ಶಿಕ್ಷಣದಿಂದ ಸ್ತ್ರೀ ಮತ್ತು ಉಕ್ಕಿನ ತರುಣ ಪಡೆ; ಎರಡು ತತ್ವಗಳ ಸಂಗಮ ಈ ಸಾಹಿತ್ಯ ಸಮ್ಮೇಳನ
– ಅಕ್ಷತಾ ಬಜ್ಪೆ
ವಿವೇಕಾನಂದರ ಪಶ್ಚಿಮದ ದಿಗ್ವಿಜಯದ ಕಥೆ ನಮಗೆಲ್ಲ ಗೊತ್ತೇ ಇದೆ. ಆದರೆ ಈ ಒಂದು ದಿಗ್ವಿಜಯ ಗುರು–ಶಿಷ್ಯೆಯರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶಕ್ಕೆ ಶುಭಶಕುನವಾಯಿತು. ಸ್ವಾಮಿ ವಿವೇಕಾನಂದರು ಹೋದಲ್ಲೆಲ್ಲಾ ಅವರನ್ನು ಅನುಸರಿಸುತ್ತಾ ಅವರ ಉಪನ್ಯಾಸಗಳನ್ನು ಕೇಳುತ್ತಿದ್ದ ಐಯರ್ಲೆಂಡಿನ ಮಾರ್ಗರೆಟ್ ಗೆ ಭಾರತದ ಬಗ್ಗೆ ಇದ್ದ ಕುತೂಹಲ ಹೆಚ್ಚಾಗುತ್ತಲೇ ಹೋಯಿತು. ಭಾರತಕ್ಕೆ ಬರಲು ಉತ್ಸುಕರಾಗತೊಡಗಿದರು. ಇದಕ್ಕಾಗಿ ಸ್ವಾಮೀಜಿಯವರಲ್ಲಿ ನಿವೇದನೆಯನ್ನು ಸಲ್ಲಿಸಿದರು. ಆದರೆ ಸ್ವಾಮೀಜಿ ಒಪ್ಪಲಿಲ್ಲ. ಸ್ವಾಮೀಜಿಯವರು ತಮ್ಮ ಮೊದಲ ಯುರೋಪ್ ಪ್ರವಾಸ ಮುಗಿಸಿ ಆಗಷ್ಟೇ ಭಾರತಕ್ಕೆ ಹಿಂದಿರುಗಿದ್ದರು. ಪರಿಸ್ಥಿತಿಗೆ ಸ್ಪಂದಿಸಿದ ಸ್ವಾಮೀಜಿ ಮಾರ್ಗರೆಟ್ ಗೆ ಪತ್ರ ಬರೆದು ಭಾರತಕ್ಕೆ ಬರುವಂತೆ ಸೂಚನೆಯಿತ್ತರು.
ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಸೋದರಿ ನಿವೇದಿತಾ ಭೋಗ ಭೂಮಿಯನ್ನು ತೊರೆದು ಯೋಗ ಭೂಮಿಯತ್ತ ಪಯಣಿಸಿದರು. ಹೊರಡುವ ಮುಂಚೆಯೇ ಭಾರತದಲ್ಲಿನ ದಯನೀಯ ಪರಿಸ್ಥಿತಿಯನ್ನು ವಿವರಿಸಿದ್ದ ಸ್ವಾಮೀಜಿಗೆ ‘ನಿಮ್ಮ ಜನರೇ ಇನ್ನು ನಮ್ಮ ಜನರು’ ಎಂದು ಸಮಾಧಾನ ಪಡಿಸಿದ್ದರು.ಒಂದು ರೆಕ್ಕೆಯಿಂದ ಹಕ್ಕಿ ಹಾರಲಾರದು ಅಂತೆಯೇ ಪುರುಷರ ಜೊತೆಯಾಗಿ ಸ್ತ್ರೀಯರೂ ಶಿಕ್ಷಿತರಾಗಿ ಬಲಿಷ್ಟರಾದರೆ ಮಾತ್ರ ಸಧೃಡ ಭಾರತವನ್ನು ಕಟ್ಟಲು ಸಾಧ್ಯ ಎಂಬ ಚಿಂತನೆ ಹೊಂದಿದ್ದರು. ಸ್ವಾಮೀಜಿ ‘ತಾಯಿಯ ಮೃದು ಹೃದಯ, ಯೋಧನ ವಿರ್ಯೋತ್ಸಾಹಗಳು, ತತ್ವಜ್ಞಾನಿಯ ಬೌದ್ಧಿಕ ಪ್ರತಿಭೆ, ಸಂತನ ದಿವ್ಯದೃಷ್ಟಿ, ದೇಶ ಪ್ರೇಮಿಯ ರಾಷ್ಟ್ರಪ್ರಜ್ಞೆ ಇದೆಲ್ಲಾ ಏಕತ್ರ ಕಲಿತ ನಾರೀಮಣಿ ನಿವೇದಿತಾ, ಸ್ವಾಮೀಜಿಗೆ ತಮ್ಮ ಇಂಗ್ಲೆಂಡ್ ಕಾರ್ಯದ ಪರಿಣಾಮವಾಗಿ ದೊರೆತಂತಹ ಅತ್ಯಂತ ಶ್ರೇಷ್ಟ ಪುಷ್ಪ.
