ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ
2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.
ಮೌಲ್ಯ ಜೀವನ್: ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು
2015 ರ ಆಳ್ವಾಸ್ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಸಿಂಗ್ ಬಾಬು ಅವರೊಂದಿಗೆ ಸಂದರ್ಶನ
ಸಂದರ್ಶನ : ಪ್ರಕಾಶ್.ಡಿ.ರಾಂಪೂರು,ರಮೇಶ್ ಕೆ.ಆರ್,ವೀರೇಶ್
ಚಿತ್ರ : ಶ್ರೀಧರ್ ಬಳ್ಳಾರಿ
ಕನ್ನಡ ಚಿತ್ರ ರಂಗದಲ್ಲಿ ಸುಮಾರು 39 ವರ್ಷಗಳ ಕಾಲ ಸಿನೆಮಾ ರಂಗದಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ತನ್ನದೇ ಆದ ಛಾಪನ್ನು ಮೂಡಿಸಿ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ತಮ್ಮ ಹೆಸರನ್ನು ಗುರುತಿಸಿಕೊಂಡಿರುವ ಪ್ರಸ್ತುತ ಕನ್ನಡ ಚಲನಚಿತ್ರೋದ್ಯಮದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೇಂದ್ರ ಸಿಂಗ್ ಬಾಬು 2015 ರ ಆಳ್ವಾಸ್ ನುಡಿಸಿರಿಯ “ಆಳ್ವಾಸ್ ಪ್ರಶಸ್ತಿ” ಸ್ವೀಕರಿಸುವ ಮುನ್ನ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಡೆಸಿದ ಸಂದರ್ಶನ..
ಪ್ರ: ಕನ್ನಡ ಚಿತ್ರ ರಂಗಕ್ಕೆ ಬಂದು ಮೊದಲ ಬಾರಿಗೆ ನಾಗರಹೊಳೆ ಅನ್ನೋ ಚಿತ್ರವನ್ನು ಮಾಡಿದಿರಿ. ನಿಮ್ಮ ಈ ಮೊದಲ ಚಿತ್ರ ಹಿಟ್ ಆಯಿತು ಇದರ ಬಗ್ಗೆ ನಿಮ್ಮ ಮಾತು?
ನಮ್ಮ ತಂದೆಯವರ ಕಾಲದಿಂದಲೂ ನಾನು ಸಿನೆಮಾ ಕ್ಷೇತ್ರದಲ್ಲಿದ್ದು, ಅವರನ್ನು ನೋಡಿ ಕಲಿತ ವಿಷಯಗಳನ್ನು ಸೇರಿಸಿ ಜನರಿಗೆ ಹೊಸ ರೀತಿಯ ಸಿನೆಮಾಗಳನ್ನು ಕೊಡಬೇಕು ಅಂತಾ ಅಂದುಕೊಂಡಿದ್ದೆ. ಆ ಸಂಧರ್ಭದಲ್ಲಿ ನನ್ನ ತಲೆಗೆ ಬಂದಿದ್ದು ನಾಗರಹೊಳೆ ಅನ್ನೋ ಚಿತ್ರ. ಅಲ್ಲಿಯವರೆಗೆ ಮಕ್ಕಳ ಪ್ರಧಾನ ಚಿತ್ರಗಳೇ ಇರಲಿಲ್ಲ. ಅದನ್ನು ನಾನು ಉಪಯೋಗ ಮಾಡಿಕೊಂಡೆ. ಸಿನೆಮಾ ಕೂಡ ಅದ್ಬುತ ಯಶಸ್ಸು ಖಂಡಿತು.
