ಜನಶತಾಬ್ದಿ ರೈಲಿನೊಳಗೆ
-ಶಿವು.ಕೆ
ಹತ್ತಾರು ಬಾರಿ ಅರಸೀಕೆರೆಯಲ್ಲಿ ಈ ರೈಲಿಗೆ ಟಿಕೆಟ್ ಕೇಳಿದ್ದೇನೆ. ಕಣ್ಣ ಮುಂದೆ ನಿಂತು ಹೊರಡಲು ಸಿದ್ದವಾಗಿದ್ದರೂ ಒಮ್ಮೆಯೂ ಟಿಕೆಟ್ ಸಿಗದಿರುವುದು! ವಾರಕ್ಕೆ ಮೊದಲೇ ಟಿಕೆಟ್ಟುಗಳು ಬುಕ್ ಆಗಿಬಿಡುವ, ಅತ್ಯಂತ ವೇಗವಾಗಿ ಚಲಿಸುವ ಈ ರೈಲಿನ ಬಗ್ಗೆ ನನಗೆ ವಿಚಿತ್ರವಾದ ಕಲ್ಪನೆಯಿತ್ತು. ಈ ರೈಲು ಪ್ರಾರಂಭವಾಗಿ ಎರಡು ವರ್ಷಗಳಾದರೂ ಒಮ್ಮೆಯೂ ಪ್ರಯಾಣಿಸುವ ಅವಕಾಶ ಸಿಗಲಿಲ್ಲವಲ್ಲ ಎನ್ನುವ ನಿರಾಶೆ ಆಗಾಗ ಕಾಡುತ್ತಿತ್ತು. ಅದು ಮತ್ಯಾವುದು ಅಲ್ಲ ಬೆಂಗಳೂರು-ಹುಬ್ಬಳ್ಳಿ ನಡುವೆ ಚಲಿಸುವ ಜನಶತಾಬ್ದಿ ರೈಲು.
ಈ ರೈಲಿನ ಬಗ್ಗೆ ನನಗೆ ಕುತೂಹಲ ಹೆಚ್ಚಾಗಲು ಅನೇಕ ಕಾರಣಗಳಿವೆ. ರಾತ್ರಿ ಊಟ ಮುಗಿದ ಮೇಲೆ ಮುಕ್ಕಾಲು ಗಂಟೆ ನಮ್ಮ ಮಲ್ಲೇಶ್ವರಂ ರೈಲು ನಿಲ್ಡಾಣದ ಪ್ಲಾಟ್ ಫಾರ್ಂನಲ್ಲಿ ನನ್ನ ಶ್ರೀಮತಿ ಜೊತೆ ವಾಕಿಂಗ್ ಮಾಡುವಾಗ ಸರಿಯಾಗಿ ಒಂಬತ್ತು ವರೆಯ ಹೊತ್ತಿಗೆ ದೂರದಿಂದಲೇ ಕೂಗೆಬ್ಬಿಸಿಕೊಂಡು ನಿಲ್ಡಾಣದಲ್ಲಿ ನಿಂತು ಕುಳಿತವರೆಲ್ಲರ ಗಮನವನ್ನು ಸೆಳೆಯುತ್ತಾ, ಆಗಿನ ಕಾಲದಲ್ಲಿ ಪಾಳೆಯಗಾರನೊಬ್ಬ ಊರ ನಡುವಿನ ರಸ್ತೆಯಲ್ಲಿ ಧೂಳೆಬ್ಬಿಸಿಕೊಂಡು ವೇಗವಾಗಿ ಕುದುರೆ ಮೇಲೆ ಸಾಗುವಾಗ ಆ ರಬಸಕ್ಕೆ ತಲ್ಲಣಗೊಂಡು ದಿಗಿಲಿನಿಂದ ಒಬ್ಬರಿಗೊಬ್ಬರು ಗುಸುಗುಸು ಮಾತಾಡಿಕೊಳ್ಳುವಂತೆ ಇಲ್ಲಿಯೂ ಈ ಜನಶತಾಬ್ಧಿ ರೈಲು ಅದೇ ವೇಗದಲ್ಲಿ ಬಂದುಬಿಡುತ್ತದೆ. ನನ್ನ ಶ್ರೀಮತಿ ” ರೀ ಸ್ವಲ್ಪ ಇರ್ರೀ….ಆ ಧನ ಶತಾಬ್ಧಿ ಹೋಗಿಬಿಡಲಿ” ಎಂದು ನನ್ನ ತೋಳನ್ನು ತನ್ನ ಕೈಗಳಲ್ಲಿ ಗಟ್ಟಿಯಾಗಿ ಹಿಡಿದು ನಿಂತುಬಿಡುವಳು. ಹಾಗೆ ನೋಡಿದರೆ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣದಲ್ಲಿ ಸಾಗುವಾಗ ಇತರೆಲ್ಲಾ ರೈಲಿಗಿಂತ ಇದು ವೇಗವಾಗಿಯೇ ಚಲಿಸುತ್ತದೆ. ಮತ್ತಷ್ಟು ಓದು 
ಸಶಸ್ತ್ರಕ್ರಾಂತಿಯ ಪೀಠಿಕೆ – ಬರೆದಿತ್ತವನು ಫಡ್ಕೆ…!!!!!!
