ತೆಲಿಯಲೇರು ರಾಮ ಭಕ್ತಿ ಮಾರ್ಗಮುನು
– ಹಂಸಾನಂದಿ
ಇಂದು ಪುಷ್ಯ ಬಹುಳ ಪಂಚಮಿ. 1847ರಲ್ಲಿ ತ್ಯಾಗರಾಜರು ಸಮಾಧಿ ಹೊಂದಿದ ದಿನ.
ಈ ಮೊದಲೂ ತ್ಯಾಗರಾಜರ ಆರಾಧನೆಯ ಸಮಯದಲ್ಲಿ , ಕೆಲವು ಕೃತಿಗಳನ್ನು ಕನ್ನಡಕ್ಕೆ ತಂದಿದ್ದೆ. ಇವತ್ತು ಅದಕ್ಕಾಗೇ ನಾನು ಆಯ್ದುಕೊಂಡಿದ್ದು ‘ತೆಲಿಯಲೇರು ರಾಮ ಭಕ್ತಿಮಾರ್ಗಮುನು’ ಎಂಬ ಧೇನುಕ ರಾಗದ ರಚನೆ. ಈ ರಚನೆಗೆ ನಾನು ಮಾಡಿದ ಕನ್ನಡ ಅನುವಾದ ಇಲ್ಲಿದೆ.
ತಿಳಿಯಲಾರರು ಭಕ್ತಿಮಾರ್ಗವನ್ನು ||ತಿಳಿಯಲಾರರು ||
ತಿರೆಯೆಲ್ಲವ ತಿರುಗುತ್ತ ಕನ
-ವರಿಸುತಿಹರೆಲ್ಲ ರಾಮ || ತಿಳಿಯಲಾರರು ||
ಹಾಸಿಗೆಯಿಂದೆದ್ದು ಮುಳುಗು ಹಾಕಿ ಬೂದಿ
ಪೂಸಿ ತೋರಿಕೆಗೆ ಬೆರಳನೆಣಿಸಿ
ಕಾಸು ಗಳಿಕೆಯಲ್ಲೇ ತಮ್ಮ ಮನವನಿಡುತ
ಲೇಸು ತ್ಯಾಗರಾಜ ವಿನುತನ|| ತಿಳಿಯಲಾರರು ||
ಮೋದಿ vs. ಕೇಜ್ರಿವಾಲ್ ; ನಾನೇಕೆ ಮೋದಿಯನ್ನು ಬೆಂಬಲಿಸುತ್ತೇನೆ?
– ರಾಕೇಶ್ ಶೆಟ್ಟಿ
“Politics is the last resort for the scoundrels” ಅಂದವನು George Bernard Shaw.ಆತನ ಮಾತಿಗೆ ಪೂರಕವಾಗಿಯೇ ನಮ್ಮ ದೇಶದ ಕೆಲವು ರಾಜಕಾರಣಿಗಳೂ ಮಾಡಿ ತೋರಿಸಿದ ಮೇಲೆ,ಚುನಾವಣೆ ಬಂತೆಂದರೆ ಮತ್ತೊಬ್ಬ ನವಪುಢಾರಿಯ ಜನನ ಅಂದುಕೊಳ್ಳುತ್ತ ನಮ್ಮ ಜನರು, ಅದರಲ್ಲೂ ಮುಖ್ಯವಾಗಿ ನಗರ ಕೇಂದ್ರಿಕೃತ ಮತದಾರರು ಈ ಚುನಾವಣೆ,ರಾಜಕೀಯಗಳಿಂದಲೇ ದೂರವುಳಿಯುತಿದ್ದರು.ರಾಜಕೀಯ ಅಂದರೆ ಗಲೀಜು ಅಂತೆಲ್ಲ ರೇಜಿಗೆ ಪಟ್ಟುಕೊಳ್ಳುವವರೇ ಹೆಚ್ಚಿದ್ದರು.
ಎಲ್ಲ ಕೆಟ್ಟದಕ್ಕೂ ಒಂದು ಅಂತ್ಯವಿದ್ದಂತೆ,ಒಳ್ಳೆಯದಕ್ಕೂ ಆರಂಭವಿರಬೇಕಲ್ಲವೇ? ಇತ್ತೀಚೆಗೆ ಮುಗಿದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿರುವುದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಆರೋಗ್ಯಕರ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.ಈ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲರನ್ನು ಚಕಿತಗೊಳಿಸಿದ ಮತ್ತೊಂದು ಪ್ರಧಾನ ಅಂಶ, ದೆಹಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ‘ಆಪ್’ ಪಕ್ಷ ೨೮ ಸೀಟುಗಳನ್ನು ಗೆದ್ದು,ಕಡೆಗೆ ಕಾಂಗ್ರೆಸ್ಸ್ ಪಕ್ಷದ ಬಾಹ್ಯಬೆಂಬಲದಿಂದ ಸರ್ಕಾರವನ್ನು ರಚಿಸಿ ಮುಖ್ಯಮಂತ್ರಿ ಗದ್ದುಗೆಯೇರಿದ್ದು. ಎಲ್ಲಾ ರಾಜಕೀಯ ಪಕ್ಷಗಳು ಕಾಂಗ್ರೆಸ್ಸ್ ಹಾಕಿಕೊಟ್ಟ ಹಾದಿಯಲ್ಲೇ ಸಾಗಿ ರಾಜಕಾರಣ ಮಾಡುವಾಗ ಭಿನ್ನ ಹಾದಿಯಿಡಿದು ‘ಆಪ್’ ಪಕ್ಷ ೨೮ ಸೀಟು ಗೆದ್ದಿದ್ದು ಸಾಮಾನ್ಯ ಸಂಗತಿಯೇನಲ್ಲ.
ಸಹಜವಾಗಿಯೇ ಮೀಡಿಯಾಗಳ ಹೊಸ ಡಾರ್ಲಿಂಗ್ ಆಗಿ ಕೇಜ್ರಿವಾಲ್ ಹೊರಹೊಮ್ಮಿದರು.ಅಲ್ಲಿಯವರೆಗೂ ಮೋದಿಯ ಎದುರಿಗೆ ಯಾರು,ಯಾರು ಅಂದುಕೊಳ್ಳುತಿದ್ದವರಿಗೆ ಎದುರಿಗೆ ನಿಲ್ಲಿಸಲು ಒಬ್ಬ ಸಿಕ್ಕಂತಾಗಿತ್ತು.ಆಗ ‘ಮೋದಿ vs ಕೇಜ್ರಿವಾಲ್’ ಅನ್ನುವ ಹೊಸ ರಾಗ ಶುರುವಿಟ್ಟುಕೊಂಡರು.
