ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

13
ಮೇ

ಡಿಕೆ ಶಿವಕುಮಾರ್ ಅವರ ಗುರಿಯೇನು?


– ಅಜಿತ್ ಶೆಟ್ಟಿ ಹೆರಂಜೆ

ಡಿಕೆಶಿಯವರು ಮೊದಲು ಯಾರೊಡೊನೆ ಜಗಳವಾಡಬೇಕು ಎಂದು ತೀರ್ಮಾನ ಮಾಡಬೇಕು.  ವರ್ತಮಾನದ ರಾಜಕಾರಣದಲ್ಲಿ ಅವರಿಗೆ ತಮ್ಮ ಸ್ವಪಕ್ಷೀಯರ ಜೊತೆಗೆ ಜಗಳವಾಡುವುದು ಮುಖ್ಯವೋ ಅಥವಾ ತಮ್ಮ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವುದು ಮುಖ್ಯವೋ ಎಂಬ ತೀರ್ಮಾನಕ್ಕೆ ಅವರ ಮೊದಲು ಬರಬೇಕು. ಈ ಎರಡೂ ಒಟ್ಟಿಗೆ ಹೋಗಲು ಸಾಧ್ಯವಿಲ್ಲ. ಅವರೊಬ್ಬರೇ ಇಡೀ ಕೆಪಿಸಿಯನ್ನು ತಲೆಯಲ್ಲಿ ಹೊತ್ತವರಂತೆ ಆಡುತ್ತಿರುವುದು ಇತ್ತೀಚೆಗೆ ಕಾಣುತ್ತಿದೆ. ತನ್ನನ್ನ ತಾನು   ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿದ ಪಾಪವನ್ನೆಲ್ಲಾ  ತೊಳೆಯಲು ಅವತಾರ ಎತ್ತಿ ಬಂದಿದ್ದಾರೋ ಎಂಬಂತೆ ವರ್ತಿಸಿಸುತ್ತಿದ್ದಾರೆ. ಡಿಕೆಶಿ, ಕರ್ನಾಟಕ ಕಾಂಗ್ರೆಸ್‌ ಪಕ್ಷದ ಮೊದಲ ಪ್ರದೇಶಾಧ್ಯಕ್ಷರೂ ಅಲ್ಲ, ಕೊನೆಯವರೂ ಆಗುವುದಿಲ್ಲ. ಸೋಜಿಗದ ಸಂಗತಿ ಅಂದರೆ ಇವರ ವರ್ತನೆ ಹಾಗಿದೆ. ಇಲ್ಲದೇ ಹೋದರೆ  ಒಂದು ರಾಷ್ಟ್ರೀಯ ಪಕ್ಷದ ರಾಜ್ಯಧ್ಯಾಕ್ಷನೊಬ್ಬ ಹೀಗೆ ವರ್ತಿಸವುದು ಎಷ್ಟು ಸರಿ?

ಅವರ ಪಕ್ಷದೊಳಗೆ ಗುರುತರವಾದ ಜವಾಬ್ದಾರಿ ಇರುವ ವ್ಯಕ್ತಿಯೊಬ್ಬ ಇನ್ನೊಂದು ರಾಜಕೀಯ ಪಕ್ಷದ ನಾಯಕರನ್ನು ಭೇಟಿಯಾದರೆ, ಮತ್ತು ಅದು ಪಕ್ಷ ವಿರೋಧಿ ಚಟುವಟಿಕೆ ಅಂತ ಅನ್ನಿಸದರೆ ಅವರು ಆ ವ್ಯಕ್ತಿಯ ಬಳಿ ನೇರವಾಗಿ ಮಾತನಾಡಿ ವಿಷಯವನ್ನು ಬಗೆಹರಿಸಿಕೊಳ್ಳಬಹುದು ಅಲ್ವೆ?  ಅವರ ಪಕ್ಷದ ನಾಯಕರೊಡನೆ ಮಾತನಾಡಲೂ ಡಿಕೆಶಿ ಅವರಿಗೆ ಮಾಧ್ಯಮದ ಅಗತ್ಯ ಬಂತು ಅಂದರೆ, ಅವರ ಪಕ್ಷದೊಳಗೆ ಸಂಬಂಧ ಬಹಳ ಹದಗೆಟ್ಟಿದೆ ಅಂತ ತಾನೆ ಅರ್ಥ. ಅಷ್ಟಕ್ಕೂ ಎಂ ಬಿ ಪಾಟೀಲರು  ಕಾಂಗ್ರೆಸ್‌ ಪಕ್ಷದಲ್ಲಿ ಅಂತಿಂತಾ ಕಾಂಜೀ ಪೀಂಜಿ ನಾಯಕರಲ್ಲ. ಅವರು ಕರ್ನಾಟಕ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರು. ಅರಮನೆ ಮೈದಾನದಲ್ಲಿ ಅವರ ಪದಗ್ರಹಣ ಸಮಾರಂಭ ನೋಡಿದವರಿಗೆ, ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಭೆಗಿಂತಲೂ ಅದು ಜೋರಾಗೆ ಇತ್ತು ಅನಿಸಿದರೆ ತಪ್ಪೇನಿಲ್ಲ. ಈ ಸಮಾರಂಭ ಕರ್ನಾಟಕ ಕಾಂಗ್ರೇಸಿನಲ್ಲಿ ಎಲ್ಲವೂ ಸರಿ ಇಲ್ಲ ಜೊತೆಗೆ ಪಕ್ಷದ ಹೈ ಕಮಾಂಡ್‌ ಕೂಡ ಎಲ್ಲವನ್ನೂ ಡಿಕೆಶಿ ಅವರ ಹಗಲ ಮೇಲೆ ಹಾಕಿ  ಸುಮ್ಮನೆ ಕೂರುವ ರಿಸ್ಕ್‌ ತೆಗೆದುಕೊಳ್ಳುವ ಕೆಲಸಕ್ಕೆ ಕೈ ಹಾಕಿಲ್ಲ ಎಂಬುದು ಸ್ಪಷ್ಟವಾಗಿಸುತ್ತದೆ. ಆ ಕಾರಣಕ್ಕೆ power ಬ್ಯಾಲೆನ್ಸಿಗಾಗಿ ಡಿಕೆಶಿಯ ವಿರೋಧ ಬಣಕ್ಕೂ ಸ್ವಲ್ಪ ಅಧಿಕಾರದ ಹಂಚಿಕೆ ಆಗಬೇಕು ಎಂಬ ಕಾರಣಕ್ಕೇ ಎಂ.ಬಿ ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷರಿಗೆ  ಸಮಾನಾಂತರವಾದ ಅಧಿಕಾರ ಇರುವ ಇನ್ನೊಂದು ಹುದ್ದೆಯನ್ನ ಸೃಷ್ಟಿ ಮಾಡಿಕೊಟ್ಟಿದ್ದು.  ಅಲ್ಲಿಗೆ ರಾಜ್ಯ ಕಾಂಗ್ರೆಸ್‌ ಪಕ್ಷದ  ಚುಕ್ಕಾಣಿಯನ್ನ ಕೈ ಕಮಾಂಡ್‌ ಪೂರ್ಣ ಪ್ರಮಾಣದಲ್ಲಿ ಡಿಕೆಶಿ ಕೈಗೂ ಕೊಡದೇ ಸಿದ್ದರಾಮಯ್ಯನವರ ಬಣಕ್ಕೂ ಕೊಡದೆ ಆಟ ಆಡುತ್ತಿದೆ. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಹಗ್ಗದ ಎರಡೂ ತುದಿಗೆ  ಬೆಂಕಿ ಹಾಕಿದೆ.  ಈ ಬೆಂಕಿಯಲ್ಲಿ ಯಾರು ಸುಡುತ್ತಾರೆ?  ಯಾರು ಪಾರಾಗುತ್ತಾರೆ ಎಂಬುದನ್ನ ಸಮಯವೇ ನಿರ್ಧರಿಸಬೇಕು.

