ವಿಷಯದ ವಿವರಗಳಿಗೆ ದಾಟಿರಿ

Posts from the ‘ಮಾಹಿತಿ ಹಕ್ಕು’ Category

22
ಮೇ

ಕರ್ನಾಟಕದ ರಮಣರು,ಬಿಜೆಪಿಯೆಂಬ ಯು.ಜಿ ಕೃಷ್ಣಮೂರ್ತಿ

– ರಾಕೇಶ್ ಶೆಟ್ಟಿ

ಕಳೆದೊಂದು ವಾರದಲ್ಲಿ ರಾಜ್ಯದ ಜನ ಸಾಕ್ಷಿಯಾಗಿದ್ದ ರಾಜಕೀಯ ಹಗ್ಗ-ಜಗ್ಗಾಟಕ್ಕೆ ತಾತ್ಕಾಲಿಕ ಪರದೆ ಬಿದ್ದಿದೆ. ರಾಜಕಾರಣಿಗಳ ಬೃಹನ್ನಾಟಕದಿಂದಾಗಿ ಟಿಆರ್ಪಿ ಕಳೆದುಕೊಂಡಿದ್ ಮೆಗಾ ಸಿರಿಯಲ್ಲುಗಳ ನಿರ್ಮಾಪಕರು ನಿಟ್ಟುಸಿರು ಬಿಟ್ಟಿರಬಹುದು.ಗೋವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಯಿಂದ ಹಲ್ವಾ ತಿಂದಿದ್ದ ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಅಂತ ಉದಾಸೀನಕ್ಕೆ ಜಾರಲಿಲ್ಲ.ಜಾರಲಿಲ್ಲ ಎನ್ನುವುದಕ್ಕಿಂತಲೂ ಮುಖ್ಯವಾಗಿ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯಬಹುದಾದ ಸಾಧ್ಯತೆಯಿರುವ ದೇಶದ ದೊಡ್ಡ ರಾಜ್ಯಗಳಲ್ಲಿ ಕರ್ನಾಟಕ ಮಾತ್ರವೇ ಉಳಿದಿದ್ದರಿಂದ,ಕರ್ನಾಟಕವೆನ್ನುವುದು ಕಾಂಗ್ರೆಸ್ ಪಾಲಿಗೆ ಅಸ್ತಿತ್ವದ ಪ್ರಶ್ನೆಯೂ ಆಗಿತ್ತು. PIN ಇಲ್ಲದ ATMನಂತಾಗಿರುವ ರಾಜ್ಯವನ್ನು ಅವರಾದರೂ ಹೇಗೆ ಬಿಟ್ಟುಕೊಟ್ಟಾರು ಹೇಳಿ?