ಸತತ ೧೩ ವರ್ಷಗಳ ಕಾಲದಿಂದ ಮುಖ್ಯಮಂತ್ರಿಯಾಗಿದ್ದುಕೊಂಡು,೪ ನೇ ಬಾರಿಗೆ ಗೆದ್ದು,ಗದ್ದುಗೆ ಹಿಡಿದು ತನ್ನ ಅಭಿವೃದ್ಧಿ ಮಂತ್ರದಿಂದಲೇ ದೇಶದ ಗಮನ ಸೆಳೆದು ಇಂದು ‘ಪ್ರಧಾನಿ ಅಭ್ಯರ್ಥಿ’ಯಾಗಿ ನಿಂತ ನಾಯಕನೊಬ್ಬನ ಎದುರಿಗೆ ಒಂದು ವರ್ಷದ ಹಿಂದಷ್ಟೇ ‘ಅಣ್ಣಾ ಹಜಾರೆ’ಯವರ ಹೋರಾಟದ ಗರ್ಭ ಸೀಳಿ, ನಂಬಿದವರಿಗೆ ಮೋಸ ಮಾಡಿಕೊಂಡು ಜನಿಸಿದ ಆಪ್ ಪಕ್ಷದ ಕೇಜ್ರಿವಾಲ್ ಅವರನ್ನು ನಿಲ್ಲಿಸಿ ನೋಡುವುದೇ ಮೊದಲಿಗೆ ಹಾಸ್ಯಾಸ್ಪದವಾದದ್ದು ಎನಿಸುತ್ತದೆ.
ನಿಮ್ಮ ನಿಲುಮೆಗೆ ನಾಲ್ಕರ ಸಂಭ್ರಮ
“ ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದ ಎಲ್ಲೆ ಮೀರಿ
ನಿರ್ದಿಗಂತವಾಗಿ ಏರಿ
ಓ ನನ್ನ ಚೇತನ ಆಗು ನೀ ಅನಿಕೇತನ…
ರಸ ಋಷಿ ಕುವೆಂಪು ಅವರ ಈ ನುಡಿಗಳೆ ನಮಗೆ ಸ್ಪೂರ್ತಿ.ಯಾವುದೇ ಜಾತಿ, ಮತ, ತತ್ವಗಳಿಗೆ ಗಂಟು ಬೀಳದೆ, ಎಡ-ಬಲ ಪಂಥೀಯರ ನಡುವೆ ಸಿಕ್ಕಿಕೊಳ್ಳದೆ, ಯಾವುದೇ ಮತ್ತು ಯಾರದೇ ಮರ್ಜಿಗೇ ಬೀಳದೆ ಅನ್ನಿಸಿದ್ದನ್ನು ನೇರವಾಗಿ ಹೇಳುವ, ಆ ಮೂಲಕ ಯಾವ ಗುಂಪಿಗೂ ಸೇರದೆಯೆ ಸ್ವತಂತ್ರವಾಗಿ ಯೋಚಿಸುವ ಬಯಕೆ ನಮ್ಮದು. ಅಷ್ಟಕ್ಕೂ ’ಸತ್ಯ’ ಅನ್ನುವುದು ಎಡ-ಬಲ ಪಂಥದ ಆಸ್ತಿಯೇನು ಅಲ್ಲವಲ್ಲ. ಅದು ಈ ಇಬ್ಬರ ನಡುವೆಯು ಸಿಲುಕದೆ ತನ್ನ ಪಾಡಿಗದು ಯಾವುದೋ ಮೂಲೆಯಲ್ಲಿ ನಿರ್ಲಿಪ್ತವಾಗಿರುತ್ತದೆ. ಅದನ್ನ ಹುಡುಕುವ ಮುಗ್ಧ ಆಸೆ ನಮ್ಮದು.ನೊಂದ ಜೀವಗಳಿಗೆ ದನಿಯಾಗುವ ಬಯಕೆ ನಮ್ಮದು…”
ಮೇಲಿನ ಮಾತುಗಳು ’ನಿಲುಮೆಯ ನಿಲುವಿನಲ್ಲಿ’ ನಾವು ಬರೆದುಕೊಂಡಿರುವುದು.ನಿಲುಮೆ ಮೂರು ವರುಷ ಪೂರೈಸಿ ನಾಲ್ಕನೇ ವರುಷಕ್ಕೆ ಕಾಲಿಟ್ಟಿರುವ ಈ ಅವಧಿಯಲ್ಲಿ ಮೇಲಿನ ಮಾತುಗಳಿಗೆ ನ್ಯಾಯ ಸಲ್ಲಿಸಿದ್ದೇವೆ ಅನ್ನುವ ಭಾವನೆ ನಮ್ಮದು.ಇದುವರೆಗೂ ನಿಲುಮೆಗೆ ಕಳಿಸಲ್ಪಟ್ಟ ಲೇಖನಗಳನ್ನು, ನಾವು ನಮ್ಮ ವಾದ,ನಂಬಿಕೆ,ಅಭಿಪ್ರಾಯಕ್ಕೆ ವಿರುದ್ಧವಾಗಿದೆ ಅನ್ನುವ ಕಾರಣಕ್ಕೆ ಪ್ರಕಟಿಸದೇ ತಡೆ ಹಿಡಿದವರಲ್ಲ.ವಿಭಿನ್ನ ಸಂಸ್ಕೃತಿ,ಆಚಾರ,ವಿಚಾರ,ನಂಬಿಕೆಗಳನ್ನು ಗೌರವಿಸಬೇಕು ಅನ್ನುವುದು ಕೇವಲ ನಮ್ಮ ಮಾತಲ್ಲ,ಅದನ್ನು ಕಾರ್ಯಗತಗೊಳಿಸಿದ್ದೇವೆ ಕೂಡ.ಆದರೆ ಒಂದು ಮಾತು ನಿಜ.ಕೆಲವೊಂದು ಲೇಖನಗಳು ಯುನಿಕೋಡ್ನಲ್ಲಿರದ ಕಾರಣ, ಇನ್ನು ಕೆಲವು ಸಾಂಧರ್ಭಿಕ ಲೇಖನಗಳನ್ನ ನಾವು ನೋಡುವಷ್ಟರಲ್ಲೇ ತಡವಾಗಿದ್ದರಿಂದ ಕೆಲವು ಪ್ರಕಟವಾಗಿಲ್ಲ.(ನಿಲುಮೆ ನಮ್ಮ ಹವ್ಯಾಸದ ಭಾಗವಾಗಿರುವುದರಿಂದ, ಕೆಲವೊಮ್ಮೆ ಕೆಲಸದ ಒತ್ತಡದಲ್ಲಾಗುವ ತಪ್ಪುಗಳಿವು, ಮನ್ನಿಸಿ).ಇವಿಷ್ಟು ಕಾರಣ ಬಿಟ್ಟರೆ ನಮಗೆ ಕಳಿಸಲ್ಪಟ್ಟ ಎಲ್ಲ ಲೇಖನಗಳನ್ನು ನಾವು ಪ್ರಕಟಿಸಿದ್ದೇವೆ.
೨೦೧೩ ನಿಲುಮೆಯ ಪಾಲಿಗೆ ಗಮನಾರ್ಹವಾಗಿಯೇ ಇತ್ತು.೨೦೧೩ ರಲ್ಲಿ ನಿಲುಮೆಯಲ್ಲಿ ನಡೆದ ಪ್ರಮುಖ ಚರ್ಚೆಗಳು/ಬರಹಗಳಿವು.
