದಿದ ಮೇಲೆ ನನ್ನ ಆ ಕುತೂಹಲಕ್ಕೆ ಸ್ವಲ್ಪ ಬ್ರೇಕ್ ಹಾಕಿರುವೆ.

‘ಶಾಮಣ್ಣ’ ೧/೮ ಡೆಮಿ ಆಕಾರಾದ ೬೮೭ ಪುಟಗಳ, ಗಟ್ಟಿ ಮುಟ್ಟಾದ ರಕ್ಷಾಪುಟದ ಬೃಹತ್ ಕಾದಂಬರಿ. ಮೊದಲ ಮುದ್ರಣ ೧೯೯೮. ಪರಿಷ್ಕೃತ ಮುದ್ರಣ ಮೇ ೨೦೧೧. ಬೆಲೆ ರೂ ೩೯೫-. ಪ್ರಕಾಶಕರು ‘ಸಪ್ನ ಬುಕ್ ಹೌಸ್, ಬೆಂಗಳೂರು –೯. ಇದಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ಬಂದಿದೆ. ನಾನು ಓದಿದ್ದು ಪರಿಷ್ಕೃತ ಮುದ್ರಣದ ‘ಶಾಮಣ್ಣ’ನನ್ನು!!  ಪರಿಷ್ಕೃತ  ಮುದ್ರಣದ ಮುನ್ನುಡಿ ರೂಪದ ಮಾತಿನಲ್ಲಿ ಕುಂ ವೀ ಅವರು ಹೇಳಿರುವ ಮಾತುಗಳು ‘ಯಥಾವತ್ತಾಗಿ’ ಹೀಗಿವೆ.
‘… ನನ್ನ ಉಳಿದ ಕಾದಂಬರಿಗಳಂತೆ ಇದು ಸಹ ದ್ವಿತೀಯ ಮುದ್ರಣ ಸೌಲಭ್ಯದ ಹಂತ ತಲುಪಿತು. ಇನ್ನೇನು ಯಥಾವತ್ತಾಗಿ ಪ್ರಕಟವಾಗಬೇಕೆನ್ನುವಷ್ಟರೊಳಗೆ ಓದಲು ಆರಂಭಿಸಿದೆ. ಆರ್ಥಿಕ ಆಸರೆ ಸಲುವಾಗಿ ಕೇವಲ ಇಪ್ಪತ್ತು ದಿವಸಗಳ ಬರೆದ ಕಾಲಾವಕಾಶ ನೆನಪಿಸಿಕೊಂಡೆ. ನಿರಾಸೆ, ಭ್ರಮ ನಿರಸನವಾಯಿತು. ಮೂರು ತಿಂಗಳುಗಳ ಪರ್ಯಂತ ಇದರ ಕಾಮಗಾರಿ ಕೈಗೊಂಡೆ. ಕಾದಂಬರಿಯ ಭಾಷೆ ಸೇರಿದಂತೆ ಪಾತ್ರಗಳ ವ್ಯಕ್ತಿತ್ವವನ್ನು ಪರಿಷ್ಕರಿಸಿದೆ. ಕೆಲವು ಪಾತ್ರಗಳ ಕ್ರಿಯಾಕಲಾಪವನ್ನು ಹ್ರಸ್ವಗೊಳಿಸಿದೆ… ಅನ್ಯ ವಾಚಕ ಮತ್ತು ಲೇಖಕನಾಗಿ ಓದಿಕೊಂಡೆ, ಖುಷಿಯಾಯಿತು. ಓದುಗರೂ  ಖುಷಿ ಪಡಬಹುದೆಂಬ ನಂಬಿಕೆ ಮೂಡಿತು. ದಶಕದ ಹಿಂದೆ ಕಟುವಾಗಿ ವಿಮರ್ಶಿಸಿದ್ದ ಡಾ. ಸಿ ಎನ್. ರಾಮಚಂದ್ರನ್ ಅವರಿಗೂ ಕಾದಂಬರಿಯ ಬದಲಾದ ವಾಸ್ತು, ಭಾಷೆ, ಸಂವಿಧಾನ, ಹಿಡಿಸಬಹುದೆಂಬ ಭರವಸೆಯಿಂದ ಪ್ರಕಟಿಸುತ್ತಿರುವೆ… ‘ .

