ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

3
ಫೆಬ್ರ

ಅಪಘಾತ ಎಂಬ ಬಹಿರಂಗ ಹತ್ಯೆ

– ಚಾಮರಾಜ ಸವಡಿ

ಪುಣೆಯಲ್ಲಿ ಬುಧವಾರ ಸಂಭವಿಸಿದ ಘಟನೆ ನಿರ್ಲಕ್ಷ್ಯದ ಚಾಲನೆ ಅಥವಾ ರೋಷಾವೇಶದ ಚಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಎತ್ತಿದೆ. ತಲೆ ಕೆಟ್ಟ ಚಾಲಕನೊಬ್ಬ ಸರ್ಕಾರಿ ಬಸ್ಸನ್ನು ಮನಸೋಇಚ್ಛೆ ಚಾಲನೆ ಮಾಡಿ ೧೦ ಜನ ಅಮಾಯಕರ ಸಾವಿಗೆ ಹಾಗೂ ೩೫ಕ್ಕೂ ಹೆಚ್ಚು ಜನ ಗಾಯಗೊಳ್ಳಲು ಕಾರಣನಾಗಿದ್ದಾನೆ.

ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿರುವುದೇಕೆ?

ನಿಜ, ಎಲ್ಲರಿಗೂ ಅವರದೇ ಆದ ವೈಯಕ್ತಿಕ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ, ಭಾವಾವೇಶಕ್ಕೆ ಒಳಗಾಗಿ ರಸ್ತೆಗಿಳಿಯುವ ಮನಃಸ್ಥಿತಿ ಎಂಥದು? ಅದರಲ್ಲೂ ಪಕ್ಕದಲ್ಲಿ ಹಾಗೂ ಎದುರು ಇರುವ ವಾಹನಗಳನ್ನು ಹಿಂದಿಕ್ಕಿ ಹೋಗಬೇಕೆನ್ನುವ ಚಪಲ ಏಕೆ ಉಂಟಾಗುತ್ತದೆ? ರಸ್ತೆ ಸೂಚನೆಗಳನ್ನು ಉಲ್ಲಂಘಿಸುವ, ಇತರರ ಸರಾಗ ಚಲನೆಗೆ ಅಡ್ಡಿಪಡಿಸುವ ಮನಃಸ್ಥಿತಿ ಏಕೆ ಮೂಡುತ್ತದೆ?

ಹೆಚ್ಚುತ್ತಿರುವ ಒತ್ತಡ

ಇತ್ತೀಚಿನ ದಿನಗಳಲ್ಲಿ ಒತ್ತಡ ಪ್ರಮಾಣ ಹೆಚ್ಚುತ್ತಿದೆ. ಕೆಲಸದ ಸ್ಥಳಗಳ ಒತ್ತಡ ಬಹಳಷ್ಟು ಸಾರಿ ಇಂಥ ತಲೆಕೆಟ್ಟ ನಡತೆಗಳಿಗೆ ಕಾರಣವಾಗಿದ್ದೂ ಉಂಟು. ಮೇಲಧಿಕಾರಿಗಳ ಒತ್ತಡ, ಹಿಂಸೆ, ಸಹೋದ್ಯೋಗಿಗಳ ಕಿರಿಕಿರಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ, ಅಸ್ತವ್ಯಸ್ತ ಕೆಲಸದ ಅವಧಿ, ರಜೆ ಕೊಡದಿರುವುದು, ಸರಿಯಾದ ವೇತನ/ಸೌಲಭ್ಯ ನೀಡದಿರುವುದು- ಹೀಗೆ ಹಲವಾರು ಕಾರಣಗಳಿಂದ ಒತ್ತಡ ಉಂಟಾಗುತ್ತದೆ. ಇದಕ್ಕೆ ವೈಯಕ್ತಿಕ ಸಮಸ್ಯೆಗಳ ಒತ್ತಡವೂ ಸೇರುತ್ತದೆ. ಮತ್ತಷ್ಟು ಓದು »

2
ಫೆಬ್ರ

ಏನ್ ಗುರು ರಾಜಕೀಯನಾ?

-ಅಶ್ವಿನ್ ಎಸ್ ಅಮೀನ್

ಇತ್ತೀಚೆಗೆ ಬನವಾಸಿ ಬಳಗದವರು ನಡೆಸುತ್ತಿರುವ  ‘ಏನ್ ಗುರು’ ಎಂಬ ಬ್ಲಾಗ್ ನಲ್ಲಿ ಪ್ರಕಟವಾದ ‘RSS ಕಣ್ಣಲ್ಲಿ ಭಾಷಾ ನೀತಿ, ಒಕ್ಕೂಟ ಮತ್ತು ಸಮಾಜ’ ಎಂಬ ಲೇಖನವನ್ನು ಓದಿದೆ. ಲೇಖಕರ ಮಾತುಗಳು ಏಕಮುಖಿಯಾಗಿವೆಯೇನೋ ಎನಿಸಿ ಈ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದೇನೆ.

