ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

5
ಏಪ್ರಿಲ್

ಗುಂಡು ಬಿಡದ ಬಂದೂಕುಗಳ ನಡುವೆ!

– ಸಂತೋಷ್ ಆಚಾರ್ಯ

೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್‍ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು »

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »

2
ಏಪ್ರಿಲ್

‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ

– ಡಾ.ಜಿ. ಭಾಸ್ಕರ ಮಯ್ಯ

ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್‌ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.

ಮತ್ತಷ್ಟು ಓದು »

2
ಏಪ್ರಿಲ್

ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ

–  ಟಿ.ಎಂ.ಕೃಷ್ಣ

ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)

ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.

ಮತ್ತಷ್ಟು ಓದು »

2
ಏಪ್ರಿಲ್

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ – ಪ್ರಗತಿಪರರು

– ಡಾ.ಭಾಸ್ಕರ್ ಮಯ್ಯ

ಆಧುನಿಕ ತತ್ವಶಾಸ್ತ್ರದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ. ವೇದಾಂತ ದರ್ಶನಕ್ಕೆ ನೂರಾರು ವ್ಯಾಖ್ಯಾನಗಳಿವೆ. ಆದರೆ ಅವುಗಳಲ್ಲಿ ಪ್ರಮುಖ ಸ್ಥಾನವಿರುವುದು `ಶಾಂಕರ ವೇದಾಂತ’ಕ್ಕೆ. ಆದರೆ, ಶಂಕರರು ವೇದಾಂತ ದರ್ಶನಕ್ಕೆ ವ್ಯಾಖ್ಯಾನ ಬರೆದಿರುವುದು ಭಾವವಾದೀ ದೃಷ್ಟಿಯಿಂದ ಶಂಕರರು ಭಾವವಾದದ ಮೇರು ಶಿಖರ ಎಂಬಲ್ಲಿ ಎರಡು ಮಾತಿಲ್ಲ. ಅವರಿಗೆ ಸರಿಗಟ್ಟುವ ಭಾವವಾಣಿ ದಾರ್ಶನಿಕರುಪಾಶ್ಚಾತ್ಯ ದರ್ಶನ ಶಾಸ್ತ್ರದಲ್ಲಿ ದೊರಕುವುದಿಲ್ಲ. ಆದರೆ, ವಿವೇಕಾನಂದರು ವೇದಾಂತಕ್ಕೆ ವ್ಯವಹಾರಿಕ ರೂಪವನ್ನು ಕೊಟ್ಟರು. ಈ ಬಗೆಯ ವ್ಯಾಖ್ಯಾನ ಕೂಡಾ ತತ್ವಶಾಸ್ತ್ರಕ್ಕೆ ನವನವೀನ.

ಅಗಾಧ ಪ್ರತಿಭೆ
1863ನೆಯ ಇಸವಿ ಜನವರಿ 12 ರಂದು ಕಲ್ಕತ್ತಾದ ಒಂದು ಕ್ಷತ್ರಿಯ ಕುಟುಂಬದಲ್ಲಿ ಜನಿಸಿದ ವಿವೇಕಾನಂದರು ಅಗಾಧ ಪ್ರತಿಭೆಯ ವ್ಯಕ್ತಿ. ಆ ಕಾಲದಲ್ಲಿಯೇ ಬಿ.ಎ. ಶಿಕ್ಷಣ ಮುಗಿಸಿದ ವಿವೇಕಾನಂದರು ( ಮೂಲ ಹೆಸರು ನರೇಂದ್ರನಾಥ) ವಿದ್ಯಾರ್ಥಿ ಜೀವನದಲ್ಲಿ ನಾಸ್ತಿಕರಾಗಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ಅವರ ಚಿಂತನಾ ಕ್ರಮವೇ ಬದಲಾಯಿತು.ರಾಮಕೃಷ್ಣರು ಮಹಾನ್ ಸಂತರಾಗಿದ್ದರೂ ಅನಕ್ಷರಸ್ತರು. ವಿವೇಕಾನಂದರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪ್ರಖಾಂಡ ಪಂಡಿತರು. ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರು ಒಂದೇ ಜೀವನದ ಎರಡು ಮುಖಗಳು ಅಥವಾ ಒಂದೇ ಸತ್ಯದ ಎರಡು ರೂಪಗಳು. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ ರಾಮಕೃಷ್ಣರು ಅನುಭೂತಿ  ಆದರೆ ವಿವೇಕಾನಂದರು ಅವರ ವ್ಯಾಖ್ಯಾನ ಅಭಿವ್ಯಕ್ತಿ.