ಚುನಾವಣಾ ಪ್ರಚಾರದಲ್ಲಿ, ಕುಮಾರಸ್ವಾಮಿಯವರ ಬಗ್ಗೆ ‘ಅವರಪ್ಪನಾಣೆ ಮುಖ್ಯಮಂತ್ರಿಯಾಗಲ್ಲ” ಎಂದು ಪದೇ ಪದೇ ಹೀಯಾಳಿಸಿದ್ದ ಸಿದ್ಧರಾಮಯ್ಯನವರೇ ಖುದ್ದಾಗಿ ಮುಂದೆ ಬಂದು ನೀವೇ ನಮ್ ಸಿಎಂ ಎಂದೂ ನಡುಬಗ್ಗಿಸಿ ನಿಲ್ಲಬೇಕಾದ ಸ್ಥಿತಿಗೆ ತಂದು ನಿಲ್ಲಿಸಿದ್ದು ಚುನಾವಣಾ ಫಲಿತಾಂಶ.ಕಳೆದ ೫ ವರ್ಷಗಳಲ್ಲಿ ಉಡಾಫೆ,ಅಹಂಕಾರವೇ ಮೈವೆತ್ತಂತೆ ವರ್ತಿಸುತ್ತಿದ್ದ ವ್ಯಕ್ತಿಗೆ ಮತದಾರ ಮಹಾಪ್ರಭು ಭರ್ಜರಿ ಏಟನ್ನೇ ಕೊಟ್ಟಿದ್ದಾನೆ. ಚಾಮುಂಡೇಶ್ವರಿಯಲ್ಲಿ ಸಿದ್ಧರಾಮಯ್ಯನವರು ದೊಡ್ಡ ಮಟ್ಟದ ಅಂತರದಲ್ಲಿ ಸೋತಿದ್ದಾರೆ, ಇನ್ನು ಬಾದಾಮಿಯಲ್ಲಿ 2000 ದಷ್ಟು NOTA ಚಲಾವಣೆಯಾಗಿದೆ,ಸಿದ್ಧರಾಮಯ್ಯ ಗೆದ್ದಿರುವುದು 1600 ಚಿಲ್ಲರೆ ಮತಗಳ ಅಂತರದಲ್ಲಿ ಮಾತ್ರ.ಎರಡು ಕಡೆ ಏಕೆ ನಿಲ್ಲುತ್ತಿದ್ದೀರಿ ಎನ್ನುವ ಪ್ರಶ್ನೆಗೆ ಸಿದ್ಧರಾಮಯ್ಯನವರು ನಿಂತರೆ ಆ ಭಾಗದಲ್ಲಿ ಹೆಚ್ಚು ಸೀಟು ಗೆಲ್ಲಬಹುದು ಎನ್ನುತ್ತಿದ್ದರು ಅವರ ಬೆಂಬಲಿಗರು. ಬಾಗಲಕೋಟೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು 2 ಮಾತ್ರ ಉಳಿದೆಲ್ಲವೂ ಬಿಜೆಪಿಯ ಪಾಲಾಗಿದೆ? ಎಲ್ಲೋಯ್ತು ಸಿದ್ಧರಾಮಯ್ಯನವರ ಪ್ರಭಾವಳಿ? ಖುದ್ದು ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋತಿದ್ದು ಆಡಳಿತ ವಿರೋಧಿ ಅಲೆಯ ಸಂದೇಶ ಅಲ್ಲವೇ? ಸಿದ್ಧರಾಮಯ್ಯನವರ ಸಂಪುಟದ 16 ಸಚಿವರು ಸೋತು ಮನೆ ಸೇರಿದ್ದಾರೆ.ಸಿದ್ಧರಾಮಯ್ಯ ಆಪ್ತ ಬಳಗದಲ್ಲಿದ್ದ ಮಹದೇವಪ್ರಸಾದ್,ಆಂಜನೇಯ,ಉಮಾಶ್ರಿಯಂತವರು ಸೋಲಿನ ರುಚಿ ಸವಿದಿದ್ದಾರೆ.ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೂ ಕಾಂಗ್ರೆಸ್ ಮೂಲೆ ಸೇರಿದೆ.

ಮತದಾರರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆಯಿದ್ದಿದ್ದರೆ ವಿರೋಧ ಪಕ್ಷದಲ್ಲಿ ಕೂರಬೇಕಾಗಿತ್ತು. ಆದರೆ ಪಕ್ಷದ ಅಳಿವು-ಉಳಿವಿನ ಪ್ರಶ್ನೆಯಾದ್ದರಿಂದ, “ಕೋಮುವಾದಿಗಳನ್ನು ದೂರವಿಡಲು,ಸೆಕ್ಯುಲರಿಸಂ ರಕ್ಷಿಸಲು’ ಎಂಬ ತಗಡು ಸ್ಲೋಗನ್ ಇಟ್ಟುಕೊಂಡು ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಮುಂದಾಗಿವೆ. ತುಘಲಕ್ ಸರ್ಕಾರವನ್ನು ಜನರು ತಿಪ್ಪೆಗೆ ಎಸೆದರೂ, ತಿಪ್ಪೆಯಿಂದ ಎದ್ದು ಬಂದು ಜೆಡಿಎಸ್ ಜೊತೆ ಕೈಜೋಡಿಸಿ ಕಾಂಗ್ರೆಸ್ ಉಸಿರಾಡುತ್ತಿದೆ,ಜೆಡಿಎಸ್ ಪಕ್ಷದ ಕತೆಯೂ ಅಸ್ತಿತ್ವ ಉಳಿಸಿಕೊಳ್ಳುವ ವಿಚಾರದಲ್ಲಿ ಕಾಂಗ್ರೆಸ್ಸಿಗಿಂತ ಭಿನ್ನವಾಗೇನೂ ಇಲ್ಲ. ಹತ್ತು ವರ್ಷಗಳಿಂದ ಅಧಿಕಾರದಿಂದ ದೂರ ಇರುವ ಪಕ್ಷ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಇನ್ನೇನೂ ಮಾಡೀತು ಹೇಳಿ?ಚುನಾವಣೆಗೆ ಮೊದಲು ಕಾಂಗ್ರೆಸ್ ಸರ್ಕಾರದ ಅಧ್ವಾನಗಳ ಬಗ್ಗೆ ಮಾತನಾಡಿ ಮತ ಪಡೆದ ಜೆಡಿಎಸ್ ಇಂದು ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ. ಈಗ ಇಬ್ಬರೂ ಸೇರಿಕೊಂಡು ಪ್ರಜಾಪ್ರಭುತ್ವ ಉಳಿಸುವ ತುತ್ತೂರಿ ಊದಿದರೆ ಜನರಿಗೆ ಸತ್ಯ ಅರ್ಥವಾಗುವುದಿಲ್ಲವೇ?

