ಸಾವಿರ ರುಪಾಯಿಯ ಫೋಟೋ ಮತ್ತು ಲಕ್ಷದ ಪ್ರಚಾರ
ಡಾ ಅಶೋಕ್ ಕೆ ಆರ್.
ವೈಯಕ್ತಿಕ ವಿಷಯದಿಂದ ಲೇಖನವೊಂದನ್ನು ಪ್ರಾರಂಭಿಸುವುದು ಅಷ್ಟೇನೂ ಸರಿಯಲ್ಲವಾದರೂ ಈ ಲೇಖನಕ್ಕೆ ಪೂರಕವಾಗಿರುವ ಘಟನೆಯಾಗಿರುವುದರಿಂದ ಹೇಳುತ್ತಿದ್ದೇನೆ, ಕ್ಷಮೆಯಿರಲಿ. ಮದುವೆಯಾಗುವ ದಿನ ಹೊಸದೇನನ್ನಾದರೂ ಮಾಡಬೇಕೆಂಬ ಆಸೆಯಿಂದ ನನ್ನ ಗೆಳೆಯನೊಬ್ಬ ಮದುವೆಗೆ ಬಂದವರಿಗೆಲ್ಲ ಒಂದೊಂದು ಗಿಡ ಹಂಚಿದ್ದ, ಒಟ್ಟು ಎರಡು ಸಾವಿರ ಗಿಡಗಳು. ಬಂದವರಿಗೆಲ್ಲ ಯಾವುದಾದರೊಂದು ಪುಸ್ತಕವನ್ನು ತಾಂಬೂಲದ ರೂಪದಲ್ಲಿ ಕೊಡಬೇಕೆಂಬುದು ನನ್ನಾಸೆಯಾಗಿತ್ತು. ಮದುವೆ ನಿಶ್ಚಿತವಾಗುವಷ್ಟರೊಳಗೆ ನನ್ನದೇ ಹದಿನೈದರಷ್ಟು ಕಥೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕಾರಣ ನನ್ನದೇ ಕಥಾ ಸಂಕಲನ ಬಿಡುಗಡೆಗೊಳಿಸಿ ಮದುವೆಮನೆಯಲ್ಲೇ ತಾಂಬೂಲದ ಜೊತೆಗೆ ಕೊಡುವ ನಿರ್ಧಾರವೂ ಆಯಿತು. ಮಾಧ್ಯಮದವರನ್ನೂ ಕರೆಯುವ ತೀರ್ಮಾನವನ್ನೂ ಕೈಗೊಂಡೆವು. ಮದುವೆ ದಿನ ತಾಳಿ ಕಟ್ಟಿದ ಮೇಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮಾಧ್ಯಮದವರು ವಿಡಿಯೋ ಕ್ಯಾಮೆರಾಗಳ ಜೊತೆಗೆ ಬಂದು ಮುಂದಿನ ಸಾಲಿನಲ್ಲಿ ಆಸೀನರಾಗಿದ್ದರು. ಆಗ ಗಾಬರಿಯಾಗಿದ್ದು ಹುಡುಗಿ ಮತ್ತು ನನ್ನ ಮನೆ ಕಡೆಯ ನೆಂಟರು!! ಕೆಲವರಿಗಷ್ಟೇ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿಸಿದ್ದೆವು, ಇನ್ನುಳಿದವರಿಗೆ ಅಂದೇ ತಿಳಿಯಲಿ ಎಂದು ಸುಮ್ಮನಿದ್ದೆವು. ಮೀಡಿಯಾದವರು ಕ್ಯಾಮೆರ ಸಮೇತ ದಾಂಗುಡಿಯಿಟ್ಟಿದ್ದು ಕಂಡು ಗಾಬರಿಗೊಂಡ ಜನ ಅವರ ಬಳಿ ಹೋಗಿ ಏನು ಸಮಾಚಾರ ಎಂದು ವಿಚಾರಿಸಿ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿದು ನಿಟ್ಟುಸಿರುಬಿಟ್ಟರು!! ಜನ ಗಾಬರಿಗೊಂಡಿದ್ದಾದರೂ ಯಾಕೆ? ಯಾವುದೇ ದೃಶ್ಯ ಮಾಧ್ಯಮದಲ್ಲಿ ಮದುವೆಯ ಸುದ್ದಿ ಬರುವುದು ಹುಡುಗ/ಹುಡುಗಿ ಓಡಿ ಹೋದಾಗ ಅಥವಾ ಮತ್ಯಾವುದೋ ರಂಪ ರಾಮಾಯಣವಾದಾಗ. ಮಾಧ್ಯಮದವರಿದ್ದಾರೆಂದರೆ ಅಲ್ಲೇನೋ ಕೆಟ್ಟದ್ದು ನಡೆಯುತ್ತಿದೆ ಎಂಬ ಭಾವನೆಯೇ ತುಂಬಿ ಹೋಗಿದೆ ಜನರಲ್ಲಿ. ಅದೇ ಕಾರಣದಿಂದ ನನ್ನ ಮದುವೆಯ ದಿನ ನೆಂಟರಿಷ್ಟರು ಗಾಬರಿಯಾಗಿದ್ದರು! ಇದು ನಮ್ಮ ಮಾಧ್ಯಮಗಳು ಬೆಳೆಸಿಕೊಂಡಿರುವ ಪ್ರಭಾವಳಿ! ಮತ್ತಷ್ಟು ಓದು
ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ
-ಭರತ್ ಬಿಕೆ
ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂
ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)
ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ? ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??
ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??
ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??
ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ
– ಜಯಪ್ರಕಾಶ್ ಪಿ., ಕರುನಾಡ ದನಿ

ಸಾಮಾಜಿಕ ಕಳಕಳಿಯೆಂದರೆ…..
-ಡಾ.ಅಶೋಕ್ ಕೆ.ಆರ್
ಸುಂದರ್ ರಾಜ್ ನೆನಪಿಸಿಕೊಂಡಂತೆ ಅಂಬರೀಷ್ !
– ಶ್ರೀಧರ್ ಜಿ ಸಿ ಬನವಾಸಿ
ಅಂಬರೀಷ್ ಜೊತೆಗಿನ ನನ್ನ ಸ್ನೇಹವನ್ನು ಈ ಮೂಲಕ ವರ್ಣಿಸೋದು ತುಂಬಾ ಕಷ್ಟ. ಅಂಬರೀಷ್ ಜೊತೆಗಿನ ನನ್ನ ಒಡನಾಟ, ಸ್ನೇಹ, ಓಡಾಟ, ಕೆಲಸಮಾಡಿದ್ದು ನನಗೆ ಬೆಟ್ಟದಷ್ಟು ಅಪಾರ ನೆನಪುಗಳು ನನ್ನ ಮನಸ್ಸಿನಲ್ಲಿವೆ. ಆತ ಹೀಗೆ ಅಂತ ಹೇಳೋದು ತುಂಬಾ ಕಷ್ಟ, ಆತನ ತರಹ ನೀವಾಗಬೇಕು ಅಂತಾನೂ ಹೇಳೋದು ತುಂಬಾ ಕಷ್ಟ. ಅಂಬರೀಷನಿಗೆ ಅಂಬರೀಷನೇ ಸಾಟಿ. ಅಂಬರೀಷ್ ಯಾಕೆ ಇಷ್ಟವಾಗ್ತಾರೆ ಅಂತ ಅವರನ್ನ ಇಷ್ಟಪಡೋ ಎಲ್ಲರನ್ನು ಕೇಳಿ ಒಬ್ಬೋಬ್ಬರು ಆತನನ್ನು ಒಂದೊಂದು ರೀತಿಯಲ್ಲಿ ವರ್ಣಿಸುತ್ತಾರೆ. ಹಾಗಾಗಿ ಅಂಬರೀಷ್ ಇಷ್ಟವಾಗಲು ಬಹಳಷ್ಟು ಕಾರಣಗಳಿವೆ. ಕನ್ನಡಚಿತ್ರರಂಗವೇಕೇ, ರಾಜಕೀಯ, ಬೇರೆ ಚಿತ್ರರಂಗ, ರಾಜ್ಯ ರಾಜಕೀಯ, ದೆಹಲಿ ರಾಜಕೀಯದ ವ್ಯಕ್ತಿಗಳು ಕೂಡ ಆತನನ್ನು ಇಷ್ಟಪಡುತ್ತಾರೆ. ಆತನ ವ್ಯಕ್ತಿತ್ವೇ ಅಂತಹದ್ದು. ಅಜಾತಶತ್ರು, ಹುಂಬತನ, ಎದೆಗಾರಿಕೆ, ಬೇರೆಯವರಿಗೆ ಮರುಗುವ ಮನಸ್ಸು ಆತನ ಗುಣಗಾನ ಮಾಡುವುದು ನಿಜವಾಗಿಯೂ ಕಷ್ಟ ಸಾಧ್ಯ. ಇಂತಹ ಅಂಬರೀಷ್ ನನ್ನ ಆತ್ಮೀಯ ಸ್ನೇಹಿತ ಅನ್ನುವುದೇ ನನ್ನ ಹೆಮ್ಮೆಗೆ ಕಾರಣ.
ಅಂಬಿ ‘ನಾನೊಬ್ಬ ಅದ್ಭುತ ನಟ’ ಅಂತ ಎಲ್ಲೂ, ಯಾರ ಹತ್ತಿರವೂ ಹೇಳಿಕೊಂಡವರಲ್ಲ. ಆದರೆ, ವ್ಯಕ್ತಿಯಾಗಿ, ಸಮಾಜದ ಶಕ್ತಿಯಾಗಿ, ಉತ್ತಮ ಮನುಷ್ಯನಾಗಿ ಅಂಬಿಗೆ ಅಂಬಿಯೇ ಸಾಟಿ. ಇಂಥ ವೈವಿಧ್ಯತೆಯ ಮನುಷ್ಯನನ್ನು ಎಲ್ಲಿ ಹುಡುಕಿದರೂ ಸಿಕ್ಕುವುದಿಲ್ಲ. ಆ ದಿನಗಳಲ್ಲಿ ನನಗೆ ಅಂಬಿ ಕಂಡರೆ ಸಣ್ಣ ಒಳ್ಳೆಯ ಹೊಟ್ಟೆಕಿಚ್ಚಂತೂ ಇತ್ತು, ಏನಪ್ಪಾ ಈ ಮನುಷ್ಯ ಪುಟ್ಟಣ್ಣನಂತಹ ನಿರ್ದೇಶಕರ ಮನಸ್ಸನ ಹೇಗಂಪಾ ಗೆದ್ದು ಬಿಟ್ಟಿದ್ದಾನೆ. ನಾವೇನೋ ಬಾಲಚಂದರ್ ಸಿನಿಮಾಗಳಲ್ಲಿ ಗುರುತಿಸಿಕೊಂಡುಬಿಟ್ಟಿದ್ವಿ. ಆದರೆ ಪುಟ್ಟಣ್ಣರ ಸಿನಿಮಾಗಳಲ್ಲಿ ನಮಗೆ ಅವಕಾಶ ಸಿಕ್ಕಿರಲಿಲ್ಲ. ಈತನ್ನ ನೋಡಿದ್ರೆ ಪುಟ್ಟಣ್ಣನವರ ಹೆಚ್ಚಿನ ಸಿನಿಮಾಗಳಲ್ಲಿ ಚಾನ್ಸ್ ತಗೋತಾ ಇದಾನೆ. ಪುಟ್ಟಣ್ಣ ಕಣಗಾಲ್ ಗುರುಕೃಪೆಗೆ ಹೆಚ್ಚು ಒಳಗಾದ ನಟ ಅಂಬರೀಶ್ನನ್ನು ಕಂಡಾಗ ಈ ರೀತಿಯ ಅವ್ಯಕ್ತ ಅಸೂಹೆಯ ಪ್ರೀತಿ ಆತನ ಮೇಲಿತ್ತು. ಆದರೆ ಅಂಬರೀಷ್ ತನ್ನ ನಿಷ್ಕಲ್ಮಶ ಪ್ರೀತಿಯಿಂದ ನನ್ನನ್ನು ಗೆದ್ದುಬಿಟ್ಟಿದ್ದ.
