ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

2
ಆಕ್ಟೋ

ಶಾಸ್ತ್ರಿಗಳಿಗೊಂದು ಸಲಾಂ ಹೇಳೋಣ ಬನ್ನಿ!

– ರಾಕೇಶ್ ಶೆಟ್ಟಿ

ಶಾಲೆ ಮುಗಿಸಿ ಮನೆಗೆ ಹೊರಟ ಕೆಲ ಮಕ್ಕಳು ದಾರಿಯಲ್ಲಿ ಸಿಕ್ಕ ಮಾವಿನ ತೋಟಕ್ಕೆ ಲಗ್ಗೆಯಿಟ್ಟರು.ಕೆಲ ಹುಡುಗರು ಮರ ಹತ್ತಿ ಮಾವಿನ ಹಣ್ಣು ಕೀಳುತಿದ್ದರೆ, ಒಬ್ಬ ಬಾಲಕ ಮಾತ್ರ ಕೆಳಗೆ ನಿಂತು ನೋಡುತಿದ್ದ.ಮಾಲಿ ಅಲ್ಲಿಗೆ ಬಂದ ಕೂಡಲೇ ಮರ ಹತ್ತಿದ್ದ ಹುಡುಗರು ಕಾಲ್ಕಿತ್ತರೆ, ಆ ಬಾಲಕ ಸಿಕ್ಕಿಬಿದ್ದ.ಮಾಲಿ ಹುಡುಗನಿಗೆ ಬೈದು,ಥಳಿಸಲಾರಂಭಿಸಿದ ಆ ಬಾಲಕ ‘ನನ್ನನ್ನು ಬಿಟ್ಟು ಬಿಡಿ,ನಾನು ಅಪ್ಪ ಇಲ್ಲದ ಹುಡುಗ’ ಎಂದು ಅಂಗಲಾಚಿದ.ಕರಗಿದ ಮಾಲಿ,’ಅಪ್ಪ ಇಲ್ಲದವನು ಇನ್ನು ಮೇಲೆ  ಜವಾಬ್ದಾರಿಯುತವಾಗಿ ಇರುವುದನ್ನು ಕಲಿ’ ಎಂದು ಹೇಳಿ ಬಿಟ್ಟುಬಿಟ್ಟ.ಅಲ್ಲಿಂದ ಇನ್ನೆಂದು ಇಂತ ಕೆಲಸ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿ ಹೊರಟ ಆ ಹುಡುಗನಿಗೆ ಆಗ ೬-೭ ವರ್ಷವಿದ್ದಿರಬೇಕು.ಬಹುಷಃ ಅಂದೇ ಆತ ತನ್ನ ನಡೆ-ನುಡಿ ಆದರ್ಶಪ್ರಾಯವಾಗಿರಬೇಕು ಅಂತ ನಿರ್ಧರಿಸಿಬಿಟ್ಟಿರಬೇಕು.ಅಂದುಕೊಂಡಂತೆ ಮಾಡಿಬಿಟ್ಟನಲ್ಲ ಪುಣ್ಯಾತ್ಮ…!

ಮುಂದೆ ದೇಶದ ಎರಡನೇ ಪ್ರಧಾನಿಯಾಗಿ ತನ್ನ ಸರಳತೆ,ಸಜ್ಜನಿಕೆ,ಪಾರದರ್ಶಕತೆ,ನೈತಿಕತೆಯಿಂದಾಗಿ ಗಮನ ಸೆಳೆದ. ಆಯುಬ್ ಖಾನನ ಪಾಕಿಸ್ತಾನದ ಜುಟ್ಟು ಹಿಡಿದು ಬಗ್ಗಿಸಿದ, ಆ ವಾಮನ ಮೂರ್ತಿಯ ಹೆಸರು ‘ಲಾಲ್ ಬಹಾದ್ದೂರ್ ಶಾಸ್ತ್ರೀಜಿ’.