ಕಡಲತಡಿಯಲ್ಲಿ ಮೊಳಗಲಿದೆ ಸಾಹಿತ್ಯ ಸಮ್ಮೇಳನದ ಝೇಂಕಾರ
– ರಾಜೇಶ್ ನರಿಂಗಾನ
ಹೌದು.. ಕಡಲತೀರ ಮಂಗಳೂರು ಒಂದು ವಿಶಿಷ್ಟ, ವಿನೂತನ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಜ್ಜುಗೊಂಡಿದೆ. ಇದನ್ನು ವಿಶಿಷ್ಟ, ವಿನೂತನ ಎಂದು ಕರೆಯುವುದಕ್ಕೂ ಕಾರಣವಿದೆ. ಇದು ದೇಶದಲ್ಲಿಯೇ ಮೊದಲ ಬಾರಿಗೆ ನಡೆಯುತ್ತಿರುವ ಸಾಹಿತ್ಯದ ಉತ್ಸವ. ಜಗತ್ತು ಕಂಡ ಶ್ರೇಷ್ಠ ಸಂತ, ಸಿಡಿಲ ಸಂನ್ಯಾಸಿ ಸ್ವಾಮಿ ವಿವೇಕಾನಂದ ಮತ್ತು ಅವರ ಅಸ್ಖಲಿತ ವಾಗ್ಝರಿಗೆ ಮರುಳಾಗಿ ದೂರದ ಪಾಶ್ಚಿಮಾತ್ಯ ದೇಶವಾದ ಐರ್ಲೆಂಡಿನಿಂದ ಭಾರತಕ್ಕೆ ಆಗಮಿಸಿ, ಈ ದೇಶಕ್ಕಾಗಿ ತಮ್ಮನ್ನು ತಾವು ಸಂಪೂರ್ಣವಾಗಿ ನಿವೇದಿಸಿದ ಸೋದರಿ ನಿವೇದಿತಾ ಅವರ ಸಾಹಿತ್ಯದ ಸಂಗಮವಿದು. ಈ ಇಬ್ಬರು ಶ್ರೇಷ್ಟ ವ್ಯಕ್ತಿಗಳ ಸಾಹಿತ್ಯದ ಅಧ್ಯಯನ, ಅವರ ಜೀವನ ಪ್ರೇರಣೆಯ ಸಂದೇಶದ ಅಪೂರ್ವ ಸಮಾವೇಶವೇ “ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ”
ಈ ನಾಡಿನ ಖ್ಯಾತ ಚಿಂತಕ, ವಾಗ್ಮಿ, ಅಂಕಣಕಾರ ಶ್ರೀಯುತ ಚಕ್ರವರ್ತಿ ಸೂಲಿಬೆಲೆಯವರ ಮಾರ್ಗದರ್ಶನದಲ್ಲಿ ಕಳೆದ ಎರಡುವರೆ ವರ್ಷಗಳಿಂದ ಅನೇಕ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡು ಇಡೀ ರಾಷ್ಟ್ರದ ಗಮನ ಸೆಳೆದಿರುವ ಯುವಾಬ್ರಿಗೇಡ್ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ನೇತೃತ್ವದಲ್ಲಿ ಈ ಅಭೂತಪೂರ್ವ ಸಾಹಿತ್ಯ ಸಮ್ಮೇಳನವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇದೇ ಫೆಬ್ರವರಿ 11 ಮತ್ತು 12 ರಂದು ಸಂಪನ್ನಗೊಳ್ಳಲಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಏನಿದೆ?
ಮತ್ತಷ್ಟು ಓದು
‘ಗಾಂಧಿಬಜಾರ್’ನಲ್ಲಿ ನೆನಪುಗಳ ಸೋನೆ ಮಳೆ!
