ಕುಮಾರರಾಮ
– ವರುಣ್ ಕುಮಾರ್
(ವಾರಕ್ಕೊಂದು ವೀರರು)
ಭಾರತದ ಹಿಂದೂ ಸಾಮ್ರಾಟ ಎಂದ ಕೂಡಲೇ ನಮ್ಮ ಸ್ಮೃತಿಪಟಲದಲ್ಲಿ ಶಿವಾಜಿ ಮಹಾರಾಜರ ಹೆಸರು ಬರುತ್ತದೆ. ಶಿವಾಜಿ ಮಹಾರಾಜರ ಆಡಳಿತ ವೈಖರಿ, ಮೊಘಲರ ದಾಳಿಯನ್ನು ಹಿಮ್ಮೆಟ್ಟಿಸಿದ ರೀತಿ, ಅವರ ರಾಜಕೀಯ ತಂತ್ರಗಾರಿಕೆಗಳು, ಎಂಥವರಿಗೂ ರೋಮಾಂಚನವನ್ನು ಉಂಟು ಮಾಡುತ್ತದೆ. ತನ್ನ ಅಲ್ಪಾವಧಿಯಲ್ಲಿ ಮೊಘಲರ ಸಾಮ್ರಾಜ್ಯವನ್ನು ಕೇವಲ ಉತ್ತರ ಭಾರತಕ್ಕೆ ಸೀಮಿತಗೊಳಿಸುವಲ್ಲಿ ಶಿವಾಜಿಯ ಪಾತ್ರ ಅಪಾರವಾದುದು. ಆದರೆ ಶಿವಾಜಿಯ ಪೂರ್ವ ಕಾಲದಲ್ಲಿ ದಕ್ಷಿಣ ಪ್ರಾಂತ್ಯಕ್ಕೆ ಮೊಘಲರ ದಾಳಿಯನ್ನು ಹಿಮ್ಮಟ್ಟಿಸುವಲ್ಲಿ ಯುವ ಅರಸ ಕುಮಾರರಾಮನ ಪಾತ್ರ ಮಹತ್ವದ್ದು. ಹಿಂದೂ ಸಾಮ್ರಾಜ್ಯಕ್ಕೆ ಭದ್ರವಾದ ಬುನಾದಿಯನ್ನು ಕೊಟ್ಟು ಮುಂದಿನ ೨೦೦ ವರ್ಷಗಳ ಕಾಲ ಅವರ ವಂಶಜರು ದಕ್ಷಿಣ ಪ್ರಾಂತ್ಯದಲ್ಲಿ ಹಿಂದೂ ಸಾಮ್ರಾಜ್ಯವನ್ನು ಪುನರುತ್ಥಾನಗೊಳಿಸಿದರು. ಮತ್ತಷ್ಟು ಓದು
ಕೇರಳ ವರ್ಮ ಪಳಸಿ ರಾಜ.
– ವರುಣ್ ಕುಮಾರ್
(ವಾರಕ್ಕೊಂದು ವೀರರು)
೧೭೯೭, ಕೇರಳದ ವಯನಾಡಿನ ಪೆರಿಯಪಾಸ್ ಎಂಬ ಪ್ರದೇಶವನ್ನು ಬ್ರಿಟೀಷ್ ಕರ್ನಲ್ ಡೋ ಮತ್ತು ತುಕಡಿಯು ಹತೋಟಿಗೆ ತೆಗೆದುಕೊಳ್ಳುವ ಉದ್ದೇಶದಿಂದ ಕಾಡಿನ ಮಧ್ಯೆ ಪಯಣವನ್ನು ಮುಂದುವರೆಸಿದರು. ಆದರೆ ಅಂತಹ ದಟ್ಟ ಅರಣ್ಯವಾದಲ್ಲಿ ಒಂದು ಸಣ್ಣ ಶಬ್ದ ಕೇಳಿ ಬಂದರೂ ಎಂತಹವರ ಎದೆಯನ್ನು ಒಂದು ಕ್ಷಣ ನಡುಗಿಸದೇ ಬಿಡದು. ಅಂತಹ ಭಯ ಕರ್ನಲ್ ಡೋ ಅವನಲ್ಲಿಯೂ ಇತ್ತು. ಆದರೆ ಅದಕ್ಕಿಂತ ಹೆಚ್ಚಾಗಿ ಕೇರಳದ ಸಿಂಹದ ಬಗ್ಗೆ ಭಯವಿತ್ತು. ಇಂತಹ ಭಯದಲ್ಲಿ ಮುಂದುವರೆಯುತ್ತಿರುವಾಗ ಅನಿರೀಕ್ಷಿತವಾದ ದಾಳಿ ತನ್ನ ತಂಡದ ಮೇಲೆ ಶುರುವಾಯಿತು. ನೋಡನೋಡುತ್ತಿದ್ದಂತೆಯೇ ನೂರಕ್ಕೂ ಅಧಿಕ ತನ್ನ ಸೈನಿಕರನ್ನು ಕರ್ನಲ್ ಕಳೆದುಕೊಂಡನು. ಈ ಭಯಂಕರ ಕಾದಾಟದಲ್ಲಿ ೩೦೦ಕ್ಕೂ ಮಿಕ್ಕಿ ಸೈನಿಕರು ಗಾಯಾಳಾದರು. ದಾಳಿ ನಡೆಸಿದ ತಂಡ ಬ್ರಿಟೀಷರಿಗೆ ದಾಳಿ ಎಲ್ಲಿಂದ ನಡೆಯುತ್ತಿದೆ ಎಂಬ ಸಣ್ಣ ಊಹೆಯೂ ಸಿಗದ ರೀತಿಯಲ್ಲಿ ವ್ಯವಸ್ಥಿತವಾಗಿ ಯೋಜನೆಯನ್ನು ರೂಪಿಸಿದ್ದರು. ದೇಶಾದ್ಯಂತ ಆನೆ ನಡೆದಿದ್ದೇ ಹಾದಿ ಎಂಬಂತೆ ಮೆರೆಯುತ್ತಿದ್ದ ಬ್ರಿಟೀಷ್ ಸಾಮ್ರಾಜ್ಯಕ್ಕೆ ದೊರೆತ ದೊಡ್ಡ ಮರ್ಮಾಘಾತವಾಗಿತ್ತು. ಈ ರೀತಿ ಗೆರಿಲ್ಲಾ ಮಾದರಿ ದಾಳಿಯನ್ನು ರೂಪಿಸಿ ಬ್ರಿಟೀಷರ ಬೆನ್ನೆಲುಬಲ್ಲಿ ಚಳುಕು ಹುಟ್ಟಿಸಿದ ವೀರ ಕೇರಳದ ಸಿಂಹ ಕೇರಳ ವರ್ಮ ಪಳಸಿ ರಾಜ. ಮತ್ತಷ್ಟು ಓದು
ಗುಡಿಯಿಂದ ಮನೆಕಾಯುವವನು ದೇವರಾದರೆ ಗಡಿಯಿಂದ ದೇಶ ಕಾಯುವವನು ..
– ಸುಜಿತ್ ಕುಮಾರ್
ಉರಿಯುವ ಬಿಸಿಲಾಗಲಿ ಅಥವಾ ಕೊರೆಯುವ ಚಳಿಯಾಗಲಿ, ಹಸಿವು ಕೂಗುತ್ತಿರಲಿ ಅಥವಾ ದುಃಖ ಮಡುಗಟ್ಟಿರಲಿ, ದೇಹ ಸಾಕೆನ್ನುತ್ತಿರಲಿ ಅಥವಾ ಭಯ ಮನೆಮಾಡಿರಲಿ, ಹಗಲಿರಲಿ, ಇರುಳಿರಲಿ, ಕೇವಲ ದೇಶ ದೇಶ ದೇಶವೆನುತ ಜೀವ ತೆತ್ತುವ ಆ ಹುಚ್ಚು ಪ್ರೇಮಿಗಳಿಗೆ ಅರ್ಥಾತ್ ನಮ್ಮ ಧೀರ ಸೈನಿಕರನ್ನು ಸ್ಮರಿಸುತ್ತಾ, ಗೌರವಿಸುತ್ತಾ ಹಾಗು ಶ್ರದ್ದಾಂಜಲಿಯನ್ನು ಅರ್ಪಿಸುತ್ತಾ… ಜೊತೆಗೆ ನೆನ್ನೆ ಇಡೀ ದೇಶಕ್ಕೆ ಸರ್ಪ್ರೈಸ್ ನೀಡಿ ಭಾರತದ ವಿರಾಟ್ ರೂಪವನ್ನು ವಿಶ್ವಕ್ಕೆ ಪರಿಚಯಿಸಿದ ಸೈನಿಕರಿಗೆ ಮತ್ತು ಸದಾ ಕಾಲ ನಮ್ಮ ಸೈನಿಕರಿಗೆ ಹಿರಿಯಣ್ಣನಂತೆ ಜೊತೆ ನೀಡುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಂದು ಸೆಲ್ಯೂಟ್.. ಮತ್ತಷ್ಟು ಓದು
ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಏನು ಸಂಬಂಧ ಎಂದು ಕೇಳುತ್ತಿರಾ?? ಖಂಡಿತಾ ಸಂಬಂಧ ಇದೆ..!!
– ಅಜಿತ್ ಶೆಟ್ಟಿ ಹೆರಾಂಜೆ
ಹೌದು ಉಡುಪಿಯ ಮಟ್ಟಿಗೆ ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಖಂಡಿತಾ ಸಂಬಂಧ ಇದೆ. ದುರಂತ ಅಂದ್ರೆ ಈ ಸಂಬಂಧದ ಬಗ್ಗೆ ನಮಗೆ ಯಾರೂ ಎಂದೂ ಹೆಳಿದವರೇ ಇಲ್ಲ. ಶಾಲಾ ಕಾಲೇಜುಗಳಲ್ಲಿ ನಮ್ಮ ಯಾವುದೇ ಶಿಕ್ಷಕರು ಈ ಸಂಬಂಧದ ಬಗ್ಗೆ ಪಾಠ ಮಾಡಲಿಲ್ಲ. ನಮಗೆ ಗಾಂಧಿ ಗೊತ್ತಿತ್ತು, ನಮಗೆ ಬುದ್ದ ಗೊತ್ತಿತ್ತು, ನಮಗೆ ಅಕ್ಬರ್ ಗೊತ್ತಿತ್ತು, ನಮಗೆ ಮುಸೊಲಿನಿ, ಹಿಟ್ಲರ್ ಚಗುವೇರ ಗೊತ್ತಿತ್ತು. ಆದ್ರೆ ನಮ್ಮೂರಿನ ಮಹಾತ್ಮರ ಬಗ್ಗೆ ಗೊತ್ತೇ ಇಲ್ಲ. ಅವರು ನಮ್ಮ ಸಮಾಜವನ್ನು ಕಟ್ಟಲು ತಮ್ಮ ಇಡಿ ಜೀವಮಾನದ ಗಳಿಕೆಯನ್ನೆಲ್ಲವೂ ಸಮಾಜದ ಉದ್ದಾರಕ್ಕಾಗಿ ನೀರಿನಂತೆ ಹರಿಸಿ, ತಮ್ಮ ಇಡಿ ಜೀವನವನ್ನು ಸಮಾಜಕ್ಕಾಗಿ ತೇದಿ ಸವೆದು ಸದ್ದಿಲ್ಲದೆ ಮರೆಯಾದವರು. ಅವರಿಗೆ ಯಾವುದೇ ಪ್ರಚಾರದ ಹಂಗಿರಲಿಲ್ಲ, ಅವರಿಗೆ ತಮ್ಮ ಸಮಾಜದ ಬಗೆಗಿನ ತಾವು ನಿಭಾಯಿಸಬೇಕಿದ್ದ ಕರ್ತವ್ಯಗಳ ಅರಿವಿತ್ತು, ಸಮಸ್ಯೆಗಳು ಬಂದಾಗ ಅದನ್ನ ಸರ್ಕಾರ ಅಥವಾ ಇನ್ಯಾರೋ ಪರಿಹರಿಸಲಿ ಎಂದು ಯಾವತ್ತೂ ಕಾದವರಲ್ಲ. ಅವರು ಸ್ವತಃ ತಾವೇ ಅಂತಹಾ ಸಮಸ್ಯೆಗಳಿಗೆ ಎದೆಯೊಡ್ಡಿ ನಿಂತು ಪರಿಹರಿಸಿದವರು. ಆಗ ಅವರ ಕಣ್ಣಲ್ಲಿ ಜಾತಿ, ಮತ ,ಪಂತ, ಪಂಗಡ, ಇವ ನಮ್ಮವ ಇವ ಬೇರೆಯವನು