-ಭೀಮಸೇನ್ ಪುರೋಹಿತ್
ಆಗ ತಾನೆ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಭೀಕರತೆಯಿಂದ ಸುಧಾರಿಸಿಕೊಳ್ಳುತ್ತಿದ್ದ ಬ್ರಿಟಿಷರಿಗೆ, ಅದರಷ್ಟೇ ಪ್ರಖರ ಭಯವನ್ನು ಒಬ್ಬನೇ ವ್ಯಕ್ತಿ ಮತ್ತೊಮ್ಮೆ ಹುಟ್ಟಿಸಿದ್ದ.. ಅವನ ಹೆಸರು “ವಾಸುದೇವ ಬಲವಂತ ಫಡ್ಕೆ”. ಮಹಾರಾಷ್ಟ್ರದ ಶಿರ್ಧೋನ್ ನಲ್ಲಿ ಜನನ. 1857 ಸಂಗ್ರಾಮ ನಡೆದಾಗ, ಆತ ಹೈಸ್ಕೂಲ್ ಓದುತ್ತಿದ್ದ. ಅದರಿಂದ ಪ್ರೇರಿತಗೊಂಡ ಫಡ್ಕೆ ಅರ್ಧಕ್ಕೆ ಶಾಲೆಗೆ ನಮಸ್ಕಾರ ಹೇಳಿದ.1860 ರಲ್ಲಿಯೇ ಅವನ ಮದುವೆಯೂ ಆಯಿತು. ಇಷ್ಟ ಇಲ್ಲದಿದ್ದರೂ ಸಂಸಾರದ ನಿರ್ವಹಣೆಗೆ ಒಂದು ವೈದ್ಯಕೀಯ ಕಾಲೇಜಿನಲ್ಲಿ ನೌಕರಿ ಸೇರಿದ. ಅದೊಮ್ಮೆ ಅವನ ತಾಯಿ ತೀರಾ ಅಸ್ವಸ್ಥರಾದ ಸಂದೇಶ ಬಂತು. ಕೂಡಲೇ ರಜೆಗೆ ಅರ್ಜಿ ಹಾಕಿದರೂ ಅನುಮತಿ ಸಿಗಲಿಲ್ಲ. ಆದರೂ ಲೆಕ್ಕಿಸದೆ ಊರಿಗೆ ಹೋದಾಗ ಅವನ ತಾಯಿ ಅದಾಗಲೇ ಸ್ವರ್ಗಸ್ಥರಾಗಿದ್ದರು. ಇದರಿಂದ ಆಕ್ರೋಶಗೊಂಡ ಫಡ್ಕೆ ಕೆಲಸಕ್ಕೆ ರಾಜೀನಾಮೆ ನೀಡಿದ..
ನಿಜವಾಗಿ ಇತಿಹಾಸ ಗಮನಿಸೋದಾದ್ರೆ, ಈ “ಸ್ವದೇಶೀ” ಚಳುವಳಿಯನ್ನು ಮನೆಮನೆಗೂ ಕೊಂಡೊಯ್ದ ಮೊದಲಿಗ ಅಂದ್ರೆ ಈ ಫಡ್ಕೇನೆ.. ಜಸ್ಟಿಸ್ ಮಹದೇವ್ ಗೋವಿಂದ್ ರಾನಡೆಯವರ ಸ್ವದೇಶೀ ವಿಚಾರಗಳಿಂದ ಸ್ಫೂರ್ತಿ ಪಡೆದ ಫಡ್ಕೆ, ಗಲ್ಲಿ ಗಲ್ಲಿಗಳಿಗೂ ಹೋಗಿ, ಸ್ವದೆಶಿತನದ ಮಹತ್ವದ ಬಗ್ಗೆ ಉಪನ್ಯಾಸ ನೀಡುತ್ತಿದ್ದ. ಆದರೆ, ಜನರಲ್ಲಿ ಅಂತಸ್ಸತ್ವ ಕಳೆದುಹೋಗಿತ್ತು. ಕೇವಲ ಭಾಷಣಗಳಿಂದ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂದು ಬೇಗನೆ ಅರ್ಥವಾಯಿತು. ಅಲ್ಲದೆ ಯುವಕರಿಗೆ ರಾಷ್ಟ್ರೀಯ ಶಿಕ್ಷಣ ಅವಶ್ಯಕ ಎಂಬ ದೃಷ್ಟಿಯಲ್ಲಿ ಶಿಕ್ಷಣ ಸಂಸ್ಥೆಯನ್ನೂ ತೆರೆದ. ಇದರ ಮಧ್ಯೆಯೇ, ಮಹಾರಾಷ್ಟ್ರದಲ್ಲಿ ಭೀಕರ ಕ್ಷಾಮ ತಲೆದೋರಿತು.ಜನ ಒಪ್ಪತ್ತು ತುತ್ತಿಗೂ ಗತಿಯಿಲ್ಲದೆ ಪರದಾಡುವಂತಾಯಿತು. ಆದ್ರೆ ಕ್ರೂರ ಬ್ರಿಟಿಶ್ ಸರ್ಕಾರ ಮಾತ್ರ, ಎಂದಿನಂತೆ ತೆರಿಗೆಯ ವಸೂಲಿಯನ್ನು ಮುಂದುವರೆಸಿತು.ಬ್ರಿಟಿಷರ ಈ ನೀಚಕೃತ್ಯಗಳಿಂದ ಕುಪಿತನಾದ ಫಡ್ಕೆ ಮುಂದೆ ಇಟ್ಟ ಹೆಜ್ಜೆಯೇ ಇತಿಹಾಸ..