ಮತ್ತಷ್ಟು ಓದು »

2
ಆಕ್ಟೋ

ಗಾಂಧೀಜಿ ಕೇವಲ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕ್ಕೂ ಸಲ್ಲುವ ಶ್ರೇಷ್ಠ ವ್ಯಕ್ತಿ

ಅಶ್ವಿನ್ ಅಮೀನ್ ಅವರ “ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..” ಲೇಖನ ಪ್ರತಿಕ್ರಿಯೆಯಾಗಿ, “ನರೇಶಕುಮಾರ ಹೆಗಡೆ ದೊಡ್ಮರಿ” ಅವರು ಬರೆದ ಈ ಸುಧೀರ್ಘ ಪ್ರತಿಕ್ರಿಯೆ,ಉಳಿದ ಪ್ರತಿಕ್ರಿಯೆಗಳ ನಡುವೆ ಕಳೆದು ಹೋಗದೆ,ಗಾಂಧೀಜಿಯವರ ಬಗ್ಗೆ ಒಂದಿಷ್ಟು ವಿಷಯ ತಿಳಿದುಕೊಳ್ಳಬಯಸುವವರ ಕಣ್ಣಿಗೂ ಕಾಣಲಿ – ನಿಲುಮೆ

– ನರೇಶಕುಮಾರ ಹೆಗಡೆ ದೊಡ್ಮರಿ

ನಮ್ಮ ಅಭಿಪ್ರಾಯಗಳು ರೂಪುಗೊಳ್ಳುವುದು ಹೇಗೆ?…
1- ಇತರರು ಹೇಳಿದ್ದನ್ನು/ವಿವರಿಸಿದ್ದನ್ನು ಕೇಳುವುದರಿಂದ/ಓದುವುದರಿಂದ.
2- ಘಟನೆಯೊಂದನ್ನು ಕಣ್ಣಾರೆ ನೋಡುವುದರಿಂದ
ಈ ಮೇಲಿನ ಎರಡರಲ್ಲಿ ನಿಮ್ಮ ಅಭಿಪ್ರಾಯ ರೂಪುಗೊಂಡ ಬಗೆ 1ನೇ ಬಗೆಯಿಂದ ಎಂದು ತಿಳಿಯುತ್ತೇನೆ. ಹಾಗೂ ಈ ಎರಡನೇ ಬಗೆಯಿಂದ ಅಭಿಪ್ರಾಯ ರೂಪಿಸಿಕೊಳ್ಳುವಲ್ಲಿ ಮತ್ತೆರಡು ಬಗೆಗಳಿವೆ:
1- ಇತಿಹಾಸದ ಕುರಿತಾಗಿನ ಕೆಲವೇ ಲೇಖನಗಳನ್ನು ಓದುವುದರಿಂದ
2- ಸಂಪೂರ್ಣ ಇತಿಹಾಸವನ್ನು ಕೂಲಂಕುಷವಾಗಿ ಅಭ್ಯಸಿಸುವುದರಿಂದ
ಹಾಗೂ ಈ ಮೇಲಿನ ವಿಧದಲ್ಲಿ ತಾವು ಯಾವ ಬಗೆಯನ್ನು ಅನುಸರಿಸಿದ್ದೀರಿ ಈ ಲೇಖನವನ್ನು ಬರೆಯುವ ಮೊದಲು ಎಂಬುದನ್ನು ನಾನು ಕೇಳಿದರೆ ದಯವಿಟ್ಟು ಅದು ಈ ಲೇಖನದ ಕುರಿತೇ ಹೊರತು ತಮ್ಮ ಕುರಿತಲ್ಲ.