ಇನ್ನು ಡಿಕೆಶಿಯವರಿಗೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೆ, ತಾನೇ ಮುಖ್ಯಮಂತ್ರಿ ಆಗಬೇಕು ಎಂಬ ಎಲ್ಲಿಲ್ಲದ ತುಡಿತ ಇದೆ. ಆದರೆ ಅವರ ಬಗ್ಗೆ ಮಾತನಾಡುವ, ಅವರ ಬಗ್ಗೆ ಲಾಭಿ ಮಾಡುವ ಪ್ರಭಾವಿ ನಾಯಕರ ಸಂಖ್ಯೆ ರಾಜ್ಯದಲ್ಲೂ ಕೇಂದ್ರದಲ್ಲೂ  ದಿನೇ ದಿನೇ  ಕಡಿಮೆ ಆಗುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯನವರು ತಾನೇ ಮುಂದಿನ ಮುಖ್ಯಮಂತ್ರಿ ಎಂದು  ಒಂದಷ್ಟು ಭಾರಿ ನೇರವಾಗಿ  ಹೇಳಿಕೊಂಡರೆ  ಒಂದಷ್ಟು ಸಾರಿ ಅವರ ಬೆಂಬಲಿಗರ ಮುಖಾಂತರ ಹೇಳಿಸುತ್ತಾರೆ. ಬೆಂಬಲಿಗರು ಅಂದ್ರೆ ಸಾಮಾನ್ಯ ನಾಯಕರಲ್ಲ. ಜಮೀರ್‌ ಅಹ್ಮದ್ ಮುಖಾಂತರವೇ  ಬಹಳಷ್ಟು ಸಾರಿ ಹೇಳಿಸಿದ್ದಾರೆ.  ಇನ್ನು ಈ ವಾದ ತೀರಾ ಅತಿರೇಕಕ್ಕೆ ಹೋದಾಗ ದಲಿತ ಮುಖ್ಯಮಂತ್ರಿ ಆಗಬೇಕು ಎಂಬ ವಿತಂಡ ವಾದನ್ನೂ ಅವರೇ ಅನೇಕ ಸಾರಿ ಮಾಡಿದ್ದಾರೆ. ಕೊನೆಗೆ ಅದೂ ತಾರಕಕ್ಕೆ ಹೋದಾಗ  ತಾನೂ ಕೂಡ ದಲಿತನೇ ಎಂಬ ಹೇಳಿಕೆ ಕೊಟ್ಟಿದ್ದಾರೆ. ಇದರ ಬಗ್ಗೆ ಬಂದ ತೀರಾ ಇತ್ತಿಚೀಗಿನ ಹೇಳಿಕೆ ಎಂದರೆ ಕೆಪಿಸಿಸಿಯ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂಬಿ ಪಾಟೀಲರದ್ದು. ಅವರೂ ಕೂಡ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ಕೊಟ್ಟರು. ಇದು ಹಿಂದಿನಿಂದಲೂ ತೆರೆಯ ಮರೆಯಲ್ಲಿ ಎಂ.ಬಿ ಪಾಟೀಲರು,  ಡಿಕೆಶಿ ನಡುವೆ ಇದ್ದ ರಾಜಕೀಯ ಕುಸ್ತಿ ತೆರೆಯ ಮುಂದೆ ಬರಲು ಪ್ರಮುಖ ಕಾರಣ ಆಯಿತು, ಒಂದಷ್ಟು ಹೊಸ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಕಳೆದ ಭಾನುವಾರ ಸುವರ್ಣ ಸುದ್ದಿವಾಹಿನಿಯಲ್ಲಿ ಡಿಕೆಶಿಯವರನ್ನ  ನೇರವಾಗಿ ಪ್ರಶ್ನೆ ಮಾಡುವ ಅವಕಾಶ ನನಗೆ ಸಿಕ್ಕಿತು. ಸಮಯದ ಅಭಾವದ ಕಾರಣಕ್ಕೆ ಅಲ್ಲಿ  ಚರ್ಚೆಯ ಪೂರ್ಣ ಭಾಗವನ್ನು  ಪ್ರಸಾರ ಮಾಡಿಲ್ಲ. ಇಲ್ಲಿ ಕೂಡ ಅಜಿತ್‌ ಹನಮಕ್ಕನವರ್‌ ಅವರು ಡಿಕೆಶಿ ಅವರಿಗೆ ಒಂದಷ್ಟು ಮುಜುಗರ ತರುವ ಪ್ರಶ್ನೆಗಳನ್ನ ಕೇಳಿದರು, ಅದಕ್ಕೆ ಡಿಕೆಶಿ ಅಡ್ಡ ಗೋಡಯ ಮೇಲೆ ದೀಪ ಇಟ್ಟ ಹಾಗೆ ಉತ್ತರ ಕೊಟ್ಟರು.  ಹಿಂದುತ್ವದ ವಿಚಾರ ಬಂದಾಗ ನೀವು ಯಾಕೆ ಡಬ್ಬಲ್ ಸ್ಟಾಂಡರ್ಡ್‌  ತಗೊಂತೀರಿ ಅನ್ನುವ ಪ್ರಶ್ನೆಗೆ  ಡಿಕೆಶಿ ಬಹಳಾ ವಿದ್ವಾಂಸನಂತೆ ಉತ್ತರ ಕೊಡುವ ಪ್ರಯತ್ನ ಮಾಡಿದರು. ಅಸಲಿಗೆ ವಿಷಯ ಅದಲ್ಲ. ಈ ವಿಚಾರದಲ್ಲಿ ಪಕ್ಷದೊಳಗೆಯೇ ಅವರ ನಿಲುವು ಮತ್ತು ಅವರ ಅವರ ವಿರೋಧಿ ಬಣದ ನಿಲುವು ಬೇರೆ ಬೇರೆ. ಸಿದ್ದರಾಮಯ್ಯ  ತಾನು ಮುಸಲ್ಮಾನರ ಪರ ಎಂದು ತಮ್ಮ ನಡೆ ನುಡಿಗಳ ಮೂಲಕ ನೇರವಾಗಿ ತೋರಿಸಿಕೊಂಡು ಬರುತ್ತಾರೆ. ಆದರೆ  ಡಿಕೆಶಿಯವರ ಅಭಿಪ್ರಾಯ ತಾವು ಕಳೆದ ಸಾರಿ ಚುನಾವಣೆಯಲ್ಲಿ ಸೋಲಲು ಮುಖ್ಯ ಕಾರಣವೆ ಸರ್ಕಾರದ ಹಿಂದೂ ವಿರೋಧಿ ನೀತಿ ಎಂಬುದು. ಈ ಭಾರಿಯೂ ಅಂತಹ ನಿಲುವನ್ನು ತೆಗೆದುಕೊಂಡರೆ ಮತ್ತೆ ಪಕ್ಷಕ್ಕೆ ಹಾನಿಯಾಗಾಲಿದೆ. ಈಗ ತಾನೇ ಅಧ್ಯಕ್ಷ ಬೇರೆ. ಪಕ್ಷ ಈ ಭಾರಿಯೂ ಸೋತರೆ ತಾವು ಮುಖ್ಯಮಂತ್ರಿ ಆಗುವ ಕನಸು ಕನಸಾಗಿಯೇ ಉಳಿಯಲಿದೆ ಎಂಬದು ಅವರಿಗೆ ಗೊತ್ತಾಗಿದೆ. ಹಾಗಾಗಿ, ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣವಾಗಿ ಹಿಂದುಗಳನ್ನು  ವಿರೋಧಿಸುವ ಸಾಹಸಕ್ಕೆ  ಹೋಗಲಿಲ್ಲ, ಜೊತೆಗೆ ತಮ್ಮ ಪಕ್ಷದ ಎಲ್ಲರಿಗೂ ಹಾಗೆಯೇ ವ್ಯವಹರಿಸಲೂ ಆದೇಶ ಕೊಟ್ಟರು. ಆದರೆ ಅವರನ್ನ ವಿರೋಧಿಸಲೆಂದೇ ಇರುವ, ಅವರಿಗೆ ಮುಜಗರ ಉಂಟು ಮಾಡಲೇಬೇಕು ಎಂದು ಇರುವ ಇನ್ನೊಂದು ಬಣ ಇವರ ಮಾತನ್ನ ದಿಕ್ಕರಿಸಿ ಅಗೊಮ್ಮೆ ಈಗೊಮ್ಮೆ ಇವರು ಹಾಕಿದ ಬೇಲಿ ದಾಟಿ  ಡಿಕೆಶಿ ಅವರಿಗೆ ಮುಜುಗರ ಮಾಡುತ್ತಲೇ ಇದೆ. ಈ ಬೆಳವಣಿಗೆಯ ಕಾರಣಕ್ಕೆ ಒಂದು ಕಡೆ ಕಾಂಗ್ರೆಸ್‌ ಪಕ್ಷವನ್ನು ಹಿಂದೂಗಳೂ ನಂಬದ, ಇನ್ನೊಂದು ಕಡೆ ಅವರ ಪಾರಂಪರಿಕೆ ಮತದಾರರಾದ ಮುಸಲ್ಮಾನರೂ ನಂಬದ ಒಂದು ಇಕ್ಕಟ್ಟಿನ ಪರಿಸ್ಥಿತಿ ಡಿಕೆಶಿ  ನೇತೃತ್ವದಲ್ಲಿ ಕಾಂಗ್ರೆಸ್ ‌ ಪಕ್ಷಕ್ಕೆ ಎದುರಾಗಿದೆ ಎಂಬುದ ಕಾಂಗ್ರೆಸ್‌ ವಲಯದಲ್ಲಿ ಬಹಳಷ್ಟು ಜನರಿಗೆ ನೋವು ಕೂಡ ತಂದಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ಎಲ್ಲವೂ ಸರಿ ಇಲ್ಲ, ಇದು ಮಾದ್ಯಮಗಳು ಕಟ್ಟಿದ ಕಟ್ಟು ಕಥೆ ಅಲ್ಲ, ಸತ್ಯ ವಿಚಾರ ಎಂಬುದು ನನಗೂ ಅನುಭವಕ್ಕೆ ಬಂತು.  ಅಜಿತ್‌ ಹನಮಕ್ಕನವರ್‌ ಕೇಳಿದ ಒಂದು ಪ್ರಶ್ನಯಲ್ಲಿ ನೀವು ಯಾಕೆ ಮುಸಲ್ಮಾನರ ಪರ ಮಾತನಾಡಲಿಲ್ಲ? ಸಿದ್ದರಾಮಯ್ಯ ಒಂದು ಸ್ಟ್ಯಾಂಡ್‌ ತೆಗೆದುಕೊಂಡ್ರು ಎಂದಾಗ, ಡಿಕೆಶಿ ಅದಕ್ಕೆ ಸಿದ್ದರಾಮಯ್ಯನವರು ಮಾತನಾಡಿದರೆ ಅದು ಕಾಂಗ್ರೆಸ್ ‌ ಪಕ್ಷ ಮಾತನಾಡಿದಂತೆ ಅಲ್ವಾ ಎಂದು ಮರು ಪ್ರಶ್ನೆ ಹಾಕಿದರು. ಅವರು ಆ ಉತ್ತರಕ್ಕೆ ನಾನು  ಹಿಂದೆ ಸಿದ್ದರಾಮಯ್ಯ ತೆಗೆದುಕೊಂಡ ಹಿಂದೂ ವಿರೋಧಿ ನೀತಿಗಳ ಬಗ್ಗೆ ಪ್ರಸ್ತಾಪ ಮಾಡಿದಾಗ ಅದೇ ಲಾಜಿಕ್ಕಿನಲ್ಲಿ ಉತ್ತರ ಕೊಡಲಾಗದ ಡಿಕೆಶಿ ನೀವು ಅದನ್ನ  ಸಿದ್ದರಾಮಯ್ಯನವರ ಬಳಿಯೇ ಕೇಳಿ ಎಂದು ಹೇಳುತ್ತಾರೆ. (ಚರ್ಚೆಯ ಆ ಭಾಗ ವಾಹಿನಿಯಲ್ಲಿ ಪ್ರಸಾರ ಆಗಲಿಲ್ಲ, ಬಹುಶಃ ಸಮಯದ ಅಭಾವದ ಕಾರಣಕ್ಕೆ ಇರಬೇಕು) ಹೀಗೆ ಸಾಗಿದ ಚರ್ಚೆಯ ಒಂದು ಭಾಗದಲ್ಲಿ, ಕಾಂಗ್ರೆಸ್‌ ಪಕ್ಷದ ಎನ್‌ ಎಸ್‌ ಯು ಐ ನ ಅದ್ಯಕ್ಷನೊಬ್ಬ ನೀವು ಮುಂದೆ ಮುಖ್ಯಮಂತ್ರಿ ಆದರೆ ಎಂತಹಾ ಯೊಜನೆಗಳನ್ನ ಜಾರಿಗೆ ತರುತ್ತೀರಿ ಎಂದು ಕೇಳಿದಾಗ ತಕ್ಷಣವೇ ಆತನನ್ನು ನಿಲ್ಲಿಸಿದ ಅಜಿತ್‌ ಹನಮಕ್ಕನವರ್  ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ  ಯಾರು ಎಂಬುದರ ಬಗ್ಗೆಯೇ ಗೊಂದಲ ಇದೆ. ನಿಮಗೆ ಯಾರು ಮುಖ್ಯಮಂತ್ರಿ ಆಗಬೇಕು ಅಂದಾಗ ಆತ ಸ್ವಲ್ಪ ಅಳುಕುತ್ತಲೇ ಡಿಕೆಶಿ ಅಂದ. ಹಿಂದೆ ನಮ್ಮದು ಸಾಮೂಹಿಕ ನಾಯಕತ್ವ, ಪಕ್ಷ ಮುಖ್ಯಮಂತ್ರಿಯ ತೀರ್ಮಾನ ಮಾಡಲಿದೆ ಎಂಬ ನೈತಿಕತೆಯ ಮಾತನಾಡಿದ್ದ ಡಿಕೆಶಿಗೆ ಹುಡುಗನ ಈ ಮಾತು ಖುಷಿಕೊಟ್ಟಿತು ಎಂಬುದು ಅವರ ಮುಖಭಾವದಿಂದ ನನಗೆ ಅರ್ಥವಾಯಿತು. ಆ ಕ್ಷಣದಲ್ಲಿ ಅವರಿಗೆ ಕೆಲವೇ ನಿಮಿಷಗಳ ಹಿಂದೆ ಅವರೇ ಹೇಳಿದ  ಪಕ್ಷದ ತೀರ್ಮಾನದ ಮಾತು ಅವರಿಗೆ ನೆನಪು ಇರಲಿಲ್ಲ. ಈ ಮದ್ಯೆ ನಾನು ಮಾತನಾಡಿ (ಹಾಗೆ ಮಾತನಾಡುವುದು ಚರ್ಚೆಯ ನಿಯಮಕ್ಕೆ ವಿರುದ್ಧವಾಗಿತ್ತು. ಆದರೂ ತಡೆಯಲಾಗದೆ ಒಂದು ಪ್ರಶ್ನೆ ಕೇಳಿದೆ) ಎರಡು ದಿನದ ಹಿಂದೆ ಎಂ.ಬಿ ಪಾಟೀಲರೇ ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿ ಅಂದಿದ್ದಾರೆ  ಅಂದಾಗ ಅವರ ಮುಖದಲ್ಲೊಂದು ಅಹಸನೆ ಗೆರೆ ಮೂಡಿದ್ದನ್ನು ಗಮನಿಸಿದೆ. ಅಂದಹಾಗೆ ಈ ಪ್ರಶ್ನೆಯನ್ನು ನಾನು ಚರ್ಚೆಯ ನಿಯಮಕ್ಕೆ ವಿರುದ್ದವಾಗಿ ಕೇಳಿದ ಕಾರಣ ಅದೂ ಕೂಡ ಪ್ರಸಾರ ಆಗಿಲಿಲ್ಲ.

ಒಟ್ಟಿನಲ್ಲಿ ಡಿಕೆಶಿ ಅವರ ಜೊತೆಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಇದ್ದ ನನಗೆ ಒಂದಷ್ಟು ವಿಚಾರಗಳು ಸ್ಪಷ್ಟವಾಗಿ ಕಾಣಿಸಿತು. ಅವರಲ್ಲಿ ಬೌದ್ಧಿಕ ಚರ್ಚೆ ಮಾಡುವ ಸಾಮರ್ಥ್ಯ ಮತ್ತು ವ್ಯವಧಾನ ಎರಡೂ ಇಲ್ಲ ಅವರದ್ದೇನಿದ್ದರೂ “ಸ್ಕೋರ್ ಸೆಟಲ್”‌ ಮಾಡುವ ರಾಜಕಾರಣ. ಜೊತೆಗೆ ಅವರು ಮುಖ ಭಾವದಲ್ಲಿ ಸಿದ್ದರಾಮಯ್ಯನವರ ಮುಸಲ್ಮಾನರ ತುಷ್ಟಿಕರಣದ ರಾಜಕಾರಣದಿಂದಾಗಿ ಹಿಂದುಗಳ ವಿರುದ್ಧ ಮಾಡಿರುವ ಅನ್ಯಾಯದ ಪಾಪದ ಮೂಟೆಯನ್ನ ಇಡೀ ಪಕ್ಷದಲ್ಲಿ ತಾನೊಬ್ಬನೇ ಹೊತ್ತು ನಡೆಯುತ್ತಿದ್ದೇನೆ ಎಂಬ ಭಾವ ಸ್ಪಷ್ಟವಾಗಿ ಕಾಣಿಸುತ್ತಿದೆ. ಇದರ ಜೊತೆಗೆ ಅವರು ಪಕ್ಷದೊಳಗೆ ಮತ್ತು ಪಕ್ಷದ ಹೊರಗೆ ಒಬ್ಬಂಟಿ ಎರಡೂ ಕಡೆ ಪ್ರವಾಹದ ವಿರುದ್ದ ಈಜಾಡುತ್ತಿದ್ದಾರೆ, ಅದರಲ್ಲಿ ಬಳಲಿ ಬೆಂಡಾಗಿರುವುದೂ ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಹೀಗಿರುವಾಗ “ಸ್ಕೋರ್‌ ಸೆಟಲ್‌” ಮಾಡುವ ರಾಜಕಾರಣದಿಂದ ಹೊರಗೆ ಬಂದು, ವೈಯಕ್ತಿಕ ಪ್ರತಿಷ್ಠೆ ಬಿಟ್ಟು, ಪಕ್ಷ ಕಟ್ಟುವ ರಾಜಕಾರಣ ಮಾಡಿದರಷ್ಟೆ  ಪಕ್ಷಕ್ಕೆ ಮತ್ತು ಪಕ್ಷದ ಪ್ರಾದೇಶಿಕ ಅಧ್ಯಕ್ಷರಿಗೆ ಉಳಿಗಾಲ. ಇಲ್ಲದೇ ಹೋದರೆ ಇವರು ದಿನಂಪ್ರತಿ ವಿರೋಧ ಪಕ್ಷಗಳಿಗಿಂತ ಸ್ವ ಪಕ್ಷದವರ ಜೊತೆಗೆ ಹೆಚ್ಚು ಜಗಳವಾಡಬೇಕಾಗುತ್ತದೆ. ಅದರ ಪರಿಣಾಮವೇನು ಎಂಬುದಕ್ಕೆ ಮಹಾ ಭಾರತದ ಕರ್ಣನಿಗಿಂತ ಬೇರೆ ನಿದರ್ಶನ ಬೇಕಿಲ್ಲ ಅಲ್ಲವೆ?