ಎಂಬುವ ಯಾವುದೆ ಬೇಧ ಭಾವ ಇರಲಿಲ್ಲ. ಅವ್ರಲ್ಲಿ ಇದ್ದದ್ದು ಸಮಾಜದಲ್ಲಿ ತಾನು ಮಾಡಬೇಕಾಗಿದ್ದ ಕೆಲಸಗಳ ಬಗ್ಗೆ ಇದ್ದ ತುಡಿತ ಮಾತ್ರ. ಅಂತಹ ಅದೆಷ್ಟೋ ಗಣ್ಯರು ಕಾಲದ ಪುಟಗಳಲ್ಲಿ ಮರೆಯಾಗಿ ಹೋದರು. ಅವರನ್ನ ಅವರ ಸಾಧನೆಗಳನ್ನ ಮುಂದಿನ ತಲೆಮಾರಿಗೆ ಪರಿಚಯಿಸುವ ಹೊಣೆ ಹೊತ್ತ ಸರ್ಕಾರಗಳು ಇಂತವರ ಪರಿಚಯನ್ನು ಯಾವತ್ತೂ ಮುಂದಿನ ಪೀಳಿಗೆಗೆ ಮಾಡಲೇ ಇಲ್ಲ. ಅದಿರಲಿ ಸಮಾಜವೂ ಅಂತವರನ್ನ ಮರೆತಿತು. ಇಂತಹಾ ಅನೇಕ ಮರೆತುಹೋದ ಮಹಾನುಭಾವರಲ್ಲಿ ಉಡುಪಿಯ ಖಾನ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಮ್ ಸಾಹೇಬ್ ಬಹದ್ದೂರ್ ಕೂಡ ಒಬ್ಬರು. ಚಿಕ್ಕದಾಗಿ ಹೇಳೋದಾದರೆ ಹಾಜಿ ಅಬ್ದುಲ್ಲಾ ಸಾಹೇಬರು . ಹಾಜಿ ಅಬ್ದುಲ್ಲಾ ಸಾಹೆಬರು !! ? ಯಾರೀತ?? ಮತ್ತಷ್ಟು ಓದು
ಸೈಮನ್ ಅಯೋಗಕ್ಕೆ ತೊಡೆ ತಟ್ಟಿದ ಪಂಜಾಬಿನ ಕೇಸರಿ.
– ಶಿವಾನಂದ ಶಿವಲಿಂಗ ಸೈದಾಪೂರ
ಪಂಜಾಬ್ದ ಕೇಸರಿ ಎಂದೇ ಪ್ರಸಿದ್ದರಾದ ಲಾಲಾ ಲಜಪತ್ ರಾಯರು 1865 ರ ಜನೇವರಿ 28 ರಂದು ಪಂಜಾಬ್ ನ ಮುನ್ಷಿ ರಾದಾಕೃಷ್ಣ ಆಜಾದ್ ಮತ್ತು ಗುಲಾಬ್ ದೇವಿಯರ ಮಗನಾಗಿ ಜನಿಸಿದರು. ಸ್ವತಂತ್ರ ಹೋರಾಟದ ದಿಕ್ಕನ್ನೇ ಬದಲಿಸಿದ ಒಂದೇ ಹೆಸರಿನಿಂದ ಮೂವರು ಜನ ಗುರುತಿಸಿಕೊಂಡ “ಲಾಲಬಾಲಪಾಲ್” ರಲ್ಲಿ ಇವರು ಒಬ್ಬರು.
