ಮತ್ತೊಮ್ಮೆ ಕಾರ್ನಾಡ್: ಸಂಸ್ಕೃತಿ ಚಿಂತನೆಯ ಮುಂದಿರುವ ಸವಾಲುಗಳು
ಮೊಬೈಲಿನಲ್ಲಿ ಕನ್ನಡ ಒಂದು ಸರ್ವೇ
-ರವಿ ಸಾವ್ಕರ್
ಸರ್ವೆಯಲ್ಲಿ 564 ಜನರು ಭಾಗವಹಿಸಿದ್ದರು . 31% ಜನರ ಮೊಬೈಲುಗಳಲ್ಲಿ ಕನ್ನಡ SMS ಅನ್ನು ಓದಬಹುದು ಎಂದು ತಿಳಿಸಿದ್ದಾರೆ .
ಒಂದು ಸೋಲಿನ ವೃತ್ತಾಂತ; ಪಾಠ ಕಲಿಯದ ದುರಂತ
-ರಾಕೇಶ್ ಏನ್ ಎಸ್
ಸೋಲು… ಸೋಲು… ಸೋಲು
ಸೋಲು ಅಕ್ಷ್ಯಮ್ಯ, ಅದರಲ್ಲಿಯೂ ಯುದ್ಧಭೂಮಿಯಲ್ಲಿನ ಅಪಜಯಕ್ಕೆ ಕ್ಷಮೆಯೇ ಇಲ್ಲ ಎಂದು ಕೊಂಡಿರುವ ಪರಂಪರೆ ನಮ್ಮದು. ಸೋತವ ಎಂಬ ಹಣೆಪಟ್ಟಿ ಯಾರಿಗೂ ಬೇಡ, ಸೋಲು ಎಂದಿಗೂ ತಬ್ಬಲಿ.
ಸರಿಯಾಗಿ ೫೦ ವರ್ಷಗಳ ಹಿಂದೆ, ಇದೇ ಸಮಯದಲ್ಲಿ ಹಿಮಾಲಯದ ಧವಳಗಿರಿಗಳ ಮಧ್ಯೆ ಭಾರತೀಯರನ್ನು ಅಪ್ಪಿಕೊಳ್ಳಲು ಇಂತಹದ್ದೆ ಒಂದು ಸೋಲು ಹೊಂಚು ಹಾಕಿ ಕುಳಿತಿತ್ತು. ಚೀನಾದ ಕೆಂಪು ಪಡೆ ಹೆದ್ದೆರೆಯೋಪಾದಿಯಲ್ಲಿ ನಡೆಸಿದ ದಾಳಿಗೆ ಗಣತಂತ್ರ ಸ್ವತಂತ್ರ ಭಾರತ ಬೆರಗಾಗಿತ್ತು, ಬೆನ್ನು ಬಾಗಿಸಿ ವಂದಿಸಿ ಸೋತು ಹೋಗಿತ್ತು.
ಭಾರತ ಮತ್ತು ಚೀನಾ ಪ್ರಾಚೀನ ನಾಗರಿಕತೆಗಳ ತವರೂರು. ಹಾಗೆಯೆ ಜಾಗತಿಕರಣಗೊಂಡ ಜಗತ್ತನ್ನು ಹೊತ್ತು ಸಾಗಿಸುವ ಗಾಲಿಗಳು. ಈ ಎರಡು ದೇಶಗಳಿಗೆ ಭೂತ ಮತ್ತು ಭವಿಷ್ಯದಲ್ಲಿರುವ ಪ್ರಾಮುಖ್ಯತೆ ಆಪಾರ. ಆದರೆ ಭಾರತ ಮತ್ತು ಚೀನಾದ ಮಧ್ಯೆ ಹುಟ್ಟಿಕೊಂಡ ಸಂಘರ್ಷದ ಕಾಲಘಟ್ಟ ಬಹಳ ವಿಚಿತ್ರವಾದದ್ದು.
೧೯೫೦ರ ದಶಕದಲ್ಲಿ ಚೀನಾವು ಮಾವೋ ತ್ಸೆತುಂಗ್ನ ತೆಕ್ಕೆಯಲ್ಲಿ ಅಪರಿಮಿತ ವೇಗದ ಅಭಿವೃದ್ಧಿಯ ಕನಸನ್ನು ಹೊಸೆಯುತ್ತಿದ್ದರೆ, ಭಾರತ ಬ್ರಿಟಿಷರಿಂದ ಮುಕ್ತವಾಗಿ ಪ್ರಜಾರಾಜ್ಯದ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದ ಸಮಯ, ಸಂದರ್ಭವದು. ಆಗ ಈ ಎರಡು ದೇಶಗಳಿಗೆ ಯುದ್ಧವೆಂಬ ಹೊರೆ ಬೇಕಾಗಿರಲಿಲ್ಲ.
ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ’ಹಿಂದಿ ಚೀನಿ ಭಾಯಿ ಭಾಯಿ’ ಎಂಬ ಉದ್ಘೋಷವನ್ನು ೧೯೫೦ರ ದಶಕದಲ್ಲಿ ಮುನ್ನೆಲೆಗೆ ತಂದಿದ್ದರು. ತೈವಾನ್ ವಿವಾದದಿಂದಾಗಿ ವಿಶ್ವ ಗುಂಪಿನಲ್ಲಿ ಚೀನಾ ಮೂಲೆಗುಂಪಾದ ಸಂದರ್ಭದಲ್ಲಿ ಅದನ್ನು ಒಂದು ದೇಶವೆಂದು ಪರಿಭಾವಿಸಿ ಅದರೊಂದಿಗೆ ಸ್ನೇಹ ಸಂಬಂಧ ಬೆಳೆಸಿದ ದೇಶಗಳಲ್ಲಿ ಭಾರತವು ಒಂದು. ಇಂತಹ ಮಧುರ ಸಂಬಂಧ ಉತ್ತುಂಗಕ್ಕೇರುತ್ತಲೇ ಪರಸ್ಪರ ಅನುಮಾನದ ಪಾತಳಕ್ಕೆ ಕುಸಿದದ್ದು ಚರಿತ್ರೆಯ ವೈಚಿತ್ರ. ಮತ್ತಷ್ಟು ಓದು 
ಬಿಟ್ಟೇ ಹೋಗುವ ಬೆಂಗಳೂರು ಅರಮನೆ
-ಪ್ರಶಸ್ತಿ ಪಿ ಸಾಗರ
ಬೆಂಗಳೂರು ಅರಮನೆ
ಬೆಂಗಳೂರಲ್ಲಿ ಲಾಲ್ ಬಾಗ್ , ವಿಧಾನ ಸೌಧ, ಕಬ್ಬನ್ ಪಾರ್ಕ್ ಗೊತ್ತು. ಇದೆಲ್ಲಿಂದ ಬಂತಪ ಅರಮನೆ ಅಂದ್ಕಂಡ್ರಾ ? ಮೈಸೂರು ಅರಮನೆ ಬಗ್ಗೆ ಬರೆಯೋಕೆ ಪೀಟಿಕೆ ಹಾಕ್ತಿದೀನಿ ಅಂದ್ಕಂಡ್ರಾ ? ಇಲ್ಲ ಸ್ವಾಮಿ . ನಾ ಹೇಳೋಕೆ ಹೊರಟಿರೋದು ಅರಮನೆ ರೋಡಲ್ಲಿರೋ ಮಹಾರಾಜರ ಬೇಸಿಗೆ ಅರಮನೆ ಬಗ್ಗೆನೇ . ಟಿಪ್ಪು ಅರಮನೆ ಅಂತ ಮಾರ್ಕೆಟ್ ಹತ್ರ ಇದ್ಯಲ ಅಂದ್ರ್ರ ? ಅದ್ರ ಬಗ್ಗೆನೂ.. ಹರಿಕತೇನೆ ನಿಮಗೆ ನಿದ್ದೆ ತರಿಸೋ ಮೊದ್ಲು ಅರಮನೆಗೆ ವಾಪಾಸ್ ಬರೋಣ.