ಮತ್ತಷ್ಟು ಓದು »

24
ಸೆಪ್ಟೆಂ

ಪುಸ್ತಕ ಪರಿಚಯ – “ಪ್ರಜ್ಞೆ ಮತ್ತು ಪರಿಸರ”

– ಚಂದ್ರಹಾಸ 

PrajneMattuParisara“ಪ್ರಜ್ಞೆ ಮತ್ತು ಪರಿಸರ” – ಯು. ಆರ್. ಅನಂತಮೂರ್ತಿಯವರ ವಿಮರ್ಶಾ ಲೇಖನಗಳ ಸಂಕಲನ. ಪ್ರಸ್ತುತ ಪುಸ್ತಕ ಯಾವುದೋ ಕೆಲವು ಕೃತಿಗಳ ವಿಮರ್ಶೆಗಳಲ್ಲ, ಬದಲಾಗಿ ಕೃತಿಗಳನ್ನು ಸೃಷ್ಟಿಸಿದ ಕೃತಿಕಾರರ ದೃಷ್ಟಿಕೋನಗಳದ್ದು. ಸುತ್ತಲಿನ ಸಮಾಜ, ವಾಸ್ತವ ಅನುಭವಗಳು ಮತ್ತು ಲೋಕವ್ಯಾಪರ, ಹೇಗೆ ಸಾಹಿತಿಗಳ ಮನೋಭೂಮಿಕೆಯಲ್ಲಿ ವಿಶ್ಲೇಷಣೆಗೊಂಡು, ಶೋಧನೆಗೆ ಪ್ರೇರೇಪಿಸಿ ಕೃತಿಗಳಲ್ಲಿ ಮೂರ್ತಗೊಂಡಿರಬಹುದೆಂಬುದನ್ನು ತಮ್ಮ ಲೇಖನಗಳಾ ಮೂಲಕ ವಿವೇಶಿಸಿದ್ದಾರೆ. ಮುನ್ನುಡಿಯಲ್ಲಿ ಅವರೇ ಈ ಲೇಖನಗಳಾ ಹಿಂದಿನ ಪ್ರೇರಣೆಯನ್ನು ಹೀಗೆ ಹೇಳಿಕೊಂಡಿದ್ದಾರೆ – “ಸಾಹಿತ್ಯದಿಂದ ರಾಜಕೀಯದವರೆಗೆ ಸ್ನೇಹಿತರೊಡನೆ ನಡೆಸಿದ ಚರ್ಚೆಗಳಿಂದ,ಮಾರ್ಕ್ಸ್ ವಾದದ,ಲೋಹಿಯಾವಾದಗಳ ಬಗ್ಗೆ ಇದ್ದ ಅನುಮಾನ ಅಭಿಮಾನಗಳಿಂದ ಪ್ರಭಾವಗೊಂಡ ಅಲೋಚನ ಲಹರಿಗಳೇ, ಈ ಸಂಕಲನದಲ್ಲಿ ಲೇಖನಗಳಾಗಿ ಮೂಡಿವೆ.” ಮತ್ತಷ್ಟು ಓದು »

17
ನವೆಂ

ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೩)

– ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.

ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)

ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇಬ್ಬರು, ಅಪ್ಪಳಸ್ವಾಮಿ ಮತ್ತು ಆರೋಕ್ಯಸ್ವಾಮಿ ಎಂಬ ಅಧಿಕಾರಿಗಳ ಹುನ್ನಾರದಲ್ಲಿ ಸಹ್ಯಾದ್ರಿಯ ಮಲೆ, ಇಳಿಜಾರು ಮತ್ತು ತಪ್ಪಲಿನ ಅರಣ್ಯವೆಲ್ಲ ಕೇರಳೀಯರ ವಶವಾದ ಪ್ರಸ್ತಾಪದೊಂದಿಗೆ ನಿರೂಪಣೆ ಮುಖ್ಯ ಮಜಲನ್ನು ತಲುಪುತ್ತದೆ. ಇದಕ್ಕೆ ಎರಡು ಮುಖ. ಒಂದು, ಅರಣ್ಯ ನಾಶ ಇನ್ನೊಂದು, ಸ್ಥಳೀಯರಿಗಾಗುವ ವಂಚನೆ. ಈ ಹಿಂದೆ ಹೇಳಿದ ಸೌಂದರ್ಯ, ಪರಿಪೂರ್ಣತೆ, ಪಂಥಾಹ್ವಾನ ಈ ಯಾವ ಸೆಲೆ, ಸೆಳೆತವೂ ಇಲ್ಲದ, ಲಾಭಕೋರತನವೊಂದೇ ಮಾರ್ಗದರ್ಶಿಯಾಗಿರುವ ರೂಕ್ಷ ಪ್ರಪಂಚದ ಒಂದು ಬೀಭತ್ಸ ಚಿತ್ರಣವನ್ನು ಈ ಕಾದಂಬರಿಯಲ್ಲಿ ಕಾಣುತ್ತೇವೆ. ಕಾರಂತರು ಬಳಸುವ ಅವರ ಇಷ್ಟದ ಪದ `ಚೆಲುವು’ ಒಮ್ಮೆಯೂ ಈ ಕಾದಂಬರಿಯಲ್ಲಿ ಬಂದಿಲ್ಲ. ಪರಿಸರ ನಾಶದ ಜತೆಗೆ ಹೊರಗಿನ ಜನರ ಅವ್ಯಾಹತ ನುಸುಳುವಿಕೆಯಿಂದ ಜನಸಂಖ್ಯಾನುಪಾತ demography, ಏರುಪೇರಾಗಿ ಸಾಂಸ್ಕೃತಿಕ ಅವನತಿಯನ್ನೂ ಕಾಣುತ್ತೇವೆ. ನಿಸರ್ಗವೆಂದರೆ ವಿಶ್ವಾತ್ಮಕ ವ್ಯಕ್ತಿತ್ವವೆಂಬ ಭಾವ ಅಳಿದು ಅದು ಕೇವಲ ಒಂದು ಕಚ್ಚಾವಸ್ತುಗಳ ಮಂಡಿ ಎಂದಾಯಿತು. ಮತ್ತಷ್ಟು ಓದು »

4
ಸೆಪ್ಟೆಂ

ಅಂಕಣರಂಗ – 3 : ಡಿ.ವಿ ಪ್ರಹ್ಲಾದ್ ಅವರ ‘ಅನುದಿನವಿದ್ದು…’ ಪುಸ್ತಕದ ಪರಿಚಯ

– ಮು.ಅ ಶ್ರೀರಂಗ ಬೆಂಗಳೂರು

‘ಅನುದಿನವಿದ್ದು… ‘ ಕಿರು ಪುಸ್ತಕದಲ್ಲಿ ಒಂಭತ್ತು  ಜನ ಲೇಖಕರ ಸಾವಿಗೆ ಮಿಡಿದ ಬರಹಗಳು ಮತ್ತು ಇಬ್ಬರು ಲೇಖಕರು ಬದುಕಿದ್ದಾಗಲೇ  ಬರೆದ ಲೇಖನಗಳಿವೆ.   ಇದರಲ್ಲಿ ರಾಘವೇಂದ್ರ ಖಾಸನೀಸ, ರಾಮಚಂದ್ರ ಶರ್ಮ,ಎಂ. ವ್ಯಾಸ, ಚಿ.ಶ್ರೀನಿವಾಸರಾಜು,ಸು.ರಂ.ಎಕ್ಕುಂಡಿ, ಕುಸುಮಾಕರ ದೇವರಗೆಣ್ಣೂರು,ಬೆಳಗೆರೆ ಕೃಷ್ಣಶಾಸ್ತ್ರಿ,ದೇಶಕುಲಕರ್ಣಿ,ಸ್ವಾಮಿನಾಥ,ಕಿ.ರಂ. ನಾಗರಾಜ ಮತ್ತು ನೀಲತ್ತಹಳ್ಳಿ ಕಸ್ತೂರಿ ಅವರುಗಳನ್ನು ಕುರಿತ ಅಪರೂಪದ ಬರಹಗಳಿವೆ. ಇಲ್ಲಿನ ಬರಹಗಳು ‘ಸಂಚಯ’ ಮತ್ತು ರಾಜ್ಯವ್ಯಾಪಿ ಪ್ರಸಾರದ ಕನ್ನಡ ದಿನಪತ್ರಿಕೆಗಳಲ್ಲಿಈ ಹಿಂದೆ ಪ್ರಕಟವಾಗಿದ್ದಂತಹವು. ಆಯಾ ಲೇಖಕರನ್ನು ಕುರಿತಂತೆ ಡಿ ವಿ ಪ್ರಹ್ಲಾದರ ಅಪರೂಪದ ಒಳನೋಟ ಮತ್ತು  ಅವರುಗಳ ಬಗ್ಗೆ ಹಾಗೂ ಅವರ ಕೃತಿಗಳ  ಬಗ್ಗೆ ವಿವರಗಳನ್ನು ಒಳಗೊಂಡ ‘ಅನುಬಂಧ’ ಈ ಪುಸ್ತಕದ ಪ್ಲಸ್ ಪಾಯಿಂಟ್. ಏಕೆಂದರೆ ಎಷ್ಟೋ ಸಲ ನಾವುಗಳು ಕೆಲವು ಲೇಖಕರ ಹೆಸರು ಕೇಳಿರುತ್ತೇವೆ ಆದರೆ ಅವರ ಪುಸ್ತಕಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗೆಯೇ ನಾವು ಓದಬೇಕಾದಂತಹ   ಲೇಖಕರು ಹಾಗೂ ಅವರ ಕೃತಿಗಳ ಬಗ್ಗೆ ಯಾವ ಮಾಹಿತಿಯೂ ನಮಗಿರುವುದಿಲ್ಲ. ಆ ಕೊರತೆಯನ್ನು ‘ಅನುದಿನವಿದ್ದು … ‘ ತುಂಬಿಕೊಟ್ಟಿದೆ. ಈ ಒಂದು ಪ್ರಸ್ತಾವನೆಯ ನಂತರ ಇಲ್ಲಿನ ಕೆಲವು ಲೇಖನಗಳ ಬಗ್ಗೆ ಪರಿಚಯ ಮಾಡಿಕೊಳ್ಳೋಣ.

