ನಕಲಿ ಜಾತಿ ಪ್ರಮಾಣ ಪತ್ರ ತೋರಿಸಿ 5 ಮೊಟ್ಟೆ ತಿಂದ ವಿದ್ಯಾರ್ಥಿ (ಸುಳ್ಸುದ್ದಿ)
– ಪ್ರವೀಣ್ ಕುಮಾರ್ ಮಾವಿನಕಾಡು
ಬಿಗ್ ಬಾಸ್ ನಲ್ಲೂ ಮೀಸಲಾತಿಗೆ ಒತ್ತಾಯ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಬಿಗ್ ಬಾಸ್ ನಲ್ಲೂ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪ್ರಗತಿಪರ ಹೋರಾಟಗಾರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಖಾಸಗಿ ಚ್ಯಾನಲ್ ಗಳು ನಡೆಸುವ ಬಿಗ್ ಬಾಸ್ ಸ್ಪರ್ಧೆಗಳಲ್ಲೂ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪ್ರಗತಿಪರ ಹೋರಾಟಗಾರರ ಸಂಘದ ಕಾರ್ಯಕರ್ತರು ನಗರದಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು. ಚಿನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ಪ್ರ.ಹೋ.ಸಂ. ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀಸಲಾತಿ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಘೋಷಣೆಗಳನ್ನು ಕೂಗಿದರು. ಮತ್ತಷ್ಟು ಓದು
ರಾಹುಲ್ ಗಾಂಧಿಗೆ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧಾರ: ಸಿಎಂ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಮೂಲಕ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಮೂರನೇ ಮಹಡಿಯಲ್ಲಿ ನಡೆದ ತುರ್ತು ಸಚಿವ ಸಂಪುಟದ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ಈ ಬಗ್ಗೆ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿದ್ದು ಮುಂದಿನ ಶುಕ್ರವಾರ ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಅವರಿಗೆ ಬಿ.ಪಿ.ಎಲ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು. ಅದಕ್ಕಾಗಿ ಅಂದು ಅರ್ಧ ಗಂಟೆ ಭೇಟಿಯಾಗಲು ಅವರ ಬಳಿ ಸಮಯ ಕೇಳಿ ಪತ್ರ ಬರೆದಿದ್ದು ಪಕ್ಷಾಧ್ಯಕ್ಷರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಮತ್ತಷ್ಟು ಓದು
ಮೋದಿ ಭಾರತದಲ್ಲಿ ತೀವ್ರಗೊಂಡ ನಿರುದ್ಯೋಗ ಸಮಸ್ಯೆ : ಚಿಂತಾಜನಕ ಮಾಹಿತಿ (ಸುಳ್ಸುದ್ದಿ)
ಪ್ರವೀಣ್ ಕುಮಾರ್, ಮಾವಿನಕಾಡು
ನವದೆಹಲಿ, ಡಿಸೆಂಬರ್ 2 : ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಿಂದೆಂದಿಗಿಂತಲೂ ತೀವ್ರವಾಗಿದೆ. ಕಳೆದ ಹನ್ನೆರಡು ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದೇಶದಲ್ಲಿ ತಾಂಡವವಾಡುತ್ತಿರುವುದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.