– ತುರುವೇಕೆರೆ ಪ್ರಸಾದ್
ಬೆಂಗಳೂರಿನ ಗಾಂಧಿಬಜಾರ್ನ ಮಧುರ ನೆನಪುಗಳನ್ನು ಯಾವತ್ತಿಗೂ ಮರೆಯಲಾಗುವುದಿಲ್ಲ. ಗಾಂಧಿಬಜಾರ್ನ ಬ್ಯೂಗಲ್ ರಾಕ್, ವಿದ್ಯಾರ್ಥಿ ಭವನ್ ಮಸಾಲೆ ದೋಸೆ, ಚುರ್ಮುರಿ, ಸುಬ್ಬಮ್ಮಜ್ಜಿ ಹಪ್ಪಳದ ಅಂಗಡಿ, ಪ್ರಜಾಮತ ಕಛೇರಿ ಇವೆಲ್ಲಾ ಗಾಂಧಿಬಜಾರ್ ಎಂದೊಡನೆ ದುತ್ತನೆ ಕಣ್ಮುಂದೆ ಬಂದು ನಿಲ್ಲುತ್ತವೆ. ಗಾಂಧಿಬಜಾರ್ ಇಡೀ ಬೆಂಗಳೂರಿಗೇ ಒಂದು ಘನತೆವೆತ್ತ ಶಾಂತಿಕುಟೀರ ಎಂಬಂತಂಹ ಭಾವನೆ ಮೂಡಿಸುವ ಅನುಭವಗಳು ಗಾಂಧಿಬಜಾರ್ನ ರಸ್ತೆಗಳಲ್ಲಿ ಸುತ್ತಾಡಿದಾಗ ನನಗಾಗಿದೆ. ಸೋನೆ ಮಳೆ ಬಂದು ನಿಂತ ಒಂದು ಮುಸ್ಸಂಜೆಯಲ್ಲಿ ಇಕ್ಕೆಲೆಗಳ ಹಸಿರು ಮರಗಳ ನಡುವೆ ಪ್ರಶಾಂತವಾಗಿ ನಡೆಯುತ್ತಾ ಗಾಂಧಿಬಜಾರ್ನ ಹೂವಿನಂಗಡಿಗಳ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ಅನಿರ್ವಚನೀಯ ಅನುಭವ. ಬಹುಶಃ ನನಗೆ ನೆನೆಪಿರುವ ಹಾಗೆ ಮೆಜೆಸ್ಟಿಕ್ನಿಂದ ಆ ಕಾಲದ ಮೊದಲ ಡಬ್ಬಲ್ ಡೆಕ್ಕರ್ ಬಸ್ ಓಡಾಟ ಆರಂಭಿಸಿದ್ದೇ ಗಾಂಧಿಬಜಾರ್ಗೆ! ಆಹ್ಲಾದಕರ ವಾತಾವರಣ ಬೆಂಗಳೂರಿನ ಕೆಲವೇ ಬಡಾವಣೆಗಳಿಗಿರುವ ಸೌಭಾಗ್ಯ.ಅವುಗಳಲ್ಲಿ ಗಾಂಧಿಬಜಾರ್ಗೆ ಅಗ್ರಸ್ಥಾನ ಎಂದರೆ ತಪ್ಪಿಲ್ಲ, ಇಲ್ಲೇ ಪೂರ್ವ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿದ್ದ ಅಜ್ಜನ ಮನೆಗೆ ವರ್ಷಕ್ಕೊಂದು ಭಾರಿ ಬಂದು ಜಾಂಡಾ ಹೊಡೆಯುತ್ತಿದ್ದ ನನಗೆ ಗಾಂಧಿಬಜಾರ್, ಡಿವಿಜಿ ರೋಡ್, ಬುಲ್ ಟೆಂಪಲ್ ರಸ್ತೆಯ ಸಂದಿಗೊಂದಿಗಳೂ ಪರಿಚಯವಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಕಳ್ಳೆಕಾಯಿ ಪರಿಷೆಗಂತೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಬನಶಂಕರಿಯಲ್ಲಿ ನಮ್ಮೂರಿನಿಂದ ಹೋಗಿ ನೆಲೆಸಿದ್ದ ನನ್ನ ಗೆಳೆಯರು ಇದ್ದರು, ನಾವೆಲ್ಲಾ ಬ್ಯೂಗಲ್ ರಾಕ್,ಕೃಷ್ಣರಾವ್ ಪಾಕ್ಗಳಲ್ಲಿ ಅದೆಷ್ಟು ಕಾಲ ಕಳೆದಿದ್ದೇವೆಂಬುದಕ್ಕೆ ಲೆಕ್ಕವೇ ಇಲ್ಲ. ಮತ್ತಷ್ಟು ಓದು
ಉಳಿಯುವಂಥ ವಿಜ್ಞಾನ ಸಾಹಿತ್ಯ ಕೊಟ್ಟ ಅಡ್ಯನಡ್ಕರು
– ರೋಹಿತ್ ಚಕ್ರತೀರ್ಥ