ರಾಘವೇಂದ್ರ ಖಾಸನೀಸ –ಬದುಕೆನ್ನುವ ಖಾಲಿ ಆಕಾಶದ ಎದುರು : ಕನ್ನಡದಲ್ಲಿ ಕೆಲವೇ ಕಥೆಗಳನ್ನು ಬರೆದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರಾದ ರಾಘವೇಂದ್ರ ಖಾಸನೀಸರು ಪಾರ್ಕಿನ್ ಸನ್ಸ್ ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ಸನ್ನಿವೇಶದಿಂದ ಲೇಖನ ಪ್ರಾರಂಭವಾಗುತ್ತದೆ. ‘ಅದೊಂದು ವಿಚಿತ್ರ ಭೇಟಿ. ತಮ್ಮ ಕಥೆಗಳ ಮೂಲಕವಷ್ಟೇ ಪರಿಚಿತರಾಗಿದ್ದ ಅಪರೂಪದ ಕಥೆಗಾರರನ್ನು ನೋಡಲು ಹೋಗಿದ್ದೆವು. …… ಆ ಮಧ್ಯಾನ್ಹದ ಮೌನದಲ್ಲಿ ಇಂತಿಂಥವರು ಬಂದಿದ್ದಾರೆ, ನಿಮ್ಮನ್ನು ಕಾಣಬೇಕಂತೆ ಎನ್ನುವ ಒಳಮನೆಯ ಮಾತುಗಳು ನಮ್ಮ ಕಿವಿಗಳಿಗೂ ತಲುಪುತ್ತಿದ್ದವು.  ನಿಧಾನವಾಗಿ ಬಾಗಿಲ ಹತ್ತಿರ ಬರುವ ಸದ್ದಾಗಿ ಉಳಿದಿಬ್ಬರು ಎದ್ದು ನಿಂತರು. ನಾನೂ ಎದ್ದವನು ಅವರನ್ನ ಕಂಡು ಅವಾಕ್ಕಾಗಿಬಿಟ್ಟೆ. ಅಕ್ಷರಶಃ ಕೋಲಿನ ಹಾಗಿದ್ದ ಅವರ ಮೈ ಒಂಚೂರೂ ಸ್ವಾಧೀನದಲ್ಲಿರಲಿಲ್ಲ…. ನಡುಗುತ್ತಿದ್ದ ಅವರ ದೇಹ, ದಟ್ಟನೆಯ ದಾಡಿ ಬೆಳೆದ ಅವರ ಮುಖ, ಹೊಳೆಯುತ್ತಿದ್ದದ್ದು ಕಣ್ಣುಗಳು ಮಾತ್ರ. ಔಷಧಿಗಳ ಪರಿಣಾಮ ಅವರ ಕಿವಿಯೂ ಕೇಳಿಸದಂತೆ ಆಗಿದೆ. ನಡುಗುತ್ತಾ ನಿಂತೇ ನಮ್ಮ ಪರಿಚಯ ಆದ ಮೇಲೆ ಪ್ರಯಾಸದಿಂದ ಕರೆತಂದು ಕುರ್ಚಿಯ ಮೇಲೆ ಕೂಡಿಸಲಾಯಿತು. ……… ನಡುಗುತ್ತಿದ್ದ ದೇಹವನ್ನು ಸ್ವಾಧೀನಕ್ಕೆ ತಂದುಕೊಳ್ಳಲು ಬಹಳ ಪ್ರಯತ್ನಪಟ್ಟರು. ……. ಸುಮ್ಮನೆ ನಡುಗುತ್ತಲೇ ಇದ್ದ ಅವರ ಕೈಗಳನ್ನು ಗಮನಿಸುತ್ತಿದ್ದೆ. ಜೀವದ ಹಾಗೆ ಅದು ಚಡಪಡಿಸುತ್ತಿತ್ತು. ….. ದುಗುಡ ಹೊತ್ತು ಅವರಿಂದ ಬೀಳ್ಕೊಂಡು ನಾವು ಹೊರಬಂದೆವು…. ಅವರನ್ನು ಕಂಡುಬಂದ ಒಂದಿಡೀ ದಿನ ಮನಸ್ಸು ಮುರಿದುಬಿದ್ದಿತ್ತು. ಯಾವುದನ್ನು ಮಾಡಲು ಹೊರಟರೂ ಅದೇ ಚಿತ್ರ ಕಣ್ಣಿಗೆ ಕಟ್ಟತೊಡಗಿತ್ತು. ಯಾವತ್ತೋ ಓದಿದ ಅವರ ಕಥೆಗಳನ್ನು ಮತ್ತೆ ಓದಬೇಕೆನಿಸಿ ಪುಸ್ತಕದ ಗೂಡಿನಲ್ಲಿ ತಡಕಾಡಿದೆ. ಆ ಪುಸ್ತಕ ಅವರ ಹಾಗೆ ಅಜ್ಞಾತವಾಗಿ ಇತ್ತು. ಭಾನುವಾರವಾದ್ದರಿಂದ ಆ ಇಡೀ ಪುಸ್ತಕ, ಏಳು ಕಥೆಗಳ ‘ಕಥಾ ಜಗತ್ತು  ತೆರೆದಿಟ್ಟುಕೊಂಡಿತು. …. ‘ ತಬ್ಬಲಿಗಳು ಕಥೆ ಖಾಸನೀಸರ ಮಾಸ್ಟರ್ ಪೀಸ್. ನವ್ಯೋತ್ತರ ಕಾಲದ ಮುಖ್ಯ ಕಥೆಗಳಲ್ಲಿ ಒಂದು. ಕೌಟುಂಬಿಕ ಹಿನ್ನಲೆಯ ಆತ್ಮಹತ್ಯೆಯೊಂದರ ಸುತ್ತಾ ಬಿಡಿಸಿಟ್ಟುಕೊಳ್ಳುವ ಕಥೆಯ ಶಿಲ್ಪ ….. ಮಂತ್ರಾಲಯದ ಪರಿಸರದಲ್ಲಿ ಕುಟುಂಬದ ಎಲ್ಲರೂ ತಮ್ಮ ತಮ್ಮ ನಿಜಗಳನ್ನು ಕಂಡುಕೊಳ್ಳುತ್ತಾ ಮಾನಸಿಕವಾಗಿ ಹಾಗೂ ಭೌತಿಕವಾಗಿ ಛಿದ್ರಗೊಳ್ಳುತ್ತಾರೆ ….. ಖಾಸನೀಸರ ಕಥಾಜಗತ್ತು ಕುಟುಂಬ,ಕೌಟುಂಬಿಕ ಕ್ರೌರ್ಯ, ಇವೆಲ್ಲದರ ಜೊತೆಗೆ ಮನುಷ್ಯರ ಅಸಹಾಯಕತೆ, ಅಸಹನೀಯತೆಗಳನ್ನು ತನ್ನ ವಿವರಗಳಲ್ಲಿ ಎತ್ತಿ ತೋರುತ್ತದೆ. ಇಂಥ ಪ್ರಬುದ್ಧ ಹಾಗೂ ಸೂಕ್ಷ್ಮ ಕಥೆಗಾರರಾದ ಅವರು ಬರೆದದ್ದು ಕಡಿಮೆ ಆದರೂ ನಮ್ಮಲ್ಲಿ ಅದನ್ನು ಕುರಿತು ಗಮನಹರಿಸಿದ್ದು ಇನ್ನೂ ಕಡಿಮೆ.