ಮತ್ತಷ್ಟು ಓದು
ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ.ಎಂ.ಮೋಹನ್ ಆಳ್ವ
– ಶ್ರೀಗೌರಿ ಎಸ್.ಜೋಶಿ,ಪತ್ರಿಕೋದ್ಯಮ ವಿಭಾಗ
ಆಳ್ವಾಸ್ ಕಾಲೇಜು,ಮೂಡುಬಿದಿರೆ
ನೇರಸಂದರ್ಶನದಲ್ಲಿ ಮಹತ್ವದ ವಿಚಾರಗಳನ್ನು ತೆರೆದಿಟ್ಟ `ಮೂಡುಬಿದಿರೆಯ ಕನಸುಗಾರ’
`ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?’ ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ `ಆಳ್ವಾಸ್ ನುಡಿಸಿರಿ’. ಈ ಕನ್ನಡ ಉತ್ಸವದ ರೂವಾರಿ `ಸಂಸ್ಕೃತಿಯ ಹರಿಕಾರ’ ಎಂದೇ ಖ್ಯಾತರಾದ ಡಾ.ಎಂ. ಮೋಹನ್ ಆಳ್ವರು. ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕತೆಗಳಿಗೆ ತಕ್ಕಂತೆ ಹೊಸತನಗಳಿಗೆ ಸ್ಪಂದಿಸುವುದು ಅಗತ್ಯವೆಂದು ಹೇಳುವ ಡಾ.ಆಳ್ವರು `ಕರ್ನಾಟಕ:ಹೊಸತನದ ಹುಡುಕಾಟ’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ಈ ಸಲದ ನುಡಿಸಿರಿಯನ್ನು ಆಯೋಜಿಸಿದ್ದಾರೆ. ಹೊಸತನ ಎಂದರೇನು, ಹೊಸತನದಡಿಯಲ್ಲಿ ನುಡಿಸಿರಿಯ ಆಯಾಮಗಳೇನು ಎಂಬುದರ ಕುರಿತು ಅವರು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದ್ದು ಹೀಗೆ…
ಪ್ರ: `ಆಳ್ವಾಸ್ ನುಡಿಸಿರಿ’ ಪ್ರತಿಸಲವೂ `ಕನ್ನಡ ಮನಸ್ಸು’ ಎಂಬ ಮುಖ್ಯ ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿತ್ತು.ಆದರೆ ಈ ಸಲದ ಕೇಂದ್ರ ವಿಷಯವನ್ನು `ಕರ್ನಾಟಕ: ಹೊಸತನದ ಹುಡುಕಾಟ’ ಎಂದು ಬದಲಾಯಿಸಿದ್ದೀರಿ. ಈ ಬದಲಾವಣೆಯ ಹಿನ್ನೆಲೆಯೇನು?
12 ವರ್ಷಗಳಿಂದ ಕನ್ನಡ ಮನಸ್ಸನ್ನು ಕೇಂದ್ರವಾಗಿಟ್ಟುಕೊಂಡು ಬೇರೆ ಬೇರೆ ಪರಿಕಲ್ಪನೆ ಕೊಟ್ಟಿದ್ದೇವೆ. ಆಳ್ವಾಸ್ ವಿಶ್ವನುಡಿಸಿರಿ-ವಿರಾಸತ್ ಸಂದರ್ಭದಲ್ಲಿ ಮುಖ್ಯ ವಿಷಯ `ಕನ್ನಡ ಮನಸ್ಸು: ಅಂದು, ಇಂದು, ಮುಂದು’ ಎಂದಿತ್ತು.