1905 ರ ವರೆಗೂ ಕಾಂಗ್ರೇಸ್ನ ನೀತಿಯಿಂದಾಗಿ ಮಂದಗತಿಯಲ್ಲಿಯೇ ಸಾಗುತ್ತಿದ್ದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚನ್ನು ಉದ್ದೀಪನಗೊಳಿಸಿದವರಲ್ಲಿ ಇವರು ಒಬ್ಬರು. ಪ್ರಖರ ವಾಗ್ಮಿಯಾದ ಇವರು ತಮ್ಮ ಭಾಷಣಗಳಲ್ಲಿ “ಜಗತ್ತಿನ ಇತಿಹಾಸ ರೂಪಗೊಂಡಿದ್ದೇ ರಕ್ತದಿಂದ. ನಮ್ಮ ಮಾತೃಭೂಮಿ ನಮ್ಮ ರಕ್ತವನ್ನು ಅಪೇಕ್ಷಿಸುತ್ತಾಳೆ. ರಾಷ್ಟ್ರಕ್ಕಾಗಿ ಅದನ್ನು ನೀಡಿಯೇ ಅಮರರಾಗೋಣ”. ಎಂದು ಸದಾಕಾಲ ಭಾರತೀಯ ಕ್ಷಾತ್ರ ಪರಂಪರೆಯನ್ನು ಎಚ್ಚರಗೊಳಿಸುತಿದ್ದರು. ಮಂದಗತಿಯಲ್ಲಿ ಸಾಗುತಿದ್ದ ಹೋರಾಟಕ್ಕೆ “ನಾವು ಒಂದು ಸಾಮ್ರಾಜ್ಯದ ಪ್ರಜೆಗಳು, ಭಿಕ್ಷುಕರಲ್ಲ. ಹೋರಾಟದ ಈ ಪ್ರಜ್ಞೆ ನಮ್ಮಲ್ಲಿರಬೆಕಾದದ್ದು ಅಗತ್ಯ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಪ್ರಜೆಗಳು ನಾವಾಗಿರಬೇಕು. ಒಂದು ದೃಢ ನಿಲುವನ್ನು ತಳೆದು ಅದಕ್ಕೆ ಅಂಟಿಕೋಳ್ಳಬೇಕು” ಎಂದು ಹೇಳುತಿದ್ದರು. “ಈ ಭೂಮಿಯ ಮೇಲೆ ಸೊಂಕಿರುವುದು ನಮ್ಮ ಪೂರ್ವಜರ ರಕ್ತ. ನಾವು ಅದರ ಮೇಲೆ ಬದುಕುತಿದ್ದೇವೆ. ಈ ಭೂಮಿ ನಮ್ಮದು ಇಲ್ಲವೇ ದೇವರದ್ದು” ಎಂದು ನಿರಂತರವಾಗಿ ಒತ್ತಿ ಒತ್ತಿ ಹೇಳಿದರು. ಮತ್ತಷ್ಟು ಓದು
ಲಡಾಖ್ ಹಾಗು ಭಾರತೀಯ ಸೇನೆ
– ಪಲ್ಲವಿ ಭಟ್
ಬೆಂಗಳೂರು
ಇದೀಗಷ್ಟೇ ಸ್ವಾತಂತ್ರ್ಯ ದಿನ ಕಳೆದು ಹೋಗಿದೆ. ಪ್ರತಿ ವರುಷದಂತೆ ಈ ಬಾರಿಯೂ ಅದೇ ಸಂಭ್ರಮ ಸಡಗರದಿಂದ ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಗಳೆಲ್ಲಾ ಮುಗಿಯುತ್ತಿದ್ದಂತೆ ಅದೊಂದು ವಾರ್ತೆ ನಮ್ಮ ವಾರ್ತಾಪತ್ರಿಕೆಗಳ ಮುಖಪುಟ ಸೇರಿಕೊಂಡಿತ್ತು. ಇನ್ನೂ ಮಾಸದ ನನ್ನ ಕೆಲ ಹೊಸ ನೆನಪುಗಳನ್ನು ಅದು ಕೆದಕತೊಡಗಿತು. “ಲಡಾಖ್’ನಲ್ಲಿ ಭಾರತ, ಚೀನಾ ಯೋಧರ ಸಂಘರ್ಷ: ಭಾರತದೊಳಗೆ ನುಗ್ಗಲು ಚೀನಾ ಸೈನಿಕರ ಯತ್ನ” ಎಂಬುದಾಗಿತ್ತು ಶೀರ್ಷಿಕೆ. ಲಡಾಖ್ ಪ್ರವಾಸ ಮುಗಿಸಿ ಇನ್ನೂ ೧೦ ದಿನಗಳಾಗಿಲ್ಲ. ಅಷ್ಟರಲ್ಲೇ ಇಂತಹ ವಾರ್ತೆಯನ್ನು ಓದಬೇಕಾಗಿ ಬಂತು. ಮತ್ತಷ್ಟು ಓದು
ಬಾಲಗಂಗಾಧರ ತಿಲಕರೆಂದರೆ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಧಾರ್ಮಿಕ ಸಾಮರಸ್ಯ ಮೂಡಿಸಿದ ಧೀಮಂತನಾಯಕ.