ಲೇಖನ ಆರಂಭದಲ್ಲಿ ಅರೆಸ್ಸಿಸಿನ ಧನಾತ್ಮಕ ಅಂಶಗಳ ಕುರಿತು ಲೇಖಕರು ಗಮನ ಸೆಳೆಯುತ್ತಾರೆ. ಆದರೆ ಒಂದು ಕಡೆ ನೆರೆ ಬರ ಹಾಗು ಇತರ ವಿಕೋಪಗಳ ಸಂದರ್ಭದಲ್ಲಿ ಜಾತಿ ಮತ ಲೆಕ್ಕಿಸದೆ ಜನತೆಯ ಸಹಾಯಕ್ಕೆ ಧಾವಿಸುವ ಆರೆಸ್ಸೆಸ್ ನ ಬಗ್ಗೆ ಹೊಗಳುವ ಲೇಖಕರು ಮತ್ತೊಂದು ಕಡೆ ಪ್ರಾಂತೀಯ ವಿರೋಧದ ಬಗ್ಗೆ ಮಾತನಾಡುತ್ತಾರೆ.! ಪ್ರಾಂತೀಯ ಹಾಗು ವೈವಿಧ್ಯತಾ ವಿರೋಧವಿದ್ದರೆ ಆರೆಸ್ಸೆಸ್ ದೇಶದ ಯಾವದೇ ಭಾಗದಲ್ಲಿ ಉಂಟಾಗುವ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿತ್ತೆ..?!

ಆರೆಸ್ಸೆಸಿನ ಪೂಜನೀಯ ಗುರುಗಳಾದ ಮಾಧವ ಸದಾಶಿವ ಗೋಳವಾಲ್ಕರ್ ಗುರೂಜಿಯವರ ‘ಚಿಂತನ ಗಂಗಾ’ ಪುಸ್ತಕವನ್ನಾಧರಿಸಿ ಆ ಲೇಖನವನ್ನು ಬರೆಯಲಾಗಿದೆ. ಆ ಸಮಗ್ರ ಗ್ರಂಥವನ್ನು ಲೇಖಕರು ಓದಿರುವುದು ಸಂತೋಷದಾಯಕ. ಆದರೆ ಅದನ್ನು ಸರಿಯಾಗಿ ಅರ್ಥೈಸುವಲ್ಲಿ ಎಡವಿದ್ದಾರೆ ಎಂಬುದೇ ವಿಪರ್ಯಾಸ.! ಮತ್ತಷ್ಟು ಓದು »

2
ಫೆಬ್ರ

ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.

-ಆದೇಶ್ ಕುಮಾರ್

ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.
ಕೆಲವೊಮ್ಮೆ ನೀವು ನಿಮ್ಮ ಗಣಕಕ್ಕೆ ಕೆಲವೊಂದು ತಂತ್ರಾಂಶಗಳನ್ನು ಇನ್ಸ್ಟಾಲ್ ಮಾಡಬೇಕಾಗಿರುತ್ತದೆ. ಈ ತಂತ್ರಾಂಶಗಳು ಕೆವಲ SP3 ಅಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತವೆ. ಆದರೆ ನಿಮ್ಮ ಗಣಕದಲ್ಲಿ XP SP 2 ಇನ್ಸ್ಟಾಲ್ ಮಾಡಿರುತ್ತೀರಿ.
ಈಗ ಹೊಸದಾಗಿ SP3 ಇನ್ಸ್ಟಾಲ್ ಮಾಡುವ ಬದಲು, SP2 ಅನ್ನೇ SP3 ಅನ್ನಾಗಿ ಬದಲಾಯಿಸಬಹುದು.