ಸಂಸ್ಕೃತಿ ಸಂಕಥನ – 25 – ಆನಂದದ ಮಾರ್ಗ ಅಧ್ಯಾತ್ಮ
-ರಮಾನಂದ ಐನಕೈ
ಭಾರತೀಯರ ಅಧ್ಯಾತ್ಮ ಒಂದು ಅದ್ಭುತ ವಿಜ್ಞಾನ. ಭಾರತೀಯ ಪ್ರಗತಿಪರ ಚಿಂತಕರು ಹಾಗೂ ಮನೋಭಾವದವರೆಲ್ಲ ಸಂಪ್ರದಾಯಕ್ಕೆ ಸಂಬಂಧಪಟ್ಟ ಸಂಗತಿಗಳನ್ನೆಲ್ಲ ಮೌಢ್ಯ ಎಂದು ಪರಿಗಣಿಸುತ್ತಾರೆ. ಅಚಿದರೆ ಅವರ ಪ್ರಕಾರ ಬ್ರಿಟಿಶ್ ವಸಾಹತುಶಾಹಿಯ ನಂತರವೇ ಈ ದೇಶದಲ್ಲಿ ಆಧುನಿಕತೆ ಬಂದಿದೆ. ನಾಗರಿಕತೆ ಬೆಳೆದಿದೆ. ಮನುಷ್ಯನ ಚಿಂತನಾಕ್ರಮ ಬದಲಾಗಿದೆ ಇತ್ಯಾದಿ ಇತ್ಯಾದಿ. ಹಾಗಾದರೆ ಕಳೆದ ಮೂರು ಸಾವಿರ ವರ್ಷಗಳಿಂದ ನಮ್ಮ ಪೂರ್ವಜರು ಏನು ಮಾಡಿದರು? ಏನನ್ನೂ ಮಾಡಿಲ್ಲವೇ? ಹಾಗಿದ್ದರೆ ಭಾರತೀಯ ಸಂಸ್ಕೃತಿ ಹೇಗೆ ಉಳಿದುಕೊಂಡು ಬಂತು? ಪಾಶ್ಚಾತ್ಯರಿಗೆ ಈ ಸಂಸ್ಕೃತಿಯ ಕುರಿತು ಏಕಿಷ್ಟು ಕುತೂಹಲ? ಇಂತಹ ನೂರಾರು ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ಅವರಲ್ಲಿಲ್ಲ. ಹೆಚ್ಚೆಂದರೆ ಮೊಂಡುವಾದ ಮಾಡಬಹುದು ಅಷ್ಟೆ. ನಮ್ಮ ಪೂರ್ವಜರು ಸುಮ್ಮನೆ ಆಯಸ್ಸು ಕಳೆಯುತ್ತ ಬಂದಿಲ್ಲ. ಮನುಷ್ಯನ ಆನಂದ ಹಾಗೂ ಆರೋಗ್ಯದ ಬಗ್ಗೆ ಆಳವಾದ ಚಿಂತನೆ ಮಾಡಿದ್ದಾರೆ. ಇದಕ್ಕಾಗಿ ಸಾವಿರಾರು ಮಾರ್ಗಗಳನ್ನು ಕಂಡುಹಿಡಿದಿದ್ದಾರೆ. ಅದೇ ಅಧ್ಯಾತ್ಮ.
