ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

22
ಏಪ್ರಿಲ್

ಇದು ಸತ್ಯಕಥೆ – ಮಾನವ ಕಳ್ಳಸಾಗಣೆಯ ಕರಾಳ ಮುಖದ ದರ್ಶನ !

-ನಿತ್ಯಾನಂದ ವಿವೇಕವಂಶಿ.ಮಂಡ್ಯ

Manava Kalla Saganeಒಂದು ವರ್ಷಗಳ ದೀರ್ಘ ಅವಧಿಯ ನಂತರ ಮತ್ತೆ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಪ್ರವಾಸ ಮಾಡಿದ ಖುಷಿಯೊಂದಿಗೆ ವಾಪಾಸು ಬರಬೇಕಾದರೆ ಮನಸ್ಸಿಗೆ ಹಾಯೆನಿಸಿತ್ತು. ನಾಲ್ಕು ಸಾವಿರ ಕಿಲೋಮೀಟರುಗಳ ದೂರ ಕ್ರಮಿಸಿ ಭೇಟಿಯಾದ ಅರುಣಾಚಲದ ನನ್ನ ಪ್ರಿಯ ವಿದ್ಯಾರ್ಥಿಗಳ ಮಕ್ಕಳ ಮುದ್ದು ಮುಖ, ಬೆಟ್ಟದಿಂದ ಬೀಸುವ ಗಾಳಿ, ತುಂತುರು ಮಳೆ, ಮೋಡ, ಅಸ್ಸಾಮಿನ ಚಹಾ ತೋಟ, ಕಾಡುಗಳು, ಬ್ರಹ್ಮಪುತ್ರ ನದಿಯ ವೈಭವವನ್ನು ನೋಡಿಕೊಂಡು ಬರಬೇಕಾದರೆ, ವಾಪಾಸು ಹೋಗಲೇಬೇಕಾ? ಎನ್ನಿಸುವಂತೆ ಆಗಿತ್ತು.

ಏಪ್ರಿಲ್ ಐದನೇ ತಾರೀಖು ಮದ್ಯಾಹ್ನ ಮೂರು ಘಂಟೆಗೆ ಗುವಾಹಟಿಯಿಂದ ಹೊರಟ ಟ್ರೈನು ಏಪ್ರಿಲ್ 7ರ ರಾತ್ರಿ ಚೆನ್ನೈ ತಲುಪಲಿತ್ತು. ಮೊದಲೇ ಬುಕ್ ಮಾಡಿದ್ದ ನನ್ನ ಸೀಟಿನಲ್ಲಿ ಕುಳಿತೆ. ನನ್ನ ಅಕ್ಕ ಪಕ್ಕದ ಸೀಟುಗಳಲ್ಲಿ ಅದಾಗಲೇ ಪ್ರಯಾಣಿಕರು ಬಂದು ಕುಳಿತಿದ್ದರು. ಎಲ್ಲರೂ ಹೆಚ್ಚು ಕಡಿಮೆ ಒಂದೇ ವಯಸ್ಸಿನ ಅನಕ್ಷರಸ್ಥ ಮುಸ್ಲಿಮ್ ಹುಡುಗರು. ಕೆಲಸ ಮಾಡಲು ಅಸ್ಸಾಮಿನಿಂದ ಚೆನ್ನೈಗೆ ವಲಸೆ ಹೊರಟಿದ್ದರು. ಹಿಂದಿ ಭಾಷೆಯಲ್ಲಿ ನಾನು ಸರಾಗವಾಗಿ ಮಾತಾಡುತ್ತಿದ್ದರಿಂದಲೋ ಅಥವಾ ದಕ್ಷಿಣದವನೆಂಬ ಕಾರಣಕ್ಕೋ, ಬಹುಬೇಗ ಎಲ್ಲರೂ ಪರಿಚಯವಾದರು. ರೈಲು ಅಸ್ಸಾಮ್, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒರಿಸ್ಸಾ, ಆಂಧ್ರ ಪ್ರದೇಶ ರಾಜ್ಯಗಳನ್ನು ದಾಟಿ ತಮಿಳುನಾಡಿನ ಚೆನ್ನೈ ತಲುಪಬೇಕಿತ್ತು. ರೈಲಿನ ಕಿಟಕಿಯ ಬಳಿ ಕುಳಿತು ಆಗಾಗ ಬರುವ ಸ್ಟೇಷನ್‍ಗಳಲ್ಲಿ ರೋಟಿ, ವೆಜಿಟೆಬಲ್ ಪಲಾವ್‍ಗಳನ್ನು ತಿಂದುಕೊಂಡು ಬಾಟಲಿ ನೀರು ಕುಡಿಯುತ್ತಾ, ಹೊರಗಿನ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಿದ್ದೆ. ರೈಲಿನಲ್ಲಿ ದೂರದ ಪ್ರಯಾಣ ಮಾಡಬೇಕಾದರೆ ಆಗಾಗ ಮಾರಾಟಕ್ಕೆ ಬರುವ ಆಯಾ ರಾಜ್ಯದ ವಿಶೇಷ ಹಣ್ಣು, ತಿಂಡಿ-ತಿನಿಸುಗಳನ್ನು ಕೊಂಡು ತಿನ್ನುವುದು ಬಹಳ ಮಜವಾದ ಸಂಗತಿ. ಅದರ ಜೊತೆಗೆ ಬೇರೆ ಬೇರೆ ರಾಜ್ಯಗಳ ಹವಾಮಾನ, ಭೌಗೋಳಿಕ ವೈವಿಧ್ಯತೆಗಳು, ಜನರ ಜೀವನ ಮತ್ತು ನದಿ ತೊರೆಗಳನ್ನು ನೋಡುವುದು ಅದಕ್ಕಿಂತಲೂ ಮಜವಾದ ಸಂಗತಿ. ಆದರೆ ನನ್ನ ಮಿದುಳು ಮತ್ತು ಹೃದಯ ಬಹಳ ಸಮಯ ಯೋಚಿಸುತ್ತಿದ್ದುದು, ಅಲ್ಲಿ ಕಾಣುತ್ತಿದ್ದ ಜನರ ಬಡತನ ಮತ್ತು ಅನಕ್ಷರತೆಯ ಬಗ್ಗೆ. ಅಸ್ಸಾಮಿನ ಗುವಾಹಟಿ ನಗರದಲ್ಲಿ ರೈಲ್ವೇ ಸ್ಟೇಶನ್ನಿನಲ್ಲಿ ಬರುತ್ತಿದ್ದ ಭಿಕ್ಷುಕರ, ಅಂಗವಿಕಲರ, ಅನಾಥ ಮಕ್ಕಳ ಗೋಳು, ರೈಲಿನ ಹೊರಗೆ ಪ್ಲಾಟ್ ಫಾರಮ್‍ನಲ್ಲಿ ಪ್ರಾಣಿಗಳಿಗಿಂತಲೂ ಕಡೆಯಾಗಿ ಬಿದ್ದಿರುತ್ತಿದ್ದ ಜನರ ಹೃದಯ ವಿದ್ರಾವಕ ದೃಶ್ಯಗಳು ನನ್ನನ್ನು ಮೂಕನನ್ನಾಗಿ ಮಾಡುತ್ತಿದ್ದವು. ಕುಡಿದು ಬಿದ್ದಿರುತ್ತಿದ್ದ ಜನರು, ತಂಬಾಕು, ಸಿಗರೇಟುಗಳನ್ನು ಸೇದಿ ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಅನೇಕರ ದರ್ಶನವೂ ಆಯಿತು. ಇದಲ್ಲದೇ ದುಡ್ಡಿಗಾಗಿ ಪೀಡಿಸುತ್ತಾ, ನಮಗೆ ತೊಂದರೆ ಕೊಟ್ಟ ಹಿಜಿಡಾಗಳ ಘೋರ ಮುಖದ ಪರಿಚಯವೂ ಆಯಿತು. ಹೀಗೆ ಮೊದಲನೇ ದಿನ ಬಹುಬೇಗ ಕಳೆದು ಹೋಯಿತು.
ಮತ್ತಷ್ಟು ಓದು »

17
ಏಪ್ರಿಲ್

ಪಂಜಾಂಬಿನಲ್ಲಿ ಖಲಿಸ್ತಾನಿ ಕರಾಳ ದಿನಗಳು ಮರುಕಳಿಸಲಿವೆಯೇ?

