ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

12
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ

370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6  ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988,  ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.

ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.

ಮತ್ತಷ್ಟು ಓದು »

11
ಡಿಸೆ

ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು

ರಾಕೇಶ್ ಶೆಟ್ಟಿ

AAPಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.

ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.

ಮತ್ತಷ್ಟು ಓದು »

10
ಡಿಸೆ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩

– ಮು.ಅ ಶ್ರೀರಂಗ, ಬೆಂಗಳೂರು

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧ SL Bhairappa Vimarshe - Nilume
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨

ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :

ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು  ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ.  ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು »

9
ಡಿಸೆ

ಕಥೆ: ಸ೦ದರ್ಶನ

– ಗುರುರಾಜ ಕೊಡ್ಕಣಿ,ಯಲ್ಲಾಪುರ

ಇಂಟರ್ ವ್ಯೂಪ್ರಕಾಶ್ ಹೊರಟಿರಾ ಇ೦ಟರ್ವ್ಯೂ ಗೆ ..? ’ಎ೦ದು ಕೇಳಿದರು ಬಾಸ್ ಪ್ರಕಾಶನಿಗೆ,

’ಯಸ್ ಬಾಸ್,ಆನ ದಿ ವೆ’ ಎ೦ದ ಪ್ರಕಾಶ ,ಬೈಕಿನ ಪಕ್ಕೆಗೊ೦ದು ಒದೆಯುತ್ತಾ…

’ಓಕೆ .ಆಲ್ ದಿ ಬೆಸ್ಟ್,ಚೆನ್ನಾಗಿ ಮಾಡಿ,ಮಾಡ್ಲೇ ಬೇಕು ಗೊತ್ತಾಯ್ತಾ..’? ಎ೦ದರು ಬಾಸ್.

’ಡೆಫಿನೆಟ್ಲಿ ಬಾಸ್,ಚಿ೦ತೆನೇ ಬೇಡ ನಮ್ಮ ಪೇಪರಿನ ಬೆಸ್ಟ್ ಇ೦ಟರ್ವ್ಯೂ ಇದಾಗಿರುತ್ತೇ ನೊಡ್ತಿರಿ..’ ಎ೦ದವನೇ ಅಕ್ಸಲರೇಟರ್ ಹೆಚ್ಚಿಸಿ ,ಸೊ೦ಯ್ಯನೇ ಹೊರಟ.

ಇಷ್ಟಕ್ಕೂ ಪ್ರಕಾಶ ಹೊರಟಿರುವುದು ನಗರದ ಭಾರಿ ಉದ್ಯಮಿ ದಿನಕರನ್ ಚಷ್ಮೇರಾ ನ ಪತ್ರಿಕಾ ಸ೦ದರ್ಶನಕ್ಕಾಗಿ.ದಿನಕರನ್ ಚಷ್ಮೇರಾ: ಆ ಹೆಸರೇ ಒ೦ದು ಸ೦ಚಲನ .ಒ೦ದು ಚಿಕ್ಕ ಗೂಡ೦ಗಡಿಯಿ೦ದ ತನ್ನ ಜೀವನ ಆರ೦ಭಿಸಿದ ದಿನಕರನ್ ಇವತ್ತು ಸರಿ ಸುಮಾರು ಐದು ಸಾವಿರ ಕೋಟಿ ರೂಪಾಯಿಗಳ ಮಾಲೀಕ.ಇಡಿ ದೇಶದ ತು೦ಬೆಲ್ಲಾ ಆತನ ಉದ್ದಿಮೆಗಳಿವೆ.ಆತ ಯಾವ ಉದ್ದಿಮೆಗೆ ಕೈ ಹಾಕಿದರೂ ಸೋಲು ಕ೦ಡವನಲ್ಲ.ಜವಳಿ,ಹೊಟೆಲು,ಚಿನ್ನದ ವ್ಯಾಪಾರ,ರಿಯಲ್ ಎಸ್ಟೆಟ್ ಹೀಗೆ ಎಲ್ಲದರಲ್ಲೂ ಆತ ನ೦ಬರ್ ಒನ್ ಆಗಿದ್ದವನು.ಈಗ ತನ್ನ ಕೆಲಸದಿ೦ದ ಸ್ವಯ೦ ನಿವೃತ್ತನಾಗಿದ್ದಾನೆ.ಈಗ ತನ್ನ ಕೆಲಸದಿ೦ದ ಸ್ವಯ೦ ನಿವೃತ್ತನಾಗಿದ್ದಾನೆ. ಅವನ ಉದ್ದಿಮೆಗಳನ್ನೆಲ್ಲಾ ಈಗ ಅವನ ಮಗ ಕುಲಸೇಕರನ್ ನೋಡಿಕೊಳ್ಳುತ್ತಿದ್ದಾನೆ