ಶಾಲೆಯಲ್ಲಿದ್ದಾಗ ನಾವು ಕಿತ್ತಾಡಿಕೊಂಡು ಓದುತ್ತಿದ್ದ ಪತ್ರಿಕೆ ಎಂದರೆ ಬಾಲವಿಜ್ಞಾನ. ಅದರಲ್ಲಿ ಬರುತ್ತಿದ್ದ “ನೀನೇ ಮಾಡಿ ನೋಡು” ಎಂಬ ಸರಳ ಪ್ರಯೋಗಗಳನ್ನು ಮನೆಯಲ್ಲಿ ಮಾಡಿ ನೋಡುತ್ತಿದ್ದೆವು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅಲ್ಲಿ ತಜ್ಞರು ಕೊಟ್ಟ ಉತ್ತರಗಳನ್ನು ಓದಿ ಖುಷಿ ಪಡುತ್ತಿದ್ದೆವು. ವ್ಯಕ್ತಿಚಿತ್ರಗಳನ್ನು ಎರಡೆರಡು ಬಾರಿ ಓದಿ ಮನನ ಮಾಡಿಕೊಳ್ಳುತ್ತಿದ್ದೆವು. ವಿಜ್ಞಾನ ಪದಬಂಧವನ್ನು ಪೂರ್ತಿಗೊಳಿಸಲು ಹೆಣಗುತ್ತಿದ್ದೆವು. ಪಂಡಿತವರ್ಗಕ್ಕೆ ಸೇರಿದ ವಿಶೇಷ ತಳಿಗಳೆಂಬ ನಮ್ಮ ಜಂಬವನ್ನು ಬಾಲವಿಜ್ಞಾನ ಹೀಗೆ ತೃಪ್ತಿಗೊಳಿಸುತ್ತಿತ್ತು. ಆ ಪತ್ರಿಕೆಯಲ್ಲಿ ತಪ್ಪದೆ ಕಾಣಿಸಿಕೊಳ್ಳುತ್ತ, ನಮ್ಮ ಮನಸ್ಸಿನಲ್ಲಿ ಅಚ್ಚೊತ್ತಿಹೋಗಿದ್ದ ಒಂದು ಹೆಸರು ಅಡ್ಯನಡ್ಕ ಕೃಷ್ಣ ಭಟ್. ಮತ್ತಷ್ಟು ಓದು
ಉಪನಿಷತ್ ವಾಙ್ಮಯ 1: ಮೃತ್ಯುಮುಖದಲ್ಲಿ ಜ್ಞಾನದಾಹಿ; ಕೇಳಿದ ಗುರುವನು “ದೇಹಿ! ದೇಹಿ!”
– ಸ್ವಾಮಿ ಶಾಂತಸ್ವರೂಪಾನಂದ
ಉಪನಿಷತ್ ಎಂಬುದು ವೇದಕಾಲದ ಗದ್ಯಕಾವ್ಯ. ವಿದ್ಯೆ, ಜ್ಞಾನ, ಚಿಂತನೆಗಳು ಮುಪ್ಪುರಿಗೊಂಡ ಮನಸ್ಸುಗಳು ರಚಿಸಿದ ಅನನ್ಯ ಜೀವನಾಮೃತ ಸಾರ. ವೇದಗಳ ಒಟ್ಟರ್ಥವನ್ನು ಇವು ಸಂಗ್ರಹವಾಗಿ ತಿಳಿಸುತ್ತವೆ ಎನ್ನುವ ಕಾರಣಕ್ಕೆ ಇವನ್ನು ವೇದಾಂತ ಎಂದೂ ಕರೆಯುತ್ತಾರೆ. ಉಪನಿಷತ್ತುಗಳ ಸಾಲಿನಲ್ಲಿ ಅತಿವಿಶಿಷ್ಟವಾದದ್ದು ಕಠ. ಕೃಷ್ಣಯಜುರ್ವೇದದ ಕಠ ಪರಂಪರೆಯಲ್ಲಿ ಬರುವ ಈ ಉಪನಿಷತ್ತು ಗುರು-ಶಿಷ್ಯರ ಸಂವಾದದ ಒಂದು ಸಂಕ್ಷಿಪ್ತ ಚಿತ್ರಣ. ಗುರುಸ್ಥಾನದಲ್ಲಿ ಕೂತವನು ಸಾಕ್ಷಾತ್ ಯಮಧರ್ಮರಾಯ! ಮತ್ತು ಅವನೆದುರು ಶಿಷ್ಯನಾಗಿ ತಲೆಬಾಗಿ ವಿನೀತನಾಗಿ ಪವಡಿಸಿದವನು ಏಳೋ ಎಂಟೋ ವಯಸ್ಸಿನ ಮುದ್ದುಬಾಲಕ ನಚಿಕೇತ. ಪ್ರಪಂಚದ ಎರಡು ಧ್ರುವಗಳಂತಿರುವ ಈ ಇಬ್ಬರು ಜೊತೆಯಾದದ್ದು ಹೇಗೆ ಎಂಬುದೇ ಒಂದು ವಿಚಿತ್ರ ಕತೆ. ಕಠೋಪನಿಷತ್ತನ್ನು ಪ್ರವೇಶಿಸುವ ಮೊದಲು ನಮಗೆ ಆ ಹಿನ್ನೆಲೆ ತಿಳಿದಿದ್ದರೆ ಒಳ್ಳೆಯದು. ಮತ್ತಷ್ಟು ಓದು
ಯಾಕ್ ಯಾಕ್ ಚಿಕ್ಕಪ್ಪ, ಕಣ್ಕಣ್ ಬಿಡ್ತೀಯ?