ನಾವು ಕೇವಲ ಓದಿ/ಕೇಳಿ ಪಡೆದ ಜ್ಞಾನದಿಂದ ಈಗಾಗಲೇ ಮಹಾನ್ ಎನಿಸಿರುವ ವ್ಯಕ್ತಿಯೊಬ್ಬನನ್ನು ಆತ ಮಾಡಿದ ಒಳ್ಳೆಯ ಕರ್ಮಗಳನ್ನು ತಿಳಿದು ಹೊಗಳಬಹುದೇ ಹೊರತು , ಆ ಅಲ್ಪಜ್ಞಾನವನ್ನು ಯಾರನ್ನಾದರೂ ತೆಗಳಲು ಬಳಸಿಕೊಳ್ಳಬಾರದೆಂಬುದು ನನ್ನ ಅನಿಸಿಕೆ. ಹಾಗಾಗಿ ನಾನು ಗಾಂಧೀಜಿಯವರ ಪರ ಬರೆಯುತ್ತಿದ್ದೇನೆಯೇ ಹೊರತು ಜಿನ್ನಾರವರ ವಿರುದ್ಧವಲ್ಲ.
ಮತ್ತಷ್ಟು ಓದು »

1
ಆಕ್ಟೋ

ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!

– ತುರುವೇಕೆರೆ ಪ್ರಸಾದ್

RTI       ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು  ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.

       ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ  ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)

ಮತ್ತಷ್ಟು ಓದು »

1
ಆಕ್ಟೋ

ಮೌಲ್ಯ ಕಳೆದುಕೊಳ್ಳುತ್ತಿರುವ ಜೀವನವೂ ಸಡಿಲಗೊಳ್ಳುತ್ತಿರುವ ಸಂಬಂಧಗಳೂ..

– ಗುರುಮೂರ್ತಿ ಚಕ್ಕೋಡಬೈಲು

Kids N Divorceಇತ್ತೀಚಿಗೆ ಪತ್ರಿಕೆಯೊಂದರಲ್ಲಿ ವಿಚಿತ್ರ ವರದಿಯೊಂದು ಪ್ರಕಟಗೊಂಡಿತ್ತು.ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರು ಗಂಡನಿಂದ ವಿಚ್ಛೇಧನ ಪಡೆದು ಬಾಯ್ ಫ್ರೆಂಡ್ ಜೊತೆಗೆ ಲಿವಿಂಗ್ ಟುಗೆದರ್ ರೀತಿಯ ಜೀವನ ನಡೆಸುತ್ತಿದ್ದರು.