ಮತ್ತಷ್ಟು ಓದು »

5
ಡಿಸೆ

ದೀಪವೂ ನಿನ್ನದೇ ಗಾಳಿಯೂ ನಿನ್ನದೇ ಆರದಿರಲಿ ಬೆಳಕೂ

– ಮು.ಅ. ಶ್ರೀರಂಗ,ಬೆಂಗಳೂರು

ದೀಪವೂ ನಿನ್ನದೇ ಗಾಳಿಯೂ ನಿನ್ನದೇ ಆರದಿರಲಿ ಬೆಳಕುನಾವುಗಳೆಲ್ಲರೂ “ಭೂತದ ಬಂಗಲೆ”ಯೊಳಗೆ ಬಂಧಿತರಾಗಿರುವಂತಹ ವ್ಯಕ್ತಿಗಳು. ಸೆಕೆಂಡು ಸೆಕೆಂಡುಗಳು ಜಾರಿದಂತೆ “ವರ್ತಮಾನ’ ಕಳೆದು “ಭೂತದ ಉಗ್ರಾಣಕ್ಕೆ “ಸೇರಿಹೋಗುತ್ತದೆ  ಗೋಪಾಲ ಕೃಷ್ಣ ಅಡಿಗರ ಕವಿತೆಯ ಈ ಸಾಲು –. “ವರ್ತಮಾನ ಪತ್ರಿಕೆಯ ತುಂಬಾ ಭೂತದ ಸುದ್ದಿಗಳೇ” — ಆಗಾಗ ನೆನಪಿಗೆ ಬರುತ್ತಿರುತ್ತದೆ. ನಮ್ಮೆಲ್ಲರ ನೆನಪಿನ ಪೆಟ್ಟಿಗೆ ತೆರೆದಿಟ್ಟರೆ ಕೆಲವು ಸಿಹಿ ಹಲವು ಕಹಿ ನೆನಪುಗಳು ಹೊರಕ್ಕೆ ಬರಲು ನಾ ಮುಂದು ತಾ ಮುಂದು ಎಂದು ಪೈಪೋಟಿ ನಡೆಸುತ್ತವೆ. ನನ್ನ ಆ ಪೆಟ್ಟಿಗೆ ತರೆದು ಒಂದಷ್ಟನ್ನು ನಿಮ್ಮ ಜತೆ ಹಂಚಿಕೊಳ್ಳಬೇಕೆಂಬ ಆಸೆಯ ಫಲವೇ ಈ “ನಿನ್ನೆಗೆ ನನ್ನ ಮಾತು”.

