ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

4
ಜೂನ್

ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?

  ಪ್ರೊ.ರಾಜಾರಾಮ ಹೆಗಡೆ

{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂimages. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}

“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”

ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.

ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು

ಮತ್ತಷ್ಟು ಓದು »

3
ಜೂನ್

ಗಾಂಧಿ ಕ್ಲಾಸು: ಸೃಜನಶೀಲ ಬದುಕಿನ ವಿಭಿನ್ನ ಮುಖಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

Gaandhi Clasu‘ಬದುಕು ನನ್ನನ್ನು ರೂಪಿಸಿತೋ, ನಾನೇ ನನ್ನ ಬದುಕನ್ನು ಹೀಗೆ ರೂಪಿಸಿಕೊಂಡೆನೋ ಆದರೆ ಒಂದಂತೂ ಸತ್ಯ ನನ್ನೀ ಬದುಕು ನನ್ನ ಪ್ರಾರಬ್ಧ ಮತ್ತು ಸವಾಲಿನದು. ನಾನು ಬಾಲ್ಯವನ್ನಾಗಲೀ ಹದಿಹರೆಯದ ದಿನಗಳನ್ನಾಗಲೀ ಉತ್ಕಟವಾಗಿ ಎಲ್ಲರಂತೆ ಅನುಭವಿಸುವುದು ಆಗಲೇ ಇಲ್ಲ. ದುರ್ಬರ ಬದುಕು ಅದಕ್ಕೆ ಆಸ್ಪದ ಮಾಡಿಕೊಡಲೇ ಇಲ್ಲ. ಬಾಲ್ಯದ, ಹದಿಹರೆಯದ ಅನುಭವಗಳಿಗೆ ಅಕ್ಷರ ರೂಪ ಕೊಡುವಾಗ ನನ್ನ ಕಣ್ಣುಗಳು ಒದ್ದೆಯಾಗಿರುವುದೂ ಉಂಟು. ಹಿಂಬಾಲಿಸುತ್ತಲೇ ಇದ್ದ ಆತಂಕ, ಅನಿಶ್ಚಿತತೆಗಳನ್ನು ನಿರಾಸೆಗೊಳಿಸಿ ಬದುಕು ಅರವತ್ತರ ಹೊಸ್ತಿಲ ಬಳಿ ತಂದು ನಿಲ್ಲಿಸಿರುವುದು ಪವಾಡವೇ ಸರಿ.’ ಈ ಸಾಲುಗಳು ಇತ್ತೀಚಿಗೆ ನಾನು ಓದಿದ ‘ಗಾಂಧಿ ಕ್ಲಾಸು’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.

‘ಗಾಂಧಿ ಕ್ಲಾಸು’ ಕನ್ನಡದ ಖ್ಯಾತ ಬರಹಗಾರ ಕುಂವೀ ಎಂದೇ ಹೆಸರಾದ ಕುಂಬಾರ ವೀರಭದ್ರಪ್ಪನವರ ಆತ್ಮಕಥನ. ಕುಂವೀ ನಾನು ಮೆಚ್ಚುವ ಹಾಗೂ ಅತಿಯಾಗಿ ಹಚ್ಚಿಕೊಂಡಿರುವ ಲೇಖಕರಲ್ಲೊಬ್ಬರು. ಅವರ ಆತ್ಮಕಥನ ಪ್ರಕಟವಾಗಿದೆ ಎಂದು ಗೊತ್ತಾದದ್ದೆ ತಡ ಓದಲೇ ಬೇಕೆನ್ನುವ ಉತ್ಕಟ ಆಸೆ ಪುಸ್ತಕವನ್ನು ಹುಡುಕಿಕೊಂಡು ಹೋಗಿ ಖರೀದಿಸಿ0iÉುೀ ಬಿಟ್ಟಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಕುಂ.ವೀರಭದ್ರಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿ 2009ರಲ್ಲಿ ನಿವೃತ್ತರಾಗಿರುವರು. ನೂರಾರು ಕಥೆಗಳನ್ನು ಬರೆದಿರುವ ಇವರು ಕಾದಂಬರಿಗಳು ಮತ್ತು ಜೀವನ ಚರಿತ್ರೆಗಳನ್ನು ಬರೆದು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿರುವರು. ಅವರ ಅನೇಕ ಕಥೆಗಳು ಹಾಗೂ ಕಾದಂಬರಿಗಳು ಸಿನಿಮಾಗಳಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳುವುದರ ಜೊತೆಗೆ ಶ್ರೀಯುತರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳೂ ಸಂಧಿವೆ. ಅದು ಕಥೆ ಇರಲಿ, ಕಾದಂಬರಿಯಾಗಲಿ, ಜೀವನ ಚರಿತ್ರೆ ಇರಲಿ ಪ್ರತಿಯೊಂದರಲ್ಲಿ ಕುಂವೀ ಶೈಲಿ ತನ್ನ ಛಾಪು ಮೂಡಿಸಿ ಓದುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತದೆ. ತಮ್ಮ ಕೃತಿಗಳ ಓದಿಗಾಗಿ ಓದುಗರ ಒಂದು ವಲಯವನ್ನೇ ಸೃಷ್ಟಿಸಿಕೊಂಡಿರುವ ವಿಶಿಷ್ಟ ಬರಹಗಾರ ಕುಂವೀ. ಹಲವು ದಶಕಗಳಿಂದ ಕನ್ನಡದ ಸಾಹಿತ್ಯಾಸಕ್ತರನ್ನು ಕಾಡುತ್ತಲೇ ಬಂದಿರುವ ಈ ಲೇಖಕನ ವೈಯಕ್ತಿಕ ಬದುಕು ಹೇಗಿರಬಹುದೆಂಬ ಕುತೂಹಲ ನನ್ನದಾಗಿತ್ತು. ‘ಗಾಂಧಿ ಕ್ಲಾಸು’ ಆ ಕೃತಿ ಕೈಯಲ್ಲಿ ಹಿಡಿದ ಘಳಿಗೆ ಅದು ಹೇಗೆ ಸಮಯ ಸರಿದು ಹೋಯಿತು ಎಂದು ಅರಿವಿಗೆ ಬರದಂತೆ ಆರು ದಶಕಗಳ ಕುಂವೀ ಬದುಕು ಕಣ್ಣೆದುರು ಅನಾವರಣಗೊಂಡಿತು.