ಡಬ್ಬಿಂಗ್ ಅವಶ್ಯಕವೇ?


ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?
– ರೂಪ ರಾವ್
ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.
ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.
ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?
ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
ಮತ್ತಷ್ಟು ಓದು
’ಸತ್ಯ ಮೇವ ಜಯತೇ’ ಅನ್ನಲು ಕನ್ನಡಿಗರು ಅಪ್ಪಣೆ ಪಡೆಯಬೇಕಾ?
– ರಾಕೇಶ್ ಶೆಟ್ಟಿ
ಕಳೆದ ವರ್ಷ ‘ಕನ್ನಡ ಚಲನ ಚಿತ್ರ ಅಕಾಡೆಮಿ’ಯು ಬಿಡುಗಡೆ ಮಾಡಿದ್ದ ವರದಿ ಡಬ್ಬಿಂಗ್ ಪರವಾಗಿತ್ತು.ಆ ವರದಿ ಬಿಡುಗಡೆಯಾದ ತಕ್ಷಣ ಚಿತ್ರರಂಗದ ಬಹುತೇಕ ಮಂದಿ ನಾಗಾಭರಣರ ಮೇಲೆ ಮುಗಿಬಿದ್ದರು.ಕಡೆಗೆ ಅವ್ರು ವರದಿಯನ್ನ ಹಿಂಪಡೆದರು.ಇಲ್ಲಿ ನಷ್ಟ ಆಗಿದ್ದು ಯಾರಿಗೆ? ಕನ್ನಡ ಚಿತ್ರ ರಂಗಕ್ಕಾ? ಅಲ್ಲ … ಕನ್ನಡ ಪ್ರೇಕ್ಷಕನಿಗೆ.
ಇಷ್ಟಕ್ಕೂ, ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”
ಡಬ್ಬಿಂಗ್ ಯಾಕೆ ಬೇಡ ಅಂದ್ರೆ, ಅದರಿಂದ ಕನ್ನಡದ ಮಕ್ಕಳಿಗೆ ಕೆಲಸವಿರೋದಿಲ್ಲ ಅಂತ ಹಳೆ ಕತೆ ಹೇಳ್ತಾ ಇದ್ದಾರೆ.ಈಗ ಬರ್ತಾ ಇರೋ ಅದಿನ್ನೆಷ್ಟು ಚಿತ್ರಗಳಲ್ಲಿ ಕನ್ನಡದ ಕಲಾವಿದರು,ತಂತ್ರಜ್ಞರು,ನಟಿಯರು,ಪೋಷಕ ನಟರು,ಖಳನಟರು,ಸಂಗೀತ ನಿರ್ದೇಶಕರು,ಗಾಯಕ-ಗಾಯಕಿಯರಿಗೆ ಕೆಲ್ಸ ಇದೆ?,ಎಲ್ಲದಕ್ಕೂ ಬೇರೆ ಭಾಷೆಯವರೇ ಬೇಕು.ಆಗ ಮಾತ್ರ ಯಾರು ಕನ್ನಡ ಮಕ್ಕಳಿಗೆ ಅನ್ಯಾಯವಾಗ್ತಾ ಇದೆ ಅಂತ ಉಸಿರೆತ್ತುವುದಿಲ್ಲ. ಭಾಷೆಯ ಉಚ್ಚಾರಣೆ ಬರದೆ ಇದ್ರೂ ನಮಗೆ ಬಾಲಿವುಡ್ ಗಾಯಕರು ಬಂದು ಉಸಿರು ಕಟ್ಟಿ ಹಾಡ್ಬೇಕು,ಬಾಯಿ ಅಲ್ಲಾಡಿಸಲು ಬರದ ಖಳ ನಟರು ಅಲ್ಲಿಂದಲೇ ಬರಬೇಕು.ಒಟ್ಟಿನಲ್ಲಿ ಬೇರೆ ಕಡೆಯಿಂದ ಜನ ಆಮದಾದಷ್ಟು ಚಿತ್ರ ಅದ್ದೂರಿ ಅನ್ನೋ ಭ್ರಮೆ! ಈಗಲೂ ಕನ್ನಡದ ಮಕ್ಕಳಿಗೆ ಆಗುತ್ತಿರುವುದು ಅನ್ಯಾಯವೇ ಅಲ್ಲವೆ?