ಆದರೆ ಇಬ್ಬರೊಂದಿಗೂ ದೈಹಿಕ ಸಂಬಂಧ ಇಟ್ಟುಕೊಂಡಿದ್ದ ಆಕೆ ಈಗ ಗರ್ಭಿಣಿಯಾಗಿದ್ದು ತನಗೆ ಹುಟ್ಟಲಿರುವ ಮಗುವಿನ ಅಪ್ಪನನ್ನು ಗುರುತಿಸುವ ಸಲುವಾಗಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಬಂದ ವಿಚಾರ ಪತ್ರಿಕೆಗಳಿಗೆ ಸುದ್ದಿಯಾಗಿತ್ತು.ಎಲ್ಲೋ ಅಮೆರಿಕಾ,ಇಂಗ್ಲೆಂಡ್ ಗಳಲ್ಲಿ ನಡೆಯುವ ಇಂತಹ ಘಟನೆಗಳ ಬಗ್ಗೆ ಓದಿ ಸುಮ್ಮನಾಗುತ್ತಿದ್ದ ನನಗೆ, ಬೆಂಗಳೂರಿನಲ್ಲೇ ನಡೆದ ಈ ಘಟನೆ ಆಶ್ಚರ್ಯ ಜೊತೆಗೆ ಆತಂಕವನ್ನೂ ಉಂಟುಮಾಡಿತು.ಅನೈತಿಕತೆ,ಸ್ವೇಚ್ಛೆಯನ್ನೇ ಬದುಕನ್ನಾಗಿಸಿಕೊಳ್ಳುವ ಹೊಸ ತಲೆಮಾರಿನ ಪ್ರತಿನಿಧಿಗಳೆಂಬಂತೆ ಕೆಲವರು ಕಾಣತೊಡಗಿದ್ದಾರೆ.ಡೈವೋರ್ಸ್ ಪದವೇ ಅಪರಿಚಿತವಾಗಿದ್ದ ನೆಲದಲ್ಲಿ ಹೊಂದಾಣಿಕೆಯ ಕೊರತೆಯ ಹೆಸರಿನಲ್ಲಿ ಡೈವೋರ್ಸ್ ಪ್ರಕರಣಗಳು ಹೆಚ್ಚತೊಡಗಿವೆ.ದಿನದಿಂದ ದಿನಕ್ಕೆ ಗಂಡು-ಹೆಣ್ಣಿನ ಸಂಬಂಧ,ಜೀವನ ಮೌಲ್ಯಗಳು ಗಟ್ಟಿಯಾಗುವುದರ ಬದಲು ದುರ್ಬಲವಾಗಲು ಕಾರಣವೇನು?? ಅನೈತಿಕ,ಅಕ್ರಮ,ನಿರ್ಲಜ್ಜ ಸಂಬಂಧಗಳೂ ಕೂಡ ಮುಜುಗರವಿಲ್ಲದೆ ಗುರುತಿಸಿಕೊಳ್ಳುವ ಮಟ್ಟಕ್ಕೆ ನಾವು ತಲುಪುತ್ತಿದ್ದೇವೆಯೇ??ಅದಕ್ಕೆ ಪೂರಕವಾದ ಸಮಾಜ ನಮಗರಿವಿಲ್ಲದೆಯೇ ನಿರ್ಮಾಣವಾಗುತ್ತಿದೆಯೇ?? ಇಂತಹ ಅನೇಕ ಪ್ರಶ್ನೆಗಳು ಮನಸ್ಸಿನಲ್ಲಿ ಮೂಡುತ್ತಿವೆ.