ಹಿಂದಿನ ವಾರ ನಾವು ಗೆಳೆಯರು ಬೆಂಗಳೂರು ಅರಮನೆಗೆ ಹೋಗಿದ್ವಿ .ಮೂರು ಬಣ್ಣದ ರಕ್ಷಕರ ಭದ್ರತೆ ಕಾಣ್ತಿತ್ತು ಹೊರಗಿಂದ . ಗೂಗಲ್ ದೈವ ದಯಪಾಲಿಸಿದ್ದ ಚಿತ್ರಗಳನ್ನ್ನು ನ್ನೋಡಿಯೇ ಕೆರಳಿದ್ದ ನಮ್ಮ ಕುತೂಹಲ ಪೋಲಿಸ್ ಮಾವಂದಿರ ದರ್ಶನದಿಂದ ಇನ್ನು ಹೆಚ್ಚಾಯ್ತು. ಹೊರಗಿನಿಂದಲೂ ಚಿತ್ರ ತೆಗೆಯಕ್ಕೆ ಬಿಡಲಿಲ್ಲ ಅಲ್ಲಿ ಸಿಬ್ಬಂದಿ. ಅದರೂ ಮೊಬೈಲ್ ಕ್ಯಾಮರ ಸಮಾಧಾನಿಸುತ್ತ ಒಳ ಸಾಗಿದ ನಮಗೆ ಮತ್ತೊಂದು ಬೇಸರ ಕಾದಿತ್ತು. ಪ್ರವೇಶ ಶುಲ್ಕ ೨೦೦ ರೂ. ಮೈಸೂರು ಅರಮನೆಯಲ್ಲೂ ನೂರರ ಮೇಲಿಲ್ಲ . ತಾಜಮಹಲ್ , ಕೆಂಪುಕೋಟೆ ಹೀಗೆ ಭಾರತದಲ್ಲೇ ಭಾರತೀಯರಿಗೆ ಎಲ್ಲೂ ಇರದಷ್ಟು ಶುಲ್ಕ ಇಲ್ಲಿ !! ಆದರೆ ಬರೋದು ಬಂದಾಗಿದೆ .ನೋಡ್ಕೊಂಡೆ ಹೋಗೋದು ಅಂತ ತೀರ್ಮಾನ ಮಾಡಿದ್ವಿ. ಗೆಳೆಯರ ಹತ್ರ ಇದ್ದ ಬದ್ದ ದುಡ್ಡೆಲ್ಲ ಗುಡ್ಡೆ ಹಾಕಿ ಅಂತೂ ಒಳಗೆ ಸೇರಿದ್ವಿ. ಅಲ್ಲಿರೋ ಎಲ್ಲದರ ಮಾಹಿತಿ ಇದ್ದ ಆಡಿಯೋ ಗೈಡ ಉಚಿತ ಅನ್ನೋದಷ್ಟೇ ಅವಾಗಿದ್ದ ಸಮಾಧಾನ.
ಮೊದಲ್ನೇ ಜಾಗ ಅಂದ್ರೆ ಮತ್ತೆ ಹೊರಬಾಗಿಲಿಗೆ ಬಂದ್ವಿ. ಈ ಅರಮನೆಯನ್ನು ೧೮೭೩ರಲ್ಲಿ ಕಟ್ಟಲಾಯಿತಂತೆ. ಅದನ್ನು ಕಟ್ಟಿದ ಪರಿ, ಆಗಿನ ರಾಜ ವೊಡೆಯರರ ಮೈಸೂರು ಸಂಸ್ಥಾನದ ಪರಿ, ನೀರಾವರಿಯಿಂದ , ಅಭಿವೃದ್ದಿ ಯೋಜನೆಗಳೆಡೆಗೆ ಸಂಸ್ಥಾನ ಗಮನ ಹರಿಸಿದ ರೀತಿಯನ್ನು ಕೇಳುತ್ತ ಅಭಿಮಾನ ಕನಕಣದಲ್ಲೂ ಉಕ್ಕಿದ ಅನುಭವ. “ಅಪಾರ ಕೀರ್ತಿಯಿಂದ ಮೆರೆವ ದಿವ್ಯ ನಾಡಿದು ” .. ಹಾಡಿನ ಹಿಮ್ಮೇಳ ಕೇಳಿದಂತಾಯ್ತು ಒಮ್ಮೆ . ಮತ್ತಷ್ಟು ಓದು 
ಕೋಳಿಮೊಟ್ಟೆ ನ್ಯಾಯ ಅರಿಯುವ ತುರ್ತಿದೆ