ಮತ್ತಷ್ಟು ಓದು »

30
ಮೇ

ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು

– ಚಕ್ರವರ್ತಿ ಸೂಲಿಬೆಲೆ

NS(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…

ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.

ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!

ಮತ್ತಷ್ಟು ಓದು »

29
ಮೇ

ಈಶ್ವರಪ್ಪ ಅವರ ಎದುರು ನಿಂತು ಗೆದ್ದ ಕೆ.ಬಿ.ಪ್ರಸನ್ನಕುಮಾರ್ ಅವರ ಕುರಿತು

– ಪಿ.ಬಿಂದುಮಾಧವಿ, ಹೈದರಾಬಾದ್

Prasanna Kumar KBನಮ್ಮಲ್ಲಿ ಅನೇಕರು, ಇಂದಿನ ಸರ್ಕಾರ ಸರಿಯಾಗಿಲ್ಲ, ಎಲ್ಲೆಲ್ಲೂ ಭ್ರಷ್ಟಾಚಾರ, ಚುನಾವಣೆಗೆ ನಿಂತ ಯಾವ ಅಭ್ಯರ್ಥಿಯೂ ಪ್ರಾಮಾಣಿಕರಲ್ಲ, ಹಾಗಾಗಿ ನಾವು ಮತ ಏಕೆ ಚಲಾಯಿಸಬೇಕು ಎಂಬ ಜಿಜ್ನಾಸೆಯಲ್ಲೇ ಅನೇಕ ಸಂವತ್ಸರಗಳನ್ನು ಕಳೆಯುತ್ತೇವೆ. ಸರಿಯಾದ ಅಭ್ಯರ್ಥಿಯಿಲ್ಲ ಎಂದಾದರೆ ನಾನೇ ಏಕೆ ಚುನಾವಣೆಗೆ ನಿಲ್ಲಬಾರದು ಎಂದು ಎಷ್ಟು ಮಂದಿ ಧೈರ್ಯ ಮಾಡುತ್ತಾರೆ ಹೇಳಿ? ನಮಗೆ ನಾವೇ ಆ ಪ್ರಶ್ನೆಯನ್ನು ಮಾಡಿಕೊಂಡರೆ, ನಾವು ಕೊಟ್ಟಿಕೊಳ್ಳುವ ಉತ್ತರ, ಅಯ್ಯೋ ಬಿಡು, ನಮಗೆ ರಾಜಕೀಯದಲ್ಲಿ ಹಿಂದಿಲ್ಲ ಮುಂದಿಲ್ಲ, ಅದರ ಗಾಳಿ ಗಂಧದ ಪರಿಚಯವಿಲ್ಲ, ನಾನು ಹೋಗಿ ರಾಜಕೀಯದಲ್ಲಿ ಏಗಲಾರೆ ಎಂದುಕೊಳ್ಳುತ್ತೇವೆ. ಆದರೆ ಈ ರೀತಿ ಯಾವುದೇ ಹಮ್ಮು ಬಿಮ್ಮು ಇಲ್ಲದೇ ರಾಜಕೀಯಕ್ಕೆ ಧುಮುಕಿ, ಪ್ರಾಮಾಣಿಕವಾಗಿ ಜನಸೇವೆ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪ ಅವರ ಎದುರಿಗೆ ನಿಂತು ಗೆದ್ದ ಅಭ್ಯರ್ಥಿ ಕೆ.ಬಿ.ಪ್ರಸನ್ನಕುಮಾರ್.

