ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

9
ಮೇ

ಡಬ್ಬಿಂಗ್ ಬೇಕೋ ಬೇಡವೋ – ಆನ್ ಲೈನ್ ಸಮೀಕ್ಷೆ

“ಸತ್ಯ ಮೇವ ಜಯತೇ” ಹಿಂದಿ ರಿಯಾಲಿಟಿ ಶೋ `ಕನ್ನಡದಲ್ಲಿ ಡಬ್ಬಿಂಗ್ ಆಗಿ ಬರಬೇಕೋ ಬೇಡವೋ..?

9
ಮೇ

ಗಣಿತ, ವಿಜ್ಞಾನ ಮತ್ತು ಸ್ವತಂತ್ರ ಅಸ್ತಿತ್ವ

-ಬಾಲಚಂದ್ರ ಭಟ್

ಗಣಿತ ಎಂದರೆ ಏನು?ಅಂಕೆ, ಸಂಖ್ಯೆಗಳು ಎಲ್ಲಿಂದ ಬಂತು?ಇವು ನಿಜವೇ? ಗಣಿತದ ಉಗಮ ಮನುಷ್ಯನ ಬುದ್ಧಿ ಸಾಮರ್ಥ್ಯದ ಮುಖಾಂತರ ರೂಪುಗೊಂಡದ್ದೋ ಅಥವಾ ಮನುಷ್ಯನಿಂದ ಹೊರತಾದ ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೋ?

ಬಹುಷಃ ಈ ಪ್ರಶ್ನೆಗಳನ್ನು ಉತ್ತರಿಸುವದು ಸ್ವತಃ ಗಣಿತದಲ್ಲಿ ಅಗಾಧ ಪ್ರತಿಭೆಯನ್ನು ಹೊಂದಿದವರಿಗೂ ಕಷ್ಟ. ಆದರೂ ಹಿಂದಿನ ಕಾಲದ ಅಂದರೆ  ಗ್ರೀಕರ ಕಾಲದ ಪೈಥಾಗೊರಸ್ ನಿಂದ ಹಿಡಿದು ೧೯ ನೆಯ ಶತಮಾನದ ಲಿಯೋಪೋಲ್ಡ್ ಕ್ರೋನೆಕರ್ (Leopold Kronecker) ವರೆಗಿನ ಬಹುತೇಕ ಗಣಿತದ ತಜ್ಞರು ಗಣಿತವು ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೆಂದೂ, ಅಂಕೆ, ಸಂಖ್ಯೆಗಳು ಮಾನವ ನಿರ್ಮಿತವಾಗಿರದೆ ಅವುಗಳು ಸರ್ವಸ್ವತಂತ್ರ ಸತ್ಯ, ನಿತ್ಯಸ್ಥಾಯಿ, ಹಾಗೂ ಮೌಲ್ಯವನ್ನು ಸೂಚಿಸುವ ಆದರ್ಶ ಮಾನ ಎಂದೂ ನಂಬಿದ್ದರು. ಆದರೆ ಅದಕ್ಕಿಂತಲೂ ಮುಖ್ಯವಾಗಿ ಇಂತಹ ಪ್ರಶ್ನೆಗಳು ಗಣಿತಶಾಸ್ತ್ರದ ಪ್ರಕಾರ ಬಹುಷಃ ಅಸಂಬದ್ಧ. ಆದ್ದರಿಂದಲೇ ಇದನ್ನು ಚರ್ಚಿಸುವ ಗೋಜಿಗೆ ಯಾರೂ ಹೋಗಲಿಲ್ಲ. ಆದರೆ ಮನೋವಿಜ್ಞಾನಿಗಳಿಗೆ, ಗಣಿತ ಹಾಗೂ ಅದರ ನಿಯಮಗಳಿಗಿಂತಲೂ ಈ ಮೇಲಿನ ಪ್ರಶ್ನೆಗಳು ಬಹಳ ಮುಖ್ಯ.

ಆದರೆ, ನಿಜಕ್ಕೂಗಣಿತವು ಮಾನವನ ಬುದ್ಧಿಶಕ್ತಿ ಹಾಗೂ ಗ್ರಾಹ್ಯಶಕ್ತಿ(perception) ಯಿಂದ ಹೊರತಾದ ‘ಸ್ವತಂತ್ರ’ ಅಸ್ತಿತ್ವವನ್ನು ಹೊಂದಿಲ್ಲ.  ಅಂಕೆಗಳು, ಸಂಖ್ಯೆಗಳು ಹಾಗೂ ಗಣಿತದ ನಿಯಮಗಳು ಬರೇ ಮಾನವನ ಗ್ರಾಹ್ಯ ಶಕ್ತಿಯಿಂದ ನಿರ್ಮಿತವಾದವು ಮತ್ತು ಮಾನವನ ಗ್ರಾಹ್ಯಶಕ್ತಿಗೆ ಹಾಗೂ ಬುದ್ಧಿ ಶಕ್ತಿಗೆ ತಕ್ಕಂತೆ ಅವು ‘ಸತ್ಯ’ ಅಷ್ಟೆ. ಅಲ್ಬರ್ಟ್ ಐನ್ ಸ್ಟೀನ್ ತಮ್ಮ ಸೊಗಸಾದ ವೈಜ್ಞಾನಿಕ ಭಾಷೆಯಲ್ಲಿ ಹೀಗೆ ಹೇಳುತ್ತಾರೆ ”the series of integers is obviously an invention of the human mind, a self-created tool which simplifies the ordering of certain sensory experiences (ನಿಜವಾಗಿಯೂ ಕ್ರಮಾನುಗತ ಸಂಖ್ಯೆಗಳೆಲ್ಲವೂ ಮಾನವನ ಬುದ್ಧಿಯಿಂದ ರಚಿತವಾದವುಗಳು ಮತ್ತು ಅವುಗಳು ಮನುಷ್ಯನ ಇಂದ್ರಿಯಾನುಭವಗಳ ಅನುಕ್ರಮವನ್ನು ಸುಲಭಗೊಳಿಸಲು ಮಾನವನಿಂದ ಸ್ವ-ನಿರ್ಮಿತವಾದವು)”. ಮನಶ್ಯಾಸ್ತ್ರಜ್ಞರೇ ಹೇಳಿದಂತೆ ಎಷ್ಟು ಸ್ಪುಟವಾಗಿದೆ!

ಮತ್ತಷ್ಟು ಓದು »

8
ಮೇ

ಡಬ್ಬಿಂಗ್ ಅವಶ್ಯಕವೇ?

 ಡಾ ಅಶೋಕ್. ಕೆ. ಆರ್.

ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.
ಡಬ್ಬಿಂಗ್ ಪರವಾಗಿರುವವರು ವಾದಿಸುವುದೆಂದರೆ ‘ ನಾವು ಗ್ರಾಹಕರು. ಏನು ಪಡೆಯಬೇಕು ಎಂಬುದನ್ನು ನಾವು ನಿರ್ಧರಿಸಬೇಕೆ ಹೊರತು ಚಿತ್ರರಂಗದ ಕೆಲವರಲ್ಲ. ಇತರೆ ರಾಜ್ಯದವರು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕಾರ್ಟೂನ್, ಡಿಸ್ಕವರಿ, ಪೋಗೋದಂಥಹ ವಾಹಿನಿಗಳನ್ನು, ಆಂಗ್ಲ ಸಿನಿಮಾಗಳನ್ನು ನೋಡುತ್ತಿರುವಾಗ ನಾವ್ಯಾಕೆ ಪರಭಾಷೆಯಲ್ಲೇ ಅವುಗಳನ್ನು ವೀಕ್ಷಿಸಬೇಕು? ಕನ್ನಡಿಗನಾಗಿ ಹುಟ್ಟಿದ್ದಕ್ಕೆ ಕನ್ನಡದಲ್ಲಿ ಚಿತ್ರ – ವಾಹಿನಿಗಳನ್ನು ವೀಕ್ಷಿಸುವ ಸೌಲಭ್ಯದಿಂದ ವಂಚಿತನಾಗಬೇಕೇಕೆ? ಅರ್ಥವಾಗದ ಭಾಷೆಯ ಸಿನಿಮಾಗಳನ್ನು ನೋಡಿ ಅರ್ದಂಬರ್ಧ ತಿಳಿದುಕೊಳ್ಳುವ ಬದಲು ಡಬ್ಬಿಂಗ್ ಮಾಡಿದರೆ ನನ್ನ ಭಾಷೆಯಲ್ಲೇ ನೋಡಿ ಆನಂದಿಸಿ ಸಂಪೂರ್ಣ ಅರಿತುಕೊಳ್ಳುವುದು ಒಳ್ಳೆಯದಲ್ಲವೇ? ತಮಿಳಿನಲ್ಲೇ ಪೋಗೋ ವೀಕ್ಷಿಸುವ ಹುಡುಗನಿಗೆ ತನ್ನ ಭಾಷೆಯ ಬಗ್ಗೆ ಪ್ರೀತಿ ಬೆಳೆಯುತ್ತದೆಯೇ ಹೊರತು ಅದೇ ಕಾರ್ಯಕ್ರಮಗಳನ್ನು ಇಂಗ್ಲೀಷಿನಲ್ಲಿ ನೋಡುವ ನಮ್ಮ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಬೆಳೆಯಲು ಹೇಗೆ ಸಾಧ್ಯ? ನಮ್ಮ ಹಕ್ಕನ್ನು ಕಸಿದುಕೊಂಡಿರುವ ಚಿತ್ರೋದ್ಯಮದ ಈ ನೀತಿ ಸಂವಿಧಾನಬಾಹಿರ’
ಇನ್ನು ಡಬ್ಬಿಂಗ್ ವಿರೋಧಿಸುವವರು ಮುಂದಿಡುವ ವಾದವೆಂದರೆ ‘ಡಬ್ಬಿಂಗ್ ವಿರೋಧಿ ಚಳುವಳಿಗೆ ದಶಕಗಳ ಇತಿಹಾಸವಿದೆ. ಅನಕೃರಂಥ ಹಿರಿಯ ಲೇಖಕರು ಆರಂಭಿಸಿದ ಈ ಚಳುವಳಿ ರಾಜ್ ಕುಮಾರ್ ರಂಥ ಮೇರು ನಟರ ನೇತೃತ್ವದಲ್ಲಿ ಮುಂದುವರಿದು ಕನ್ನಡ ಚಿತ್ರೋದ್ಯಮದ ಉಳಿವಿನ ದೃಷ್ಟಿಯಿಂದ ಡಬ್ಬಿಂಗ್ ನಿಷೇಧಿಸಲಾಗಿದೆ. ಈ ನಿಷೇಧ ತೆರವುಗೊಳಿಸಿದರೆ ಹೆಚ್ಚು ಬಂಡವಾಳದ ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಕನ್ನಡ ಚಿತ್ರಗಳ ಮಾರುಕಟ್ಟೆಯನ್ನು ಕಿತ್ತುಕೊಳ್ಳುತ್ತದೆ. ಚಿತ್ರೋದ್ಯಮವನ್ನೇ ಅವಲಂಬಿಸಿದ ಜನರ ಹೊಟ್ಟೆಪಾಡಿಗೆ ಚ್ಯುತಿಯುಂಟಾಗುತ್ತದೆ. ಮೇಲಾಗಿ ಪರಸಂಸ್ಕೃತಿ ಬಿಂಬಿಸುವ ಚಿತ್ರಗಳು ಎಂದಿಗೂ ನಮ್ಮವಲಾಗಲಾರವು ಮತ್ತು ನಮ್ಮ ಕನ್ನಡ ಸಂಸ್ಕೃತಿಯನ್ನು ಅವನತಿಗೆ ದೂಡುತ್ತದೆ’ ಮತ್ತಷ್ಟು ಓದು »
8
ಮೇ

ಡಬ್ಬಿಂಗ್ ಆದರೇನು ಶಿವ, ನಮಗೆ ಬೇಕಾಗಿರುವುದು ಎಂಟರ್ಟೇನ್ಮೆಂಟ್… ಎಂಟರ್ಟೇನ್ಮೆಂಟ್…

-ಶ್ರೀಧರ್ ಜಿ ಬನವಾಸಿ

ಕನ್ನಡಿಗರಿಗೆ ಇದಕ್ಕಿಂತ ದೊಡ್ಡ ದೌಭಾರ್ಗ ಇನ್ನೊಂದಿಲ್ಲ. ಬಿಬಿಸಿ, ಡಿಸ್ಕವರಿ, ನ್ಯಾಷನಲ್ ಜಿಯೋಗ್ರಾಫಿಕ್ನಂತಹ ಜಗತ್ತೇ ಮೆಚ್ಚಿದ ಚಾನೆಲ್ಗಳನ್ನು  ಕರ್ನಾಟಕದಲ್ಲಿದ್ದುಕೊಂಡು ತಮಿಳು,  ತೆಲಗು, ಹಿಂದಿ ಭಾಷೆಯಲ್ಲಿ ನೋಡಬೇಕಾದ ಪರಿಸ್ಥಿತಿ ಮಾತ್ರ ಆಗಿರುವುದು ಕನ್ನಡದದವರ ದುರಂತ. ಈ ದುರಂತದ ಅಧ್ಯಾಯಕ್ಕೆ ಕಾರಣವಾಗಿರುವವರು ಕೂಡ ನಮ್ಮ ಕನ್ನಡಿಗರೇ. ಡಬ್ಬಿಂಗ್ ಸಂಸ್ಕೃತಿ ನಮ್ಮ ಕನ್ನಡಕ್ಕಲ್ಲ ಅಂತ ಹೇಳುವ ಕನ್ನಡ ಚಿತ್ರರಂಗದ ಒಂದು ಪ್ರಭಾವಿ ವರ್ಗ ಒಂದು ರೀತಿಯಲ್ಲಿ ತಮ್ಮ ತಮ್ಮ ವೈಯಕ್ತಿಕ ಸ್ವಾರ್ಥಕ್ಕನುಸಾರಕ್ಕಾಗಿ ಡಬ್ಬಿಂಗ್ ಬೇಡ ಅನ್ನುವ ಅಸ್ತ್ರವನ್ನು ಇಂದಿಗೂ ತಮ್ಮಲ್ಲಿ ಇಟ್ಟುಕೊಂಡು ಕನ್ನಡ ಚಿತ್ರೋದ್ಯಮದ ಹಾಗೂ ಮನರಂಜನಾ ಟೀವಿ ಉದ್ಯಮದ ಬೆಳವಣಿಗೆ ಕುಂಠಿತವಾಗಲು ಕಾರಣವಾಗಿದ್ದಾರೆ. ಅಷ್ಟಕ್ಕೂ ಡಬ್ಬಿಂಗ್ ಕನ್ನಡ ಸಂಸ್ಕೃತಿಯಲ್ಲ ಅಂತ ಹೇಳುವವರಿಗೆ, ಮೊದಲು ನಮ್ಮ ಕನ್ನಡ ಸಂಸ್ಕೃತಿ ಏನು ಎಂಬುವನ್ನು ದಯವಿಟ್ಟು ಬಿಡಿಸಿಹೇಳಬೇಕಾಗಿದೆ. ಕನ್ನಡ ಮಣ್ಣಿನ ಸೊಗಡು ಅಂತ ಹೇಳಿಕೊಂಡು ರಿಮೇಕ್ ಚಿತ್ರಗಳು ಹಾಗೂ  ರಿಮೇಕ್ ಧಾರಾವಾಹಿಗಳ ಮೇಲೆ ನೂರಾರು ಕೋಟಿ ರೂಪಾಯಿ ಹರಿದು ಹಾಳಾಗಿ ಕನ್ನಡ ಉದ್ಯಮಶೀಲದ ಬುಡಕ್ಕೆ ದೊಡ್ಡ ಪೆಟ್ಟು ಬೀಳುತ್ತಿರುವುದು, ಇದರ ಜೊತೆಗೆ ಆಗುತ್ತಿರುವ ಅನ್ಯ ಭಾಷೆಯ ಸಂಸ್ಕೃತಿಯ ಹೇರಿಕೆ ಮಾತ್ರ ಡಬ್ಬಿಂಗ್ ವಿರೋಧಿಸುತ್ತಿರವವರಿಗೆ ಕಾಣುತ್ತಿಲ್ಲ.