ವಿವೇಕಾನಂದರು ಹಾರ್ಬರ್ತ್ ಸ್ಪೆನ್ಸರ್ ಹಾಗೂ ಜಾನ್ ಸ್ಟುವರ್ಟ್ರಮಿಲ್ ಅವರ ಪ್ರೇಮಿಯಾಗಿದ್ದರು. ಶೆಲಿ, ವರ್ಡ್ಸ್ವರ್ತ್ರ ದಾರ್ಶನಿಕತೆ, ಹೆಗಲ್ನ ವಸ್ತುನಿಷ್ಠ ಆದರ್ಶವಾದ ಹಾಗೂ ಫ್ರಾನ್ಸಿನ ರಾಜ್ಯಕ್ರಾಂತಿ ವಿವೇಕಾನಂದರನ್ನು ತೀವ್ರವಾಗಿ ಪ್ರಭಾವಿಸಿತ್ತು.
ವಿವೇಕಾನಂದರು ಕೇವಲ 39 ವರ್ಷಗಳ ಕಾಲ ಜೀವಿಸಿದ್ದರೂ ಅವರ ಸಂದೇಶ ಇವತ್ತಿನ ಕೋಮುವಾದಿ ರಾಜಕೀಯಕ್ಕೆ ಅತ್ಯಂತ ಪ್ರಬಲವಾದ ಶಸ್ತ್ರ. ರಾಮಮೋಹನ್ ರಾಯ್, ಕೇಶವ ಚಂದ್ರ ಸೇನ್, ದಯಾನಂದ ಸರಸ್ವತಿ, ರಾನಡೆ, ಅನಿಬೆಸೆಂಟ್ ಮತ್ತು ರಾಮಕೃಷ್ಣರು ಹದಮಾಡಿದ ನೆಲದಲ್ಲಿ ವಿವೇಕಾನಂದರು ಅಶ್ವತ್ಥದಂತೆ ಬೆಳೆದು ನಿಂತರು. ಇಂದು ಕೋಮುವಾದಿಗಳು ಆ ಅಶ್ವತ್ಥದ ರೆಂಬೆಕೊಂಬೆಗಳನ್ನು ಕಡಿದು ಯೂಪಸ್ಥಂಭ (ಬಲಿಸ್ಥಂಭ)ವನ್ನಾಗಿ ರೂಪಿಸುತ್ತಿದ್ದಾರೆ.

ಮತ್ತಷ್ಟು ಓದು »

31
ಮಾರ್ಚ್

ಶಿಕಾರಿ ಮಿಸ್ ಆಯ್ತು..!