– ರಾಕೇಶ್ ಶೆಟ್ಟಿ

OBS ಆ ದಂಪತಿಗಳು  ಮರುದಿನ ಸಂಜೆ ರಜೆಯ ಮೇಲೆ ಮಣಿಲಕ್ಕೆ ಹೊರಡುವವರಿದ್ದರು.ಪ್ರಯಾಣದ ಟಿಕೆಟ್ಟು ಎಲ್ಲವೂ ನಿಗದಿಯಾಗಿತ್ತು.ಅಷ್ಟರಲ್ಲಿ ಟೆಲಿಫೋನ್ ರಿಂಗಣಿಸಿತ್ತು.ಕರೆ ಸ್ವೀಕರಿಸಿದವರಿಗೆ ಮರುದಿನ ತುರ್ತು ಮಾತುಕತೆಗಾಗಿ ದೆಹಲಿಗೆ ಬರುವ ಆದೇಶ ಸಿಕ್ಕಿತು.

ಹೆಂಡತಿಯ ಜೊತೆ ಮೀರತ್ ಬಿಟ್ಟು ದೆಹಲಿಯ ಕಡೆ ಹೊರಟವರು, ಸಂಜೆಯೊಳಗೆ ಬರುವೆ ಮಣಿಲಕ್ಕೆ ಹೊರಟು ಬಿಡೋಣ ಅಂತೇಳಿ, ಚಾಂದಿಮಂದಿರದ II ಕಾರ್ಪ್ಸ್ ಅರ್ಮಿ ಹೆಡ್ ಕ್ವಾರ್ಟರ್ ತಲುಪಿಕೊಂಡರು.ತಲುಪಿಕೊಂಡವರೇ ಆಪರೇಷನ್ ರೂಮಿನೊಳ ಹೊಕ್ಕರು.ಅಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ನಕ್ಷೆಗಳನ್ನು ಹರವಿ ಕುಳಿತಿದ್ದರು ಸೈನ್ಯಾಧಿಕಾರಿಗಳು.ಒಳ ಬಂದವರಿಗೆ ಏನೊಂದು ಅರ್ಥವಾಗುವ ಮೊದಲೇ “ನಿನಗೆ ಅಮೃತಸರದ ಪರಿಸ್ಥಿತಿ ಕೈ ತಪ್ಪುತ್ತಿರುವುದು ಗೊತ್ತಿದೆಯಲ್ಲ?,ಆದಷ್ಟು ಬೇಗ ನೀನು ಅಮೃತಸರ ತಲುಪಿಕೊಂಡು ಸ್ವರ್ಣಮಂದಿರದೊಳಗೆ ಸೇರಿಕೊಂಡಿರುವ ಖಲಿಸ್ತಾನಿ ಉಗ್ರಗಾಮಿಗಳನ್ನ ಹೊರಹಾಕಬೇಕು” ಅಂತ ಆದೇಶಿಸಲಾಯಿತು.ಹಾಗೆ,ಇದ್ದಕ್ಕಿದ್ದಂತೆ ಸಿಕ್ಕ ಅಪ್ಪಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ಪಂಜಾಬ್ ರಾಜ್ಯ ಭಾರತದಿಂದ ಸಿಡಿದು “ಖಲಿಸ್ತಾನ” ಆಗುವುದನ್ನು ತಪ್ಪಿಸಿದ್ದು “ಆಪರೇಷನ್ ಬ್ಲೂ-ಸ್ಟಾರ್” ಅನ್ನುವ ಮಿಲಿಟರಿ ಕಾರ್ಯಾಚರಣೆ ಮತ್ತದರ ನೇತೃತ್ವ ವಹಿಸಿದ್ದ ಆ ಯೋಧನ ಹೆಸರು ಜನರಲ್.ಕೆ.ಎಸ್ ಬ್ರಾರ್.

ಆವತ್ತು ಅಮೃತಸರಕ್ಕೆ ಬಂದಿಳಿದ ಬ್ರಾರ್ ಅವರಿಗೆ ಸರಿಯಾಗಿ ಸ್ವರ್ಣಮಂದಿರದ ನಕ್ಷೆಯೂ ಗೊತ್ತಿರಲಿಲ್ಲ.ತಕ್ಷಣ ಅವರು ಅಲ್ಲಿನ ಸರ್ಕಾರಿ ಅಧಿಕಾರಿಗಳು ಮತ್ತು ಪೋಲಿಸರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಕೇಳಿದರು.ಊಹೂಂ! ಅವರಲ್ಲಿ ಯಾವ ಮಾಹಿತಿಯೂ ಇರಲಿಲ್ಲ.ತಿಂಗಳುಗಟ್ಟಲೆ ಕೆಲಸವಿಲ್ಲದೆ ಕುಳಿತಿದ್ದ ಅವರಿಂದ ಏನು ನಿರೀಕ್ಷಿಸುವಂತೆಯೂ ಇರಲಿಲ್ಲ.ಭಿಂದ್ರನ್ ವಾಲೆಯ ಕಪಿಮುಷ್ಟಿಗೆ ಅದಾಗಲೇ ಸ್ವರ್ಣಮಂದಿರ ಸಿಕ್ಕಿಯಾಗಿತ್ತು.ಒಳಗೇನು ನಡೆಯುತ್ತಿದೆ ಯಾರಿಗೂ ಗೊತ್ತಿರಲಿಲ್ಲ.ಭಿಂದ್ರನ್ ವಾಲೆಯ ಖ್ಯಾತಿ ಆಗ ಪಂಜಾಬಿನಲ್ಲಿ ಉತ್ತುಂಗಕ್ಕೇರಿದ ಸಮಯ.ಜನ ಅವನನ್ನು ದೈವತ್ವಕ್ಕೇರಿಸುವ ಮಟ್ಟಕ್ಕೇ ಅವನ ಅಮಲೇರಿತ್ತು.

ಮತ್ತಷ್ಟು ಓದು »

15
ಏಪ್ರಿಲ್

ಸಾಹಿತ್ಯ ಪರಂಪರೆಯ ಅರಿವಿಲ್ಲದ ’ಎಲ್ಲರ ಕನ್ನಡ’

ಡಾ. ಮಾಧವ ಪೆರಾಜೆ ಅವರ ಲೇಖನಕ್ಕೊಂದು ಪೂರಕ ಪ್ರತಿಕ್ರಿಯೆ

– ಡಾ. ಮೋಹನ ಕುಂಟಾರ್

imagesಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣದ ಮೂಲಕ ಡಿ.ಎನ್.ಶಂಕರಭಟ್ಟರು ಕನ್ನಡ ಬರವಣಿಗೆಯಲ್ಲಿ ಹೊಸ ಕ್ರಾಂತಿಯನ್ನು ಮಾಡಲು ಮುಂದಾಗಿದ್ದಾರೆ. ಅವರ ಮಾರ್ಗದಲ್ಲೇ ಮುಂದುವರಿಯುವ ಅವರ ಶಿಷ್ಯವರ್ಗ ಅದನ್ನೇ ಸಮರ್ಥಿಸಿ ಕೃತಿರೂಪಕ್ಕೆ ಇಳಿಸುತ್ತಿದೆ. ಒಂದು ರೀತಿಯಲ್ಲಿ ಇದು ಅತಿಬುದ್ಧಿವಂತಿಕೆಯ ಪ್ರದರ್ಶನವಲ್ಲದೇ ಬೇರೇನೂ ಅಲ್ಲ.