ಡಬ್ಬಿಂಗ್ ಬಗ್ಗೆ ಈ ಹಿಂದೆ ಅಂದರೆ ಸುಮಾರು ನಾಲ್ಕು ದಶಕಗಳ ಹಿಂದೆ ದೊಡ್ಡ ಹೋರಾಟವಾಗಿದ್ದು ನಿಜಕ್ಕೂ ಒಪ್ಪುವಂತದ್ದು. ಆಗಿನ ಸಮಯದಲ್ಲಿ ಡಬ್ಬಿಂಗ್ ವಿರುದ್ಧ ಹೋರಾಟ ಆಗಿಲ್ಲದಿದ್ದರೆ ಈಗಿನ ನಮ್ಮ ಕನ್ನಡ ಚಿತ್ರರಂಗವನ್ನು ನಾವು ಕಲ್ಪಿಸಿಕೊಳ್ಳುವುದು ಕೂಡ ಕಷ್ಟ ಸಾಧ್ಯ.  ವರನಟ ಡಾ.ರಾಜ್ಕುಮಾರ್ ಸಾರಥ್ಯದಲ್ಲಿ ಕನ್ನಡ ಚಿತ್ರರಂಗ ಹಾಗೂ ಅನಕೃ ಅವರ ನೇತೃತ್ವದಲ್ಲಿ ಸಾಹಿತ್ಯವಲಯ ಒಟ್ಟಾಗಿ ಅಂದು ದೊಡ್ಡ ಹೋರಾಟ ಮಾಡಿದ್ದವು. ಆಗಿನ ಡಬ್ಬಿಂಗ್ ಹೋರಾಟಕ್ಕೆ ನೂರಕ್ಕೆ ನೂರರಷ್ಟು ಅರ್ಥ ಇತ್ತು. ಆಗಿನ ಪರಿಸ್ಥಿತಿ ಕೂಡ ಹೋರಾಟಕ್ಕೆ ಪೂರಕವಾಗಿತ್ತು. ಇದಕ್ಕೆ ನೀಡುವ ಕಾರಣಗಳನ್ನು ಕೂಡ ಪಟ್ಟಿಮಾಡುವುದಾದರೆ,  ಅಂದು ಸಿನಿಮಾ ಹಾಗೂ ಕನ್ನಡ ಸಾಹಿತ್ಯ ಒಂದೇ ನಾಣ್ಯದ ಮುಖಗಳಾಗಿದ್ದವು. ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳು ಸಿನಿಮಾ ಉದ್ಯಮದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದರು. ಹಾಗಾಗಿಯೇ ಅಂದಿನ ಕನ್ನಡ ಸಿನಿಮಾಗಳಲ್ಲಿ ದ.ರಾ.ಬೇಂದ್ರೆ, ಶಿವರಾಮಕಾರಂತ, ಕುವೆಂಪು, ತ್ರಿವೇಣಿ, ಅನಕೃ, ತರಾಸು, ಎಸ್.ಎಲ್.ಭೈರಪ್ಪ, ಯು.ಆರ್.ಅನಂತಮೂರ್ತಿ, ಎಂ.ಕೆ.ಇಂದಿರಾ, ಆಲನಳ್ಳಿ ಕೃಷ್ಣ, ಪಿ.ಲಂಕೇಶ್, ರಾಮರಾಯರು, ಗಿರಡ್ಡಿ ಗೋವಿಂದರಾಜು ಇನ್ನು ಹಲವಾರು ಸಾಹಿತಿಗಳ ಕೃತಿಗಳು ಕನ್ನಡ ಸಿನಿಮಾ ಉದ್ಯಮಕ್ಕೆ ಉಸಿರಾಗಿದ್ದವು. ಅಕಸ್ಮಾತ್ ಬೇರೆ ಭಾಷೆಯ ಸಿನಿಮಾಗಳನ್ನು ಡಬ್ಬಿಂಗ್ ಮಾಡಿ ಬಿಡುವುದರಿಂದ ಮೂಲ ಕನ್ನಡ ಕೃತಿಗಳನ್ನು ಬಳಸಿಕೊಳ್ಳಲು ಆಗುವ ತೊಡಕನ್ನು ಮನಗಂಡು ಡಬ್ಬಿಂಗ್ಗೆ ಸಾಹಿತ್ಯವಲಯದ ಕಡೆಯಿಂದ ಬೆಂಬಲ ಸಿಕ್ಕಿತ್ತು. ಕನ್ನಡ ಚಿತ್ರರಂಗ ಆಗಿನ್ನೂ ಮದ್ರಾಸ್ ಪ್ರಾಂತ್ಯದಲ್ಲಿ ನೆಲೆಯೂರಿದ್ದರಿಂದ ಕನ್ನಡ ಸಿನಿಮಾಗಳ ನಿರ್ಮಾಣವೇ ದೊಡ್ಡ ಸವಾಲಾಗಿತ್ತು. ವರ್ಷಕ್ಕೆ 40-50 ಕನ್ನಡ ಸಿನಿಮಾಗಳು  ನಿರ್ಮಾಣವಾದರೆ ಹೆಚ್ಚಾಗಿತ್ತು,  ನಿರ್ಮಾಣವಾದ ಈ ಅಷ್ಟೂ ಸಿನಿಮಾಗಳಲ್ಲಿ ಹೆಚ್ಚಿನವರು ಪರಭಾಷಾ ತಂತ್ರಜ್ಞರು,  ನಿರ್ಮಾಪಕ, ನಿರ್ದೇಶಕರಿಗೇನೆ ಹೆಚ್ಚೆಚ್ಚು ಕೆಲಸ ಸಿಗುತ್ತಿತ್ತು. ತಂತ್ರಜ್ಞರಿಗೆ ಅಗಾಧ ಬೆಲೆ ಇದ್ದ ಸಂದರ್ಭದಲ್ಲಿ ವಿಶೇಷವಾಗಿ ಕರ್ನಾಟಕದಲ್ಲಿ ಸಿನಿಮಾ ತಂತ್ರಗಾರಿಕೆ ಹಾಗೂ ನೈಪುಣ್ಯತೆಯ ವಿಷಯ ಬಂದಾಗ ಕನ್ನಡಿಗರು ಅವಕಾಶ ವಂಚಿತರಾಗಿದ್ದರು. ಅಂದು ಕರ್ನಾಟಕದಲ್ಲಿ ಸಿನಿಮಾಭಾಷೆಯನ್ನು ಕಲಿಸುವಂತಹ ತರಬೇತಿ ಸಂಸ್ಥೆಗಳು, ಸ್ಟುಡಿಯೋಗಳು ಯಾವುವು ಇಲ್ಲಿರಲಿಲ್ಲ.
ಇಂತಹ ಸಂದರ್ಭದಲ್ಲಿ ಕನ್ನಡ ಸಿನಿಮಾ ಉದ್ಯಮವೇ ಪರಭಾಷಾದವರ ಹಿಡಿತಕ್ಕೆ ಬಂದು, ಬೇರೆ ಭಾಷೆಯ ಸೂಪರ್ಹಿಟ್ ಸಿನಿಮಾಗಳನ್ನು ಕನ್ನಡಕ್ಕೆ ಬಿಡುವಂತಹ ಪರಿಸ್ಥಿತಿ ಬಂದ ಸಂದರ್ಭದಲ್ಲಿ ಕನ್ನಡ ಕಲಾವಿದರು ಈ ಬಂಧನ ಹಾಗೂ ತಮ್ಮ ಅಸ್ತ್ತಿತ್ವವನ್ನು ಉಳಿಸಿಕೊಳ್ಳಲೇಬೇಕಾದ ಪರಿಸ್ಥಿತಿ ಅಂದಿತ್ತು. ಇದೆಲ್ಲಾ ಡಬ್ಬಿಂಗ್ ಹೋರಾಟಕ್ಕೆ ಅಂದು ದೊಡ್ಡ ಕಾರಣವಾಗಿತ್ತು. ಆದರೆ ಇಂದು ನಮ್ಮ ಕನ್ನಡ ಚಿತ್ರರಂಗ ಆ ತರಹದ ಪರಿಸ್ಥಿತಿಯನ್ನು ಎದುರಿಸುತ್ತಿದೆಯೇ? ಕನ್ನಡ ಚಿತ್ರರಂಗದಲ್ಲಿ ಇಂದು ವರ್ಷಕ್ಕೆ ನೂರಕ್ಕೂ ಹೆಚ್ಚು ಸಿನಿಮಾಗಳು  ನಿರ್ಮಾಣವಾಗುತ್ತಿವೆ. ಇಂದು ತಾಂತ್ರ್ರಿಕವಾಗಿ ಬೇರೆ ಭಾಷೆಯವರಷ್ಟೇ ನಾವು ಮುಂದುವರೆದಿದ್ದೇವೆ. ಸ್ವಂತ ಸ್ಟುಡಿಯೋಗಳಿವೆ, ವರ್ಷಕ್ಕೆ 400 ರಿಂದ 500 ಕೋಟಿ ರೂಪಾಯಿಗಳು ಕನ್ನಡ ಚಿತ್ರರಂಗದಲ್ಲಿ ಒಳ ಹಾಗೂ ಹೊರಹರಿವು ಆಗುತ್ತಿದೆ. ಇದೆಲ್ಲಾ ಕನ್ನಡ ಚಿತ್ರರಂಗದ ಬೆಳವಣಿಗೆಯನ್ನು ಎತ್ತಿಹಿಡಿಯುತ್ತದೆ. ಬೇರೆ ಭಾಷೆಯಲ್ಲೂ  ಇದೇ ಪರಿಸ್ಥಿತಿ ಇದೆ. ಅವರೆಲ್ಲ ಡಬ್ಬಿಂಗ್  ಉದ್ಯಮವನ್ನು ಒಪ್ಪಿಕೊಂಡು ಬದುಕುತ್ತಿಲ್ಲವೇ?