– ಚಕ್ರವರ್ತಿ ಸೂಲಿಬೆಲೆ
‘ಇವನ್ಯಾಕೋ ಏಳು ತಿಂಗಳಿಗೇ ಹುಟ್ಟಿದವನ ಹಾಗೆ ಆಡ್ತಾನಲ್ಲ!’ ಹಾಗಂತ ಹೇಳೋದನ್ನು ಕೇಳಿದ್ದೀರಾ? ಪ್ರತಿಯೊಂದನ್ನೂ ತುರ್ತುತುರ್ತಾಗಿ, ಮುಂದಾಲೋಚನೆ ಇಲ್ಲದೆ ಅರ್ಧಂಬರ್ಧ ಕೇಳಿ ನಿರ್ಣಯ ತೆಗೆದುಕೊಳ್ಳೋರಿಗೆ ಹೇಳುವ ಮಾತು ಇದು. ಕೆಲವೊಮ್ಮೆ ಹೀಗೆ ಮಾಡಿದ ಕೆಲಸಗಳು ತಮಾಷೆಯಾಗಿರ್ತವೆ, ಕೆಲವೊಮ್ಮೆ ಬೋಧಪ್ರದವಾಗಿರುತ್ತವೆ, ಮತ್ತು ಕೆಲವೊಮ್ಮೆ ಭಯಾನಕ ಪರಿಣಾಮವನ್ನೂ ಉಂಟು ಮಾಡುತ್ತವೆ.
ಕುರುಕ್ಷೇತ್ರ ಯುದ್ಧದಲ್ಲಿ ಅಶ್ವತ್ಥಾಮನೆಂಬ ಆನೆ ಸತ್ತಾಗ ಧರ್ಮರಾಯ ಹೇಳಿದ ಮಾತು ಹಾಗೇ ಅಲ್ಲವೆ? ’ಅಶ್ವತ್ಥಾಮೋ ಹತಃ’ ಇಷ್ಟು ಮಾತನ್ನು ಕೇಳುತ್ತಲೇ ಪುತ್ರವ್ಯಾಮೋಹಿಯಾದ ದ್ರೋಣರು ಶಸ್ತ್ರತ್ಯಾಗ ಮಾಡಿ ರಣರಂಗ ಮಧ್ಯದಲ್ಲಿ ಕುಳಿತುಬಿಟ್ಟರು. ಅಲ್ಲೇ ಅವರ ವಧೆಯಾಯಿತು. ’ಕುಂಜರಃ’ ಎಂದು ಹೇಳಿದ್ದನ್ನು ಕೇಳುವ ವ್ಯವಧಾನ ಅವರಿಗಿರಲಿಲ್ಲ, ಅಥವಾ ಬಹುಶಃ ಧರ್ಮರಾಯನೇ ಹೇಳಿದ್ದು ಸರಿಯಾಗಿ ಕೇಳುವಂತಿರಲಿಲ್ಲ.
’ಅಹಿಂಸಾ ಪರಮೋಧಮಃ’ ಎಂಬ ವಾಕ್ಯವನ್ನ ಪದೇಪದೇ ಕೇಳಿದ್ದೇವಲ್ಲ, ಅದೊಂಥರಾ ನಮ್ಮ ಘೋಷ ವಾಕ್ಯ. ಅದರ ಆಧಾರದ ಮೇಲೆಯೇ ರಾಷ್ಷ್ರವನ್ನು ಕಟ್ಟುವ ಭ್ರಮೆಯ ಮೇಲಿದ್ದೇವೆ ನಾವು. ಹಾಗೆನ್ನುತ್ತಲೇ ಬ್ರಿಟಿಷರ ಲಾಠಿಗೆ ಎದೆ ಕೊಟ್ಟೆವು, ಪಾಕಿಸ್ತಾನ ಕಳಕೊಂಡೆವು. ಹಾಗೆನ್ನುತ್ತಲೇ ಚೀನಾಕ್ಕೆ ಸಾವಿರಾರು ಹೆಕ್ಟೇರ್ಗಳಷ್ಟು ಭೂಮಿಯನ್ನು ಬಿಟ್ಟುಕೊಟ್ಟೆವು. ಅಹಿಂಸೆಯ ಆರಾಧನೆ ಮಾಡುತ್ತಲೇ ಕಸಬ್ನನ್ನು ಅಳಿಯನಂತೆ ಗೌರವದಿಂದ ಸಾಕಿಕೊಂಡೆವು. ಆದರೆ ಇದೇ ವಾಕ್ಯದ ಉತ್ತರಾರ್ಧ ’ಧರ್ಮ ಹಿಂಸಾ ತಥೈವ ಚ’ ನಮಗೆ ಕೇಳಿಸಲೇ ಇಲ್ಲ. ಧರ್ಮ ಸ್ಥಾಪನೆಗೋಸ್ಕರ ಹಿಂಸೆ ಮಾಡಿದರೆ ತಪ್ಪಲ್ಲ ಎನ್ನುವುದೂ ಈ ರಾಷ್ಟ್ರದ ಘೋಷ ವಾಕ್ಯವೇ. ಹೀಗಾಗಿಯೇ ಪರಮ ಶಾಂತ, ಧ್ಯಾನ ಸಿದ್ಧರೂ ಹತ್ತು ಕೈಗಳಲ್ಲಿ ಆಯುಧ ಹಿಡಿದ ದೇವಿಯನ್ನೇ ಪೂಜಿಸುವುದು. ಧರ್ಮ, ಶಾಂತಿ, ಹಿಂಸೆಗಳ ಪರಿಧಿಯನ್ನು ಚೆನ್ನಾಗಿ ಅರಿತವನು ಅವನು.
ಜ್ಞಾನಿಗಳಿಗೆ ಸಾವಿಲ್ಲ. ಆದರೆ ಗಡ್ಕರಿ, ದಾವೂದ್ ನಂತಹ ಬುದ್ದಿವಂತರಿಗೆ ಸಾವಿದೆ!
– ಮಹೇಂದ್ರ ಕುಮಾರ್
ಸ್ವಾಮಿ ವಿವೇಕಾನಂದರು ಮತ್ತು ದಾವೂದ್ ಇಬ್ರಾಹಿಂ, ಇಬ್ಬರೂ ಸಮಾನ ಬುದ್ದಿವಂತರು. ಸ್ವಾಮಿ ವಿವೇಕಾನಂದರು ತಮ್ಮ ಬುದ್ದಿವಂತಿಕೆಯನ್ನು ಸದುಪಯೋಗ ಪಡಿಸಿಕೊಂಡರು. ಆದರೆ ದಾವೂದ್ ಇಬ್ರಾಹಿಂ ದುರುಪಯೋಗ ಪಡಿಸಿಕೊಂಡ. ಈ ಹೇಳಿಕೆಯನ್ನು ದೇಶದ ಮಹಾನ್ ರಾಷ್ಟ್ರಭಕ್ತಿಯ ಪ್ರತೀಕ ಎಂದು ಹೇಳಿಕೊಳ್ಳುವ ಭಾರತೀಯ ಜನತಾಪಕ್ಷದ, ಆರ್ ಎಸ್ ಎಸ್ ಗರಡಿಯಲ್ಲಿ ಪಳಗಿ ಏಕಾಏಕಿ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಬಾಯಿಂದ ಉದುರಿರುವ ಅಣಿಮುತ್ತುಗಳು..
ಹೇಳಿಕೇಳಿ ಈತ ದೇಶಭಕ್ತರನ್ನು ಹುಟ್ಟು ಹಾಕುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳು. ಪ್ರತೀ ವರ್ಷ ವಿವೇಕಾನಂದ ಜಯಂತಿಯನ್ನು ಆಚರಿಸುವ ಪಕ್ಷದ ರಾಷ್ಟ್ರನಾಯಕ. ಇಷ್ಟೇ ಅಲ್ಲದೇ ರಾಷ್ಟ್ರೀಯ ಕಾರ್ಯಕಾರಣಿಗಳಿಂದ ಹಿಡಿದು ಸಣ್ಣ ಸಣ್ಣ ಕಾರ್ಯಕ್ರಮಗಳವರೆಗೂ ವಿವೇಕಾನಂದರ ಭಾವಚಿತ್ರಗಳನ್ನು ಬಳಸಿಕೊಳ್ಳುವ ರಾಜಕೀಯ ಪಕ್ಷದ ಮುಂದಾಳು.