– ಶ್ರೀಧರ್ ಜಿ.ಸಿ ಬನವಾಸಿ

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣನಾಯಕನಾಗಿ ಅಭಿನಯಿಸಿದ ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟ್ಟಿ ಅಭಿನಯದ `ಶಿಕಾರಿ’ ಬಿಡುಗಡೆಯ ಭಾಗ್ಯವನ್ನು ಕಂಡಿದೆ. ಪ್ರಶಸ್ತಿ ಪುರಸ್ಕೃತ
`ಗುಬ್ಬಚ್ಚಿಗಳು’ಸಿನಿಮಾ ಖ್ಯಾತಿಯ ಅಭಯಸಿಂಹ ನಿರ್ದೇಶಕರು. ಚಿತ್ರ ನೋಡಿಬಂದ ಮೇಲೆ ನನಗೆ ಚಿತ್ರದ ಬಗ್ಗೆ ನನಗನಿಸಿದ ಅಂಶಗಳು:
ಇಡೀ ಚಿತ್ರಕ್ಕೆ ಮುಮ್ಮಟ್ಟಿ ಬೇಕಿತ್ತೋ, ಅಥವಾ ಇಲ್ಲವೋ ಅಂತ ನಾವು ತರ್ಕ ಹಾಕಿ ನೋಡಿದಾಗ ಮುಮ್ಟಟ್ಟಿ ಬದಲು ನಮ್ಮ ಕನ್ನಡದಲ್ಲಿಯ ಯಾವುದಾದರೂ ಹೀರೋಗಳನ್ನು ಬಳಸಿಕೊಳ್ಳಬಹುದಿತ್ತು ಎಂಬುದನ್ನು  ಒಂದೇ ಮಾತಿನಲ್ಲಿ ಹೇಳಬಹುದು. ಇಲ್ಲವೇ ಕನ್ನಡದಲ್ಲಿರುವ ದೇವರಾಜ್ ರಂತಹ ಜನಪ್ರಿಯ ಗಡಸು ದನಿಯ ಕಲಾವಿದರು ಮುಮ್ಮುಟ್ಟಿ ಪಾತ್ರಕ್ಕೆ ದನಿ ನೀಡಬಹುದಿತ್ತು. ಚಿತ್ರದಲ್ಲಿ ಅದು ಆಗಲಿಲ್ಲ. ಅದಕ್ಕೆ ಕಾರಣ ಕೂಡ ಸ್ಟಷ್ಟವಾಗಿದೆ, ಮುಮ್ಮಟ್ಟಿ ಕನ್ನಡದಲ್ಲಿ ಮಾತನಾಡಲು ರಿಸ್ಕು ತೆಗೆದುಕೊಂಡಿದ್ದು, ಕೊನೆಪಕ್ಷ ಮಾತನಾಡಿಸಿದ್ದರೂ, ಡಬ್ಬಿಂಗ್ನಲ್ಲಿ ನಿರ್ದೇಶಕರು ಸ್ವಲ್ಪ ಹುಷಾರಾಗಿರಬೇಕಿತ್ತು.ಮುಮ್ಮಟ್ಟಿ ಕನ್ನಡ ಮಾತನಾಡುತ್ತಿದ್ದಾರೋ, ಮಲಯಾಳಂ ಮಾತನಾಡುತ್ತಿದ್ದಾರೋ ಎಂಬುದು ಅರ್ಥವಾಗುವುದೇ ಇಲ್ಲ. ಏಷ್ಟೋ ಸೀನ್ಗಳಲ್ಲಿ ಅವರು ಶಬ್ಗಗಳನ್ನು ನುಂಗಿ ಮಾತನಾಡುತ್ತಾರೆ. ಅವರು ಏನು ಹೇಳಿದರು ಅನ್ನುವುದೇ ಅರ್ಥವಾಗುವುದೇ ಇಲ್ಲ.  ಮುಮ್ಮಟ್ಟಿ ಮಾತನಾಡಿದ ಕನ್ನಡ,ನಮ್ಮ ಕನ್ನಡದವರಿಗೆ ಅರ್ಥವಾಗುವುದು ತುಂಬಾ ಕಷ್ಟ.  ಅದೇನಿದ್ದರೂ ಮಲಯಾಳಂ ಶೈಲಿಯಲ್ಲಿ ಕನ್ನಡ ಮಾತನಾಡುವ ಮಲ್ಲುಗಳಿಗೆ ಮಾತ್ರ ಅರ್ಥವಾದೀತು. ಹೆಚ್ಚಿನವರಿಗೆ ಇದು ಇಷ್ಟವಾಗಲೂಬಹುದು.
30
ಮಾರ್ಚ್

ರಸ್ತೆಯ ಪಕ್ಕ ನಿಂತಿತ್ತು ದೆವ್ವ!?

– ರಾಜ್ ಕುಮಾರ್

ಇದೊಂದು ನಂಬಲಾಗದ ಘಟನೆ. ಬಹುಷಃ ತರ್ಕಗಳು ಏನಿದ್ದರೂ ನಾನು ನನ್ನ ಅನುಭವವನ್ನು ಮಾತ್ರವೇ ಹೇಳುವುದು. ಇದು ಪ್ರಚಾರಕ್ಕಾಗಿ ಅಗಲಿ ಅಥವಾ ಬೇರೆ ಸ್ವ ಸಾಧನೆಗಾಗಿ ಅಗಲಿ ಹೇಳಿಕೊಳ್ಳುವುದಲ್ಲ. ನಾನು ಸ್ವತಹ ಅನುಭವಿಸಿ ಮನಸ್ಸಿನ ಗೊಂದಲವನ್ನಷ್ಟೇ ಇಲ್ಲಿ ವಿವರಿಸುತ್ತ ಇದ್ದೇನೆ.