೧.ಕಾಮುಕರಿಗೆ ಬಲಿಯಾದ ಉಜಿರೆಯ ಸೌಜನ್ಯಪರವಾಗಿ ಮತ್ತು ದೌರ್ಜನ್ಯಕ್ಕೊಳಗಾದ ಛತ್ತೀಸಗಢದ ಆದಿವಾಸಿ ಮಹಿಳೆ ಸೋನಿ ಸೂರಿಯ ಬಗ್ಗೆ
೨.ವಚನ ಸಾಹಿತ್ಯ ಮತ್ತು ಜಾತಿ ಪದ್ಧತಿ
೩.ಶಂಕರ ಭಟ್ಟರ ಎಲ್ಲರ ಕನ್ನಡ
೪.ಬೌದ್ಧ ಧರ್ಮ ಮತ್ತು ಶಂಕರಚಾರ್ಯ
೫.ಟಿಪ್ಪು ವಿವಿಯ ವಿವಾದ
೬.ಮೂಡನಂಬಿಕೆ ವಿರೋಧಿ ಕರಡು
೭.ಜಮ್ಮು-ಕಾಶ್ಮೀರ ಮತ್ತು ಆರ್ಟಿಕಲ್ ೩೭೦ ಚರ್ಚೆ
೮.ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ
೯.ರಾಜಕೀಯ ಸುದ್ದಿಗಳು
೨೦೧೩ರಲ್ಲಿ ನಡೆದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ”ಯ ಚರ್ಚೆ ಕರ್ನಾಟಕದ ಬುದ್ದಿಜೀವಿ ವಲಯದಲ್ಲಿ ದೊಡ್ಡ ಸಂಚಲವನ್ನುಂಟು ಮಾಡಿತ್ತು.ರಾಜ್ಯದ ಪ್ರಗತಿಪರ ಪತ್ರಿಕೆಯೊಂದರಲ್ಲಿ ಶುರುವಾದ ಈ ಚರ್ಚೆ ಏಕಮುಖವಾಗಿ ಸಾಗಿ ಒಂದು ಕಡೆಯವರ ಲೇಖನಗಳಿಗೆ ಮಾತ್ರ ಮನ್ನಣೆ ನೀಡಿ ಇನ್ನೊಂದು ಗುಂಪಿನ ವಾದವನ್ನೂ ಆಲಿಸುವ ನಿಲುವನ್ನು ತೋರಿಸದಿದ್ದಾಗ ಸಿ.ಎಸ್.ಎಲ್.ಸಿ ತಂಡದ ಜೊತೆ ನಿಂತು, ನಿಲುಮೆಯ ನಿಲುವಿಗೆ ಬದ್ಧವಾಗಿ ನಡೆದುಕೊಂಡು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ ಅನ್ನುವ ಭಾವ ನಮ್ಮದು.ಆದರೆ, ಈ ಚರ್ಚೆಯ ಅವಧಿಯಲ್ಲಿ ಮತ್ತು ಆ ನಂತರ ಕರ್ನಾಟಕದ ಬುದ್ಧಿಜೀವಿ ವಲಯ ನಡೆದುಕೊಂಡ ರೀತಿ ಆಘಾತಕಾರಿಯಾಗಿತ್ತು. ಹೀಗೆ ಒಂದೇ ರೀತಿಯ ಅಥವಾ ತಮಗೇ ಹೇಗೆ ಬೇಕೋ ಅಂತ ವಾದಗಳಿಗೆ,ಅಂತ ವಾದವನ್ನು ಮುಂದಿಡುವ ಜನರೆಲ್ಲ ಒಂದಾಗಿ ಉಳಿದವರನ್ನು ಅಸ್ಪೃಷ್ಯರನ್ನಾಗಿ ನೋಡುವ ಆರೋಗ್ಯಕರ ಸಮಾಜದ ನಿರ್ಮಾಣ ಮಾಡುವುದಿಲ್ಲ.ದುರಾದೃಷ್ಟವಶಾತ್ ನಮ್ಮಲ್ಲಿ ಈಗ ಇದೇ ರೀತಿಯ ಗುಂಪುಗೂಡುವಿಕೆ ನಡೆಯುತ್ತಿದೆಯೆನ್ನುವುದು.ಭಿನ್ನ ವಾದ,ಅಭಿಪ್ರಾಯಗಳನ್ನು ಹೀಗೆ ದೂರ ಮಾಡಿಕೊಳ್ಳುತ್ತ ನಾವೆಂತ ಸಮಾಜವನ್ನು ಕಟ್ಟಲು ಹೊರಟಿದ್ದೇವೆ ಅನ್ನುವ ಆತ್ಮವಾಲೋಕನ ಮಾಡಿಕೊಳ್ಳುವುದು ಅವಶ್ಯವಾಗಿದೆ ಅನ್ನುವುದು ನಿಲುಮೆಯ ಕಳಕಳಿ.
ಕೆಲವು ಲೇಖನಗಳಿಂದಾಗಿ, ಕೆಲವರು ನಮ್ಮನ್ನು ಬಲಪಂಥೀಯರನ್ನಾಗಿಯೂ ಮಾಡಿದರು. ಆದರೆ,ಎಡಪಂಥೀಯರನ್ನಾಗಿ ಮಾಡಿದ್ದು ಸ್ವಲ್ಪ ಕಡಿಮೆಯೇ ಅನ್ನಬಹುದು.ಇದಕ್ಕೆ ನಿಲುಮೆ ಕಾರಣರಲ್ಲ. “ನಿಲುಮೆ ಅನ್ನುವುದು ಒಂದು ವೇದಿಕೆ” ಎಂದು ನೋಡಿದಾಗ, ಈ ರೀತಿ ಹಣೆಪಟ್ಟಿ ಕಟ್ಟುವುದು ಸರಿಯಲ್ಲ ಅನ್ನುವುದು ತಿಳಿಯುತ್ತದೆ.ನಿಲುಮೆಯ ನಿಲುವಿನಂತೆ ನಾವು ಎಲ್ಲಾ ರೀತಿಯ ಬರಹಗಳಿಗೂ ದನಿಯಾಗಿದ್ದೇವೆ,ದನಿಯಾಗುತ್ತಿದ್ದೇವೆ ಮತ್ತು ದನಿಯಾಗುತ್ತಲೇ ಇರುತ್ತೇವೆ.ಈ ಮೇಲೆ ಹೇಳಿದ ಹಾಗೆ ಬಂದಿದ್ದನ್ನೆಲ್ಲಾ ಯಾವುದೇ ಫಿಲ್ಟರ್ ಇಲ್ಲದೆ ನಿಮ್ಮ ಮುಂದೆ ಇಡುತ್ತಲೇ ಬಂದಿದ್ದೇವೆ. ಇನ್ನೂ ನಮ್ಮನ್ನ ಯಾವ ಪಂಥಕ್ಕೆ ಸೇರಿಸಬೇಕು ಅನ್ನುವುದು ನಿಮಗೇ ಬಿಟ್ಟದ್ದು.ಇದ್ದಿದ್ದು ಇದ್ದ ಹಾಗೇ ಹೇಳಿದ್ದರಿಂದಾಗಿಯೇ, ಕೆಲವು ಜನರ ಪಾಲಿಗೆ ನಾವು ಅಸ್ಪೃಷ್ಯರು ಆಗಿದ್ದೇವೆ, ಹಾಗೆಯೇ ಹಲವು ಜನರ ಸ್ನೇಹವು ನಮಗೆ ಸಿಕ್ಕಿದೆ. ಆ ಮಟ್ಟಿಗಿನ ತೃಪ್ತಿಯು ನಮಗಿದೆ. ಕೆಲವು ಬ್ಲಾಗುಗಳು ನಾವು ಅವರ ಬಗ್ಗೆ ಪ್ರೀತಿಯಿಂದ ಮಾತಾಡಿದ್ದನ್ನು ಪ್ರಕಟಿಸಿದರು. ನೇತ್ಯಾತ್ಮಕ ಅಂಶಗಳನ್ನು ಹೇಳಿದಾಗ ಮನಿಸಿಕೊಂಡಿದ್ದು ಉಂಟು. ಅದು ಅವವರ ಭಕುತಿಗೆ ಬಿಟ್ಟ ವಿಷಯ.