ಮತ್ತಷ್ಟು ಓದು »

12
ಮೇ

ರಾಜಕೀಯದ ‘ಬಂಡವಾಳ’

– ಸಂದೀಪ ಫಡ್ಕೆ, ಮುಂಡಾಜೆ

ಪಾರ್ಟಿ ಫಂಡ್ಅಧಿಕಾರದ ಚುಕ್ಕಾಣಿ ಹಿಡಿಯಲು, ರಾಜಕೀಯ ಪಕ್ಷಗಳಿಗೆ ಜನರ ಬೆಂಬಲ ಅವಶ್ಯಕ. ವಿವಿಧ ಆಶೋತ್ತರಗಳನ್ನು ಈಡೇರಿಸುವ ವಾಗ್ದಾನ ಮಾಡುವ ಇವರಿಗೆ, ಕಿಂಚಿತ್ತು ಸಹಾಯ ಮಾಡುವ ಅವಕಾಶ ನಮ್ಮ ಸಂವಿಧಾನ ಕೊಟ್ಟಿದೆ. ಪ್ರಜಾಪ್ರಭುತ್ವದ ದೃಷ್ಟಿಯಿಂದಲೂ, ನಾಗರಿಕರ ಹಕ್ಕು ಕೇವಲ ಮತದಾನಕಷ್ಟೇ ಸೀಮಿತವಾಗಬಾರದು. ಹಾಗಾಗಿ ಅರ್ಹ ವ್ಯಕ್ತಿ ಯಾ ಪಕ್ಷಕ್ಕೆ ದೇಣಿಗೆಯ ರೂಪದಲ್ಲಿ ಹಣದ ನೆರವನ್ನು ನೀಡಬಹುದು. ಆದರೆ, ಇತ್ತೀಚೆಗೆ ಸಂತ್ರಸ್ತರ ಪರಿಹಾರ ನಿಧಿಗೆ ಅಥವಾ ಸಮಾಜ ಸೇವೆಗೆ ಸಂದಾಯವಾಗುವ ಹಣಕ್ಕಿಂತ ಹೆಚ್ಚು ರಾಜಕೀಯ ಪಕ್ಷಗಳ ಪಾಲಾಗುತ್ತಿದೆ. ಸ್ವಾರ್ಥ ರಕ್ಷಣೆಗಾಗಿ, ಬೃಹತ್ ಉದ್ದಿಮೆದಾರರ ಕಪಿಮುಷ್ಠಿಯಲ್ಲಿ ಪಕ್ಷಗಳು ನಲುಗುತ್ತಿವೆ. ಇದರ ಇನ್ನೊಂದು ಮುಖವೆಂಬಂತೆ ಅಭ್ಯರ್ಥಿ ಯಾ ಪಕ್ಷಕ್ಕೆ ಹಣದ ಹೊಳೆ ಹರಿಯುತ್ತಿದೆ.