ಕಳೆದ ಮಂಗಳವಾರ ಅಂದರೆ ದಿನಾಂಕ ೧೭-೦೨-೨೦೦೯ ರಂದು ನಾನು ಮಂಗಳೂರಿನ ಬಂಧುಗಳ ಮನೆಗೆ ಚಂಡಿಕಾ ಹವನದ ನಿಮಿತ್ತ ಹೋಗಿ ಬರುವ ಸಂದರ್ಭ.ನಾನು ಹಾಗು ನನ್ನ ಸಂಬಂಧಿಗಳು ಒಟ್ಟು ನಾಲ್ಕು ಮಂದಿ ಮಾರುತಿ ಕಾರ್ ನಲ್ಲಿ ಬೆಂಗಳೂರು ಕಡೆಗೆ ಬರುತ್ತಾ ಇದ್ದೆವು. ಹೋಗುವಾಗ ಶಿರಾಡಿ ಘಾಟ್ ಮೂಲಕ ಹೋದವರು ಬರುವಾಗಲೂ ಅಲ್ಲೇ ಬರೋಣವೆಂದು ನೆಲ್ಯಾಡಿ ಕೊಕ್ಕಡ ಕ್ರಾಸ್ ತನಕ ಬಂದಾಗ ಘಟ ರಸ್ತೆ ಸಂಪೂರ್ಣ ಬ್ಲಾಕ್ ಆಗಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಮಾರುತಿ ಕಾರ್ ಸ್ವತಹ ನಾನೇ ಚಲಾಯಿಸುತ್ತಿದ್ದೆ. ನನ್ನ ಪಕ್ಕ ನನ್ನ ಭಾವ ಹಾಗೆ ಹಿಂದಿನ ಸೀಟಿನಲ್ಲಿ ಇಬ್ಬರು ಕುಳಿತಿದ್ದರು.ನನ್ನನ್ನು ಉಳಿದು ಅವರೆಲ್ಲ ವೃತ್ತಿಪರ ಪುರೋಹಿತರಾಗಿದ್ದರು. ರಸ್ತೆ ಬ್ಲಾಕ್ ನೋಡಿ ನಾವು ಚಾರ್ಮಾಡಿ ಮೇಲೆ ಹೋಗೋಣವೆಂದು ಧರ್ಮಸ್ಥಳ ಕಡೆಗೆ ಕಾರ್ ತಿರುಗಿಸಿ, ಚಾರ್ಮಾಡಿ ಮೇಲೆ ಬಂದೆವು.

ರಾತ್ರಿಯ ಸುಮಾರು ೧೧ ಗಂಟೆಯ ಸಮಯ .ಘಾಟಿ ತಿರುವುಗಳೆಲ್ಲ ಕಳೆದು ರಸ್ತೆ ನೇರವಾಗಿ ಹೋಗುತ್ತಾ ಇತ್ತು. ಗಾಢವಾಗಿ ಇರುಳು ಹಬ್ಬಿತ್ತು. ನಿರ್ಜನ ಪ್ರದೇಶ. ಅಲ್ಲೊಂದು ಇಲ್ಲೊಂದು ಮರ ವಿರಳವಾಗಿ ಇತ್ತು. ಕಾರು ಗಂಟೆಗೆ ೮೦ ಕಿ. ಮಿ. ವೇಗದಲ್ಲಿ ನಾನು ಚಲಾಯಿಸುತ್ತಿದ್ದೆ. ತುಂಬ ದೂರದಲ್ಲಿ ಲಾರಿಯೊಂದು ನಿಧಾನವಾಗಿ ಹೋಗುತ್ತಿತ್ತು.

ಮತ್ತಷ್ಟು ಓದು »

29
ಮಾರ್ಚ್

ನಿದಿಧ್ಯಾಸನ ಮಾಡಿ ಜಯಶೀಲರಾಗಿ !