ಇಷ್ಟಕ್ಕೂ ಡಬ್ಬಿಂಗ್ಗೆ ಅವಕಾಶ ಕೊಟ್ರೆ ಎಲ್ರೂ ಅದೇ ಮಾಡ್ತಾರೆ ಅನ್ನೋ ಅತಂಕವಿದ್ದರೆ,ಅದಕ್ಕಾಗಿ ಕೆಲ ನೀತಿ ನಿಯಮಗಳನ್ನ ಮಾಡಿಕೊಳ್ಳಬಹುದು. ಡಬ್ಬಿಂಗ್ ಮಾಡುವ ಹಕ್ಕನ್ನ ಮುಕ್ತವಾಗಿಡದೆ ‘ವಾಣಿಜ್ಯ ಮಂಡಳಿ’ ಯೇ ಆಯ್ದ ಚಿತ್ರಗಳನ್ನ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡಬಹುದು.ಹಾಗೆ ಡಬ್ಬಿಂಗ್ ಮಾಡಿದ ಸಿನೆಮಾಗಳಲ್ಲಿ ನಮ್ಮ ನೇಟಿವಿಟಿ ಇಲ್ಲ ಅಂದ್ರೆ ಅವು ಗೆಲ್ಲೋದು ಅಷ್ಟರಲ್ಲೇ ಇದೆ,ಅದರಿಂದ ಯಾವ ಅಪಾಯವು ಇಲ್ಲ. ವಿಷಯ ಹೀಗಿರುವಾಗ ಇನ್ನು ಆಗಿನ ಕಾಲದ ಕತೆಯನ್ನೇ ಹೇಳಿ ಕನ್ನಡ ಪ್ರೇಕ್ಷಕರಿಗೆ ಒಳ್ಳೊಳ್ಳೆ ಚಿತ್ರವನ್ನ ನಮ್ಮ ಭಾಷೆಯಲ್ಲಿ ನೋಡದಂತೆ ಚಿತ್ರ ರಂಗದ ಕೆಲವರು ಯಾಕೆ ಮಾಡುತಿದ್ದಾರೆ!?, ಹಾಗೆ ಡಬ್ಬಿಂಗ್ನಿಂದ ಮುಳುಗಿ ಹೋಗುವಷ್ಟು ‘ಕನ್ನಡ ಚಿತ್ರ ರಂಗ’ ದುರ್ಬಲವಾಗಿಲ್ಲ.೭೫ ವರ್ಷದ ಇತಿಹಾಸವಿರುವ ಚಿತ್ರ ರಂಗದ ಮಾರುಕಟ್ಟೆ ವ್ಯಾಪ್ತಿ ಚಿಕ್ಕದು ಅಂತ ಇನ್ನ ಎಷ್ಟು ದಿನ ಹೆದರ್ತಿರ ಸ್ವಾಮೀ?
ಶಿಕಾರಿ ಮಿಸ್ ಆಯ್ತು..!