ಕನ್ನಡಕ್ಕೆ ಭಾಷಿಕವಾಗಿಯೂ ಸಾಹಿತ್ಯಿಕವಾಗಿಯೂ ಗೌರವ ತರುವ ಸುದೀರ್ಘ ಪರಂಪರೆಯಿದೆ. ಅದರ ಮೂಲಕವೇ ಕನ್ನಡ ಪರಂಪರೆ ವಿಶಾಲವಾಗಿ ಅಷ್ಟೆ ಅಗಾಧ ಪ್ರಮಾಣದಲ್ಲಿ ಬೆಳೆದು ನಿಂತಿರುವುದನ್ನು ಗುರುತಿಸಲಾಗುತ್ತಿದೆ. ಪಂಪ, ಕುಮಾರವ್ಯಾಸಾದಿಗಳು ಬರೆಯುವ ಕಾಲಕ್ಕೆ ಮಾತನಾಡುವ ಭಾಷೆ ಬಳಕೆಯಲ್ಲಿತ್ತು. ಮಾಸ್ತಿ, ಕಾರಂತ, ಕುವೆಂಪು ಅವರ ಕಾಲದಲ್ಲಿಯೂ ಇತ್ತು. ಅವರೆಲ್ಲ ಬರವಣಿಗೆಯ ಭಾಷೆಯೊಂದನ್ನು ಕನ್ನಡದ ಮೂಲಕ ಕಟ್ಟಿಕೊಟ್ಟು ಕನ್ನಡ ಭಾಷೆಯ ಮಹತ್ವವನ್ನು ಹೆಚ್ಚಿಸಿದ್ದಾರೆ. ಇವರೆಲ್ಲರ ಗ್ರಾಂಥಿಕ ಭಾಷೆಗೆ ಆಡುನುಡಿಯ ಸೊಗಡೂ ಪೂರಕವಾಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ. ಅಲ್ಲಿ ಕನ್ನಡದ ಮಾತಿನ ಭಾಷೆಯಲ್ಲಿ ಮಹಾಪ್ರಾಣಾಕ್ಷರಗಳಿದ್ದುವು, ಋಕಾರಗಳೂ ಇದ್ದುವು. ಉಚ್ಚಾರದಲ್ಲಿ ಅದನ್ನು ಸ್ಪಷ್ಟವಾಗಿ ಬಳಸದೆ ಇದ್ದಾಗಲೂ ಆ ವ್ಯತ್ಯಾಸವನ್ನು ನಿರಂತರವಾಗಿ ಕನ್ನಡ ಪರಂಪರೆ ಗ್ರಹಿಸುತ್ತಾ ಬಂದಿದೆ. ಅದಕ್ಕಾಗಿ ಕನ್ನಡ ಭಾಷೆಯ ಲಿಖಿತ ಪರಂಪರೆಯ 1500 ವರ್ಷಗಳ ಸುದೀರ್ಘ ಇತಿಹಾಸದ ನಡುವೆ ಆ ಅಕ್ಷರಗಳೆಲ್ಲ ಉಳಿದುಕೊಂಡು ಬಂದಿವೆ. ಬರಹ ಭಾಷೆ ಎನ್ನುವುದು ಭಾಷಾಭಿವ್ಯಕ್ತಿಯ ಒಂದು ಸಾಧ್ಯತೆ ಮಾತ್ರ. ಅದೇ ಅಂತಿಮ ಅಲ್ಲ. ಬಳಕೆಯ ಉಚ್ಚಾರವೆಲ್ಲ ಬರಹದ ಭಾಷೆಯಲ್ಲಿ ಬರಬೇಕೆಂಬ ಹಟ ಸಲ್ಲದು. ಬರವಣಿಗೆಯ ಭಾಷೆಗೆ ಒಂದು ಮಿತಿ ಇದೆ. ಒಂದು ಶಿಸ್ತು ಇದೆ. ಆ ಶಿಸ್ತು ಮಾತಿನ ಭಾಷೆಯಿಂದಲೇ ರೂಪುಗೊಂಡುದು. ಮಾತಿನ ಭಾಷೆಯೇ ಅಂತಿಮ. ಅವುಗಳಲ್ಲಿ ವ್ಯತ್ಯಸ್ಥ ರೂಪಗಳನ್ನು ಅಂಗೀಕರಿಸಿದ ಕಾರಣಕ್ಕೆ ಬರಹದಲ್ಲಿ ವಿಭಿನ್ನ ಸಂಕೇತಗಳು ಬಳಕೆಯಾಗಿವೆ. ಈ ಸಂಕೇತಗಳೇ ಅಲ್ಪಪ್ರಾಣಗಳೆಂದೂ, ಮಹಾಪ್ರಾಣಗಳೆಂದೂ ದಾಖಲಾಗಿವೆ. ಈಗ ಅವು ಕನ್ನಡದ ಬರಹ ಭಾಷೆಯ ಅವಿಭಾಜ್ಯ ಸಂಕೇತಗಳು. ಆಗಾಗ ಕವಿಗಳು ಅಚ್ಚಕನ್ನಡದ ಬಳಕೆಗಾಗಿ ಶ್ರಮಿಸಿದ್ದುಂಟು. ಆಂಡಯ್ಯನಂತಹ ಪ್ರಾಚೀನರು ಹಾಗೂ ಕೊಳಂಬೆ ಪುಟ್ಟಣ್ಣಗೌಡರಂಥ ಆಧುನಿಕರನ್ನು ಇಲ್ಲಿ ಹೆಸರಿಸಬಹುದು. ಆದರೆ ಅವರ ಪ್ರಯೋಗಗಳು ವಿಫಲವಾಗಿ ಅದನ್ನು ಮೀರಿದ ಪ್ರಯೋಗಗಳೇ ಕನ್ನಡದಲ್ಲಿ ದಾಖಲಾದವು.

ಮತ್ತಷ್ಟು ಓದು »

12
ಏಪ್ರಿಲ್

ಅಕ್ಷರ ಕಡಿತಕ್ಕೆ ತಮಿಳು ಮಾದರಿ?

-ಡಾ. ಅಜಕ್ಕಳ ಗಿರೀಶ್ ಭಟ್

ನನ್ನ ” ಕನ್ನಡಕ್ಕೇಕೆ ಶಂಕರ ಬಟ್ಟರ ಕತ್ತರಿ? ” ಎಂಬ ಪುಸ್ತಕದ ಕೆಲವು ಭಾಗಗಳು.

ಅಕ್ಷರ ಕಡಿತಕ್ಕೆ ತಮಿಳು ಮಾದರಿ?

ಹಿರಿಯ ಭಾಷಾವಿದ್ವಾಂಸರಾದ ಡಾ. ಡಿ. ಎನ್. ಶಂಕರ ಭಟ್ಟರು ಈಚಿನ ವರ್ಷಗಳಲ್ಲಿ” ಹೊಸ ಕನ್ನಡ”ವನ್ನು ಪ್ರತಿಪಾದಿಸುತ್ತಿದ್ದಾರೆ. ಕನ್ನಡದ ಅಕ್ಷರಗಳನ್ನು ಕಡಿಮೆ ಮಾಡಬೇಕು ಹಾಗೂ ಸಂಸ್ಕೃತದಿಂದ ಬಂದ ಪದಗಳನ್ನು ಬಿಟ್ಟುಬಿಡಬೇಕು ಎನ್ನುವುದು ಅವರ ವಾದದ ಮುಖ್ಯಾಂಶ. ಅವರ ಇತ್ತೀಚಿನ ಪುಸ್ತಕಗಳು ಅವರದೇ ಆದ ಹೊಸ ಕನ್ನಡದಲ್ಲಿ ಬರುತ್ತಿವೆ.

ಪರಂಪರೆ ಮತ್ತು ಸಂಸ್ಕೃತಿಗಳ ಬಗ್ಗೆ ಡಿ.ಎನ್.ಎಸ್. ಬರಹಗಳಲ್ಲಿ ವ್ಯಕ್ತವಾಗುವ ನಿಲುವೇನು ಎಂದು ನೋಡಬೇಕು. ಅವರು ಒಂದೆಡೆ ಸ್ವಾಭಿಮಾನ, ಸ್ವಸಂಸ್ಕೃತಿ ಬಗ್ಗೆ ಮಾತಾಡುತ್ತಾರೆ; ಇನ್ನೊಂದೆಡೆ ವ್ಯಾವಹಾರಿಕ ಪ್ರಯೋಜನಗಳ ಬಗ್ಗೆ ಮಾತಾಡುತ್ತಾರೆ.ಇನ್ನೊಂದೆಡೆ ವರ್ತಮಾನ ಕಾಲವನ್ನೂ ಈಚಿನ ಕೆಲ ಶತಮಾನಗಳ ಇತಿಹಾಸವನ್ನೂ ನಿರಾಕರಿಸುತ್ತಾರೆ.