ತಾಪತ್ರಯ-ವಿನಿರ್ಮುಕ್ತೋ ದೇಹತ್ರಯ-ವಿಲಕ್ಷಣಃ|
ಅವಸ್ಥಾತ್ರಯ-ಸಾಕ್ಷ್ಯಸ್ಮಿ ಅಹಮೇವಾಹಮವ್ಯಯಃ ||

ಈ ವಿದ್ಯೆಯನ್ನು ಅನೌಪಚಾರಿಕವಾಗಿ ಹೇಳಿಕೊಟ್ಟ ಗುರುವೃಂದಕ್ಕೆ ಮೊದಲು ಶಿರಬಾಗಿ ಕರಮುಗಿದು ಪ್ರಾರ್ಥಿಸಿ ನಿಮ್ಮಲ್ಲಿ ಈ ವಿಷಯ ಪ್ರಸ್ತಾವಿಸುತ್ತಿದ್ದೇನೆ. ಹೊಸದೊಂದು ವಿಷಯ ನನ್ನ ಗಮನ ಸೆಳೆದಿತ್ತು. ನಿದಿಧ್ಯಾಸನ ಕ್ರಿಯೆ ! ಹಾಗೆಂದರೇನು ? ಎಲ್ಲಿ ಹೇಗೆ ಅದನ್ನು ಆಚರಿಸುವುದು ? ಯಾರು ಮತ್ತು ಯಾವಾಗ ಮಾಡಬಹುದು ? ಅದರ ಪರಿಣಾಮಗಳೇನು ? ಈ ರೀತಿ ಒಂದರಮೇಲೊಂದು ಪ್ರಶ್ನೆಗಳು ಬರುತ್ತಲೇ ಇದ್ದವು; ಉತ್ತರ ಅಷ್ಟು ಸಲೀಸಾಗಿ ಸಿಗಲಿಲ್ಲ. ಹುಡುಕಿದೆ ಹುಡುಕಿದೆ ಹಲವು ಯೋಗಿಗಳಲ್ಲಿ ಹೋದರೂ ಅದೊಂದು ಸ್ವಾನುಭವ ಕ್ರಿಯೆಯಾಗಿರುವುದರಿಂದ ಅದನ್ನು ವಿವರಿಸುವುದು ಸ್ವಲ್ಪ ಕಷ್ಟ.

ಭಾರತೀಯ ಮೂಲದ ಯಾವುದೇ ತತ್ವಗಳನ್ನು ತೆಗೆದುಕೊಳ್ಳಿ ಅವು ಆದರ್ಶಪ್ರಾಯ. ಅವು ಮತಗಳ ಬಗ್ಗೆ ಹೇಳುವುದಿಲ್ಲ; ಆದರೆ ಧರ್ಮದ ಬಗ್ಗೆ ತಿಳಿಸುತ್ತವೆ, ಮಾನವ ಧರ್ಮದ ಬಗ್ಗೆ ವಿವರಿಸುತ್ತವೆ. ಅಲ್ಲಿಲ್ಲಿ ಆರ್ಟ್ ಆಫ್ ಲಿವಿಂಗ್ ಅಥವಾ ಇನ್ನೂ ಹಲವಾರು ಯೋಗ ಕೇಂದ್ರಗಳಿಂದ ಕೆಲವರು ಇದನ್ನು ತಿಳಿದುಕೊಂಡಿರಬಹುದು. ಅಷ್ಟಾಂಗ ಯೋಗದ ಬಗ್ಗೆಯೂ ಅಲ್ಪಸ್ವಲ್ಪ ಗೊತ್ತಾಗಿರಬಹುದು. ಆದರೆ ಅಷ್ಟಾಂಗಯೋಗದ ಉಪಯೋಗವನ್ನು ಅರಿತವರು ಭಾಗಶಃ ಯೋಗವನ್ನಾದರೂ ಕಲಿಯುತ್ತಾರೆ. ಯೋಗವೆಂಬುದು ಕೇವಲ ಯೋಗಾಸನವಲ್ಲ, ಅದು ಕೇವಲ ಭೌತಿಕ ಅಥವಾ ಶಾರೀರಿಕ ವ್ಯಾಯಾಮ ಕ್ರಿಯೆಯಲ್ಲ. ಅದು ದೇಹ ಮತ್ತು ಮನಸ್ಸುಗಳನ್ನು ಬಳಸಿ ಆತ್ಮಾನುಸಂಧಾನ ಮಾಡುವ ಕ್ರಿಯೆ! ಈ ಬ್ಲಾಗಿನ ಆರಂಭದಲ್ಲಿ ನಾನು ಬರೆದ ಹಾಡೊಂದು ನೆನಪಾಗುತ್ತಿದೆ. ಅದನ್ನು ಕೆಲವರು ಓದಿದರು; ಕೆಲವರು ತುಂಬಾ ಚೆನ್ನಾಗಿದೆಯೆಂದರು, ಇನ್ನೂ ಕೆಲವರು ತೀರಾ ವಿರಕ್ತ ಗೀತೆ ಎಂದರು. ಅದರ ಆಳವಾದ ಗಹನವಾದ ಅರ್ಥವನ್ನು ಯಾರೂ ಅರಿಯದಾದರು.