ಈ ಸಲದ ಕೇಂದ್ರ ವಿಷಯವನ್ನು `ಕರ್ನಾಟಕ: ಹೊಸತನದ ಹುಡುಕಾಟ’ ಎಂದು ಬದಲಾಯಿಸಲಾಗಿದೆ. ಏಕೆಂದರೆ ನಮ್ಮ ಬದುಕು, ಸಂಸ್ಕೃತಿ ನಿಂತ ನೀರಾಗಬಾರದು. ನಾವು ಯಾವತ್ತೂ ಹೊಸತನದ ಹುಡುಕಾಟದಲ್ಲಿರಬೇಕು. ಇಲ್ಲದಿದ್ದರೆ ನಾವು ಸವಕಲು ನಾಣ್ಯಗಳಾಗುತ್ತೇವೆ. ಹೊಸತನದೊಟ್ಟಿಗೆ ಹೋದಾಗ ಮಾತ್ರ ನಾವು ಚಲಾವಣೆಯಲ್ಲಿರುವ ನಾಣ್ಯಗಳಾಗುತ್ತೇವೆ. ಹೊಸತನದ ಹುಡುಕಾಟ ಇಂದಿನ ಅಗತ್ಯತೆ. ಕಾಲಕ್ಕೆ ಸರಿಯಾಗಿ ನಾವು ಸ್ಪಂದಿಸಬೇಕು ಹಾಗೂ ಅತ್ಯಂತ ಅವಶ್ಯಕವೂ ಹೌದು. ಈ ದೃಷ್ಟಿಯಲ್ಲಿ ನಾವು ನುಡಿಸಿರಿಯ ಕೇಂದ್ರ ವಿಷಯವನ್ನು `ಕರ್ನಾಟಕ:ಹೊಸತನದ ಹುಡುಕಾಟ’ ಎಂದು ಬದಲಾಯಿಸಿದ್ದೇವೆ.
ಮತ್ತಷ್ಟು ಓದು
“ನುಡಿಸಿರಿ” ಮತ್ತು ಮೊಸರಲ್ಲಿ ಕಲ್ಲು ಹುಡುಕುವ ಮನಸ್ಥಿತಿ
– ಗುರುಪ್ರಸಾದ್ ಆಚಾರ್ಯ
” ಆಳ್ವಾಸ್ ನುಡಿಸಿರಿ ” ಮತ್ತು ” ಆಳ್ವಾಸ್ ವಿರಾಸತ್ ” ಈ ಎರಡು ಸಾಂಸ್ಕೃತಿಕ ಹಬ್ಬಗಳ ಹೆಸರು ಕೇಳದ ಜನರು ತೀರಾ ವಿರಳ ಅಂತನೇ ಹೇಳಬೇಕು, ಆ ಮಟ್ಟಿಗೆ ಅದು ಜನರ ಗಮನ ಸೆಳೆದಿದೆ. ಬರಿಯ ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟಕ್ಕೂ ತನ್ನ ಖ್ಯಾತಿಯನ್ನ ವಿಸ್ತರಿಸಿ ಅದರಾಚೆಗೂ ತನ್ನ ಛಾಪು ಮೂಡಿಸಿದೆಯೆಂದರೆ ಅದರ ಸ್ವರೂಪ, ವೈಶಿಷ್ಟ್ಯತೆ ಹೇಗಿದ್ದರಬೇಡ. ಇವೆರಡರ ಕಲ್ಪನೆಯೇ ವಿಶಿಷ್ಟವಾದದ್ದು ” ನುಡಿಸಿರಿ ” ಅನ್ನೋದು ನಮ್ಮ ನಾಡಿನ ನುಡಿಗಾಗಿ ಮೀಸಲಿಟ್ಟ ಕಾರ್ಯಕ್ರಮವಾದರೆ ” ವಿರಾಸತ್ ” ನಮ್ಮ ಸಾಂಸ್ಕೃತಿಕ ವೈಭವಕ್ಕೆ ಹಿಡಿದ ಕೈಗನ್ನಡಿ. ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ಭಾಷೆ ಇವೆರಡರ ಕಬಂಧ ಬಾಹುಗಳ ಬಂಧನದಲ್ಲಿರೋ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಈ ಎರಡೂ ಕಾರ್ಯಕ್ರಮಗಳೇ ಆಶಾಕಿರಣ. ಅಷ್ಟಾಗಿದ್ದೂ ಈ ನುಡಿಸಿರಿಯ ಬಗ್ಗೆ ಅಪಸ್ವರ ಏಳುತ್ತಿದೆ ಅಂದರೆ ಅದನ್ನ ದುರಂತವೆನ್ನದೆ ಇನ್ನೇನನ್ನಲಿ…??