ಕಳೆದ ನವೆಂಬರ್.8 ನೇ ತಾರೀಕಿನಿಂದ ದೇಶದಲ್ಲಿ ಇಲ್ಲಿಯವರೆಗೆ 15 ರಿಂದ 65 ರ ವಯಸ್ಸಿನ ಸುಮಾರು 8% ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸೆಂಟ್ರಲ್ ಗಂಜಿ ಬ್ಯೂರೋ ನಡೆಸಿದ ಉದ್ಯೋಗ-ನಿರುದ್ಯೋಗ ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಮತ್ತಷ್ಟು ಓದು
ಸರ್ಕಾರದಿಂದ ವೀರಪ್ಪನ್ ಜಯಂತಿಗೆ ಸಕಲ ಸಿದ್ಧತೆ: ಬರುವ ಯುಗಾದಿಗೆ ದಿನ ನಿಗದಿ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಬೆಂಗಳೂರು: ರಾಜ್ಯದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ವೀರಪ್ಪನ್ ಜಯಂತಿ ಅಂಗವಾಗಿ ಮೊನ್ನೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಈ ಸಾಲಿನಿಂದ ಸರ್ಕಾರದ ಹಣದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲಾಗುವುದು ಮತ್ತು ಮೊದಲ ವರ್ಷದ ವೀರಪ್ಪನ್ ಜಯಂತಿಯನ್ನು ಬರುವ ಯುಗಾದಿಯಂದು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಂದು ರಾಜ್ಯದಾದ್ಯಂತ ವೀರಪ್ಪನ್ ಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುತ್ತಿದ್ದು, ಎಲ್ಲೆಡೆ ವೀರಪ್ಪನ್ ಅವರ ಭಾವಚಿತ್ರದ ಮೆರವಣಿಗೆಯನ್ನು ಮಾಡಲಾಗುವುದು ಎಂದರು. ಮತ್ತಷ್ಟು ಓದು
ಕಲೆಕ್ಷನ್ ಹಣ ಹಂಚಿಕೆ ವಿಚಾರಕ್ಕೆ ಗಂಜಿ ಚಲೋ ನಾಯಕರ ಮಾರಾಮಾರಿ: ಐವರಿಗೆ ಗಾಯ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಕೆಲವು ದಿನಗಳ ಹಿಂದೆ “ಗಂಜಿಗಾಗಿ ಚಲೋ” ಎನ್ನುವ ಕಾರ್ಯಕ್ರಮ ಮಾಡಿದ್ದ ತಂಡವೊಂದು ಆ ಕಾರ್ಯಕ್ರಮಕ್ಕೆಂದು ಕಲೆಕ್ಷನ್ ಮಾಡಿದ್ದ ಹಣವನ್ನು ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಮಾಡಿಕೊಂಡು ಪರಸ್ಪರ ಬಡಿದಾಡಿ ಆಸ್ಪತ್ರೆ ಸೇರಿದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯ ಹಿನ್ನೆಲೆ: ಕೆಲವು ದಿನಗಳ ಹಿಂದೆ ನಕ್ಸಲ್ ಹೋರಾಟಗಾರರು, ಅನ್ಯ ಕೋಮಿನ ಕೆಲವರ ಬೆಂಬಲದೊಂದಿಗೆ ಕೆಲ ದಪಹೋಗಾರರ ಜೊತೆ ಸೇರಿ ಗಂಜಿಗಾಗಿ ಚಲೋ ಎನ್ನುವ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವುದಾಗಿ ಹೇಳಿಕೊಂಡಿದ್ದ ಆ ಹೋರಾಟಗಾರರು ತಳಮಟ್ಟದ ಶೋಷಿತರಷ್ಟೇ ಅಲ್ಲದೇ ರಾಜಕಾರಣಿಗಳೂ ಸೇರಿದಂತೆ ಹಲವಾರು ಜನರಿಂದ ರೂ.500 ರಿಂದ ಐವತ್ತು ಸಾವಿರದವರೆಗೆ ಹಣವನ್ನು