ಹಲವು ಸರ್ತಿ ನಾನು ಹೇಳಿದ್ದಿದೆ, ಶರೀರದ ಸ್ವಚ್ಛತೆಗಾಗಿ ಹೇಗೆ ಸ್ನಾನ ಮಾಡುತ್ತೇವೆಯೋ ಹಾಗೆಯೇ ಮನಸ್ಸಿನ ಸ್ವಚ್ಛತೆಗಾಗಿ ಧ್ಯಾನ ಮಾಡಿ ಎಂದು. ಮನಸ್ಸು-ಆತ್ಮ ಬೇರೇ ಬೇರೇ. ಆತ್ಮ ಶುದ್ಧವಾಗಿರುತ್ತದೆ; ಕಲ್ಮಶರಹಿತವಾಗುತ್ತದೆ. ಯಾವಾಗ ಆತ್ಮ ಶರೀರದೊಳಗೆ ಸೇರಿ ಮನಸ್ಸಿನ ಹತೋಟಿಯಲ್ಲಿ ಸಿಕ್ಕಿಬೀಳುತ್ತದೋ ಆಗ ಅದು ಗೌಣವಾಗಿ ಸುಪ್ತವಾಗಿ ಶರೀರದೊಳಗೆ ಹುದುಗಿರುತ್ತದೆಯೇ ವಿನಃ ತನ್ನಶಕ್ತಿಯನ್ನು ಅದು ಮರೆತಿರುತ್ತದೆ ! ಈ ಶರೀರದೊಳಗೆ ಆತ್ಮ ಎಂಬುದು ಮೊಬೈಲ್ ಹ್ಯಾಂಡ್ ಸೆಟ್ ನಲ್ಲಿ ಸಿಮ್ಮು ಇರುವಂತೇ. ನಮ್ಮಲ್ಲಿಯೂ ಡ್ಯೂಯಲ್ ಸಿಮ್ಮು! ಒಂದು ಒಳಗಿನ ನಾನು ಒನ್ನೊಂದು ಹೊರಗಿನ ನಾನು. ಆದರೆ ಇಲ್ಲಿ at a time both are functioning! ಆಗಾಗ ನನ್ನಜೊತೆಗಿರುವ ನಾನು ಒಳಗಿನ ನನ್ನನ್ನು ಬಿಟ್ಟು ಪರಸ್ಪರ ಕೆಲಸಮಾಡುತ್ತೇನೋ ಆ ಕೆಲಸ ಯಶಸ್ವಿಯಾಗುವುದಿಲ್ಲ ಅಥವಾ ಕೇಡಿನ ಕೆಲಸವಾಗಿರುತ್ತದೆ!