೧)ಮೊದಲು Registery Editor(Start–>Run ಅಲ್ಲಿ regedit ಎಂದು ಟೈಪಿಸಿ Enter ಒತ್ತಿ) ತೆರೆಯಿರಿ.
೨)ಈಗ Registery Editor ನ ಎಡ ಭಾಗದಲ್ಲಿರುವ ತೆರೆಯ ಮೂಲಕ ಕೆಳಗಿನಂತೆ ಹೋಗಿ.
HKEY_LOCAL_MACHINE >>> SYSTEM >>> CurrentControlSet >>>Control >>> Windows
ಗೆ ಹೋಗಿ
ಈಗ ನಿಮ್ಮ ಬಲ ಭಾಗದಲ್ಲಿರುವ “CSDVersion” ಮೇಲೆ ಎರಡು ಬಾರಿ ಕ್ಲಿಕ್ಕಿಸಿ, ತದನಂತರ ತೆರೆದುಕೊಳ್ಳುವ ತೆರೆಯಲ್ಲಿ Value data: ಅನ್ನು 200 ರ ಬದಲು 300 ಎಂದು ಬದಲಾಯಿಸಿ OK ಒತ್ತಿ ನಂತರ ನಿಮ್ಮ ಗಣಕವನ್ನು ರಿಸ್ಟಾರ್ಟ್ ಮಾಡಿ.
ಈ ಒಂದು ತಂತ್ರ SP3 ಅಲ್ಲಿ ಮಾತ್ರ ಕೆಲಸ ಮಾಡುವ ತಂತ್ರಾಂಶಗಳನ್ನು SP2 ವಿನಲ್ಲೂ ಕೆಲಸ ಮಾಡುವಂತೆ ಮಾಡುತ್ತದೆ.
ಪ್ರತಿಕ್ರಿಯಿಸಲು ಮರೆಯಬೇಡಿ.

* * * * * * *

ಚಿತ್ರಕೃಪೆ : madrasgeek.com

1
ಫೆಬ್ರ

ಇಂದಿನ ರಾಜಕೀಯ ಮತ್ತು ಮಾಧ್ಯಮಗಳ ನಡುವೆ ಕಂಡುಬರುವಂತಹ ಸಾಮ್ಯತೆಗಳು

-ರಾಜುವಿನಯ್ ದಾವಣಗೆರೆ

ಇತ್ತೀಚಿಗೆ ನಾವು ಪ್ರಚಲಿತ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ.ಇಂದಿನ ರಾಜಕೀಯ ವ್ಯವಸ್ಥೆಗೂ,  ಇಂದಿನ  ಮಾಧ್ಯಮ (ದೃಶ್ಯ)ಗಳಿಗೂ ವ್ಯತ್ಯಾಸಗಳೇ ಕಾಣುತ್ತಿಲ್ಲ.

ರಾಜಕೀಯದಲ್ಲಿ  ರಾಜಕಾರಣಿಗಳು ಪಕ್ಷದಿಂದ ಪಕ್ಷಗಳಿಗೆ ಹಾರುತ್ತಾ, ವಲಸೆ ಹೋಗುವುದು ಸಾಮಾನ್ಯವಾಗಿದೆ.
ದೃಶ್ಯ ಮಾಧ್ಯಮಗಳಲ್ಲೂ ಇದನ್ನು ಕಾಣುತ್ತಿದ್ದೇವೆ.

———–*ಪಕ್ಷಾಂತರ*———–

ಇಂದು   ಒಂದು  ಟಿವಿಯಲ್ಲಿ ಇದ್ದವರು ನಾಳೆ ಬೇರೆ ವಾಹಿನಿಯಲ್ಲಿರುತ್ತಾರೆ. ಸುವರ್ಣದಲ್ಲಿದ್ದವರು ಇನ್ಯಾವುದೋ ವಾಹಿನಿಗೆ ಜಿಗಿದಿರುತ್ತಾರೆ. ಇದು ನಿರಂತರವಾಗಿ ಆಗುತ್ತಿದೆ.
ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗೆ ತಮ್ಮ ರಾಜಕೀಯ ಭವಿಷ್ಯಕ್ಕೆ ಜಿಗಿದಾಟಗಳು ಪರದಾಟಗಳು ಮಾಡುತ್ತಿದ್ದರೆ, ಅವರುಗಳ ತಪ್ಪುಗಳನ್ನು ಜನರಿಗೆ ತೋರಿಸುತ್ತಿದ್ದೇವೆ ಎಂಬ ಭ್ರಾಂತಿಯಲ್ಲಿರುವ ನಮ್ಮ ಮಾಧ್ಯಮಗಳು ತಮ್ಮ ನೆಲೆಗಳಲ್ಲಿ ಉಳಿಯಲು ಸಾಧ್ಯವಾಗುತ್ತಿಲ್ಲ.  ರಾಜಕಾರಣಿಗಳ ಪಕ್ಷಾಂತರಗಳ ಬಗ್ಗೆ ಗಂಟೆಗಟ್ಟಲೇ ಟಿ.ವಿ ಸ್ಟುಡಿಯೋದಲ್ಲಿ ಮಾತಾನಾಡುವ ಬಹುತೇಕ ಪತ್ರಕರ್ತ ಮಿತ್ರರು ಅವರುಗಳು ತಮ್ಮ ಮೂಲ ವಾಹಿನಿಗಳಿಂದ ಜಿಗಿದು ಮತ್ತೊಂದು ವಾಹಿನಿಯಲ್ಲಿ ಕುಳಿತಿರುತ್ತಾರೆ.