ಇವರ ತಂದೆ ಕೃಷ್ಣಮೂರ್ತಿ, ತಾಯಿ ಭಾಗೀರಥಿ ಬಾಯಿ ಇಬ್ಬರೂ ವೃತ್ತಿಯಲ್ಲಿ ಅಧ್ಯಾಪಕರಾಗಿದ್ದರು. ಇವರಿಗೆ ಯಾವುದೇ ರೀತಿಯ ರಾಜಕೀಯ ಹಿನ್ನೆಲೆಯಿಲ್ಲ. ಬಂಧು ಬಾಂಧವರಲ್ಲಿ ಯಾರೂ ರಾಜಕೀಯ ರಂಗ ಪ್ರವೇಶ ಮಾಡಿಲ್ಲ. ಆದರೂ ಇವರು ರಾಜಕೀಯಕ್ಕೆ ಧುಮುಕಿದ್ದು ಹೇಗೆ?

ಶಿವಮೊಗ್ಗದ ಹಳೇ ತೀರ್ಥಹಳ್ಳಿ ರಸ್ತೆಯ ವಟಾರವೊಂದರಲ್ಲಿ ವಾಸಿಸುತ್ತಿದ್ದ ಇವರು ಚಿಕ್ಕಂದಿನಲ್ಲೇ ಪಿತೃವಿಯೋಗವನ್ನು ಎದುರಿಸಬೇಕಾಯಿತು. ಕುಟುಂಬಕ್ಕೆ ಆಧಾರವಾಗಲಿ ಎಂದು ಅವರು ಆಗಿನಿಂದಲೇ ಮನೆಮನೆಗೆ ದಿನಪತ್ರಿಕೆ ಹಂಚುವುದು ಇತ್ಯಾದಿ ಕೆಲಸಗಳನ್ನು ಮಾಡತೊಡಗಿದರು. ಇವರ ದೊಡ್ದಮ್ಮ ಶ್ರೀಮತಿ ಮಧುರಾಬಾಯಿ ಇವರಿಗೆ ಸ್ನಾನ ಸಂಧ್ಯಾವಂದನೆಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸಲು ಹೇಳಿದ್ದರು. ಹಾಗಾಗಿ ಮುಂಜಾನೆ ಏಳುವ, ಸ್ನಾನ ಸಂಧ್ಯಾವಂದನೆಗಳನ್ನು ಮಾಡುವ, ದಿನಪತ್ರಿಕೆ ಹಂಚಲು ಸೂರ್ಯೋದಯಕ್ಕೂ ಮುನ್ನವೇ ಏಳುವ ಅಭ್ಯಾಸಗಳನ್ನು ಆಗಿನಿಂದಲೇ ಮೈಗೂಡಿಸಿಕೊಂಡವರು ಪ್ರಸನ್ನಕುಮಾರ್. OTroad ನಲ್ಲಿದ್ದ ಇವರ ಸಮವಯಸ್ಕರೆಲ್ಲಾ ಇವರ ಗೆಳೆಯರೇ. ಆಗಿನಿಂದಲೇ ಯಾವುದೇ ಜಾತಿ ಧರ್ಮದ ಭೇಧವಿಲ್ಲದೇ ಎಲ್ಲಾ ಧರ್ಮ, ಹಾಗೂ ಜಾತಿಯ ಹುಡುಗರೂ ಇವರ ಮಿತ್ರವೃಂದದಲ್ಲಿದ್ದರು. ನಾನೂ ಸಹ ಇವರ ವಟಾರದಲ್ಲೇ ಇದ್ದವಳು. ಬೇಸಿಗೆ ರಜದಲ್ಲಿ ಮಧ್ಯರಾತ್ರಿಯವರೆಗೂ ಐಸ್ ಪೈಸ್ ಆಡುತ್ತಿದ್ದುದು, ನಾನು ಚಿಕ್ಕವಳಾಗಿದ್ದರಿಂದ ನನ್ನನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಪರಿಗಣಿಸುತ್ತಿದ್ದುದು ನನಗೆ ಇಂದಿಗೂ ನಿನ್ನೆ ಮೊನ್ನೆಯ ವಿಷಯದಂತೆ ನೆನಪಿದೆ!

ಮತ್ತಷ್ಟು ಓದು »

26
ಮೇ

ಜಾತಿವ್ಯವಸ್ಥೆ ಇಲ್ಲ ಎಂದರೆ…

-ಡಾ. ಷಣ್ಮುಖ ಮತ್ತು ಡಾ. ಪ್ರವೀಣ

vachana-charcheಜಾತಿಗಳಿವೆ ಜಾತಿವ್ಯವಸ್ಥೆ ಇಲ್ಲ ಎಂದರೆ ಏನು? ಹಾಗಾದರೆ ಈ ಮೇಲು-ಕೀಳು, ತಾರತಮ್ಯ, ಶೋಷಣೆಗಳು ಇಲ್ಲ ಅಂತ ಹೇಳ್ತಾ ಇದೀರಾ?  ಪದೇ ಪದೇ ನಮಗೆ ಇದುವರೆಗೂ ಎದುರಾಗಿರುವ (ಅಂತರ್ಜಾಲದ ಚರ್ಚೆಗಳಲ್ಲಿರಬಹುದು, ಸೆಮಿನಾರ್, ಕಾರ್ಯಾಗಾರಗಳಲ್ಲಿರಬಹುದು) ಕೆಲವೇ ಒಳ್ಳೆಯ ಪ್ರಶ್ನೆಗಳಲ್ಲಿ ಇವೂ ಕೂಡ. ಅವುಗಳ ಸುತ್ತ ಈ ಬರಹ ಚರ್ಚಿಸುವ ಪ್ರಯತ್ನ ಮಾಡುತ್ತದೆ.