ಲಿಂಗಭೇದವಿಲ್ಲ, ವರ್ಣಭೇದವಿಲ್ಲ, ಬಡವ -ಶ್ರೀಮಂತ ಎಂಬ ತರತಮವಿಲ್ಲ. ಎಲ್ಲರೂ ಈ ಮಾರ್ಗದಲ್ಲಿ ಹೋಗಬಹುದು. ಆ ಮೂಲಕ ಆನಂದ ಪಡೆಯಬಹುದು. ಆನಂದ ಎಂದರೇನು? ಅದು ಎಲ್ಲಿ ಸಿಗುತ್ತದೆ? ಹೇಗೆ ಸಿಗುತ್ತದೆ? ಯಾರಿಗೂ ಗೊತ್ತಿಲ್ಲ. ಆದರೆ ಆನಂದವನ್ನು ಪಡೆಯಬಹುದು. ಅಧ್ಯಾತ್ಮದ ದಾರಿಯ ಮೂಲಕ ಪ್ರತಿಯೊಬ್ಬನೂ ಆನಂದ ಪಡೆಯಬಹುದು. ಅಧ್ಯಾತ್ಮ ಇಂತಹ ಸಹಸ್ರ ದಾರಿಗಳನ್ನು ನಮ್ಮೆದುರು ತೆರೆದಿಟ್ಟಿದೆ. ಅಧ್ಯಾತ್ಮದ ಮೂಲಕ ಆನಂದ ಪಡೆಯಬಹುದು. ಆರೋಗ್ಯ ಪಡೆಯಬಹುದು, ನಮ್ಮೊಳಗಿನ ಜ್ಞಾನವನ್ನು ಉದ್ದೀಪನಗೊಳಿಸಿಕೊಳ್ಳಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಭಾರತೀಯ ಸಮಾಜದ ಮಾನಸಿಕ ಭದ್ರತೆಯೇ ಈ ಅಧ್ಯಾತ್ಮದ ತಳದಲ್ಲಿದೆ.
ಮಾಧ್ಯಮದವರು ನಡೆದುಕೊಂಡ ರೀತಿ ಸರಿಯೇ…?
-ಸತೀಶ್ ಡಿ. ಆರ್. ರಾಮನಗರ
ಟೀವಿ ವಾಹಿನಿಯವರು ನಡೆದುಕೊಂಡ ರೀತಿಯ ಬಗ್ಗೆ ಇಷ್ಟೊಂದು ಬಹು ಪರಾಕ್ ಹೇಳುತಿದ್ದೀರಲ್ಲ. ನಿನ್ನೆ ನಡೆದ ಘಟನೆಗಳ ಬಗ್ಗೆ ಅದರ ಹಿನ್ನೆಲೆಯನ್ನು ಸ್ವಲ್ಪವಾದರೂ ಮನುಷ್ಯತ್ವದಿಂದ ಯೋಚಿಸಿದ್ದೀರ. ವಸ್ತು ನಿಷ್ಠೆ ಮೆರೆವ ಮಾಧ್ಯಮದವರು ನಿನ್ನೆ ಮಾಡಿದ್ದು ಏನು. ಪೋಲೀಸಿನವರು ಕೋರ್ಟ್ ಹಾಲ್ ಗಳಿಗೆ ನುಗ್ಗಿ ವಕೀಲರನ್ನು ಮನ ಬಂದಂತೆ ತಳಿಸುತಿದ್ದರೆ ಮಾಧ್ಯಮದವರು ಅದನ್ನು ಏಕೆ ಪ್ರಸಾರ ಮಾಡಲಿಲ್ಲ. ವಕೀಲ ಸಿಂಬಲ್ ಇರುವ ಕಾರು ಬೈಕ್ಗಳನ್ನು ಎಲ್ಲರ ಮುಂದೆಯೇ ಸುಡುತಿದ್ದ ಪೋಲೀಸಿನವರ ಕೃತ್ಯವನ್ನು ಏಕೆ ಮಾಧ್ಯಮದವರು ಪ್ರಸಾರ ಮಾಡಲಿಲ್ಲ. ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರುವ ವಕೀಲರನ್ನು ಯಾವೊಬ್ಬ ಮಾಧ್ಯಮದವರು ಏಕೆ ತೋರಿಸಲಿಲ್ಲ. ಮೊದಲು ಮಾಧ್ಯಮದವರೇ ಪೋಲೀಸೀವರಿಗೆ ಧಿಕ್ಕಾರ ಕೂಗುತಿದ್ದವರು, ರೆಡ್ಡಿ ಬೆಂಬಲಿಗರೆಂದು ಬಂದಿದ್ದ ಕರಿ ಕೋಟು ದರಿಸಿದ್ದ ಕೆಲವು ವಕೀಲರು ತೆಗೆದ ಜಗಳಕ್ಕೆ ಇಡೀ ವಕೀಲ ಸಮುದಾಯವನ್ನು ಭಯೋತ್ಪಾದಕರ ರೀತಿ ಚಿತ್ರಿಸುತಿದ್ದೀರಲ್ಲ ಏಕೆ. ಬಾರ್ ಅಸೋಸಿಯೇಶನ್, ಕ್ಯಾಂಟೀನ್, ನ್ಯಾಯಾಲಯದ ಒಳ ಹೊಕ್ಕು, ಕುಳಿತಿದ್ದ ವಕೀಲರನ್ನು ನಾಯಿಗೆ ಬದಿದಂತೆ ಬಡಿದು ರಕ್ತ ಹರಿಸಿದ್ದಾರಲ್ಲ ಪೋಲೀಸಿನವರು ಅವರ ಬಗ್ಗೆ ಏಕೆ ಮೌನವಾಗಿದ್ದೀರಿ.