ಮತ್ತಷ್ಟು ಓದು »

1
ಫೆಬ್ರ

ನೆನಪಿನ ಮೂಸೆಯಲಿ ‘ಕೋಲ್ಕಾತ್ತಾದ ಕಾಲೇಜಿನಲ್ಲಿ’

-ನಟರಾಜು 

ಒಂದು ಬಾರಿ ಗೆಳೆಯನೊಬ್ಬನ ಜೊತೆ ಕೊಲ್ಕತ್ತಾದ ವೈದ್ಯ ವಿದ್ಯಾಲಯದ ಕ್ಯಾಂಪಸ್ ಗೆ ಹೋಗಿದ್ದೆ. ಅಂದು ಪ್ರಥಮ ವರ್ಷದ ಎಂಬಿಬಿಎಸ್ ಪದವಿಯ ಪ್ರವೇಶಕ್ಕಾಗಿ ಕೌಂಸಿಲಿಂಗ್ ನಡೆಯುತ್ತಿತ್ತು. ಆ ಜಾಗದಲ್ಲಿ ರಾಜಕೀಯ ಪಕ್ಷಗಳ ವತಿಯಿಂದ ಮೂರ್ನಾಲ್ಕು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ರಾಜಕೀಯ ಪಕ್ಷದ ಮಾಹಿತಿ ಇರುವ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ನೋಡಿ, ಕಾಲೇಜಿನ ಆವರಣದಲ್ಲಿ ರಾಜಕೀಯ ಪಕ್ಷದವರಿಗೇನು ಕೆಲಸ ಅಂತ ನಾನು ಕುತೂಹಲದಿಂದ ಆ ಮಳಿಗೆಯ ಬಳಿ ಹೋಗಿದ್ದೆ. ಆ ಮಳಿಗೆಯ ಒಬ್ಬ ವ್ಯಕ್ತಿ ನಾನು ಹೊಸ ವಿದ್ಯಾರ್ಥಿ ಇರಬೇಕು ಅಂತ ತಮ್ಮ ಸಂಘದ ಭಿತ್ತಿ ಪತ್ರವೊಂದನು ಕೈಗಿತ್ತಿದ್ದ. ಬೆಂಗಾಳಿ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿದ್ದ ಭಿತ್ತಿ ಪತ್ರವನು ಓದಿ ನನ್ನ ಗೆಳೆಯನೆಡೆಗೆ ತಿರುಗಿದ್ದೆ. ಆತ ಮುಗಳ್ನಕ್ಕಿದ್ದ. ಕಾಲೇಜಿಗೆ ಪ್ರವೇಶ ಪಡೆದ ಮೊದಲ ದಿನದಿಂದಲೇ ತಮ್ಮ ತಮ್ಮ ರಾಜಕೀಯ ಪಕ್ಷದ ಒಲವನ್ನು ವಿದ್ಯಾರ್ಥಿಗಳು ತಮಗಿಷ್ಟ ಬಂದ ಪಕ್ಷದ ವಿದ್ಯಾರ್ಥಿ ಸಂಘದಲಿ ನೋಂದಾಯಿಸುವುದರ ಮೂಲಕ ವ್ಯಕ್ತಪಡಿಸಬಹುದು ಅಂತ ನನ್ನ ಗೆಳೆಯ ಹೇಳಿದ್ದ.

ಮತ್ತಷ್ಟು ಓದು »