ಬಹುಶಃ ಕಳೆದ ಬಾರಿಯೇ ಇದ್ದಿರಬೇಕು…. ತೀರಾ ಹಿಂದುಳಿದ ವರ್ಗದ ಸಾಂಸ್ಕೃತಿಕ ಕಲಾಪ್ರಕಾರವೊಂದನ್ನ ಅಳವಡಿಸಿಕೊಂಡಿದ್ದಕ್ಕೆ ಅಪಸ್ವರವೊಂದು ಕೇಳಿ ಬಂದಿತ್ತು. ಕಾರಣ ಆ ಕಲಾವಿದರು ತಮ್ಮ ಮೈ ಮತ್ತು ಮುಖಕ್ಕೆ ಪೂರ್ತಿ ಕಪ್ಪು ಬಣ್ಣ ಬಳಿದುಕೊಂಡಿದ್ದರು.ಭಾರತದಲ್ಲಿ ಕಲಾ ಪ್ರಕಾರಗಳು ಲೆಕ್ಕವಿಲ್ಲದಷ್ಟಿದೆ ಅನ್ನೋದು ನಮಗೆಲ್ಲಾ ಗೊತ್ತಿದ್ದ ವಿಷಯವೇ.ಪ್ರತಿಯೊಂದು ಜನಾಂಗಕ್ಕೂ ಅದರದೇ ಆದ ಸಾಂಸ್ಕೃತಿಕ ಆಚರಣೆಗಳಿರುತ್ತದೆ.ಆ ಜನಾಂಗಕ್ಕೆ ಆ ಕಲಾ ಪ್ರಕಾರದ ಕುರಿತು ಅಭಿಮಾನವಿದ್ದೇ ಇರುತ್ತದೆ, ಇಂಥಾದ್ದರಲ್ಲಿ ಆ ಕಲಾ ಪ್ರಕಾರ ಉಳಿಯಲಿ ಅನ್ನುವ ನಿಟ್ಟಿನಲ್ಲಿ ಅಂತಾ ಕಲಾವಿದರನ್ನ ಕರೆದು ಅವರಿಗೊಂದು ವೇದಿಕೆ ಕಲ್ಪಿಸಿಕೊಟ್ಟು ಆ ಕಲೆಯನ್ನೂ ಉಳಿಸುವ ಪ್ರಯತ್ನ ಪಟ್ಟ ಮೋಹನ್ ಆಳ್ವಾರವರು ಟೀಕೆಗೊಳಪಡುತ್ತಾರೆ.ಅದು ಆ ಜನಾಂಗದ ನಿಂದನೆ ಎಂಬಂತೆ ಲೇಖನ ಬರೆಯುತ್ತಾರೆ.ವಾಸ್ತವದಲ್ಲಿ ” ಜನಾಂಗೀಯ ನಿಂದನೆ ” ಅನ್ನೋ ಆರೋಪ ಹೊರಿಸಿದವರ್ಯಾರು ಆ ಕಲಾವಿದರನ್ನ ಮಾತಾಡಿಸಿ ಅವರ ಮನದ ಮಾತನ್ನ ತಮ್ಮ ಬರಹದ ಮೂಲಕ ಹೇಳಿದ್ದಲ್ಲ. ತಮಗೆ ತಾವೇ ಅದು ಜನಾಂಗೀಯ ಅವಹೇಳನ ಅನ್ನುವ ನಿರ್ಧಾರ ತೆಗೆದುಕೊಂಡು ಡಂಗುರ ಸಾರಿಬಿಟ್ಟಿದ್ದರು. ಆದರೆ ಅದೇ ಕಲಾ ಪ್ರಕಾರವನ್ನ ಖುದ್ದು ರಾಜ್ಯಸರ್ಕಾರವೇ ಒಮ್ಮೆ ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲೋ ಅಥವಾ ದಸರಾ ಉತ್ಸವದಲ್ಲೂ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿತ್ತು. ಆವಾಗ ಏನೂ ಮಾತನಾಡದವರು ಆಳ್ವಾಸ್ ನುಡಿಸಿರಿಯಲ್ಲಿ ಇದನ್ನ ಕಂಡೊಂಡನೆ ಕೆಂಡ ತುಳಿದವರಂತೆ ಆಡತೊಡಗಿದ್ದಾದರೂ ಯಾಕೆ…? ಕಲಾವಿದರಿಗೆ ಮುನಿಸಿಲ್ಲ, ಕಲೆಯನ್ನ ಪೋಷಿಸೋರಿಗೂ ಕೀಳಾಗಿ ಕಾಣಿಸುವ ಯೋಚನೆ ಇಲ್ಲದಿರುವಾಗ ಮೂರನೆ ವ್ಯಕ್ತಿಗಳಿಂದ ಅಪಸ್ವರ ಬರುತ್ತಿರುವುದು ಯಾಕೆ…?