ತಮಿಳನ್ನು ಅನುಸರಿಸುವುದೇ ಕನ್ನಡದ ಸಂಸ್ಕೃತಿಯನ್ನು ಹಾಗೂ ಸೊಗಡನ್ನು ಉಳಿಸುವ ದಾರಿ ಎಂದು ಡಾ.ಡಿ.ಎನ್.ಎಸ್. ಹೇಳುತ್ತಾರೆ. ಆರ್. ಗಣೇಶ್ ಹೇಳುವಂತೆ , ಈ ಸುಧಾರಣೆಯು ” ಒಂದು ಶತಾಬ್ಧಿಗೂ ಮುನ್ನ ತಮಿಳುನಾಡಿನಲ್ಲಿ ವೀರ ತಮಿಳರು ನಡೆಸಿದ ಅವಿಚಾರಿತ ಸುಧಾರಣೆಯ ಸವಕಲು ಅನುಕರಣೆಯೆಂಬುದನ್ನು ಬಲ್ಲವರೆಲ್ಲ ಬಲ್ಲರು.ಇಷ್ಟಾಗಿಯೂ ತಮಿಳು ಜಾಗತಿಕ ಸ್ತರದಲ್ಲಿ ತಾನೊಂದು ಭಾಷೆಯಾಗಿ ಏನನ್ನೂ ಸಾಧಿಸಲಾಗಲಿಲ್ಲ.ತಮಿಳರಿಗೆ ಜೀವಿಕೆಯ ಅನಿವಾರ್ಯತೆಯಿಂದ ವ್ಯವಹಾರಮಾತ್ರಕ್ಕಾಗಿ ಕಲಿಯಬೇಕಾಗಿ ಬರುವ ಇನ್ನಿತರ ಭಾಷೆಗಳನ್ನರಿಯಲೂ ಅದು ಸಹಕಾರಿಯಾಗಿಲ್ಲ.” ಕೆ.ವಿ.ತಿರುಮಲೇಶ್ ಅವರು ಕೂಡ ತಮಿಳರ ಈ ಮಾದರಿ ಕನ್ನಡಕ್ಕೆ ಅನುಸರಣಯೋಗ್ಯವಲ್ಲ ಎಂದು ತುಂಬ ಸ್ಪಷ್ಟವಾಗಿಯೇ ಹೇಳಿದ್ದಾರೆ.

ಮತ್ತಷ್ಟು ಓದು »

10
ಏಪ್ರಿಲ್

ಶಂಕರ ಬಟ್ಟರದ್ದು “ಎಲ್ಲರ ಕನ್ನಡ”ವೇ?

– ಡಾ.ಮಾಧವ ಪೆರಾಜೆ

images

ಡಾ. ಆರ್. ಚಲಪತಿಯವರು ‘ತಂತಿ ಮೇಲಿನ ನಡಿಗೆ’ ಎನ್ನುವ ಪುಸ್ತಕವನ್ನು ಇದೀಗ ತಾನೇ ಪ್ರಕಟಿಸಿದ್ದಾರೆ. ‘ಕಲಿಕೆಯ ಕನ್ನಡದ ಬಗೆಗೆ ಬಲ್ಲವರೊಂದಿಗೆ ಮಾತು ಕತೆ’ ಎನ್ನುವ ಉಪಶೀರ್ಷಿಕೆಯೂ ಇದಕ್ಕಿದೆ. ಸಖಿ ಪ್ರಕಾಶನ ಹೊಸಪೇಟೆ ಇವರು ಇದನ್ನು ಪ್ರಕಟಿಸಿದ್ದಾರೆ. ಈ ಪುಸ್ತಕದಲ್ಲಿ ಬಳಕೆಯಾಗಿರುವ ಭಾಷೆಯ ಕುರಿತು ಒಟ್ಟಾರೆಯಾಗಿ ನಾನು ಮುಂದೆ ಚರ್ಚಿಸಲಿರುವುದರಿಂದ ಆರಂಭದಲ್ಲಿಯೇ ಒಂದು ಮಾತನ್ನು ವಿಶೇಷವಾಗಿ ಪ್ರಸ್ತಾಪಮಾಡಿ ಮುಂದುವರಿಯುತ್ತೇನೆ.ಈ ಪುಸ್ತಕದ ಮುಖಪುಟದ ಮೇಲಿನಿಂದ ಅದು ಸ್ವತಂತ್ರ ಪುಸ್ತಕದ ಹಾಗೆ ಕಾಣುತ್ತದೆ. ಆದರೆ ತೆರೆತೆರದಂತೆ ಅದು ಸಂಪಾದನೆ ಎನ್ನುವುದು ಸ್ಪಷ್ಟವಾಗುತ್ತದೆ.ಶಿಕ್ಷಣ ಕ್ಷೇತ್ರದಲ್ಲಿ ದಶಕಗಳಿಂದ ತೊಡಗಿಸಿಕೊಂಡಿರುವವರೊಂದಿಗೆ ಲೇಖಕರು ಮಾಡಿದ ಸಂದರ್ಶನಗಳಿರುವ ಪುಸ್ತಕವಿದು. ಹಾಗಿರುವಾಗ ಇಂತಹ ಪುಸ್ತಕವನ್ನು ಸಂಪಾದನೆ ಎಂದು ಸ್ಪಷ್ಟವಾಗಿ ಗುರುತಿಸಬೇಕು.ಅದುವೇ ಸರಿಯಾದ ವಿಧಾನ.

ಈ ಪುಸ್ತಕದಲ್ಲಿ ಪ್ರಯೋಗವಾಗಿರುವ ಭಾಷೆಯ ಕುರಿತು ಒಂದು ಉದಾಹರಣೆಯನ್ನು ನೀಡುತ್ತೇನೆ.

ಉದಾ: ೧:

“ಪದವಿ ತರಗತಿಗಳಲ್ಲಿ ಏನನ್ನು ಕಲಿಯುವುದು/ ಕಲಿಸುವುದಾಗಿರಬೇಕು?”

ಎಂ.ಜಿ.ಸಿ. ಯಾವುದೇ ಒಂದು ಮಾತ್ರುಬಾಶೆಯನ್ನು ತರಗತಿಯಲ್ಲಿ ಕಲಿಯುವ ವಿದ್ಯಾರ್‍ತಿಗೆ ಆ ಭಾಶೆಯಲ್ಲಿ ವ್ಯವಹರಿಸುವ ಸಾಮಾನ್ಯ ಜ್ನಾನವಿರುತ್ತದೆ. ತರಗತಿಗಳಲ್ಲಿ ಹೊಸ ಪಾರಿಬಾಶಿಕ ಪದಗಳು ಪರಿಚಯವಾಗುತ್ತವೆ. ಹಾಗೂ ಒಂದು ರೀತಿಯ ಆಲೋಚನಾ ಕ್ರಮಕ್ಕೆ ಆಡುಬಾಶೆಯಿಂದ ಶಿಶ್ಟಬಾಶೆಯ ಕಡೆಗೆ ಅವನ/ಳ ಗಮನ ಹರಿಯುತ್ತದೆ.

ಒಂದು ರೀತಿಯಲ್ಲಿ ಕಲಿಸುವವರು ಮತ್ತು ಕಲಿಯುವವರು ಅಸಹಾಯಕರು. ಪಟ್ಯಕ್ರಮ ಮತ್ತು ಪಟ್ಯವನ್ನು ಸಿದ್ದಪಡಿಸುವವರೇ ಬೇರೆಯವರಾಗಿರುತ್ತಾರೆ. ಈಗ ಪರಿಸ್ತಿತಿ ಸುದಾರಿಸುತ್ತಿದೆ ಎನಿಸಿದರೂ ವಿವಿಗಳ ಒಟ್ಟು ರಚನಾ ವಿನ್ಯಾಸವೇ ಪ್ಯೂಡಲ್ ಮಾದರಿಯದು- ವಸಾಹತು ಕಲ್ಪನೆಯದು. ಅವು ಇಂದಿಗೂ ಡೆಮಕ್ರೆಟಿಕ್ ಆಗಿಯೇ ಇಲ್ಲ.(ಪು.೧೨) ಮತ್ತಷ್ಟು ಓದು »

6
ಏಪ್ರಿಲ್

ಇನ್ನೂ ಬೇಕೆ ಇಂಥ ರಾಜಕೀಯ ಮೀಸಲಾತಿ?