ಮತ್ತಷ್ಟು ಓದು »

30
ಸೆಪ್ಟೆಂ

ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’

– ರಾಘವೇಂದ್ರ ಅಡಿಗ ಹೆಚ್.ಎನ್

Chidananda Murthy - Kannada ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.

ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.

ಮತ್ತಷ್ಟು ಓದು »

27
ಸೆಪ್ಟೆಂ

ಭೈರಪ್ಪನವರ ಆತ್ಮಕಥನ ‘ಭಿತ್ತಿ’ ಓದುತ್ತಾ…

– ಪ್ರಶಸ್ತಿ.ಪಿ, ಸಾಗರ

Bhittiಒಂದು ಪುಸ್ತಕ ಇಷ್ಟ ಆಗ್ಬೇಕು ಅಂದ್ರೆ ಆ ಲೇಖಕನ ಪಕ್ಕಾ ಅಭಿಮಾನಿ ಆಗಿರ್ಬೇಕು ಅಂತೇನಿಲ್ಲ. ಲೇಖಕನ ಒಂದು ಪುಸ್ತಕ ಇಷ್ಟ ಆಯ್ತು ಅಂದ್ರೆ ಅವನ ಎಲ್ಲಾ ಪುಸ್ತಕಗಳು ಇಷ್ಟ ಆಗ್ಬೇಕು ಅಂತನೂ ಇಲ್ಲ. ಆ ಲೇಖಕ ಹಾಗೆ ಹೀಗೆ, ಆ ಪಂಥ, ಈ ಪಂಥ ಅಂತೆಲ್ಲಾ ಪೂರ್ವಾಗ್ರಹಗಳನ್ನ ಇಟ್ಕೊಳ್ದೇ ಪುಸ್ತಕವನ್ನು ಎಲ್ಲದರ ತರಹದ ಸುಮ್ನೆ ಒಂದು ಪುಸ್ತಕ ಅನ್ನೋ  ಓದೋ ಪ್ರಯತ್ನ ಮಾಡಿದ್ರೆ ಪುಸ್ತಕ ಓದೋ ಸವಿ ಸವಿಯಬಹುದೇನೋ ಅಂತೊಂದು ಅಭಿಪ್ರಾಯ. ಈ ಪೀಠಿಕೆಗಳನ್ನೆಲ್ಲಾ ಬದಿಗಿಟ್ಟು ಹೇಳೋದಾದ್ರೆ , ಇವತ್ತು ಹೇಳೊಕೆ ಹೊರಟಿರೋ ಬುಕ್ಕು ಇತ್ತೀಚೆಗೆ ಎತ್ಕೊಂಡ ಪುಸ್ತಕ ಭೈರಪ್ಪನವರ ಆತ್ಮಕಥನ ಭಿತ್ತಿ.