ಜಾತಿಗಳಿಲ್ಲ ಎಂದು ವಾದಿಸುತ್ತಿರುವ ಮೂರ್ಖರ ಗುಂಪೊಂದು ಇದೆ ಎಂದು ಹೇಳುತ್ತಾ ಬಂದಿರುವುದನ್ನು ನೀವು ಕೇಳಿರುವ ಸಾಧ್ಯತೆ ಇದೆ. ಆಗ ನಿಮಗೂ ಅನಿಸಿರಬಹುದು -ಇವರೆಂಥ ಮೂರ್ಖರಯ್ಯ.! ಕಣ್ಮುಂದೆ ಕಾಣುವ ಸಂಗತಿಗಳನ್ನು ನಿರಾಕರಿಸುತ್ತಿರುವರಲ್ಲ! ಇದೆಂಥಾ ಸಂಶೋಧನೆ, ಇದರ ಹಿಂದೆ ಯಾವುದೋ ಹುನ್ನಾರ/ ಕುಯುಕ್ತಿ ಇದ್ದಿರಬಹುದು!     ಅಂತಹ ಯಾವುದೇ ಪ್ರಮೇಯಗಳನ್ನು, ಹೇಳಿಕೆಗಳನ್ನು ಮಾಡಿರುವ ಒಂದೇ ಒಂದು ಉದಾಹರಣೆ ಕೂಡ ನಮ್ಮ ಗುಂಪಿನ ಬರಹಗಳಿಂದ ತೆಗೆದು ತೋರಿಸಲು ಸಾಧ್ಯವಿಲ್ಲ. ಹಾಗಿದ್ದರೂ ಈ ರೀತಿಯ ಆರೋಪಗಳು ಎಲ್ಲಿಂದ ಹೊರಟಿತು? ಹಾಗಾದರೆ ಜಾತಿಗಳ ಕುರಿತು ನಮ್ಮ ವಾದವೇನು? ಎಂಬ ಪ್ರಶ್ನೆಗಳು ಏಳುವುದು ಸಹಜ.

ಜಾತಿಯ ಕುರಿತ ನಮ್ಮ ವಾದವನ್ನು ಸರಳವಾಗಿ ಸಾರಾಂಶೀಕರಿಸುವುದಾದರೆ, ಭಾರತದಲ್ಲಿ ವಸಾಹತು ಪೂರ್ವದಿಂದಲೂ ಜಾತಿಗಳಿದ್ದವು, ಈಗಲೂ ಇವೆ.. ಇವುಗಳನ್ನು ಯೂರೋಪಿಯನ್ನರು ತೆಗೆದುಕೊಂಡು ಬಂದರು, ಇಲ್ಲಿ ಸೃಷ್ಟಿ ಮಾಡಿದರು ಎಂಬುದು ಸರಿಯಾದ ವಿವರಣೆಯಲ್ಲ. ಆದರೆ ಭಾರತೀಯ ಸಮಾಜವನ್ನು ನೋಡುವ ಒಂದು ನಿರ್ದಿಷ್ಟ ಚೌಕಟ್ಟನ್ನು ಯೂರೋಪಿಯನ್ನರು ನಿರ್ಮಿಸಿದರು. ಅದುವೇ “ಜಾತಿವ್ಯವಸ್ಥೆ”.

ಹಾಗಾದರೆ,  ವ್ಯವಸ್ಥೆಎಂದರೇನು? ಅವುಗಳ ಲಕ್ಷಣಗಳಾವುವು ?

ಮತ್ತಷ್ಟು ಓದು »