-ಸಾತ್ವಿಕ್ ಎನ್.ವಿ.

ಒಂದು ವಿಷಯವಂತೂ ಸಂಸತ್ತಿನಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ಸರ್ವಾನುಮತದಿಂದ ಅನುಮೋದನೆ ಪಡೆಯುತ್ತದೆ. ಸಂಸದರು ಇದಕ್ಕೆ ವಿರೋಧ ಇಲ್ಲವೆ ಅನುಮಾನ ವ್ಯಕ್ತಪಡಿಸುವುದು ಪ್ರತಿಗಾಮಿತನ ಎಂದೇ ಭಾವಿಸುತ್ತಾರೆ. ಪಕ್ಷಬೇಧ ಮರೆತು ಬೆಂಬಲಿಸುತ್ತಾರೆ. ಅದುವೇ ಚುನಾವಣೆಯಲ್ಲಿ ನೀಡಲಾಗಿರುವ ರಾಜಕೀಯ ಮೀಸಲಾತಿಯ ನವೀಕರಣ. ಇದು ಪ್ರತಿ ಹತ್ತು ವರ್ಷಕ್ಕೊಮ್ಮೆ ನವೀಕರಣಕ್ಕೆ ಬರುತ್ತದೆ. ಆಗ ಸಂಸತ್ತು ಈ ಪದ್ಧತಿಯನ್ನು ನಿರಾಕರಿಸಬಹುದು ಇಲ್ಲವೇ ಮುಂದಿನ ಹತ್ತು ವರ್ಷಕ್ಕೆ ನವೀಕರಿಸಬಹುದು. ಆದರೆ ಸಂಸತ್ತು ಯಾವುದೇ ಚರ್ಚೆಯಿಲ್ಲದೇ ನವಿಕರಿಸುತ್ತಲೇ ಬಂದಿದೆ. ಸರ್ಕಾರ ಯಾ ರಾಜಕೀಯಪಕ್ಷಗಳಿಗೆ ದಲಿತ/ಹಿಂದುಳಿದ ವರ್ಗಗಳ ಬಗ್ಗೆ ಇಷ್ಟೊಂದು ಪ್ರೀತಿ ಎಲ್ಲಿಂದ ಉಕ್ಕಿತೆಂದು ಆಶ್ಚರ್ಯವಾಗಬಹುದು. ಆದರೆ ಇದರ ಹಿಂದಿನ ತಂತ್ರ ಬೇರೆಯದೇ ಇದೆ.

ಯಾಕೆಂದರೆ ಸಂವಿಧಾನದಲ್ಲಿ ದಲಿತ ಜನವರ್ಗದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ನೀಡಲಾದ ಈ ಮೀಸಲಾತಿಯು ರಾಜಕೀಯ ಪಕ್ಷಗಳ ಕೈಯಲ್ಲಿ ಸಿಕ್ಕಿ ತನ್ನ ಮೂಲ ಉದ್ದೇಶವನ್ನು ಎಂದೋ ಮರೆತಿದೆ. ಮೀಸಲು ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ. ಗೆದ್ದ ಸ್ಪರ್ಧಿಯು ತನ್ನ ಸಮುದಾಯದ ಪ್ರತಿನಿಧಿಯಾಗಿರುತ್ತಾನೆ. ತನ್ನ ಸಮುದಾಯದ ಅಭಿವೃದ್ಧಿಯ ಸಲುವಾಗಿ ಸದನದಲ್ಲಿ ಧ್ವನಿ ಎತ್ತುವುದು ಆತನ ಕರ್ತವ್ಯವಾಗಿರುತ್ತದೆ. ಆದರೆ ಪಕ್ಷವೊಂದರ ಹಂಗಿನಲ್ಲಿರುವ ವ್ಯಕ್ತಿಯಿಂದ ಇಂಥ ದೃಢ ಮತ್ತು ನಿಷ್ಠುರ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯವೇ? ಆತ ದಲಿತವರ್ಗದಿಂದ ಬಂದಿದ್ದರೂ ತನ್ನ ಪಕ್ಷಕ್ಕಾಗಿಯೇ ತಯಾರಾದವನು. ಆತ ತನ್ನ ಪಕ್ಷದ ಸಿದ್ಧಾಂತದಿಂದ ಎಷ್ಟು ಹೊರಗೆ ನಿಂತು ಕೆಲಸ ಮಾಡಲು ರಾಜಕೀಯ ಪಕ್ಷಗಳು ಅವಕಾಶ ನೀಡುತ್ತಿವೆ? ಹೆಚ್ಚಿನ ಸಂದರ್ಭದಲ್ಲಿ ಆಯ್ಕೆಯಾದ ವ್ಯಕ್ತಿಯು ಪಕ್ಷವೊಂದರಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸುವ ಇಲ್ಲವೇ ಹೌದಪ್ಪನಾಗಿ ಬಳಕೆಯಾಗುವ ಸಂದರ್ಭವೇ ಹೆಚ್ಚು. ಇಂಥ ಸಂದರ್ಭದಲ್ಲಿ ದಲಿತ ಸದಸ್ಯನೊಬ್ಬನಿಗೆ ಇತರೆ ವರ್ಗದ ರಾಜಕೀಯ ನೇತಾರನಿಗಿಂತ ಹೆಚ್ಚಿನ ಜವಾಬ್ದಾರಿ ಮತ್ತು ಹೊಣೆಗಾರಿಕೆ ಇರಬೇಕಾಗುತ್ತದೆ. ಮತ್ತಷ್ಟು ಓದು »

4
ಏಪ್ರಿಲ್

ಬದಲಾವಣೇ ತರಲು ಬೇಕಿರುವುದು “ಮನಸ್ಸು” ವಯಸ್ಸಲ್ಲ…!

-ರಾಕೇಶ್ ಶೆಟ್ಟಿ

ARONMN“ರಾಜಕಾರಣಕ್ಕೆ ಯುವಕರು ಬರಬೇಕು” ಹಾಗೂ “ರಾಜಕಾರಣಿಗಳಿಗೆ ನಿವೃತ್ತಿ ವಯೋಮಿತಿಯಿರಬೇಕು” ಅನ್ನುವ ಚರ್ಚೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ.ನನ್ನ ಮಟ್ಟಿಗೆ ಯುವಕರು ರಾಜಕೀಯಕ್ಕೆ ಬಂದರೆ/ಯುವಕರ ಕೈಗೆ ಅಧಿಕಾರ ಸಿಕ್ಕರೆ ಎಲ್ಲವೂ ಬದಲಾಗುತ್ತದೆ ಅನ್ನುವುದು ಒಂದು ’ಮಿಥ್’ ಅಷ್ಟೇ.ನಿಜಕ್ಕೂ ಬದಲಾವಣೆ ಬಯಸಲು/ಮಾಡಲು ಬೇಕಾಗಿರುವುದು ವಯಸ್ಸೋ? ಮನಸ್ಸೋ?