ಇನ್ನು, ಇದುವರೆಗೂ ನಿಲುಮೆ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಅನ್ನುವುದು ಬಹಳಷ್ಟು ಜನರಿಗೆ ಗೊತ್ತಿರಬಹುದು, ಗೊತ್ತಿಲ್ಲದೆಯೂ ಇರಬಹುದು.ಯಾವುದೇ ಹಿಡನ್ ಅಜೆಂಡವನ್ನೇನು ಇಟ್ಟುಕೊಂಡು ಮುಖ ಮುಚ್ಚಿಕುಳಿತಿರುವವರು ನಾವಲ್ಲ. ಅಷ್ಟಕ್ಕೂ ನಿಲುಮೆ ನಡೆಯುತ್ತಿರುವುದು ಕೇವಲ ನಮ್ಮಿಂದ ಅಲ್ಲ,ಅದಕ್ಕೆ ಕಾರಣ ನಾವು ಮೊದಲೇ ಹೇಳಿದಂತೆ ನಮ್ಮ ಲೇಖಕರ ಬಳಗ ಮತ್ತು ಓದುಗ ಮಿತ್ರರು.ಅಡ್ಮಿನ್ ತಂಡವಿಲ್ಲಿ ನಿಮಿತ್ತ ಮಾತ್ರ.
ನಿಲುಮೆ ಮೂರು ವರ್ಷ ಮುಗಿಸಿ ನಾಲ್ಕನೇ ವರ್ಷದ ಶುಭಾರಂಭವನ್ನು ಮಾಡಿದೆ.ಕನ್ನಡ ಯುವ ಸಮುದಾಯದ ವೈಚಾರಿಕ, ಸಾಹಿತ್ಯಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಚಾರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ವೇದಿಕೆಯ ರೂಪದಲ್ಲಿ ನಿಲುಮೆ ನಿಮ್ಮ ಮುಂದಿದೆ.ನಾಡಿನ ಅನೇಕ ಮಹತ್ವದ ವಿಷಯಗಳನ್ನು ಚರ್ಚಿಸುವಲ್ಲಿ, ಚಿಂತನೆಗಳನ್ನು ರೂಪಿಸುವಲ್ಲಿ ಇನ್ನೂ ಸಕ್ರಿಯವಾಗಿ ಪಾಲ್ಗೊಳ್ಳುವ ಆ ಮೂಲಕ ಸಮಾಜದ ಧನಾತ್ಮಕ ಮೌಲ್ಯಗಳನ್ನು ವೃದ್ಧಿಸುವಲ್ಲಿ ತನ್ನದೇ ಕೊಡುಗೆಗಳನ್ನು ನೀಡುವ ಮತ್ತು ಯಾವುದೇ ಪಂಥ,ವಾದ,ವಿಚಾರಗಳಿಗೆ ಅಂಟಿಕೊಳ್ಳದೇ ಎಲ್ಲ ನಿಲುವಿನ ವಿಚಾರಗಳಿಗೂ ಸಮಾನ ಪ್ರಾತಿನಿಧ್ಯ ನೀಡುತ್ತೇವೆ ಅನ್ನುವುದು ಓದುಗ ದೊರೆಗಳಿಗೆ ನಿಲುಮೆಯ ವಾಗ್ಧಾನ.
ನಿಲುಮೆಗೆ ನಾಡಿನ ಹಿರಿಯರು, ಗಣ್ಯರು ತಮ್ಮ ಸಲಹೆ, ಸಹಕಾರಗಳನ್ನು ನೀಡುತ್ತಾ ಬಂದಿದ್ದಾರೆ. ಅಷ್ಟರಮಟ್ಟಿಗೆ ನಿಲುಮೆಯು ಬೆಳೆದುನಿಂತಿದೆ. ಆದರೆ ತಲುಪಬೇಕಾದ ಗಮ್ಯವು ಇನ್ನೂ ಬಹಳ ದೂರದಲ್ಲಿದೆ.
ಇದೆಲ್ಲ ಹೇಳಿದ ಮೇಲೆ ನಿಮ್ಮ ಬಗ್ಗೆ ಹೇಳದಿದ್ದರೆ ಅದು ಅಪೂರ್ಣ. ನೀವು ನಮ್ಮ ಬೆನ್ನಿಗೆ ನಿಂತವರು. ನಿಮ್ಮಗಳ ಪ್ರೋತ್ಸಾಹ ನಿಲುಮೆಯನ್ನು ಈ ಮಟ್ಟಕ್ಕೆ ಬೆಳೆಸಿದೆ. ಹಿರಿಯರ ಮಾರ್ಗದರ್ಶನ,ಕಿರಿಯರ ಪ್ರೀತಿ ಎರಡು ನಿಲುಮೆಯನ್ನು ಸಾಕಷ್ಟು ಪ್ರೋತ್ಸಾಹಿಸಿವೆ. ಅದಕ್ಕೆ ನಿಲುಮೆ ನಿಮಗೆ ಚಿರರುಣಿ. ಹಾಗೆ ಮತ್ತೊಮ್ಮೆ ನಿಮ್ಮನ್ನು ನಿಲುಮೆ ಭಿನ್ನವಿಸುವುದು ಏನೆಂದರೆ ಹೇಗೆ ನಿಲುಮೆಯನ್ನು ಇನ್ನಷ್ಟು ಜನರಿಗೆ ತಲುಪಿಸಬಹುದು ಎಂಬ ನಿಮ್ಮ ಅಭಿಪ್ರಾಯಕ್ಕಾಗಿ. ಇದರಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಏನು ಎಂಬ ಪ್ರೀತಿಯ ಒತ್ತಾಯಕ್ಕಾಗಿ. ನಿಮ್ಮಗಳ ಪ್ರೀತಿಯೇ ನಿಲುಮೆಯ ಹರುಷ.ನಿಲುಮೆಯ ಸಂಕ್ರಮಣದ ಸಂಭ್ರಮದಲ್ಲಿ ನೀವೂ ಪಾಲ್ಗೊಳ್ಳಿ. ನಿಲುಮೆಯ ಬಗ್ಗೆ ನಿಮ್ಮ ಅನಿಸಿಕೆ, ಅಭಿಪ್ರಾಯ, ಟೀಕೆ ಟಿಪ್ಪಣಿಗಳನ್ನು(baraha@nilume.netಗೆ) ಕಳಿಸಿಕೊಡಿ. ಸಹ್ಯ ಭಾಷೆಯಲ್ಲಿರುವ ಟೀಕೆ-ಟಿಪ್ಪಣಿಗಳನ್ನೂ, ಪ್ರೀತಿಯ ಮಾತುಗಳನ್ನೂ ಎಲ್ಲವನ್ನು ನಾವು ಇಲ್ಲೇ ಪ್ರಕಟಿಸುತ್ತೇವೆ.