31
ಜನ

ನಿಲುಮೆ ಮಂಥನ

-ತ್ರಿವೇಣಿ, ಮ್ಯೆಸೂರು

ನಿಲುಮೆಯ ಆತ್ಮೀಯ ಬೆಂಬಲಿಗರೇ,

ನಿಲುಮೆಯು ಸತತ ಒಂದು ವರ್ಷಕ್ಕೂ ಹೆಚ್ಚಿನ ಸಮಯದಿಂದ ಕನ್ನಡ ಸಾರಸತ್ವ ಲೋಕದಲ್ಲಿ  ಸತತವಾಗಿ ಲೇಖನ, ಕವನ, ಚರ್ಚೆ, ಪ್ರಚಲಿತ ವಿದ್ಯಮಾನ, ಸಂಸ್ಕೃತಿ, ಕನ್ನಡ, ಕರ್ನಾಟಕ, ಭಾರತ, ವಿಜ್ಣಾನ, ಕನ್ನಡಿಗರಿಗೆ ಉದ್ಯೋಗ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತ ಬರುತ್ತಲಿದೆ. ಇದಕ್ಕೆ ಬೆನ್ನುತಟ್ಟಲು ನಿಮ್ಮೆಲ್ಲರ ಬೆಂಬಲವಿಲ್ಲದೆ ಅದು ಸಾಧ್ಯವಾಗಿಯೂ ಇಲ್ಲ, ಅನ್ನೋದು ಮರೆತಿಲ್ಲ. ಅದೆಷ್ಟೊ ಲಕ್ಷ ಓದುಗರು ನಿಲುಮೆಯೊಂದಿಗೆ ಅವಿನಾನುಭಾವ ಸಂಬಂಧ ಬೆಸೆದುಕೊಂಡಿರುವರು. ಈ ಹಂತಕ್ಕೆ ನಿಲುಮೆ ಬೆಳೆದು ಬರಲು ಹಾದಿಯೇನು ಅಷ್ಟು ಸುಲಭವಾಗೇನು ಇರಲಿಲ್ಲ. ಮೊದಲಿಗೆ ಸ್ನೇಹಿತರ ಸಣ್ಣ ಗುಂಪೊಂದು ವರ್ಡ್ ಪ್ರೆಸ್ಸಿನಲ್ಲಿ ತನ್ನ ಖಾತೆಯನ್ನು ತೆರೆದಾಗ ಅರವಿಂದ್ ಎಂಬುವವರ ಮೊದಲ ಲೇಖನ ರಂಗೋಲಿ.. ಚಿತ್ತ ಚಿತ್ತಾರಗಳ ನಡುವೆ ಎಂಬ ಶೀರ್ಷಿಕೆಯೊಂದಿಗೆ ೫ನೇ ಅಕ್ಟೋಬರ್ ೨೦೧೦ ಪ್ರಕಟವಾಯ್ತು. ಅಸಲಿಗೆ ನಿಲುಮೆ ನಾನು ನೋಡಿದ್ದು, ರಂಗೋಲಿಗಳು ಎಂದು ಗೂಗಲಿನಲ್ಲಿ ಹುಡುಕಲು ಹೋದಾಗ ನಾನು ಹುಡುಕ ಹೊದದ್ದೇ ಒಂದು, ಸಿಕ್ಕಿದ್ದು ಮಾತ್ರ ಭರಪೂರ ರೋಮಾಂಚನ, ನಿಲುಮೆ ಹೆಸರು ಯಾಕೋ ಅಂದು ಬಹಳ ಇಷ್ಟವಾಗಿತ್ತು. ನಂತರ ದಿನಕ್ಕೊಂದರಂತೆ ಅತ್ಯುತ್ತಮ ಲೇಖನಗಳು ಬರತೊಡಗಿದಾಗ ಆ ಬ್ಲಾಗ್ ದಿನಕ್ಕೆ ಒಂದೆರಡು ಸಾರಿಯಾದರೂ ತೆರೆಯದೆ ಇರುವ ಮನಸ್ಸಾಗದೇ ಇರಲಿಲ್ಲ. ಆ ಲೇಖನಗಳ ಸ್ಪೂರ್ತಿಯಿಂದ ನನ್ನಲ್ಲು ಬರೆಯುವ ಅಮಿತ ಉತ್ಸಾಹವಿದ್ದರೂ ಬರೆದದ್ದೂ ಮಾತ್ರ ಈಗಲೇ, ನನ್ನಂತವಳಲ್ಲಿ ಲೇಖಕಿಯನ್ನು ಬೆಳೆಸಿದ ನಿಲುಮೆಗೆ ಅನಂತ ಧನ್ಯವಾದಗಳು. ನನ್ನ ನೆನಪಂತೆ ದಿನಕ್ಕೆ ಕೆಲವೇ ಕೆಲವು ಬೆಂಬಲಿಗರು ಬಂದು ನಿಲುಮೆಯ ಕದ ತಟ್ಟಿ ಹೋಗುತ್ತಿದ್ದರು. ಅಂದಿಗೆ ದಿನದ ಭೇಟಿಗಳು ಹೆಚ್ಚೆಂದರೆ ನೂರರ ಆಸುಪಾಸಿನಲ್ಲಿ ಓಡಾಡುತ್ತಿತ್ತು.

ಮತ್ತಷ್ಟು ಓದು »

30
ಜನ

ಉದ್ಯೋಗಾವಕಾಶ ಅಲ್ಲಲ್ಲಿ…

ಕೆನರಾ ಬ್ಯಾಂಕ್ ಕೆನರಾ ಬ್ಯಾಂಕ್‌ನಲ್ಲಿ 2000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ಸ್‌ ಒಟ್ಟು ಹುದ್ದೆ: 2000

ವೇತನ ಶ್ರೇಣಿ: ರೂ.14500-25700/-

ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.

ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.

ಅರ್ಜಿ ಶುಲ್ಕ: ರೂ. 100/-

ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರದ ಮೇಲೆ, ಗುಂಪು ಸಂದರ್ಶನ ಹಾಗೂ ಸಂದರ್ಶನ ಹೆಚ್ಚಿನ ಮಾಹಿತಿಗೆ http://www.canarabank.com ವೆಬ್‌ಸೈಟ್ ಸಂಪರ್ಕಿಸಿ.