ಭಾರತದ ಅತಿಕಿರಿಯ ಮುಖ್ಯಮಂತ್ರಿ ಅನ್ನುವ ಹೆಗ್ಗಳಿಕೆ ಉ.ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ (೩೯) ಅವರದ್ದು.ಅವರು ಗಾದಿಯ ಮೇಲೆ ಕುಳಿತು ಮೊನ್ನೆ ಮೊನ್ನೆಗೆ ಒಂದು ವರ್ಷ ಕಳೆದಿದೆ.ಈ ಒಂದು ವರ್ಷದಲ್ಲಿ ಈ ಬಿಸಿ ರಕ್ತದ ಯುವ ಮುಖ್ಯಮಂತ್ರಿ ಅಧಿಕಾರ ಚಲಾವಣೆಯಲ್ಲಿ ಯಾವುದಾದರೂ ಭರವಸೆಯುತ (’ಕ್ರಾಂತಿಕಾರಕ’ ಅನ್ನುವ ದೊಡ್ಡ ಪದವೂ ಬೇಡ) ರೀತಿಯಲ್ಲಿ ರಾಜ್ಯಭಾರ ಮಾಡಿದ್ದಾರೆಯೇ? ಕನಿಷ್ಟ ಮಂತ್ರಿಮಂಡಲ ರಚನೆ ಮಾಡುವಾಗಲಾದರೂ ಆರೋಪ ಮುಕ್ತರಿಗೆ ಸ್ಥಾನ ಕೊಟ್ಟರೇನು? ಇವರ ಮಂತ್ರಿಮಂಡಲದಲ್ಲಿ ಶೇ.೫೩ರಷ್ಟು ಮಂದಿ ಸಚಿವರ ಮೇಲೆ ಕ್ರಿಮಿನಲ್ ಆರೋಪಗಳಿವೆ.ವರ್ಷದಿಂದ ಉತ್ತರ ಪ್ರದೇಶ ಸುದ್ದಿಯಲ್ಲಿದ್ದರೆ ಅದು ಬರಿ ಕೆಟ್ಟ ಸುದ್ದಿಗಳ ಮೂಲಕವಷ್ಟೇ.ಇತ್ತೀಚೆಗೆ ತಾನೇ ಪ್ರತಾಪ್ ಗಢದಲ್ಲಿ ಡಿವೈಎಸ್ಪಿ ಜಿಯಾ-ಉಲ್-ಹಕ್ ರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದ್ದು ನೆನಪಿರಬೇಕಲ್ಲ.ಒಬ್ಬ ಯುವ (ಅನನುಭವಿ) ಮುಖ್ಯಮಂತ್ರಿಗೆ ಭರವಸೆಯ ಕಾರ್ಯಕ್ರಮ ರೂಪಿಸುವಲ್ಲಿ ಇನ್ನೊಂದಿಷ್ಟು ಸಮಯ ಬೇಕು ಅಂತ ಇಟ್ಟುಕೊಂಡರೂ, ಅಪರಾಧ,ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮೊದಲಿಗೆ ಬೇಕಿದಿದ್ದು ಗಟ್ಟಿ ಮನಸ್ಸು.ಬಹುಷಃ ಅದೇ ಈ ಯುವ ಮುಖ್ಯಮಂತ್ರಿಯಲ್ಲಿ ಕಾಣುತ್ತಿಲ್ಲ.ತನ್ನ ಸುತ್ತಲೂ ಕ್ರಿಮಿನಲ್ ಆರೋಪಿಗಳ ಸಂಪುಟವನ್ನಿಟ್ಟುಕೊಂಡು “ಗೂಂಡಾ ರಾಜ್ಯ”ವನ್ನು ಅಳಿಸಿ ಹಾಕುತ್ತೇವೆ ಅನ್ನುವುದೆಷ್ಟು ಸತ್ಯ? “ಬದಲಾವಣೆ ತರಲು ವಯಸ್ಸು ಮುಖ್ಯವೋ,ಮನಸ್ಸು ಮುಖ್ಯವೋ” ಅನ್ನುವ ಈ ಚರ್ಚೆಯ ಮೊದಲ ಉದಾಹರಣೆ ಅಖಿಲೇಶ್ ಯಾದವ್ ರನ್ನು ನೋಡಿದರೇ ಯುವಕರು ರಾಜಕೀಯಕ್ಕೆ/ಅಧಿಕಾರಕ್ಕೆ ಬಂದರೆ ಬದಲಾವಣೆಯಾಗುತ್ತದೆ ಅನ್ನುವುದು ಮಿಥ್ ಅನ್ನಿಸುತ್ತದೆ.ಬದಲಾಯಿಸಲೇಬೇಕು ಅನ್ನುವ ಮನಸಿದ್ದರೆ ವಯಸ್ಸು ಅಷ್ಟು ಅಡ್ಡಿಯಾಗಲಾರದು.

ಮತ್ತಷ್ಟು ಓದು »

29
ಮಾರ್ಚ್

ಉಪಖಂಡದಲ್ಲಿ ಏಕಾಂಗಿ ಭಾರತ?

– ಡಾ ಅಶೋಕ್ ಕೆ ಆರ್

ISPCತೀರ ಹಿಂದಿನ ಮಾತಲ್ಲ. ಕೆಲವೇ ದಿನಗಳ ಹಿಂದೆ ಅಫ್ಜಲ್ ಗುರುವನ್ನು ನೇಣಿಗೇರಿಸಿ ಅವನ ದೇಹವನ್ನು ಆತನ ಮನೆಯವರಿಗೆ ನೀಡದೆ ಜೈಲಿನಲ್ಲೇ ಮಣ್ಣು ಮಾಡಲಾಗಿತ್ತು. ಕಾಶ್ಮೀರದಲ್ಲಿ ಪ್ರತಿಭಟನೆಗಳಾದವು, ಅಫ್ಜಲ್ ಗುರು ಅಲ್ಲಿಯವನಾಗಿದ್ದರಿಂದ. ಇದೇ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅಫ್ಜಲ್ ಗುರುವಿನ ದೇಹವನ್ನು ಆತನ ಮನೆಯವರಿಗೆ ಹಿಂದಿರುಗಿಸಬೇಕು ಎಂಬ ನಿರ್ಣಯ ತೆಗೆದುಕೊಂಡವು, ನಿರ್ಣಯ ಮಾಡಿದ್ದು ಹಾದಿಬೀದಿಯಲ್ಲಾಗಿರದೆ ಸಂಸತ್ತಿನಲ್ಲಾಗಿತ್ತು.ಈ ಕಾರಣದಿಂದ ನಿರ್ಣಯಕ್ಕೆ ಅಧಿಕೃತತೆಯ ಮುದ್ರೆ ಲಭಿಸಿತ್ತು. ಪಾಕಿಸ್ತಾನದ ಈ ನಡೆಗೆ ಭಾರತದಲ್ಲಿ ಅಗಾಧ ವಿರೋಧ  ವ್ಯಕ್ತವಾಗಿದ್ದು ಸಹಜ ಪ್ರತಿಕ್ರಿಯೆಯಾಗಿತ್ತು. ನಮ್ಮ ಮನೆಯ ವಿಷಯದಲ್ಲಿ ಅನ್ಯರು ಮೂಗು ತೂರಿಸುವುದು ಕೋಪ ತರಿಸುವ  ವಿಷಯವೇ ಸರಿ.

ಶ್ರೀಲಂಕಾದ ಎಲ್ ಟಿ ಟಿ ಇ ಸಂಘಟನೆಯ ಹುಟ್ಟಿಗೆ ಅನೇಕ ಐತಿಹಾಸಿಕ ಕಾರಣಗಳಿವೆ.ಶ್ರೀಲಂಕಾದ ಈ ಆಂತರಿಕ ಸಮಸ್ಯೆಯ ಉದ್ಭವವಾಗಿದ್ದು ಬ್ರೀಟೀಷರ ಆಡಳಿತದ ಕಾರಣದಿಂದ ಎಂದರೆ ತಪ್ಪಾಗಲಾರದು.ಶ್ರೀಲಂಕಾದ ಎಸ್ಟೇಟುಗಳಲ್ಲಿ ಕೆಲಸ ಮಾಡಲೆಂದು ಶ್ರಮಜೀವಿಗಳಾದ ತಮಿಳರನ್ನು ಕರೆದುಕೊಂಡು ಹೋಗಿತ್ತು ಅಂದಿನ ಬ್ರಿಟೀಷ್ ಆಡಳಿತ. ಬ್ರಿಟೀಷರು ಶ್ರೀಲಂಕ ತೊರೆದ ನಂತರ ಅಲ್ಲಿನ ಬಹುಸಂಖ್ಯಾತರಾದ ಸಿಂಹಳೀಯರು ಲಂಕ ತಮಿಳರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡಕಲಾರಂಭಿಸಿದ್ದರು.