ಸ್ವಾತಂತ್ರ್ಯ ಪೂರ್ವದಲ್ಲೂ, ಉದ್ಯಮರಂಗ ಚುನಾವಣೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿತ್ತು. ಸದಸ್ಯತ್ವ ಶುಲ್ಕ ಮತ್ತು ವೈಯುಕ್ತಿಕ ದೇಣಿಗೆಯಿಂದ ಚುನಾವಣೆಯ ವೆಚ್ಚ ಭರಿಸಲು ಪಕ್ಷಗಳಿಗೆ ಸಾಧ್ಯವಾಗದೇ ಇದ್ದುದ್ದು ಇದಕ್ಕೆ ಪ್ರಮುಖ ಕಾರಣ. ಕಾಲಕ್ರಮೇಣ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಗತಗೊಳಿಸುವುದು ದುಬಾರಿಯಾಗುತ್ತಾ ಹೋಯಿತು. 2009ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗೆ ಸರ್ಕಾರ ಸುಮಾರು 1120 ಕೋಟಿ ರೂಪಾಯಿ ವ್ಯಯಿಸಿದೆ. ಅಲ್ಲದೇ, ವಿವಿಧ ಅಭ್ಯರ್ಥಿ ಮತ್ತು ಪಕ್ಷಗಳು ಒಟ್ಟು ಸುಮಾರು 14 ಸಾವಿರ ಕೋಟಿ ಖರ್ಚು ಮಾಡಿರುವುದು ಅಂದಾಜಿಸಲಾಗಿದೆ. ಹೀಗಾಗಿ, ರಾಜಕೀಯ ಪಕ್ಷಗಳು ಹೆಚ್ಚಿನ ಹಣವನ್ನು ಕಂಪನಿಗಳಿಂದ ಪಡೆಯುತ್ತಿವೆ. ಈ ಸಲುವಾಗಿ, 1960ರಲ್ಲಿ ಕಂಪನಿ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಕಂಪನಿಗಳು ನಿಗದಿತ ಮೊತ್ತದಷ್ಟು ಹಣವನ್ನು ಪಕ್ಷಗಳಿಗೆ ನೀಡಬಹುದೆಂದು ಕಾಯ್ದೆ ಉಲ್ಲೇಖಿಸಿತ್ತು. ಆದರೆ ಇದು ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಕೆಂಗಣ್ಣಿಗೆ ಗುರಿಯಾಯಿತು. ಸರ್ಕಾರ ಕೇವಲ ತನಗೆ ಸಹಕರಿಸಿದ ಬೃಹತ್ ಉದ್ದಿಮೆದಾರರ ಹಿತ ಕಾಪಾಡುವಲ್ಲಿ ಶಾಮೀಲಾಯಿತು. ಹೀಗೆ ಟೀಕೆಗೊಳಪಟ್ಟ ಕಾಯ್ದೆಗೆ 1969ರಲ್ಲಿ ತಿದ್ದುಪಡಿ ತರಲಾಯಿತು. ಈ ತಿದ್ದುಪಡಿ, ರಾಜಕೀಯ ಪಕ್ಷಗಳಿಗೆ ಹಣ ಪೂರೈಸುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಿತು. ಆದರೆ, ಈ ‘ದೇಣಿಗೆ’ಯಿಂದ ಪಕ್ಷ ಮತ್ತು ಕಂಪನಿಗಳಿಗೆ ಪ್ರಯೋಜನವಿತ್ತು. ಆದ್ದರಿಂದ, ಅಕ್ರಮವಾಗಿ ಹಣ ರವಾನಿಸುವ ಚಟುವಟಿಕೆಗಳು ಶುರುವಾದವು. 1985ರಲ್ಲಿ ಮತ್ತೊಂದು ತಿದ್ದುಪಡಿ ತರಲಾಯಿತಾದರೂ ಪರಿಣಾಮ ಬೀರಲಿಲ್ಲ.

ಮತ್ತಷ್ಟು ಓದು »

19
ಆಕ್ಟೋ

ಮಲಾಲಾ ~ ನಿಜವಾದ ಕಥೆ(ಪುರಾವೆಗಳ ಸಹಿತ)

ಮೂಲ : ನದೀಂ ಎಫ್ ಪರಾಚ

ಅನುವಾದ : ನಿವೇದಿತ ಥಾಡಣಿ

Malalaಸೆಪ್ಟೆಂಬರ್ 2012 ರಲ್ಲಿ, ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಒಬ್ಬ ತಾಲಿಬಾನ್ ಕಾರ್ಯಕರ್ತ  15 ವರ್ಷದ ಶಾಲಾ ಹುಡುಗಿಯ ಮುಖ ಮತ್ತು ತಲೆಗೆ  ಗುಂಡು ಹಾರಿಸಿದ್ದಾನೆ  ಎಂದು ವರದಿಯಾಯಿತು.ಈ ದಾಳಿ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಈ ಸುದ್ದಿಗೆ  ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ತುಂಬಾ ಮಹತ್ವ ನೀಡಲಾಯಿತು.