ಆಳ್ವಾಸ್ ನುಡಿಸಿರಿ : ನಮ್ಮ ಸಮೃದ್ಧ ಸಾಂಸ್ಕೃತಿಕ ಜೀವನದ ಅನಾವರಣ
– ಡಾ.ಎಂ.ಮೋಹನ್ ಆಳ್ವ
(ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ನಿಪ್ಪಾಣಿ ಹಾಗೂ ಸವದತ್ತಿ ತಾಲೂಕುಗಳಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು. ಈ ಘಟಕಗಳ ಕಾರ್ಯಕ್ರಮದಲ್ಲಿ ಡಾ.ಎಂ.ಮೋಹನ್ ಆಳ್ವರು ಆಳ್ವಾಸ್ ನುಡಿಸಿರಿಯ ಉದ್ದೇಶ, ಪ್ರಾಮುಖ್ಯತೆಗಳನ್ನು ಜನರೊಡನೆ ಮನಃಪೂರ್ವಕವಾಗಿ ಹಂಚಿಕೊಂಡರು. ಅವರ ಮನದಾಳದ ಮಾತುಗಳು ಹೀಗಿದ್ದವು )
ಭಾರತ ಎಲ್ಲಾ ವಿಧದಿಂದಲೂ ಸಂಪದ್ಭರಿತವಾದ ದೇಶ. ಈ ದೇಶದ ಸಾಂಸ್ಕೃತಿಕ ಹಿನ್ನೆಲೆ ಈ ಮಾತಿನಿಂದ ಹೊರತಾದುದಲ್ಲ. ಸಾಂಸ್ಕೃತಿಕವಾಗಿ ಅತ್ಯಂತ ಸಮೃದ್ಧವಾದ ದೇಶ ನಮ್ಮದು. ನಮಗಿರುವ ಸಾಂಸ್ಕೃತಿಕ ಹಿನ್ನೆಲೆ ಬೇರಾವ ದೇಶಕ್ಕೂ ಇಲ್ಲ. ಆದರೆ ಇಂದು ಈ ಎಲ್ಲಾ ಚಟುವಟಿಕೆಗಳ ಭಾರತೀಯರಾದ ನಮ್ಮಿಂದ ಎಲ್ಲೋ ದೂರ ಸರಿಯುತ್ತಿವೆ. ನಮ್ಮಿಂದ ಮರೆಯಾಗುತ್ತಿರುವ ಸಾಂಸ್ಕೃತಿಕ ಚಟುವಟಿಕೆಗಳನ್ನು ಉಳಿಸಿ, ಬೆಳೆಸಿ, ಆದರಿಸುವ ಕಾರ್ಯ ನಮ್ಮಿಂದಾಗಬೇಕಿದೆ. ಈ ಹಿನ್ನೆಲೆಯಲ್ಲಿ ನಾವು ಆರಂಭಿಸಿರುವ ಸಾಂಸ್ಕೃತಿಕ ಉತ್ಸವಗಳೇ `ಆಳ್ವಾಸ್ ನುಡಿಸಿರಿ’ ಹಾಗೂ `ಆಳ್ವಾಸ್ ವಿರಾಸತ್’ ಕಾರ್ಯಕ್ರಮಗಳು.