26
ಆಕ್ಟೋ

ಈಗ ರೈತನಿಗೂ ಅನಿಸುತ್ತಿದೆ, ಇದು ೨೦೨೦ರ ಭಾರತ ಎಂದು

– ಅಜಿತ್ ಶೆಟ್ಟಿ ಹೆರಂಜೆ

ಪ್ರಧಾನಿ ಮೋದಿಯವರು ೨೦೨೨ರ ಹೊತ್ತಿಗೆ ದೇಶದ ರೈತರ ಆದಾಯ ದ್ವಿಗುಣ ಮಾಡುವ ಬಗ್ಗೆ ಮಾತನಾಡಿದ್ದರು. ಇದೇ ನಿಟ್ಟಿನಲ್ಲಿ ಮೋದಿ ಸರ್ಕಾರ ಕಳೆದ ಆರು ವರ್ಷಗಳಿಂದ ದೇಶದ ಬಡವರ ಮತ್ತು ಕೃಷಿಕರ ಶ್ರೇಯೋಭಿವೃದ್ಧಿಯತ್ತ ಕೆಲಸಮಾಡಿದೆ. ಆ ಕಾರಣಕ್ಕೆ ಮೋದಿಯವರು ಜಾರಿಗೆ ತಂದ ಯೋಜನೆಗಳಾದ ಯೂರಿಯಾಕ್ಕೆ ಬೇವಿನ ಲೇಪನ ಮಾಡಿದ್ದು, ಜನ್‌ಧನ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಕಿಸಾನ್ ಸಿಂಚಾಯಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಆಯುಷ್ಮಾನ್ ಭಾರತ್ ಯೋಜನೆ, ಫಸಲ್ ಭೀಮಾ ಯೋಜನೆ, ಸೋಯ್ಲ್ ಹೆಲ್ತ್ ಕಾರ್ಡ್ ಯೋಜನೆ, ಪಾರಂಪರಿಕ ಕೃಷಿ ಯೋಜನೆ ಅಥವಾ ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಸುಧಾರಣಾ ಮಸೂದೆ ೨೦೨೦ ಇವೆಲ್ಲವೂ ಮೋದಿಯವರು ರೈತರಿಗೆ ಕೊಟ್ಟ ಮಾತಿಗೆ ಪೂರಕವಾಗಿ ಬಂದ ಯೋಜನೆಗಳು. ಚೀನಿಯರು ಭಾರತದ ಗಡಿಯಲ್ಲಿ ನಿಂತು ನಾವು ನಿಮ್ಮನ್ನು ೬೨ರಂತೆ ಹೊಸಕಿ ಹಾಕುತ್ತೇವೆ ಅಂದಾಗ ಅದಕ್ಕೆ ಅಂದಿನ ರಕ್ಷಣಾ ಮಂತ್ರಿಗಳಾದ ದಿವಂಗತ ಅರುಣ್ ಜೇಟ್ಲಿಯವರು ಮಾರ್ಮಿಕವಾಗಿ ಇದು ೬೨ರ ಭಾರತ ಅಲ್ಲ, ೨೦೨೦ರ ಭಾರತ ಅಂದಿದ್ದರು. ಅವರು ಹೇಳಿದ್ದು ದೇಶದ ಸೈನ್ಯ ಶಕ್ತಿಯ ಮಟ್ಟಿಗೆ ಸರಿಯಾಗೆ ಇತ್ತು. ಆದರೆ ಅಂದು ದೇಶದ ರೈತನಿಗೆ ಬಹುಶಃ ಇದು ೨೦೨೦ರ ಭಾರತ ಅನ್ನಿಸಿರಲಿಕ್ಕಿಲ್ಲ. ಕಾರಣ ಅವನು ಮೋದಿಯವರು ಕೃಷಿ ಸುಧಾರಣಾ ಕಾನೂನು ೨೦೨೦ ತರುವ ತನಕ ಬ್ರಿಟೀಷರ ಕಾಲೋನಿಯಲ್ ಕಾನೂನುಗಳ ಸಂತ್ರಸ್ತನಾಗಿಯೆ ಇದ್ದ. ರೈತ ತನಗೆ ಇಷ್ಟ ಬಂದ ಬೆಳೆಯನ್ನೇನೋ ಬೆಳೆಯುತ್ತಿದ್ದ. ಆದರೆ ಆತ ಅದನ್ನು ತನಗೆ ಇಷ್ಟ ಬಂದ ಜಾಗದಲ್ಲಿ ಇಷ್ಟ ಬಂದ ಬೆಲೆಗೆ, ತನಗೆ ಇಷ್ಟ ಬಂದ ವ್ಯಕ್ತಿಗೆ ಮಾರುವ ಅವಕಾಶದಿಂದ ವಂಚಿತನಾಗಿದ್ದ. ಇವನನ್ನು ದಾಸ್ಯದ ಸಂಕೋಲೆಯಿಂದ ಬಿಡುಗಡೆ ಮಾಡಿದ್ದು ಕೃಷಿ ಮಸೂದೆ-೨೦೨೦. ಮತ್ತಷ್ಟು ಓದು »

26
ಜೂನ್

ಅಧಿಕಾರ ನಿಮಿತ್ತಂ ಬಹುಕೃತ ವೇಷಂ

– ಬಿದಿರೆ ಪ್ರಕಾಶ್

ಎಂತಹ ಮಾತು? :  ‘ನನ್ನ ಮೇಲೆ ಬಿಜೆಪಿಯ ಕೃಪೆಯಿದೆ, ಬಿಜೆಪಿಯ ಕೃಪೆಯಿಂದ, ಬಿಜೆಪಿಯ ಹಿರಿಯರು ನೀಡಿದ ನನಗೊಂದು ಅವಕಾಶದಿಂದ ನಾನು ಇಂತಹ ಸ್ಥಾನದಲ್ಲಿದ್ದೇನೆ’ ಇದು ಇಡೀ ದೇಶದಲ್ಲಿ ತನ್ನದೇ ನಾಮಬಲದಿಂದ ಬಿಜೆಪಿಯನ್ನು ಮೇರು ಶಿಖರಕ್ಕೆ ಹೊತ್ತೊಯ್ದ ದೇಶದ ನೆಚ್ಚಿನ ಪ್ರಧಾನಿಯವರ ಮಾತುಗಳು.

ಕಳೆದ ಲೋಕಸಭಾ ಚುನಾವಣೆಯಲ್ಲಿ 282ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದದ್ದೂ ಇವರ ನಾಮಬಲದಿಂದಲೇ, ನಂತರ ಒಂದಾದ ಮೇಲೆ ಒಂದರಂತೆ ದೇಶದ ರಾಜ್ಯಗಳೆಲ್ಲಾ ಬಿಜೆಪಿ ಗೆಲುವು ಸಾಧಿಸುತ್ತಿರುವುದೂ ಇವರ ಸಾಮರ್ಥ್ಯದಿಂದಲೇ. ಆದರೆ ಈ ಗೆಲುವು, ಸಾಧನೆಗಳೆಲ್ಲವಕ್ಕೂ ತಾವೇ ಕಾರಣೀ ಪುರುಷನಾಗಿದ್ದರೂ ಅದನ್ನು ‘ಕಾರ್ಯಕರ್ತರ ಗೆಲುವು’, ಹಿರಿಯರು ಕೊಟ್ಟ ಅವಕಾಶ’ ಎಂದು ಹೇಳುವ ಶ್ರೀ ನರೇಂದ್ರ ಮೋದಿಯವರಂತಹ ಮೇರು ವ್ಯಕ್ತಿತ್ವವಿರುವುದೂ ಬಿಜೆಪಿಯಲ್ಲೇ.

ಎಂತಹ ವಿಪರ್ಯಾಸ… ! :  ಬಿಜೆಪಿ ಅಧಿಕಾರದಲ್ಲಿದ್ದಾಗ ಮಾತ್ರ ಬಿಜೆಪಿಗೆ ಬಂದರು, ಅಧಿಕಾರವನ್ನೂ ಅನುಭವಿಸಿದರು. ಬಿಜೆಪಿಗೆ ಏನನ್ನೂ ಕೊಡದೆ, ಬಿಜೆಪಿಯಿಂದಲೇ ಎಲ್ಲವನ್ನೂ ಪಡೆದರು. ಕೊನೆಗೆ ಬಿಜೆಪಿಯನ್ನೂ, ಬಿಜೆಪಿ ನಾಯಕರನ್ನೂ ಜರಿದು ಬಿಡುವ ಬಿ.ಜೆ. ಪುಟ್ಟಸ್ವಾಮಿಯಂತಹ ನಾಯಕ(?)ರುಗಳು ಇರುವುದೂ ಬಿಜೆಪಿಯಲ್ಲೇ.ಬಿಜೆಪಿಗೆ ಒಳಹೊಕ್ಕಾಗ ಇದರಿಂದ ಬರುವಂತಹ ಮಾತುಗಳೆಂತಹವು? ಬಿಜೆಪಿ ಬಿಡುವಾಗ ಇವರುಗಳ ಬಾಯಿಂದ ಉದುರುವ ನುಡಿಮುತ್ತುಗಳೆಂತವು? ಎಂಎಲ್‌ಸಿ ಸ್ಥಾನ ವಂಚಿತರಾದ ಕೂಡಲೇ ಎಂತಹ ಮಾತುಗಳು ಈ ಪುಟ್ಟಸ್ವಾಮಿಯವರಿಂದ ಬಂದು ಬಿಟ್ಟಿತು! ಇವರು ಬಂದ ಮೇಲೆಯೇ ಬಿಜೆಪಿಯಲ್ಲಿ ಹಿಂದುಳಿದ ವರ್ಗ ಸಂಘಟನೆಯಾಯಿತಂತೆ! ಪುಟ್ಟಸ್ವಾಮಿಯವನರನ್ನು ಒಮ್ಮೆ ಕೇಳಲೇಬೇಕು. ಎಲ್ಲಿದ್ದೀರಾ ಪುಟ್ಟಸ್ವಾಮಿಯವರೇ? ನೀವು ಬರುವ ಮೊದಲು ಬಿಜೆಪಿ ಏನಾಗಿತ್ತು? ನೀವು ಬಂದ ಮೇಲೆ ಬಿಜೆಪಿ ಏನಾಯಿತು? ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ, ಹಾಗೆಯೇ ಬಿಜೆಪಿಗೆ ನೀವು ಬಂದ ಮೇಲೆ, ನೀವೂ, ನಿಮ್ಮ ಅಂತಸ್ತು ಏನಾಯಿತೆಂಬುದನ್ನೂ ಮನನ ಮಾಡಿಕೊಳ್ಳಿ.

ಮತ್ತಷ್ಟು ಓದು »

19
ಏಪ್ರಿಲ್

ಯುಎಇ ನಿಜಕ್ಕೂ ಅಷ್ಟೊಂದು ಅಸಹಿಷ್ಣು ದೇಶವೇ?

– ರಾಘವೇಂದ್ರ ಎಮ್‌ ಸುಬ್ರಹ್ಮಣ್ಯ

Arab_Gulf_States_englishಕಳೆದೆರಡು ವಾರದಿಂದ ಗಲ್ಫ್ ದೇಶಗಳಲ್ಲಿರುವ ಹಿಂದೂಗಳ ಕೆಲಸಕ್ಕೆ ಕುತ್ತು ತರುವ ವ್ಯವಸ್ಥಿತ ಸಂಚುಗಳು ನಡೆದಿವೆ. ದೆಹಲಿಯ ತಬ್ಲೀಗೀ ಜಮಾತ್’ನವರ ವರ್ತನೆಯನ್ನು ಖಂಡಿಸಿ ಏನನ್ನಾದರೂ ಬರೆದರೆ ಅದೇ ದೊಡ್ಡ ತಪ್ಪು ಎಂಬಂತೆ ಬಿಂಬಿಸಿ, ಪೋಲಿಸರಿಗೆ ದೂರು ನೀಡುವ ಕೆಲಸ ನಡೆದಿದೆ. ಹಾಗಾದರೆ ಯುಎಇಯಲ್ಲಿ ಅಷ್ಟೆಲ್ಲಾ ಸುಲಭಕ್ಕೆ ಯಾರನ್ನಾದರೂ ಅರೆಸ್ಟ್ ಮಾಡಿಸಬಹುದೇ? ಇಸ್ಲಾಂ ಬಗ್ಗೆ ಏನೂ ಕೆಟ್ಟದಾಗಿ ಬರೆಯದೇ, ಭಾರತದ ಕೆಲ ಮುಸ್ಲಿಮರ ತಪ್ಪುಗಳ ಬಗ್ಗೆ ಬರೆದರೆ ಅದು ಶಿಕ್ಷಾರ್ಹ ಅಪರಾಧವೇ?

ಹೆಚ್ಚಿನವರಿಗೆ ಅರಬ್ ರಾಷ್ಟ್ರಗಳೆಂದರೆ ಬಹಳಷ್ಟು ತಪ್ಪು ಅಭಿಪ್ರಾಯಗಳಿವೆ. ತಪ್ಪು ಮಾಡಿದರೆ ಸಾರ್ವಜನಿಕವಾಗಿ ಛಡಿಯೇಟು ಬೀಳುತ್ತದೆ, ಕೈ ಕಾಲು ತಲೆ ಕಡಿಯುತ್ತಾರೆ ಎಂಬೆಲ್ಲಾ ಅನಿಸಿಕೆಗಳಿವೆ. ಆದರೆ ಈ ಎಲ್ಲಾ ಹೆಚ್ಚಿನ ಅಭಿಪ್ರಾಯಗಳು ಬಂದಿರುವುದು ಸೌದಿ ಅರೇಬಿಯಾದಿಂದ. ಯಾಕೆಂದರೆ ಇವೆಲ್ಲಾ ಹೆಚ್ಚಾಗಿ ನಡೆಯುವುದು ಅಲ್ಲಿ ಮಾತ್ರ. ಆದರೆ ಎಲ್ಲಾ ಅರಬ್ ದೇಶಗಳೂ ಹೀಗಿಲ್ಲ. ಇಲ್ಲಿ ಇಸ್ಲಾಂ ನಿಂದನೆಯನ್ನು ಯಾರೂ ಸಹಿಸುವುದಿಲ್ಲವಾದರೂ, ಒಮಾನ್, ಬಹರೈನ್ ಮತ್ತು ಯುಎಇ ದೇಶಗಳು ಸಹಿಷ್ಣುತೆಯಲ್ಲಿ ಹೊಸ ಅಧ್ಯಾಯಗಳನ್ನೇ ಬರೆದಿವೆ. ಮತ್ತಷ್ಟು ಓದು »

31
ಜನ

CAA ಮತ್ತು NRC: ಬೆಂಕಿಯ ಭ್ರಮೆಯಲ್ಲಿ ಬಾವಿಗೆ ಧುಮುಕುವುದೇಕೆ?