ಅವಳೇ ಮಲಾಲಾ.

ಪಾಕಿಸ್ತಾನದಲ್ಲಿ ನಂತರ ಇಂಗ್ಲೆಂಡ್ ನಲ್ಲಿ  ವೈದ್ಯರು ಮಲಾಲಾಳ  ಮುಖ ಮತ್ತು ತಲೆಯ ಮೇಲೆ ಅನೇಕ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಿದರೂ ಅವಳು ಉಳಿಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿತ್ತು.

ಇಂದು ಮಲಾಲಾ ಯುಕೆಯಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಮಹಿಳೆಯರ ಶಿಕ್ಷಣದ ಸಲುವಾಗಿ ಅದರಲ್ಲೂ ವಿಶೇಷವಾಗಿ ತೀವ್ರವಾದಿಗಳು ಮತ್ತು ಉಗ್ರಗಾಮಿಗಳು ಬಾಲಕಿಯರ ಶಾಲೆಗಳನ್ನು ಹಾರಿಸಿದ ಪ್ರದೇಶಗಳಲ್ಲಿ ಕೆಲಸ ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.

ಇದು ಪೂರ್ತಿ ಕಥೆಯ ಕೇವಲ ಒಂದು ಭಾಗ ಮಾತ್ರ. ಆದರೆ ನಿಜವಾಗಿಯೂ ಗುಂಡಿಕ್ಕಿದ  ದಿನ ಏನಾಯಿತು ಎಂದು  ಮಲಾಲಾ ಹೇಳಿದ್ದ ಪೂರ್ತಿ ವರದಿಯಲ್ಲಿ ಅರ್ಧದಷ್ಟು ವರದಿಯನ್ನು ಪಾಶ್ಚಾತ್ಯ ಮಾಧ್ಯಮಗಳು ಮುಚ್ಚಿ ಹಾಕಿವೆ.

ಮತ್ತಷ್ಟು ಓದು »

1
ಆಕ್ಟೋ

ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!

– ತುರುವೇಕೆರೆ ಪ್ರಸಾದ್

RTI       ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು  ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.

       ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ  ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)

ಮತ್ತಷ್ಟು ಓದು »

15
ನವೆಂ

ಮೊಬೈಲಿನಲ್ಲಿ ಕನ್ನಡ ಒಂದು ಸರ್ವೇ

-ರವಿ ಸಾವ್ಕರ್

ಕೆಲ ದಿನಗಳ ಹಿಂದೆ ಮೊಬೈಲುಗಳಲ್ಲಿ ಕನ್ನಡದ ಬೆಂಬಲಕ್ಕೆ ಬೇಡಿಕೆ ಹೇಗಿದೆ ಅನ್ನುವುದರ ಬಗೆಗೆ ಒಂದು ಆನ್ಲೈನ್  ಸರ್ವೆ ಮಾಡಲಾಗಿತ್ತು. ಸರ್ವೇಯಲ್ಲಿ ನಮಗೆ ಸಿಕ್ಕ ಕೆಲವು ಮುಖ್ಯ ಅಂಶಗಳು ಹೀಗಿವೆ.

ಸರ್ವೆಯಲ್ಲಿ 564 ಜನರು ಭಾಗವಹಿಸಿದ್ದರು . 31%  ಜನರ ಮೊಬೈಲುಗಳಲ್ಲಿ ಕನ್ನಡ SMS  ಅನ್ನು  ಓದಬಹುದು ಎಂದು ತಿಳಿಸಿದ್ದಾರೆ .