ಸುಮಾರು ಮೂವತ್ತು ವರ್ಷಗಳ ಹಿಂದೆ ನಾನು ರಾಮನಗರದಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ಹೇಳಿದ “we  are all misplaced in our life”ಎಂಬ ಮಾತು ನನಗೆ ಆಗಾಗ ನೆನಪಿಗೆ ಬರುತ್ತಿರುತ್ತದೆ. ಇದು ಒಂದು ರೀತಿಯಲ್ಲಿ “ಅತೃಪ್ತಿಯ” ಸಂಕೇತವಾಗಿರಲೂಬಹುದು. ಈ ಅನುಮಾನದ ಪಿಶಾಚಿ ನಮ್ಮನ್ನು ಕಾಡದಿದ್ದರೆ ಆರಾಮವಾಗಿರಬಹುದು. ಅದೇ ಸರಿ ಎಂದು ಅನಿಸುತ್ತದೆ. ಆದರೆ ಆ ಅತೃಪ್ತಿ ನಮ್ಮ ಮುಂದಿನ ಸಾಧನೆಗೆ,ದಾರಿ ದೀಪವಾಗಬೇಕೇ ಹೊರತು ಇತರರ ಅಭಿವೃದ್ದಿಯನ್ನು ಕಂಡು ನಮ್ಮನ್ನು ನಾವೇ ಸುಟ್ಟಿಕೊಳ್ಳುವಂತಹ ಕಿಚ್ಚಾಗಬಾರದು.

ಮತ್ತಷ್ಟು ಓದು »

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »

3
ಡಿಸೆ

6-5=2 ಚಿತ್ರ ವಿಮರ್ಶೆ

-ಡಾ.ಅಶೋಕ್ ಕೆ ಆರ್

6-5=2ಎರಡು ವಾರದ ಮುಂಚೆ 6-5=2 ಎಂಬ ವಿಚಿತ್ರ ಹೆಸರಿನ ಚಿತ್ರದ ಪೋಸ್ಟರನ್ನು ಪತ್ರಿಕೆಗಳಲ್ಲಿ ನೋಡಿ ನಕ್ಕುಬಿಟ್ಟಿದ್ದೆ! ‘ಏನ್ ಕರ್ಮಾರೀ ಏನೇನೋ ಹೆಸರಿಟ್ಟು ಫಿಲ್ಮ್ ತೆಗೀತಾರೆ’ ಎಂದು ನಗಾಡಿದ್ದೆ! ನಾಲ್ಕು ದಿನದ ಹಿಂದೆ ಮತ್ತೆ ಅದೇ ಚಿತ್ರದ ಜಾಹೀರಾತನ್ನು ಪತ್ರಿಕೆಯಲ್ಲಿ ನೋಡಿದಾಗ ಗಮನಿಸಿದೆ, ಸ್ವರ್ಣಲತಾ ಪ್ರೊಡಕ್ಷನ್ಸ್ ಮತ್ತು A video shot by Late Ramesh ಎಂಬೆರಡು ವಾಕ್ಯಗಳನ್ನು ಬಿಟ್ಟರೆ ಜಾಹೀರಾತಿನಲ್ಲಿ ಮತ್ತೇನೂ ಇರಲಿಲ್ಲ! ಅಲಲಾ! ಇದೇನೋ ಹೊಸ ಗಿಮಿಕ್ ಮಾಡ್ತಿದ್ದಾರಲ್ಲ ಈ ಫಿಲಮ್ನೋರು ಎಂಬ ಸಣ್ಣ ಕುತೂಹಲ ಹುಟ್ಟಿತು. ನಿರ್ದೇಶಕರ ಹೆಸರಿಲ್ಲ, ತಂತ್ರಜ್ಞರ ಹೆಸರಿಲ್ಲ, ಕಲಾವಿದರ ಹೆಸರಿಲ್ಲ, ನೈಜ ವೀಡೀಯೋವೊಂದು ದೊರಕಿದ್ದು ಅದನ್ನೇ ಚಿತ್ರಮಂದಿರದಲ್ಲಿ ಪ್ರದರ್ಶಿಸುತ್ತಿದ್ದೇವೆ ಎಂಬ ಸಾಲುಗಳು ಬೇರೆ. ಮ್… ಇವರು ಮಾಡಿರೋ ಗಿಮಿಕ್ಕಿಗಾದರೂ ಚಿತ್ರವನ್ನೊಮ್ಮೆ ನೋಡಬೇಕು ಎಂದು ನಿರ್ಧರಿಸಿದೆ.
ಎರಡು ಘಂಟೆಯ 6-5=2 ಚಿತ್ರ ಪ್ರೀತಿ ಪ್ರೇಮದ ಚಿತ್ರಗಳ ಗುಂಗಿನಲ್ಲಿ ಕಳೆದುಹೋದ ಪ್ರೇಕ್ಷಕರನ್ನು ಖಂಡಿತ ಹೊಡೆದೆಬ್ಬಿಸುತ್ತದೆ! ಬಹುಶಃ ಉಪೇಂದ್ರ ನಿರ್ದೇಶನದ ಶ್ ಚಿತ್ರದ ನಂತರ ಕನ್ನಡದಲ್ಲಿ ಬಂದ ಪರಿಣಾಮಕಾರಿ ‘ದೆವ್ವದ’ ಚಿತ್ರ ಎಂದರೆ ತಪ್ಪಲ್ಲ. ಕೊನೇಪಕ್ಷ ಶ್  ಸಿನಿಮಾದಲ್ಲೂ ಪ್ರೀತಿ ಪ್ರೇಮ ಕಾಮ ಹಾಡು ಫೈಟುಗಳಿದ್ದವು. ಈ ಚಿತ್ರದಲ್ಲಿ ಅದೂ ಇಲ್ಲ. ಆರು ಮಂದಿ ಟ್ರೆಕ್ಕಿಂಗಿಗೆಂದು ಹೋಗುತ್ತಾರೆ, ಕಾಡಿನ ಪರಿಸರ ಗಮನಿಸಿದರೆ ಗುಂಡ್ಯ, ಬಿಸಿಲೆ, ಕುಮಾರಪರ್ವತವಿರಬೇಕು. ಆ ಆರು ಜನರಲ್ಲಿ ಒಬ್ಬ ಸಿನಿಮಾದಲ್ಲಿ ಕ್ಯಾಮೆರಾಮೆನ್ ಆಗಬೇಕೆಂಬ ಕನಸನ್ನೊತ್ತವನು. ತನ್ನ ಗುರುವಿನಿಂದ ಒಂದು ಕ್ಯಾಮೆರಾ ತರುತ್ತಾನೆ ಟ್ರೆಕ್ಕಿಂಗಿನ ಪ್ರತಿ ಘಟ್ಟವನ್ನು ಚಿತ್ರಿಸಬೇಕೆಂಬ ಆಸೆಯೊಂದಿಗೆ. ಇಡೀ ಚಿತ್ರ ಆ ಕ್ಯಾಮೆರಾದಲ್ಲಿ ಚಿತ್ರಿತವಾದ ‘ನೈಜ’ ದೃಶ್ಯಗಳಷ್ಟೇ! ಟ್ರೆಕ್ಕಿಂಗಿನ ಸಮಯದಲ್ಲಿ ನಡೆದ ತಮಾಷೆ ಸಿಟ್ಟು ಸೆಡವು ದುರ್ಘಟನೆಗಳು ಅಲ್ಲಿನ ರಮ್ಯ ಪರಿಸರವೆಲ್ಲ ಲೇಟ್ ರಮೇಶನ ಕ್ಯಾಮೆರಾದಲ್ಲಿ ಹಸಿಹಸಿಯಾಗಿ ಬಂಧಿಯಾಗಿದೆ. ಚಾರಣಕ್ಕೆಂದು ಬಂದವರ ಮೇಲೆ ಆ ಪರಿಸರದಲ್ಲಿನ ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡುತ್ತವೆ. ಬದುಕುವರ್ಯಾರು, ಸಾಯುವವರ್ಯಾರು, ಕಾಣೆಯಾಗುವವರ್ಯಾರು ಎಂಬುದೇ ಚಿತ್ರದ ಹೂರಣ. ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡಲು ಕಾರಣವೇನು ಎಂಬುದರ ವಿವರವಿಲ್ಲ, ಮನದಲ್ಲಿ ಮೂಡುವ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡುವ ಯಾವ ವಿವರಗಳೂ ಚಿತ್ರದಲ್ಲಿಲ್ಲ! ಯಾಕೆಂದರೆ ಸ್ವರ್ಣಲತಾ ಪ್ರೊಡಕ್ಷನ್ನಿನ ಜಾಹೀರಾತು ತಿಳಿಸುವಂತೆ ಇದು ಚಲನಚಿತ್ರವಲ್ಲ! ನೈಜ ವಿಡಿಯೋ ಅಷ್ಟೇ!!
2
ಡಿಸೆ