– ಶ್ರೀಧರ್ ಜಿ.ಸಿ ಬನವಾಸಿ

`ಗುಬ್ಬಚ್ಚಿಗಳು’ಸಿನಿಮಾ ಖ್ಯಾತಿಯ ಅಭಯಸಿಂಹ ನಿರ್ದೇಶಕರು. ಚಿತ್ರ ನೋಡಿಬಂದ ಮೇಲೆ ನನಗೆ ಚಿತ್ರದ ಬಗ್ಗೆ ನನಗನಿಸಿದ ಅಂಶಗಳು:
ಕನ್ನಡಮ್ಮನ ಹೆಮ್ಮೆಯ ಪುತ್ರನೂ ಅಣ್ಣಾವರ ಮಗನೂ
– ಜಿ.ವಿ ಜಯಶ್ರೀ
ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ,
ಇದು ಎಂಬತ್ತರ ದಶಕದ ಹಾಡು. ತುಂಬಾ ಇಷ್ಟ ಪಟ್ಟು ಈಗಲೋ ಕೇಳುವಂತಹ ಸುಂದರ ಗೀತೆ.ಈ ಚಿತ್ರದಲ್ಲಿ ನಟಿಸಿದ ಪುನೀತ್ ರಾಜ್ ಕುಮಾರ್ ನಟನೆಯಷ್ಟೇ ಮನಸೆಳೆದ ಸಂಗತಿ ಅಂದ್ರೆ ಅವರು ಹಾಡಿದ ಈ ಹಾಡು .
ಮೊದಲಿನಿಂದ ವೀಕ್ಷಕ ದೇವರ ಮನ ಸೆಳೆದ ಕಲಾವಿದ ಪುನೀತ್. ಅವರ ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಖುದ್ದು ಪುನೀತ್ ವಿಷಯದಲ್ಲಿ ತೋರುವ ಅಭಿಮಾನ ಅಪಾರ.
ಈತನ ಬಗ್ಗೆ ತಮಗೆ ತುಂಬಾ ಹೆಮ್ಮೆ ಇದೆ. ಅಪ್ಪಾಜಿಯ ನಂತರ ಬಣ್ಣ ಹಚ್ಚಿದ (ಪೂರ್ಣಿಮಾ ಸಹ ಹಚ್ಚಿದ್ದಾರೆ ) ಪುನೀತ್ ತಮಗೆ ಮಾದರಿ ಎನ್ನುವ ಮಾತು ಹೇಳಿರುವುದು ಅವರು ತಮ್ಮನ ಮೇಲೆ ಇಟ್ಟಿರುವ ಪ್ರೀತಿಯನ್ನು ಎತ್ತಿ ತೋರುತ್ತದೆ.
ಶಿವಣ್ಣ ಜೀ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮ ನಡೆಸಿ ಕೊಟ್ಟಾಗ ಅಪಾರ ಸಂಖ್ಯೆಯ ವೀಕ್ಷಾಕಾಭಿಮಾನ ಹೊಂದಿದ್ದರು.ಆ ಕಾರ್ಯಕ್ರಮದ ಮೂಲಕ ಹೆಚ್ಚು ಗೊತ್ತಾದರೂ ಶಿವಣ್ಣ. ಕಾರಣ ಇಷ್ಟೇ ಸಿನಿಮಾದಲ್ಲಿ ಗಿಣಿಗೆ ಕಲಿಸಿದ ಪಾಠದಂತೆ ಡೈಲಾಗ್ ಹೇಳುವ ಶಿವಣ್ಣನಿಗಿಂತ ತನ್ನ ಹೃದಯದಿಂದ ಮಾತನಾಡಿದ ಶಿವಣ್ಣ ಇಷ್ಟ ಆಗಿತ್ತು.. ಮಾತಲ್ಲಿ ಯಾವುದೇ ರೀತಿಯ ನಾಟಕೀಯತೆ, ಕಲಿತ ಮಾತು ಇರದೇ ಸಾಮಾನ್ಯ ಮನೆಕನ್ನಡ ಮಾತಾಡಿ , ತಮ್ಮ ಸರಳತೆ, ವಿಶೇಷ ವ್ಯಕ್ತಿತ್ವ್ದದಿಂದ ಗೆದ್ದಿದ್ದರು.