ಮತ್ತಷ್ಟು ಓದು »

29
ಮಾರ್ಚ್

ಕುಲಾಂತರಿ ಚರ್ಚೆ: ಇನ್ನೊಂದು ಮುಖ

– ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

ಮತ್ತಷ್ಟು ಓದು »

28
ಮಾರ್ಚ್

ಜೋಡಿ ನಯನದ ಒಂಟಿ ನೋಟ

– ವಿಜಯಕುಮಾರ್  ಹೂಗಾರ್

ಹೀಗೊಂದು ನೋಟ.ವಿಚಿತ್ರ ನೋಟ.ಇಡಿ ಬೆಂಗಳೂರು ಒಂದೇ ನೋಟಕ್ಕೆ ನೋಡೋ ಹಟ.ಖೇಚರ ಜೀವಿಯಂತೆ ನಗರದ ತಲೆಯಮೇಲೆ ಹಾರಾಡೋ ಬಯಕೆ ಈ ಜೋಡಿ ನಯನಕ್ಕೆ.ಬಯಕೆ ಈಡೇರದೆ ಅದರ ಪಾದದಡಿ ನುಸುಳಿ ಸುತ್ತುತ್ತಿದೆ ನಿಘೂಡ ಮನಸ್ಸು ಭೇಧಿಸುವ ವ್ಯಾಧನ ಅಗೋಚರ ಬಿಲ್ಲಿನಂತೆ.ಬಯಕೆಯ ತೇವಕೆ ಸಮ್ಮತಿಸುವಂತೆ ಮಹಾನಗರ ಬಿಡಿ ಬಿಡಿಯಾಗಿ ನೀಗಿಸುತಿದೆ ನಯನದ ದಾಹ.ತುಂಡು ತುಂಡಾಗಿ ಚಲಿಸಲೋಲಿಸುತಿದೆ ಸೆಳೆಯುವ ದಾರಿಯ ಮೋಹ.

ಗಾಳಿಯ ರಭಸಕ್ಕೆ ನಯನ ಮನಬಂದಂತೆ ತೂರಿ ಹಾರಿದೆ,ಕುರುಡನ ಕೈ ಹಿಡಿದು.ನಯನದ ಜಾಡು ದಾರಿಗೆ ಹೆಜ್ಜೆಯ ಕುರುಹು ಹಾಕುತ್ತ ದೇಹ ಅದಕೆ  ಹಿಂಬಾಲಿಸಿದೆ.ಕಣ್ಣು ಓಡಿದಲೆಲ್ಲ ಬಣ್ಣದ ಲೋಕದಲ್ಲಿ ಬಣ್ಣಗೆಟ್ಟ ಜನರ ಓಟ.ನಡೆದಾಡುವ,ಸರಿಸೋಡುವ ಜನ.ಚಲಿಸುವ ದಾರಿಯ ಮೇಲೆ ಇಟ್ಟ ಬೊಂಬೆಯಂತೆ.ಯಾವ ಕಾಲಕ್ಕೂ ಲೆಕ್ಕಿಸದೆ ಉಳಿಗಾಲದ ಜೀವಂತ ಜನ ಓಡುತ್ತಿದ್ದಾರೆ ನಡೆದ ದಾರಿ ಮತ್ತಷ್ಟು ಸವೆಯುವಂತೆ.ಓಡಾಟದಲ್ಲಿ ಭಾರ ಹೊತ್ತಿ ಚಲಿಸುವ ಪಾರಗನ್ ಚಪ್ಪಲಿ ಮೈ ಮರೆತು ನಿಲ್ಲುವಹಾಗಿಲ್ಲ.ಮರೆತರೆ ಮರೆಯಲಾಗದ ನೆನಪು ಕೊಡುಗೆ ನೀಡುವ ಜನರು ಹದ್ದಿನಂತೆ ಕಾಯುತ್ತಿದ್ದಾರೆ.ಅವರೂ ಕಾದು ಕಾದು ಸುಸ್ತಾಗಿದ್ದಾರೆ,ಹಸಿದ ಹುಲಿಯ ಹೊಟ್ಟೆಯಂತೆ.ಕೈಯಲ್ಲಿ ಮಹಾನಗರದ ನಕ್ಷೆ.ಪೆನ್ನು.ಗತ ಕಾಲದ ಹಳಸು ಡೈರಿ ಹಿಡಿದು ಹೊಂಚು ಹಾಕುತ್ತಿದ್ದಾರೆ. ಮತ್ತಷ್ಟು ಓದು »