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 618 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012.

ಹುದ್ದೆ ಹೆಸರು: 1) ಹೆಡ್-ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)

ಒಟ್ಟು ಹುದ್ದೆ: 58 ವೇತನ ಶ್ರೇಣಿ: ರೂ.5200-20200/-

ವಯೋಮಿತಿ: ಕನಿಷ್ಠ 19 ವರ್ಷ.ಗರಿಷ್ಠ 25 ವರ್ಷ.

ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಮೋಟಾರ್ ಮೆಕಾನಿಕಲ್‌ನಲ್ಲಿ ಸರ್ಟಿಫಿಕೇಟ್.

ಹುದ್ದೆ ಹೆಸರು: 2) ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)

ಒಟ್ಟು ಹುದ್ದೆ: 135

ವೇತನ ಶ್ರೇಣಿ: ರೂ.5200-20200/-

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 25 ವರ್ಷ.

ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಆಟೊ ಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಸರ್ಟಿಫಿಕೇಟ್.

ಹುದ್ದೆ ಹೆಸರು: 3) ಕಾನ್‌ಸ್ಟೇಬಲ್ (ಡ್ರೈವರ್)

ಒಟ್ಟು ಹುದ್ದೆ: 425

ವೇತನ ಶ್ರೇಣಿ: ರೂ.5200-20200/-

ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.

ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಅರ್ಜಿ ಶುಲ್ಕ: ರೂ. 50/- ವಿಳಾಸ: ಇನ್‌ಸ್ಪೆಕ್ಟರ್ ಜನರಲ್ (ನಾರ್ಥ್) ಫ್ರಾಂಟಿಯರ್, ಐಟಿಬಿಪಿ, ಪೋಸ್ಟ್-ಸೀಮದ್ವಾರ್ (ಇಂದಿರಾ ನಗರ), ಡಿಸ್ಟ್ರಿಕ್ಟ್ ಡೆಹಡ್ರೂನ್-248156 (ಉತ್ತರಾಖಂಡ) ಹೆಚ್ಚಿನ ವಿವರ ಹಾಗೂ ಮಾಹಿತಿಗೆ http://itbp.gov.in/ ವೆಬ್‌ಸೈಟ್ ಸಂಪರ್ಕಿಸಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ)ನಲ್ಲಿ 775 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012.

ಹುದ್ದೆ ಹೆಸರು: ಮ್ಯಾನೇಜ್‌ವೆುಂಟ್ ಟ್ರೈನೀಸ್

ಒಟ್ಟು ಹುದ್ದೆ: 775

ವೇತನ ಶ್ರೇಣಿ: ರೂ.14500-25700/-

ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 28 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.

ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.

ಅರ್ಜಿ ಶುಲ್ಕ: ರೂ. 200/-

ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರ ಮೇಲೆ ಹಾಗೂ ಸಂದರ್ಶನ * ಏಪ್ರಿಲ್-ಮೇನಲ್ಲಿ (2012) ನಡೆಯಲಿದೆ. ಹೆಚ್ಚಿನ ಮಾಹಿತಿಗೆ http://www.pnbindia.in ವೆಬ್‌ಸೈಟ್ ಸಂಪರ್ಕಿಸಿ. ದಿ ಓರಿಯಂಟಲ್ ಇನ್ಸುರೆನ್ಸ್ ದಿ ಓರಿಯಂಟಲ್ ಇನ್ಸುರೆನ್ಸ್ ಕಂಪೆನಿ ಲಿಮಿಟೆಡ್‌ನಲ್ಲಿ 477 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012. ಲಿಖಿತ ಪರೀಕ್ಷೆ: 08-04-2012

ಹುದ್ದೆ ಹೆಸರು: ಅಡ್ಮಿನಿಸ್ಟ್ರೇಟೀವ್ ಆಫೀಸರ್ (ಎಒ)

ಒಟ್ಟು ಹುದ್ದೆ: 477

ವೇತನ ಶ್ರೇಣಿ: ರೂ.17240-32640/-

ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಶುಲ್ಕ: ರೂ. 500/- * ಬೆಂಗಳೂರಿನಲ್ಲೂ ಪರೀಕ್ಷೆ ನಡೆಯಲಿದೆ. ವಿದ್ಯಾರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ http://www.orientalinsurance.org.in ವೆಬ್‌ಸೈಟ್ ಸಂಪರ್ಕಿಸಿ.

ರಿಸರ್ವ್ ಬ್ಯಾಂಕ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012. ಲಿಖಿತ ಪರೀಕ್ಷೆ ದಿನಾಂಕ: 22-04-2012.