ಆಳ್ವಾಸ್ ನುಡಿಸಿರಿ ಕನ್ನಡ ಭಾಷೆಯ ಕುರಿತಾದ ರಾಷ್ಟ್ರೀಯ ನಾಡು-ನುಡಿಯ ಉತ್ಸವ. ಇದು ಆರಂಭವಾಗಿ 12 ವರ್ಷ ಸಂದಿವೆ. ಇನ್ನು ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ. ವಿರಾಸತ್ ಆರಂಭವಾಗಿ 22 ವರ್ಷ ಕಳೆದಿವೆ. ದೇಶ-ವಿದೇಶಗಳಲ್ಲಿರುವ ಕಲಾ ರಸಿಕರನ್ನು ಒಂದುಗೂಡಿಸುವ ಕಾರ್ಯ ಇದಾಗಿದೆ.
ಸಾಂಸ್ಕೃತಿಕ ಚಟುವಟಿಕೆಗಳು ಅತೀ ಮುಖ್ಯ
ನಾವು ಈ ಕಾರ್ಯಕ್ರಮಗಳನ್ನು ಮಾಡುವಾಗ ಸಾಕಷ್ಟು ಹಣ ಖರ್ಚಾಗುತ್ತದೆ. ನೀವು ವ್ಯರ್ಥ ಹಣ ಪೋಲು ಮಾಡುತ್ತೀರಿ ಎನ್ನುವವರೂ ಇದ್ದಾರೆ. ಆದರೆ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ಕಾಪಾಡುವಾಗ ಇದು ಅನಿವಾರ್ಯ ಹಾಗೂ ಅವಶ್ಯಕ. ಇಂದು ಅನೇಕ ಜಾಗತಿಕ ಸವಾಲುಗಳು ನಮ್ಮೆದುರಿಗಿವೆ. ವಿದ್ಯಾರ್ಥಿಗಳು ಅವನ್ನು ಎದುರಿಸಲು ಯಾವಾಗಲೂ ತಯಾರಾಗಿರಬೇಕು. ಹಾಗಿರುವಾಗ ಕೇವಲ ಶೈಕ್ಷಣಿಕವಾಗಿ ಬಲವಾಗಿದ್ದರೆ ಸಾಲದು; ಮಾನಸಿಕವಾಗಿ, ಬೌದ್ದಿಕವಾಗಿ ಆ ಸವಾಲುಗಳನ್ನೆದುರಿಸುವ ಪ್ರೌಢಿಮೆ ನಮ್ಮ ಮಕ್ಕಳಿಗಿರಬೇಕು. ಮಸ್ಯೆಗಳಿಗೆ ಪರಿಹಾರ ಹುಡುಕುವ, ಕಾಲಕ್ಕೆ ತಕ್ಕಂತೆ ಬದಲಾಗುವ ಮಾನಸಿಕ ಸ್ಥಿತಿ ಇರಲೇಬೇಕು. ಈ ಹಿನ್ನೆಲೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ಇರಬೇಕಾದುದು ಅತಿ ಮುಖ್ಯ. ಆದ್ದರಿಂದ ಇಂತಹ ಕಾರ್ಯಕ್ರಮಗಳು ಮಹತ್ವದ್ದೆನಿಸುತ್ತವೆ. ನಮ್ಮ ಸಸ್ಥೆಯಲ್ಲಿರುವ 22,000 ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ನೀಡುವ ಕಾರ್ಯ ನಡೆದೇ ಇರುತ್ತದೆ. ನಮ್ಮ ವಿದ್ಯಾರ್ಥಿಗಳು ಎಲ್ಲ ರೀತಿಯಿಂದಲೂ ಸದೃಢರಾಗಿರಬೇಕೆಂಬ ಇರಾದೆ ನಮ್ಮದು. ಮತ್ತಷ್ಟು ಓದು
ಆಳ್ವಾಸ್ ನುಡಿಸಿರಿ – 2015
– ಡಾ| ಎಂ.ಮೋಹನ ಆಳ್ವ