ಇಷ್ಟಕ್ಕೂ ,ಚುನಾವಣೆಯೆನ್ನುವುದೂ ಕ್ರಿಕೆಟ್ ಆಟದ೦ತಲ್ಲ ಎನ್ನುವುದು ನೆನಪಿರಲಿ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Voteಇನ್ನೇನು ಕೆಲವೇ ತಿ೦ಗಳುಗಳಲ್ಲಿ ರಾಜಕೀಯದ ಇನ್ನೊ೦ದು ಅ೦ಕಕ್ಕೆ ತೆರೆಬೀಳಲಿದೆ.ಚುನಾವಣೆಯೆ೦ಬ ಮತ್ತೊ೦ದು ಮಹಾಪರ್ವಕ್ಕೆ ದೇಶ ಸಜ್ಜಾಗುತ್ತಿದೆ.ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರಕ್ಕೆ ರಣತ೦ತ್ರಗಳನ್ನು ರೂಪಿಸಿವೆ,ಪ್ರಚಾರ ಆರ೦ಭಿಸಿವೆ.ಈ ಬಾರಿ ದೇಶದ ಜನತೆಯೂ ಅಷ್ಟೇ ಉತ್ಸಾಹದಿ೦ದ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ.ಸಾಮಾಜಿಕ ತಾಣಗಳಲ್ಲಿ ನೆಚ್ಚಿನ ನಾಯಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿವೆ,ವಾಗ್ವಾದಗಳಾಗುತ್ತಿವೆ.ದಿನ ಪತ್ರಿಕೆಗಳಲ್ಲಿ ಪು೦ಖಾನುಪು೦ಖವಾಗಿ ಪ್ರತಿಯೊ೦ದು ರಾಜಕೀಯ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪರ ವಿರೋಧ ಲೇಖನಗಳು ಪ್ರಕಟವಾಗುತ್ತಿವೆ.ಇರಲಿ,ದೇಶದ ಮಹಾನಾಯಕನ ಆಯ್ಕೆಗಾಗಿ ನಡೆಯುವ ಚುನಾವಣೆಯೆ೦ದ ಮೇಲೆ ಈ ಬಿಸಿ,ಈ ರೋಚಕತೆ ಇರಬೇಕಾದದ್ದೇ. ಮತದಾನವೆನ್ನುವುದು ಪ್ರಜೆಗಳ ವೈಯಕ್ತಿಕ ವಿಷಯವೆ೦ಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.ಗೋಪ್ಯತೆ ಕಾಪಾಡಿಕೊಳ್ಳುವ೦ತಹ ಮಹತ್ವದ ವಿಚಾರವೂ ಹೌದು.ಸುಮ್ಮನೆ ಮತದಾನದ ಗೌಪತ್ಯೆಯನ್ನು ಪಕ್ಕಕ್ಕಿಟ್ಟು ನಿಮ್ಮ ಸುತ್ತಮುತ್ತಲಿನವರನ್ನು ’ಈ ಬಾರಿ ಯಾರಿಗೆ ಮತದಾನ ಮಾಡಲಿದ್ದೀರಿ ಮತ್ತು ಆ ಪಕ್ಷ ಅಥವಾ ವ್ಯಕ್ತಿಗೆ ಮತ ಹಾಕಲು ಕಾರಣಗಳೇನು..’? ಎ೦ದು ಕೇಳಿ ನೋಡಿ.ನಿಮಗೆ ತರಹೇವಾರಿ ಉತ್ತರಗಳು ಸಿಗಬಹುದು.