– ಸಂಕೇತ್ ಡಿ ಹೆಗಡೆ

‘Citizenship Amendment Bill’ – ಇಂಥದ್ದೊಂದು ಬಾಂಬ್ ಅನ್ನೇ ಅಮಿತ್ ಶಾ ಆವತ್ತು ಪಾರ್ಲಿಮೆಂಟ್ ನಲ್ಲಿ ಹಾಕಿದರು. ಇದು ಇಷ್ಟೊಂದು ಶಕ್ತಿಯುತ ಬಾಂಬ್ ಎಂದು ಬಹುಶಃ ಗೃಹಮಂತ್ರಿಯಾಗಿ ಸ್ವತಃ ಅವರೂ ಯೋಚಿಸಿರಲಿಕ್ಕಿಲ್ಲ. ಡಿಸೆಂಬರ್ ನಾಲ್ಕಕ್ಕೆ ಕ್ಯಾಬಿನೆಟ್ ಅನುಮೋದನೆ ಪಡೆದ ಈ ಮಸೂದೆ, 9 ಡಿಸೆಂಬರ್ ರಂದು ಲೋಕಸಭೆಯಲ್ಲಿ ಮಂಡನೆಯಾಯಿತು. ಮರುದಿನ ಅಲ್ಲಿ ಸಲೀಸಾಗಿ ಅನುಮೋದನೆಯಾದ ಈ ಪ್ರಸ್ತಾವನೆ, ’ರಾಜ್ಯಸಭೆ’ಯಲ್ಲೂ ಈಜಿ ದಡ ಸೇರುವುದೇ ಎಂಬುದೇ ಎಲ್ಲರ ಪ್ರಶ್ನೆಯಾಗಿತ್ತು. ಆದರೆ  ಡಿಸೆಂಬರ್ 11ರಂದು 20 ಮತಗಳ ಅಂತರದಲ್ಲಿ ಇದು ರಾಜ್ಯಸಭೆಯಲ್ಲೂ ಅನುಮೋದನೆಗೊಂಡಿತು. ಮರುದಿನವೇ ರಾಷ್ಟ್ರಪತಿಗಳ ಅಂಕಿತವೂ ಬಿದ್ದು, ’Bill’ ಇದ್ದದ್ದು ‘Act’ ಆಯಿತು. ‘ಮಸೂದೆ’ ಅಧಿಕೃತವಾಗಿ ಕಾಯಿದೆಯಾಯಿತು. ಈಗ ಶುರುವಾಯಿತು ನೋಡಿ ಈ ಬಾಂಬಿನ ಆಟಾಟೋಪ!

ಇದ್ದಕ್ಕಿದ್ದಂತೆ ಯೂನಿವರ್ಸಿಟಿಗಳು ರಣಾಂಗಣಗಳಾದವು. ’ಜಾಮಿಯಾ ಇಸ್ಲಾಮಿಯಾ’ ವಿಶ್ವವಿದ್ಯಾಲಯದ ಒಳಬದಿಯಿಂದ ಕಲ್ಲುಗಳು ತೂರಿಬಂದವು. ಇಂಥವುಗಳಿಗೆ ಸದಾ ’ಹೆಸರುವಾಸಿ’ಯಾದ ಜೆಎನ್ಯೂ ಸುಮ್ಮನಿರಲು ಸಾಧ್ಯವೇ? ಅಲ್ಲಿಯೂ ಪರಿಸ್ಥಿತಿ ಭುಗಿಲೆದ್ದಿತು.  ’ಜಾಮಿಯ’ದಿಂದ ಶುರುವಾದದ್ದು ಸಾಂಕ್ರಾಮಿಕ ರೋಗದಂತೆ ’ಆಲಿಗಡ್ ಮುಸ್ಲಿಮ್ ಯುನಿವರ್ಸಿಟಿ’, ‘ನಾದ್ವಾ’ ಹೀಗೆ ದೇಶದ ಅನೇಕ ಯೂನಿವರ್ಸಿಟಿಗಳಿಗೆ ಹಬ್ಬಿತು. ಅದಲ್ಲದೇ ಯೂನಿವರ್ಸಿಟಿಗಳ ಹೊರಗೂ, ಸದ್ಯದ ಕೇಂದ್ರ ಸರ್ಕಾರದ ಸೈದ್ಧಾಂತಿಕ ವೈರಿಗಳ ಸಕಲ ಗುಂಪುಗಳಿಂದ ದೊಡ್ಡ ಹಿಂಸಾಚಾರಗಳೇ ನಡೆದವು. ಇಂಥ ಕಾಯ್ದೆಯೊಂದು ಈ ಮಟ್ಟಿಗೆ ಪ್ರತಿಕ್ರಿಯೆಗಳನ್ನು ಪಡೆಯಬೇಕಾಗುತ್ತದೆ ಎಂಬುದನ್ನು ಬಹುಶಃ ನೀರಿಕ್ಷಿಸದಿದ್ದ ಸರ್ಕಾರಕ್ಕೆ, ಇದೊಂದು ಆಘಾತವೇ ಸರಿ. ನೇಮಿಸಿದ್ದ ಪೋಲೀಸ್ ತುಕಡಿಗಳು ಸಾಕಾಗಲಿಲ್ಲ. ಬೆರಳೆಣಿಕೆಯಷ್ಟಿದ್ದ ಪೋಲೀಸರು ಸಾವಿರ ಸಂಖ್ಯೆಗಳಲ್ಲಿದ್ದ ಗಲಭೆನಿರತರನ್ನು ಸಂಭಾಳಿಸಲು ಸಾಧ್ಯವಾಗಲಿಲ್ಲ. ಪೋಲೀಸರು ದೇಶದ ಅನೇಕ ಕಡೆ ಹೊಡೆತ ತಿಂದರು, ಗಾಯಗೊಂಡರು. ಲಕ್ನೋ ನಗರದಲ್ಲೊಂದರಲ್ಲೇ 250ಕ್ಕೂ ಅಧಿಕ ಪೋಲಿಸರು ಗಾಯಗೊಂಡರು ಮತ್ತು ದೇಶವೇ ನಿಬ್ಬೆರಗಾಗುವಂತೆ 50ಕ್ಕೂ ಹೆಚ್ಚು ಪೋಲಿಸರಿಗೆ ಗುಂಡೇಟಾಯಿತು. ಪೋಲೀಸರಿಗೆ ಗುಂಡೇಟಾಯಿತು! ಪ್ರತಿಭಟನಾಕಾರರ ಕಿಸೆಯಲ್ಲಿ ಗುಂಡು ತುಂಬಿ, ಮರೆಯಲ್ಲೆಲ್ಲೋ ಕೈಯಲ್ಲಿ ಬಂದೂಕು ಕೊಟ್ಟದ್ದು ಯಾರು ಅಂತ ಮಾತ್ರ ’ಜಾಮಿಯಾ’, ’ಜೆ ಎನ್ಯೂ’ಗಳಲ್ಲಿ ಪಿಎಚ್ಡಿ ಮಾಡುತ್ತಿರುವವರಿಗೇ ಗೊತ್ತಿರಬೇಕು, ನನಗಂತೂ ಗೊತ್ತಿಲ್ಲ.

ಇಂಥ ಭಯಾನಕ ಗಲಭೆಗಳು ಅನೀರಿಕ್ಷಿತವಾಗಿ ನಡೆದಾಗ, ಇದ್ದಬದ್ದ ಪೋಲೀಸರೇ ಹೊಡೆತ ತಿಂದಾಗ, ಸಹಜವಾಗಿ ಹೆಚ್ಚುವರಿ ತುಕಡಿಗಳು ಪ್ರತಿಭಟನಾ ಸ್ಥಳವನ್ನು ತಲುಪುತ್ತವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಕಾರಣದಲ್ಲಿ, ಅಲ್ಲಿ ಪೋಲೀಸ್ ಹಿಂಸಾಚಾರ ಕೂಡ ನಡೆಯುತ್ತದೆ. ಲಾಠಿ ಚಾರ್ಜ್ ಗಳಾಗುತ್ತವೆ, ಅಶ್ರುವಾಯುಗಳು ಸಿಡಿಯುತ್ತವೆ, ಗಾಳಿಯಲ್ಲಿ ಗುಂಡು ಹಾರುತ್ತದೆ, ಕೆಲವೊಮ್ಮೆ ಗೋಲೀಬಾರ್ ಕೂಡ ನಡೆದುಹೋಗುತ್ತದೆ. ದುರದೃಷ್ಟಕರವಾಗಿ ಎಲ್ಲವೂ ಹೀಗೇ ಆಯಿತು. ಇವೇನು ವಿಶ್ವವಿದ್ಯಾಲಯಗಳೋ, ಯುದ್ಧಭೂಮಿಗಳೋ ಎಂದು ಜನರಿಗೆ ಗೊಂದಲವಾಗುವಷ್ಟರ ಮಟ್ಟಿಗೆ ಪರಿಸ್ಥಿತಿ ಹದಗೆಟ್ಟಿತ್ತು. ಅದು ದೇಶಕ್ಕೆ ಒಳಿತಿರಲಿ ಅಥವಾ ಕೆಡುಕಿರಲಿ, ಏನೇ ಇರಲಿ, ಈ ಸರ್ಕಾರ ಯಾವ ಹೆಜ್ಜೆಯಿಟ್ಟರೂ ದೇಶದಲ್ಲಿ ‘ಕೆಂಪು’ ರಕ್ತ ಹರಿಸಬೇಕು ಎಂದು ಸದಾಕಾಲ ಕಾದುಕುಳಿತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಟ್ಟೆಂದು ಎದ್ದುನಿಂತವು. ಪರಿಸ್ಥಿತಿ ವಿಕೋಪಕ್ಕೆ ಹೋಗಲು ಏನೇನು ಮಾಡಬಹುದೋ ಅದನ್ನೆಲ್ಲ ಚಾಚೂ ತಪ್ಪದೇ ಮಾಡಿದವು. “ನಿಮ್ಮ ಅಸ್ತಿತ್ವವೇ ಅಪಾಯದಲ್ಲಿದೆ” ಎಂಬ ತಪ್ಪುಸಂದೇಶವನ್ನು ಅತ್ಯಂತ ಅಚ್ಚುಕಟ್ಟಾಗಿ ಒಂದು ನಿರ್ದಿಷ್ಟ ಸಮುದಾಯಕ್ಕೆ ತಲುಪುವ ಹಾಗೆ ನೋಡಿಕೊಂಡವು. ’ಇನ್ನೇನು ನಿಮ್ಮನ್ನು ದೇಶದಿಂದ ಹೊರಹಾಕಿಯೇ ಬಿಡುತ್ತಾರೆ’ ಅಂತ ಹುಚ್ಚು ಕಲ್ಪನೆಯನ್ನು ಒಂದು ದೊಡ್ಡ ಸಂಖ್ಯೆಯ ಜನರ ತಲೆಯಲ್ಲಿ ವ್ಯವಸ್ಥಿತವಾಗಿ ತೂರಿಬಿಟ್ಟರು. ಆಹ್.. ಹೊತ್ತುತ್ತಿದ್ದ ಬೆಂಕಿಗೆ ಗಾಳಿ ಊದಿದಂತಾಯಿತು.

ಹ್ಮ್… ಇಷ್ಟೆಲ್ಲ ಏಕಾಯಿತು? ಅಂಥ ’ಸ್ಫೋಟಕ ವಸ್ತು’ ಈ ಕಾಯ್ದೆಯಲ್ಲಿದೆಯೇ? ಇದು ಅಸಾಂವಿಧಾನಿಕವೇ? ಇದು ಧರ್ಮಗಳ ನಡುವೆ ಪಕ್ಷಾತೀತ ಮಾಡುವ ಹುನ್ನಾರವೇ? ನಾಳೆ ನಮ್ಮನ್ನೂ ಹೊರಹಾಕಿಬಿಡುತ್ತಾರೆಯೇ?

ಇಂಥ ಪ್ರಶ್ನೆಗಳನ್ನೆಲ್ಲ ಕೇಳಿದಾಗ ಅಳಬೇಕೋ ನಗಬೇಕೋ ಗೊತ್ತಾಗುವುದಿಲ್ಲ. ಆದರೆ ಇಂಥ ಅಸಂಬದ್ಧಗಳನ್ನೇ ಅಷ್ಟು ವ್ಯವಸ್ಥಿತವಾಗಿ ಒಂದಿಷ್ಟು ಜನರ ತಲೆಗೆ ನಮ್ಮೆದುರೇ ತುಂಬಿ ಹುಯಿಲೆಬ್ಬಿಸಿಬಿಟ್ಟರಲ್ಲ ಎಂದು ನೆನೆಸಿಕೊಂಡರೆ ಬೇಸರವಾಗುತ್ತದಷ್ಟೇ. ಸರಿ ಈಗ ಕಾಯ್ದೆಯ ವಿಷಯಕ್ಕೆ ಬರೋಣ.

ಈ ಕಾಯ್ದೆ ಏನು ಹೇಳುತ್ತದೆ ಎಂದು ಬಹುಶಃ ನೀವೆಲ್ಲ ಇಷ್ಟುದಿನದಲ್ಲಿ ಖಂಡಿತವಾಗಿ ತಿಳಿದುಕೊಂಡಿರುತ್ತೀರಿ. ಆದರೂ ಒಂದು ಚಿಕ್ಕ ವಿವರಣೆ ಕೊಡುವುದು ನನ್ನ ಕರ್ತವ್ಯ. ಇದು ನಮ್ಮ ನೆರೆಹೊರೆಯಲ್ಲಿರುವ 3 ರಾಷ್ಟ್ರಗಳ ಧಾರ್ಮಿಕ ಅಲ್ಪಸಂಖ್ಯಾತರಿಗೆ, ಅವರು ಅಲ್ಲಿ ಧಾರ್ಮಿಕ ನೆಲೆಗಟ್ಟಿನಲ್ಲಿ ಹಿಂಸೆಗೊಳಗಾಗಿ ಭಾರತಕ್ಕೆ ಐದು ವರ್ಷಗಳ ಹಿಂದೆ – ಅಂದರೆ ಡಿಸೆಂಬರ್ 31, 2014ಕ್ಕೂ ಮೊದಲು ಓಡಿ ಬಂದಿದ್ದರೆ, ಅವರಿಗೆ ಭಾರತೀಯ ಪೌರತ್ವವನ್ನು ದಯಪಾಲಿಸುವ ಕಾಯ್ದೆ. ಈ ಕಾಯ್ದೆಯಡಿ ಆ ದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಅನ್ನಿಸಿಕೊಂಡಿರುವ ಆರು ಧರ್ಮಗಳನ್ನು ಪಟ್ಟಿಮಾಡಲಾಗಿದೆ – ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ. ಈ ಧರ್ಮಗಳ ಜನರು ತಾವು ಇತರ ಧರ್ಮದವರು ಎಂಬ ಏಕೈಕ ಕಾರಣಕ್ಕೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗಿ, ಅಪಕೃತ್ಯ- ಅತ್ಯಾಚಾರಗಳಿಗೆ ಒಳಗಾಗಿ ಭಾರತದ ಗಡಿಯೊಳಗೆ ದಾಖಲೆಗಳಿಲ್ಲದೆ, ಅನುಮತಿಯಿಲ್ಲದೆ ಓಡಿ ಬಂದಿದ್ದರೂ – ಮಾನವೀಯ ನೆಲೆಗಟ್ಟಿನಲ್ಲಿ ನಾವು ಅವರಿಗೆ ಪೌರತ್ವ ಕೊಡುತ್ತೇವೆ ಎಂಬುದು ಈ ಕಾಯ್ದೆಯ ವಾಗ್ದಾನ. ‘ಮುಸ್ಲೀಮರನ್ನೇಕೆ ಹೊರಗಿಟ್ಟಿರಿ?’ ಆಯ್ತು, ಅಲ್ಲಿಗೇ ಬರೋಣ.