ಗೊತ್ತಾಯ್ತಾ ಗೊತ್ತಾಯ್ತಾ ಗೊತ್ತಾಯ್ತಾ
ಎಂದರೆ ಗೊತ್ತಾದ್ದನ್ನು ಗೊತ್ತಾಯ್ತು ಅನ್ನಬೇಕು
ಗೊತ್ತಾಗದ್ದನ್ನು ಗೊತ್ತಾಗಿಲ್ಲ ಅನ್ನಬೇಕು
ಗೊತ್ತಾಗದ್ದನ್ನೂ ಗೊತ್ತಾಯ್ತು ಅಂದರೆ
ಗೊತ್ತಾಗದೇ ಹೋದೀತು ಗೊತ್ತಾಯ್ತಾ?
-ಅಂತ ನಾವು ಚಿಕ್ಕವರಿರುವಾಗ ಒಬ್ಬರಿಗೊಬ್ಬರು ಹೇಳಿಕೊಂಡು, ಈಗ ನೀನು ಹೇಳು ನೋಡೋಣ ಎಂದು ಸವಾಲು ಹಾಕಿಕೊಂಡು, ಹಾಕಿಸಿಕೊಂಡು, ಹೇಳಿ, ನಾಲಗೆ ತೊದಲಿ ಬ್ಬೆಬ್ಬೆಬ್ಬೆ ಎಂದು ನಕ್ಕು-ನಗಿಸುವ ಆಟವಾಡುತ್ತಿದ್ದೆವು. ಹಾಗೆಯೇ ಕಾಗೆಪುಕ್ಕ ಗುಬ್ಬಿಪುಕ್ಕ ಎಂದು ವೇಗವಾಗಿ ಹೇಳಲು ಹೋದರೆ ಅದು ಕಕ್ಕಪಕ್ಕ ಎಂದು ಬದಲಾಗುವ ಪರಿಗೆ ಕಕ್ಕಾಬಿಕ್ಕಿಯಾಗಿ ನಿಲ್ಲುತ್ತಿದ್ದೆವು. “ಯಾಕ್ ಯಾಕ್ ಚಿಕ್ಕಪ್ಪ ಕಣ್ಕಣ್ ಬಿಡ್ತೀಯ?” ಎಂದು ಹೇಳಲು ಹೋದರೆ ಚಿಕ್ಕಪ್ಪನ ಲಿಂಗ ಬದಲಾಗಿ ಚಿಪ್ಪಕ್ಕ ಎದುರು ನಿಲ್ಲುತ್ತಿದ್ದಳು. “ಬಂಕಾಪುರದ ಕೆಂಪು ಕುಂಕುಮ”ವನ್ನೂ ಅಷ್ಟೇ, ಜೋರಾಗಿ ಹಾರಿಸಹೋದರೆ ಅದು “ಕೆಂಕು ಪುಂಕಮ”ವಾಗಿ ಬದಲಾಗಿ ನಮಗೆ ಅಳ್ಳು ಹಿಡಿಸುವಷ್ಟು ನಗು ತರಿಸುತ್ತಿತ್ತು. “ಅವಳರಳಳೆದ ಕೊಳಗದಲಿ ಇವಳರಳಳೆದ”ದ್ದನ್ನು ನಿಧಾನವಾಗಿ ಹೇಳಿದೆವೋ ಬದುಕಿಕೊಂಡೆವು. ಜೋರಾಗಿ ಅಳೆಯಹೋದರೆ ಗಂಟಲಲ್ಲಿ ಬರಿಯ ಗೊಳಗೊಳಗಳೇ ನಿಂತು ಸುತ್ತಲಿನವರು ಗೊಳ್ಳೆಂದು ನಗುವಂತಾಗುತ್ತಿತ್ತು. ಅರಳು ಮತ್ತು ಕೊಳಗಗಳು ಮಾಯವಾಗಿರುವ ಈ ಕಾಲದ ಮಕ್ಕಳಿಗೆ ಇದೇನು ಗ್ರೀಕೋ ಫ್ರೆಂಚೋ ಎಂದೂ ಅನುಮಾನ ಬಂದೀತು! ಮತ್ತಷ್ಟು ಓದು
ಹುಣ್ಣಿವೀ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲತs ಹಗಲ!