ಶಿವಾನಂದ ಶಿವಲಿಂಗ ಸೈದಾಪೂರ
ಬಾಲಗಂಗಾಧರ ತಿಲಕರೆಂದರೆ ಭಾರತದ ಸಂಪೂರ್ಣ ಸ್ವಾತಂತ್ರ್ಯ ಚಳುವಳಿಯ ಮೊದಲ ನಾಯಕ. “ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು” ಎಂದು ಬ್ರಿಟನಿಯರ ವಿರುದ್ಧ ಘರ್ಜಿಸಿದ ಪ್ರಖರ ಹಿಂದೂ ರಾಷ್ಟ್ರವಾದಿ. ಧಾರ್ಮಿಕ ಹಬ್ಬಗಳಾದ ಶಿವಾಜಿ, ಸಾರ್ವಜನಿಕ ಗಣೇಶ ಉತ್ಸವಗಳ ಜನಕ. ಭಾರತೀಯರಲ್ಲಿ ಧಾರ್ಮಿಕ ಸಾಮರಸ್ಯ ಮೂಡಿಸಿ, ಅವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಿದ ಏಕೈಕ ಜನನಾಯಕ. ಸಮಸ್ತ ಭಾರತೀಯರ ಬಾಯಿಂದ “ಲೋಕಮಾನ್ಯ”ರೆಂದು ಕರೆಸಿಕೊಂಡವರು. ಮತ್ತಷ್ಟು ಓದು
ಕಾರ್ಗಿಲ್ ಕಥನವೆಂದರೆ ಅದ್ಯಾವುದೋ ಹಾಲಿವುಡ್, ಬಾಲಿವುಡ್ ಸಿನೆಮಾ ಕಥೆಯಲ್ಲ!
– ಶಿವಾನಂದ ಶಿವಲಿಂಗ ಸೈದಾಪೂರ.
ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನವು ಕಾಮೇಂಟ್ಸ್ ಚಕಮಕಿಗಳನ್ನು ಪ್ರತಿಯೊಬ್ಬರು ನೋಡಿಯೇ ನೋಡುತ್ತೆವೆ. ಸಾಕಷ್ಟು ದುಡ್ಡು ತೆಗೆದುಕೊಂಡು ನಟಿಸುವ ಹೆಸರಿಗೆ ಮಾತ್ರ ಹೀರೊಗಳಾಗಿರುವ ನಟರಿಗೆ ಇಂದು ಪ್ಯಾನ್ಸ್ ಕ್ಲಬ್ಗಳು ಬೇಕಾಬಿಟ್ಟಿಯಾಗಿ ಬೆಳೆದಿವೆ. ಒಬ್ಬ ನಟನ ಅಭಿಮಾನಿಗಳು ಮತ್ತೊಬ್ಬ ನಟನ ಮೇಲೆ ಎಗರಾಡುವುದು ಏರಾಡುವುದು ಮಿತಿ ಮಿರಿದೆ. ರೀಲ್ ಕಥೆಯ ನಾಯಕರಿಗೆ ರಿಯಲ್ ಬಿಲ್ಡಪ್ ಅಂತು ಅತಿಯಾಗಿದೆ. ಕಟೌಟ್ ಮೇಲೆ ಬೀಳುವ ಹಾಲಿನ ಕ್ಯಾನ್ ಗಳಿಗೇನು ಕೊರತೆಯಿಲ್ಲ. ಪ್ರತಿಯೊಂದು ಭಾಷೆಯಲ್ಲಿ ವಾರಕ್ಕೆ ಕನಿಷ್ಠ ಸುಮಾರು ಮೂರರಿಂದ ನಾಲ್ಕು ಸಿನೇಮಾ ಬಿಡುಗಡೆಯಾದರೂ ಕೂಡ ಸಾಮಾನ್ಯವಾಗಿ ಎಲ್ಲವನ್ನೂ ನೋಡುತ್ತೆವೆ. ಮತ್ತೆ ಮುಂದಿನ ವಾರದ ಹೋಸ ಸಿನೆಮಾ ಬರುವರೆಗೂ ಅದನ್ನು ಮೆಲುಕು ಹಾಕುತ್ತೆವೆ. ಬಿಡುಗಡೆಗೊಂಡ ಸಿನೇಮಾದ ನಾಯಕ, ನಾಯಕಿ, ಕಳನಾಯಕ, ನಿರ್ದೇಶಕ, ನಿರ್ಮಾಪಕನಿಂದ ಹಿಡಿದು ಪೋಷಕ ನಟನವರೆಗೂ ಎಲ್ಲರೂ ನೆನಪಿನಲ್ಲಿ ಉಳಿಯುತ್ತಾರೆ. ಆದರೆ…! ಮತ್ತಷ್ಟು ಓದು