ಕಲೆಕ್ಷನ್ ಮಾಡಿದ್ದರು. ಕಲೆಕ್ಷನ್ ಆದ ಆ ಹಣದ ಒಟ್ಟು ಮೊತ್ತ ಸುಮಾರು ಎರಡು ಕೋಟಿಗೂ ಮೀರಿತ್ತು. ಆದರೆ ಒಂದು ಲಕ್ಷ ಜನರು ಸೇರುತ್ತಾರೆ ಎಂದು ಬಿಂಬಿತವಾಗಿದ್ದ ಆ ಕಾರ್ಯಕ್ರಮಕ್ಕೆ ಸೇರಿದ್ದು ಕೇವಲ 632 ಜನ ಮಾತ್ರ! ಕಾರ್ಯಕ್ರಮಕ್ಕೆ ಖರ್ಚಾಗಿದ್ದು ಕೇವಲ ನಾಲ್ಕೂವರೆ ಲಕ್ಷಗಳು! ಇದರಿಂದಾಗಿ ಬರೋಬ್ಬರಿ ಎರಡು ಕೋಟಿ ರೂಪಾಯಿಗಳಷ್ಟು ಹಣ ಹೋರಾಟಗಾರರ ಬಳಿಯೇ ಉಳಿಯಿತು. ಇದನ್ನು ಮೊದಲೇ ಯೋಚಿಸಿದ್ದ ಕಾರ್ಯಕ್ರಮದ ಆಯೋಜಕರಾದ ಹೋರಾಟಗಾರರು ಮುಂದಿನ ವಾರ ಎಲ್ಲರೂ ತುಮಕೂರು ರಸ್ತೆಯ “ಫಿಶ್ ಲ್ಯಾಂಡ್ ಢಾಬಾ” ದಲ್ಲಿ ಕೂತು ಹಂಚಿಕೊಳ್ಳುವುದೆಂದು ತೀರ್ಮಾನಿಸಿ ಕಾರ್ಯಕ್ರಮಕ್ಕೆ ತಮ್ಮ ತನು-ಮನವನ್ನು ಅರ್ಪಿಸಿದ್ದ ರಾಜಕಾರಣಿಯೊಬ್ಬರ ಸಲಹೆಗಾರರ ಕೈಲಿ ಆ ಹಣವನ್ನು ಕೊಟ್ಟು ತಮ್ಮ ತಮ್ಮ ಮನೆಗಳನ್ನು ತಲುಪಿದ್ದರು. ಮತ್ತಷ್ಟು ಓದು
ಪ್ರಾರ್ಥನಾ ಮಂದಿರ ವಶಕ್ಕೆ ಸರ್ಕಾರದ ಚಿಂತನೆ: ಭುಗಿಲೆದ್ದ ಆಕ್ರೋಶ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಕಲಾಸಿಪಾಳ್ಯದಲ್ಲಿರುವ ಪ್ರಾರ್ಥನಾ ಮಂದಿರವೊಂದನ್ನು ಸರ್ಕಾರ ವಶಕ್ಕೆ ಪಡೆಯಲು ತೀರ್ಮಾನಿಸಿದೆ. ಈ ಬಗ್ಗೆ ಗುರುವಾರ ನೋಟೀಸ್ ನೀಡಲಾಗಿದ್ದು ನಾಲ್ಕು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ. ಈ ಪ್ರಾರ್ಥನಾ ಮಂದಿರವನ್ನು ಹೇಗಾದರೂ ಮಾಡಿ ವಶಪಡಿಸಿಕೊಳ್ಳಲೇಬೇಕು ಎನ್ನುವ ಹಠವಿದ್ದು ಅದೇ ಕಾರಣಕ್ಕೆ ಕೇವಲ ನಾಲ್ಕೇ ದಿನ ಸಮಯ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೋಟೀಸ್ ನೀಡಿದ್ದಾರೆ ಎಂದು ಸೌಹಾರ್ದಗೇಡು ವೇದಿಕೆ ದೂರಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ನಿವೃತ್ತರಾಗಲಿದ್ದು ಈ ಹಂತದಲ್ಲಿ ಪ್ರಾರ್ಥನಾ ಮಂದಿರವನ್ನು ವಶಕ್ಕೆ ಪಡೆಯುವ ಕುರಿತು ನೋಟೀಸ್ ನೀಡಿರುವುದು ಕರ್ನಾಟಕದ ಹಲವು ಬುದ್ದಿಜೀವಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ನಿವೃತ್ತಿಯ ಹಂತದಲ್ಲಿ ಇಂತಹಾ ಪ್ರಮುಖ ನಿರ್ಧಾರಗಳನ್ನು ಯಾರೂ ತೆಗೆದುಕೊಳ್ಳುವುದಿಲ್ಲ. ಆದರೆ ಒಮ್ಮೆ ಪ್ರಾರ್ಥನಾ ಮಂದಿರವನ್ನು ವಶಕ್ಕೆ ಪಡೆದ ನಂತರ ನಿವೃತ್ತಿಯಾದರೆ ಅದರಿಂದ ಮುಂದೆ ಆಗಬಹುದಾದ ಅಪಾಯಗಳಿಂದ ತಪ್ಪಿಸಿಕೊಳ್ಳುವ ಹುನ್ನಾರ ಇದರಲ್ಲಿದೆ ಎಂದು ಜಾತ್ಯತೀತ ಸಂಘಟನೆಯ ಪ್ರಮುಖರು ತಮ್ಮ ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ಓದು
ಸಂಪುಟ ಪುನಾರಚನೆಯ ಸುದ್ದಿ ಕೇಳಿ ದಿಕ್ಕಾಪಾಲಾಗಿ ಓಡಿದ ಜನ
ಪ್ರವೀಣ್ ಕುಮಾರ್, ಮಾವಿನಕಾಡು
ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಪಕ್ಷದ ಹಲವಾರು ಹಿರಿಯ ಮುಖಂಡರು, ಹಲವು ಜಾತಿಯ ನಾಯಕರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರಿಂದಾಗಿ ಇನ್ನೆರಡು ದಿನಗಳಲ್ಲಿ ಕೆಲವು ಸಚಿವರನ್ನು ಕೈ ಬಿಟ್ಟು ಅವರ ಬದಲಿಗೆ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತೊಮ್ಮೆ ಮಂತ್ರಿಮಂಡಲವನ್ನು ಪುನರ್ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇಂದು ತಿಳಿಸಿದರು. ಮತ್ತಷ್ಟು ಓದು
ಭಿಕ್ಷೋದ್ಯಮ ಕ್ಷೇತ್ರದಲ್ಲೂ ಮೀಸಲಾತಿಗಾಗಿ ಬಡಿದಾಡಿ: ಕಾಣೇಶ್ ಜಲ್ಲಿಕಟ್ಟು ಸಲಹೆ (ಸುಳ್ಸುದ್ದಿ)
ಕಡಿಮೆ ಸಂಖ್ಯೆಯಲ್ಲಿರುವ ಸರಕಾರೀ ಹುದ್ದೆಗಳಿಗಾಗಿ ಹೊಡೆದಾಡುತ್ತಾ ಕುಳಿತರೆ ಉತ್ತಮ ಲಾಭವಿರುವ ಭಿಕ್ಷೋದ್ಯಮ ಬಲಾಢ್ಯರ ಪಾಲಾಗುತ್ತದೆ. ಆದ್ದರಿಂದ ಭಿಕ್ಷೋದ್ಯಮ ಕ್ಷೇತ್ರದತ್ತಲೂ ಗಮನ ಹರಿಸಿ, ಅಲ್ಲಿಯೂ ಮೀಸಲಾತಿ ಜಾರಿಗೆ ಹೋರಾಟ ನಡೆಸುವ ಮೂಲಕ ಶೋಷಿತರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ಬುದ್ದಿಜೀವಿ ಪತ್ರಕರ್ತ ರಾಜಕಾರಣಿ ಶ್ರೀ ಕಾಣೇಶ್ ಜಲ್ಲಿಕಟ್ಟು ಸಲಹೆ ನೀಡಿದರು. ಅವರು ಶಿವಮೊಗ್ಗದಲ್ಲಿ ನಿನ್ನೆ ‘ಪ್ರಗತಿಪರ ಬರ್ನ್ ಆಲ್ ವೇದಿಕೆ’ ಹಮ್ಮಿಕೊಂಡಿದ್ದ “ಮೋದಿ ವಿರೋಧಿಗಳ ತವಕ ತಲ್ಲಣಗಳು” ಎನ್ನುವ ವಿಚಾರಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮತ್ತಷ್ಟು ಓದು
ಪಂಚ ಭೂತಗಳಲ್ಲಿ ಲೀನವಾದ ವಿಚಾರವಾದ! (ಸುಳ್ಸುದ್ದಿ)
-ಪ್ರವೀಣ್ ಕುಮಾರ್, ಮಾವಿನಕಾಡು
ಖ್ಯಾತ ವಿಚಾರವಾದಿ, ಸಾಹಿತಿ, ಬುದ್ಧಿಜೀವಿ, ಹಿಂದೇ ಎನ್ನುವ ಹೆಸರಿನಿಂದಲೇ ಪ್ರಖ್ಯಾತರಾಗಿದ್ದ ಹಿಂದೂಪುರ ದೇವಮೂರ್ತಿಯವರು ವಯೋಸಹಜ ಖಾಯಿಲೆಗಳ ಪರಿಣಾಮ ನಿನ್ನೆ ತಮ್ಮ ಸ್ವಗೃಹ ‘ದೇವಿ ಕೃಪಾ’ ದಲ್ಲಿ ಮೃತರಾದರು. ಅವರಿಗೆ ಎಪ್ಪತ್ಮೂರು ವರ್ಷ ವಯಸ್ಸಾಗಿತ್ತು. ಅವರು ಮುಜರಾಯಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್ ಜೋಸೆಫ್ ಮತ್ತು ಮಗಳು ದೇವಿಶ್ರೀ, ಅಳಿಯ ಅಮೆರಿಕಾದಲ್ಲಿ ಖ್ಯಾತ ಪುರೋಹಿತರಾಗಿರುವ ಕ್ರಿಷ್ ಭಟ್ ಮತ್ತು ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮತ್ತಷ್ಟು ಓದು