15
ಮಾರ್ಚ್

ನಮ್ಮ ಮೇಟ್ರೋದಲ್ಲಿ ಇನ್ನೂ ಸಿಗದ ಕನ್ನಡ

-ರವಿ ಸಾವ್ಕರ್

ವಿಶ್ವ ಗ್ರಾಹಕದ ದಿನದ ವಿಶೇಷ ಲೇಖನ [15ನೇ ಮಾರ್ಚ್]

ಕೆಲ ತಿಂಗಳ ಹಿಂದೆ “ನಮ್ಮ ಮೆಟ್ರೋ” ವಿನ ಅಧಿಕಾರಿಗಳು ದೈನಂದಿನ ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನು ಬಳಕೆ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಹೊರಗುತ್ತಿಗೆ ಕೊಟ್ಟಿರುವ ಸೆಕ್ಯೂರಿಟಿ ಗಾರ್ಡ್ ಎಜೆನ್ಸಿ ನವರಿಗೆ ಕನ್ನಡ ಓದಲು ಬರೆಯಲು ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ನಿಯಮ ಹಾಕಿದೀವಿ ಅಂತ ಸಹ ಹೇಳಿದ್ದರು. ಮೆಟ್ರೋ ಅಧಿಕಾರಿಗಳ ಹೇಳಿಕೆಗಳ ತುಣುಕು ಹೀಗಿದೆ. ಇವರು ಎಷ್ಟರ ಮಟ್ಟಿಗೆ ತಮ್ಮ ನಿಯಮಗಳನ್ನು ತಾವೇ ಪಾಲಿಸುತ್ತಾ ಇದಾರೆ ಅಂತ ನೋಡೋಣ.

ನೆನ್ನೆ ಮೇಟ್ರೋದಲ್ಲಿ ಒಮ್ಮೆ ಹೋಗಿ ಬರೋಣವೆಂದು ಮನೆ ಮಂದಿಯೆಲ್ಲ ಹೋಗಿದ್ದೆವು. ಮೆಟ್ರೋ ದಲ್ಲಿ ಈಗಲಾದರೂ ಕನ್ನಡ ಬಾರದ ಸೆಕ್ಯೂರಿಟಿ ಗಾರ್ಡ್ ಗಳಿಂದ ಮುಕ್ತಿ ಸಿಕ್ಕಿರಬಹುದೇನೋ ಅಂದುಕೊಂಡಿದ್ದೆ. ಆದರೆ ಬಯ್ಯಪ್ಪನಹಳ್ಳಿಯಲ್ಲಿ ಸಿಕ್ಕ ಮೊದಲ ಸೆಕ್ಯೂರಿಟಿ ಗಾರ್ಡ್ ಹಿಂದಿಯಲ್ಲಿ ಮಾತಾಡಿಸಲು ಶುರು ಮಾಡಿದ. ಕನ್ನಡದಲ್ಲಿ ಮಾತಾಡಿಸಿದಾಗ ಕನ್ನಡ ತನಗೆ ಗೊತ್ತಿಲ್ಲವೆಂದು ಉತ್ತರ ಕೊಟ್ಟ. ಕೆಲ ದಿನಗಳ ಹಿಂದೆ ಇದೆ ರೀತಿಯ ಧೋರಣೆಯ ಉತ್ತರವನ್ನು ಮೆಟ್ರೋ ಸೆಕ್ಯೂರಿಟಿ ಗಾರ್ಡ್ ಗಳು ಖಾಸಗಿ ಕನ್ನಡ ವಾಹಿನಿಗಳಿಗೆ ಕೊಟ್ಟಿದ್ದನ್ನು ಇಲ್ಲಿ ನೆನೆಯಬಹುದು.
ಇದನ್ನು ನೋಡಿದರೆ ಗಾರ್ಡ್ ವೆಲ್ ಸೆಕ್ಯೂರಿಟಿ ಎಜೆನ್ಸಿ ಗೆ ಕನ್ನಡ ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಅಂತ ಶರತ್ತನ್ನು ನಿಜವಾಗಲೂ ವಿಧಿಸಿದ್ದಾರ ಅಂತ ಅನುಮಾನ ಬರುತ್ತದೆ.ದಿನಕ್ಕೆ ಸಾವಿರಾರು ಜನರನ್ನು ತಪಾಸಣೆ ಮಾಡುವ ಇವರಿಗೆ ಕನ್ನಡವೇ ಗೊತ್ತಿರದಿದ್ದರೆ ಹೇಗೆ? ಬೆಂಗಳೂರಿನ ಮೆಟ್ರೋ ಸ್ಟೇಷನ್ ಒಳಗೆ ಹಿಂದಿ ಕಲಿತೆ ಕಾಲಿಡಬೇಕು ಎಂದರೆ ಹೇಗೆ?
3
ಫೆಬ್ರ