ಉತ್ತರ ಪ್ರದೇಶದಲ್ಲಿ ಆನೆಗೆ ಬಲ ಬರಲಿದೆಯೇ ಅಥವಾ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆಯೇ ?
-ನಾಗಣ್ಣ ಜಿಕೆ
ಮಾಚ್೯ ನ 6ರಂದು 5 ರಾಜ್ಯಗಳ ಚುನಾವಣಿ ಫಲಿತಾಂಶ ಘೋಷಣೆಯಾಗಲ್ಲಿದ್ದು ಇಡಿ ದೇಶ ಐದು ರಾಜ್ಯಗಳ ಕಡೆ ಗಮನ ಹರಿಸಿದೆ. ಮುಖ್ಯವಾಗಿ ಉತ್ತರಪ್ರದೇಶದ ಚುನಾವಣಾ ಫಲಿತಾಂಶ ಜನತೆಯಲ್ಲಿ ಕುತೂಹಲ ಕೆರಳಿಸಿದೆ ಕಾರಣ ಉತ್ತರಪ್ರದೇಶದ ರಾಜಕಾರಣ ರಾಷ್ಟ್ರರಾಜಕರಣಕ್ಕೆ ದಿಕ್ಸೂಚಿ ಮತ್ತು ನಿಣ೯ಯಕ ಶಕ್ತಿ.
ಉತ್ತರಪ್ರದೇಶದಲ್ಲಿ ಚುನಾವಣಿಗೆ ಸ್ಪಧ೯ಸಿದ್ದ ಪ್ರಮುಖ ರಾಜಕೀಯ ಪಕ್ಷಗಳೆಲ್ಲವೂ ತಮ್ಮ ಪ್ರತಿಷ್ಟೆಯನ್ನು ಪಣಕಿಟ್ಟು ಚುನಾವಣಿ ಆಕಾಡಕ್ಕೆ ದುಮುಕಿದ್ದವು ಇಲ್ಲಿ ಪಕ್ಷಕದ ಸೋಲು ಗೆಲವುಗಿಂತ ವ್ಯಕ್ತಿಗತ ಸೋಲು ಗೆಲವು ಬಹಳ ಮುಖ್ಯವಾದ್ದದ್ದು ಭವಿಷ್ಯದ ಪ್ರಧಾನಿಯೆಂದು ಬಿಂಬಿಸಿಕೊಳ್ಳುತ್ತಿರುವ ರಾಹುಲ್ಗಾಂಧಿ ಮತ್ತೊಂದು ಕಡೆ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಮಾಯಾವತಿ ಮತ್ತು ಉತ್ತರಪ್ರದೇಶದಲ್ಲಿ ಅಸ್ತಿತ್ವ ಸ್ಥಾಪಿಸಲು ಹೊರಟಿರುವ ಆಖಿಲೇಶ್ ಯಾದವ್ ಇವರ ಸೋಲು ಗೆಲುವೆ ಮುಖ್ಯವಾಗಿದೆ. 2008ರ ವಿಧಾನಸಭಾ ಚುನಾವಣಿಯಲ್ಲಿ ಬಿ.ಎಸ್.ಪಿಗಿದ್ದ ವಚ್ಚ್ರಸ್ಸು ಈ ಚುನಾವಣಿಯಲ್ಲಿ ಇದ್ದಂತೆ ಕಾಣುತ್ತಿಲ್ಲ ಇದಕ್ಕೆ ಹಲವಾರು ಕಾರಣಗಳಿವೆ, ಬಿ.ಎಸ್.ಬಿ ನಾಯಕಿಯಾದ ಮಾಯಾವತಿ ಕಳೆದ ಚುನಾವಣಿಯಲ್ಲಿ ಬ್ರಾಹ್ಮಣರು ಸೇರಿದ್ದಂತೆ ಮೇಲ್ವಗ್ರದವರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ಅದರೆ ಚುನಾವಣಿಯ ನಂತರ ಅವರು ಬ್ರಾಹ್ಮಣರಿಗೆ ಕೊಟ್ಟ ಭರವಸೆಯನ್ನ ಹಿಡೇರಿಸಿಲ್ಲ ಸಹಜವಾಗಿ ಈ ವಗ್ರದ ಜನ ಬೇರೆ ಪಕ್ಷಕ್ಕೆ ಒಲವು ತೋರಿಸಿದ್ದಾರೆ.