ನಿಮ್ಮೊಲುಮೆಯ,
ನಿಲುಮೆ
ವಿಡಂಬನೆ:ಕಟ್ಟುವೆವು ಕಸದ ನಾಡೊಂದನು!
– ತುರುವೇಕೆರೆ ಪ್ರಸಾದ್
ಮೊನ್ನೆ ಮೊನ್ನೆ ನಿಧಾನಸೌಧದದಲ್ಲಿ ಮಂತ್ರಿಗಳೊಬ್ಬರು ತಮ್ಮ ಕಛೇರಿಯ ಗೋಡೆ ಒಡೆದ ಹಿನ್ನಲೆಯಲ್ಲಿ ಹಲವರು ಮತ್ಸದ್ದಿಗಳ ತರ್ಕ-ಕುತರ್ಕಗಳ ಸಾರಾಂಶ ಇಲ್ಲಿದೆ:
ಅನುಮಾನುಲು : ನಿಧಾನ ಸೌಧದ ಗೋಡೆ ಒಡೆದಿದ್ರಲ್ಲಿ ತಪ್ಪೇನೂ ಇಲ್ಲ. ನಾವು ಏನಾದ್ರೂ ಒಡುದ್ರೆ ದೊಡ್ಡ ಇಶ್ಯೂ ಮಾಡ್ತೀರಿ.ಆದ್ರೆ ನೀವು ದೊಡ್ ದೊಡ್ಡೋರು ಎಲ್ಲಾ ಉರುಳುಸ್ತಿದ್ರೂ ಕೇಳೋರೇ ಇಲ್ಲ..ಈಗ ಗೋಡೆ ಒಡೆದಿದ್ರಿಂತ ಏನು ಆಕಾಶ ತಲೆ ಮೇಲೆ ಬಿದ್ದಿದೆಯಾ?ಡಿಶ್ಕುಂ ಕುಮಾರ್ ನನ್ ರೂಂ ಮೇಲೆ ಕಣ್ ಹಾಕಿದ್ರು. ಅವರು ಗೋಡೆ ಒಡೀದೆ ಬಿಡ್ತಿದ್ರಾ? ಶತಶತಮಾನಗಳಿಂದ ಕಟ್ಟಿರೋ ಜಾತಿ, ಮತ,ಪಂಥಗಳ ಗೋಡೆಯನ್ನು ಒಡೀರಿ, ಎಲ್ಲಾ ಈಚೆ ಬನ್ನಿ ಅಂತ ನಮ್ ಸಾಹಿತಿಗಳು ಹೇಳ್ತಾನೇ ಇರಲ್ವಾ? ನಾಲ್ಕು ಗೋಡೆ ಶಿಕ್ಷಣ ಅಂತ ಹೀಗಳೆಯಲ್ಲವಾ? ಏನೇ ಸುಧಾರಣೆ ಆದ್ರೂ ಮೊದ್ಲು ನಿಧಾನಸೌಧದಿಂದ ಆಗ್ಬೇಕು ಅಂತ ಹೇಳಲ್ವಾ? ಗೋಡೆ ಒಡೆಯೋದನ್ನೂ ಅಲ್ಲಿಂದಲೇ ಶುರು ಮಾಡಿದೀವಿ..ಇದೂ ಒಂದು ಆದರ್ಶ ಅಂತ ನಿಮಗ್ಯಾಕನಿಸಲ್ಲ..?
ಉದಾರತೆಗೊಂದು ಉದಾಹರಣೆ
– ಮಧು ಚಂದ್ರ ಎಚ್.ಬಿ , ಭದ್ರಾವತಿ
ವ್ಯಾಪಾರಿ ಮನೋಭಾವ ಇಂದಿನ ನಮ್ಮ ನಿಮ್ಮೆಲ್ಲರಲ್ಲಿ ಕಂಡುಬರುವ ಅತಿ ಪ್ರಮುಖ ಅಂಶ. ಏನಾದರೂ ಮಾಡಿ ಅವರಿಂದ ಅಥವಾ ಅದರಿಂದ ಹೆಚ್ಚು ಲಾಭ ಪಡೆಯಬೇಕು ಎನ್ನುವ ಮನೋಭಾವ ಇಂದು ಮನುಷ್ಯನ ವ್ಯಕ್ತಿತ್ವವನ್ನೇ ಮಾರಿ ಕೊಳ್ಳುವ ಹಾಗೆ ಮಾಡಿದೆ. ಇದರಿಂದ ಯೋಗ್ಯವಾದುದು ಸಹ ಅಯೋಗ್ಯವೆನಿಸಿಕೊಳ್ಳುತ್ತಿದೆ. ಹತ್ತಿಪ್ಪತ್ತು ವರ್ಷಗಳಿಂದ ಇಚೆ ಮಣ್ಣು, ನೀರು, ಗಾಳಿ ಮಾರಿ ಹಣ ಮಾಡಿಕೊಳ್ಳುವ ದಂಧೆ ಆರಂಭವಾಗಿ ಈಗ ವಿಷಮ ಪರಿಸ್ಥಿತಿಯಲ್ಲಿದೆ.ಇವೆಲ್ಲವೂ ಪ್ರಕೃತಿಯಲ್ಲಿ ಸಿಗುವ ಎಲ್ಲರ ಆಜನ್ಮ ಸಿದ್ಧ ಹಕ್ಕುಗಳು ಆದರು ಹಣ ಕೊಟ್ಟು ಪಡೆಯುವ ಪರಿಸ್ಥಿತಿಯೊದಗಿದೆ ನಮಗೆ. ಇದಕ್ಕೆ ಶಿಕ್ಷಣವೂ ಸಹ ಸೇರ್ಪಡೆಯಾಗಿದ್ದು ನಮ್ಮ ದೌರ್ಭಾಗ್ಯವೇ ಸರಿ. ಉತ್ತಮ ಶಿಕ್ಷಣ ಕೊಡುತ್ತೇವೆಂದು ಹೇಳಿ ಹಣ ಸುಲಿಗೆ ಮಾಡುವ ಶಿಕ್ಷಣ ಸಂಸ್ಥೆಗಳು ಅನೇಕ, ಆದರೆ ಅವರು ಕೊಡುವ ಗುಣಮಟ್ಟವು ಸಹ ಅಷ್ಟಕಷ್ಟೇ. ಅನಗತ್ಯವಾಗಿ ನೆರೆಯ ಶಿಕ್ಷಣ ಸಂಸ್ಥೆ ಒಂದು ರೂಪಾಯಿ ಹೆಚ್ಚಿಗೆ ಹಣ ಕೇಳುವುದು ಗೊತ್ತಾದರೆ ಮೊತ್ತೊಂದು ಸಂಸ್ಥೆ ಸಹ ಹೆಚ್ಚಿಗೆ ಹಣ ಕೇಳುತ್ತದೆ. ಕಡೆಗೆ ಉತ್ತಮ ನಾಗರಿಕರನ್ನು ಸೃಷ್ಟಿ ಮಾಡಬೇಕಾದ ಸಂಸ್ಥೆಗಳು ಸೃಷ್ಟಿ ಮಾಡುವುದು ಹೆಚ್ಚು ಹಣ ಕೀಳುವ ವ್ಯಾಪಾರಿ ಮನೋಭಾವದ ವೃತ್ತಿ ಪರರನ್ನೇ ಹೊರತು ಸಜ್ಜನರನ್ನು ಅಲ್ಲ. ಅದ್ದರಿಂದ ಎಲ್ಲರೂ ಉದಾರ ಮನೋಭಾವ ಬೆಳಸಿಕೊಳ್ಳುವ ಅವಶ್ಯಕತೆಯಿದೆ ಇಲ್ಲದಿದ್ದರೆ ಮಾನವ ಜನಾಂಗವೆಲ್ಲಾ ಪರಸ್ಪರ ಕಿತ್ತಾಡುವ ಸಮಯ ಈಗಾಗಲೇ ಬಂದಿದೆ. ಉದಾರ ಮನೋಭಾವಕ್ಕೆ ನಮ್ಮ ಹಿರಿಯರು ಮಾದರಿ ಎನ್ನುವುದಕ್ಕೆ ಒಂದು ನಿದರ್ಶನ ಇಲ್ಲಿದೆ.