ಮತ್ತಷ್ಟು ಓದು »

7
ಮೇ

ಅವಿವೇಕಿ ಮಿತ್ರನಿಗಿಂತ ವಿವೇಕಿ ಶತ್ರು ಮೇಲು

ಪವನ್ ಪಾರುಪತ್ತೇದಾರ

ಪ್ರವೀಣ ಓದೋ ವಿಷಯದಲ್ಲಿ ಯಾವಾಗ್ಲೂ ಸೋಂಬೇರಿ,ಅಪ್ಪ ಅಮ್ಮ ಎಷ್ಟು ಬೈದರೂ ತನ್ನ ಲೋಕದಲ್ಲೇ ಮಗ್ನ, ಸ್ನೇಹಿತರ ಜೊತೆ ಯಾವಾಗ್ಲೂ ತಿರುಗಾಡೋದು, ಅಪ್ಪ ಅಮ್ಮನ ಹತ್ರ ಹಣ ತೆಗೆದುಕೊಂಡು ಸಿನಿಮಾ ನೋಡೋದು, ಭಾನುವಾರ ಬಂದ್ರೆ ಸಾಕು ಬೆಳಿಗ್ಗೆ ಇಂದ ಸಂಜೆಯವರೆಗೂ ಬೆಟ್ಟಿಂಗ್ನಲ್ಲಿ ಕ್ರಿಕೆಟ್ ಆಡೋದು ಇದೇ ಕೆಲಸ, ಅಪ್ಪ ಅಮ್ಮನಿಗೂ ಬುದ್ಧಿ ಹೇಳಿ ಹೇಳಿ ಸುಸ್ತಾಗಿತ್ತು. ಹುಡುಗ್ರ ಸಹವಾಸ ಬರೀ ಆಡುವುದಕ್ಕೆ ಸೀಮಿತವಾಗದೆ ದುಶ್ಚಟಗಳ ಕಡೆಯೂ ಸಹ ವಾಲಿತ್ತು. ಮನೆಗೆ ಬಂದಾಗ ಒಮ್ಮೆ ಧೂಮಪಾನದ ಘಮಲು ಅಮ್ಮನ ಮೂಗು ಬಡಿದಿತ್ತು. ಆಗಾಗ ಅಪ್ಪನ ಜೇಬಿನಿಂದ ನೋಟುಗಳು ಸಹ ಕಾಣೆಯಾಗುತಿದ್ದವು. ಅಪ್ಪ ಅಮ್ಮ ಇಬ್ಬರು ಚರ್ಚಿಸಿ ಏನು ಮಾಡುವುದು ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದರು.

ಮರುದಿನ ಭಾನುವಾರ ಪ್ರವೀಣ ಎಂದಿನಂತೆ ಹೇಳದೆ ಕೇಳದೆ ಕ್ರಿಕೆಟ್ ಆಡಲು ಹೊರಟು ಬಿಟ್ಟ, ಅಪ್ಪ ಅಮ್ಮ ಸೀದ ಅವರಪ್ಪನ ಮನೆಗೆ ಹೋಗಿ ಪ್ರವೀಣನ ತಾತನನ್ನು ಕರೆ ತಂದರು. ತಾತನಿಗೆ ವಯಸ್ಸು ಸುಮಾರು ೭೦ ಆಗಿದ್ದರು ಬಹಳ ಚುರುಕು, ಕಾಲ ಕಾಲಕ್ಕೆ ತಾನು ಸಹ ಬದಲಾಗಿದ್ದಂತಹ ಘಾಟಿ ಮುದುಕ. ಕಂಪ್ಯೂಟರ್, ಕ್ರಿಕೆಟ್, ಸಿನಿಮಾ ಎಲ್ಲಾದ್ರಲ್ಲು ಎತ್ತಿದ ಕೈ. ಕ್ರಿಕೆಟ್ ಆಡಲು ಹೋಗಿದ್ದ ಪ್ರವೀಣ ಎಂದಿನಂತೆ ಮನೆಗೆ ಬಂದ, ಬಂದೊಡನೆ ತಾತನನ್ನು ನೋಡಿ ಆಶ್ಚರ್ಯ ಚಕಿತನಾದ, ತಾತನ ಕಾಲಿಗೆ ನಮಸ್ಕಾರ ಮಾಡೋ ಅಂತ ಅಪ್ಪ ಹೇಳೋ ತನಕ ಇವ್ನಿಗೆ ತೋಚಲಿಲ್ಲ, ಮಾಡ್ತೀನಿ ಕೈ ಕಾಲು ತೊಳ್ಕೊಂದು ಬಂದೆ ಅಂತ ಸ್ನಾನದ ಮನೆಗೆ ಹೋಗಿ ಟೂತ್ ಪೇಸ್ಟ್ ನ ಒಂದಷ್ಟು ಬಾಯಿಗೆ ಹಾಕಿಕೊಂಡು ಮುಕ್ಕಳಿಸಿ ಬಂದ, ಬಂದೊಡನೆ ನಮಸ್ಕಾರ ಮಾಡಿದಾಗ ತಾತನಿಗೆ ಧೂಮಪಾನದ ಘಮಲು ತಿಳಿದು ಬಿಡ್ತು. ಅದೂ ಅಲ್ದೆ ಮೊದಲೇ ಪ್ರವೀಣನ ಅಪ್ಪ ಅಮ್ಮ ತಮ್ಮ ಮಗ ದಾರಿ ತಪ್ತಾ ಇದ್ದಾನೆ ಅನ್ನೋ ವಿಷಯ ಬೇರೆ ಮೊದಲೇ ಹೇಳಿದ್ರು. ವಿಷಯ ಗೊತ್ತಾದ್ರು ತಾತ ಮುಗುಮ್ಮನೆ ಇದ್ದರು.