ಮತ್ತಷ್ಟು ಓದು »

4
ಆಗಸ್ಟ್

ನ್ಯಾಸ ಕಾದಂಬರಿಯ ವಿಮರ್ಶೆ

– ಚೈತನ್ಯ ಮಜಲುಕೋಡಿ

ಹರೀಶ ಹಾಗಲವಾಡಿಯವರ ನ್ಯಾಸ ಕಾದಂಬರಿಯನ್ನು ನನ್ನ ಸ್ನೇಹಿತರು ಓದು ಅಂತ ಹೇಳಿ ನನಗೆ ಹೇಳಿದ್ದರೂ ಕೂಡಾ, ಹಲವು ಬಾರಿ ನನಗೆ ಅದರ ಗಾತ್ರ ನೋಡಿ ಓದುವುದಕ್ಕೆ ಹೆದರಿಕೆಯಾಗಿತ್ತು. ಹಾಗೆಯೇ ಕಾದಂಬರಿಯ ವಸ್ತು ಸನ್ಯಾಸದ ಕುರಿತಾದುದಾದ್ದರಿಂದ, ಓದುವುದಕ್ಕೆ ಸ್ವಲ್ಪ ಸಿದ್ಧತೆಯೂ ಬೇಕು ಅಂತ ಅನ್ನಿಸ್ತಾ ಇತ್ತು. ಕಾದಂಬರಿಯನ್ನು ಓದುವುದಕ್ಕೆ ಕೈಗೆತ್ತಿಕೊಂಡ ಮೇಲೆ ನನ್ನ ಮೇಲೆ ಅಪಾರ ಪ್ರಭಾವ ಬೀರಿ ದಿನಗಟ್ಟಲೆ ಗುಂಗು ಹಿಡಿಯುವ ಹಾಗೆ ಮಾಡುವಷ್ಟು ಪ್ರಭಾವಶಾಲಿಯಾಗಿಬಿಟ್ಟಿತು. ಲೇಖಕರ ಮೊದಲ ಕಾದಂಬರಿ ಅಂತ ಗೊತ್ತೇ ಆಗದಷ್ಟು ನೈಪುಣ್ಯ, ಚಿಂತನೆಯ ಆಳ ವಿಸ್ತಾರ ಎರಡರಲ್ಲೂ ಪ್ರಶಾಂತ ಧಾಟಿಯಿಂದ ಒಳಗೊಳ್ಳುತ್ತಾ, ಹಲವು ಬಾರಿ ಭೈರಪ್ಪರ ಬರವಣಿಗೆಯ ನಿಬಿಡ ಶೈಲಿಯನ್ನು ಮತ್ತೆ ಮತ್ತೆ ನೆನೆಸುತ್ತ, ಅವರ ರಸ ಸೃಷ್ಟಿಯ ಪಾಕವು ಕಲೆಯ ಹದ ಮುಟ್ಟಿ ನಿರಪೇಕ್ಷ ಬರವಣಿಗೆ ಸಿದ್ಧಿಸಬೇಕು ಎಂಬ ಮಾತಿಗೆ ಪ್ರತ್ಯಕ್ಷ ನಿದರ್ಶನವಾಗಿ ಹೊರಹೊಮ್ಮಿದ ಸೊಗಸಾದ ಕೃತಿ. (ಈ ಮಾತನ್ನು ಅವರು ಎಲ್ಲಿ ಹೇಳಿದ್ದಾರೆಂದು ನನಗೆ ಮರೆತು ಹೋಗಿದೆ. ಆದರೂ ಎಲ್ಲೋ ಒಂದು ಕಡೆ ಅದರ ಉದ್ಧರಣೆ ಇದೆ) ಅದೂ ಅವರ ಇಪ್ಪೈದರ ತರುಣ ವಯಸ್ಸಿನಲ್ಲೇ ರೂಪುಗೊಂಡ ನಾನೂರು ಪುಟದ ಈ ಸಾಂದ್ರ ಬರಹ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ.
ಕತೆಯು ಸನ್ಯಾಸಿಗಳ ಜೀವನದ ಬವಣೆ ಬಾಧೆ ಸಿದ್ಧಿಗಳಲ್ಲೇ ಸುತ್ತುತ್ತ ಹೊರಡುವುದು ಅಚ್ಚರಿ ಮೂಡಿಸುತ್ತದೆ. ಭೈರಪ್ಪರ ಅನ್ವೇಷಣ ಕಥಾತಂತ್ರವನ್ನು ಹಲವು ಕಡೆ ಬಳಸಿಕೊಂಡಿದೆ. ಎಲ್ಲಿಯೂ ಯಾರದೂ ನಕಲಿಲ್ಲ. ನಕಲು ಮಾಡಲು ಈ ವಿಷಯವನ್ನು ಇಷ್ಟು ವಿಸ್ತಾರವಾಗಿ ಬರೆದ ಪುಸ್ತಕವೇ ಕನ್ನಡದಲ್ಲಿಲ್ಲ. ಸನ್ಯಾಸ ಕಾಶಿ ಹಿಮಾಲಯದ ಕುರಿತಾಗಿ ಭೈರಪ್ಪರ ನಿರಾಕರಣದಲ್ಲಿ ವಿಫುಲವಾಗಿ ವಿವರಗಳು ಇದ್ದರೂ ಕೂಡ, ಸನ್ಯಾಸಾಶ್ರಮಗಳ ಕುರಿತಾದ ವಿವರಣೆಗಳು ಎಲ್ಲಿಯೂ ಇಲ್ಲ. ಆ ಮಟ್ಟಿಗೆ ಈ ಕಾದಂಬರಿಯು ಹೊಚ್ಚ ಹೊಸತಾದ ಅನುಭವ. ಸರ್ವತಂತ್ರ ಸ್ವತಂತ್ರವಾಗಿ ವಿಫುಲ ಅಧ್ಯಯನ ಮತ್ತು ಅನುಭವ ಸಾಮಗ್ರಿಯ ಬಿಗಿಯು ನಿರಾತಂಕವಾದ ಕತೆಯ ಓಘಕ್ಕೆ ನೆರವಿತ್ತಿದೆ.

ಸನ್ಯಾಸಿಯಾದವನು ಸಮಾಜಕ್ಕೆ ತೆತ್ತುಕೊಂಡು ಲೋಕೋದ್ಧಾರಕ್ಕೆ ಸಮರ್ಪಿಸಿಕೊಳ್ಳಬೇಕು, ಸ್ವಂತಕ್ಕೆ ಸಾಧನೆಯನ್ನೂ ಮಾಡಬೇಕು ಎಂಬ ಘನ ಉದ್ದೇಶ ಹೊತ್ತು ಹೊರಡುವ ಸಂಸಾರ ವಿಮುಖವಾದ ಧೋರಣೆಯು ಹೇಗೆ ಮತ್ತೆ ಅದೇ ಪ್ರಪಂಚದ ಪಾಶ ಮೋಹಗಳಲ್ಲಿ ಸಿಲುಕಿ ಮಂಕಾಗಿ ಜನಪ್ರಿಯತೆಗೆ ಎರವಾಗುತ್ತ, ಜನಮನ್ನಣೆಗೆ ಹಿಗ್ಗುತ್ತ ಸಾಗಿ, ಕಡೆಯಲ್ಲಿ ಮೂಲೋದ್ದಿಶ್ಯವೇ ಮೂಲೋತ್ಪಾಟನೆಯಾದ ದಿಗ್ಭ್ರಮೆ ಬಹಳ ಕಡೆ ಓದುಗನನ್ನು ಚಿಂತನೆಗೆ ಹಚ್ಚುತ್ತದೆ. ತಂದೆ ತಾಯಿಗಳನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವೇ ಎಂಬಲ್ಲಿಂದ ಸಂನ್ಯಾಸದ ಅರ್ಥವೇನು ಎನ್ನುವವರೆಗೆ ನೂರಾರು ಮೂಲಭೂತ ಪ್ರಶ್ನೆಗಳನ್ನೆತ್ತುತ್ತ, ಅದಕ್ಕೆ ಪ್ರಾಮಾಣಿಕ ಉತ್ತರಗಳನ್ನೂ ತಡವುತ್ತ, ಹೆಚ್ಚು ಹೆಚ್ಚು ಆಲೋಚನೆಗೆ, ಜವಾಬ್ದಾರಿಯುತ ನಿರ್ಣಯ ನಡುವಳಿಕೆಗಳಿಗೆ ನಾವು ತೊಡಗಬೇಕೆಂಬ ಮಾನೋನ್ನತಿಗೂ ಕೃತಿಯು ಪ್ರೇರಣೆ ನೀಡುತ್ತದೆ.