ಮತ್ತಷ್ಟು ಓದು »

1
ಡಿಸೆ

‘ಹಾಚಿ’ !

– ಪ್ರಶಾಂತ್ ಯಾಳವಾರಮಠ

ಆ ದೇವರು ಪ್ರೀತಿ ವಿಶ್ವಾಸವನ್ನು ಎಲ್ಲಿ.. ಹೇಗೆ.. ಯಾಕೆ..ಸೃಷ್ಟಿಸುತ್ತಾನೋ.. ಅದು ಅವನಿಗೇ ಗೊತ್ತು!

ಪ್ರೊಫೆಸರ್ ಹೈದೆಸಬುರೋ ಯುನೋ ತಮ್ಮ ದೈನಂದಿನ ಕೆಲಸವಾದ ನೃತ್ಯ ಕಲಿಸುವುದನ್ನು ಮುಗಿಸಿ ಎಂದಿನಂತೆ ದಿನಾಲೂ ಬರುವ ಟ್ರೆನಿನಿಂದ ಸಂಜೆ ತಮ್ಮ ಮನೆಯ ಕಡೆಗೆ ಹೊರಟರು. ತಮ್ಮ ಸ್ಟೇಷನ್ ಬಂದಮೇಲೆ ಇಳಿದು ಇನ್ನೇನು ಹೊರಗೆ ಹೋಗಬೇಕೆನ್ನುವಸ್ಟರಲ್ಲಿ ಅವರ ಕಾಲುಗಳ ಹತ್ತಿರ ಒಂದು ಅಚ್ಚರಿ!! ಒಂದು ಮುದ್ದು ಮುದ್ದಾದ ನಾಯಿ ಮರಿ ಅವರ ಕಾಲುಗಳ ಹತ್ತಿರ ಓಡಾಡುತ್ತಿತ್ತು. ತುಂಬಾ ಮುದ್ದಾದ ನಾಯಿ ಮರಿಯ ಮುಗ್ದತೆ ಮತ್ತು ಸೌಂದರ್ಯಕ್ಕೆ ಮನಸೋತ ಪ್ರೊಫೆಸರ್ ಅದನ್ನ ಎತ್ತಿ ಮುದ್ದಾಡಿದರು. ಮುಂದೆ ಅಯ್ಯೋ ಇದು ಇದರ ಮಾಲಿಕನಿಂದ ಕಣ್ ತಪ್ಪಿಸಿಕೊಂಡಿರಬೇಕೆಂದು ಸ್ಟೇಷನ್ನಲ್ಲಿ ಎಲ್ಲರನ್ನು ವಿಚಾರಿಸಿದರು ಕೊನೆಗೆ ಸ್ಟೇಷನ್ ಮಾಸ್ತರ್ ಹತ್ತಿರನು ವಿಚಾರಿಸಿದರು ಯಾವುದೇ ಸುಳಿವು ಸಿಗಲಿಲ್ಲ. ಸ್ಟೇಷನ್ ಮಾಸ್ತರನು ಎಲ್ಲರೂ ಇಲ್ಲಿ ಊಟದ ಡಬ್ಬಿಗಳನ್ನು ಇಡುತ್ತಾರೆ ಅದ್ದರಿಂದ ನಾನು ಇದನ್ನು ಇಲ್ಲಿ ಇರಿಸಿಕೊಳ್ಳಲಿಕ್ಕೆ ಆಗೋದಿಲ್ಲ ಎಂದು ಹೇಳಿ ನೀವು ಬೇಕಾದರೆ ಇವತ್ತು ಇದನ್ನು ಮನೆಗೆ ತೆಗೆದುಕೊಂಡು ಹೋಗಿ ನಾಳೆ ಯಾರಾದರು ಇದರ ಮಾಲಿಕರು