ಮಾರನೆ ದಿನ ಪ್ರವೀಣ ಕಾಲೇಜಿಗೆ ಅಂತ ಹೊರಟಾಗ, ತಾತ ಸಹ ತಯಾರಾಗಿ ಮೊಮ್ಮಗನೊಂದಿಗೆ ಹೊರಡಲು ಸಿದ್ದರಾಗಿದ್ದರು, ಪ್ರವೀಣ ತಾತ ಹಾಗೆಲ್ಲ ನಿಮ್ಮನ್ನ ಕಾಲೇಜಿಗೆ ಬಿಡಲ್ಲ, ಬಹಳಾ ಶಿಸ್ತು ಅಲ್ಲಿ ಅಂತೆಲ್ಲ ಹೇಳ್ದ, ಅದಕ್ಕೆ ತಾತ ನಾ ನೋಡದೇ ಇರೋ ಕಾಲೇಜೇನೋ ಅದು, ನೀನ್ ಓದ್ತಾ ಇರೋ ಕಾಲೇಜು ನನ್ನ ಫೇಸ್ಬುಕ್ ಗೆಳೆಯ ಪ್ರಕಾಶ್ ರಾಜು ದು, ಅವರು ನಾನು ಇಲ್ಲಿಗೆ ಬಂದಿರೋ ಸ್ಟೇಟಸ್ ನೋಡಿದ್ರಂತೆ, ಫೋನ್ ಮಾಡಿದ್ರು ಅದಕ್ಕೆ ಬರ್ತಾ ಇದ್ದೀನಿ ಅಂತ ಪ್ರವೀಣಂಗೆ ಒಳ್ಳೆ ಟಾಂಗ್ ಕೊಟ್ಟ್ರು. ಪ್ರವೀಣನ ಮೊಬೈಲ್ ಗೆ ಅವನ ಗೆಳೆಯನ ಫೋನ್ ಬಂತು, ಏನ್ ಮಗಾ ಸಿನಿಮಾಗೆ ಟಿಕೆಟ್ ತೊಗೊಂಡು ಕಾಯ್ತಾ ಇದ್ದೀವಿ ಎಲ್ಲಿದ್ಯ ಇನ್ನ?? ಪ್ರವೀಣ,ತಾತನ ಜೊತೆ ಇದ್ದೀನಿ ಮಗಾ ಆಮೇಲೆ ಫೋನ್ ಮಾಡ್ತೀನಿ ಅಂದ. ಫೋನ್ ಕಟ್ ಆದ ಮೇಲೆ ತಾತ ಕೇಳಿದ್ರು ಏನು ಸಿನಿಮಾಗೆ ಹೋಗ್ಬೇಕ ಅಂತ, ಅದಕ್ಕೆ ಪ್ರವೀಣ ಹೌದು ನಿಮಗೆ ಹೇಗೆ ಗೊತ್ತಾಯ್ತು ತಾತ ಅಂದ, ಅದಕ್ಕೆ ರಾತ್ರಿ ನೀನು ನಿನ್ನ ಗೆಳೆಯನ ಜೊತೆ ಫೋನಲ್ಲಿ ಮಾತಾಡ್ತಾ ಇದ್ದಲ್ಲ ಆಗ ಕೇಳಿಸ್ತು ನಂಗೆ ಅಂದ್ರು. ಆದ್ರೆ ಕಾಲೇಜಿಗೆ ಚಕ್ಕರ್ ಹೊಡೆದು ಸಿನಿಮಾ ನೋಡೋದು ತಪ್ಪಲ್ವ ಅಂದ್ರು. ಪ್ರವೀಣನಿಗೆ ಉತ್ತರ ಕೊಡಲು ಆಗ್ಲಿಲ್ಲ, ಕಡೆಗೆ ತಾತ, ನಿನ್ ಸ್ನೇಹಿತನಿಗೆ ಫೋನ್ ಮಾಡಿ ಹೇಳು ನನಗೂ ಒಂದು ಟಿಕೆಟ್ ತೊಗೊ ಅಂತ ನಾನು ಬರ್ತೀನಿ ಅಂದ್ರು. ಪ್ರವೀಣನಿಗೆ ಒಂದು ಕಡೇ ಖುಷಿ ಆಯ್ತು ಮತ್ತೆ ಭಯ ಸಹ ಆಯ್ತು ಮನೇಲಿ ಹೇಳಿಬಿಟ್ರೆ ಅಂತ ಅಷ್ಟ್ರಲ್ಲಿ ತಾತ, ನೀನೇನು ಯೋಚಿಸ ಬೇಡ ಮನೇಲಿ ನಾ ಏನು ಈ ವಿಷಯ ತಿಳಿಸಲ್ಲ ಅಂದಾಗ ಸ್ವಲ್ಪ ಸಮಾಧಾನ ಆಯ್ತು.

ಮತ್ತಷ್ಟು ಓದು »

7
ಮೇ

ನಂದಿ ಬೆಟ್ಟ ಟ್ರಿಪ್ -೧

– ಪ್ರಶಸ್ತಿ.ಪಿ, ಸಾಗರ

ಪೂರ್ವ ಕತೆ:

ಬೆಂಗಳೂರಿಗೆ ಬಂದು ಪೀಜಿ ಹಿಡ್ದಾಗಿನಿಂದ ವಾರಾಂತ್ಯದಲ್ಲಿ ಎಲ್ಲೂ ಸುತ್ಲಿಲ್ಲ ಅಂದ್ರೆ ಏನೋ ಮಿಸ್ಸಿಂಗು, ಬೋರಿಂಗು ಅನ್ಸೋಕೆ ಶುರು ಆಗತ್ತೆ. ಮಾಡಕ್ಕೆ ಬೇರೆ ಕೆಲ್ಸ ಇಲ್ಲದೇ ಸುತ್ತೋದು ಅಂತೇನೂ ಅಲ್ಲ..ಆದ್ರೆ ಯಾಕೋ ಗೊತ್ತಿಲ್ಲ “ದೇಶ ಸುತ್ತು, ಕೋಶ ಓದು ಅಂತಾರಲ್ಲ”. ಅದರಲ್ಲಿ ೨ನೇದೇ ಸ್ವಲ್ಪ ಇಷ್ಟ ಆಗ್ತಿತ್ತು ನಂಗೆ. ಹಿಂಗಿರೋವಾಗ ಬೆಂಗಳೂರಲ್ಲೇ ಇದ್ದು ನಂದಿ ಬೆಟ್ಟಕ್ಕೆ ಹೋಗಿಲ್ಲ ಅಂದ್ರೆ ಹೆಂಗೆ ಅಂತ ಅನ್ಸಿಬಿಡ್ತು ಒಂದು ವಾರ. ಕೆಲ ತಿಂಗಳ ಹಿಂದೆ ಹರೀಶಣ್ಣ ಮತ್ತು ತಂಡದವ್ರು ಹೋಗಿದ್ದ ಫೋಟೋ ನೋಡಿ ನಾನೂ ಹೋಗ್ಬೇಕಿತ್ತು, ಛೆ , ಅಂತ ಆಸೆ ಆಗಿದ್ದೂ ಸುಳ್ಳಲ್ಲ.       ಸರಿ ಅಂತ ಮುಂದಿನ ಶನಿವಾರಕ್ಕೆ ಅಲ್ಲಿಗೇ ಹೋಗದು ಅಂತ ಫಿಕ್ಸ್ ಮಾಡಿ ಸ್ವಲ್ಪ ಚೇಂಜ್ ಇರ್ಲಿ ಅಂತ FB ಲೊಂದು Event ಮಾಡಿಕರಿದ್ವಿ..೨-೩ ದಿನ ಆದ್ರೂ ಪ್ರತಿಕ್ರಿಯೆ ನೋಡಿ ಕೂಸು ಹುಟ್ಸಕ್ಕೆ ಮುಂಚೇನೆ ಕುಲಾವಿ ಹೊಲ್ಸಿದ್ವಾ ಅಂತನೇ ಅನಿಸ್ತಿತ್ತು. ಕೊನೆಗೆ ಗುರುವಾರ, ಮತ್ತೆ ತಕಾ ಅಂತ ಬೆಂದಕಾಳೂರ ಸೆಕೇಲಿ ಬೆಂದು ಶನಿವಾರ ಮಧ್ಯಾಹ್ನದವರ್ಗೆ ಪಾಚ್ಕೊಳೋಕೆ(ಮಲ್ಗೋಕೆ!!) ಸ್ಕೆಚ್ ಹಾಕಿದ್ದ ಗೆಳೆಯರಿಗೆಲ್ಲಾ ಮೆಸೇಜಾಯ ನಮಃ ಅಂದಾಯ್ತು. ಕೆಲೋರು ಬರ್ತೋನಿ ಅಂದ್ರು. ಕೆಲೋರು ಪ್ರತೀ ಸಲದಂಗೇ ಕೈಯತ್ತಿದ್ರು. ಕೆಲೋರು ಸರಿ ಮಚಾ, ಶುಕ್ರವಾರ ರಾತ್ರೆ ಹೇಳ್ತೀನಿ ಅಂದ್ರು. ಇಲ್ಲಾ ಮಗಾ ಊರಿಗೆ ಹೋಗ್ಬೇಕು, ಸೋರಿ ಕಣೋ ಅಲ್ಲಿಗೆ ಹೋಗ್ಬೇಕು, ಮುಂಚೇನೆ ಪ್ಲಾನ್ ಆಗ್ಬಿಟ್ಟಿದೆ ಅವನನ್ನ ಮೀಟ್ ಮಾಡ್ಬೇಕು ಅನ್ನೋ ತರಾವರಿ ಉತ್ರಗಳೂ ಬಂದ್ವು. ಒಂದು ವರ್ಷ ಮುಂಚೆ ಪ್ಲಾನ್ ಮಾಡಿದ್ರೂ ಇದೇ ಕತೆ ಬಿಡೋ .. ಕರ್ಮ ಅಂತ ಒಂದ್ಸಲ ಬೇಜಾರ್ ಮಾಡ್ಕಂಡ ಫ್ರೆಂಡು..ಎಲ್ಲಾದ್ರೂ ಬಿಟ್ ಹೋದ್ರೆ ನನ್ಯಾಕೆ ಕರ್ದಿಲ್ಲ ಅಂತ ಹಿಗ್ಗಾಮುಗ್ಗಾ ಜಾಡಿಸೋ ಇವ್ರುಗಳ್ನ ಎಲ್ಲಿಗಾದ್ರೂ ಬರ್ತೀರ  ಕರದ್ರೆ ಇದೇ ಗೋಳು ಕಣ್ಲಾ ಅಂದ ಗೆಳೆಯ. ಕೊನೆಗೆ ಆ ಮೆಸೇಜು ಎಲ್ಲೆಲ್ಲೋ ತಿರ್ಗಿ ತಿರ್ಗಿ, ಯಾರ್ಯಾರೋ ಎಲ್ಲ ಕೇಳಂಗೆ ಆಗಿ ನಿರೀಕ್ಷೆನೇ ಮಾಡ್ದೇ ಇದ್ದ ಹಳೇ ಗೆಳೆಯರೆಲ್ಲಾ ಸಿಕ್ಕು ಒಟ್ಟು ೮ ಜನ ಬೆಟ್ಟ ಹತ್ತೋ ಭೂಪರು ರೆಡಿ ಆದ್ವಿ ಅನ್ನಿ ಕೊನೆಗೆ 🙂

ನಂದಿ ಬೆಟ್ಟ ಬೆಳಗಿಂದು , ಸ್ಕಂದ ಗಿರಿ ರಾತ್ರೀದು ಅಂದಿದ್ದ ಗೆಳೆಯ ವಿಶು. ಬೆಳ ಬೆಳಗ್ಗೆ ೪:೩೦ ಗೆ ಅಲ್ಲಿಗೆ ಹೋಗಿದ್ವಿ. ಏನು ಚಂದಾ ಇತ್ತು ಅನ್ನಿ. ಮಂಜು ಬೀಳೋದು ನೋಡೋದೇ ಸ್ವರ್ಗ ಅನ್ನೋ ತರ ಅಲ್ಲಿಗೆ ಹೋದ ಬ್ಲಾಗ್ ಗೆಳೆಯ ಒಬ್ಬ ಬರ್ಕೊಂಡಿದ್ದ. ಆದ್ರೆ ಅಷ್ಟು ಮುಂಚೆ, ಅದೂ ವಾರಾಂತ್ಯದ ಶನಿವಾರ ಗೆಳೆಯರನ್ನ ಹೊರಡ್ಸೋ ಸೀನೇ ಇರ್ಲಿಲ್ಲ. ಸರಿ ಅಂತ ೭:೩೦ ಗೆ ಹೊರಡೋದು ಅಂತ ಅಂದ್ವಿ. ಎರ್ಲನ್ನೂ ಸೇರಿಸ್ಕಂಡು ಅಲ್ಲಿಗೆ ಹೋಗಿದ್ದನ್ನ ಬರದ್ರೆ ಅದೇ ಒಂದು ಲೇಖನ ಆಗ್ಬೋದು. ಈಗಾಗ್ಲೇ ಈ ಲೇಖನ ಓದಕ್ಕೆ ಯಾಕೆ ಶುರು ಮಾಡಿದ್ನೋ ಅಂತ ಬೋರು ಹೊಡೆದು ಪೇಜು ಬಿಡೋಕೆ ಪ್ಲಾನ್ ಮಾಡ್ತಿರಬಹುದಾದ ನಿಮಗೆಲ್ಲಾ ಇನ್ನೂ ಕೊರೆಯದೇ ನಂದಿ ಬೆಟ್ಟದ ನಿಜವಾದ ಅನುಭವಕ್ಕೆ ಬರ್ತೀನಿ.

ಮತ್ತಷ್ಟು ಓದು »

2
ಮೇ

ಕನ್ನಡಿಗನಿಗೆ ಕನ್ನಡಿಗನೇ ಸಾರಥಿ

– ಪವನ್ ಪಾರುಪತ್ತೇದಾರ

ಮೊನ್ನೆ ಬಹಳಾ ದಿನಗಳಾದ ಮೇಲೆ ಭಟ್ಟ ಫೋನ್ ಮಾಡಿದ್ದ, ನಾನು ತುಂಬಾ ಸಾರಿ ಅವ್ನಿಗೆ ಫೋನ್ ಮಾಡಿದ್ದೆ ಆದ್ರು ರಿಸೀವ್ ಮಾಡಿರ್ಲಿಲ್ಲ, ನಾ ಫೋನ್ ಎತ್ತಿದೊಡನೆ ಲೇ ಡಿ ಕೇ ಬೋಸ್, ಎಲ್ಲಿ ಹಾಳಾಗೋಗಿದ್ಯ ಅಂದೆ. ಒಂದು ಫೋನ್ ರಿಸೀವ್ ಮಾಡ್ಲಿಕ್ಕಾಗಲ್ವ ಅಂತ ಬೈದೆ, ಏನ್ ಮಾಡೋದು ಮಗಾ ಕೆಲಸ ಸಿಕ್ಕಾಪಟ್ಟೆ ಕಷ್ಟ ಐತಿ, ನಿಲ್ಲಂಗಿಲ್ಲ ಕೂರಂಗಿಲ್ಲ, ಮಕ್ಳು ಬಿಡೋಂಗೆ ಇಲ್ಲ, ಭಾರಿ ಕಷ್ಟ್ ಕೊಡ್ತಾರೆ ಅಂದ, ನಾನು ಸರಿ ಮಗನ ಅಂತ ಕಷ್ಟದ್ ಕೆಲ್ಸ ಏನ್ಲೆ ಮಾಡ್ತಿದ್ಯ ಅಂದೆ, ಆಗ ಭಟ್ಟನ ಉತ್ತರ ಕೇಳಿ ಮನಸ್ಸಿಗೆ ಬಹಳಾ ನೋವಾಯ್ತು, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪ್ರಥಮ ದರ್ಜೆಯಲ್ಲಿ ಮುಗಿಸಿದ್ದ ಭಟ್ಟ, ವೆಂಟಿಲೇಶನ್ ರಿಪೇರಿ ಮಾಡುವ ಕೆಲಸ ಮಾಡುತಿದ್ದ, ಅವನೇ ಹೇಳಿದ ಪ್ರಕಾರ, ವೆಂಟಿಲೇಶನ್ ಕೆಲಸ ಇಲ್ದೆ ಇದ್ರೆ ಅವರ ಕಂಪನಿಯ ಆಫೀಸ್ ಬಾಯ್ ಕೂಡ ಅವನೆ, ಆ ಬ್ಯಾಂಕಿಗೆ ಹೋಗಿ ಚೆಕ್ ಹಾಕಿ ಬಾ, ಅಲ್ಲೆಲ್ಲೋ ಹೋಗಿ ಆರ್ಡರ್ ಕಾಪಿ ತೆಗೆದುಕೊಂಡು ಬಾ, ಹೀಗೆ ಎಲ್ಲ ರೀತಿಯಲ್ಲು ಅವ್ನನ್ನ ಬಳಸಿಕೊಳ್ಳುತಿದ್ದರು.