1947ರಲ್ಲಿ ದೇಶದ ವಿಭಜನೆ ನಡೆಯಿತು. ಯಾಕೆ ನಡೆಯಿತು, ಅದು ಸರಿಯೇ, ತಪ್ಪೇ, ಮಾಡಬಾರದಿತ್ತೇ? ಇವೆಲ್ಲ ಪೋಸ್ಟ್ ಮಾರ್ಟಮ್ ಗಳಿಗೆ ನಾನು ಹೋಗುವುದಿಲ್ಲ. ಹೌದು, 70 ವರ್ಷಗಳ ಹಿಂದೆ ಅಂಥದ್ದೊಂದು ಭಯಾನಕ ಘಟನೆ ನಡೆದುಹೋಯಿತು. ಕೋಟ್ಯಂತರ ಜನ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಹಾದು ಬಂದರು. ಮೊದಲೇ ಬ್ರಿಟೀಷರು ನುಂಗಿ-ನೀರ್ಕುಡಿದಿದ್ದ ಆರ್ಥಿಕ ಪರಿಸ್ಥಿತಿ, ಅದರ ಮೇಲೆ ’ವಿಭಜನೆ’ ಎಂಬ ಬರೆ! ಲಕ್ಷಾಂತರ ಜನ ಹಾದಿ ಮಧ್ಯೆ ಸತ್ತರು, ಹಸಿದು ದಣಿದು ಸತ್ತರು. ಎರಡೂ ಕಡೆ ನಡೆಯಲೇಬಾರದಂತಹ ಘಟನೆಗಳು ನಡೆದುಹೋದವು. ಆದರೆ ಎರಡೂ ಕಡೆ, ನೂರಾರು ವರ್ಷಗಳಿಂದ, ತಲೆತಲೆಮಾರುಗಳಿಂದ ಅಲ್ಲೇ ವ್ಯವಸಾಯ ಮಾಡಿ, ಅಲ್ಲೇ ಬದುಕುಕಟ್ಟಿಕೊಂಡಿರುವವರಲ್ಲಿ ಅನೇಕರಿಗೆ ಅದನ್ನು ಬಿಟ್ಟುಬರಲಾಗಲಿಲ್ಲ. ಹೌದು! ಯಾರೋ ಎಲ್ಲೋ ದೊಡ್ಡ ಮಟ್ಟದಲ್ಲಿ, ಸಹಿಹಾಕಿದರು, ಒಪ್ಪಂದಕ್ಕೆ ಬಂದರು ಎಂಬ ಮಾತ್ರಕ್ಕೆ – it simply doesn’t make any sense to normal people living around, striving for a livelihood everyday to just leave everything and migrate to some unknown land. ಅಂಥವರು ಅಲ್ಲೇ ಉಳಿದರು. ಆಗಿನ ಪೂರ್ವ ಮತ್ತು ಪಶ್ಚಿಮ ಪಾಕಿಸ್ತಾನಗಳಾಗಿ ಒಂದೇ ದೇಶವೆನಿಸಿಕೊಂಡಿದ್ದ ಈಗಿನ ಬಾಂಗ್ಲಾ ಮತ್ತು ಪಾಕಿಸ್ತಾನಗಳು ಅವರ ನೆಲೆಬೀಡಾದವು. ಆದರೆ ತಾನು ’ಇಸ್ಲಾಮಿಕ್ ಗಣರಾಜ್ಯ’ ಎಂದು ಅಧಿಕೃತವಾಗಿ ಘೋಷಿಸಿಕೊಂಡಿತು ನೋಡಿ ಪಾಕಿಸ್ತಾನ – ಅಲ್ಲಿನ ಮತೀಯ ಮೃಗಗಳಿಗೆ ಸರ್ಕಾರದ ಬೆಂಬಲ ಸಿಕ್ಕಂತಾಯಿತು. ‘ಕಾಫಿರ’ರ ಮೇಲೆ ದೌರ್ಜನ್ಯ ಮಾಡುವುದು ಒಂಥರಾ ಕಾನೂನಿಗೆ ವಿರುದ್ಧವಲ್ಲದ ಸಂಗತಿ ಎಂಬಂತಾಗಿಹೋಯಿತು. ಏಕೆಂದರೆ ಇಸ್ಲಾಮ್ ರಾಷ್ಟ್ರೀಯ ಧರ್ಮ ನೋಡಿ. ಆ ದೇಶ ತನ್ನನ್ನು ಗುರುತಿಸಿಕೊಳ್ಳುವುದೇ ಧರ್ಮದ ಆಧಾರದ ಮೇಲೆ – ಪಾಕಿಸ್ತಾನದ ಧ್ವಜವನ್ನು ನೋಡಿದರೆ ನಿಮಗೆಲ್ಲವೂ ಅರ್ಥವಾಗಿಬಿಡಬೇಕು.

ಪಾಕಿಸ್ತಾನದಲ್ಲಿ 1947ರಲ್ಲಿ 22%ರಷ್ಟು ಇದ್ದ ಇಸ್ಲಾಮೇತರ ಜನಸಂಖ್ಯೆ 2011ರ ವೇಳೆಗೆ 7.8% ಗೆ ಇಳಿದಿತ್ತು ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಈಗಿನ ಅಂದಾಜಿನ ಪ್ರಕಾರ 3.1% ಗೆ ಇಳಿದಿದೆ. ಇವೆಲ್ಲ ಅಧಿಕೃತ ಲೆಕ್ಕಗಳಾದರೆ ವಾಸ್ತವವಾಗಿ ಇನ್ನೆಂಥ ದುಸ್ವಪ್ನವಿದೆಯೋ! ಹೀಗೊಂದು ವ್ಯವಸ್ಥಿತ ನರಮೇಧ ಆ ನೆಲಗಳಲ್ಲಿ ನಡೆದಿದೆ. 2017ರ ವರೆಗೆ ಪಾಕಿಸ್ತಾನದಲ್ಲಿ ಹಿಂದೂ ಪದ್ಧತಿಯ ಮದುವೆಗಳು ಕಾನೂನುಬಾಹಿರವಾಗಿದ್ದವು ಎಂಬ ವಿಷಯ ನಿಮಗೆ ಗೊತ್ತೇ? ಒಬ್ಬನು ಹಿಂದೂ ರೀತಿಯಲ್ಲಿ ಮದುವೆಯಾಗಿದ್ದರೆ, ಅದನ್ನು ಕಾನೂನು ಗುರುತಿಸುವುದಿಲ್ಲ. ನಾಳೆ ಯಾರೋ ಬಂದು ಆತನ ಪತ್ನಿಯನ್ನು ಅವನ ಕಣ್ಣೆದುರೇ ಅಪಹರಿಸಿಕೊಂಡುಹೋದರೂ ಕಾನೂನು ಅವನ ಸಹಾಯಕ್ಕೆ ಬರದು! ಇಂಥ ಸಾವಿರಾರು ಕಥನಗಳು, ಅಮಾನುಷ ಘಟನೆಗಳಿಗೆ ಆ ನೆಲಗಳು ಕಳೆದ 70 ವರ್ಷಗಳಲ್ಲಿ ಸಾಕ್ಷಿಯಾಗಿವೆ. ಪತ್ನಿಯನ್ನು ಕದ್ದೊಯ್ದರೂ, ಮನೆಯ ಮಕ್ಕಳನ್ನು ಅತ್ಯಾಚಾರಕ್ಕೊಳಪಡಿಸಿದರೂ, ಕೊನೆಗೆ ಬಂದು ತನ್ನನ್ನು ಕೊಂದು ಹೋದರೂ ದೇಶ ಅಥವಾ ಕಾನೂನು ಸಹಾಯಕ್ಕೆ ಬರುವುದಿಲ್ಲ ಎಂದು ಗೊತ್ತಾದಮೇಲೆ, ಜೀವಿಸುವ ಪರಿಸರ ಮತ್ತು ಪರಿಸ್ಥಿತಿ ದಿನದಿನಕ್ಕೂ ವಿಷಮವಾಗುತ್ತ ಹೋದಮೇಲೆ ಅನೇಕರು ಅಲ್ಲಿಂದ ಇಲ್ಲಿಗೆ ಗುಳೆ ಬರಲು ಪ್ರಾರಂಭಿಸಿದರು. ಅವರೇ ನಾವು ಮಾತನಾಡುತ್ತಿರುವ ನಿರಾಶ್ರಿತರು. ಅವರಿಗೇ ನಾವು ಮಾನವೀಯ ನೆಲೆಗಟ್ಟಿನಲ್ಲಿ ಪೌರತ್ವವನ್ನು ಕೊಡಲು ಸಿದ್ಧರಿದ್ದೇವೆ ಎನ್ನುತ್ತಿರುವುದು.

ಹಾಗಿದ್ದರೆ ‘ಇಸ್ಲಾಂ’ ಧರ್ಮವನ್ನು ಈ ಕಾಯ್ದೆಯಿಂದ ಹೊರಗಿಟ್ಟಿರುವುದೇಕೆ? ಸರಿ ಆ ವಿಷಯಕ್ಕೆ ಬರೋಣ. ಈ ಕಾಯ್ದೆ ಇರುವುದು ಆ ಮೂರು ದೇಶಗಳಲ್ಲಿ ಧಾರ್ಮಿಕ ನೆಲೆಗಟ್ಟಿನಲ್ಲಿ ತುಳಿತಕ್ಕೊಳಗಾದ ಅಲ್ಪಸಂಖ್ಯಾತರನ್ನು ಉದ್ದೇಶಿಸಿ.  ಅಲ್ಲಿಗೆ ಆ ದೇಶಗಳಲ್ಲಿ ಮುಸ್ಲೀಮರು ಅಲ್ಪಸಂಖ್ಯಾತರೂ ಅಲ್ಲ, ಶೋಷಿತರೂ ಅಲ್ಲ. ಹಾಗಿದ್ದರೆ ಅಹ್ಮದಿಯರೂ, ಶಿಯಾಗಳು ಮೇಲೂ ಅಲ್ಲಿ ದೌರ್ಜನ್ಯಗಳಗುತ್ತವಲ್ಲ? ಅವರನ್ನೂ ಸೆಳೆದುಕೊಳ್ಳಬಹುದಲ್ಲ? ಮಾಡಬಹುದೇನೋ.. ಆದರೆ ಇದು ಈ ಕಾಯ್ದೆಯಡಿ ಬರುವುದಿಲ್ಲ. ಏಕೆಂದರೆ ಭಾರತದ ಅತ್ಯುತ್ಕೃಷ್ಟ ಕಾನೂನು ತಜ್ಞರಲ್ಲಿ ಒಬ್ಬರಾದ ಹರೀಶ್ ಸಾಳ್ವೆ ಅವರೇ ಹೇಳುವಂತೆ – ಒಂದು ದೇಶದಲ್ಲಿ ಅನೇಕ ಕಾರಣಗಳಿಂದ ನಿರ್ದಿಷ್ಟ ಗುಂಪಿನ ಜನರು ಕಿರುಕುಳಕ್ಕೆ ಒಳಗಾಗಿರಬಹುದು. ಸಾಮಾಜಿಕ ಕಾರಣಗಳಿರಬಹುದು, ಆರ್ಥಿಕ ಕಾರಣಗಳಿರಬಹುದು, ನಂಬಿಕೆಯ ಆಧಾರದ ಮೇಲೆ ಮೇಲು-ಕೀಳೆಂಬ ಭೇದದಿಂದಿರಬಹುದು. ಆದರೆ ಈ ಕಾಯ್ದೆ ಉದ್ದೇಶಿಸುತ್ತಿರುವ ಸಮೂಹ ‘ಧಾರ್ಮಿಕ ನೆಲೆಗಟ್ಟಿನಲ್ಲಿ’ ಕಿರುಕುಳಕ್ಕೆ ಒಳಗಾದವರನ್ನು ಮಾತ್ರ. ಅಹ್ಮದೀಯರಿರಲಿ, ಶಿಯಾಗಳಿರಲಿ ‘ಧಾರ್ಮಿಕ ನೆಲೆಗಟ್ಟಿನಲ್ಲಿ’ ಕಿರುಕುಳಕ್ಕೆ ಒಳಗಾದವರಲ್ಲ. ಏಕೆಂದರೆ ಅವರ ಧರ್ಮ ಬೇರೆಯದು ಎಂದು ಕಾನೂನು ಪರಿಗಣಿಸುವುದಿಲ್ಲ. ಅವರ ಧರ್ಮವೂ ಇಸ್ಲಾಮೇ. ಒಳಗಿನ ಕೆಲವು ನಂಬಿಕೆಗಳಿಂದ ಅಲ್ಲವರು ಕಿರುಕುಳಕ್ಕೆ ಒಳಗಾಗಿರಬಹುದು. ಆದರೆ ಈ ಕಾಯ್ದೆ ಅದನ್ನು ಉದ್ದೇಶಿಸುವುದಿಲ್ಲ.