ಮೇರಾ ರಂಗ್ ದೇ ಬಸಂತಿ ಚೋಲಾ…
ಶಿವಾನಂದ ಶಿವಲಿಂಗಪ್ಪ ಸೈದಾಪೂರ (ಎಂ.ಎ.ವಿದ್ಯಾರ್ಥಿ)
ರಾಜ್ಯ ಕಾರ್ಯಕಾರಣಿ ಸದಸ್ಯರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ
ಸುಮಾರು ನೂರಾರು ವರ್ಷಗಳ ಕಾಲ ಪರಾಧೀನತೆಯನ್ನು ಕಿತ್ತೊಗೆಯಲು ಲಕ್ಷಾಂತರ ಜನ ತಮ್ಮ ಬಿಸಿ ನೆತ್ತರವನ್ನು ನೀರಾಗಿ ಹರಿಸಿ ನಮಗಾಗಿ, ನಮ್ಮ ಉಳಿವಿಗಾಗಿ ಹೋರಾಡಿ ಜೀವವನ್ನೇ ತೆತ್ತು ಇಂದಿನ ಸುಭದ್ರತೆಗೆ ಕಾರಣರಾದರು. 1857ರ ಮಹಾ ಸಂಗ್ರಾಮದಿಂದ 1947 ರ ವರೆಗೆ ಅನೇಕಾನೇಕ ಕ್ರಾಂತಿಕಾರಿ ಮಹನೀಯರು ಕಾರಣೀಕರ್ತರಾಗಿದ್ದಾರೆ. ಅಂತಹವರಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಹೊಸ ಅಧ್ಯಾಯವನ್ನೇ ಬರೆದ ಮಹಾನ್ ಹೋರಾಟಗಾರರೆಂದರೆ ಅದು ಭಗತ್ ಸಿಂಗ್, ಸುಖದೇವ್, ರಾಜಗುರುರವರು. ಕ್ರಾಂತಿಯ ಇತಿಹಾಸದಲ್ಲಿ ಅವರ ಆತ್ಮ ಬಲಿದಾನವೇ ಅತ್ಯಂತ ಪ್ರಮುಖದೆಂದು ಹೇಳಬಹುದು. ದಾಸ್ಯ ಮುಕ್ತಿಗಾಗಿ, ತಮ್ಮ ಜೀವನದ ಅಂತಿಮ ಹೊತ್ತಿನಲ್ಲಿಯೂ ಕೂಡ ನಗು ನಗುತ ತಾಯಿ ಭಾರತಮಾತೆಯನ್ನು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತ ಉರುಳನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ್ದರು.
ಅಂತಹ ಮಹಾನ್ ಹೋರಾಟಗಾರರ ಬಲಿದಾನವಾಗಿ 87 ವರ್ಷ ಉರುಳಿದವು. ಅದರ ಸ್ಮರಣೆಯೇ ಈ ಲೇಖನ. ಮತ್ತಷ್ಟು ಓದು
ಛಡಿ ಏಟಿನಿಂದ ಕ್ರಾಂತಿಯ ಕಿಡಿಯವರೆಗೆ…!
– ಶಿವಾನಂದ ಶಿ ಸೈದಾಪೂರ
(ಎಂ. ಎ. ವಿದ್ಯಾರ್ಥಿ )
ABVP ರಾಜ್ಯ ಕಾರ್ಯಕಾರಿಣಿ ಸದಸ್ಯ .