– ರೋಹಿತ್ ಚಕ್ರತೀರ್ಥ
ಉಪೇಂದ್ರರ “ಉಪ್ಪಿ 2” ಚಿತ್ರ ಬಿಡುಗಡೆಯಾದ ಮರುದಿನ ಕನ್ನಡ ಪತ್ರಿಕೆಯೊಂದರಲ್ಲಿ ಒಂದು ಲೇಖನ ಬಂದಿತ್ತು. ಅದರಲ್ಲಿ ಮೊದಲಿಂದ ಕೊನೆವರೆಗೆ ಇದ್ದದ್ದು ಉಪ್ಪಿಟ್ಟಿನ ವಿವರಣೆ! ಉಪ್ಪಿಟ್ಟನ್ನು ಜನ ಹೇಗೆ ಮಾಡುತ್ತಾರೆ; ಹೇಗೆ ತಿನ್ನುತ್ತಾರೆ; ಮನೆಗಳಲ್ಲಿ ಉಪ್ಪಿಟ್ಟು ಮಾಡುವಾಗ ಯಾರ್ಯಾರ ಭಾವನೆ ಹೇಗಿರುತ್ತದೆ ಎಂದು ಇಡೀ ಲೇಖನದ ತುಂಬ ಉಪ್ಪಿಟ್ಟಿನ ಮಹಿಮೆಯನ್ನೇ ವರ್ಣಿಸಲಾಗಿತ್ತು. ಕೊನೆಗೆ ಮಾತ್ರ “ಇಲ್ಲಿ ಉಪ್ಪಿಟ್ಟು ಎಂದಿರುವಲ್ಲೆಲ್ಲ ಉಪ್ಪಿ – 2 ಎಂದು ಓದಿಕೊಳ್ಳಿ” ಎಂಬ ಸೂಚನೆ ಕೊಟ್ಟಿದ್ದರು! ಬಹುಶಃ ಸಿನೆಮದ ಬಗ್ಗೆ ಒಂದು ಸಾಲನ್ನೂ ಆಡದೆ ಬರೆದ ಮೊದಲ ಸಿನೆಮ ವಿಮರ್ಶೆ ಅದೇ ಇರಬೇಕು! ವಾಸ್ತವದಲ್ಲಿ, ವಿಮರ್ಶಕರು ತಾನು ಉಪ್ಪಿಟ್ಟಿನ ಬಗ್ಗೆ ಏನೇನು ಹೇಳುತ್ತ ಹೋಗುತ್ತಿದ್ದೇನೋ ಅವೆಲ್ಲವೂ ಆ ಹೆಸರಲ್ಲಿ ಬಂದ ಸಿನೆಮಕ್ಕೂ ಅನ್ವಯವಾಗುತ್ತವೆ ಎನ್ನುವುದನ್ನು ಲೇಖನದ ಉದ್ದಕ್ಕೂ ಪರೋಕ್ಷವಾಗಿ ಹೇಳಿಬಿಟ್ಟಿದ್ದರು. “ಈ ಚಿತ್ರ ಕೂಡ ಉಪ್ಪಿಟ್ಟಿನಂತೆ; ಅವರವರ ಭಾವಕ್ಕೆ, ಅವರವರ ಭಕುತಿಗೆ” ಎನ್ನುವುದು ಅವರ ಲೇಖನದ ಆಶಯವಾಗಿತ್ತು. ಹೀಗೆ, ಉಪ್ಪಿಯ ಚಿತ್ರವಿಮರ್ಶೆಯಲ್ಲಿ ಉಪಮಾ, ಉಪಮಾನವಾಗಿ ಬಂದುಹೋಯಿತು! ಮತ್ತಷ್ಟು ಓದು
ವಿಡಂಬನೆ: ಸಾಹಿತ್ಯ ಗದ್ದುಗೆ ಹಾಗೂ ಮಣ್ಣಂಗಟ್ಟಿ ಸಾಹಿತ್ಯ!
– ತುರುವೇಕೆರೆ ಪ್ರಸಾದ್
ತರ್ಲೆಕ್ಯಾತನಳ್ಳಿ ಖ್ಯಾತ ಸಾಹಿತಿ ಅನಂತ ಜೋಷಿ ಮತ್ತು ತಾಲ್ಲೂಕ ಸಾಹಿತ್ಯ ಸಭೆಯ ನೂತನ ಅಧ್ಯಕ್ಷ ಗುದ್ಲಿಂಗ ಜಮಖಂಡಿ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆ ಹೀಗಿದೆ:
‘ನಮಸ್ಕಾರ್ರೀ ! ನಾನ್ ಜಮಖಂಡಿ ಮಾತಾಡಕ್ ಹತ್ತೀನಿ’
‘ಓಹೋ! ಜಮಖಂಡಿ ಅವರು!ಏನ್ರಪ್ಪಾ! ಆರಾಮದೀರೇನು?’