ಹಿಂದೆ ಶೇಷಾದ್ರಿ ಅಯ್ಯರ್ ಅವರು ಮೈಸೂರಿನ ದಿವಾನರಾಗಿದ್ದ ಕಾಲ.
ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಒಮ್ಮೆ ಬ್ರಿಟೀಶ್ ರೆಸಿಡೆಂಟ್ ಲಿ ವಾರ್ನೆರ್ ಭೇಟಿ ಕೊಟ್ಟಿದ್ದ. ಅವನು ಅಲ್ಲಿ ನಡೆಯುತ್ತಿದ್ದ ತರಗತಿಗೆ ಭೇಟಿಕೊಟ್ಟು. ಅಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳುತ್ತಿದ್ದ. ಹೀಗೆ ಅಲ್ಲಿದ್ದ ಒಬ್ಬ ಹುಡುಗನನ್ನು ಕುರಿತು
ವಿಧಿ 370 – ಚರ್ಚೆ
– ಪ್ರವೀಣ್ ಪಟವರ್ಧನ್
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.
ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?
ಸಂಸ್ಕಾರ ಮತ್ತು ದಾಟು ಕಾದಂಬರಿಗಳಲ್ಲಿ ಜಾತಿ ಸಮಸ್ಯೆಗಳು
– ಮು ಅ ಶ್ರೀರಂಗ ಬೆಂಗಳೂರು
ಈ ಲೇಖನವನ್ನು ನಾನು ಭೈರಪ್ಪನವರ ಕಾದಂಬರಿಗಳನ್ನು ಕುರಿತ ವಿಮರ್ಶೆಗಳ ಲೇಖನಮಾಲೆ ಮುಗಿದ ನಂತರ ಬರೆಯೋಣವೆಂದುಕೊಂಡಿದ್ದೆ. ಆದರೆ ಆ ಲೇಖನಗಳ ಸರಣಿಯಲ್ಲಿ ಇನ್ನು ಚರ್ಚಿಸಬೇಕಾದ ಕಾದಂಬರಿಗಳು “ಆವರಣ” ಮತ್ತು “ಕವಲು” ಮಾತ್ರ. ಇವುಗಳಲ್ಲಿ ಜಾತಿಯ ಸಮಸ್ಯೆಗಳ ಪ್ರಸ್ತಾಪವಿಲ್ಲದಿರುವುದರಿಂದ ಈಗಲೇ ಬರೆಯುವುದು ಸೂಕ್ತವೆನಿಸಿದೆ.
ಸಂಸ್ಕಾರ ಮತ್ತು ದಾಟು ಕಾದಂಬರಿಗಳನ್ನು ಕುರಿತಂತೆ ನಡೆದ ಚರ್ಚೆಗಳು ಪ್ರಾರಂಭದಲ್ಲಿ ವಿಚಾರಗಳ ವಿನಿಮಯದಂತೆ ಕಂಡರೂ ನಂತರದಲ್ಲಿ ಕವಲು ದಾರಿ ಹಿಡಿದವು. ಇದಕ್ಕೆ ನನಗನಿಸುವಂತೆ ಬಹುಶಃ ಜಾತಿ ಸಮಸ್ಯೆಯನ್ನು ಸಾಹಿತ್ಯವು ಅರಿಯಲು ನಡೆಸುವ ಪ್ರಯತ್ನಕ್ಕೂ ಅದೇ ಸಮಸ್ಯೆಯನ್ನು ಆಧಾರ,ಸಿದ್ಧಾಂತ,ಊಹೆ,ತರ್ಕ ಇತ್ಯಾದಿಗಳ ಮೂಲಕ ಬಿಡಿಸಲು ಪ್ರಯತ್ನಿಸುವ ಮಾನವಿಕ ಶಾಸ್ತ್ರಗಳಿಗೂ ಇರುವ ಮೂಲಭೂತ ವ್ಯತ್ಯಾಸವನ್ನು ಮನಗಾಣಿಸುವುದರಲ್ಲಿ ಆ ಚರ್ಚೆಗಳು ನಡೆಯದೇ ಹೋದದ್ದು. ಇದುವರೆಗೆ ಮಾನವಿಕ ಶಾಸ್ತ್ರಗಳು ತಮ್ಮ ಅಧ್ಯಯನದ ಮೂಲಕ ಕಂಡುಕೊಂಡಿರುವ ನಮ್ಮ ಸಮಾಜದ ಬಗೆಗಿನ ತಿಳುವಳಿಕೆಗಳನ್ನು ಆಧರಿಸಿ ಆ ಚೌಕಟ್ಟಿಗೆ ಈ ಸಾಹಿತ್ಯ ಕೃತಿಗಳು ಹೊಂದುವುದಿಲ್ಲ ಎಂದು ಒಂದೇ ಏಟಿಗೆ ಪಕ್ಕಕ್ಕೆ ಸರಿಸುವುದನ್ನು ಸಾಹಿತ್ಯದ ಒಬ್ಬ ಓದುಗನಾಗಿ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಮೈಸೂರು ಹುಲಿಯ ವಿರುದ್ಧ ಸೆಟೆದು ನಿಂತ ಸಹ್ಯಾದ್ರಿಯ ಹುಲಿ
– ಕ.ವೆಂ.ನಾಗರಾಜ್