ಅವರನ್ನೂ ಸೇರಿಸಬಹುದಲ್ಲ? ಏಕೆ ಬಿಡುತ್ತೀರಿ? ಮತ್ತು ಮೂರೇ ದೇಶಗಳು ಏಕೆ? ಮಯನ್ಮಾರನ್ನೂ ಸೇರಿಸಿ.. ರೊಹಿಂಗ್ಯಾಗಳಿಗೂ ಕೊಡಿ. ಚೀನಾದಲ್ಲಿ ಕಿರುಕುಳಾಕ್ಕೊಳಗಾದ ಮುಸ್ಲೀಮರಿಗೆ ಕೊಡಿ ಅನ್ನೋದು ಇನ್ನು ಕೆಲವರ ವಾದ. ಅಲ್ಲೇ ಅವರು ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳದೇ ಇರುವುದು. ಈ ಕಾಯ್ದೆ ಯಾವ ಉದ್ದೇಶಕ್ಕೆ ತರಲ್ಪಟ್ಟಿತು ಎಂಬುದನ್ನೇ ಮರೆತಿರುವುದು. ಇದು ದೇಶ ವಿಭಜನೆಯಾದ ಕಾಲದಲ್ಲಿ ಇಲ್ಲಿ ಬರಲಾಗದೇ ಅಲ್ಲೇ ಉಳಿದುಕೊಂಡರಲ್ಲ, ನಂತರ ಪರಿಸ್ಥಿತಿ ವಿಷಮವಾದಾಗ ಇಲ್ಲಿಗೆ ಗುಳೆ ಬಂದರಲ್ಲ, ಆ ಸಮಸ್ಯೆಯನ್ನು ಬಗೆಹರಿಸಲು ರಚಿಸಲ್ಪಟ್ಟಿದ್ದು. ಹಾಗೂ ಅಫಘಾನಿಸ್ತಾನದಲ್ಲೂ ಕೊಂಚ ಹರಡಿಕೊಂಡಿದ್ದ ಹಿಂದೂ, ಸಿಖ್ ಮುಂತಾದ ಜನಾಂಗಗಳು ದಶಕಗಳ ಕಾಲ ನಡೆದ ’ಆಫ್ಘನ್ ಯುದ್ಧ’ದಲ್ಲಿ ನರಳಿದ್ದರಲ್ಲ, ಅವರನ್ನು ಉದ್ದೇಶಿಸಲು. ಜಗತ್ತಿನ ಎಲ್ಲಾ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾದವರ ಸಮಸ್ಯೆಯನ್ನು ಬಗೆಹರಿಸಲು ರಚಿಸಿದ್ದಲ್ಲ. 1947ರಲ್ಲಿ ಈ ದೇಶದಿಂದ ವಿಭಜನೆಯಾದದ್ದು ಯಾವುವು? ಪಾಕಿಸ್ತಾನ ಮತ್ತು ಬಾಂಗ್ಲಾ. ಮಯನ್ಮಾರ್ ಆಗಲೀ, ಶ್ರೀಲಂಕಾವಾಗಲೀ, ಚೀನಾವಾಗಲೀ ಸ್ವಾತಂತ್ರ್ಯ ಸಿಕ್ಕಾಗ ನಡೆದ ನಮ್ಮಿಂದ ವಿಭಜಿತವಾದ ರಾಷ್ಟ್ರಗಳಲ್ಲ. ಈ ಕಾಯ್ದೆ ಬಹುವಾಗಿ ಆಗ ನಡೆದ ಘನಘೋರ ವಿಭಜನೆಯ ಸಂತ್ರಸ್ತರೂ ಅಲ್ಲ. ಈ ಕಾಯ್ದೆ ಆಗ ನಡೆದ ವಿಭಜನೆಯ ಸಂತ್ರಸ್ತ ಕುಟುಂಬಗಳಿಗೇ ಹೊರತು ನೀವಂದುಕೊಂಡಿರುವ ಹಾಗೆ ಜಗತ್ತಿನ ಎಲ್ಲಾ ಸಂತ್ರಸ್ತರಿಗೂ ಅಲ್ಲ.

ಇಷ್ಟು ಹೇಳಿದ ಮೇಲೂ, ಇನ್ನೂ ಕೆಲವರು ಮತ್ತೂ ಮುಂದೆ ಹೋಗಿ ‘ಇರಲಿ. ಇವರು ವಿಭಜನೆಯ ಸಂತ್ರಸ್ತರಲ್ಲದಿರಬಹುದು. ಎಲ್ಲರಿಗೂ ಪೌರತ್ವ ಕೊಡೋಣ. ಎಲ್ಲಿಂದ ಬಂದರೂ ಕೊಡೋಣ’ ಎನ್ನಬಹುದು. ಸ್ವಾಮಿ, ನೀವು ಮಹಾ ಮನವತಾವಾದಿಯೇ ಇರಬಹುದು. ಆದರೆ ದಯವಿಟ್ಟು ಲ್ಯಾಪ್ ಟಾಪ್, ಫೇಸ್ಬುಕ್, ಟ್ವಿಟ್ಟರ್ ಬಿಟ್ಟು ಮನೆಯಿಂದ ಹೊರಬಂದು ನಮ್ಮ ದೇಶವನ್ನೊಮ್ಮೆ ಕಣ್ಣುಬಿಟ್ಟು ನೋಡಿ. ಈ ದೇಶದಲ್ಲಿ ಇನ್ನೂ ಅರ್ಧಕ್ಕರ್ಧ ಜನ ಹಸಿವಿನಿಂದಿದ್ದಾರೆ. ಶಿಕ್ಷಣದ ಮಟ್ಟ ಸುಧಾರಿಸಬೇಕಾಗಿದೆ. ಭ್ರಷ್ಟಾಚಾರವಿದೆ. ಬಡತನವಿದೆ. ನಿರುದ್ಯೋಗವಿದೆ. ಸ್ವಚ್ಛತೆಯ ಸಮಸ್ಯೆಯೂ ಇದೆ. ಇಲ್ಲೇ ಜನರಿಗೆ ಮೂಲಭೂತ ಸೌಕರ್ಯವನ್ನು ತಕ್ಕ ಮಟ್ಟಿಗೆ ಒದಗಿಸಲು ನಮ್ಮಿಂದ ಸಾಧ್ಯವಾಗಿರದೇ ಇರುವಾಗ, ಜಗತ್ತಿನ ಎಲ್ಲೆಡೆಯಿಂದ ಜನರನ್ನು ಬರಮಾಡಿಕೊಳ್ಳೋಣವೇನು? ನಿಮಗೆ ಒಂದು ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ, ಒಂದು ಸಮಾಜ ಸುಸ್ಥಿತಿಯಲ್ಲಿರಲು ಏನೇನು ಮಾಡಬೇಕಾಗುತ್ತದೆ ಎಂಬ ಕಿಂಚಿತ್ತು ಅರಿವಾದರೂ ಇದೆಯೇ? ನಮ್ಮ ಜನರಲ್ಲೇ ಎಲ್ಲರಿಗೂ ನಾವು ಎರಡು ಹೊತ್ತು ಊಟ ಕೊಡಲು ಸಾಧ್ಯವಾಗದೇ ಇರುವಾಗ, ಅವರನ್ನೂ ಬರಮಾಡಿಕೊಂಡರೆ – ಇಲ್ಲಿರುವ ಹಾಗೂ ಹೊಸತಾಗಿ ಬರುವ ಇಬ್ಬರಿಗೂ ಗೌರವಯುತ ಜೀವನವನ್ನು ಒದಗಿಸಲು ನಮಗೆ ಸಾಧ್ಯವಾಗುವುದಿಲ್ಲ. ಅದು ಖಂಡಿತ ಮಾನವೀಯತೆಯಲ್ಲ.ಈಗ ನಾವು ಬರಮಾಡಿಕುಳ್ಳುತ್ತಿರುವವರು, ಬಹುವಾಗಿ 70 ವರ್ಷದ ಹಿಂದೇ ನಮ್ಮಲ್ಲಿಗೆ ಬರಬೇಕಾಗಿದ್ದು, ಕಾರಣಾಂತರಗಳಿಂದ ಬರದೇ, ಅಲ್ಲಿ ಪರಿಸ್ಥಿತಿ ವಿಷಮವಾಗಿ ಬದುಕಲು ಸಾಧ್ಯವಾಗದೇ ಗುಳೆ ಬಂದವರಿಗಾಗಿ.

ಒಂದು ಜವಾಬ್ದಾರಿಯುತ ದೇಶವಾಗಿ ಅಷ್ಟೂ ಮಾಡದಿದ್ದರೆ, ಅದು ನಮ್ಮ ಮಾನವೀಯತೆನ್ನು ನಾವೇ ಅಪಹಾಸ್ಯ ಮಾಡಿಕೊಂಡಂತೆ. ಕೇವಲ ಅಜೆಂಡಾಗಳನ್ನು, ಐಡಿಯಾಲಜಿಗಳನ್ನು ಹೊತ್ತುಕೊಂಡು ಮೂರುಹೊತ್ತೂ ಪ್ರತಿಭಟಿಸುವವರಿಗೆ, ಏನೋ ಮಾಡುತ್ತೇನೆ ಎಂದು ಅಂದುಕೊಂಡಿರುವವರಿಗೆ ವಾಸ್ತವಗಳು ಅರ್ಥವಾಗುವುದು ಕಷ್ಟ. ಅಥವಾ ಒಂದು ಮಾನವೀಯ ಮತ್ತು ಸುಭದ್ರ ದೇಶವನ್ನು ಕಟ್ಟುವ ಯಾವ ಆಸಕ್ತಿಯೂ ಇವರಿಗೆ ಇಲ್ಲ ಎಂದೆನಿಸುತ್ತದೆ. ತಾವು ಸುಭಗರು ಎನ್ನಿಸಿಕೊಳ್ಳಬೇಕು, ತಾವು ಪ್ರಸಿದ್ಧಿ ಪಡೆಯಬೇಕು, ತಮ್ಮ ಮೂಗಿನ ನೇರಕ್ಕೇ ಎಲ್ಲವೂ ನಡೆಯಬೇಕು ಎಂದಾಗಲು ಇವರು ದೇಶದ ತಲೆಯಮೇಲೆ ಕಲ್ಲು ಜರುಗಿಸಲೂ ಸಿದ್ಧ! ತಮ್ಮ ಹುಚ್ಚು ಚಪಲಗಳಿಗೆ ದೇಶದ ಹಿತಾಸಕ್ತಿಯನ್ನು, ಭದ್ರತೆಯನ್ನು ಬಲಿಕೊಡಲು ಸಿದ್ಧ. ದೇಶದೊಳಗೇ ಸುಳ್ಳುಸುದ್ದಿಗಳನ್ನು ಬಿಟ್ಟು, ಜನರನ್ನು ತಪ್ಪು ದಾರಿಗೆಳೆದು ಅಸ್ಥಿರತೆ ಸೃಷ್ಟಿಸುತ್ತಿರುವ ಇಂಥವರ ಮೇಲೆ ನಿಗಾ ಇಡುವುದು ಒಳಿತು. ಈ ನಾಟಕಗಳು ತುಂಬಾ ಬೆಳೆಯಲು ಬಿಟ್ಟರೆ, ಮುಂದೆ ನಮಗೇ ಅಪಾಯ. ಏಕೆಂದರೆ, ದೇಶವಿದ್ದರೆ ಮಾತ್ರ ನಾನು, ನೀವು. ದೇಶ ಅಸ್ಥಿರವಾದರೆ ನಮಗೇ ಮುಂದೊಂದು ದಿನ ಮತ್ತೊಂದು ದೇಶ CAA ಮಾಡಬೇಕಾದೀತು!

14
ಜೂನ್

ಕೆಲವು ವ್ಯಕ್ತಿತ್ವಗಳು ಅರ್ಥವಾಗಬಾರದು, ಅಮಿತ್ ಶಾರಂತೆ!