‘ಹಾಂ! ಆರಾಮದೀನಿ..ವಿಷ್ಯ ತಿಳೀತೇನ್ರೀ ಎಪ್ಪಾ?’
‘ಯಾವ ವಿಷ್ಯ ಹೇಳಕ್ ಹತ್ತೀರಿ ನೀವು? ಕೊಶ್ನೆ ಪೇಪರ್ ಲೀಕಾಯ್ತಲ್ಲ ಅದಾ ? ಇಲ್ಲ ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ ಸಿಕ್ತಲ್ಲ ಅದಾ?’
‘ಏ ! ಅವೆಲ್ಲಾ ಹಳೇದಾತ್ ಬಿಡ್ರಿ, ಈಗ ನಂಗ್ ಸಾಹಿತ್ಯ ಸಭೆ ಅಧ್ಯಕ್ಷಗಿರಿ ಸಿಕ್ಕೈತೆ, ಮೊನ್ನೆ ಯುಗಾದಿ ಮುಂದ ಪೇಪರ್ನಾಗ್ ಬಂದಿತ್ತು, ನೀವು ನೋಡ್ಲಿಲ್ಲೇನು?’
‘ಅರೆ! ಹೌದಾ? ನಿಮ್ಗೆ ಅಧ್ಯಕ್ಷಗಿರಿ ಕಟ್ಯಾರಾ? ಅಂದ್ರೆ ಹಾರ ತುರಾಯಿ ಹಾಕಿಸ್ಕೊಳೋಕ್ ಕೊಳ್ ಚಾಚ್ಕಂಡ್ ಕುಂತ್ ಬಿಟ್ರಿ ಅನ್ನಿ, ಇಂದ್ರಾಬಾಯವ್ರು ನಮಗಾ ಒಂದ್ ಮಾತೂ ಕೇಳ್ದ, ಸಭೆನೂ ಕರೀದೆ ನಿಮ್ಮನ್ನ ಹೆಂಗ್ ಅಧ್ಯಕ್ಷ ಮಾಡಾರೆ?’
‘ನಿಮ್ಗೆ ಇದ್ ಕೇಳಿದ್ ಕೂಡ್ಲೆ ಹೊಟ್ಟೆನಾಗೆ ಮೆಣಸಿನಕಾಯ್ ಕಿವುಚಿದಂಗಾಗ್ತದೆ ಅಂತ ನಂಗೊತ್ತಿತ್ತು ಬಿಡ್ರಲಾ! ಅದೆಂಥ ಹೊಟ್ಟೆ ಉರೀನ್ರೀ ನಿಮ್ದು..! ಇನ್ನೊಬ್ರಿಗೆ ಒಳ್ಳೇದಾತು ಅಂದ್ರೆ ಸಹಿಸೋ ಮಂದಿ ಅಲ್ಲ ನೀವು’ ಮತ್ತಷ್ಟು ಓದು
‘ಹೊಸ ತಲೆಮಾರಿನ ತಲ್ಲಣ’ ಕೃತಿ ಪರಿಚಯ
– ಮು.ಅ ಶ್ರೀರಂಗ ಬೆಂಗಳೂರು
ಡಾ. ರಹಮತ್ ತರೀಕೆರೆ ಅವರ ಸಂಪಾದಕತ್ವದಲ್ಲಿ ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಅವರು ೨೦೦೮ರಲ್ಲಿ ಪ್ರಕಟಿಸಿರುವ ‘ಹೊಸ ತಲೆಮಾರಿನ ತಲ್ಲಣ’ ಕೃತಿಯ ಒಂದು ಪರಿಚಯ ಮಾಡಿಕೊಡುವುದು ಈ ಲೇಖನದ ಉದ್ದೇಶ. ಈ ಕೃತಿಯಲ್ಲಿ ಒಟ್ಟು ೩೮ ಲೇಖನಗಳಿವೆ. ಸಂಪಾದಕರಾದ ರಹಮತ್ ತರೀಕೆರೆಯವರು ತಮ್ಮ ಮುನ್ನುಡಿಯಲ್ಲಿ ಹೇಳಿರುವಂತೆ ‘ಈ ಸಂಕಲನವು ಬರಹದಲ್ಲಿ ತೊಡಗಿಕೊಂಡಿರುವವರಿಗೂ, ಸಾಹಿತ್ಯ ಅಧ್ಯಯನ ಮಾಡುವವರಿಗೂ, ಸಾಹಿತ್ಯದಲ್ಲಿ ಸಾಮಾನ್ಯ ಆಸಕ್ತಿ ಇರಿಸಿಕೊಂಡಿರುವ ಓದುಗರಿಗೂ ಉಪಯುಕ್ತ ಆಗಬಹುದು’. ಈ ಕೃತಿಯಲ್ಲಿ ಮೂರು ಭಾಗಗಳಿವೆ. ಮೊದಲ ಭಾಗದಲ್ಲಿ ಹೊಸತಲೆಮಾರಿನ ಲೇಖಕರ ಆತ್ಮ ಕಥಾನಾತ್ಮಕ ಮಾದರಿಯ ಬರಹಗಳಿವೆ. ಎರಡನೇ ಭಾಗದ ಬರಹಗಳು ಸಂಪಾದಕರ ಕೆಲವು ನಿರ್ದಿಷ್ಟ ಪ್ರಶ್ನೆಗಳಿಗೆ ಕೊಟ್ಟ ಉತ್ತರವಾಗಿ ಮೂಡಿಬಂದ ಲೇಖನಗಳಿವೆ. ಮೂರನೇ ಭಾಗದಲ್ಲಿ ಈ ಎರಡೂ ಭಾಗದ ಬರಹಗಳಿಗೆ ಸಂಪಾದಕರು ಮಾಡಿರುವ ‘ತಲ್ಲಣಗಳ ಸ್ವರೂಪ’ ಎಂಬ ಉತ್ತಮ ವಿಶ್ಲೇಷಣೆ ಇದೆ. ಮತ್ತಷ್ಟು ಓದು
ಮೆಲ್ಲುಸಿರೆ ಸವಿಗಾನ….!
– ನಾಗೇಶ ಮೈಸೂರು
ಪೀಠಿಕೆ: ಬಲ್ಲವನೆ ಬಲ್ಲ, ಬೆಲ್ಲದ ರುಚಿಯ – ಎಂಬಂತೆ, ಹಳೆಯ ಹಾಡುಗಳು ಮಾಡುವ ಮೋಡಿ ಅದನ್ನು ಮೆಲ್ಲುವವರಷ್ಟೆ ಬಲ್ಲರು. ಹಾಗೆ ಬಂದು ಹೀಗೆ ಹೋಗದ ಜೀವಮಾನ ಪೂರ ಸಖರಾಗಿಬಿಡುವ ಈ ಗಾನ ರತ್ನಗಳ ನೆನಕೆಯ ಅನಾವರಣ, ಈ ಬರಹದ ಆಶಯ..
ಕತ್ತಲು ತುಂಬಿದ ಆಗಸದ ತುಂಬ ಚಿತ್ತಾರ ಬರೆದ ನಕ್ಷತ್ರಗಳ ರಾಶಿ. ಹುಣ್ಣಿಮೆ ಹಾಲಿನ ಬಿಂದಿಗೆಯನ್ಹೊತ್ತು ಇಳೆಗೆ ಸುರಿಯಲೆಂದೇ ತಂದ ಬೆಳದಿಂಗಳನೆಲ್ಲ ಕಣೆ ಕಟ್ಟಿಸಿ ದೃಷ್ಟಿ ಬೊಟ್ಟಾಗಿಸಿಕೊಂಡು ವಿಹರಿಸುತ್ತ ಮೋಡಗಳ ನಡುವೆ ದೋಣಿಯಲಿ ಸಾಗಿದಂತೆ ಸ್ವೈರ ವಿಹಾರದಲ್ಲಿದ್ದಾನೆ ಸುಧಾಕರ. ಅವನ ಸುತ್ತಲಿನ ಕಾಂತಿಗೆ ಚದುರಿ ಚೆಲ್ಲಾಡಿದ ಮೇಘ ಪುಂಜವೂ ಪ್ರಜ್ವಲ ದೀಪ ಹೊತ್ತಿಸಿದ ಉಜ್ವಲ ಹಣತೆಯಂತೆ ಫಳಫಳ ಹೊಳೆಯುತ್ತ ತೇಲಾಡಿವೆ. ಮಲಗಿದಲ್ಲಿಂದಲೇ, ಅದನ್ನೆ ನೆಟ್ಟ ನೋಟದಿಂದ ನೋಡುತ್ತಿದ್ದರೆ ತೇಲಿಹೋಗುತ್ತಿರುವುದು ನಾವ ಅಥವ ಆಗಸದ ಚೆನ್ನ, ಚೆಲುವೆಯರ ಅನ್ನುವುದೇ ಗೊತ್ತಾಗದ ಅಯೋಮಯ ಸ್ಥಿತಿ – ಒಂದರೆಕ್ಷಣ, ಸುತ್ತುತ್ತಿರುವ ಭುವಿ ಚಂದ್ರರ ಸಂಬಂಧವು ಮರೆತುಹೋದಂತಾಗಿ. ಮತ್ತಷ್ಟು ಓದು