ಅಪಘಾತ ಎಂಬ ಬಹಿರಂಗ ಹತ್ಯೆ

– ಚಾಮರಾಜ ಸವಡಿ

ಪುಣೆಯಲ್ಲಿ ಬುಧವಾರ ಸಂಭವಿಸಿದ ಘಟನೆ ನಿರ್ಲಕ್ಷ್ಯದ ಚಾಲನೆ ಅಥವಾ ರೋಷಾವೇಶದ ಚಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಎತ್ತಿದೆ. ತಲೆ ಕೆಟ್ಟ ಚಾಲಕನೊಬ್ಬ ಸರ್ಕಾರಿ ಬಸ್ಸನ್ನು ಮನಸೋಇಚ್ಛೆ ಚಾಲನೆ ಮಾಡಿ ೧೦ ಜನ ಅಮಾಯಕರ ಸಾವಿಗೆ ಹಾಗೂ ೩೫ಕ್ಕೂ ಹೆಚ್ಚು ಜನ ಗಾಯಗೊಳ್ಳಲು ಕಾರಣನಾಗಿದ್ದಾನೆ.

ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿರುವುದೇಕೆ?

ನಿಜ, ಎಲ್ಲರಿಗೂ ಅವರದೇ ಆದ ವೈಯಕ್ತಿಕ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ, ಭಾವಾವೇಶಕ್ಕೆ ಒಳಗಾಗಿ ರಸ್ತೆಗಿಳಿಯುವ ಮನಃಸ್ಥಿತಿ ಎಂಥದು? ಅದರಲ್ಲೂ ಪಕ್ಕದಲ್ಲಿ ಹಾಗೂ ಎದುರು ಇರುವ ವಾಹನಗಳನ್ನು ಹಿಂದಿಕ್ಕಿ ಹೋಗಬೇಕೆನ್ನುವ ಚಪಲ ಏಕೆ ಉಂಟಾಗುತ್ತದೆ? ರಸ್ತೆ ಸೂಚನೆಗಳನ್ನು ಉಲ್ಲಂಘಿಸುವ, ಇತರರ ಸರಾಗ ಚಲನೆಗೆ ಅಡ್ಡಿಪಡಿಸುವ ಮನಃಸ್ಥಿತಿ ಏಕೆ ಮೂಡುತ್ತದೆ?

ಹೆಚ್ಚುತ್ತಿರುವ ಒತ್ತಡ

ಇತ್ತೀಚಿನ ದಿನಗಳಲ್ಲಿ ಒತ್ತಡ ಪ್ರಮಾಣ ಹೆಚ್ಚುತ್ತಿದೆ. ಕೆಲಸದ ಸ್ಥಳಗಳ ಒತ್ತಡ ಬಹಳಷ್ಟು ಸಾರಿ ಇಂಥ ತಲೆಕೆಟ್ಟ ನಡತೆಗಳಿಗೆ ಕಾರಣವಾಗಿದ್ದೂ ಉಂಟು. ಮೇಲಧಿಕಾರಿಗಳ ಒತ್ತಡ, ಹಿಂಸೆ, ಸಹೋದ್ಯೋಗಿಗಳ ಕಿರಿಕಿರಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ, ಅಸ್ತವ್ಯಸ್ತ ಕೆಲಸದ ಅವಧಿ, ರಜೆ ಕೊಡದಿರುವುದು, ಸರಿಯಾದ ವೇತನ/ಸೌಲಭ್ಯ ನೀಡದಿರುವುದು- ಹೀಗೆ ಹಲವಾರು ಕಾರಣಗಳಿಂದ ಒತ್ತಡ ಉಂಟಾಗುತ್ತದೆ. ಇದಕ್ಕೆ ವೈಯಕ್ತಿಕ ಸಮಸ್ಯೆಗಳ ಒತ್ತಡವೂ ಸೇರುತ್ತದೆ. ಮತ್ತಷ್ಟು ಓದು »