ಭಟ್ಟ ಓದಿದ್ದೆಲ್ಲ ಹುಬ್ಬಳ್ಳಿಯಲ್ಲಿ, ಕೆ.ಎಲ್.ಇ. ಶಾಲೆಯ ಬೋರ್ಡುಗಳಲ್ಲಿ ಕನ್ನಡ ಮೀಡಿಯಂ ಓದಿ ಬೆಳೆದ ಹುಡುಗ, ಅಂತಹ ದಡ್ಡ ಹುಡುಗನೇನಲ್ಲ, ಡಿಪ್ಲೋಮದಲ್ಲಿ ಮತ್ತು ಇಂಜಿನಿಯರಿಂಗ್ನಲ್ಲಿ ಮೊದಲನೆ ದರ್ಜೆಯಲ್ಲಿ ಪಾಸಾಗಿದ್ದಾನೆ. ಮನೆಯ ಕಷ್ಟಗಳನ್ನೆಲ್ಲ ಮೂಲೆಯಲ್ಲಿ ಬಿಸಾಕಿ ಅವರಪ್ಪ ಸಾಲ ಸೋಲ ಮಾಡಿ ಓದಿಸಿದ್ದಾರೆ, ಎಜುಕೇಶನ್ ಲೋನ್ ಕಟ್ಟಲೇ ಬೇಕಾದ ಅನಿವಾರ್ಯತೆ ಅವನ್ನ ಈ ಕೆಲಸಕ್ಕೆ ದೂಡಿದೆ. ಈ ಮಧ್ಯೆ ಆ ಕೋರ್ಸು ಈ ಕೋರ್ಸು ಅಂತ ಹೇಳಿದವರ ಮಾತು ಕೇಳಿ ಟೆಸ್ಟಿಂಗ್ ಕೋರ್ಸ್ ಸಹ ಮಾಡಿದ್ದಾನೆ.ಆದ್ರು ಕೆಲಸ ಇಲ್ಲಿವರೆಗೂ ಸರಿಯಾದ ಕೆಲಸ ಮಾತ್ರ ಸಿಕ್ಕಿಲ್ಲ. ಇದು ಬರೀ ನನ್ನೊಬ್ಬ ಗೆಳೆಯನ ಕಥೆಯಲ್ಲ, ಭಟ್ಟ ಎಂಬುದು ಇಲ್ಲಿ ಪಾತ್ರವಷ್ಟೇ, ಇಂತಹ ಸಾವಿರಾರು ಹುಡುಗರು ಚೆನ್ನಾಗಿ ಓದಿಯೂ ಉತ್ತಮ ಅಂಕಗಳು ಪಡೆದೂ ಸಹ, ಎಂತ ಎಂತಹುದೋ ಕೆಲಸಗಳನ್ನು ಮಾಡುತಿದ್ದಾರೆ, ವೆಂಟಿಲೇಶನ್ ಸೆರ್ವೀಸ್ ಮಾಡುವುದೇ ಆಗಿದ್ದರೆ ಭಟ್ಟ ಐ.ಟಿ.ಐ ಓದಿದ್ದರೆ ಸಾಕಾಗಿತ್ತು, ಇಂಜಿನಿಯರಿಂಗ್ ಅವಶ್ಯಕತೆಯೇ ಇರಲಿಲ್ಲ, ವಿ.ಟಿ.ಯು. ಅಡಿಯಲ್ಲಿ ಸುಮಾರು ೨೦೦ ಕಾಲೇಜುಗಳಿವೆ ಅಂದರೆ ಪ್ರತಿ ವರ್ಷ ಹೊರಬರುವ ಇಂಜಿನಿಯರುಗಳೆಷ್ಟು, ಮತ್ತು ಅವರಲ್ಲಿ ಕೆಲಸಗಳಿಗೆ ಸೇರುವರೆಷ್ಟು? ನಿಜಕ್ಕು ಅಂಕಿ ಅಂಶಗಳ ನೋಡಲು ಹೋದರೆ ಭಯವಾಗುತ್ತದೆ.

ಮತ್ತಷ್ಟು ಓದು »