– ಸಂತೋಷ್ ತಮ್ಮಯ್ಯ

೨೦೧೫ರ ಅಕ್ಟೋಬರಿನಲ್ಲಿ ದೆಹಲಿಯ ಶ್ಯಾಮ್‌ಪ್ರಸಾದ್ ಮುಖರ್ಜಿ ಅಧ್ಯಯನ ಕೇಂದ್ರ ಯುವ ಬರಹಗಾರರನ್ನು ಕರೆಸಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿತ್ತು. ದೇಶದ ಮೂಲೆಮೂಲೆಗಳಿಂದ ಆಗಮಿಸಿದ್ದ ಬರಹಗಾರರು ದೆಹಲಿಯ ಪಾಲಿಕಾ ಭವನದಲ್ಲಿ ಕಿಕ್ಕಿರಿದು ತುಂಬಿದ್ದರು. ಎರಡು ದಿನ ಪೂರ್ತಿ ರಾಷ್ಟ್ರೀಯತೆ, ರಾಜಕೀಯ ಸಿದ್ಧಾಂತಗಳು, ರಾಷ್ಟ್ರೀಯತೆಯ ಸವಾಲುಗಳು ಮತ್ತು ಅಪಾಯಗಳ ಬಗೆಗಿನ ಗೋಷ್ಠಿಗಳು ನಡೆದವು. ಅನಿರ್ಬನ್ ಗಂಗೂಲಿ, ವಿವೇಕ್ ಅಗ್ನಿಹೋತ್ರಿ, ಆರೆಸ್ಸೆಸ್ಸಿನ ನಂದಕುಮಾರ್ ಮುಂತಾದ ಖ್ಯಾತ ಚಿಂತಕರ ಗೋಷ್ಠಿಗಳು ಜರುಗಿದವು. ಸಮಾರೋಪ ಸಮಾರಂಭಕ್ಕೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾರವರು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಲಾಯಿತು. ಅಲ್ಲಿಯವರೆಗೂ ವೈಚಾರಿಕತೆಯ ಗುಂಗಲ್ಲಿದ್ದ ಕೆಲ ಯುವ ಬರಹಗಾರರು ಸಣ್ಣಗೆ ಗೊಣಗಲಾರಂಭಿಸಿದರು. ಇಷ್ಟು ಹೊತ್ತು ಚಿಂತಕರಿಂದ ಉಪನ್ಯಾಸ ಮಾಡಿಸಿದ ಕೇಂದ್ರದವರು ಈಗ ರಾಜಕಾರಣಿಯನ್ನೇಕೆ ಕರೆಸಿದ್ದಾರೆ? ಅದೂ ರಾಜಕಾರಣ ಮತ್ತು ರಾಜಕೀಯ ಸಿದ್ಧಾಂತಗಳ ಬಗ್ಗೆ ಅಮಿತ್ ಶಾರೇನು ಮಾತಾಡಬಲ್ಲರು? ಹೆಚ್ಚೆಂದರೆ ಜನಸಂಘದ ಒಂದೆರಡು ಕಥೆಗಳನ್ನು ಹೇಳಿ ಮುಗಿಸಬಲ್ಲರಷ್ಟೆ ಎಂದುಕೊಂಡರು. ಸಂಜೆಯಾಯಿತು. ಎಂದಿನಂತೆ ಮುಖ ಗಂಟಿಕ್ಕಿಕೊಂಡ ಅಮಿತ್ ಶಾ ವೇದಿಕೆಗೆ ಹತ್ತಿದರು. ಪೋಡಿಯಂ ಮುಂದೆ ನಿಂತರು.ಇದ್ದಕ್ಕಿದ್ದಂತೆ ಪಿಸುಗುಡುತ್ತಿದ್ದ ಪಾಲಿಕಾ ಭವನದ ಸಭಾಂಗಣ ಸೂಜಿ ಬಿದ್ದರೂ ಸದ್ದಾಗುವಷ್ಟು ಮೌನವಾಯಿತು, ಗಡಸು ಧ್ವನಿಗೆ ಸಭೆ ಸಮ್ಮೋಹನಕ್ಕೊಳಗಾಯಿತು. ಮುಂದಿನ ಒಂದೂವರೆ ಗಂಟೆ ಅಮಿತ್ ಶಾ ಅದೆಂಥಾ ವಾಗ್ಝರಿ ಹರಿಸಿದರೆಂದರೆ ತಿಲಕರು, ಸಾವರ್ಕರರು ಬಂದುಹೋದರು. ಗಾಂಧಿ ಚಳವಳಿ ಮತ್ತು ಸ್ವಾತಂತ್ರ್ಯಪೂರ್ವದ ಕಾಂಗ್ರೆಸಿನ ವಿಶ್ಲೇಷಣೆಯಾಯಿತು. ಲೋಹಿಯಾ ವಾಕ್ಯಗಳ ಉಲ್ಲೇಖವಾಯಿತು. ಜೆಪಿ ನುಸುಳಿದರು, ಹಳೆಯ ಯುಎಸ್‌ಎಸ್‌ಆರ್‌ನ ಪ್ರಾರಬ್ಧಗಳ ಮಂಡನೆಯಾಯಿತು. ನೆಹರೂ ಯುಗದ ಅದ್ವಾನಗಳು ಎಳೆಎಳೆಯಾಗಿ ಬಿಚ್ಚಲ್ಪಟ್ಟವು. ಮುಖರ್ಜಿ, ಉಪಾಧ್ಯಾಯರ ಆದರ್ಶಮಯ ಸಿದ್ಧಾಂತಗಳು ತೇಲಿಬಂದವು. ಅಟಲ್-ಅಧ್ವಾನಿಯವರ ರಾಜಕೀಯ ಬದ್ಧತೆಯವರೆಗೂ ಮಾತು ಸಾಗಿತು. ಕೆಲ ಚಿಂತಕರು ಘನಗಂಭೀರವಾಗಿ ತಲೆತೂಗುತಿದ್ದರೆ, ಇನ್ನು ಕೆಲವರು ಟಿಪ್ಪಣಿ ಮಾಡಿಕೊಳ್ಳತೊಡಗಿದರು! ಅಂದರೆ ಅಮಿತ್ ಶಾ ಸಂಶೋಧಕರಂತೆ, ಇವೆಲ್ಲಕ್ಕೂ ಪುರಾವೆ ಅಂಗೈಯಲ್ಲಿದೆ ಎನ್ನುವಂತೆ ಅಧಿಕಾರಯುತವಾಗಿ ಮಾತಾಡುತ್ತಿದ್ದರು. ಅವರು ಕಮ್ಯುನಿಸ್ಟ್ ಸಿದ್ಧಾಂತವನ್ನು, ಸಮಾಜವಾದವನ್ನು, ರಾಷ್ಟ್ರೀಯತೆಯ ಮಜಲುಗಳೆಲ್ಲವನ್ನೂ ಅರೆದು ಕುಡಿದಿದ್ದರು. ಅವರ ಅಂದಿನ ಮಾತುಗಳು ಸಭಿಕರಲ್ಲಿ ಎಂಥಾ ಗುಂಗು ಹಿಡಿಸಿತ್ತೆಂದರೆ ಭಾಷಣದ ನಂತರ ಆಯೋಜಕರು ಪ್ರಶ್ನೆಗಳಿಗೆ ಅವಕಾಶವಿದೆ ಎಂದು ಘೋಷಿಸಿದರು. ಆದರೆ ಯಾರಲ್ಲೂ ಪ್ರಶ್ನೆಗಳು ಉಳಿದಿರಲಿಲ್ಲ.

ಹಾಗೆ ನೊಡಿದರೆ ಅಮಿತ್ ಶಾ ಅಂದು ಹಾಗೆ ಕಂಡಿದ್ದು ನಮಗೆ ಮಾತ್ರವೇನೂ ಅಲ್ಲ, ಅವರು ಹಾಗೆ ಕಾಣುವುದು ಮೊದಲೂ ಆಗಿರಲಿಲ್ಲ!

ಮತ್ತಷ್ಟು ಓದು »

17
ಏಪ್ರಿಲ್

“ರೋಟಿ ಕಪಡಾ ಔರ್ ಮಕಾನ್ ನಿಂದ ಹೊಸ ಆಶೋತ್ತರದತ್ತ ಯುವ ಸಮೂಹ”

–  ಪ್ರೊ. ಪುನೀತ್‌ರಾಜ್‌ ಕೆ. ಎನ್
ಜೈನ್‌ ಯೂನಿವರ್ಸಿಟಿ

Modiandthemillenial1ವಿಶ್ವದ ಐದನೇ ಒಂದರಷ್ಟು ಯುವಜನರು ಭಾರತದಲ್ಲಿದ್ದಾರೆ. ದೇಶದ ಅರ್ಧದಷ್ಟು ಜನರ ವಯೋಮಾನ 25 ವರ್ಷಕ್ಕಿಂತ ಕಡಿಮೆ ಇದೆ. ದೇಶ ಮುನ್ನಡೆ ಸಾಧಿಸಬೇಕು ಎಂದರೆ ಈ ಯುವಜನರ ಆಶೋತ್ತರಗಳನ್ನು ಈಡೇರಿಸುವುದು ಬಹಳ ಮುಖ್ಯವಾದ ಸಂಗತಿ. ಕೈಬೆರಳ ತುದಿಯಲ್ಲಿ ಸಿಗುತ್ತಿರುವ ತಂತ್ರಜ್ಞಾನದ ಪರಿಣಾಮವಾಗಿ ಯುವಜನರ ಆಶೋತ್ತರಗಳಲ್ಲಿ ಗಣನೀಯ ಬದಲಾವಣೆ ಆಗಿರುವುದು ಗೋಚರಿಸುತ್ತದೆ. ವಿಶ್ವಾದಾದ್ಯಂತ ಏನಾಗುತ್ತಿದೆ ಎಂಬುದನ್ನು ಅರಿಯುವುದರ ಮೂಲಕ ಜೀವನದ ಬಗ್ಗೆ ತಮ್ಮದೇ ಆದ ವಿಶ್ವನೋಟವನ್ನು ಬೆಳೆಸಿಕೊಳ್ಳಲು ತಂತ್ರಜ್ಞಾನ ಸಹಕರಿಸುತ್ತ್ತಿದೆ. ಇತ್ತೀಚಿನ ವರ್ಷಗಳಲ್ಲಿ “ಸಫಲತೆ” ಎಂಬ ಅಂಶವೇ ಸಾಕಷ್ಟು ಬದಲಾವಣೆ ಕಂಡಿರುವುದನ್ನು ನಾವು ನೋಡಬಹುದು. ಇಂದಿನ ಯುವಕರು ಧೈರ್ಯಶಾಲಿಗಳು, ನಿರ್ಧಾರ ಕೈಗೊಳ್ಳಲು ಹಿಂಜರಿಯದ, ಖಂಡಿಸುವ, ಮುಕ್ತವಾಗಿ ಟೀಕಿಸುವ, ತಮಗೆ ಯಾವುದು ಉತ್ತಮ ಎಂಬುದನ್ನು ಅರಿಯುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ 20 ವರ್ಷಗಳ ಮುನ್ನ ಪರಿಸ್ಥಿತಿ ಹೀಗೆ ಇರಲಿಲ್ಲ. ಅದು ಐಐಟಿ/ಐಐಎಂಗಳಿಂದ ಪದವಿ ಪಡೆಯುವುದು, ಅಧಿಕಾರಿಯಾಗಿ ನೇಮಕವಾಗುವುದು, ಉತ್ತಮ ಸಂಬಳ ಹೊಂದಿರುವ ಸುರಕ್ಷಿತ ಕೆಲಸ ಅರಸುವುದು, ವಿದೇಶಗಳಲ್ಲಿರಬಹುದಾದ ಕೆಲಸದ ಅವಕಾಶಗಳತ್ತ ಆಕರ್ಷಣೆಗಳೇ ಸಫಲತೆಗೆ ಮಾನದಂಡವಾಗಿದ್ದವು. ಇದಕ್ಕೆ ತದ್ವಿರುದ್ಧವಾಗಿ, ಕುಟುಂಬ ಆಡಳಿತಕ್ಕೆ ಸಮಾನವಾಗಿದ್ದ ಹಾಗೂ ಸಫಲತೆಯ ಪ್ರಮಾಣ ಕಡಿಮೆಯಿದ್ದ ಕ್ರೀಡೆ, ಸಿನಿಮಾ ಹಾಗೂ ರಾಜಕೀಯ ಕ್ಷೇತ್ರಗಳು ಬಹುತೇಕಯುವಕ/ಯುವತಿಯರ ಆಯ್ಕೆಯೇ ಆಗುತ್ತಿರಲಿಲ್ಲ. ಕ್ರೀಡಾತಾರೆಯ ಪುತ್ರನೊಬ್ಬ ತನ್ನ ಕ್ರೀಡಾ ಸಾಮರ್ಥ್ಯಕ್ಕಿಂತಲೂ ತನ್ನ ತಂದೆಯ ಪ್ರಭಾವದ ಕಾರಣಕ್ಕೆ ಕ್ರೀಡಾಪಟುವಾಗುವ ಅವಕಾಶ ಹೊಂದಿರುತ್ತಿದ್ದ. ಸಿನಿಮಾತಾರೆಯ ಪುತ್ರನನ್ನು ತನ್ನ ಪ್ರಭಾವದ ಕಾರಣದಿಂದಲೇ ಬೆಳ್ಳಿತೆರೆಗೆ ಕರೆತರುವ ಹಾಗೂ ರಾಜಕಾರಣಿಯ ಪ್ರಭಾವದಿಂದಲೇ ತನ್ನ ಪುತ್ರನನ್ನು ರಾಜಕೀಯಕ್ಕೆ ಕರೆತರುತ್ತಿದ್ದರು. ವಿಫಲವಾಗುವ ಹಾಗೂ ತಿರಸ್ಕಾರಕ್ಕೆ ಒಳಗಾಗುವ ಅಪಾಯಕ್ಕೆ ಹೆದರುತ್ತಿದ್ದ ಬಹುಪಾಲು ಯುವಕರು ಈ ಕ್ಷೇತ್ರಗಳಿಂದ ದೂರವೇ ಉಳಿಯುತ್ತಿದ್ದರು. ನಂತರದ ದಿನಗಳಲ್ಲಿ, ಅಷ್ಟೇನೂ ಉತ್ಸಾಹದಿಂದ ಸ್ವಾಗತಿಸದ ಪರಿಸ್ಥಿತಿ ಬಂದಿತು. ಘಟಾನುಘಟಿಗಳನ್ನು ದಾಟಿ ಈ ಬಾಗಿಲುಗಳನ್ನು ದಾಟಿ ಒಳಹೋಗುವುದು ಅಸಾಧ್ಯ ಎಂಬಷ್ಟೇ ಕಠಿಣ ಕೆಲಸವಾಗಿತ್ತು. ಈ ಪ್ರವಾಹದ ವಿರುದ್ಧ ಈಜಿ ದಡ ಸೇರಿದವರು ಬೆರಳೆಣಿಕೆ ಮಂದಿ ಮಾತ್ರ. ಶಾರೂಖ್‍ಖಾನ್, ಅಕ್ಷಯಕುಮಾರ್‌ನಂತಹ ಕೆಲ ಸಿನಿಮಾ ಸ್ಟಾರ್‍ಗಳು ಹಾಗೂ ಕೆಲವೇ ಕ್ರೀಡಾಪಟುಗಳು ಮಾತ್ರವೇ ಎಲ್ಲ ಅಡೆತಡೆಗಳನ್ನು ದಾಟಿ ಸಫಲರಾಗಲು ಸಾಧ್ಯವಾಯಿತೇ ಹೊರತು ಬಹುತೇಕ ಯುವಕರು ಇದು ತಮ್ಮ ಕೈಲಾಗುವ ಕೆಲಸವಲ್ಲ ಎಂದುಕೊಂಡು ಈ ಕ್ಷೇತ್ರಗಳಿಂದ ದೂರವುಳಿಯುತ್ತಿದ್ದರು. ಮತ್ತಷ್ಟು ಓದು »

7
ಏಪ್ರಿಲ್

‘ನಿಧಿ’ಗಿಂತ ‘ದನಿ’ನೀಡುವ ಸಂಸದರು ಬೇಕು – ಸಂಸದರ ಕಾರ್ಯಕ್ಷೇತ್ರದ ಅರಿವೂ ಇರಬೇಕು!