ಈ ಹೇಳಿಕೆಯನ್ನು ಕೊಡುವಾಗ ಒಂದೋ ತಲೆ ಕೆಟ್ಟಿರಬೇಕು, ಇಲ್ಲವಾದಲ್ಲಿ ವಿವೇಕಾನಂದರ ಬಗ್ಗೆ ಮತ್ತು ಅವರ ಆದರ್ಶ ಚಿಂತನೆಗಳ ಬಗ್ಗೆ ಯಾವುದೇ ಅರಿವಿಲ್ಲದೇ ಒಬ್ಬ ಸಾದಾರಣ ಇವರ ನಾಯಕರೆಂದು ಭಾವಿಸಿರಬೇಕು.. ವಿವೇಕಾನಂದರ ಬಗ್ಗೆ ಸಣ್ಣ ಅರಿವೂ ನಿತಿನ್ ಗಡ್ಕರಿಗೆ ಇದ್ದಿದ್ದೇ ಆದಲ್ಲಿ ಆತನ ಬಾಯಿಂದ ಈ ಮಾತುಗಳು ಹೊರಬರುತ್ತಿರಲಿಲ್ಲ. ಇವರುಗಳಿಗೆ ಆದರ್ಶ ವ್ಯಕ್ತಿಗಳು ಬಳಕೆಗೆ ಮಾತ್ರಾ…
“ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!
-ರಾಘವೇಂದ್ರ ನಾವಡ
ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತು ಮಾಡಬಾರದು ಎನ್ನುವ ಆಯ್ಕೆ ಮಾತ್ರ ನಮ್ಮದು! ಕೆಲವರು ತಾವು ಬೆಳೆದುಬ೦ದದ್ದನ್ನು ಮರೆಯದೇ ಬೆಳೆದ ನ೦ತರ ಊರವರಿಗೆ ತನ್ನ ಗ್ರಾಮಕ್ಕೆ ಏನನ್ನಾದರೂ ಕೊಡುಗೆಯನ್ನು ನೀಡಬೇಕೆ೦ದು ಬಯಸಿದರೆ, ಏನನ್ನೂ ಮಾಡದಿದ್ದವರು ಇರುವವರಿ೦ದಲೇ ಎಲ್ಲವನ್ನೂ ಕಿತ್ತುಕೊ೦ಡು ತಮ್ಮ ಬೇಳೆ ಬೇಯಿಸಿಕೊಳುತ್ತಾರೆ!
ಎಲ್ಲವುದಕ್ಕಿ೦ತಲೂ ಮುಖ್ಯವಾಗಿ ಒಬ್ಬ ವ್ಯಕ್ತಿ ಸಮಾಜದಲ್ಲಿ ಒ೦ದು ಹ೦ತದಕ್ಕೆ ಮುಟ್ಟಿದನೆ೦ದರೆ ಜನತೆ ಅವರಿ೦ದ ನಿರೀಕ್ಷಿಸುವುದು ಬಹಳಷ್ಟಿರುತ್ತದೆ! ಕೆಲವರು ಆ ನಿರೀಕ್ಷೆಯ ಸಾಫಲ್ಯತೆಗಾಗಿ ಸ್ವಲ್ಪವಾದರೂ ಪ್ರಯತ್ನ ಪಟ್ಟರೆ.. ಇನ್ನು ಕೆಲವರು ನಿರೀಕ್ಷೆಗಳ ಹಿ೦ದೆ ಓಡುತ್ತಾ ತಮ್ಮ ಬದುಕನ್ನು ಗೋಜಲಿನೊಳಗೆ ಸಿಲುಕಿಸಿಕೊಳ್ಳಲು ಇಷ್ಟಪಡುವುದಿಲ್ಲ.. ದೇವರಿಟ್ಟ ಹಾಗೆ ಇರಲಿ! ಎನ್ನುವ೦ತೆ…
ಅದಕ್ಕೆ೦ದೇ ಮಾನವ ಕನಸನ್ನು ಕಾಣಬೇಕು ಎನ್ನುವುದು!.. ಕನಸು ಮು೦ದಿನ ಸಾಧನೆಯ ಹ೦ತಕ್ಕೆ ನಮ್ಮನ್ನು ಕೊ೦ಡೊಯ್ಯುವ ದಾರಿ ದೀಪ. ಕೆಲವರು ಕ೦ಡ ಕನಸಿನ ಬೆನ್ನನ್ನು ಹತ್ತುತ್ತಾರೆ.. ಇನ್ನು ಕೆಲವರು ರಾತ್ರಿ ಕ೦ಡ ಕನಸನ್ನು ಮತ್ತೊಬ್ಬರೊ೦ದಿಗೆ ಚರ್ಚಿಸುತ್ತಾ ಸುಮ್ಮನಿದ್ದು ಬಿಡುತ್ತಾರೆ!
ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!
– ರಾಕೇಶ್ ಶೆಟ್ಟಿ
“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.
ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!
ಯಾವಾಗ ಪಂದ್ಯ ಮುಗಿಯುತ್ತದೆ ಅನ್ನುವುದನ್ನು ವಿಧಿಯೇ ನಿರ್ಧರಿಸಲಿ ಅನ್ನುವುದು ನನ್ನ ಆಸೆ, ನಿನ್ನದು?
– ರಾಕೇಶ್ ಎನ್ ಎಸ್
ಇಷ್ಟೇ ಬರೆದು ಪತ್ರ ವ್ಯವಹಾರ ಶುರು ಮಾಡುವುದು ಪತ್ರ ಸಂಪ್ರದಾಯದ ಉಲ್ಲಂಘನೆ ಅನ್ನುವುದೇನೋ ನಿಜ. ಆದರೆ ನಾನು ಏನುಮಾಡಲಿ? ಯಾವ ಪ್ರಿಫಿಕ್ಸ್,ಸಫಿಕ್ಸ್ ಬಳಸೋದು ಅಂತ ಗೊತ್ತೇ ಆಗುತ್ತಿಲ್ಲ ಮಾರಾಯ್ತಿ. ಕಲ್ಲನ್ನು ಕಲ್ಲು ಎಂದು ಕರೆಯುವುದನ್ನು ಬಿಟ್ಟುಅದಕ್ಕೆ ಯಾವುದೇ ಪ್ರಿಫಿಕ್ಸ್ ಆಥವಾ ಸಫಿಕ್ಸ್ ಸೇರಿಸಿದರೂ ಅದು ತನ್ನ ಗುಣ, ಗುಣಮಟ್ಟ, ಆಕಾರ, ಆಕೃತಿ, ದೃವ್ಯರಾಶಿಗಳಲ್ಲಿ ಕಿಂಚಿತ್ತುಬದಲಾವಣೆ ತಂದು ಕೊಳ್ಳಲಾರದು ಎಂಬುದು ಕಲ್ಲು ಹೃದಯದವಳಾದ (ನೀನೇ ಕರೆದುಕೊಂಡಂತೆ) ನಿನಗೆ ಚೆನ್ನಾಗಿಯೇ ಗೊತ್ತಿದೆ.ನಾನು ನಿನ್ನನ್ನು ಏಕೆ ಗೌರವಿಸುತ್ತಿದ್ದೆ ಎಂದು ಕಾರಣ ಕೊಟ್ಟು ಹೇಳಬಹುದಾದ ಕೆಲವೇ ಕೆಲವು ಕಾರಣಗಳಲ್ಲಿ ಒಂದು ನೀನು stone hearted ಆಗಿದ್ದರೂ ಅದಕ್ಕಿಂತ ಹೆಚ್ಚು strong hearted ಆಗಿದ್ದದ್ದು. ಈ ಕಲ್ಲು ಹೃದಯಕ್ಕು ಗಟ್ಟಿ ಹೃದಯಕ್ಕೂ ಅಂಗ್ಲ ಭಾಷೆಯಲ್ಲಿಎರಡೇ ಎರಡು ಸ್ಪೆಲ್ಲಿಂಗ್ನ ವ್ಯತ್ಯಾಸವಷ್ಟೇ ಇದ್ದರೂ ಕೂಡ ಆ ಎರಡು ಸ್ಪೆಲ್ಲಿಂಗ್ಗಳು ನಮ್ಮ ವ್ಯಕ್ತಿತ್ವ, ವ್ಯವಹಾರ, ನಡೆ ನುಡಿಗಳಲ್ಲಿತರುವ ವ್ಯತ್ಯಯ ಅಪಾರವಾದದ್ದು. ಈ ಸ್ಪೆಲ್ಲಿಂಗ್ ವಿಷಯ ಬಿಟ್ಟು ಬಿಡೋಣ. ಏಕೆಂದರೆ ಈ ಎರಡು ಭಾಷೆಗಳಲ್ಲೂ ’ಅಪಾರ ಪಾಂಡಿತ್ಯ’ಸಂಪಾದಿಸಿರುವ ನಿನಗೆ ನಾನಂತೂ ಏನೂ ಹೇಳಲಾಗದು. “ನನ್ನದು ಏನೇ ಇದ್ದರೂ ಹೇಳಿ ಕೇಳಿ ಮೊದಲೇ ಚೂರು… ಪಾಪಿ ನಾನು”…
ಆದರೂ ನನಗೆ ನನ್ನ ಭಾವ ಮತ್ತು ಜ್ಞಾನ ಪರಿಧಿಯಲ್ಲಿ ಹೊಳೆದ ಒಂದು ಅಂಶವನ್ನು ನಿನ್ನ ಮುಂದೆ ಇಡುತ್ತೇನೆ. ಒಪ್ಪಿಕೊ ಎಂದುಒತ್ತಾಯಿಸಲಾರೆ… ಒಪ್ಪದಿದ್ದರೂ ನಾನೇನು ಕಳೆದುಕೊಳ್ಳಲಾರೆ. ನನ್ನ ಪ್ರಕಾರ ಕಲ್ಲು ಹೃದಯ ಎಂದರೆ ಪಲಾಯನವಾದ. ಯಾವುದೇಸ್ಥಿತಿ, ಪರಿಸ್ಥಿತಿ ಎದುರಾದಗಲೂ ಅದಕ್ಕೆ ಬೆನ್ನು ಹಾಕಿ ಓಡುವುದು. ಉದಾಹರಣೆಗೆ ನಾನು ನಿನಗೆ ಬೈದದ್ದೆ ಆದರೆ ಆಮೇಲೆ ಫೋನ್ರಿಸೀವ್ ಮಾಡದಿರುವುದು, ಮೆಸೆಜ್ಗೆ ರಿಪ್ಲೈ ಮಾಡದಿರುವುದು ಇತ್ಯಾದಿ. ಅದೇ ಗಟ್ಟಿ ಹೃದಯ ಎಂದರೆ ನಾನು ನಿನ್ನಲ್ಲಿ ಅದೇಷ್ಟೆ ಪರಿಪರಿಯಾಗಿ ಪಪ್ಪಿ ಕೇಳಿದ್ದರೂ ಕೂಡ ಅದನ್ನು ಕೊಡದೆ ಆದರೆ ನನ್ನನ್ನು ಕಳೆದುಕೊಳ್ಳದೆ ವ್ಯವಹರಿಸುತ್ತಿದ್ದಿ ಅಲ್ವಾ ಅದು. ಇದರಿಂದ ನಿನ್ನಬಗ್ಗೆ ನನಗಿದ್ದ ಪ್ರೀತಿ ಹೆಚ್ಚೇನು ಆಗಿಲ್ಲ. ಅದು ಆಗಲೂ, ಈಗಲೂ, ಆ ಕ್ಷಣವೂ, ಈ ಕ್ಷಣವೂ ಹಾಗೇ ಇದೆ ಸಾಗರದಂತೆ. ಅದರಸಾಂದ್ರತೆ, ತೀವೃತೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಅದ್ದರಿಂದ ನಾನು ನಿನ್ನಿಂದ ಏನು ನಿರೀಕ್ಷಿಸುತ್ತಿದ್ದೇನೆ ಎಂಬುದನ್ನು ನೀನು ಅರ್ಥಮಾಡಿಕೊಳ್ಳುವಲ್ಲೆ ಸಂಪೂರ್ಣ ಎಡವಿದ್ದಿ ಎಂದು ನನಗನಿಸುತ್ತೆ. ಅದ್ದರಿಂದಲೇ ಈ ಎಲ್ಲ ಸಮಸ್ಯೆ.