24
ಮೇ

ಅವರು ಉಳಿಸಿದ್ದು ಒಂದೆರಡು ಕೋಟಿ ಮಾತ್ರವಲ್ಲ…

– ಗೋಪಾಲ್ ಕೃಷ್ಣ

Vinod Raiಓಡುವುದರಲ್ಲಿ ಹುಸೇನ್ ಬೋಲ್ಟ್ ತನ್ನ ದಾಖಲೆಯನ್ನು ತಾನೆ ಸರಿಗಟ್ಟುತ್ತಾನೆ. ಭ್ರಷ್ಟಾಚಾರದಲ್ಲಿ ನಮ್ಮ ನೇತಾರರು, ಅಧಿಕಾರಿಗಳು ಬೋಲ್ಟ್ ಗೆ ಅನುರೂಪ. ಆದರೆ ಭ್ರಷ್ಟಾಚಾರ ಪತ್ತೆ ಹಚ್ಚುವುದರಲ್ಲಿ! ಹೌದು, ಇಂತಹದ್ದೊಂದು ದಾಖಲೆಯೂ ಸೃಷ್ಟಿಯಾದಂತಿದೆ. ಅದು ನಮ್ಮ ಮಹಾಲೇಖಪಾಲರಿಂದ. ಎರಡನೆ ತಲೆಮಾರಿನ ತರಂಗಗುಚ್ಛ ಹಂಚಿಕೆಯಲ್ಲಾದದ್ದು 1.76 ಲಕ್ಷ ಕೋಟಿ ಅವ್ಯವಹಾರ. ಇದೇ ಐತಿಹಾಸಿಕ ದಾಖಲೆ ಎನ್ನುತ್ತಿದ್ದರು. ಅದನ್ನೂ ಮೀರಿಸಿದ್ದು 1.86 ಲಕ್ಷ ಕೋಟಿಯ ‘ಕೋಲ್’ಗೇಟ್ ಹಗರಣ. ಎರಡನ್ನೂ ಹೊರಚೆಲ್ಲಿದವರು ಮಹಾಲೇಖಪಾಲರೇ. ಅಂದ ಮೇಲೆ ಅವರದೇ ಹೊಸ ದಾಖಲೆ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿನ ಹಗರಣ, ಎರಡನೆ ತಲೆಮಾರಿನ ತರಂಗಗುಚ್ಛ ಹಗರಣ ಮತ್ತು ಇದೀಗ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಲೋಪಗಳು ಕೇಂದ್ರ ಸರ್ಕಾರವನ್ನು ಬೆತ್ತಲುಗೊಳಿಸಿವೆ. ಭ್ರಷ್ಟಾಚಾರ ವಿರೋಧಿ ಹೋರಾಟವೆನ್ನುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಈ ಒಂದು ಎಳೆಯನ್ನು ಹಿಡಿದುಕೊಂಡು ಖ್ಯಾತಿ, ಪ್ರಖ್ಯಾತಿ, ಕುಖ್ಯಾತಿ ಗಳಿಸುವವರಿಗೇನೂ ಲೆಕ್ಕವಿಲ್ಲ. ಅಂತಹವರುಗಳ ಮಧ್ಯೆಯೇ ಬೆರಳಣಿಕೆಯಷ್ಟು ಜನರು ಮಾತ್ರ ಪ್ರಾಮಾಣಿಕತೆ, ದಿಟ್ಟತನವನ್ನು ತಮ್ಮ ಕಾರ್ಯದಲ್ಲಿ ತೋರಿಸುತ್ತಾರೆ. ಈ ಸಾಲಿನಲ್ಲಿ ಅಗ್ರಗಣ್ಯರೆನ್ನುವಂತೆ ಕಾಣುವವರು ವಿನೋದ್‍ರಾಯ್.

ಮತ್ತಷ್ಟು ಓದು »

23
ಮೇ

ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?

– ಎ.ಕೆ ಕುಕ್ಕಿಲ

govuಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್‍ ನ  ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest –  ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)

ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ  ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ  ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು »

20
ಮೇ

ಎರಡು ರಾಷ್ಟ್ರೀಯ ಪಕ್ಷಗಳ ತುಲನೆ

– ಚಕ್ರವರ್ತಿ ಸೂಲಿಬೆಲೆ

BCಬ್ರಿಟಿಷರ ಕೊನೆಯ ವೈಸ್‌ರಾಯ್ ಮೌಂಟ್ ಬ್ಯಾಟನ್. ಹಾಗಾದರೆ ಭಾರತದ ಮೊದಲ ವೈಸ್‌ರಾಯ್ ಯಾರು ಗೊತ್ತ? ಮತ್ಯಾರು? ಈ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ!
ನೆಹರೂ ಅತ್ಯಂತ ಶ್ರದ್ಧೆಯಿಂದ ಆಂಗ್ಲರ ರಾಜನೀತಿಯನ್ನು ಅರಿತುಕೊಂಡರು. ಅದನ್ನು ಹಂತಹಂತವಾಗಿ ಪ್ರಯೋಗಿಸಲಾರಂಭಿಸಿದರು. ಅಧಿಕಾರ ಕೈಗೆ ದಕ್ಕುವ ಮುನ್ನಿನ ಚುನಾವಣೆಗಳಲ್ಲಿ ತಮ್ಮ ಚಾಕಚಕ್ಯತೆಯನ್ನು, ವಿಭಜಿಸಿ ಗೆಲ್ಲುವ ತಂತ್ರವನ್ನು ಚೆನ್ನಾಗಿಯೇ ಬಳಸಿದರು. ಒಂದೆಡೆ ಮುಸಲ್ಮಾನರನ್ನು ಓಲೈಸಿ ಗೆಲ್ಲುವುದು, ಮತ್ತೊಂದೆಡೆ ಪಟೇಲರನ್ನು ಕಡು ಹಿಂದೂವಾಗಿ ಬಿಂಬಿಸಿ ಹಿಂದೂಗಳ ಮತವನ್ನು ಸೆಳೆದುಕೊಳ್ಳುವ ತಂತ್ರಗಾರಿಕೆ ಯಶಸ್ವಿಯಾಯ್ತು. ನೆಹರೂ ಪಕ್ಕಾ ಇಂಗ್ಲೀಶ್ ಬಾಬುವಾಗಿಬಿಟ್ಟರು. ಆಗಲೇ ಗಾಂಧೀಜಿ ಗಾಬರಿಯಿಂದ ಹೇಳಿದ್ದು, ‘ದೇಶ ವಿಭಜನೆಗೊಂಡು ಸ್ವಾತಂತ್ರ್ಯ ಬಂತು. ಇನ್ನು ಮುಂದೆ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ.’ ಸ್ವತಃ ಗಾಂಧೀಜಿಗೆ ಅಸಹ್ಯವಾಗಿತ್ತು. ತಾನೇ ಮೂಲೆ ಮೂಲೆಗೆ ಕೊಂಡೊಯ್ದ ಕಾಂಗ್ರೆಸ್ಸು ಮುಂದೊಮ್ಮೆ ದೇಶದ ದುರ್ಗತಿಗೆ ಕಾರಣವಾಗುತ್ತದೆಂಬ ಸ್ಪಷ್ಟ ಅರಿವು ಅವರಿಗಿತ್ತು.

ಬಿಜೆಪಿಗೂ ಕಾಂಗ್ರೆಸ್ಸಿಗೂ ಒಂದು ಎದ್ದುಕಾಣುವಂತಹ ಭಿನ್ನತೆ ಇದೆ. ಒಂದು, ಕಾರ್ಯಕರ್ತರಿಂದಲೇ ನಿರ್ಮಾಣಗೊಂಡ, ಕೆಡರ್ ಆಧಾರಿತ ಪಕ್ಷ. ಮತ್ತೊಂದು, ಅಗತ್ಯ ಬಿದ್ದಾಗ ಕಾರ್ಯಕರ್ತರನ್ನು ಕೊಂಡುಕೊಳ್ಳುವ ಪಕ್ಷ. ಇವತ್ತಿಗೂ ನಾನು ಕಾಂಗ್ರೆಸ್ಸಿಗ ಎಂದು ಎದೆ ತಟ್ಟಿ ಹೇಳುವ ಸಾಮಾನ್ಯ ಕಾರ್ಯಕರ್ತರನ್ನು ತೋರಿಸಿ ನೋಡೋಣ. ಅಲ್ಲಿ ಕರುಳ ಸಂಬಂಧಗಳಿಲ್ಲ. ಅದೊಂಥರಾ ನಕಲು ಮಾಡಿಸಿ ನೂರು ಪ್ರತಿಶತ ಅಂಕ ಗಳಿಸುವ ಶಾಲೆಯಿದ್ದಂತೆ. ಆ ಶಾಲೆಯಲ್ಲಿ ಕೆಲಸ ನಡೆಯುವುದೇ ಕೊನೆಯ ಆರು ದಿನಗಳಲ್ಲಿ. ಹೀಗಾಗಿ ಬಂದ ಫಲಿತಾಂಶಕ್ಕೆ ಬೆನ್ನು ತಟ್ಟಿಕೊಳ್ಳುವವರು ಇರುತ್ತಾರೆಯೇ ಹೊರತು, ಆನಂದ ಪಡುವವರಲ್ಲ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟು ಹೊರಬಂದಾಗ ತಾನು ತಾಯಿಯ ಮಡಿಲಿನಿಂದ ಹೊರಗೆ ಬಂದುಬಿಟ್ಟಿದ್ದೇನೆಂದು ಯಾರಿಗೂ ಅನ್ನಿಸೋದೇ ಇಲ್ಲ. ಅಲ್ಲಿ ತಪ್ಪಾದಾಗ ಪ್ರಶ್ನೆ ಯಾರನ್ನು ಕೇಳಬೇಕೆಂದು ಯಾರಿಗೂ ಗೊತ್ತೇಇರುವುದಿಲ್ಲ. ಗೋಹತ್ಯೆ ನಿಷೇಧ ಹಿಂತೆಗೆದುಕೊಂಡಿದ್ದನ್ನು ಕೇಳಿ ಅನೇಕ ಕಾಂಗ್ರೆಸ್ಸಿಗರೇ ಗರಮ್ ಆಗಿದ್ದಾರೆ. ದುರ್ದೈವ, ಈ ದರ್ದನ್ನು ಯಾರೆದುರು ತೋಡಿಕೊಳ್ಳಬೇಕೆಂದು ಗೊತ್ತಿಲ್ಲವಷ್ಟೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದುದಕ್ಕೆ ಖರ್ಗೆಯ ಬಳಗ ಜಿಲ್ಲೆ ಜಿಲ್ಲೆಗಳಲ್ಲಿ ರಾಡಿ ಎಬ್ಬಿಸಿತಲ್ಲ, ಅದಕ್ಕೆಲ್ಲ ಪ್ರಚಾರವೇ ಸಿಗಲಿಲ್ಲ ಏಕೆ? ಬಹಳ ಸಿಂಪಲ್ಲು. ಈ ರೀತಿ ಜೀವ ಕೊಡುವ ಕಾರ್ಯಕರ್ತರು ಅಲ್ಲಿಲ್ಲ; ಖರೀದಿಸಿದವರಿಗಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ ಅಂತರ್ಥ! ಇಷ್ಟು ಮಾತ್ರ ಬಿಜೆಪಿಯೊಳಗೆ ಕಿರಿಕಿರಿಯಾಗಿಬಿಟ್ಟಿದ್ದರೆ ಮಾಧ್ಯಮಗಳಿಗೆ ಹಬ್ಬವಾಗಿಬಿಟ್ಟಿರುತ್ತಿತ್ತು. ಏಕೆ ಗೊತ್ತೇನು? ರಾಯಚೂರಿನಲ್ಲಾಗುವ ಒಂದು ಸಣ್ಣ ಬೆಳವಣಿಗೆಗೂ ಮಡಿಕೇರಿಯ ಕಾರ್ಯಕರ್ತ ನೊಂದುಕೊಳ್ಳುತ್ತಾನೆ. ಅವನ ಹೃದಯ ಕಂಪಿಸುತ್ತದೆ.