ಅಧ್ಯಕ್ಷರು,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ),ಮೂಡುಬಿದಿರೆ
ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವು ನಡೆಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆಳ್ವಾಸ್ ನುಡಿಸಿರಿ. ಈ ಸಮ್ಮೇಳನವನ್ನು ಕಳೆದ 12 ವರ್ಷಗಳಿಂದ ಕನ್ನಡ ಬಾಂಧವರ ಸಹಕಾರದಿಂದ ನಿರಂತರವಾಗಿ ಸಂಘಟಿಸಿಕೊಂಡು ಬರುವ ಮೂಲಕ ನಾಡಿನಾದ್ಯಂತ ನಾಡು-ನುಡಿಯ ಎಚ್ಚರವನ್ನು, ಸಂಸ್ಕೃತಿ ಪ್ರೀತಿ-ಗೌರವಗಳನ್ನು ವೃದ್ಧಿಸಲು ಸಾಧ್ಯವಾಗಿದೆ. ಕನ್ನಡಿಗರ ಹೆಮ್ಮೆಯ ಈ ಕಾರ್ಯಕ್ರಮವು ಈ ವರ್ಷ ನವೆಂಬರ್ 26, 27, 28 ಮತ್ತು 29 (ಗುರುವಾರ, ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರ) ನೇ ದಿನಾಂಕಗಳಂದು ನಾಲ್ಕು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
ಆಳ್ವಾಸ್ ನುಡಿಸಿರಿ ಉದ್ಘಾಟನೆಗೆ ನೂತನ ವೇದಿಕೆ
ನವೆಂಬರ್ 26 ರಂದು ಸಂಜೆ ಗಂಟೆ 6.00 ಕ್ಕೆ ಆಳ್ವಾಸ್ ನುಡಿಸಿರಿಯ ಉದ್ಘಾಟನೆಯು ಅದಕ್ಕೆಂದೇ ನಿರ್ಮಾಣವಾದ ವೇದಿಕೆಯಲ್ಲಿ ನಡೆಯಲಿದೆ. ಸುಮಾರು 20,000 ಪ್ರೇಕ್ಷಕರು ನೋಡಿ ಆನಂದಿಸಬಹುದಾದ ಬೃಹತ್ ಸಭಾಂಗಣವು ಇದಾಗಿದೆ. ಉಳಿದಂತೆ, 27, 28, 29ನೇ ದಿನಾಂಕಗಳಂದು ‘ಕರ್ನಾಟಕ : ಹೊಸತನದ ಹುಡುಕಾಟ’ ಎನ್ನುವ ಪ್ರಧಾನ ಪರಿಕಲ್ಪನೆಯಲ್ಲಿ ವಿವಿಧ ಗೋಷ್ಠಿಗಳು, ಸಂಸ್ಮರಣೆ, ಕವಿಸಮಯ-ಕವಿನಮನ, ವಿಶೇಷೋಪನ್ಯಾಸಗಳು ರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿವೆ. 29ನೇ ದಿನಾಂಕದಂದು 3.00 ಗಂಟೆಗೆ ಸಮಾರೋಪ ಸಮಾರಂಭವು ಜರುಗಲಿದೆ.
ಆಳ್ವಾಸ್ ನುಡಿಸಿರಿ 2015ರ ಸರ್ವಾಧ್ಯಕ್ಷತೆಗೆ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ ಆಯ್ಕೆ.
ಮತ್ತಷ್ಟು ಓದು