ಮತ್ತಷ್ಟು ಓದು »

27
ಮಾರ್ಚ್

ವಸಾಹತು ಪ್ರಜ್ಞೆಯ ವಿಶ್ವರೂಪ ೨ : ಏನೀ ಮೂಢನಂಬಿಕೆ?

ಕನ್ನಡ ನಿರೂಪಣೆ: ರಾಜಾರಾಮ ಹೆಗಡೆ

Prof Balu ವಿದ್ಯಾವಂತರಿಗೆ ಈ ಶಬ್ದ ಸುಪರಿಚಿತ. ‘ಭಾರತೀಯ ಸಮಾಜದಲ್ಲಿ ಮೂಢನಂಬಿಕೆ ಆಳವಾಗಿ ಬೇರುಬಿಟ್ಟಿದೆ’, ಅಥವಾ ‘ಭಾರತೀಯರು ಯಾವ್ಯಾವುದೋ ಮೂಢನಂಬಿಕೆಗಳನ್ನು ಇಟ್ಟುಕೊಂಡಿದ್ದಾರೆ’,‘ಈ ಮೂಢನಂಬಿಕೆಗಳನ್ನು ತೊಡೆದು ಹಾಕದ ಹೊರತೂ ನಮ್ಮ ಸಮಾಜ ಉದ್ಧಾರವಾಗುವುದಿಲ್ಲ, ಇತ್ಯಾದಿ ಹೇಳಿಕೆಗಳನ್ನು ಪ್ರತಿಯೊಬ್ಬನೂ ಭಾಷಣ-ಲೇಖನಗಳಲ್ಲಿ, ತರಗತಿಯ ಪಾಠಗಳಲ್ಲಿ ಸಾಕಷ್ಟು ಕೇಳಿರುತ್ತಾನೆ. ಈ ಶಬ್ದದ ಜೊತೆಗೆ ಸಮಾನಾರ್ಥಕವಾಗಿ ‘ಕುರುಡು ನಂಬಿಕೆ’, ‘ಅಂಧ ಶ್ರದ್ಧೆ’, ‘ಗೊಡ್ಡು ಸಂಪ್ರದಾಯಗಳು’ ಇತ್ಯಾದಿ ಶಬ್ದಗಳೂ ಬಳಕೆಯಲ್ಲಿವೆ. ಈ ಶಬ್ದಗಳೆಲ್ಲ ನಮಗೆ ಅರ್ಥವಾಗುತ್ತಿವೆ ಎಂಬುದಾಗಿ ಭಾವಿಸಿಕೊಂಡೇ ನಾವು ಅವನ್ನು ಉಪಯೋಗಿಸುತ್ತಿರುತ್ತೇವೆ. ಇವುಗಳ ಅರ್ಥವನ್ನು ಕೇಳಿದರೆ ‘ಅವು ಅವೈಜ್ಞಾನಿಕ, ಅಜ್ಞಾನದಿಂದ ಮಾಡುವಂಥವು, ಹಾಗಾಗಿ ಅವು ಮೌಢ್ಯ’ ಎಂಬ ಉತ್ತರ ಬರುತ್ತದೆ.

ಹೀಗೊಂದು ಪ್ರಶ್ನೆ ಕೇಳಿಕೊಳ್ಳುವಾ.ಒಂದು ಸಮಾಜದಲ್ಲಿ ಜನರು ಮಾಡುವ ಕೆಲಸಕ್ಕೆಲ್ಲವೂ ವೈಜ್ಞಾನಿಕ ಕಾರಣಗಳಿರಲು ಸಾಧ್ಯವೆ? ಅಂಥವೆಲ್ಲವೂ ಮೂಢನಂಬಿಕೆಯಾಗುತ್ತದೆಯೆ?  ಗುರು Mooda Nambikeಹಿರಿಯರಿಗೆ ಕಾಲುಮುಟ್ಟಿ ನಮಸ್ಕರಿಸುತ್ತೇವೆ, ಮನಸ್ಸಿಗೆ, ಸಂಬಂಧಕ್ಕೆ ಎಲ್ಲ ಹಿತವೇ, ಆದರೆ ವೈಜ್ಞಾನಿಕ ಕಾರಣ ಗೊತ್ತಿಲ್ಲ. ನಮ್ಮ ವಿದ್ಯಾವಂತರ ಆಧುನಿಕ ಸಮಾಜವನ್ನೇ ತೆಗೆದುಕೊಳ್ಳಿ: ಬೇಸಿಗೆಯಲ್ಲಿ ಸೆಕೆಯಾಗಿ ಬೆವರು ಕಿತ್ತುಕೊಂಡು ಹಿಂಸೆಯಾಗುತ್ತಿರುತ್ತದೆ. ಆದರೂ ಕೋಟು, ಟೈಗಳನ್ನು ಕಟ್ಟಿಕೊಂಡು ಆಫೀಸಿಗೆ ಬರುವುದು ಶಿಷ್ಟಾಚಾರ ಅಥವಾ ಡ್ರೆಸ್ ಕೋಡು. ಕೆಲವರಿಗೆ ಕಡ್ಡಾಯ. ಇದರಲ್ಲಿ ಏನು ವೈಜ್ಞಾನಿಕತೆಯಿದೆ?  ಹೀಗೆ ಯಾವುದೇ ಸಮಾಜವನ್ನು ನೋಡಿದರೂ ಕೂಡ ವೈಜ್ಞಾನಿಕ ಕಾರಣಗಳ ಯಾವುದೇ ಹಂಗಿಲ್ಲದೇ ಇಂಥ ಪದ್ಧತಿಗಳು ಅಥವಾ ರೂಢಿಗಳು ಸಮುದಾಯಗಳನ್ನು ಒಟ್ಟಿಗೇ ಹಿಡಿದಿರುತ್ತವೆ, ಸಂಬಂಧಗಳನ್ನು ಬೆಸೆಯುತ್ತಿರುತ್ತವೆ.‘ಅವೈಜ್ಞಾನಿಕ’ ಎಂಬ ಕಾರಣವನ್ನು ಇಟ್ಟುಕೊಂಡು ಇಂಥ ಆಚರಣೆಗಳನ್ನೆಲ್ಲ ತೊಡೆದುಹಾಕಿದರೆ ಯಾವುದಾದರೂ ಮನುಷ್ಯ ಸಮಾಜ ಅಸ್ತಿತ್ವದಲ್ಲಿರಲು ಸಾಧ್ಯವೆ? ಹಾಗಿದ್ದ ಪಕ್ಷದಲ್ಲಿ ಇಂಥ ರೂಢಿಗಳು ಭಾರತೀಯ ಸಮಾಜದಲ್ಲಿ ಮಾತ್ರವೇ ಉಚ್ಛಾಟಿಸಬೇಕಾದ ಪೆಡಂಭೂತವಾಗಿದ್ದು ಹೇಗೆ ಮತ್ತು ಯಾವಾಗ? ಮೂಢ ನಂಬಿಕೆ ಏಕೆ ತೊಡೆಯಬೇಕಾದ ಅನಿಷ್ಠವೆಂಬುದಾಗಿ ನಾವೆಲ್ಲ ನಂಬಿದ್ದೇವೆ?