ಟಿಪ್ಪು ಸುಲ್ತಾನನ ಪರವಾಗಿ ಮತ್ತು ವಿರುದ್ಧವಾಗಿ ಬರುತ್ತಿರುವ ಲೇಖನಗಳು ಮತ್ತು ಹೇಳಿಕೆಗಳನ್ನು ಗಮನಿಸಿದಾಗ ಹೆಚ್ಚಿನವು ಉತ್ಪ್ರೇಕ್ಷೆಯಿಂದ ಕೂಡಿದುದೆಂದು ಮೇಲ್ನೋಟಕ್ಕೆ ಕಾಣುತ್ತವೆ. ಇದರಲ್ಲಿ ಜಾತಿ, ಧರ್ಮಗಳೂ ಥಳಕು ಹಾಕಿಕೊಂಡು ವಿಷಯವನ್ನು ಜಟಿಲಗೊಳಿಸುತ್ತವೆ. ಟಿಪ್ಪು ಪರಮತ ಸಹಿಷ್ಣುವೋ ಅಲ್ಲವೋ, ಕ್ರೂರಿಯೋ ಅಲ್ಲವೋ ಎಂಬ ಬಗ್ಗೆ ಪ್ರಖರವಾದ ವಾದ, ಪ್ರತಿವಾದಗಳನ್ನು ಕಂಡಿದ್ದೇವೆ. ಟಿಪ್ಪು ಹೆಸರಿನಲ್ಲಿ ಮುಸ್ಲಿಮ್ ವಿಶ್ವವಿದ್ಯಾಲಯದ ಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನ ಇಂತಹ ಚರ್ಚೆಗಳಿಗೆ ಮತ್ತಷ್ಟು ಒತ್ತು ಕೊಟ್ಟಿದೆ. ಇತಿಹಾಸವನ್ನು ಇತಿಹಾಸವಾಗಿಯೇ ಆಧ್ಯಯನ ಮಾಡಬೇಕು, ಅದಕ್ಕೆ ಜಾತ್ಯಾತೀತತೆಯ ಲೇಪ ಕೊಡುವ ಸಲುವಾಗಿ ವಾಸ್ತವತೆಯನ್ನು ಮರೆಮಾಚುವ ಕೆಲಸ ಇತಿಹಾಸಕ್ಕೆ ಮಾಡುವ ಅಪಚಾರವಾಗುತ್ತದೆ ಎಂಬುದನ್ನು ಎಷ್ಟು ಬೇಗ ಮನಗಾಣುತ್ತೇವೋ ಅಷ್ಟೂ ದೇಶಕ್ಕೆ ಒಳ್ಳೆಯದು. ಈಗಾಗಲೇ ಬಹಳಷ್ಟು ಚರ್ಚಿತವಾಗಿರುವ ವಿಷಯಗಳನ್ನು ಪುನಃ ಇಲ್ಲಿ ಪ್ರಸ್ತಾಪಿಸಹೋಗದೆ ಟಿಪ್ಪುವಿನ ಕಾಲದಲ್ಲಿ ಬಂದಿಗಳಾಗಿದ್ದವರ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಪ್ರಸ್ತಾಪಿಸಿ, ಟಿಪ್ಪುವಿನ ವಿರುದ್ಧ ಸೆಟೆದು ನಿಂತಿದ್ದ ಒಬ್ಬ ಧೀರ ಕನ್ನಡಿಗನ ಬಗ್ಗೆ ನನಗೆ ತಿಳಿದಿರುವ ಸಂಗತಿಗಳನ್ನು ಹಂಚಿಕೊಳ್ಳುತ್ತೇನೆ.
ಮೂಲ ವಿಷಯಕ್ಕೆ ಬರುವ ಮುನ್ನ ಮೊದಲೇ ಹೇಳಿದ್ದಂತೆ ಹೈದರ್ ಮತ್ತು ಟಿಪ್ಪೂರ ಕಾಲದಲ್ಲಿ ಬಂದಿಗಳ ಸ್ಥಿತಿಯನ್ನು ತಿಳಿಸುವ ಸಲುವಾಗಿ ಜೇಮ್ಸ್ ಸ್ಕರಿ ಎಂಬ ಬ್ರಿಟಿಷ್ ಕೈದಿಯೊಬ್ಬನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಯೋಣ. ಜೇಮ್ಸ್ ಸ್ಕರಿಯ ತಂದೆ ಒಬ್ಬ ಬ್ರಿಟಿಷ್ ಸೈನಿಕನಾಗಿದ್ದು, ಸ್ಕರಿ ಚಿಕ್ಕಂದಿನಲ್ಲೇ ಗನ್ ಪೌಡರ್ ಸಾಗಾಟದ ಕೆಲಸ ಮಾಡುತ್ತಿದ್ದು ಅದಕ್ಕಾಗಿ ಸಮುದ್ರಯಾನ ಮಾಡಬೇಕಾಗುತ್ತಿತ್ತು. ಹೀಗೆ ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ತನ್ನ ೧೪ನೆಯ ವಯಸ್ಸಿನಲ್ಲೇ ಸೈಂಟ್ ಹೆಲೆನಾ ಎಂಬ ದ್ವೀಪದಲ್ಲಿ ಫ್ರೆಂಚರಿಂದ ಹಡಗಿನಲ್ಲಿದ್ದ ಇತರ ೧೪ ಸಿಬ್ಬಂದಿಗಳೊಂದಿಗೆ ಕ್ರಿ.ಶ. ೧೭೮೦ರಲ್ಲಿ ಬಂಧಿಸಲ್ಪಟ್ಟ. ಈ ೧೫ ಜನರನ್ನು ಫ್ರೆಂಚ್ ಅಡ್ಮಿರಲ್ ಸಫ್ರೆನ್ ಹೈದರಾಲಿಯ ವಶಕ್ಕೆ ಒಪ್ಪಿಸಿದ. ಇವರುಗಳನ್ನು ಮೊದಲು ಬೆಂಗಳೂರಿನ ಜೈಲಿಗೆ, ನಂತರ ಶ್ರೀರಂಗಪಟ್ಟಣದ ಸೆರೆಮನೆಗೆ ಸಾಗಿಸಲಾಯಿತು. ಸೆರೆಯಾದ ಕೂಡಲೇ ಕಾಲುಗಳಿಗೆ ಬಲವಾದ ಕಬ್ಬಿಣದ ಸರಪಳಿಗಳನ್ನು ಹಾಕಿ, ಕೈಗಳಿಗೂ ಕಬ್ಬಿಣದ ಕೋಳಗಳನ್ನು ಹಾಕಿ ಸೆರೆಮನೆ ತಲುಪುವವರಗೆ ಹಲವಾರು ದಿನಗಳ ಕಾಲ ನಡೆಸಿಕೊಂಡೇ ಹೋಗಲಾಗಿತ್ತು. ಟಿಪ್ಪು ಇವರೆಲ್ಲರನ್ನೂ ಬಲವಂತವಾಗಿ ಇಸ್ಲಾಮ್ ಮತಕ್ಕೆ ಮತಾಂತರಿಸಿ, ಜೇಮ್ಸ್ ಸ್ಕರಿಗೆ ಮುಸ್ಲಿಮ್ ಹೆಸರಾದ ಶಂಶೇರ್ ಖಾನ್ ಎಂದು ಹೊಸ ಹೆಸರು ಕೊಟ್ಟು ಬಲವಂತವಾಗಿ ತನ್ನ ಸೇನೆಯಲ್ಲಿ ಕೆಲಸ ಮಾಡಿಸಿದ್ದ.
ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!
– ರಾಕೇಶ್ ಶೆಟ್ಟಿ
ಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!
ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!
ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.
ಆರ್ವೇಲ್ ನ ಕಾದ೦ಬರಿ ’ಎನಿಮಲ್ ಫಾರ್ಮ್’ನೊಳಗೊ೦ದು ಪ್ರಸ್ತುತ ಭಾರತವನ್ನು ಕಾಣುತ್ತ…
– ಗುರುರಾಜ್ ಕೊಡ್ಕಣಿ
ಅದು ಇ೦ಗ್ಲೆ೦ಡಿನ ಒ೦ದು ತೋಟ.ಒ೦ದು ದಿನ ಅಲ್ಲಿನ ಹಿರಿಯ ಹ೦ದಿಯೊ೦ದು ತೋಟದಲ್ಲಿನ ಎಲ್ಲಾ ಪ್ರಾಣಿಗಳನ್ನು ಸೇರಿಸಿ ಗುಪ್ತ ಸಭೆಯೊ೦ದನ್ನು ಆಯೋಜಿಸುತ್ತದೆ.ಪ್ರಾಣಿಗಳ ಮೇಲೆ ಮನುಷ್ಯನ ದೌರ್ಜನ್ಯ, ದಬ್ಬಾಳಿಕೆಗಳನ್ನು ಪರಿಪರಿಯಾಗಿ ವರ್ಣಿಸುತ್ತಾ,ತಮ್ಮ ಮೇಲಿನ ದೌರ್ಜನ್ಯಗಳು ಕೊನೆಗಾಣಬೇಕಾದರೇ ಸ್ವಾತ೦ತ್ರ್ಯವೊ೦ದೇ ದಾರಿ ಎ೦ದು ಸಾರುತ್ತಾ,’ಇ೦ಗ್ಲೆ೦ಡಿನ ಪಶುಗಳು’ ಎ೦ಬ ಕ್ರಾ೦ತಿಗೀತೆಯೊ೦ದನ್ನು ಹಾಡಿ ಪ್ರಾಣಿಗಳನ್ನು ಕ್ರಾ೦ತಿಯತ್ತ ಉತ್ತೇಜಿಸುತ್ತದೆ.ಉತ್ತೇಜಿತ ಪ್ರಾಣಿಗಳು ಒ೦ದು ಅನೀರಿಕ್ಷಿತ ಸ೦ದರ್ಭದಲ್ಲಿ ತೋಟದ ಮಾಲೀಕನ ಮೇಲೆ ತಿರುಗಿ ಬೀಳುವ ಮೂಲಕ,ಅವನನ್ನು ತೋಟದಿ೦ದ ಓಡಿಸಿ ಸ್ವಾತ೦ತ್ರ್ಯವನ್ನು ಪಡೆದುಕೊ೦ಡು ಬಿಡುತ್ತವೆ.ತೋಟದ ಹೆಸರನ್ನು ’ಪ್ರಾಣಿಗಳ ತೋಟ’ ಎ೦ದು ಬದಲಾಯಿಸುವ ಪ್ರಾಣಿಗಳ ನಾಯಕತ್ವವನ್ನು ’ಸ್ನೋಬಾಲ್’ ಮತ್ತು ’ನೆಪೋಲಿಯನ್’ ಎ೦ಬ ಎರಡು ಬುದ್ದಿವ೦ತ ಹ೦ದಿಗಳು ವಹಿಸಿಕೊಳ್ಳುತ್ತವೆ.ಸ್ನೋಬಾಲ್ ಪ್ರಾಣಿಗಳಿಗೆ ಓದು ಬರಹ ಹೇಳಿಕೊಡುವ ಜವಾಬ್ದಾರಿ ವಹಿಸಿಕೊ೦ಡರೇ,ನೆಪೋಲಿಯನ್ ಪಶುತ್ವದ ಮೂಲತತ್ವಗಳನ್ನು ಪ್ರಾಣಿಗಳಿಗೆ ಹೇಳಿಕೊಡಲಾರ೦ಭಿಸುತ್ತದೆ. ’ಎಲ್ಲ ಪ್ರಾಣಿಗಳೂ ಸಮಾನ’ ಎನ್ನುವ ಧ್ಯೇಯವಾಕ್ಯದಡಿ ಈ ಪ್ರಾಣಿ ಸಾಮ್ರಾಜ್ಯ ನಡೆಯುತ್ತಿರುತ್ತದೆ
ಮೊದಮೊದಲು ಎಲ್ಲವೂ ಸರಿಯಿರುತ್ತದಾದರೂ ಕೆಲಕಾಲದ ನ೦ತರ ಪ್ರಾಣಿಗಳ ನಾಯಕತ್ವದ ಗುರುತರ ಜವಾಬ್ದಾರಿ ತಮ್ಮ ಮೇಲಿರುವುದರಿ೦ದ ತಮ್ಮ ಆರೋಗ್ಯಕ್ಕೆ ಮುಖ್ಯವೆ೦ಬ ಕಾರಣಕ್ಕೆ ತೋಟದಲ್ಲಿ ಉತ್ಪತ್ತಿಯಾಗುವ ಹಾಲು ಮತ್ತೀತರ ಪೌಷ್ಠಿಕ ಆಹಾರಗಳನ್ನು ಪ್ರಾಣಿಗಳ ಮುಖ್ಯಸ್ಥರಾದ ಹ೦ದಿಗಳು ತಮಗಾಗಿ ಮಾತ್ರ ಮೀಸಲಿಡಲು ತೀರ್ಮಾನಿಸುತ್ತವೆ.ನಾಯಕರುಗಳಾದ ನೆಪೋಲಿಯನ್ ಮತ್ತು ಸ್ನೋಬಾಲ್ ನಡುವೆ ಭಿನ್ನಾಬಿಪ್ರಾಯದ ಕ೦ದಕವೇರ್ಪಡುತ್ತದೆ.ಪ್ರಾಣಿಗಳ ಏಳಿಗೆಗಾಗಿ ಗಾಳಿಗೋಪುರವೊ೦ದನ್ನು ನಿರ್ಮಿಸಬೇಕೆ೦ಬ ತನ್ನ ಯೋಜನೆಯನ್ನು ಸ್ನೋಬಾಲ್ ವಿವರಿಸಿದಾಗ,ನೆಪೋಲಿಯನ್ ಸ್ನೋಬಾಲ್ ನನ್ನು ತಾನು ಸಾಕಿದ ಗುಪ್ತ ನಾಯಿಗಳ ಸಹಾಯದಿ೦ದ ಬೆದರಿಸಿ, ತೋಟದಿ೦ದ ಓಡಿಸಿ ತೋಟಕ್ಕೆ ತಾನು ಏಕೈಕ ನಾಯಕನಾಗುತ್ತದೆ.