ಬರುತ್ತಾರೆನೋ ನೋಡೋಣ ಎಂದನು. ಅಸ್ಟು ಮುದ್ದಾದ ಆ ಮರಿಯೇನ್ನು ಅಲ್ಲಿಯೇ ಎಲ್ಲಾದರು ಬಿಟ್ಟು ಹೋಗಲಿಕ್ಕೆ ಪ್ರೊಫೆಸರ್ ಗೆ ಮನಸ್ಸಾಗಲಿಲ್ಲ. ಮರಿಯನ್ನು ತೆಗೆದುಕೊಂಡು ಮನೆಗೆ ಹೋದರು. ಆದರೆ ಮನೆಯಲ್ಲೊಂದು ತೊಂದರೆ! ಏನೆಂದರೆ ಪ್ರೊಫೆಸರ್ ಪತ್ನಿಗೆ ನಾಯಿಗಳು ಅಂದರೆ ಆಗ್ತಾ ಇರಲಿಲ್ಲ.ಇನ್ನು ಇ ಮರಿಯೇನ್ನು ಅವಳಿಗೆ ತಿಳಿಯದ ಹಾಗೆ ಬಚ್ಚಿಟ್ಟು ನಾಳೆ ಸ್ಟೇಷನ್ ಗೆ ತೆಗೆದುಕೊಂಡು ಹೋಗಿ ಅದರ ಮಾಲಿಕರಿಗೆ ಕೊಟ್ಟರಾಯಿತು ಎಂದು ತಿಳಿದರು. ನಿದಾನವಾಗಿ ಮನೆಯೊಳಗೇ ಹೋಗಿ ಇ ಮುದ್ದಾದ ಮರಿಯೇನ್ನು ಒಂದು ಮುಚ್ಚಳವಿಲ್ಲದ ಕಟ್ಟಿಗೆಯ ಬಾಕ್ಸ್ ನಲ್ಲಿ ಮಲಗಿಸಿದರು. ಆದರೆ ಆ ಮರಿ ಎಸ್ಟೊಂದು ಚೂಟಿಯಾಗಿತ್ತು ಅಂದರೆ ಕಟ್ಟಿಗೆಯ ಬಾಕ್ಸ್ ನಿಂದ ಹೊರಗೆ ಬಂದು ಬಿಡುತಿತ್ತು! ಅದನ್ನು ಮತ್ತೆ ಅದರಲ್ಲೇ ಬಚ್ಚಿಟ್ಟರು… ಅಷ್ಟರಲ್ಲಿ ಅವರ ಪತ್ನಿ ಅವರಲ್ಲಿಗೆ ಬಂದು ಊಟಕ್ಕೆ ಕರೆದಳು.. ಪ್ರೊಫೆಸರ್ ಊಟವಾದ ಮೇಲೆ ಮಲಗಲು ತೆರಳಿದರು. ಆ ನಾಯಿ ಮರಿಯು ರಾತ್ರಿ ಬಾಕ್ಸ್ ನಿಂದ ಹೊರಗೆ ಬಂದು ನೇರವಾಗಿ ಪ್ರೊಫೆಸರ್ ಮಲಗಿರುವ ಕೊನೆಗೆ ಹೋಗಲು ಅದರಬಗ್ಗೆ ಪ್ರೊಫೆಸರ್ ಪತ್ನಿಗೆ ತಿಳಿದು ಹೋಯಿತು. ಸಿಟ್ಟಿನಲ್ಲಿದ್ದ ಪತ್ನಿಗೆ ವಿಷಯ ತಿಳಿಸಿ ನಡೆದದ್ದನ್ನು ಹೇಳಿ ಕೇವಲ ಒಂದು ದಿನ ಅಷ್ಟೇ ಎಂದು ಸಮಜಾಯಿಸಿದರು.

ಮತ್ತಷ್ಟು ಓದು »