ಸಂತೇಶಿವರ ಅನ್ನೋ ಊರಲ್ಲಿ ಹುಟ್ಟೋ ಭೈರಪ್ಪನವರಿಗೆ ಹುಟ್ಟಾ ಕಷ್ಟಗಳು.ಶ್ಯಾನುಭೋಗಿಕೆಯ ಮನೆತನ. ಆದರೆ ಅಪ್ಪ ಪಕ್ಕಾ ಆಲಸಿ, ಜವಾಬ್ದಾರಿಯಿಲ್ಲದವ. ಅಮ್ಮ ಊರೆಲ್ಲಾ ಸುತ್ತಿ ಕಷ್ಟಪಟ್ಟು ಲೆಕ್ಕ ಬರೆಯೋದು. ಊರವರು ವರ್ಷಾಂತ್ಯದಲಿ ತಂದು ಕೊಟ್ಟ ರಾಗಿಯನ್ನ ಮಾರಿ ಅದರ ದುಡ್ಡು ಖರ್ಚಾಗೋವರೆಗೂ ಅರಸೀಕೆರೆಯಲ್ಲಿದ್ದು ಹೋಟೆಲಿನಲ್ಲಿ ತಿನ್ನೋಕೆ ಅಲ್ಲಿ, ಇಲ್ಲಿ ಅಂತ ದುಂದು ಮಾಡಿ ಬರುವಂತಹ ಅಪ್ಪ. ಬುಡದಿಂದ ಪುಸ್ತಕದ ಮಧ್ಯಭಾಗದಲ್ಲಿ ಅಪ್ಪನ ದೇಹಾಂತ್ಯವಾಗೋ ತನಕವೂ ಅಪ್ಪನ ಗೋಳು ಹೀಗೆ ಮುಂದುವರೆಯುತ್ತದೆ. ಅವನ ಗೋಳು ಒಂದಲ್ಲಾ ಎರಡಲ್ಲ. ಪ್ರೈಮರಿಯಿಂದ ಮಾಧ್ಯಮಿಕಕ್ಕೆ ಅಂತ ಬೇರೆ ಕಡೆ ಶಾಲೆಗೆ ಹೋಗಬೇಕಾಗಿರತ್ತೆ. ಖರ್ಚಿಗೆ ಅಂತ ಸಂತೆಗೆ ಹೋಗಿ ಶರಬತ್ತು ಮಾರಿ ೨೫ ರೂಪಾಯಿ ಕೂಡಿಸಿರುತ್ತಾನೆ ಮಗ. ಮಗ ಎಲ್ಲೋ ಹೋದ ಸಂದರ್ಭದಲ್ಲಿ ಆ ಇಪ್ಪತ್ತೈದು ರೂಪಾಯಿ ಲಪಟಾಯಿಸಿ ಅದಕ್ಕೆ ಏನೇನೋ ತರ್ಕದ ಸಮರ್ಥನೆ ಕೊಡ್ತಿರ್ತಾನೆ ಅಪ್ಪ. ಮುಂದೆ ಬೇರೆ ಊರಲ್ಲಿ ಭಿಕ್ಷಾನ್ನ ಮಾಡಿ ಶಾಲೆಗೆ ಹೋಗ್ತಿರುತ್ತಾನೆ ಮಗ.ಅಲ್ಲಿಗೂ ಬಂದ ಅಪ್ಪ ದುಡ್ಡು ಕೇಳುತ್ತಾನೆ. ಇದ್ದರೆ ತಾನೆ ಕೊಡುವುದು ? ಮಗ ಭಿಕ್ಷಾನ್ನಕ್ಕೆ ಹೋಗುತ್ತಿದ್ದ ಬೀದಿ ಬೀದಿಗೆ ಹೋಗಿ ಮಗನಿಗೆ ಇನ್ನೂ ಉಪನಯನವಾಗಿಲ್ಲ, ಯಾರೂ ಭಿಕ್ಷೆ ಕೊಡಬೇಡಿ ಅಂತ ಸಾರಿ, ಇಲ್ಲಸಲ್ಲದ್ದನ್ನೆಲ್ಲಾ ಅಪಪ್ರಚಾರ ಮಾಡಿ ಸಿಗೋ ಹೊತ್ತಿನ ಊಟವನ್ನೂ ದಕ್ಕದಂತೆ ಮಾಡುತ್ತಾನೆ. ಮುಂದೆ ಭೈರಪ್ಪನ ತಾಯಿ ಸತ್ತಾಗ ಅದರ ಕರ್ಮ ಮಾಡೋ ಜವಾಬ್ದಾರಿಯನ್ನೂ ವಹಿಸಿಕೊಳ್ಳದೇ ಎಲ್ಲೋ ತಲೆಮೆರೆಸಿಕೊಳ್ಳುತ್ತಾನೆ ಅಪ್ಪ. ಮಗನೇ ಎಲ್ಲೋ ಸಾಲ ಸೋಲ ಮಾಡಿ , ಊರೂರು ಅಲೆದು ಮನೆಗೆ ನಾಲ್ಕು ಕಾಯಿಯಂತೆ ಪಡೆದು, ಅದನ್ನು ಮಾರಿ ದುಡ್ಡು ಕೂಡಿಸಿ ತಾಯಿಯ ಶ್ರಾದ್ದ ಮಾಡುತ್ತಾನೆ. ಎಲ್ಲೂ ಇಲ್ಲದ ಅಪ್ಪ, ಊಟಕ್ಕೆ ಸರಿಯಾಗಿ ಬಂದು ಊಟಕ್ಕೆ ಕೂತುಬಿಡುತ್ತಾನೆ.ಮುಂದೆಯೂ ಅಲ್ಲಿ ದುಡ್ಡು ಕೊಡು, ಇಲ್ಲಿ ಕೊಡು ಅಂತ ಅವಾಚ್ಯ ಶಬ್ದಗಳಲ್ಲಿ ನಿಂದಿಸುತ್ತಿರುವುದೇ ಆ ಪಾತ್ರದ ಕೆಲಸ.