ಈ ಮೂಢನಂಬಿಕೆ, ಅಂಧಶ್ರದ್ಧೆ ಇತ್ಯಾದಿ ಪದಗಳೆಲ್ಲ ಕನ್ನಡದಲ್ಲಿ ಅರ್ಥವಿಲ್ಲದ ಶಬ್ದಗಳು.ಅವು ಇಂಗ್ಲೀಷಿನ Superstition ಎಂಬ ಶಬ್ದದ ಕನ್ನಡಾನುವಾದಗಳು. ಭಾರತೀಯ ಭಾಷೆಗಳಲ್ಲಿ ಮೌಢ್ಯ ಎಂದರೆ ಅಜ್ಞಾನ ಎಂಬ ಅರ್ಥವಿದೆ. ಮೂಢ ಎಂದರೆ ಅಜ್ಞಾನಿ. ಆದರೆ ಮೂಢ ನಂಬಿಕೆ ಎನ್ನುವ ಪದಗುಚ್ಛವಿಲ್ಲ. ಅದೇ ಥರ ಅಂಧ ಶ್ರದ್ಧೆ. ಶ್ರದ್ಧೆ ಕುರುಡಾಗಿರುವುದು ಅಂದರೇನು? ಕಣ್ಣಿರುವ ಶ್ರದ್ಧೆ ಅಂತ ಒಂದಿದೆಯೆ? ಭಾರತೀಯ ಭಾಷೆಯಲ್ಲಿ ಈ ಪದವನ್ನು ಅರ್ಥೈಸಲು ಹೋದರೆ ನಗೆಪಾಟಲಾಗುತ್ತದೆ. ಸೂಪರ್‍ಸ್ಟಿಶನ್ ಎಂಬುದು ಕ್ರಿಶ್ಚಿಯನ್ ಥಿಯಾಲಜಿಯಲ್ಲಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಒಂದು ಪರಿಕಲ್ಪನೆಯನ್ನು ಸೂಚಿಸುವ ಪರಿಭಾಷೆ. ಆ ಹಿನ್ನೆಲೆಯಲ್ಲಿ ಮಾತ್ರವೇ ಅರ್ಥವಾಗುವ ಶಬ್ದ.ಈ ಶಬ್ದವು ಮೂಲತಃ ರೋಮನ್ನರಲ್ಲಿ ಬಳಕೆಯಲ್ಲಿದ್ದು, ಅದರರ್ಥ ‘ದೇವರುಗಳ ಕುರಿತು ಅತಿಯಾದ ಹೆದರಿಕೆ’ ಎಂಬುದಾಗಿದೆ. ಇದನ್ನೊಂದು ಒಳ್ಳಯೆ ಲಕ್ಷಣ ಎಂಬುದಾಗಿ ರೋಮನ್ನರೇನೂ ಭಾವಿಸಿರಲಿಲ್ಲ. ಆದರೆ ರೋಮನ್ ಸಂಸ್ಕೃತಿಯನ್ನು ನಾಶಮಾಡಿ ಅದರ ಮೇಲೆ ಪ್ರತಿಷ್ಠಾಪಿತವಾದ ಕ್ರಿಶ್ಚಿಯಾನಿಟಿಯು ರೋಮನ್ನರ ದೇವತೆಗಳನ್ನು ಸುಳ್ಳು ದೇವತೆಗಳೆಂದು ನಿರೂಪಿಸಿತು. ಈ ಸುಳ್ಳು ದೇವತೆಗಳು ಕ್ರೈಸ್ತರ ಗಾಡ್‍ನ ವಿರೋಧಿಯಾದ ಡೆವಿಲ್ಲನ ಮೋಸಗಳು. ಈ ದೇವತೆಗಳ ಮೂಲಕ ಡೆವಿಲ್ಲನು ಜನರನ್ನು ದಾರಿತಪ್ಪಿಸುತ್ತಿದ್ದಾನೆ ಏಕೆಂದರೆ ಅವು ಗಾಡ್‍ನ ವೈರಿಗಳು ಎಂಬುದಾಗಿ ಶಾಸ್ತ್ರವನ್ನು ಬರೆದುಕೊಂಡರು. ಆಗ ಸೂಪರ್‍ಸ್ಟಿಶನ್ ಶಬ್ದಕ್ಕೆ ತನ್ನದೇ ಆದ ಹೊಸ ಅರ್ಥವೊಂದು ಪ್ರಾಪ್ತವಯಿತು. ಅದೆಂದರೆ ‘ ಸುಳ್ಳು ದೇವರುಗಳನ್ನು ಕುರಿತ ಭಯ ಅಥವಾ ಅವನ್ನು ಪೂಜಿಸುವುದು’ ಅಂತ.
ಮತ್ತಷ್ಟು ಓದು »

23
ಮಾರ್ಚ್

‘ಸತ್ತು ಬದುಕುವುದು ಹೇಗೆ!?’ ಎಂದು ತೋರಿಸಿಕೊಟ್ಟವನ ನೆನಪಿಗೆ…

– ರಾಕೇಶ್ ಶೆಟ್ಟಿ

ಕ್ರಾಂತಿಕಾರಿಗಳೆಂದರೆ ಹಾದಿ ತಪ್ಪಿದ ದೇಶ ಭಕ್ತರಲ್ಲ, ಅವರಿಗೂ ಧ್ಯೇಯ,ಗುರಿ,ಆದರ್ಶಗಳಿರುತ್ತವೆ.ಮತ್ತು ಆ ಆದರ್ಶಗಳನ್ನ ಪಾಲಿಸಲು ತಮ್ಮ ಜೀವವನ್ನು ಸಹ ಅವರು ಅರ್ಪಿಸಬಲ್ಲರು ಅಂತ ಜಗತ್ತಿಗೆ ತೋರಿಸಿಕೊಟ್ಟವರು, ಹುಟ್ಟಿ ಬಂದು ಅಷ್ಟೇ ಬೇಗ ಅದಿನ್ಯಾವ್ದೋ ತುರ್ತು ಕೆಲಸವಿದೆ ಅನ್ನುವಂತೆ ಎದ್ದು ಹೊರಟವರು,ಸತ್ತು ಬದುಕುವುದು ಹೇಗೆ ಅಂತ ತೋರಿಸಿಕೊಟ್ಟು ಹೋದವರು ಭಗತ್ ಸಿಂಗ್,ರಾಜಗುರು ಮತ್ತು ಸುಖದೇವ್.

ಅವರು ಹುತಾತ್ಮರಾಗಿ ಇಂದಿಗೆ ೮೦ ವರ್ಷಗಳಾಯಿತು.ಬಹುಷಃ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ  ಕ್ರಾಂತಿಯ ಕಿಡಿಯನ್ನ ಭಾರತೀಯರಲ್ಲಿ ಬಡಿದ್ದೆಬ್ಬಿಸಿದ ಅಪ್ರತಿಮ ವ್ಯಕ್ತಿ ಭಗತ್ ಸಿಂಗ್.ಚಂದ್ರ ಶೇಖರ್ ಆಜಾದ್ರಂತ ಮಹಾನ್ ಗುರುವಿನ ಶಿಷ್ಯ ಗುರುವನ್ನು ಮೀರಿಸುವಂತೆ ಮುನ್ನಡೆದು ಬಿಟ್ಟರು.ಜಲಿಯನ್ ವಾಲ ಬಾಗ್ನ ದುರಂತ ಭಾರತದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯ ಉದಯಕ್ಕೆ ಮುನ್ನುಡಿ ಬರೆದಿತ್ತು.ಗಾಂಧೀಜಿಯವರ ಅಸಹಕಾರ ಚಳುವಳಿಗೆ ಓ ಕೊಟ್ಟು ಬೀದಿಗಿಳಿದ ಭಾರತೀಯರಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರು ಇದ್ದರು.ಅಂತವರ ಮಧ್ಯೆ ಬಾಲಕ ಭಗತ್ ಕೂಡ ಇದ್ದ.ಚೌರಿ-ಚೌರಾದ ಘಟನೆಯ ನಂತರ ಗಾಂಧೀಜಿ ಏಕಾಏಕಿ ಚಳುವಳಿಯನ್ನ ಹಿಂದೆ ಪಡೆದಾಗ,ಮತ್ತು ಆ ನಂತರ ಗಾಂಧೀಜಿಯ ಮಾತು ಕೇಳಿ ಶಾಲೆ ಬಿಟ್ಟು ಹೊರಬಂದು ಪಟ್ಟ ಪಾಡು ಇವೆಲ್ಲ ಭಗತ್ ಮನಸಿನಲ್ಲಿ ಗಾಂಧೀವಾದದ ಬಗ್ಗೆ ನಂಬಿಕೆ ಕಳೆಯುವಂತೆ ಮಾಡಿತು.ಬಹುಷಃ ಇವೆರಡು ಘಟನೆಗಳು ಭಗತ್ ಸಿಂಗ್ನ  ಮುಂದಿನ ಜೀವನ ದಿಕ್ಕನ್ನು ಬದಲಾಯಿಸಿದವು ಅನ್ನಬಹುದೇನೋ?

ಮತ್ತಷ್ಟು ಓದು »