ಮತ್ತಷ್ಟು ಓದು »

13
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೨ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಭಾಗ ೧

ಹಿನ್ನೆಲೆ:

ಭಾರತದ ಹಲವು ಪ್ರದೇಶಗಳ ಮೇಲೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ತನ್ನ ಹಿಡಿತವನ್ನು ಬಿಗಿಗೊಳಿಸಿ, ಅದರ ಆಡಳಿತಾಧಿಕಾರಿಗಳು ಆಳುವವರ ಸ್ಥಾನಕ್ಕೆ ಬಂದಾಗ, ಭಾರತೀಯ ಸಂಪ್ರದಾಯಗಳ ಕುರಿತಂತೆ ಒಂದು ವಿಶೇಷ ಹಗೆತನವು ವಸಾಹುತು ಆಡಳಿತ ನೀತಿಯ ಹೆಗ್ಗುರುತಾಯಿತು. ಈ ಹಗೆತನಕ್ಕೆ ಬಹಳ ಪುರಾತನ ಇತಿಹಾಸವಿರುವುದು ನಿಜ. ಹಿಂದೂಗಳ ‘ರಿಲಿಜನ್’ ಆದ ‘ಹಿಂದೂಯಿಸಂ’ನ ಪ್ರತಿ ಅಂಶವೂ ಅವರಿಗೆ ಆಕ್ಷೇಪಾರ್ಹ ಮತ್ತು ಅಸಂಗತವಾಗಿ ಕಂಡಿದ್ದು ಹಳೆಯ ವಿಚಾರ. ಬಾಲ್ಯವಿವಾಹ, ಸತಿ ಪದ್ಧತಿ ಮುಂತಾದ ಅಸಹನೀಯ ಮತ್ತು ಅನೈತಿಕ ಆಚರಣೆಗಳನ್ನು ಅವರು ಭಾರತದಲ್ಲಿ ‘ಕಂಡುಕೊಂಡಿದ್ದರಿಂದ’ ಮಾತ್ರವೇ ಈ ಹಗೆತನವು ಬೆಳೆದದ್ದಲ್ಲ. ಅವರ ಹಗೆತನಕ್ಕೆ ಸಾಕಷ್ಟು ಆಳವಾದ ಬೇರುಗಳಿವೆ: ತಮ್ಮ ರಿಲಿಜನ್ನಿನ ಕನ್ನಡಕದಿಂದ ನೋಡಿದಾಗ, ಇಂತಹ ವಿಕೃತ ಆಚರಣೆಗಳು ಸುಳ್ಳು ರಿಲಿಜನ್ಗಳ ಅವಿಭಾಜ್ಯ ಅಂಗಗಳು ಎಂದು ಅವರಿಗೆ ಅನಿಸಿತ್ತು. ‘ಹಿಂದೂಯಿಸಂ’ ಎನ್ನುವುದು ಸುಳ್ಳು ಮತ್ತು ಅವನತಿ ಹೊಂದಿದ ರಿಲಿಜನ್ನಾದ್ದರಿಂದ, ಇಂತಹ ಅರ್ಥಹೀನ ವಿಕೃತ ಆಚರಣೆಗಳು ಕೇವಲ ಆಕಸ್ಮಿಕಗಳಲ್ಲ, ಬದಲಿಗೆ ಅದರ ಅಗತ್ಯ ಲಕ್ಷಣಗಳು ಎಂದು ಅವರು ನಂಬಿದ್ದರು. ಮತ್ತಷ್ಟು ಓದು »