ಮತ್ತಷ್ಟು ಓದು »

26
ಸೆಪ್ಟೆಂ

ಮಹಿಳೆಯರ ಸಮಸ್ಯೆಗಳು – ಒಂದು ನೋಟ

– ಮು.ಅ ಶ್ರೀರಂಗ, ಬೆಂಗಳೂರು

ವಿಧವೆಯರ ಸಮಸ್ಯೆಗಳುನಮ್ಮ ಬುದ್ಧಿಜೀವಿಗಳು ಸಾಹಿತಿಗಳು ಅದರಲ್ಲೂ ಮುಖ್ಯವಾಗಿ ಸ್ತ್ರೀವಾದಿ ಸ್ತ್ರೀಸಂವೇದನೆ ಎಂಬ ಹೆಸರುಗಳಿಂದ ಪ್ರಸಿದ್ಧರಾಗಿರುವ ಒಂದು ಸಾಕಷ್ಟು ದೊಡ್ಡ ಗುಂಪು ಮಾಡುತ್ತಿರುವ ಒಂದು ಪ್ರಮಾದವೆಂದರೆ,ನಮ್ಮ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂದಿನ ಎಲ್ಲಾ ಸಮಸ್ಯೆಗಳಿಗೆ ಒಬ್ಬ ಊಹಾತ್ಮಕ ಶತ್ರುವನ್ನು ತಂದು ಜನತೆಯ ಮುಂದಿರಿಸಿ,  ಆ ಎಲ್ಲಾ ಸಮಸ್ಯೆಗಳಿಗೂ ಈತನೇ ಕಾರಣ ಎಂದು ದೂಷಿಸುತ್ತಿರುವುದು. ಆ ಊಹಾತ್ಮಕ ಶತ್ರುವೇ “ಮನು”ಮತ್ತು ಆತನ ಹೆಸರಿನಲ್ಲಿದೆ ಎನ್ನಲಾಗುತ್ತಿರುವ “ಮನು ಸಂಹಿತೆ”. ಜತಗೆ ಆತನ ವಂಶಜರಂತೆ ವರ್ತಿಸುತ್ತಿರುವ ಇಂದಿನ ಮೇಲ್ಜಾತಿಗಳು. ಈ ಬುದ್ಧಿಜೀವಿಗಳು ತಮ್ಮ ವಾದಕ್ಕೆ ಪೂರಕವಾಗಿ “ಬ್ರಿಟೀಶ್ ಚರಿತ್ರಕಾರರು”ಬರೆದ “ನಮ್ಮ ಇತಿಹಾಸ”ವನ್ನು ತಮ್ಮ ವಾದಕ್ಕೆ ಸಾಕ್ಷ್ಯ ಎಂಬಂತೆ ತೋರಿಸುತ್ತಿದ್ದಾರೆ.
ಇಂದು ಆಗಾಗ ಚರ್ಚೆಗೆ ವಸ್ತುವಾಗಿರುವ ಎರಡು ವಿಷಯಗಳೆಂದರೆ:-

(೧) ಮಹಿಳೆಯರ  “ಆ ಮೂರುದಿನಗಳ” ಮತ್ತು (೨) “ವಿಧವೆಯರ”ಸಮಸ್ಯೆಗಳು.

ಮತ್ತಷ್ಟು ಓದು »

25
ಸೆಪ್ಟೆಂ

ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ

 – ಗುರುರಾಜ್ ಕೊಡ್ಕಣಿ,ಯಲ್ಲಾಪುರ   

URAಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,

ನಮಸ್ಕಾರಗಳು,

ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.

ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು »

24
ಸೆಪ್ಟೆಂ

ಸೆಕ್ಸ್ ಗುರುವಿನ ಸನ್ನಿಧಿಯಲ್ಲಿ….

– ಚೇತನಾ ತೀರ್ಥಹಳ್ಳಿ

Oshoಓಶೋ!

ಈ ಹೆಸರು ಕಿವಿಗೆ ಬಿದ್ದ ಕ್ಷಣಕ್ಕೆ ನೆನಪಾಗೋದು ಅಮ್ಮನ ಆ ಅವತ್ತಿನ ತಟವಟ. “ಆ ಹಾಳಾದ xyz ತಾನು ಕೆಡೋದಲ್ದೆ ಊರು ಹಾಳು ಮಾಡ್ತಾನೆ. ಆ ಮನುಷ್ಯನ್ನ ನೋಡಿದ್ರೆ ಸ್ವಾಮೀಜಿ ಥರ ಕಾಣ್ತಾನಾ?”
ಅಪ್ಪ ಸಹೋದ್ಯೋಗಿ ಬಳಿಯಿಂದ ಮನೆಯಲ್ಲಿ ತಂದಿಟ್ಟುಕೊಂಡಿದ್ದ ಓಶೋ ಪುಸ್ತಕವನ್ನ ನೋಡೀ ನೋಡೀ ಸಿಡುಕುತ್ತಿದ್ದಳು. ಯಾರಾದ್ರೂ ನೋಡಿದ್ರೆ ಏನು ತಿಳಿದಾರು! ಅನ್ನುವ ಆತಂಕ ಜೊತೆಗೆ. ನಾನು ಕೇಳೀಕೇಳೀ ರೇಜಿಗೆ ಬಿದ್ದು ಕೇಳಿದ್ದೆ, “ಯಾಕೆ?”