ಉದ್ಯೋಗಾವಕಾಶ : ಅಸೋಸಿಯೇಟ್ ಸ್ಪೆಷಲಿಸ್ಟ್…೨೦೧೧ರಲ್ಲಿ ಎಂ.ಬಿ.ಎ ಮುಗಿಸಿದ ಫ಼್ರೆಶರ್ಸ್
ಇದು ರೆಫ಼ರಲ್ ಪ್ರೋಗ್ರಾಮ್
- ೨೦೧೧ರಲ್ಲಿ ಎಂ.ಬಿ.ಎ ಮುಗಿಸಿದ ಫ಼್ರೆಶರ್ಸ್
- ರಾತ್ರಿ ಪಾಳಿಯಲ್ಲಿ ಕೆಲಸ ಮಾಡಬಲ್ಲವರು
- Research, build and maintain common reference data structures on the Global Reference Database (GRD) used by various business units within the firm, including domestic and foreign Equity and Fixed Income Trading, Research, Compliance, Corporate Actions and Settlements.
- Respond to requests from investment divisions to research and set up/amend any or a set of the following common reference data on the GRD: securities, issuers, corporate structures (hierarchies), funds, sub portfolios, industry codes, brokers, and any supporting structure attributes.
ರೌಡಿಗಳ ಪಟ್ಟಿಗೆ ಹೊಸಬರ ಸೇರ್ಪಡೆ!
-ದಿನೇಶ್ ಕುಮಾರ್ ಎಸ್.ಸಿ.

ಗಾಯಗೊಂಡ ವಕೀಲರು
“ವಕೀಲರ ರೌಡಿಸಂಗೆ ಸಿಎಂ ಹೆದರ್ತಾರೆ, ಗೃಹಮಂತ್ರಿ ನಡುಗ್ತಾರೆ, ಆದ್ರೆ ನಾವು… ಮಾಧ್ಯಮದವರು ಹೆದರೋದಿಲ್ಲ…” ಇದು ಇವತ್ತಿನ ಉದಯವಾಣಿಯ ಮುಖಪುಟದ ಶೀರ್ಷಿಕೆ. ಕನ್ನಡಪ್ರಭ “ಏನ್ ಲಾ” ಎಂಬ ಎರಡು ಅರ್ಥ ಹೊರಡಿಸುವ ಶೀರ್ಷಿಕೆ ನೀಡಿದೆ. ಈ ಶೀರ್ಷಿಕೆಗಳು ಮಾಧ್ಯಮರಂಗದ ಆತ್ಮವಿಶ್ವಾಸದಂತೆಯೂ, ಅಹಂಕಾರದಂತೆಯೂ ಏಕಕಾಲಕ್ಕೆ ಧ್ವನಿ ಹೊರಡಿಸುತ್ತದೆ. ಸಿಟಿ ಸಿವಿಲ್ ಕೋರ್ಟ್ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಯಿಂದ ಕನ್ನಡ ಮಾಧ್ಯಮ ಸಮೂಹ ಕೆರಳಿ ನಿಂತಿದೆ ಎಂಬುದಂತೂ ಸ್ಪಷ್ಟ. ಕೆರಳುವುದು, ಕೆರಳಿಸುವುದು ಎಲೆಕ್ಟ್ರಾನಿಕ್ ಮಾಧ್ಯಮಗಳ ಜಾಯಮಾನ. ಯಾಕೆಂದರೆ ಅವುಗಳ ಟಿಆರ್ಪಿ ಯೊಂದಿಗೆ ಈ ಕೆರಳುವಿಕೆಗೆ ಸಂಬಂಧಿಸಿದೆ. ಈ ಬಾರಿ ಪತ್ರಿಕೆಗಳೂ ಸಹ ಕೆರಳಿವೆ. ಅದಕ್ಕೆ ಕಾರಣಗಳೂ ಇವೆ.
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಕೆಲ ವಕೀಲರು ನಡೆಸಿದ ಪುಂಡಾಟಿಕೆ ಅಸಹನೀಯ ಮತ್ತು ಅಸಮರ್ಥನೀಯ. ಅದು ಅಕ್ಷರಶಃ ಗೂಂಡಾಗಿರಿಯೇ ಹೌದು. ಘಟನೆಗೆ ಕಾರಣವಾಗಿರಬಹುದಾದ ಪ್ರಚೋದನೆ ಏನೇ ಆಗಿದ್ದರೂ ಇಂಥ ಪುಂಡಾಟಿಕೆ ಅನಪೇಕ್ಷಿತ ಮತ್ತು ಕಾನೂನು ಬಾಹಿರ. ಇಂಥ ಕೃತ್ಯ ಎಸಗಿದ ವಕೀಲರು ಜೈಲು ಸೇರಲು ಲಾಯಕ್ಕಾದವರು ಮಾತ್ರವಲ್ಲ, ಅವರು ಮತ್ತೆಂದೂ ಕರಿಕೋಟು ಹಾಕುವಂತಾಗಬಾರದು.