ಆವತ್ತು ಒಂದು ದಿನ ಕಾಶಿಯಲ್ಲಿ ದೇಶ ಭಕ್ತರೆಲ್ಲರು ಸೇರಿ ವಂದೇಮಾತರಂ ಘೋಷಣೆ ಕೂಗುತ್ತಾ ಶಾಂತಿಯುತವಾಗಿ ಮೆರವಣಿಗೆ ಹೋಗುತ್ತಿದ್ದ ಸಂದರ್ಭ. ಇದ್ದಕಿದ್ದಂತೆ ದುರಳ ಬ್ರಿಟಿಷ್ ಪೋಲಿಸ್ ಅಧಿಕಾರಿಗಳು ದೇಶ ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿದರು. ಶಾಂತಿಯುತವಾಗಿ ಮೆರವಣಿಗೆಯಲ್ಲಿದ್ದವರಿಗೆ ಮನ ಬಂದಂತೆ ತಳಿಸತೊಡಗಿದ್ದರು. ಇದನ್ನು ಗಮನಿಸಿದ ಕಾಶಿವಿದ್ಯಾಪೀಠದಲ್ಲಿ ಅಧ್ಯಯನ ಮಾಡುತಿದ್ದ ಪುಟ್ಟ ಬಾಲಕನೊಬ್ಬ ಬ್ರಿಟಿಷ್ ಪೊಲೀಸರಿಗೆ ಅಟ್ಟಾಡಿಸಿ ಕಲ್ಲು ಹೊಡೆದು ಪರಾರಿಯಾದ. ಆತನ ಬೆನ್ನಟ್ಟಿದ ಪೊಲೀಸರೆ ಓಡಿ ಓಡಿ ಸುಸ್ತಾದರೆ ಹೊರತು ಆತನೇನು ಆವತ್ತು ಸಿಗಲಿಲ್ಲ. ಮರುದಿನ ಯಾರದೋ ಮೊಸದ ಜಾಲದಿಂದ ಆ ಬಾಲಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಯ್ದರು. ಆತನ ಪ್ರತಿಯೊಂದು ಮಾತುಗಳನ್ನು ಕೇಳಿ ಜಡ್ಜನೇ ಹೌಹಾರಿದ. ಆ ಪುಟ್ಟ ಬಾಲಕನ ಬಾಯಿಂದ ಅಂತಹುದೆ ಮಾತುಗಳು ಬರುತ್ತಿದ್ದವು. ನಿನ್ನ ಹೆಸರು ಏನೆಂದು ಜಡ್ಜ ಕೇಳಿದರೆ ”ಅಜಾದ್” ಎಂದು ಅಬ್ಬರಿಸಿದ. ಎಲ್ಲಿ ನಿನ್ನ ಮನೆ ಎಂದರೆ ”ಜೈಲು..! ನನ್ನ ಮನೆ” ಎಂದು ಪ್ರತ್ಯುತ್ತರ ನೀಡಿದ ಆ ಬಾಲಕ. ಆ ಪುಟ್ಟ ಬಾಲಕನ ನಿಷ್ಟುರತೆಯನ್ನು ಕಂಡ ಕೋಪಿಷ್ಟ ಜಡ್ಜ ಸಾಹೇಬ್ ೧೫ ಛಡಿ ಏಟಿನ ಶಿಕ್ಷೆ ನೀಡಿದ. ಪ್ರತಿಯೊಂದು ಏಟು ಬಿದ್ದಾಗ ”ವಂದೇಮಾತರಂ”, ”ಭಾರತ್ ಮಾತಾ ಕೀ ಜೈ”, ”ಗಾಂಧೀಜಿ ಕೀ ಜೈ” ಎಂಬುವ ಘೋಷಣೆಗಳು ಆತನ ಬಾಯಿಂದ ಹೊರಡುತಿದ್ದವು. ಆ ಪುಟ್ಟ ಬಾಲಕನೆ ಚಂದ್ರಶೇಖರ್ ಅಜಾದ್. ಅಜಾದರು ತನ್ನ ಹದಿನಾಲ್ಕನೇ ವಯಸ್ಸಿನಲ್ಲಿ ಜೀವನದ ಮೊದಲ ಮತ್ತು ಕೊನೆಯ ಬಾರಿ ಬ್ರಿಟಿಷ್ ಜೈಲಿನ ಶಿಕ್ಷೆ ಅನುಭವಿಸಿದರು. ಆತನ ಸಾಹಸ ಗಾತೆಯನ್ನು ಕಂಡ ಜನತೆ ಒಂದು ಸಾರ್ವಜನಿಕ ಸಮಾರಂಭ ಏರ್ಪಡಿಸಿದ್ದರು. ಜನರನ್ನು ಉದ್ದೇಶಿಸಿ ಮಾತನಾಡುತ್ತ. ಅಜಾದ್ ”ದುಷ್ಮನೋಂಕಿ ಗೊಲಿಯೋಂ ಸೇ ಮೈ ಸಾಮ್ನಾ ಕರೂಂಗಾ. ಅಜಾದ್ ಹೂಂ ಮೇ ಅಜಾದ್ ಹೀ ರಹೂಂಗಾ” ಎಂದು ಅಬ್ಬರಿಸಿದರು. ಅಕ್ಷರಶ ಅದನ್ನೇ ಕೊನೆಯತನಕ ಪಾಲಿಸಿದ್ದರು. ಮತ್ತಷ್ಟು ಓದು