ಮತ್ತಷ್ಟು ಓದು »

18
ಮೇ

ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’

– ರಾಕೇಶ್ ಶೆಟ್ಟಿ

Sidduಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.

ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.

“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!

ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!

ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು  ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.

ಮತ್ತಷ್ಟು ಓದು »

17
ಮೇ

ಸಾಮಾಜಿಕ ಸಂಶೋಧನೆ ಯಾಕಾಗಿ?

– ಪ್ರೊ.ಜೆ.ಎಸ್.ಸದಾನಂದ

Vachana Charche{ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ, ಈ ಲೇಖನವನ್ನು ಪ್ರಜಾವಾಣಿಗೆ ಬಹಳ ಹಿಂದೆಯೇ ಕಳುಹಿಸಿದ್ದು ಪ್ರಜಾವಾಣಿಯಲ್ಲಿ ಮಾತ್ರ ಇನ್ನೂ ಪ್ರಕಟಿಸಲಾಗಿಲ್ಲ}

ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ ಕೋಪ, ಅಸಹನೆ ಹಾಗೂ ತಿರಸ್ಕಾರ. ಇದಕ್ಕೆ ಕಾರಣವೇನು? ಅವರನ್ನು ಸ್ವಲ್ಪಮಟ್ಟಿಗೆ ಬಲ್ಲ ನನಗೆ ಅನಿಸುವುದಿಷ್ಟು. ಇಂತಹ ಸಿಟ್ಟು ಅಸಹನೆಗೆ ಮೂಲ ಕಾರಣ ಸಮಾಜದಲ್ಲಿರುವ ಅನ್ಯಾಯ, ಶೋಷಣೆ ಮುಂತಾದ ನಕಾರಾತ್ಮಕ ಅಂಶಗಳನ್ನು ಬುಡಸಮೇತ ಕಿತ್ತೊಗೆಯಬೇಕೆಂಬ ಗುರಿಯ ಬಗ್ಗೆ ಅವರಿಗಿರುವ ಬದ್ಧತೆ ಹಾಗೂ ಅಂತಹ ಅನ್ಯಾಯ, ಶೋಷಣೆಗಳಿಗೆ ಮೂಲ ಕಾರಣ ಯಾವುದು ಎನ್ನುವುದು ಎನ್ನುವುದರ ಕುರಿತು ಅವರಿಗಿರುವ ದೃಢ ನಂಬಿಕೆ. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯದ ಹೊರತು ನಮ್ಮ ಸಮಾಜದ ಅನ್ಯಾಯಗಳನ್ನು ಸರಿಪಡಿಸಲಾಗದು ಎನ್ನುವುದರ ಬಗ್ಗೆ ಅವರಿಗೆ ಯಾವ ಸಂಶಯವೂ ಇಲ್ಲ. ಅವರು ಮುಟ್ಟಬೇಕಾದ ಗುರಿ ಹಾಗೂ ಆ ನಿಟ್ಟಿನಲ್ಲಿ ಅವರು ಸಾಗುತ್ತಿರುವ ಮಾರ್ಗದ ನಡುವೆ ಯಾವ ವ್ಯತ್ಯಾಸವೂ ಅವರಿಗೆ ಕಾಣಿಸುವುದಿಲ್ಲ. ಹಾಗಾಗಿ ಸಾಗುತ್ತಿರುವ ಮಾರ್ಗದ ಕುರಿತು ಎತ್ತಲಾಗುವ ಪ್ರಶ್ನೆಗಳು ಮುಟ್ಟಬೇಕಾದ ಗುರಿಯನ್ನೇ ಪ್ರಶ್ನಾರ್ಹಗೊಳಿಸುವಂತೆ ಅಥವಾ ಅಂತಹ ಗುರಿಗಳಿಂದ ನಮ್ಮನ್ನು ವಿಮುಖಗೊಳಿಸುವ ಹುನ್ನಾರದಂತೆ ಅವರಿಗನಿಸುತ್ತಿದೆ.