– ತುರುವೇಕೆರೆ ಪ್ರಸಾದ್

ಉತ್ತರಕನ್ನಡದ ಸಂಸದರಾದ ಅನಂತ್ ಕುಮಾರ್ ಹೆಗಡೆ ಮಾತನಾಡಿದರೆ ವಿವಾದವಾಗುತ್ತದೆ ಎಂದು ತಿಳಿದವರೇ ಹೆಚ್ಚು. ಹೆಗಡೆಯವರು ನಮ್ಮ ಸಂಸ್ಕೃತಿ, ಪರಂಪರೆ, ಸಂವಿಧಾನ ಹಾಗೂ ಸಂಸದರ ಜವಾಬ್ಧಾರಿಗಳ ಬಗ್ಗೆ ಪಾಂಡಿತ್ಯಪೂರ್ಣವಾಗಿ, ತರ್ಕಬದ್ಧವಾಗಿ ಮಾತನಾಡಬಲ್ಲರು ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಇತ್ತೀಚೆಗೆ ಅನಂತಕುಮಾರ ಹೆಗಡೆಯವರು ಸಂಸದರ ಜವಾಬ್ಧಾರಿಗಳ ಬಗ್ಗೆ ಮಾತಾಡಿರುವ ಒಂದು ಪುಟ್ಟ ವೀಡಿಯೋ ನೋಡಿದೆ. ಆ ಪುಟ್ಟ ವೀಡಿಯೋದಲ್ಲಿ ಹೆಗಡೆಯವರು ಸಂಸದರ ಕಾರ್ಯವ್ಯಾಪ್ತಿಯ ಬಗ್ಗೆ ಬಹಳ ಅದ್ಭುತವಾಗಿ ಮಾತನಾಡಿದ್ದಾರೆ. ಅಭಿವೃದ್ಧಿಯ ಅತ್ಯಂತ ಮಾರ್ಮಿಕ ವಿಶ್ಲೇಷಣೆ ಮಾಡಿದ್ದಾರೆ. ಅವರ ಪ್ರಕಾರ ಅಭಿವೃದ್ಧಿಯೆಂದರೆ ಕೇವಲ ಕಾಮಗಾರಿಗಳಲ್ಲ, ಕಾಮಗಾರಿಗಳು ಕೇವಲ ಅಭಿವೃದ್ಧಿಯ ಒಂದು ಭಾಗವಷ್ಟೇ. ಸಮುದಾಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ನಾಲ್ಕು ವಿಧಗಳಿವೆ. ಮೂಲಭೂತ ಅಭಿವೃದ್ಧಿ, ಸಾಂಸ್ಕøತಿಕ ಅಭಿವೃದ್ಧಿ,ಸಾಮಾಜಿಕ ಅಭಿವೃದ್ಧಿ ಮತ್ತು ಆರ್ಥಿಕ ಅಭಿವೃದ್ಧಿ. ಅಭಿವೃದ್ಧಿ ನಿರಂತರ ಪ್ರಕ್ರಿಯೆ, ಅದಕ್ಕೆ ಅಂತ್ಯವಿಲ್ಲ. ಕಾಮಗಾರಿಗೆ ಮಾತ್ರ ಅಂತ್ಯವಿದೆ. ಜನಸಾಮಾನ್ಯರಿಗೆ ಮೂಲಭೂತ ಅಭಿವೃದ್ಧಿಯಷ್ಟೇ ಕಾಣುತ್ತದೆ. ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ದಿಗೆ ಅವರು ಹೆಚ್ಚು ಒತ್ತು ಕೊಡುವುದಿಲ್ಲ. ಸಮುದಾಯದ ಅಭಿವೃದ್ದಿಯ ಅಂತರಾಳ ಅಡಗಿರುವುದು ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ! ಇದರ ಒಂದು ಭಾಗ ಮಾತ್ರ ಮೂಲಭೂತ ಅಭಿವೃದ್ಧಿ. ಇದು ಅವರ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆ.ಕೇಂದ್ರ ಯಾವ ಮೂಲಭೂತ ಅಭಿವೃದ್ಧಿಗೆ ಒತ್ತು ಕೊಡಬೇಕು? ಒಂದು ಗ್ರಾಮೀಣ ಕಾಮಗಾರಿಗೆ ಗ್ರಾ.ಪಂ. ಜಿ.ಪಂ ಸದಸ್ಯರಷ್ಟೇ ಮಹತ್ವವನ್ನು ಸಂಸದರೂ ಕೊಡಬೇಕಾ?ಆ ಮಟ್ಟದಲ್ಲಿ ರಾಜಕಾರಣವನ್ನು ಒಬ್ಬ ಸಂಸದ ಮಾಡಬಾರದು.ಸಂಸದರ ಕಾರ್ಯವ್ಯಾಪ್ತಿಯ ಅರಿವೇ ಇಲ್ಲದೆ ಅತ್ಯಂತ ಕೆಳಹಂತಕ್ಕೆ ಇಳಿದು ರಾಜಕಾರಣ ಮಾಡುವುದು ಮತ್ತು ಹಾಗೆ ನಿರೀಕ್ಷಿಸುವುದು ದುರ್ದೈವ ಎನ್ನುತ್ತಾರೆ.

ಮತ್ತಷ್ಟು ಓದು »

31
ಮಾರ್ಚ್

ಮತದಾರರ ಮೋದಿ Vs ಬೆಂಗಳೂರು ಮಾಫಿಯಾ

– ರಾಕೇಶ್ ಶೆಟ್ಟಿ 

‘ನಾವು ಗೆದ್ದಿರುವ ಕ್ಷೇತ್ರಗಳನ್ನು ಕಳೆದುಕೊಳ್ಳಬಾರದು ಅಣ್ಣ. ಈ ಹಿಂದೆ ಯುಟಿ ಖಾದರ್ ಅಪ್ಪನ ಕಾಲದಲ್ಲೇ ಉಳ್ಳಾಲದಲ್ಲಿ ಬಿಜೆಪಿಯಿಂದ ಜಯರಾಮ ಶೆಟ್ಟರು ಗೆದ್ದಿದ್ದರು. ನಂತರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕೋಪಿಸಿಕೊಂಡು ದಳಕ್ಕೆ ಹೋಗಿ ಸ್ಪರ್ಧಿಸಿ ವೋಟ್ ಡಿವೈಡ್ ಮಾಡಿದರು.ಹಾಗೆ ಕಾಂಗ್ರೆಸ್ಸಿನ ಯು.ಟಿ ಫರೀದ್ ಗೆದ್ದರು. ಉಳ್ಳಾಲ ನಮ್ಮ ಕೈ ಬಿಟ್ಟು ಹೋಯಿತು. ಅಲ್ಲಿಂದ ಇಲ್ಲಿನವರೆಗೆ ನಮಗೆ ಆ ಕ್ಷೇತ್ರವನ್ನು ಮತ್ತೆ ಗೆಲ್ಲಲಿಕ್ಕಾಗಿಲ್ಲ ನೋಡಿ’ ನನ್ನ ತಮ್ಮನಂತಹ ಮಿತ್ರ ರಾಜೇಶ್ ನರಿಂಗಾನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೇಳಿದ ಮಾತು ನನಗೀಗ ನೆನಪಾಯ್ತು. ನೆನಪು ಮಾಡಿಸಲು ಕಾರಣವಾಗಿದ್ದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಒಳಬೇಗುದಿ.

ಬೆಂಗಳೂರು ದಕ್ಷಿಣದ ಬಗ್ಗೆ ಮಾತನಾಡುವ ಮೊದಲು, ರಾಜರಾಜೇಶ್ವರಿ ನಗರ,ಜಯನಗರದ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಬೇಕು.

ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪಕ್ಷದ ಅತಿ ಪ್ರಮುಖ ನಾಯಕರು ಹಠಾತ್ ನಿಧನರಾಗುವ ಮೂಲಕ ಪಕ್ಷಕ್ಕೆ ನಷ್ಟವಾಗಿದೆ. ಆದರೆ ಈ ರೀತಿಯ ಹಠಾತ್ ಆಘಾತಗಳು ಈ ಪಕ್ಷದ ಆರಂಭದಿಂದಲೇ ಶುರುವಾಗಿದೆ. ಪಕ್ಷದ ಆಧಾರ ಸ್ತಂಭದಂತಿದ್ದ ಶ್ಯಾಂ ಪ್ರಸಾದ್ ಮುಖರ್ಜಿ,ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಕೊಲೆಗಳು ಮೊದಲನೇ ಆಘಾತಗಳು. ಅದರಿಂದ ಚೇತರಿಸಿಕೊಂಡೇ ಪಕ್ಷ ಇಲ್ಲಿವರೆಗೂ ಬಂದು ನಿಂತಿದೆ. ಪ್ರಮೋದ್ ಮಹಾಜನ್,ಗೋಪಿನಾಥ್ ಮುಂಡೆ,ಪರಿಕ್ಕರ್, ಅನಂತಕುಮಾರ್,ವಿಜಯಕುಮಾರ್ ಇವೆಲ್ಲ ಇತ್ತೀಚಿನ ಆಘಾತಗಳು.

ಮತ್ತಷ್ಟು ಓದು »

29
ಮಾರ್ಚ್

2019 : ನವಭಾರತ Vs ಬ್ರಿಟಿಷ್ ಇಂಡಿಯಾ ನಡುವಿನ ಚುನಾವಣೆ

– ರಾಕೇಶ್ ಶೆಟ್ಟಿ

೨೦೧೯ ಚುನಾವಣೆಯ ದಿನಾಂಕ ಘೋಷಣೆಯಾಗಿ ಮೊದಲ ಹಂತದ ಚುನಾವಣೆಯೂ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದೂ ಹೋಗಲಿದೆ. ಈ ಬಾರಿಯ ಚುನಾವಣೆಯ ಮೇಲೆ ಇಡೀ ದೇಶ ಮಾತ್ರವಲ್ಲ ಜಗತ್ತಿನ ಕಣ್ಣೂ ಇದೆ. ೨೦೧೪ರ ಚುನಾವಣೆಯೂ ಹೀಗೆಯೇ ಇತ್ತು.೨೦೧೪ರ ಚುನಾವಣೆ ಭಾರತದ ರಾಜಕೀಯದಲ್ಲಿ ಢಾಳಾಗಿ ಮಿಳಿತವಾಗಿರುವ  ಜಾತಿ,ಹಣ,ರಿಲಿಜಿಯನ್,ಓಲೈಕೆ ಇತ್ಯಾದಿಗಳನ್ನು ಜನತೆಯೇ ನಿವಾಳಿಸಿ ಬಿಸಾಡಿದ,ದೇಶದ ಚಿಂತನೆಯ ದಿಕ್ಕನ್ನು ಬದಲಿಸಿದ ಚುನಾವಣೆ ಎನ್ನಬಹುದು.

ಸ್ವತಂತ್ರ ಭಾರತದ ರಾಜಕೀಯ ಇತಿಹಾಸದ ಚುನಾವಣಾ ರಾಜಕೀಯವನ್ನು ಬಹುಶಃ ನಾಲ್ಕು ಭಾಗಗಳಾಗಿ ವಿಂಗಡಿಸಬಹುದು.ಮೊದಲನೆಯದು ೪೭ ರಿಂದ ೭೦ರ ದಶಕದವರೆಗಿನ ನೆಹರೂ ಕುಟುಂಬದ ರಾಜಕಾರಣ (ಶಾಸ್ತ್ರೀಜಿಯವರ ಸಮಯ ಬಿಟ್ಟು). ೭೦ರ ದಶಕದ ಆದಿಯಿಂದ ೯೦ರ ದಶಕದವರೆಗಿನ ಇಂದಿರಾ ಕಾಂಗ್ರೆಸ್ಸಿನ ಸರ್ವಾಧಿಕಾರಿ ತುರ್ತುಪರಿಸ್ಥಿತಿ ವಿರೋಧಿ ಹಾಗೂ ರಾಮಜನ್ಮಭೂಮಿ ಚಳವಳಿಯರವರೆಗಿನ ರಾಜಕಾರಣ. ೯೦ರ ದಶಕದ ಆದಿಯಿಂದ – ೨೦೧೩ರ ಕೊನೆಯವರೆಗಿನ ಸೆಕ್ಯುಲರಿಸಂ-ಹಿಂದುತ್ವದ ರಾಜಕಾರಣ. ಈ  ನಾಲ್ಕು ಭಾಗಗಳಲ್ಲಿ ನಿಚ್ಚಳ ಬಹುಮತದ ಸರ್ಕಾರಗಳು ರೂಪುತಳೆದಿದ್ದು ನೆಹರೂ ಕಾಲದ ಸ್ವಾತಂತ್ರ್ಯ ಹೋರಾಟದ ಹ್ಯಾಂಗ್ ಓವರ್ ಹಾಗೂ ವಿರೋಧ ಪಕ್ಷಗಳಿಲ್ಲದ ಕಾಲದಲ್ಲಿ,ಇಂದಿರಾ  ಹತ್ಯೆಯ ನಂತರದ ಚುನಾವಣೆಯಲ್ಲಿ ಹಾಗೂ ಕಳೆದ ೨೦೧೪ ರ ಚುನಾವಣೆಯಲ್ಲಿ.

ಮೊದಲ ಎರಡು ಚುನಾವಣೆಯ ವಿಷಯಗಳೇನೂ ಚರ್ಚಿಸ ಬೇಕಾದ ವಿಷಯಗಳೇನೂ ಅಲ್ಲ. ಇನ್ನುಳಿಯುವುದು ೨೦೧೪ರ ಚುನಾವಣೆಯ ವಿಷಯ. ಯಾಕೆ ೨೦೧೪ರ ಚುನಾವಣೆಯ ವಿಷಯ ಮುಖ್ಯವಾಗುತ್ತದೆ ಎಂದರೇ,ಯಾವುದೇ ಜಾತಿ-ರಿಲಿಜಿಯನ್-ಓಲೈಕೆ-ಬಿಟ್ಟಿ ಭಾಗ್ಯ ಯೋಜನೆಗಳಿಲ್ಲದೇ, ಗುಜರಾತಿನಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಅಭಿವೃದ್ಧಿಯ,ನವಭಾರತದ ಕನಸು ಕಟ್ಟಿಕೊಟ್ಟಿದ್ದರು ನರೇಂದ್ರ ಮೋದಿಯವರು.ಆದರೆ ವಿಪಕ್ಷಗಳಿಗೆ ಮೋದಿಯವರ ಅಭಿವೃದ್ಧಿ ಅಜೆಂಡದ ಅಸ್ತ್ರ್ರಕ್ಕೆ ಪ್ರತಿಯಾಗಿ ವಿಭಿನ್ನವಾದ ಅಥವಾ ಅದಕ್ಕಿಂತಲೂ ಉತ್ತಮವಾದ ಅಜೇಂಡಾವನ್ನು ಸೆಟ್ ಮಾಡಲಾಗಲೇ ಇಲ್ಲ. ಅವರು ೨೦೦೨ರ ಗುಜಾರಾತಿನಲ್ಲೇ ಉಳಿದುಹೋದರು. ಇತ್ತ ಮೋದಿಯವರು ನವಭಾರತದ ಅಲೆಯಲ್ಲಿ ೨೦೧೪ರ ಮೇ ತಿಂಗಳಲ್ಲಿ ಸಂಸತ್ತಿಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಮತ್ತಷ್ಟು ಓದು »