ಹುದ್ದೆ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ) ಗ್ರೇಡ್-ಎ

ಒಟ್ಟು ಹುದ್ದೆ: 07

ವೇತನ ಶ್ರೇಣಿ: ರೂ.17100-33200/-

ವಯೋಮಿತಿ: 30 ವರ್ಷ ದಾಟಿರಬಾರದು.

ಅರ್ಜಿ ಶುಲ್ಕ: ರೂ. 100/-

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ * ಬೆಂಗಳೂರಿನಲ್ಲೂ ಪರೀಕ್ಷೆ ಇದೆ. * ಪೋಸ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-03-2012

ವಿಳಾಸ: ಜನರಲ್ ಮ್ಯಾನೇಜರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸರ್ವೀಸ್ ಬೋರ್ಡ್, ಪೋಸ್ಟ್ ಬಾಕ್ಸ್ ನ. 4618, ಮುಂಬೈ ಸೆಂಟ್ರಲ್ ಪೋಸ್ಟ್ ಆಫೀಸ್, ಮುಂಬೈ-400008

ಹೆಚ್ಚಿನ ಮಾಹಿತಿಗೆ http://www.rbi.org.in ವೆಬ್‌ಸೈಟ್ ಸಂಪರ್ಕಿಸಿ. http://www.canarabank.com/ http://www.canarabank.com

30
ಜನ

ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.

– ಪೂರ್ಣಚಂದ್ರ

(ಇತ್ತೀಚಿಗೆ ದಿನೇಶ್ ಅಮಿನ್  ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)

ಪ್ರೀತಿಯ ಮಟ್ಟು ಸರ್,

ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.

ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.

ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್‌ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು »

30
ಜನ

ಸಂಸ್ಕೃತಿ ಸಂಕಥನ – 20 – ಬುದ್ಧನನ್ನು ಹೈಜಾಕ್ ಮಾಡಿದ ಪ್ರೊಟೆಸ್ಟಾಂಟರು

-ರಮಾನಂದ ಐನಕೈ

ಎಲ್ಲರಿಗೂ ಅಚ್ಚರಿಯಾಗಬಹುದು. ಪ್ರೊಟೆಸ್ಟಾಂಟರು ಹೇಗೆ ಮತ್ತು ಏಕೆ ಬುದ್ಧಿಸಂನ್ನು ಹೈಜಾಕ್ ಮಾಡಿದರು ಎಂಬುದು. ಇಲ್ಲಿ ಹೈಜಾಕ್ ಅಂದರೆ ಅಪಹರಣ ಎಂಬ ಅರ್ಥವಲ್ಲ. ಪ್ರೊಟೆ ಸ್ಟಾಂಟರು ಬುದ್ಧಿಸಂನ್ನು ಹೇಗೆ ತಮ್ಮ ಸಮರ್ಥನೆ ಗಾಗಿ ಬಳಸಿಕೊಂಡರು ಎಂಬುದು. ಇದರ ಹಿಂದೆ ಸ್ವತಃ ಭಾರತೀಯರಿಗೆ ಅರ್ಥವಾಗದ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಬಾಲಗಂಗಾಧರರು ಸ್ವಾರಸ್ಯವಾಗಿ ಭೇದಿಸುತ್ತಾರೆ.