ಅವರ ಈ ಅನಿಸಿಕೆ ಎಷ್ಟರಮಟ್ಟಿಗೆ ಸರಿ? ಈ ಪ್ರಶ್ನೆಗೆ ಉತ್ತರಿಸಬೇಕಾದರೆ ಬಾಲುರವರು ಭಾರತದಲ್ಲಿ ಜಾತಿವ್ಯವಸ್ಥೆ ಇಲ್ಲ ಎನ್ನುವ ಪ್ರಾಕ್ಕಲ್ಪನೆಯನ್ನು (ಇದೊಂದು ಸಂಶೋಧನೆಯ ಮುಖಾಂತರ ಸಾಬೀತಾಗಬೇಕಾದ ಪ್ರಾಕ್ಕಲ್ಪನೆ ಮಾತ್ರ) ಏಕೆ ಮುಂದಿಡುತ್ತಾರೆ ಎನ್ನುವುದರ ಹಿನ್ನೆಲೆಯನ್ನು ನಾವು ನೋಡಬೇಕು. ಭಾರತದಲ್ಲಿ ಜಾತಿವ್ಯವಸ್ಥೆಯ ಸ್ವರೂಪ ಹಾಗು ಅದರ ಪರಿಣಾಮಗಳ ಕುರಿತು ಈಗಾಗಲೇ ಅಸಂಖ್ಯಾತ ಸಂಶೋಧನಾ ಗ್ರಂಥಗಳು ಹೊರಬಂದಿವೆ. ಜಾತಿವ್ಯವಸ್ಥೆಯ ಸ್ವರೂಪದ ಬಗ್ಗೆ ವಿದ್ವಾಂಸರಲ್ಲಿ ಒಮ್ಮತದ ಅಭಿಪ್ರಾಯವನ್ನು ನಾವು ಕಾಣುವುದಿಲ್ಲ. ಅದಕ್ಕೆ ತದ್ವಿರುದ್ದವಾಗಿ ಭಾರತದಲ್ಲಿ ಎಲ್ಲಡೆ ಕಂಡುಬರುವ ಜಾತಿಗಳನ್ನು ಒಂದು ಚೌಕಟ್ಟಿನಲ್ಲಿಟ್ಟು ನೋಡಲು ಸಾಧ್ಯವಿಲ್ಲ ಎನ್ನುವುದುನ್ನು ಎಲ್ಲಾ ವಿದ್ವಾಂಸರೂ ಹೆಚ್ಚು ಕಡಿಮೆ ಒಪ್ಪುತ್ತಾರೆ. ಬಾಲು ಅವರ ಪ್ರಕಾರ ಇದ್ಕಕೆ ಮುಖ್ಯ ಕಾರಣ ಈ ಎಲ್ಲಾ ಸಂಶೋಧನೆಗಳು ಜಾತಿವ್ಯವಸ್ಥೆ ಎನ್ನುವುದು ಹಿಂದೂ ರಿಲಿಜನ್ನ ಪ್ರಧಾನ ಲಕ್ಷಣ ಎನ್ನುವ ಇದುವರೆಗೆ ಯಾವುದೇ ಸಂಶೋಧನೆಯಿಂದ ಸಾಬೀತಾಗದ ನಂಬಿಕೆಯನ್ನು ಆಧರಿಸಿವೆ. ಹಿಂದೂ ರಿಲಿಜನ್ ಎನ್ನುವುದು ಅಸ್ತಿತ್ವದಲ್ಲಿ ಇದೆ ಮತ್ತು ಭಾರತದಲ್ಲಿರುವ ಎಲ್ಲಾ ಜಾತಿಗಳು ಅದರ ನ್ಯೆತಿಕ ನಿರ್ಬಂಧದಲ್ಲಿ ಬಂದಿಸಲ್ಪಟ್ಟಿವೆ ಎನ್ನುವುದು ಒಂದು ಸಾಮಾನ್ಯ ನಂಬಿಕೆಯಾಗಿ ಮುಂದುವರೆದುಕೊಂಡು ಬಂದಿದೆಯೇ ಹೊರತು ಅದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳನ್ನು ಯಾರಿಗೂ ಕೊಡಲು ಸಾಧ್ಯವಾಗಿಲ್ಲ.

ಮತ್ತಷ್ಟು ಓದು »