ಈ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಕೆರಳುವಿಕೆಯೂ ಅರ್ಥ ಮಾಡಿಕೊಳ್ಳುವಂಥದ್ದು. ನ್ಯೂಸ್ ಚಾನಲ್ಗಳು ಎರಡು ನಿಮಿಷಗಳ ಕಾಲ ಪ್ರಸಾರವನ್ನೇ ನಿಲ್ಲಿಸಿ ಪ್ರತಿಭಟಿಸಿದವು. ದಿನವಿಡೀ ಕಪ್ಪು ಬಣ್ಣದ ಹಿನ್ನೆಲೆಯನ್ನು ಪರದೆಯ ಮೇಲೆ ಬಳಸಿದವು. ಕಪ್ಪು ಪಟ್ಟಿ ಕಟ್ಟಿಕೊಂಡೇ ಸುದ್ದಿ ಓದಲಾಯಿತು. ಒಂದು ವಾಹಿನಿಯಲ್ಲಂತೂ ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಸುದ್ದಿ ಓದಲಾಯಿತು.
” ಅನ್ಯಾಯವಾದಿಗಳ ಹುಟ್ಟಡಗಿ ಪ್ರಜಾ ಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲಿ”
-ಬನವಾಸಿ ಸೋಮಶೇಖರ್
ಕೆಲವು ಗೂಂಡಾ ವಕೀಲರುಗಳು ಪೂರ್ವಾಗ್ರಹ ಪೀಡಿತರಾಗಿ ಮಾಧ್ಯಮದವರು ಹಾಗೂ ಪೋಲೀಸರ ಮೇಲೆ ಅಮಾನವೀಯ ದೌರ್ಜನ್ಯ,ಹಲ್ಲೆ ನಡೆಸುವ ಮೂಲಕ ನಮ್ಮ ಪವಿತ್ರ ನ್ಯಾಯಾಂಗ ವ್ಯವಸ್ಥೆಗೆ ಅಕ್ಷರಶಃ ಚ್ಯುತಿ ತಂದರು.ಇವರು ತಮ್ಮನ್ನು ಏನೆಂದುಕೊಂಡಿರುವರೋ?
ಪ್ರಜಾಪ್ರಭುತ್ವದ ಸಾರ್ವಭೌಮ ಪರಮಾಧಿಕಾರದ ಉತ್ತುಂಗ ವ್ಯವಸ್ಥೆಯನ್ನು ಹೊಂದಿರುವ ಭಾರತೀಯ ಸಂವಿಧಾನದ ಆಶಯ,ಮೂಲೋದ್ಧೇಶ ಹಾಗೂ ನಿಯಮಗಳ ಮೇಲೆ ದಬ್ಬಾಳಿಕೆ ನಡೆಸಿರುವ ಈ ಅನ್ಯಾಯವಾದಿಗಳ ಹುಟ್ಟಡಗಲೇಬೇಕು.ಸಂವಿಧಾನದ 19 (1) ನೇ ವಿಧಿಗೆ ಕಳಂಕ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿರುವ ಈ ವಿಕೃತ ಮನಸುಗಳ ಮರ್ಧನ ಆಗಲೇಬೇಕು.ನಮ್ಮ ಪರಂಪರೆಗೆ,ನ್ಯಾಯ ದೇವತೆಯ ಕಣ್ಣಿಗೆ ಮಣ್ಣೆರಚಿರುವ ಈ ಕೂಳರ ಅಟ್ಟಹಾಸದ ಹಿಂದಿನ ಪಟ್ಟಭದ್ರರ ಬಣ್ಣ ಬಯಲಾಗಿ ಪ್ರಜಾಪ್ರಭುವಿಗೆ ಸತ್ಯದರಿವು ಆಗಲೇಬೇಕು.ಮೌಲ್ಯಾಧಾರಿತ ನ್ಯಾಯವಾದಿಗಳ ಮನಸ್ಸನ್ನು ಘಾಸಿಗೊಳಿಸಿರುವ ಈ ಘಟನೆ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುವ ಹುನ್ನಾರುವುಳ್ಳದ್ದು.ಇಂಥ ವಿಚಾರ ಹೀನ,ಬುದ್ಧಿ ಹೀನ,ಅವಿವೇಕಿ ಲಂಪಟರಿಗೆ ಕೈಕೊಳತೊಡಿಸಿ ಜೈಲಿಗಟ್ಟಲೇಬೇಕು.ಬುಡಮೇಲು ಕೃತ್ಯವೆಸಗುವ ಯಾರನ್ನೇ ಆಗಲಿ ರಕ್ಷಿಸುವ,ಹಿನ್ನೆಲೆಯಲ್ಲಿ ಆಶ್ರಯ ನೀಡುವ ಕಾರ್ಯ ಸರ್ವಥಾ ಸಲ್ಲದು.