ಸಮಕಾಲೀನ ಭಾರತೀಯ ಚಿಂತಕರಿಗೆ ಬುದ್ಧಿಸಂ ಕುರಿತಾಗಿ ಒಂದು ಪೂರ್ವಗ್ರಹಿತ ಅಭಿ ಪ್ರಾಯಗಳಿವೆ. ಬುದ್ಧಿಸಂ ಮಾನವೀಯತೆಗಾಗಿ ಹೋರಾಡುತ್ತಿದೆ. ಇದು ಸಮಾಜದಲ್ಲಿನ ಅನಿಷ್ಟ ವನ್ನು ವಿರೋಧಿಸಿದೆ. ಯಜ್ಞಯಾಗಾದಿಗಳನ್ನು ಧಿಕ್ಕರಿಸಿದೆ. ಪ್ರಾಣಿ ಬಲಿ ವಿರೋಧಿಸಿ ಅಹಿಂಸಾ ತತ್ವ ಮೆರೆದಿದೆ. ಈ ಮೂಲಕ ಹಿಂದೂ ಯಿಸಂನ್ನು ವಿರೋಧಿಸಿದೆ. ಭಾರತದ ಜಾತಿ ವ್ಯವಸ್ಥೆಯನ್ನು ವಿಮರ್ಶಿಸಿದೆ. ಇಲ್ಲಿನ ವರ್ಣಾ ಶ್ರಮವನ್ನು ವಿರೋಧಿಸಿದೆ. ಇಲ್ಲಿನ ಪುರೋಹಿತ ಶಾಹಿಯನ್ನು ಹಾಗೂ ಬ್ರಾಹ್ಮಣರನ್ನು ವಿರೋಧಿಸಿದೆ. ಹಾಗಾಗಿ ಇದೊಂದು ವಿಶ್ವಮಾನ್ಯವಾದ ರಿಲಿಜನ್. ಬುದ್ಧಿಸಂ ಸಮಾಜದಲ್ಲಿನ ತರತಮ ವನ್ನು ಸಹಿಸುವುದಿಲ್ಲ. ಮನುಷ್ಯರ ಏಳ್ಗೆಗಾಗಿ ಹಂಬಲಿಸುತ್ತದೆ ಇತ್ಯಾದಿ. ಈ ಕಾರಣಕ್ಕಾಗೆ ನಮ್ಮ ದೇಶದ ದಲಿತ ಚಿಂತಕರೆಲ್ಲ ಬುದ್ಧಿಸಂ ಕಡೆಗೆ ಆಕರ್ಷಿತರಾದರು. ಅಂಬೇಡ್ಕರರು ಕೂಡ ಬುದ್ಧಿಸಂಗೆ ಮತಾಂತರ ಹೊಂದಿದ್ದು ಈ ಆಕರ್ಷಣೆಯಿಂದ. ನಿಜವಾಗಿಯೂ ಇದು ನಿಜವೆ? ಭಾರತೀಯ ಸಂಸ್ಕೃತಿಯೊಂದಿಗೆ ಬುದ್ಧಿಸಂ ವಿರೋಧವಾಗಿಯೇ ನಡೆದುಕೊಂಡು ಬಂದಿ ದೆಯೇ? ನಿಜವಾಗಿಯೂ ಬುದ್ಧ ವರ್ಣಾಶ್ರಮ ದಿಂದ ಹೊರಗುಳಿದು ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿದನೇ? ಈಗ ನಾವು ವಿಸ್ಮೃತಿಯಿಂದ ಸ್ಮೃತಿಗೆ ಬರಬೇಕಾಗಿದೆ.

ಮತ್ತಷ್ಟು ಓದು »

29
ಜನ

ಈ ಪ್ರೀತಿ…!!

– ಸುಷ್ಮಾ ಮೂಡಬಿದ್ರಿ

ಇಬ್ಬರ ಮದ್ಯದಲ್ಲೂ ನೀರವ ಮೌನ…ಆಗತಾನೆ ಹೊರಗೆ ಮಳೆ ತಣ್ಣಗೆ ಆರಂಭವಾಗಿ, ಭೋರ್ಗರೆಯುತ್ತಾ ಸುರಿಯಲಾರಂಭಿಸಿತು. ಬೀಸಿ ಬಂದ ಗಾಳಿಗೆ ಕಿಟಕಿ ಪರದೆಗಳೆಲ್ಲಾ ನೃತ್ಯವಾಡುತ್ತಿತ್ತು…ಕಿಟಕಿಯಿಂದ ಹೊರಗೆ ದೂರದ ಅದ್ಯಾವ ಬಿಂದುಗೋ ದೃಷ್ಟಿ ಹಾಯಿಸುತ್ತಾ ನಿಂತಿದ್ದ..ಮೆಲ್ಲಗೆ “ಸುಂಜೂ….”ಎಂದೆ..ರಭಸದ ಮಳೆ ಸದ್ದಿಗೋ ಏನೋ ಕೇಳಿಸಿಲ್ಲವೆಂಬಂತೆ ನಿಂತೇ ಇದ್ದ ಅಂವ..ಮೌನ ಮುರಿಯಲಾಗಲಿಲ್ಲ ನನ್ನಿಂದ..ಶೂನ್ಯದೆಡೆಗಿನ ಅವನ ನೋಟ ಕದಲಿಸಲಾಗಲಿಲ್ಲ..ಹತ್ತಿರ ಬಂದು ನಿಂತೆ..ಈಗ ನೋಡಿದ..ಕಂಗಳು ಕಾಂತಿಹೀನ ಅನಿಸಿತು.

“ಮಾತಡೋಲ್ಲವಾ….”ಎಂದೆ..

ಮತ್ತೇ ದೃಷ್ಟಿ ಬದಲಿಸಿದ…ಈ ಬಗೆಯ ಮೌನ ಸಹಿಸಲಾಗಲಿಲ್ಲ…

“ಪ್ಲೀಸ್..”ಎಂದ ನನ್ನ ಕಣ್ಣಲ್ಲಿ ನೀರಾಡಿತ್ತು…

ಅದೇನನಿಸಿತೋ..”ಸುಶೀ..”ಕರೆದ…ಹ್ಞು0 ಗುಟ್ಟಿದೆ…

ಮತ್ತಷ್ಟು ಓದು »