30
ಏಪ್ರಿಲ್

ಬೌದ್ಧ, ಬ್ರಾಹ್ಮಣ ಮತ್ತು ಗೋಭಕ್ಷಣೆ

– ಸಾತ್ವಿಕ್ ಎನ್ ವಿ

ಪ್ರಾಚೀನ ಭಾರತದ ಇನ್ನೊ೦ದು ಮುಖ್ಯ ದಾರ್ಶನಿಕ ಪರ೦ಪರೆಯಾದ ಬೌದ್ಧ ಧರ್ಮದ ಕುರಿತು ಬಿ.ವಿ. ವೀರಭದ್ರಪ್ಪ ಅವರು ವೇದಾ೦ತ ರೆಜಿಮೆ೦ಟ್ ಮತ್ತು ಇತರ ಲೇಖನಗಳು ಎ೦ಬ ಕೃತಿಯ ಸುಮಾರು ೧೪ ಅ೦ಕಣಬರಹಗಳಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಬೌದ್ಧ ಮತ್ತು ವೈದಿಕರ ನಡುವಿನ ಹೋರಾಟವು ಮಹತ್ವದ್ದಾಗಿದೆ. ವರ್ತಮಾನದಲ್ಲಿರುವ ಹಲವು ವೈದಿಕ ರೀತಿ ರಿವಾಜುಗಳ ಮೂಲಬೇರುಗಳನ್ನು ಅ೦ದಿನ ಸ೦ಘರ್ಷದ ಫಲಿತಗಳೆ೦ದೇ ವೀರಭ್ರದಪ್ಪ  ಹೇಳುತ್ತಾರೆ. ವೈದಿಕ ವ್ಯವಸ್ಥೆಯ ಯಜ್ಞಯಾಗಳಿ೦ದಾಗಿ ಗೋಹತ್ಯೆಯ ಕ್ರಮದಿ೦ದಾಗಿ ಬೌದ್ಧಮತವು ಪ್ರಚುರಗೊ೦ಡಿದನ್ನು ಉಲ್ಲೇಖಿಸುತ್ತಾರೆ. ಒ೦ದು ಕಾಲಕ್ಕೆ ಬೌದ್ಧಧರ್ಮವು ಬಹುಸ೦ಖ್ಯಾತ ಜನರ ಧರ್ಮವಾಗಿತ್ತು. ಅಲ್ಲದೆ ವೈದಿಕ ಧರ್ಮವನ್ನು ಹಿ೦ದೆ ಯಾವ ದಾರ್ಶನಿಕ ಪರ೦ಪರೆಯೂ ಪ್ರಶ್ನಿಸದ ರೀತಿಯಲ್ಲಿ ಈ ಬೌದ್ಧಧರ್ಮವು ಪ್ರಶ್ನಿಸಿತು. ಇದರಿ೦ದಾಗಿ ವೈದಿಕವಾದವು ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿತ್ತು. ಬೌದ್ಧದರ್ಮದ ಪ್ರಸಾರದಿ೦ದ ವೈದಿಕಶಾಹಿಯು ಅಧಿಕಾರ ಕೇ೦ದ್ರವಾದ ಆಡಳಿತ ಪ್ರಭುತ್ವದಿ೦ದಲೂ ದೂರವುಳಿಯಬೇಕಾದ ಪ್ರಸ೦ಗ ಉ೦ಟಾಯಿತು. ಇ೦ತಹ ಸ್ಥಿತಿಯಲ್ಲಿ ವೈದಿಕ ವ್ಯವಸ್ಥೆಯು ತನ್ನ ಹಳೆಯ ಅಧಿಕಾರ ಮತ್ತು ಗೌರವಗಳನ್ನು ಪಡೆಯಲು ಸಾಕಷ್ಟು ಪ್ರಯತ್ನಪಡಬೇಕಾಯಿತು. ಅಲ್ಲದೇ ತನ್ನ ವಿಚಾರಗಳನ್ನೇ ಬದಲಿಸಿಕೊಳ್ಳಬೇಕಾಯಿತು. ಅಲ್ಲದೆ ತೀವ್ರತೆರನಾದ ರೀತಿಯಿ೦ದ ಬೌದ್ಧರನ್ನು ಅನುಸರಿಸದೇ ಹೋರಾಟ ನಡೆಸದೇ ಇರಲು ಬ್ರಾಹ್ಮಣರಿಗೆ ಸಾಧ್ಯವಾಗಲಿಲ್ಲ. ವೈದಿಕರಲ್ಲಿ ಇ೦ದು ಇರಬಹುದಾದ ಕೆಲವು ವಿಚಾರ ಆಚರಣೆಗಳು ಬೌದ್ಧಧರ್ಮದ ಅನುಸರಣೆಯಿ೦ದ ದಕ್ಕಿರುವ ಸ೦ಗತಿಗಳಾಗಿವೆ. ಉದಾಹರಣೆಯಾಗಿ ಬುದ್ಧನ ಮರಣಾನ೦ತರ ಆತನ ಅನುಯಾಯಿಗಳು ಅವನ ಮೂರ್ತಿಗಳನ್ನು ರಚಿಸಿ ಸ್ತೂಪಗಳನ್ನು ನಿರ್ಮಿಸಿದರೆ ಅದೇ ಮಾದರಿಯಲ್ಲಿ ವೈದಿಕರು ಶಿವ, ವಿಷ್ಣು ಮು೦ತಾದ ದೇವಾಲಯಗಳನ್ನು ನಿರ್ಮಿಸಿ ತಮ್ಮತ್ತ ಜನರನ್ನು ಆಕರ್ಷಿಸಲು ಪ್ರಯತ್ನಿಸಿದರು. ಮತ್ತಷ್ಟು ಓದು »

29
ಏಪ್ರಿಲ್

ದೀಪ ಭಾಗ ೨

– ವಿಜಯ್ ಹೂಗಾರ್

ಬೆಳಕಿಂಡಿಯಿಂದ ಮೂಡುವ ಹಿಡಿ ಬಿಸಿಲುಗರಿಗಳು ಇಣುಕುವ ಮುಂಚೆ ದೇವಕಿ ಅಡುಗೆ ಮನೆ ಸೇರಿದ್ದಳು.ಒಲೆ ಹತ್ತಿಸಿದ ಮೇಲೆ ಅಡುಗೆ ಮನೆ ಹೊಗೆಯಿಂದ ತುಂಬಿ ತುಳುಕುತ್ತಿತ್ತು.ಅಡುಗೆಮನೆಯಿಂದ ಹೊರಮನೆ,ಹೊರಮನೆಯಿಂದ ಕೇರಿಯಲ್ಲ ಹರಡುತಿತ್ತು.ಅಮಾವಾಸ್ಸೆಯ ಕತ್ತಲೆಯಂತೆ ಗೋಚರಿಸುತ್ತಿರುವ ಗೋಡೆಗಳ ಮಧ್ಯೆ ಖೆಮ್ಮುತ್ತ,ಬೆಂಕಿ ಆರುವಂತಿದ್ದರೆ ಊದುತ್ತ,ಮೈಯಲ್ಲ ಬೆವತು,ಸುರಿಯುವ ಬೆವರ ಧಾರೆಗೆ ಸೆರಗಿನಿಂದ ಒರೆಸುತ್ತಾ ರುಚಿ ರುಚಿಯಾದ ಅಡುಗೆ ಮಾಡುತ್ತಿದ್ದಳು.

ಅಷ್ಟೊತ್ತಿಗೆ “ಏ ಇನ್ಯಾ…! ಹೋಗಿ ಆ ಭುರೆಗೊಳ್ ಮನ್ಯಾಗಿಂದು ಪಾವ್ ಲೀಟರ್ ಹಾಲ ಸಿಗ್ತದೆನು ತೊಗೊಂಬಾ,ಚಾ ಮಾಡಕ್ಕ ಹಾಲಿಲ್ಲ” ಅಂತ ದೇವರ ಮನೆಯಿಂದ ತರಕಸ್ವಾರದಲ್ಲಿ ಕಮಲಜ್ಜಿಯ ಅವಾಜ್ ಕೇಳಿ, ಪಡಸಾಲೆಲ್ಲಿ ಟಿವಿ ನೋಡುತ್ತಾ ಕುಳಿತ ಮೊಮ್ಮಗ ಇನ್ಯಾ ತನ್ನ ಸಂಗಡಿಗರ ಸಮೇತ ಪುರ್ರ್ ಅಂತ ಹಾರಿಹೋದ.ಮನೆಯೆಲ್ಲ ಊದಿನ ನುರುಹೊಗೆಯ ಪರಿಮಳ ಸೂಸುತ್ತ ದೇವರ ಮನೆಯಿಂದ ಬಂದ ಕಮಲಜ್ಜಿ ಹಠತ್ತಾನೆ ಖಾಲಿಯಾದ ಪಡಸಾಲೆಯನ್ನು ನೋಡಿ,”ಅಯಿ…!ಹಾಟ್ಯಗಳ ತೊಗೊಂಬಂದು…!ಕೆಲಸ ಮಾಡಕ್ಕ ಏನ್ ಬ್ಯಾನಿ ಬರ್ತದ…?ತಿಲ್ಲಕ್ ಹ್ಯಾಂಗ್ ಬರ್ತದ,ಎರಡೂ ದವಡಿಯಲ್ಲಿ …!”ಅಂತ ಕೈಯಲ್ಲಿರುವ ನೈವಿದ್ಯದ ತಟ್ಟೆ ಹಿಡಿದು ಖಾಲಿ ಪಡಸಾಲೆಯ ಮೇಲೆ ತನ್ನ ಕೋಪ ತೋರಿಸುತ್ತ ನಿಂತಳು.’ಇನ್ಯಾರಿಗೆ ತೋರಿಸಬೇಕು…..?’ ಅಂತ ಪ್ರಶ್ನಾರ್ಥಕ ಮುಖದಿಂದ ಟಿವಿಯ ಪರದೆ ಕಮಲಜ್ಜಿಯ ಕಡೆ ಹೆದರಿ ಮುಜುಗುರದಿಂದ ನೋಡತೊಡಗಿತು.ಹಾಗೆ ಕೋಪದಿಂದ ಗಲಿಬಿಲಿಗೊಂಡ ಮುಖದಿಂದ ಮನೆಯ ಹೊರಗಡೆಯ ಇರುವ ಚಿಕ್ಕ ಕಟ್ಟೆಯಮೇಲೆ ಆಸಿನಳಾದ ತುಳಸಿಗೆ ಭುಸುಗುಟುತ್ತಲೇ ನೈವಿದ್ಯ ಅರ್ಪಿಸತೊಡಗಿದಳು.
ಮತ್ತಷ್ಟು ಓದು »

28
ಏಪ್ರಿಲ್

ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?

– ರೂಪ ರಾವ್

ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.

ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ  ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.

ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?

ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ  ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ  ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
ಮತ್ತಷ್ಟು ಓದು »