ಬಹಳಷ್ಟು ಜನ ಓಶೋ ಬಗ್ಗೆ ತಳೆದಿರುವ ಅಭಿಪ್ರಾಯವನ್ನೆ ನನ್ನ ಮುಗ್ಧ ಅಮ್ಮನೂ ಹೇಳಿದ್ದಳು. ಅದು ಎಂಭತ್ತರ ದಶಕ. ಓಶೋ ಎಂಬ ಮಹಾ ಸಂತನ ಬಗ್ಗೆ ಭಾರತ ಮಾತ್ರವೇನು, ಪಶ್ಚಿಮ ದೇಶಗಳಲ್ಲೂ ಸಾಕಷ್ಟು ಪುಕಾರು ಹಬ್ಬಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಅವಳ ಯೋಚನೆ ತಪ್ಪೇನೂ ಆಗಿರಲಿಲ್ಲ ಅನ್ನಿಸುತ್ತೆ. ಯಾಕಂದರೆ ಅದೇ ಅಮ್ಮ ಆಮೇಲೆ ನನ್ನ ಕಪಾಟಿನಿಂದ ಹಲವು ಓಶೋ ಪುಸ್ತಕಗಳನ್ನ ತೆಗೆದು ಕಣ್ಣಾಡಿಸಿದ್ದಾಳೆ; ಆಗೀಗ ಅದರ ಕೆಲವು ವಿಚಾರಗಳ ಉಲ್ಲೇಖವನ್ನೂ ಮಾಡುವಷ್ಟು ಬದಲಾಗಿದ್ದಾಳೆ.ಅದೇನೇ ಇರಲಿ, ನನಗೆ ಓಶೋ ಮೊದಲ ಬಾರಿ ಪರಿಚಯವಾಗಿದ್ದು ಹೀಗೆ. ಅದೇನು ತಿಕ್ಕಲುತನವೋ! ಅಮ್ಮ ಮಾಡಿದ್ದ ಆರೋಪವೇ ನನ್ನಲ್ಲಿ ಓಶೋ ಬಗ್ಗೆ ಕುತೂಹಲ ಹುಟ್ಟಿಸಿತ್ತು. ಇಷ್ಟೆಲ್ಲ ಬೈಸಿಕೊಳ್ಳುವ ಈ ಮನುಷ್ಯನ ಮಾತನ್ನ ಅಷ್ಟೊಂದು ಜನ ಕೇಳ್ತಾರೆ ಅಂದ್ರೆ ಸುಮ್ಮನೆನಾ? ಅನ್ನುವಂಥ ಕುತೂಹಲವದು. ಮುಂದೊಂದು ದಿನ ’ಶೂನ್ಯ ನಾವೆ’ ಏರಿ ಶುರುವಾದ ನನ್ನ ಓಶೋ ಯಾನ ಈ ಹೊತ್ತಿನವರೆಗೆ ಸೇರಿದೆ.

ಮತ್ತಷ್ಟು ಓದು »

23
ಸೆಪ್ಟೆಂ

ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ

– ಪ್ರಸನ್ನ  ಬೆಂಗಳೂರು

NaModiಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು  ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.

ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.

ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?

ಮತ್ತಷ್ಟು ಓದು »