ನಮ್ಮ ಶ್ರೀಮಂತ ಸಂಸ್ಕ್ರತಿ,ಪರಂಪರೆ,ಜನ ಜೀವನ,ನ್ಯಾಯ-ಅನ್ಯಾಯ ಇತ್ಯಾದಿ ಅಂಶಗಳ ಮೇಲೆ ಬೆಳಕು ಚೆಲ್ಲಿ ಸತ್ಯ ದರ್ಶನ ಮಾಡಿಸುವ ಮಾಧ್ಯಮ ಹಾಗೂ ಅದರ ಪ್ರತಿನಿಧಿಗಳ ಬದುಕಿಗೆ ಭದ್ರತೆ ಮತ್ತು ರಕ್ಷಣೆಯೇ ಇಲ್ಲವಾಗಿದೆ.ಜೀವದ ಹಂಗು ತೊರೆದು ಕಾವಲು ನಾಯಿಯಂತೆ ಕಾರ್ಯವೆಸಗುವ ಪತ್ರಕರ್ತರಿಗೆ,ಕಾನೂನು ಮತ್ತು ಸುವ್ಯವಸ್ಥೆಯ ಸೇವೆಗೈಯುವ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವ ಹೊಣೆಗಾರಿಕೆ ಹಿಂದಿಗಿಂತಲೂ ಈಗ ಅತ್ಯಂತಯ ಅಗತ್ಯವಾಗಿದೆ ಎಂಬುದನ್ನು ದಿನಾಂಕ:02-03-2012 ರಂದು ಬೆಂಗಳೂರಿನ ನ್ಯಾಯ ದೇವತೆಯ ಅಂಗಳದಲ್ಲಿ ನಡೆದ ಅನ್ಯಾಯವಾದಿಗಳ ಕ್ರೌರ್ಯ,ಅನಾಗರಿಕ ಕೃತ್ಯ ಜೀವಂತ ಸಾಕ್ಷಿಯಾಗಿ ಕರ್ನಾಟಕ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.
ಉದ್ಯೋಗ ಮಾಹಿತಿ
ಗೆಳೆಯರೆ
sccm ಡೆಪ್ಲೊಯ್ಮಮೆ೦ಟ್ ಪರಿಣಿತರು ಬೇಕಾಗಿದ್ದಾರೆ
ಅನುಭವ ೧ ರಿ೦ದ ೩ ವರ್ಷದ ವರಗೆ
sccm ಸೆರ್ವರ್ ನಲ್ಲಿ ಕೆಲಸದ ಅನುಭವ ಇಲ್ಲದಿದ್ದರು ನಡೆಯುತ್ತೆ ಆದರೆ
sccm ನ ತ೦ತ್ರಜ್ನಾದ ವಾತವಾರಣದಲ್ಲಿ ಕೆಲಸ ಮಾಡಿದ ಅನುಭವ ಇರಲೆಬೇಕು
ದಯವಿಟ್ಟು ನಿಮ್ಮ ರೆಸುಮೆ ಅನ್ನು udyoga12@gmail.com ಗೆ ತಕ್ಷಣ ಕಳುಹಿಸಿ
ಬೇಕಾಗಿದ್ದಾರೆ – ಬಿಇ ಅನನುಭವಿಗಳು (ಫ್ರೆಶರ್ಸ್) – ಕನ್ನಡಿಗರಿಗೆ ಆದ್ಯತೆ
-ಅರವಿಂದ್
ಮೊಬ್ಯೆಲ್ ತಂತ್ರಜ್ನಾನದಲ್ಲಿ ವಿಶ್ವದಲ್ಲೇ ಎರಡನೇ ಅತ್ಯುತ್ತಮ ಸಂಸ್ಥೆಯಲ್ಲಿ ಉದ್ಯೋಗವಕಾಶ
೨೦೧೧ರಲ್ಲಿ ಪಾಸಾದ ಬಿಇ ತಾಂತ್ರಿಕ ಶಿಕ್ಷಣದಲ್ಲಿ ಟೆಲಿಕಾಂ ಮಾಹಿತಿ ತಂತ್ರಜ್ಣಾನ, ಎಲೆಕ್ಟ್ರಾನಿಕ್ಸ್ ವಿಭಾಗದವರು ಬೇಕಿರುವವರು
ಸಂಸ್ಥೆಯ ಹೆಸರು : ರಿನೆಸೆಸ್ ಮೊಬ್ಯೆಲ್ ಇಂಡಿಯಾ ಪ್ರ್ಯೆ ಲಿ. ಬೆಂಗಳೂರು
ವಿದ್ಯಾರ್ಹತೆ : ಬಿಇ
ತಾಂತ್ರಿಕೆ ವಿಶೇಷತೆ : ಯೂನಿಕ್ಸ್ ಮತ್ತು ಸ್ಕ್ರಿಪ್ಟ್ಸ್ ಭಾಷೆಯ ಅರಿವು
ನಿಮ್ಮ ಪರಿಚಯ ಪತ್ರಗಳನ್ನು aravindhDOTraoATgmailDOTcomಗೆ ಕಳುಹಿಸಿಕೊಡಿ..
* * * * * * * *




